Kundapra.com ಕುಂದಾಪ್ರ ಡಾಟ್ ಕಾಂ

ಸ್ವಯಂ ಉದ್ಯೋಗ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯೋಗದಾತರಾಗಿ ಇತರರಿಗೂ ಮಾದರಿಯಾಗಿ: ಶಾಸಕ ಗಂಟಿಹೊಳೆ

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಬೈಂದೂರು:
ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ವಿವಿಧ ಸ್ವ ಉದ್ಯೋಗ ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಿದರು.

ಬಳಿಕ ಮಾತನಾಡಿದ ಅವರು ಯೋಜನೆಗಳಡಿ ಆಯ್ಕೆಯಾದ ಫಲಾನುಭವಿಗಳು ಸ್ವಯಂ ಉದ್ಯೋಗ ಸೌಲಭ್ಯಗಳನ್ನು ಬಳಸಿಕೊಂಡು ಉದ್ಯೋಗದಾತರಾಗಿ ಇತರರಿಗೂ ಮಾದರಿಯಾಗಿ ಎಂದರು.

ದೇವರಾಜು ಅರಸು ಅಭಿವೃದ್ಧಿ ನಿಗಮದಿಂದ ಟೈಲರಿಂಗ್ ಮೆಷಿನ್ ವಿತರಣೆ :
ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಕ್ಷೇತ್ರದ ಸುಮಾರು 21 ಮಂದಿ ಮಹಿಳಾ ಫಲಾನುಭವಿಗಳಿಗೆ ಟೈಲರಿಂಗ್ ಮೆಷಿನ್ ನ್ನು ಶಾಸಕರು ವಿತರಿಸಿದರು.

ಅಂಬೇಡ್ಕರ್ ನಿಗಮದಿಂದ ಸ್ವಯಂ ಉದ್ಯೋಗ ಮಂಜೂರಾತಿ ಪತ್ರ ವಿತರಣೆ :
ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಉದ್ಯಮ ಶೀಲತೆ ಯೋಜನೆಯಡಿಯಲ್ಲಿ ಆಯ್ಕೆಯಾದ 3 ಜನ ಫಲಾನುಭವಿಗಳಿಗೆ ರೂ.5 ಲಕ್ಷ ಮೊತ್ತದ ಸಾಲ ಸಹಾಯಧನ ಹಾಗೂ 07 ಜನ ಫಲಾನುಭವಿಗಳಿಗೆ ರೂ. 1ಲಕ್ಷ ಮೊತ್ತದ ಸಾಲ ಸಹಾಯಧನ ಮಂಜೂರಾತಿ ಪತ್ರವನ್ನು ಶಾಸಕರು ವಿತರಣೆ ಮಾಡಿದರು.

ಟ್ಯಾಕ್ಸಿ ವಾಹನದ ಕೀ ಹಸ್ತಾಂತರ:
ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಆಯ್ಕೆಯಾದ 04 ಜನ ಫಲಾನುಭವಿಗಳಿಗೆ ಸ್ವ ಉದ್ಯೋಗ ಸಲುವಾಗಿ ಒದಗಿಸಿರುವ ಟ್ಯಾಕ್ಸಿ ವಾಹನಗಳ ಕೀ ಯನ್ನು ಶಾಸಕರು ಹಸ್ತಾಂತರ ಮಾಡಿದರು.

ಕಾರ್ಯಕ್ರಮದಲ್ಲಿ ದೇವರಾಜು ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಮಂಜು, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಶಂಕರ್ ಉಪಸ್ಥಿತರಿದ್ದರು.

Exit mobile version