Site icon Kundapra.com ಕುಂದಾಪ್ರ ಡಾಟ್ ಕಾಂ

ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಕುಂದಾಪ್ರ ಡಾಟ್‌ ಕಾಂ ಸುದ್ದಿ.
ಕೋಟ:
ಸಂಘ-ಸಂಸ್ಥೆಗಳು ಶೈಕ್ಷಣಿಕ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಅತ್ಯಂತ ಪ್ರಶಂಸನೀಯ ಕಾರ್ಯ ಎಂದು ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ  ಹೇಳಿದರು.

ಅವರು ಶುಕ್ರವಾರ ಮೂಡುಗಿಳಿಯಾರಿನಲ್ಲಿ ಗಿಳಿಯಾರು ಯುವಕ ಮಂಡಲ ಇದರ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಗಿಳಿಯಾರು ಯುವಕ ಮಂಡಲ ತನ್ನೂರಿನ ಸರಕಾರಿ ಶಾಲೆಗಳ ಉಳಿವಿನ ಬಗ್ಗೆ ಶ್ರಮಿಸುತ್ತಿವುದು ಇತರ ಸಂಘಟನೆಗಳಿಗೆ ಮಾದರಿಯಾಗಿದೆ. ವಾರ್ಷಿಕೋತ್ಸವ ಅಥವಾ ದಶಮಾನೋತ್ಸವ ಕಾರ್ಯಕ್ರಮಗಳು ಸರಳ ರೀತಿಯಲ್ಲಿ ಆಚರಿಸುವುದರ ಮೂಲಕ ಮನೆಮಾತಾಗಿ ಬೆಳೆದು ನಿಂತಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಸತತ ಹತ್ತು ವರ್ಷ ಸೇವೆ ಸಲ್ಲಿಸಿದ ಏಳು ಸೇವಾಧ್ಯಕ್ಷರಿಗೆ ಪುಷ್ಭ ನೀಡಿ ಗೌರವಿಸಲಾಯಿತು. ಗಿಳಿಯಾರು ಯುವಕ ಮಂಡಲದ ದಶಮ ಸಂಭ್ರಮದ ಪುರಸ್ಕಾರವನ್ನು ಸಮಾಜಸೇವಕ ರವಿ ಕಟಪಾಡಿ ಇವರಿಗೆ ನೀಡಲಾಯಿತು .

ಸಭಾಧ್ಯಕ್ಷತೆಯನ್ನು ಗಿಳಿಯಾರು ಯುವಕ ಮಂಡಲದ ಅಧ್ಯಕ್ಷ ಸುಭಾಷ್ ಪೂಜಾರಿ ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ನ್ಯೂ ಕರ್ನಾಟಕ ಬಿಲ್ಡಸ್೯ ಮಾಲಿಕ ಚೇತನ್ ಕುಮಾರ್ ಶೆಟ್ಟಿ, ಹೊನ್ನಾರಿ ಬೊಬ್ಬರ್ಯ ದೈವಸ್ಥಾನದ ಮುಕ್ತೇಸರ ಮಹಾಬಲ ಹೇರ್ಳೆ, ಬೆಂಗಳೂರಿನ ಉದ್ಯಮಿ ಪುಣ್ಯ ಗೋಪಾಲ್ ಜಿ. ಉಪಸ್ಥಿತರಿದ್ದರು.

ಯುವಕ ಮಂಡಲದ ಮಾಜಿ ಅಧ್ಯಕ್ಷ ಯೋಗಾನಂದ ಆರ್. ಹೆಗ್ಡೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಪ್ರದೀಪ್ ಪುತ್ರನ್ ನಿರೂಪಿಸಿ, ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಭಾಗವಾಗಿ ಸೌಕೂರು ಮೇಳದ ವತಿಯಿಂದ ಪಂಜರ ಪಕ್ಷಿ ಯಕ್ಷಗಾನ ಪ್ರದರ್ಶನಗೊಂಡಿತು.

Exit mobile version