Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೆರಾಡಿಯ ವರಸಿದ್ಧಿ ವಿನಾಯಕ ಪದವಿ ಪೂರ್ವ ಕಾಲೇಜಿನಲ್ಲಿ 2026ನೇ ಸಾಲಿನ ದ್ವಿತೀಯ ಪಿ.ಯು ವಾರ್ಷಿಕ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ನಿಹಾಲ್ ಹೆಚ್‌.ಜಿ.  – 596, ಡಿ .ಹೆಚ್‌. ನವಮಿ – 593, ಅಂಕ ಪಡೆದು ರಾಜ್ಯಕ್ಕೆ 4ನೇ ಮತ್ತು 7ನೇ ಸ್ಥಾನ ಪಡೆದಿರುತ್ತಾರೆ. ಪರೀಕ್ಷೆಗೆ ಕುಳಿತ 186 ವಿದ್ಯಾರ್ಥಿಗಳಲ್ಲಿ 106 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ನಿಹಲ್‌ ಹೆಚ್ ಜಿ – 596, ಡಿ . ಹೆಚ್‌ ನವಮಿ – 593 ರಕ್ಷಾ ನಾರಾಯಣ ಹರಿಕಾಂತ್‌ – 589, ನಂದನ ಜನಾರ್ದನ ಶಂಕರಲಿಂಗ – 588, ಪ್ರಮಥ್‌ ಶ್ಯಾನುಬೋಗ್‌ – 588 ಹಾಗೂ ವಾಣಿಜ್ಯ ವಿಭಾಗ:  ಎಂ ಆರ್‌ ಕಿರಣ – 585, ಸಾತ್ವಿ – 583, ರಕ್ಷಿತಾ – 573 ಉತ್ತಮ ಅಂಕ ಪಡೆದಿರುತ್ತಾರೆ. ಅವರಿಗೆ ಆಡಳಿತ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರು, ಪ್ರಾಂಶುಪಾಲರು ಮತ್ತು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯುಗಾದಿ ಉತ್ಸವವನ್ನು ಕೇಂದ್ರಿಕರಿಸಿಕೊಂಡು ಯಕ್ಷಕಲಾರಾಧನೆ ಅರ್ಥಪೂರ್ಣ ಎಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು. ಅವರು ಬುಧವಾರ ಕಾರ್ಕಡ ಭೂಮಿಕ ಸಮೀಪ ಸೌರಮಾನ ಯುಗಾದಿ ಯಕ್ಷಗಾನ ಶೀರ್ಷಿಕೆಯಡಿ ಕೋಟ ಸಾಲಿಗ್ರಾಮ ಹದಿನಾಲ್ಕು ಗ್ರಾಮಗಳ ಯಕ್ಷಗಾನ ಕಲಾಭಿಮಾನಿಗಳ ನೇತೃತ್ವದಲ್ಲಿ ಶ್ರೀ ಅನಂತ ಪದ್ಮನಾಭ ದಶಾವತಾರ ಯಕ್ಷಗಾನ ಮಂಡಳಿ, ಪೆರ್ಡೂರು ಇವರಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಕಲಾರಾಧಕರನ್ನು ಅಭಿನಂದಿಸಿ ಮಾತನಾಡಿದರು. ಯುಗಾದಿ ಎನ್ನುವುದು ಹೊಸ ಮನ್ವಂತರದ ಜತೆ ಹಳೆಯ ಚಿಂತನೆಗಳನ್ನು ನೆನಪಿಸುತ್ತಾ ಸಾಂಸ್ಕೃತಿಕ ಸಾಮಾಜಿಕ ಪುರಾತನ ಹಿನ್ನಲ್ಲೆಯನ್ನು ಈ ಸಮಾಜಕ್ಕೆಧಾರೆ ಎರೆಯುವ ಕಾರ್ಯ ಆಗಬೇಕಿದೆ,ಇಂದಿನ ಯುವ ಜನಾಂಗಕ್ಕೆ ಶಿಕ್ಷಣವೊಂದೆ ಶಿಕ್ಷೆಯಾಗದೆ ಸಂಸ್ಕಾರಭರಿತ ನಾಳಿನ ಸುಂದರ ಪ್ರಜೆಯಾಗಿ ರೂಪಿಸಲು ಕರೆ ನೀಡಿದರಲ್ಲದೆ ನಮ್ಮ ಕಲಾರಾಧನೆ,ಆಚರಣೆಗಳು ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ ಅದನ್ನು ಉಳಿಸಿ ಬೆಳೆಸುವ ಕಾರ್ಯ ಆಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ಯಕ್ಷಾಭಿಮಾನಿಗಳಾದ ರಾಘವೇಂದ್ರ ಮಧ್ಯಸ್ಥ ಪಾರಂಪಳ್ಳಿ, ಆನಂದ್ ಆಚಾರ್, ಎಚ್. ನಾಗರಾಜ್ ಹಂದೆ, ಗಣೇಶ್ ಕಿಣಿ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ವೈದ್ಯಕೀಯ ಕ್ಷೇತ್ರದಲ್ಲಿ ಡಾ .ವಾದಿರಾಜ್ ಅವರ ಜೀವನ ಮಾದರಿ ಅಲ್ಲದೆ ಜನಮಾನಸದಿ ಅಚ್ಚಳಿಯದೆ ಉಳಿದುಕೊಂಡಿದೆ ಎಂದು ಜಿ.ಎಸ್.ಬಿ ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಜಿ. ಸತೀಶ್ ಹೆಗ್ಡೆ ಹೇಳಿದರು. ಅವರು ಗುರುವಾರ ಕೋಟದ ವಾಸುದೇವ ಮಂಟಪದಲ್ಲಿ ಇತ್ತೀಚಿಗೆ ಅಗಲಿದ ಪ್ರಸಿದ್ಧ ಚರ್ಮರೋಗ ತಜ್ಞ ಡಾ.ವಾದಿರಾಜ್ ಇವರ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿ ವೈದ್ಯಕೀಯ ಸೇವೆ ಕ್ಷೇತ್ರದಲ್ಲಿ ವಿಶ್ವ ಪ್ರಸಿದ್ಧಿ ಹೊಂದಿದ ಅವರು ಆ ಕಾಲಘಟ್ಟದಲ್ಲಿ ನಮ್ಮಂತ ಮೆಡಿಕಲ್ ರೆಫ್ ಗಳಿಗೆ ಮಾರ್ಗದರ್ಶನ ನೀಡುತ್ತಿದ್ದರು, ಅಲ್ಲದೆ ಸಮಾಜಿಕ, ಸಾಂಸ್ಕೃತಿಕವಾಗಿ ತನ್ನನ್ನು ತಾನು ಗುರುತಿಸಿಕೊಂಡು ಎಲ್ಲರ ಅಚ್ಚುಮೆಚ್ಚಿನ ವೈದ್ಯರಾಗಿ ಗುರುತಿಸಿಕೊಂಡು ಕೋಟದಲ್ಲಿ ತನ್ನ ಕಾರ್ಯಕ್ಷೇತ್ರವಾಗಿರಿಸಿಕೊಂಡ ಮನೆಮಾತಾದ ವೈದ್ಯರು ಎಂದು ತಮ್ಮ ಅಭಿಮತವನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಾ. ವಾದಿರಾಜ್ ಪತ್ನಿ ಭಾಗ್ಯವಾದಿರಾಜ್ ತನ್ನ ಪುತ್ರಿಯರೊಂದಿಗೆ ತನ್ನ ಪತಿಯ ಭಾವಚಿತ್ರಕ್ಕೆ ಪುಷ್ಭ ನಮನ ಸಲ್ಲಿಸಿದರು. ಈ ವೇಳೆ ಕೋಟ ಮಹಿಳಾ ಮಂಡಲದ ಅಧ್ಯಕ್ಷೆ ಗೀತಾ ಎ. ಕುಂದರ್, ಮಾಜಿ ಅಧ್ಯಕ್ಷೆ ಸುಶೀಲ ಸೋಮಶೇಖರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಕಂಬದಕೋಣೆ ಗ್ರಾಮದ ಹಳಗೇರಿಯ ಶ್ರೀ ಕೊಕ್ಕೇಶ್ವರ ವನದುರ್ಗಾ ದೇವಾಸ್ಥಾನದಲ್ಲಿ ಎ.19 ಆದಿತ್ಯವಾರದಂದು ವರ್ಧಂತ್ಯುತ್ಸವ ಜರುಗಲಿದೆ. ಬೆಳಿಗ್ಗೆ ಗಂಟೆ 8.00ರಿಂದ ಶ್ರೀ ಕೊಕ್ಕೇಶ್ವರ ದೇವಾಲಯದಲ್ಲಿ ನಾಂದಿ, ಪುಣ್ಯಾಹಾ ಶತರುದ್ರಾಭಿಷೇಕ, ಕಲಾವೃದ್ಧಿ ಹೋಮ, ಏಕಾದಶ ರುದ್ರ, ಸಪ್ತಶತೀ ಪಾರಾಯಣ, ಶ್ರೀ ನಾಗದೇವರಿಗೆ ಪವಮಾನ ಕಲಶ, ಶ್ರೀ ದೇವಿ ದೇವಾಲಯದಲ್ಲಿ ಸಪ್ತಶತೀ ಪಾರಾಯಣ, ಶ್ರೀ ಅಮ್ಮನವರಿಗೆ ಬ್ರಹ್ಮ ಕುಂಭಾಭಿಷೇಕ ನಡೆಯಲಿದೆ. ಮಧ್ಯಾಹ್ನ ಘಂಟೆ 12.00ರಿಂದ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಘಂಟೆ 4.00ರಿಂದ ಮಂತ್ರಾಕ್ಷತೆ, ಇತ್ಯಾದಿ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ ಘಂಟೆ 5.00ರಿಂದ ಶ್ರೀ ಕೊಕ್ಕೇಶ್ವರ ಭಜನಾ ಮಂಡಳಿ ಹಳಗೇರಿ ಇವರಿಂದ ಭಜನಾ ಕಾರ್ಯಕ್ರಮಗಳು, ಸಂಜೆ 7-30 ರಿಂದ ರಂಗಪೂಜೆ, ಬಲ್ಯುತ್ಸವಾದಿಗಳು ನಡೆಯಲಿದೆ. ಊರ ಪರ ಊರ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತನು-ಮನ-ಧನಗಳಿಂದ ಸಹಕರಿಸಿ, ಶ್ರೀ ದೇವರ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ಕೊಕ್ಕೇಶ್ವರ ವನದುರ್ಗಿ ದೇವರ ಕೃಪೆಗೆ ಪಾತ್ರರಾಗಬೇಕು ಎಂದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಈ ಬಾರಿಯ ಹತ್ತನೆ ತರಗತಿಯ ಫಲಿತಾಂಶ ಪ್ರಕಟಿಸಿದ್ದು ಸತತ ಆರನೇ ವರ್ಷ ಆಳ್ವಾಸ್ ಶಾಲೆಯು 100% ಫಲಿತಾಂಶ ದಾಖಲಿಸಿದೆ. ಆಳ್ವಾಸ್ ಶಾಲೆಯ 46 ವಿದ್ಯಾರ್ಥಿಗಳು 95%ಕ್ಕಿಂತ ಹೆಚ್ಚು ಅಂಕ ಪಡೆಯುವ ಮೂಲಕ ಶ್ರೇಷ್ಠ ಸಾಧನೆ ಮೆರೆದಿದ್ದಾರೆ. ಕರ್ನಾಟಕದ ಒಂದು ಶಾಲೆಯಿಂದ 95 ಶೇಕಡಾಕ್ಕಿಂತ ಹೆಚ್ಚು ಅಂಕ ಪಡೆದವರ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಆಳ್ವಾಸ್ ಪ್ರಥಮ ಸ್ಥಾನ ಪಡೆದಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಅನಘಾ ಉಮೇಶ್‌ರಾವ್(99.2%), ಪ್ರಮತ್ ಔರಾದ್ಕರ್ (99%), ಆದ್ಯಾ ಭಟ್ (99%), ಅನುರಾಧ(99%), ವಾತ್ಸಲ್ಯ ಎನ್ (98%), ಧನ್ವಿತ್ ಪಿಬಿ(97.2%), ನಮ್ರತಾ(97.2%), ಮನೋಘ್ನ(97%), ಶ್ವೇತಾ(97%), ಶಿವಾನಿ ಜಿಎ(97%), ವಾಘ್ಮಿ ಪ್ರಶಾಂತ್ (97%), ಅವನಿ ಪಿ ಶೆಟ್ಟಿ (97%), ವಿಭಾಸ್(97%), ಯಕ್ಷಿತಾ (96.4%), ಸೃಜನ್(96.4%), ಗೌತಮ್ (96.4%), ಪ್ರತೀಕ್ಷಾ ಕೆ ಎಂ(96.4%), ಸಾನ್ವಿ( 96.4%), ಜನಿತ್ (96.2%), ಭಾರ್ಗವ್ (96%),…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಆಶ್ರಯದಲ್ಲಿ “ರೆಸ್ಯೂಮ್ ಬಿಲ್ಡಿಂಗ್ “ಕಾರ್ಯಾಗಾರ ನಡೆಯಿತು. ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ಡೀನ್ ಅಕಾಡೆಮಿಕ್ಸ್ ಗಿರಿರಾಜ್ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಪರಿಣಾಮಕಾರಿ ರೆಸ್ಯೂಮ್ ರಚನೆ, ವೃತ್ತಿಪರ ಪ್ರೊಫೈಲ್ ಅಭಿವೃದ್ಧಿ ಹಾಗೂ ಉದ್ಯೋಗಾವಕಾಶಗಳಿಗೆ ಸಿದ್ಧರಾಗುವ ಕುರಿತು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭ ಅವರು ವಿದ್ಯಾರ್ಥಿಗಳಿಗೆ ಉದ್ಯೋಗ ಗಿಟ್ಟಿಸುವಲ್ಲಿ ಪ್ರಾಥಮಿಕ ಹಂತದಲ್ಲಿ ರೆಸ್ಯೂಮ್ ಅತ್ಯಂತ ಮಹತ್ವದ್ದಾಗಿದ್ದು, ಉತ್ತಮ ವ್ಯಕ್ತಿತ್ವದ ದರ್ಪಣವಾಗಿ ರೆಸ್ಯೂಮ್ ಮೂಡಿ ಬರಲಿ ಎಂದರು. ಈ ಸಂದರ್ಭ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಮಹೇಶ್ ಕುಮಾರ್, ಕಾರ್ಯಕ್ರಮ ಸಂಯೋಜಕರು ಮತ್ತು ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಮಹೇಶ್ ಪೂಜಾರಿ ಹಾಗೂ ಶಿವಾನಿ ಅಡಿಗ ಉಪಸ್ಥಿತರಿದ್ದರು. ಬಿಸಿಎ ವಿದ್ಯಾರ್ಥಿಗಳಾದ ಅಮರ್ ಸ್ವಾಗತಿಸಿ, ವೈಷ್ಣವಿ ಅತಿಥಿಗಳನ್ನು ಪರಿಚಯಿಸಿ, ಶಶಿಕಾಂತ್ ವಂದಿಸಿ, ರಿಶಿತಾ ಪ್ರಾರ್ಥಿಸಿ, ಶಿಫಾ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ಕಿನ್ನಿಮೂಲ್ಕಿ ಬಸ್ ನಿಲ್ದಾಣದ ಬಳಿಯ ಕೈಗಾರಿಕಾ ಸಹಕಾರ ಸಂಘ ಫ್ರಧಾನ ಕಛೇರಿಯ ಎರಡನೇ ಮಹಡಿಯ ಗ್ರೋಸ್ಪೆöÊರ್ ಗ್ರೂಪ್ ಇಲ್ಲಿ ಏಪ್ರಿಲ್ 17ರಂದು ಬೆಳಗ್ಗೆ 10.30ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿಯುಸಿ, ಡಿಪ್ಲೋಮಾ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ ಮಣಿಪಾಲ ಉಡುಪಿ ಅಥವಾ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸ್ತುತ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ, ಹೀಟ್ ವೇವ್ (ಶಾಖದ ಹೊಡೆತ) / ಹೀಟ್ ವೇವ್ ಸ್ಟ್ರೋಕ್‌ನಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಈ ಹಿನ್ನೆಲೆ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಾರ್ವಜನಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಈ ಕೆಳಕಂಡ ಸಲಹೆಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಅತೀ ಹೆಚ್ಚು ತಾಪಮಾನದಿಂದಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾರ್ವಜನಿಕರು ಸಾಧ್ಯವಾದಷ್ಟು ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಾದ ಮಧ್ಯಾಹ್ನ 12 ರಿಂದ 3 ರವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರು ಕುಡಿಯಬೇಕು. ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ/ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆಯು ಹೆಚ್ಚಿರುವಾಗ ಅಂದರೆ ಮಧ್ಯಾಹ್ನ 12 ರಿಂದ 3 ರ ವರೆಗೆ ಶ್ರಮದಾಯಕ ಚಟುವಟಿಕೆಗಳನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಈ ಬಾರಿಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ 6ನೇ ರ‍್ಯಾಂಕ್‌ ಪಡೆದ ಉಪ್ಪುಂದ ರಾಜೇಂದ್ರ ಭಟ್ ಮತ್ತು 9ನೇ ರ‍್ಯಾಂಕ್‌ ಪಡೆದ ರಾಘವೇಶ್ವರ ಭಟ್ ಉಪ್ಪುಂದ ಅವರನ್ನು ಹವ್ಯಕ ಸಭಾ ರಿ. ಕುಂದಾಪುರ ತಾಲೂಕು ಇದರ ವತಿಯಿಂದ ಸನ್ಮಾನಿಸಲಾಯಿತು. ಭಾನುವಾರ ದಿನ ಉಪ್ಪುಂದ ಸತ್ಯನಾರಾಯಣ ಪುರಾಣಿಕರ ಮನೆಯಲ್ಲಿ ನಡೆದ ಸಭೆಯಲ್ಲಿ ನಿವೃತ್ತ ಉಪನ್ಯಾಸಕರಾದ ಡಾ| ಎಂ.