ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಹಂದಟ್ಟು ಮಹಿಳಾ ಬಳಗ ಕೋಟ, ಮಣೂರು ಫ್ರೆಂಡ್ಸ್, ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕೋಟ ಗ್ರಾಮಪಂಚಾಯತ್, ಎಸ್ ಎಲ್ ಆರ್ ಎಂ ಘಟಕ ಕೋಟ ಇವರ ಸಂಯೋಜನೆಯೊಂದಿಗೆ 294ನೇ ಭಾನುವಾರದ ಸ್ವಚ್ಛತಾ ಕಾರ್ಯಕ್ರಮ ಮಣೂರು ಹಾಗೂ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ ಮೂಲಕ ಹಮ್ಮಿಕೊಂಡಿತು.
ಅಭಿಯಾನಕ್ಕೆ ನಿವೃತ್ತ ಬಿಎಸ್ಎನ್ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆದ್ದಾರಿ ಒಂದುವರೆ ಕಿಲೋಮೀಟರ್ ಒಂದು ಭಾಗ ಬಾರಿ ಪ್ರಮಾಣದಲ್ಲಿ ತ್ಯಾಜ್ಯವನ್ನು ತೆರವುಗೊಳಿಸಲಾಯಿತು.

ಇದೇ ವೇಳೆ ಮಾತನಾಡಿದ ವಿಷ್ಣುಮೂರ್ತಿ ಮಯ್ಯ ರಾಷ್ಟ್ರೀಯ ಹೆದ್ದಾರಿ ತ್ಯಾಜ್ಯ ಎಸೆಯುವವರಿಗೆ ಕಠಿಣ ಕ್ರಮವನ್ನು ಸ್ಥಳೀಯಾಡಳಿತಗಳು ಕೈಗೊಳ್ಳಬೇಕು,ಪ್ರ ತಿ ಬಾರಿ ಪಂಚವರ್ಣದಂತಹ ಸಂಘಟನೆಗಳು ಸ್ವಚ್ಛಗೊಳಿಸಿದರೂ ಪುನಃ ಮಲಿಗೊಳಿಸುವ ಕಾರ್ಯ ನಡೆಯುತ್ತಿದೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಸಲಹೆ ನೀಡಿ ಸಂಬಂಧಿಸಿದ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಚಿತ್ತಾರಿ ಟ್ರಸ್ಟ್ನ ಗೋಪಾಲ್ ಪೈ, ಪಂಚವರ್ಣ ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಂಚಾಲಕಿ ಸುಜಾತ ಬಾಯರಿ ಸೇರಿದಂತೆ ಅನೇಕರು ಭಾಗವಹಿಸಿದರು. ಕೋಟ ಗ್ರಾಮಪಂಚಾಯತ್ ಎಸ್ ಎಲ್ ಆರ್ ಎಂ ಘಟಕ ಸಹಕಾರ ನೀಡಿತು.
ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ294ನೇ ಭಾನುವಾರದ ಸ್ವಚ್ಛತಾ ಕಾರ್ಯಕ್ರಮ ಮಣೂರು ಹಾಗೂ ಹರ್ತಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ ಮೂಲಕ ಹಮ್ಮಿಕೊಂಡಿತು. ನಿವೃತ್ತ ಬಿಎಸ್ಎನ್ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ, ಚಿತ್ತಾರಿ ಟ್ರಸ್ಟ್ನ ಗೋಪಾಲ್ ಪೈ,ಪಂಚವರ್ಣ ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್ ಇದ್ದರು.