Site icon Kundapra.com ಕುಂದಾಪ್ರ ಡಾಟ್ ಕಾಂ

ಮಣೂರು ಫ್ರೆಂಡ್ಸ್ ರಜತ ಸಂಭ್ರಮ, ಡಾ. ಹರೇಕಳ ಹಾಜಬ್ಬಗೆ ರಜತ ಸಂಭ್ರಮ ಪುರಸ್ಕಾರ

???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಯುವ ಜನಾಂಗ ಸಂಘಟನೆಯ ಮೂಲಕ ಸಮಾಜ ಕಟ್ಟುವ ಕಾಯಕದಲ್ಲಿ ನಿರತರಾಗಿದ್ದಾರೆ ಇದಕ್ಕೆ ಮಣೂರು ಫ್ರೆಂಡ್ಸ್ ಸಾಕ್ಷಿ ಎಂದು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ. ಕುಂದರ್ ಹೇಳಿದರು.

ಅವರು ಮಣೂರು ಮಹಾಲಿಂಗೇಶ್ವರ ಜಾತ್ರೋತ್ಸವದ ಅಂಗವಾಗಿ ಗೀತಾನಂದ ವೇದಿಕೆಯಲ್ಲಿ ಮಣೂರು ಫ್ರೆಂಡ್ಸ್ ಮಣೂರು ಇದರ ರಜತ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಹಬ್ಬ ಹರಿದಿನಗಳನ್ನು ವೇದಿಕೆಯಾಗಿರಿಸಿಕೊಂಡು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಂಡ ಸಾಧಕರನ್ನು ಗುರುತಿಸುವ ಕಾರ್ಯ ಅತ್ಯಂತ ಪ್ರಶಂಸನೀಯ, ಸಮಾಜದ ಬಗ್ಗೆ ಆಗಾಗ ತುಡಿತ ಹೊಂದಿ ತಮ್ಮೂರ ಅಭಿವೃದ್ಧಿಗೆ ಶ್ರಮಿಸುವ ಸಂಘಟನೆಗಳು ಮತ್ತಷ್ಟು ಹುಟ್ಟಿಕೊಳ್ಳಲಿ ರಜತ ಸಂಭ್ರಮದಲ್ಲಿರುವ ಮಣೂರು ಫ್ರೆಂಡ್ಸ್ ಕಾರ್ಯದಲ್ಲಿ ಸದಾ ಕೈಜೋಡಿಸುವುದಾಗಿ ಅಭಯ ನೀಡಿದರು.

ಈ ಸಂದರ್ಭದಲ್ಲಿ ಅಕ್ಷರ ಸಂತ ಡಾ. ಹರೇಕಳ ಹಾಜಬ್ಬ ಅವರಿಗೆ ರಜತ ಸಂಭ್ರಮ ಪುರಸ್ಕಾರ ನೀಡಿ ಗೌರವಿಸಲಾಯಿತು. ಸ್ಥಳೀಯರಾದ ರವೀಂದ್ರ ಪೈ ಅವರಿಗೆ ಸಾಧಕ ಪುರಸ್ಕಾರ, ನಿಧಿ ಪೈಗೆ ಪ್ರತಿಭಾ ಪುರಸ್ಕಾರ, ಸ್ಥಳೀಯ ಸಾಧಕರಾದ ಕಂಬಳ ಕ್ಷೇತ್ರದ ರಘುರಾಮ ಶೆಟ್ಟಿ,ಶಿವರಾಮ ಶೆಟ್ಟಿ ನಡುಬೆಟ್ಟು,ಮೆಸ್ಕಾಂ ಉಮ್ಮರ್ ಸಾಹೇಬ್, ನಿರ್ಮಲ ಟೀಚರ್ ಇವರಿಗೆ ವಿಶೇಷ ಅಭಿನಂದನೆ,ಕೋಟದ ಪಂಚವರ್ಣ ಸಂಘಟನೆಗೆ ಸಂಘಟನಾ ಪುರಸ್ಕಾರ,ಮಣೂರು ಫ್ರೆಂಡ್ಸ್ ಹುಟ್ಟಿಗೆ ಕಾರಣಿಭೂತರಾದ ಗೌರವಾಧ್ಯಕ್ಷ ಸುರೇಶ್ ಆಚಾರ್ ಇವರಿಗೆ ಹುಟ್ಟೂರ ಸನ್ಮಾನ ನೀಡಿ ಗೌರವಿಸಲಾಯಿತು.

ಅಶಕ್ತ ಹಾಗೂ ಅನಾರೋಗ್ಯ ಪೀಡಿತರಿಗೆ ನೆರವು, ಸಾಲಿಗ್ರಾಮದ ಹೊಸಬದುಕು ಆಶ್ರಮಕ್ಕೆ ನೆರವನ್ನು ಹಸ್ತಾಂತರಿಸಲಾಯಿತು. ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ದೇಗುಲದ ಪರವಾಗಿ ಸಂಘಟಕರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಸಭಾಧ್ಯಕ್ಷತೆಯನ್ನು ಮಣೂರು ಫ್ರೆಂಡ್ಸ್‌ನ ಗೌರವ ಸಲಹೆಗಾರ ಸುಬ್ರಾಯ ಆಚಾರ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಸಮಾಜಸೇವಕ ಮಲ್ಯಾಡಿ ಶಿವರಾಮ ಶೆಟ್ಟಿ, ಉದ್ಯಮಿ ಗಣೇಶ್ ಸೀಲ್ಕ್ಸ್ ಅನಂತ್ ನಾಯಕ್, ಮಣೂರು ಫ್ರೆಂಡ್ಸ್ ಅಧ್ಯಕ್ಷ ರಾಘವೇಂದ್ರ ಆಚಾರ್, ಉದ್ಯಮಿ ನವೀನ್ ಶೆಟ್ಟಿ ಪಟೇಲರ ಮನೆ, ಸಂತೋಷ್ ಸುವರ್ಣ ಉಪಸ್ಥಿತರಿದ್ದರು.

 ಮಣೂರು ಫ್ರೆಂಡ್ಸ್ ಸ್ಥಾಪಕ ಸದಸ್ಯರಾದ ಪ್ರಭಾಕರ್ ಆಚಾರ್ ಸ್ವಾಗತಿಸಿದರು. ಫ್ರೆಂಡ್ಸ್ ರಜತ ಸಾಧನೆಯನ್ನು ವಿಟಿ ಮೂಲಕ ಪ್ರಚುರಪಡಿಸಲಾಯಿತು. ಪ್ರಣುತ್ ಗಾಣಿಗ ಕಾರ್ಯಕ್ರಮವನ್ನು ನಿರೂಪಿಸಿದರು. ರವೀಂದ್ರ ಕೋಟ ವಂದಿಸಿದರು. ಸುಧಾಕರ ಆಚಾರ್, ದಿನೇಶ್ ಆಚಾರ್ ಮತ್ತಿತರರು ಸಹಕರಿಸಿದರು. ಕಾರ್ಯಕ್ರಮದ ನಂತರ ಬೆಂಗಳೂರು ಪ್ರಸಿದ್ಧ ಗಾಯಕರಿಂದ ಆರ್ಕೇಸ್ಟ್ರಾ ಜರಗಿತು.ಸಾಂಸ್ಕೃತಿಕ ಕಾರ್ಯಕ್ರದ ಭಾಗವಾಗಿ ಸ್ಥಳೀಯ ರಾಮಪ್ರಸಾದ ಅಂಗನವಾಡಿ ಹಾಗೂ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ಕಾರ್ಯಕ್ರಮ ಜರಗಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸುಜಾತ ಬಾಯರಿ ನಿರೂಪಿಸಿದರು.

Exit mobile version