Site icon Kundapra.com ಕುಂದಾಪ್ರ ಡಾಟ್ ಕಾಂ

ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಧರ್ಮಸ್ಥಳ ಡಾ. ವಿರೇಂದ್ರ ಹೆಗಡೆ ಅವರ ಮಹತ್ವಾಕಾಂಕ್ಷೆಯ ಕೆರೆ ನವೀಕರಣ ಯೋಜನೆಯ ಮೂಲಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಭರವನ್ನು ನಿಗಿಸಲಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಅವರು ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್  ಬ್ರಹ್ಮಾವರ ತಾಲೂಕು, ಗ್ರಾಮ ಪಂಚಾಯತ್ ಕೋಟ ಹಾಗೂ ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನ ಕೆರೆ ಅಭಿವೃದ್ಧಿ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹಾಗೂ ಮಾತೃಶ್ರೀ ಡಾ. ಹೇಮಾವತಿ ವಿ. ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ’ನಮ್ಮೂರು ನಮ್ಮ ಕೆರೆ  ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ ಮಣೂರು ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆಯ ಹಸ್ತಾಂತರ ಕಾರ್ಯಕ್ರಮದಲ್ಲಿ ಲೋಕಾರ್ಪಣೆಗೊಳಿಸಿ ಮಾತನಾಡಿ\ದರು.

ಹಿಂದಿನ ಕಾಲಘಟ್ಟದಲ್ಲಿ ನಮ್ಮ ಹಿರಿಯರು ಕೆರೆಗಳನ್ನು ಸುಸ್ಥಿತಿಯಲ್ಲಿಟ್ಟಿದ್ದರು ಆದರೆ ಇಂದು ಹೆಚ್ಚಿನ ಕೆರೆಗಳು ಅವನತಿಗೆ ತಳ್ಳಲ್ಲಪಟ್ಟಿದೆ ಇಂತಹ ಸಂದರ್ಭಗಳಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಕೆರೆಗಳ ಕಾಯಕಲ್ಪದ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ, ಕುಡಿಯುವ ನೀರು ಮತ್ತು ಅಂತರ್ಜಲ ವೃದ್ಧಿಗೆ ಈ ಯೋಜನೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ ಸರಕಾರಿ ಕೆರೆಗಳ ನವೀಕರಣಕ್ಕೆ ಸರಕಾರದ ಅವಲಂಬನೆ ಕಷ್ಟ ಈ ಹಿನ್ನಲ್ಲೆಯಲ್ಲಿ ಬರಗಾಲದ ಸನ್ನಿವೇಶವನ್ನು ಅರ್ಥೈಸಿಕೊಂಡು ಸ್ಥಳೀಯಾಡಳಿತ ,ಸಂಘಸಂಸ್ಥೆಗಳು ಇದರ ಬಗ್ಗೆ ಶ್ರಮಿಸುವಂತ್ತಾಗಲಿ ಎಂದರು.

ಶಾಸಕರು ಕೆರೆಯನ್ನು ವೀಕ್ಷಸಿ ನಾಮಫಲಕವನ್ನು ಅನಾವರಣಗೊಳಿಸಿದರು.

ಸಭಾ ಕಾರ್ಯಕ್ರಮದ ಉದ್ಘಾಟನೆ:
ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ ಅವರು ಕಾರ್ಯಕ್ರಮದ ಉದ್ಘಾಟಿಸಿ  ಕೋಟ ಪಂಚಾಯತ್ ಕಾರ್ಯದರ್ಶಿ ಜಲಜಾಕ್ಷಿ ಇವರಿಗೆ ಕೆರೆ ನಿರ್ವಹಣಾ ಪತ್ರವನ್ನು ಹಸ್ತಾಂತರಿಸಿದರು.

ಅಧ್ಯಕ್ಷತೆಯನ್ನು ಮಣೂರು ಒಡಗಿನ ಶ್ರೀ ನಂದಿಕೇಶ್ವರ ಕೆರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಎಮ್. ಜಯರಾಮ್ ಶೆಟ್ಟಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ  ಕರ್ನಾಟಕ ಜನ ಜಾಗೃತಿ ವೇದಿಕೆಯ ಸದಸ್ಯರಾದ  ಸುಧಾಕರ ಶೆಟ್ಟಿ, ನಂದಿಕೇಶ್ವರ ದೇವಸ್ಥಾನದ ಪಾತ್ರಿ ಪ್ರಕಾಶ್ ಶೆಟ್ಟಿ ಹಾಗೂ ಕೆರೆ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಸರ್ವೋತ್ತಮ ಹೆಬ್ಬಾರ್, ಶಿಕ್ಷಕ ಶಶಿಧರ,ಕೋಟ ಪಂಚಾಯತ್ ಮಾಜಿ ಅಧ್ಯಕ್ಷ ಅಜಿತ್ ದೇವಾಡಿಗ, ಒಕ್ಕೂಟದ ಅಧ್ಯಕ್ಷ ದಿನೇಶ್ ಆಚಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ರಮೇಶ್ ಪಿ.ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕೋಟ ವಲಯದ ಮೇಲ್ವಿಚಾರಕ ನಾಗೇಶ್ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ರಾಘವೇಂದ್ರ ನಿರೂಪಿಸಿ, ಸೇವಾಪ್ರತಿನಿಧಿ ಶಾಂತಾ ಆಚಾರ್ ವಂದಿಸಿದರು. ಈ ಮೊದಲು ಒಡಗಿನ ನಂದಿಕೇಶ್ವರ ದೇವರಿಗೆ ಪೂಜೆ ಸಲ್ಲಿಸಲಾಯಿತು.

Exit mobile version