Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗೋಕರ್ಣ: ಮಾನವರ ಮೂಲವನ್ನು ಕುರಿತು ಭಾರತೀಯರ ದೃಷ್ಟಿಗೂ ಮತ್ತು ಆಧುನಿಕರ ದೃಷ್ಟಿಗೂ ತುಂಬಾ ವ್ಯತ್ಯಾಸಗಳಿವೆ. ಅಧುನಿಕರ ಪ್ರಕಾರ ಸೃಷ್ಟಿಯ ಆದಿಯಲ್ಲಿ ಮಾನವ ಸಂಸ್ಕೃತಿ ಹೀನನಾಗಿದ್ದು, ಕಾಡು ಮನುಷ್ಯನಂತಿದ್ದ ಎಂಬ ಕಲ್ಪನೆಗಳನ್ನು ನೀಡಲಾಗಿದೆ ಹಾಗೂ ಮಂಗನಿಂದ ಮಾನವ ಎಂಬ ಸಿದ್ಧಾಂತಗಳೂ ಇವೆ. ಇವು ನಮ್ಮ ಪೂರ್ವಜರ ಕುರಿತಾಗಿ ಜುಗುಪ್ಸೆ ಹುಟ್ಟಿಸುವಂತಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಅವರು ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಭಾರತೀಯ ಪರಂಪರೆ ಹೇಳುವಂತೆ ಕೃತಯುಗದಲ್ಲಿ ದೇವರು ಜಗತ್ತನ್ನು ತುಂಬಾ ಸುಂದರವಾಗಿ ಸೃಷ್ಟಿಸಿದ್ದ. ಅದು ದೇವರು ಸೃಷ್ಟಿಸಿದಂತೆಯೇ ಇದ್ದ ಕಾಲ. ಕೃತಯುಗ ಒಳಿತಿನ ಒಳಿತಾದರೆ ಈಗಿನ ಕಲಿಯುಗ ಕೆಡುಕಿನ ಕೆಡುಕು ಎನ್ನಬಹುದು. ಅಂದು ಜನರು ಪರಿಪೂರ್ಣ ಆರೋಗ್ಯವನ್ನು ಹೊಂದಿದ್ದರು. ಕೃತಯುಗದ ವರ್ಣನೆಯನ್ನು ಕೇಳುವಾಗ ಅದು ಅತಿಶಯೋಕ್ತಿ ಎನಿಸಬಹುದು. ಏಕೆಂದರೆ ನಾವು ಅಂತಹಾ ವಾತಾವರಣವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕಿರಿಮಂಜೇಶ್ವರದ ಜನತಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ವತಿಯಿಂದ ‘ಜನತಾ ರಸಬುಗ್ಗೆ 3.0’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೆಪ್ಟೆಂಬರ್ 06ರಂದು ಬೆಳಗ್ಗೆ 8.30ಕ್ಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಡ್ರಾಮ ಜ್ಯುನಿಯರ್ ಖ್ಯಾತಿಯ ಅಸ್ಮಿತ್ ಎ.ಜೆ. ಭಾಗವಹಿಸಲಿದ್ದಾರೆ. ‘ಮುದ್ದು ಕೃಷ್ಣ–ಮುದ್ದು ರಾಧೆ’ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಮಕ್ಕಳಿಗಾಗಿ ಸ್ಪರ್ಧೆಗಳು ನಡೆಯಲಿವೆ. ಸ್ಪರ್ಧೆಯಲ್ಲಿ 1 ವರ್ಷದಿಂದ 3 ವರ್ಷದೊಳಗಿನ ಮಕ್ಕಳಿಗೆ ಹಾಗೂ 3 ವರ್ಷ ಮೇಲ್ಪಟ್ಟು 6 ವರ್ಷದೊಳಗಿನ ಮಕ್ಕಳಿಗೆ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾಗುವವರಿಗೆ ಆಕರ್ಷಕ ಬಹುಮಾನಗಳಿದ್ದು, ಪ್ರಥಮ ಬಹುಮಾನ ₹15,999, ದ್ವಿತೀಯ ₹13,999, ತೃತೀಯ ₹12,999,ಒಟ್ಟು 10 ನಗದು ಬಹುಮಾನಗಳು.ಹಾಗೂ 25 ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತದೆ.ಹಾಗೂ ಮಕ್ಕಳ ಪೋಷಕರಿಗೆ ಅದೃಷ್ಟ ಕೂಪನ್, ಚಿನ್ನ ಮತ್ತು ಬೆಳ್ಳಿಯ ನಾಣ್ಯ, 25 ಸಮಾಧಾನಕರ ಬಹುಮಾನಗಳು ಹಾಗೂ ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೂ ಪದಕ ಹಾಗೂ ಪ್ರಮಾಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಉಡುಪಿ ಆದರ್ಶ ಚಾರಿಟೇಬಲ್ ಟ್ರಸ್ಟ್, ಆದರ್ಶ ಸಮೂಹ ಸಂಸ್ಥೆಗಳು, ಆದರ್ಶ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಎಸ್. ರಾಧಾಕೃಷ್ಣನ್ ಜನ್ಮ ಜಯಂತಿ ಅಂಗವಾಗಿ ನೀಡುವ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕೋಟ ಸುಜಯೀಂದ್ರ ಹಂದೆ ಭಾಜನರಾಗಿದ್ದಾರೆ. ಕಲೆ, ಶಿಕ್ಷಣ, ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಹಂದೆಯವರು ಕಳೆದ 29 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸೆಪ್ಟೆಂಬರ್ 06ರಂದು ಉಡುಪಿ ಅಲೆವೂರಿನ ಆದರ್ಶ ಸಮೂಹ ವಿದ್ಯಾ ಸಂಸ್ಥೆಗಳ ಸಂಕೀರ್ಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಕ್ಷೇತ್ರ ಶಿಕ್ಷಣಧಿಕಾರಿಗಳ ಕಛೇರಿ ಕುಂದಾಪುರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ನಡೆದ ಕುಂದಾಪುರ ವೃತ್ತ ಮಟ್ಟದ 14 ವರ್ಷದ ಬಾಲಕ – ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕಿಯರ ತಂಡದಲ್ಲಿ ಸನ್ನಿಧಿ, ಮನ್ವಿತಾ, ಧನ್ಯ ಖಾರ್ವಿ, ಆಶಿತಾ ಖಾರ್ವಿ, ಅಪೇಕ್ಷಾ, ಸನ್ನಿಧಿ, ಶ್ರೀಲಕ್ಷ್ಮಿ, ಅನ್ವಿತಾ, ಶ್ರಾವಣಿ, ತನುಶ್ರೀ, ಅದಿತಿ ಪ್ರತಿನಿಧಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕರಾದ ದೀಕ್ಷಿತ್ ಮೇಸ್ತ ಮಾರ್ಗದರ್ಶನ ನೀಡಿದ್ದರು. ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಬೋಧಕ ವೃಂದ ಮತ್ತು ಶಿಕ್ಷಕ – ರಕ್ಷಕ ಸಮಿತಿ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಾಂಡೇಶ್ವರ  ವಲಯದ ಗುಂಡ್ಮಿ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಮಾಹಿತಿ ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ಕೃಷಿ ತರಬೇತಿ ಕಾರ್ಯಕ್ರಮವು ಬುಧವಾರ ಗುಂಡ್ಮಿ ಪಾತಾಳಬೆಟ್ಟು ಪರಿಸರದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಕೋಟ ಸಿಎ ಬ್ಯಾಂಕಿನ ಉಪಾಧ್ಯಕ್ಷ ರವೀಂದ್ರ ಕಾಮತ್ ಉದ್ಘಾಟಿಸಿ ಶುಭ ಹಾರೈಸಿದರು. ತರಬೇತಿಯಲ್ಲಿ ಬ್ರಹ್ಮಾವರ ತಾಲೂಕಿನ ಕೃಷಿ ಮೇಲ್ವಿಚಾರಕ ರಾಘವೇಂದ್ರ ಪ್ರಾಸ್ತಾವಿಕ ನುಡಿಯನ್ನಾಡಿದರು. ಸಂಪನ್ಮೂಲ ವ್ಯಕ್ತಿ ರೈತಧ್ವನಿ ಸಂಘ ಕೋಟ ಅಧ್ಯಕ್ಷ ಜಯರಾಮ್ ಶೆಟ್ಟಿ ಮಾತನಾಡಿ ಇಂದಿನ ದಿನಗಳಲ್ಲಿ ರೈತರು ತಾವು ಬೆಳೆದ ಬೆಳೆಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದು ತುಂಬಾ ನೋವಿನ ವಿಷಯವಾಗಿದೆ. ಆದರೆ ನಮ್ಮ ರೈತರಲ್ಲಿ ಪ್ರಸ್ತುತ ದಿನಗಳಲ್ಲಿ ತಾಳ್ಮೆ ಎನ್ನುವುದು ತುಂಬಾ ಕಡಿಮೆಯಾಗಿದೆ. ಬೆಳೆದ ಬೆಳೆಯನ್ನು ರೈತರು ಹೊಲದಿಂದಲೇ ನೇರ ಮಾರುಕಟ್ಟೆಗೆ ಕಳಿಸುವುದರಿಂದ ನಾವು ನಿರೀಕ್ಷೆ ಮಾಡಿದ ಬೆಲೆ ನಮಗೆ ಸಿಗುವುದಿಲ್ಲ ಆದ್ದರಿಂದ ರೈತರು ತಮ್ಮ ಬೆಳೆಯನ್ನ ಉತ್ತಮ ಬೆಲೆಗೆ ಮಾರಾಟ ಮಾಡಬೇಕು ಎಂದರೆ ಬೆಳೆದ ಬೆಳೆಯನ್ನ ಸಂಸ್ಕರಿಸಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೈಗಾರಿಕೆ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಕೈಗಾರಿಕೋದ್ಯಮಿಗಳಿಗೆ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.      