ವಿ ನಾರಾಯಣ ಸ್ವಾಮೀ ಅವರು ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, ವಿದ್ಯಾರ್ಥಿಗಳ ಸಾಧನೆ ಸಮಾಜಕ್ಕೆ ಹೆಮ್ಮೆಯ ಸಂಗತಿ ಎಂದು ಹೇಳಿದರು. ಹವ್ಯಕ ಸಭಾದ ಅಧ್ಯಕ್ಷರಾದ ಮುಖ್ಯ ಶಿಕ್ಷಕ ನಾಗರಾಜ ಭಟ್ ಮಕ್ಕಿ ದೇವಸ್ಥಾನ ಅವರು ಅಧ್ಯಕ್ಷತೆ ವಹಿಸಿದ್ದರು. ಇತ್ತೀಚೆಗೆ ನಿಧನನರಾದ ನಿವೃತ್ತ ಉದ್ಯೋಗಿ ಸಂಘದ ಮಾಜಿ ಅಧ್ಯಕ್ಷರು ಜಗದೀಶ ಅವಭೃತ ಅವರಿಗೆ ಶೃದ್ಧಾಂಜಲಿ ಅರ್ಪಿಸಲಾಯಿತು. ಸಭೆಯಲ್ಲಿ ಸತ್ಯನಾರಾಯಣ ಪುರಾಣಿಕ್, ವಿದ್ವಾನ್ ಶಂಕರನಾರಾಯಣ ಭಟ್, ಸುರೇಶ್ ಭಟ್, ಶ್ರೀನಿವಾಸ ಅವಭೃತ, ಸುರೇಖಾ ಪುರಾಣಿಕ್, ಗಣೇಶ್ ಪುರಾಣಿಕ, ಜಲಜಾಕ್ಷಿ ಭಟ್ ಬೇಳೂರು ಗಣೇಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ವಾಂಟಮ್ ನಂತಹ ಆಧುನಿಕ ವಿಷಯಗಳೊಂದಿಗೆ ಕೃಷಿ, ಆರೋಗ್ಯ ಕ್ಷೇತ್ರದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಯಬೇಕಿದೆ. ಇದು ಕೃಷಿ ಸಮಸ್ಯೆಗಳ ಸುಧಾರಣೆ ಹಾಗೂ ಉತ್ತಮ ಆರೋಗ್ಯ ಸೇವೆ ಒದಗಿಸಲು ಸಹಕಾರಿಯಾಗುತ್ತದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು. ಟಿ. ಖಾದರ್ ಹೇಳಿದರು. ಅವರು ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ‘ಕ್ವಾಂಟಮ್ ಕಂಪ್ಯೂಟೇಶನ್, ಪ್ರಿಸಿಸನ್ ಇನ್ಸ್ಟ್ರುಮೆಂಟೇಶನ್ ಮತ್ತು ಎಮರ್ಜಿಂಗ್ ರಿಸರ್ಚ್ ಇನ್ಫ್ರಾಸ್ಟ್ರಕ್ಚರ್’ ವಿಷಯದ ಕುರಿತಾದ ರಾಷ್ಟ್ರೀಯ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಇಂತಹ ಸಂಶೋಧನಾ ಕೇಂದ್ರಗಳಿಗೆ ಸರ್ಕಾರದಿಂದ ಸಬ್ಸಿಡಿ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೊಂದಿಗೆ ಚರ್ಚಿಸುವುದಾಗಿ ಸ್ಪೀಕರ್ ಭರವಸೆ ನೀಡಿದರು. ಸಂಶೋಧಕ ಸಪ್ತರ್ಷಿ ಚೌಧರಿ ಮಾತನಾಡಿ, ಮೆಟ್ರೋ ನಗರಗಳಲ್ಲಿ ಮಾತ್ರ ಕಾಣಸಿಗುವ ‘ಕ್ವಾಂಟಮ್ ಕಂಪ್ಯೂಟರ್ ಸಂಶೋಧನಾ ಕೇಂದ್ರ’ ಇಂದು ಮೂಡ್ಲಕಟ್ಟೆಯಂತಹ ಗ್ರಾಮೀಣ ಭಾಗದಲ್ಲಿ ಆರಂಭಗೊಂಡಿರುವುದು ಶ್ಲಾಘನೀಯ ಎಂದು ಅಭಿಪ್ರಾಯಪಟ್ಟರು. ಐಎಂಜೆ ಸಂಸ್ಥೆಯ ಅಧ್ಯಕ್ಷರಾದ ಸಿದ್ದಾರ್ಥ್ ಜೆ.…

Read More