Kundapra.com ಕುಂದಾಪ್ರ ಡಾಟ್ ಕಾಂ

ಕೊಲ್ಲೂರಿನಲ್ಲಿ ವೈದ್ಯಕೀಯ ಶಿಬಿರ ಉದ್ಘಾಟನೆ

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಸ್ಥಾನ ಕೊಲ್ಲೂರು, ಕೆ.ಎಂ.ಸಿ. ಆಸ್ಪತ್ರೆ ಮಣಿಪಾಲ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಸಹಬಾಗಿತ್ವದಲ್ಲಿ ವೈದ್ಯಕೀಯ ಶಿಬಿರ ಶ್ರೀ ಮೂಕಾಂಬಿಕಾ ದೇವಳದ ಸಭಾ ಭವನದಲ್ಲಿ ನೆರವೇರಿತು.

ಶ್ರೀ ಮೂಕಾಂಬಿಕಾ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣಪ್ರಸಾದ್ ಅಡ್ಯಂತಾಯ ಕಾರ್ಯಕ್ರಮದ ಉದ್ಘಾಟಿಸಿದರು. ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್. ಕೃಷ್ಣಮೂರ್ತಿ, ಅಧೀಕ್ಷಕ ಕೆ. ರಾಮ ಕೃಷ್ಣ ಅಡಿಗ ಶ್ರೀ ಮೂಕಾಂಬಿಕಾ ದೇವಳದ ನೌಕರರ ಸಂಘದ ಕಾರ್ಯದರ್ಶಿ ಮುರಳಿಧರ ಹೆಗಡೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಜಯಕರ ಶೆಟ್ಟಿ, ಖಜಾಂಚಿ ಸೀತರಾಮ ಶೆಟ್ಟಿ, ಕೆ.ಎಂ.ಸಿ ಆಸ್ಪತ್ರೆಯ ಮಣಿಪಾಲದ ತಜ್ಞ ವೈದ್ಯರಾದ ಡಾ| ಸುದೀರ್ ನಾಯಕ್, ಡಾ| ಶೈಲಜಾ ಹಾಗೂ ಡಾ| ಶ್ರೀ ವಿದ್ಯಾ ಉಪಸ್ಥಿತರಿದ್ದರು.

Exit mobile version