ಹೊಸದಾಗಿ ಅತೀ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸುವ ಉದ್ಯಮಿಗಳು ಬ್ಯಾಂಕ್‌ಗಳಲ್ಲಿ ಪಡೆದ ಸಾಲವನ್ನು ಹೊರತುಪಡಿಸಿ ತಾವು ತೊಡಗಿಸುವ ಬಂಡವಾಳದ ಅರ್ಧದಷ್ಟು ಹಣವನ್ನು ಬಡ್ಡಿರಹಿತ ಸಾಲದ ರೂಪದಲ್ಲಿ ನೀಡಲಾಗುವುದು, ಘಟಕದ ಸ್ಥಿರ ಬಂಡವಾಳದ ಶೇ.60 ರಷ್ಟು ಸಹಾಯಧನ, ಬ್ಯಾಂಕ್‌ಗಳಲ್ಲಿ ಸಾಲ ಪಡೆಯುವ ಸಂದರ್ಭದಲ್ಲಿ ಬ್ಯಾಂಕ್‌ಗಳಿಂದ ವಿಧಿಸಲಾಗುವ ಸಾಲ ಪ್ರಕ್ರಿಯೆ ಶುಲ್ಕ ಮರುಪಾವತಿ ಹಾಗೂ ವಿದ್ಯುತ್ ಇಲಾಖೆಯಿಂದ ವಿಧಿಸಲಾಗುವ ವಿದ್ಯುತ್ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುವುದು. ಮೇಲ್ಕಂಡ ಸೌಲಭ್ಯಗಳು ಗುರಿ ಆಧಾರಿತವಾಗಿದ್ದು, ಹೊಸದಾಗಿ ಅತೀಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಆಸಕ್ತ ಉದ್ಯಮಿಗಳು ಸೆಪ್ಟಂಬರ್ 15ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರ, ಪ್ಲಾಟ್ ನಂ: 36-ಸಿ, ಶಿವಳ್ಳಿ ಕೈಗಾರಿಕಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಜಿಲ್ಲೆಯ 5 ರಿಂದ 18 ವರ್ಷದೊಳಗಿನ ಮಕ್ಕಳಿಂದ ಜಿಲ್ಲಾ ಮಟ್ಟದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಸಾಧನೆ ಅಸಾಧಾರಣವೆಂದು ಸಮರ್ಥಿಸಲು ಪೂರಕ ದಾಖಲೆಗಳೊಂದಿಗೆ ಪ್ರಸ್ತಾವನೆಯನ್ನು ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸೆಪ್ಟಂಬರ್ 30ರ ಒಳಗಾಗಿ ಸಲ್ಲಿಸಬಹುದಾಗಿದೆ. ಹಿಂದಿನ ವರ್ಷಗಳಲ್ಲಿ ಜಿಲ್ಲಾ ಮಟ್ಟದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಪಡೆದ ಮಕ್ಕಳು ಮತ್ತೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಯ ದೂ.ಸಂಖ್ಯೆ :0820-2574978 ಅನ್ನು ಕಚೇರಿ ವೇಳೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿಯಲ್ಲಿ  ರಾಜ್ಯ ಸರಕಾರದ ನೂತನ ಪ್ರಜಾಸೇವೆ ಆಂದೋಲನದ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಉದ್ದೇಶಿಸಿ ಮಾತನಾಡಿ, ಜನರ ಸಮಸ್ಯೆ ಗಳನ್ನು ಆಲಿಸಲು ಹಾಗೂ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಜನ ಸ್ಪಂದನ ಕಾರ್ಯಕ್ರಮಗಳನ್ನು ಕೈಗೊಂಡಿದ್ದರೂ ಜನ ಸ್ಪಂದನ ಸಭೆಗಳಲ್ಲಿ ಇತ್ಯರ್ಥವಾದ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳ ಕುರಿತಾದ ಮಾಹಿತಿ ಅಧಿಕಾರಿಗಳಿಗೆ ಇಲ್ಲ. ಈ ಸಭೆಯಲ್ಲೂ ಹಾಜರಾಗಲು ನೋಟಿಸು ಕಳುಹಿಸಿರುವ ಹೆಚ್ಚಿನ ಇಲಾಖೆಗಳು ಗೈರು ಹಾಜರಾಗಿದ್ದು