ಕುಂದಾಪುರ: ಇಲ್ಲಿನ ಚಕ್ರವರ್ತಿ ಕ್ರಿಕೆಟ್ ಕ್ಲಬ್ ವತಿಯಿಂದ ಕುಂದಾಪುರದ ಗಾಂಧಿ ಮೈದಾನದಲ್ಲಿ ಡಿ. 24ರಿಂದ 27ರವರೆಗೆ ನಡೆದ 5ನೇ ರಾಷ್ಟ್ರೀಯಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಕೂಟವನ್ನು ಆಯೋಜಿಸಿ, ಯಶಸ್ವಿಯಾಗಿ ನಿರ್ವಹಿಸಿದ ಪ್ರಮುಖ ರೂವಾರಿ ಶ್ರೀಪಾದ ಉಪಾಧ್ಯ ಅವರನ್ನು ಕ್ರಿಕೆಟ್ ಅಭಿಮಾನಿಗಳು, ಚಕ್ರವರ್ತಿ ಕ್ರಿಕೆಟ್ ಕ್ಲಬ್ ಸದಸ್ಯರು, ಹಿತೈಷಿಗಳು ಸನ್ಮಾನಿಸಿದರು.
ಮುಂಬೈ ಕ್ರಿಕೆಟ್ ಅಸೋಸಿಯೇಶನ್ನ ಜಂಟಿ ಕಾರ್ಯದರ್ಶಿ ಪಿ.ವಿ ಶೆಟ್ಟಿ, ಉದ್ಯಮಿ ವಿ. ಕೆ. ಮೋಹನ್, ಶ್ರೀನಾಥ ಉಡುಪ, ಸೋಮಶೇಖರ ಉಡುಪ, ಕುಂದಾಪುರ ತಾಲೂಕು ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ವಿ. ಶ್ರೀಧರ್ ಆಚಾರ್ಯ, ಸೂಪರ್ ಗ್ರೇಡ್ ಇಲೆಕ್ಟ್ರಿಕಲ್ ಗುತ್ತಿಗೆದಾರರಾದ ಕೆ.ಆರ್. ನಾಯ್ಕ್, ಉದ್ಯಮಿಗಳಾದ ಸುರೇಂದ್ರ ಶೆಟ್ಟಿ, ಆರ್. ಫೆಲಿಕ್ಸ್ ಡಿಸೋಜಾ, ಕರ್ನಿರೆ ವಿಶ್ವನಾಥ ಶೆಟ್ಟಿ, ಉಲ್ತೂರು ಮೋಹನದಾಸ ಶೆಟ್ಟಿ, ಜಗದೀಶ ಶೆಟ್ಟಿ ಅತಿಥಿಗಳಾಗಿದ್ದರು. ಗೌರವಾಧ್ಯಕ್ಷ ಮಡಾಮಕ್ಕಿ ಶಶಿಧರ ಶೆಟ್ಟಿ, ಸಂಚಾಲಕ ಅಭಿನಂದನ ಶೆಟ್ಟಿ, ಉಪಾಧ್ಯಕ್ಷರಾದ ಸತೀಶ್ ಕೋಟ್ಯಾನ್, ಮರತ್ತೂರು ಸುರೇಶ್ ಶೆಟ್ಟಿ, ಕಾರ್ಯದರ್ಶಿ ಪ್ರದೀಪ್ ವಾಜ್, ಖಜಾಂಚಿ ರಂಜಿತ್ ಶೆಟ್ಟಿ, ರಾಘವೇಂದ್ರ ಚರಣ ನಾವಡ,ಕೆ. ಪಿ. ಸತೀಶ್ ಇನ್ನಿತರರು ಉಪಸ್ಥಿತರಿದ್ದರು.