Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶಾಸಕರ ನಿರಂತರ ಚಿಂತನೆ: ರಾಜು ಪೂಜಾರಿ

ಬೈಂದೂರು: ಪ್ರತಿ ಕ್ರೀಯಾ ಯೋಜನೆಯಲ್ಲಿಯೂ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ರಸ್ತೆ, ನೀರು, ಅಣೆಕಟ್ಟು, ಸೇತುವೆಗಳ ನಿರ್ಮಾಣ ಹಾಗೂ ದುರಸ್ತಿಯ ಬಗ್ಗೆ ಗಮನ ಹರಿಸುತ್ತಿರುವ ಬೈಂದೂರು ಕ್ಷೇತ್ರದ ಶಾಸಕ ಗೋಪಾಲ ಪೂಜಾರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೂರಗಾಮಿ ಚಿಂತನೆ ಹೊಂದಿದ್ದಾರೆ ಎಂದು ತಾಲೂಕು ಪಂಚಾಯತ್ ಸದಸ್ಯ ಎಸ್. ರಾಜು ಪೂಜಾರಿ ಹೇಳಿದರು.

ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ಸಿಗೆಹಕ್ಲು ರಸ್ತೆಯ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ. ಗೋಪಾಲ ಪೂಜಾರಿ ಕಾಮಗಾರಿಗೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಅಣ್ಣಪ್ಪ ಶೆಟ್ಟಿ, ಸದಸ್ಯ ರಾಜು ಪೂಜಾರಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ವಿಜಯ ಶೆಟ್ಟಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷೆ ದಿನಿತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Exit mobile version