ಹಾಗೂ ಪ್ರಜಾ ಸೇವೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಅಧಿಕಾರಿಗಳಲ್ಲಿ ಸ್ಪಷ್ಟತೆ ಇಲ್ಲದಿರುವುದಾಗಿದೆ. ಹಾಗಾಗಿ ಪ್ರಜಾಸೇವೆ ಆಂದೋಲನವೂ ಮತ್ತೊಂದು ಕಾಟಾಚಾರದ ಜನ ಸ್ಪಂದನ ಕಾರ್ಯಕ್ರಮವಾಗದೇ ಕ್ಷೇತ್ರದ ಜನ ಸಾಮಾನ್ಯರ ಬೇಡಿಕೆಗಳಿಗೆ ಹಾಗೂ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಎಲ್ಲಾ ಇಲಾಖೆಗಳು ತಮ್ಮ ತಮ್ಮ ಹೊಣೆಯರಿತು,ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು. ಸಭೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಮೋಹನ್ ಪೂಜಾರಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಗಂಗೊಳ್ಳಿಯ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟೊಂದು ನೀರಿನ ಸುಳಿಗೆ ಸಿಲುಕಿ ಮುಳುಗಡೆಯಾದ ಘಟನೆ ಬುಧವಾರ ಸಂಭವಿಸಿದೆ. ಬೋಟ್‌ನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದ್ದು, ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ. ಅಪಘಾತಕ್ಕೀಡಾದ ಬೋಟನ್ನು ಸದ್ಯ ಯಶಸ್ವಿಯಾಗಿ ದಡಕ್ಕೆ ತರಲಾಗಿದೆ. ಕಳೆದ ವಾರಷ್ಟೇ ಗಂಗೊಳ್ಳಿ ಅಳಿವೆ ಬಾಗಿಲಿನಲ್ಲಿ ಭಾರಿ ಅಲೆಗಳ ಹೊಡೆತಕ್ಕೆ ಸಿಲುಕಿ ಮೀನುಗಾರಿಕಾ ಬೋಟು ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲೂ ಕ್ಷಿಪ್ರ ಕಾರ್ಯಚರಣೆ ನಡೆಸಿ ಬೋಟ್ ನಲ್ಲಿದ್ದ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು. ಆ ಘಟನೆ ಮಾಸುವ ಮುನ್ನವೇ ಇಂದು ಮತ್ತೊಂದು ಬೋಟ್ ಅಪಘಾತಕ್ಕೆ ಸಿಲುಕಿರುವುದು ಸ್ಥಳೀಯ ಮೀನುಗಾರರಲ್ಲಿ ಆತಂಕ ಹೆಚ್ಚಿಸಿದೆ. ಇದನ್ನೂ ಓದಿ► ಗಂಗೊಳ್ಳಿ: ಅಲೆಗಳ ಹೊಡೆತಕ್ಕೆ ಸಿಲುಕಿ ಬೋಟ್‌ ಮುಳುಗಡೆ: 27 ಮಂದಿ ಮೀನುಗಾರರ ರಕ್ಷಣೆ – https://kundapraa.com/?p=101294 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಕಾರ್ಕಡ ಗೆಳೆಯರ ಬಳಗ ವತಿಯಿಂದ ಪ್ರತಿವರ್ಷ ನಡೆಸಲ್ಪಡುವ  ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ಗೆಳೆಯರ ಬಳಗ  ಕಾರಂತ ಪುರಸ್ಕಾರ – 2026 ಪ್ರಶಸ್ತಿಗೆ ಕಾರಂತರ  ಓಡನಾಡಿ ಕೋಟತಟ್ಟು ನಿವಾಸಿ  ರಾಮ ಮರಕಾಲ ಅವರು ಆಯ್ಕೆಯಾಗಿದ್ದಾರೆ. ಮಾಲಿನಿ ಮಲ್ಯ,ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ, ಡಾ ನಾ ಮೊಗಸಾಲೆ ಹಾಗೂ ಶಾಕುಂತಲಾ ಭಟ್ ಇವರುಗಳಿಗೆ ಈ ಹಿಂದೆ ಗೆಳೆಯರ ಬಳಗ ಕಾರಂತ ಪುರಸ್ಕಾರ ನೀಡಲಾಗಿದೆ. ಗೆಳೆಯರ ಬಳಗ ಕಾರಂತ ಪುರಸ್ಕಾರ-2026ನ್ನು ಅಕ್ಟೋಬರ್ ತಿಂಗಳ 11ರ ಭಾನುವಾರ ಸಂಜೆ  ಸಾಲಿಗ್ರಾಮ ಶ್ರೀ ಗುರುನರಸಿಂಹ ಬಯಲು ರಂಗ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು…

Read More