Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ವಂಡ್ಸೆಯಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ದೇಶದಲ್ಲಿ ಅರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆಯಿಂದ ಜನ ಕಂಗೆಟ್ಟಿದ್ದು, ಅದರೊಂದಿಗೆ ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗುತ್ತಿರುವುದು ಬಿಸಿವತುಪ್ಪವಾಗಿ ಪರಿಣಮಿಸಿದೆ. 2014 ರಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 6330 ರೂ. ಇದ್ದಿದ್ದು ಈಗ 3035 ರೂ. ಗೆ ಕುಸಿದಿದೆ, ಆದರೂ ಕೇಂದ್ರ ಸರ್ಕಾರ ಬೆಲೆ ಎರಿಕೆ ಮಾಡಿರುವುದು ಖಂಡನೀಯ ಎಂದು ಕಿಡಿಕಾರಿದ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಜನವಿರೋ ನೀತಿಯ ವಿರುದ್ಧ ಗ್ರಾಮ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.6ರ ಸೋಮವಾರ 40 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಹೋಟೆಲ್ ಸಿಬ್ಬಂದಿ, ಅಂಗಡಿ ಮಾಲೀಕರ ಕುಟುಂಬ, ಬಸ್ ಚಾಲಕ ಕರೋನಾ ಸೋಂಕು ತಗುಲಿದ್ದು ಸಮುದಾಯಕ್ಕೆ ಹಬ್ಬುವ ಭೀತಿ ಎದುರಾಗಿದೆ. ಕೋಟದಲ್ಲಿರುವ ಹೋಟೆಲ್ ಮತ್ತು ಅಂಗಡಿ ಮಾಲೀಕರಿಗೆ ಕೋವಿಡ್ ದೃಢಗೊಂಡಿದ್ದು, ಹೊಟೇಲ್ ಮತ್ತು ಅಂಗಡಿಯನ್ನು ಸೀಲ್ ಡೌನ್ ಮಾಡಲಾಗಿದೆ. ಇಂದು 466 ನೆಗೆಟಿವ್: ಈ ತನಕ ಒಟ್ಟು 18,542 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,540 ನೆಗೆಟಿವ್, 1,362 ಪಾಸಿಟಿವ್ ಬಂದಿದ್ದು, 1,640 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 466 ನೆಗೆಟಿವ್, 40 ಪಾಸಿಟಿವ್ ಬಂದಿದೆ. ಒಟ್ಟು 1126 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 205 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,362 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1154 ಮಂದಿ ಬಿಡುಗಡೆಯಾಗಿದ್ದು, 205 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋದ ಮೂವರು ಬಸ್ ಚಾಲಕರಿಗೆ ಕೋರೋನಾ ಸೊಂಕು ದೃಢಪಟ್ಟಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. 44 ವರ್ಷದ ಕುಂದಾಪುರ – ಬೆಂಗಳೂರು ಬಸ್ ಚಾಲಕ, 36 ವರ್ಷದ ಕುಂದಾಪುರ – ಶಿವಮೊಗ್ಗ ಬಸ್ ಚಾಲಕ ಹಾಗೂ 58 ವರ್ಷದ ಬಸ್ ಚಾಲಕರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಅದರ ವರದಿ ದೊರೆತಿದ್ದು, ಬಾಗಲಕೋಟೆ ಮೂಲದ ಚಾಲಕನನ್ನು ಬಾಗಲಕೋಟೆ ಕೋವಿಡ್ ಆಸ್ಪತ್ರೆಗೆ ಹಾಗೂ ಉಳಿದವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆ ದಾಖಲಿಸಲಾಗಿದ್ದು, ಪ್ರಾಥಮಿಕ ಸಂಪರ್ಕದಲ್ಲಿರುವನ್ನು ಕ್ವಾರಂಟೈನ್ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಪ್ರತಿಭೆ ನಿಮ್ಮದು ವೇದಿಕೆ ನಮ್ಮದು ವಿಶಿಷ್ಟ ಸರಣಿ ಕಾರ್ಯಕ್ರಮದಡಿ ನಿರಂತರ ಪ್ರತೀ ತಿಂಗಳು ಕಾರ್ಯಕ್ರಮ ಸಂಘಟಿಸಿ ಐದು ವರ್ಷ ಯಶಸ್ವಿಯಾಗಿ ಪೂರೈಸಿ ಸಾಂಸ್ಕೃತಿಕ ರಂಗಭೂಮಿಯಲ್ಲಿ ಎಲ್ಲರ ಗಮನ ಸೆಳೆದಿದೆ.ಸರಕಾರ, ಇಲಾಖೆ ಹಾಗೂ ಅಕಾಡೆಮಿಗಳ ಯಾವುದೇ ಧನಸಹಾಯ ಪಡೆಯದೇ ಕಾರ್ಯ ನಿರ್ವಹಿಸುತ್ತಿರುವುದು ಈ ಅಕಾಡೆಮಿಯ ವಿಶೇಷ. ಅನೇಕ ಅಡ್ಡಿ, ಆತಂಕಗಳನ್ನು ದಾಟಿ ೩೫೦ ವರ್ಷದ ಆರನೇ ತಲಾಂತರದ ಪರಂಪರೆಯನ್ನು ಜೀವಂತವಾಗಿರಿಸುವ ಹೊಣೆ ಹೊತ್ತ ಈ ಸಂಸ್ಥೆಗೆ ಸಾರ್ವಜನಿಕರ ಸಹಕಾರ, ಪ್ರೋತ್ಸಾಹವೇ ಜೀವಾಳ. ಕೋವಿಡ್-19 ಇಂತಹ ವಿಷಮ ಪರಿಸ್ಥಿತಿಯಲ್ಲಿ ಜಗತ್ತೇ ಸ್ತಬ್ಧವಾಗಿರುವ ಗೊಂದಲಗಳ ನಡುವೆಯೂ ಈ ಗೊಂಬೆಯಾಟ ಅಕಾಡೆಮಿಯ ನಿರಂತರ ಚಟುವಟಿಕೆ ಹಾಗೂ ಸಾಧನೆಯ ಹಿನ್ನೆಲೆಯನ್ನು ಕಂಡು ಕಾರ್ಯಕ್ರಮಕ್ಕೆ ಅಗತ್ಯವೆನಿಸಿದ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಿದ ನಿವೃತ್ತ ಬ್ಯಾಂಕ್ ಮೆನೇಜರ್ ವಿಶ್ವಂಭರ ಐತಾಳ್ ಹಾಗೂ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜ್ಯೋತಿ ಐತಾಳ್ ದಂಪತಿಗಳು ಅಭಿನಂದನಾರ್ಹರು. ಈ ದಂಪತಿಗಳ ಅತ್ಯುತ್ಸಾಹವೇ ಗೊಂಬೆಯಾಟ ಅಕಾಡೆಮಿಯ ವೇದಿಕೆಯಲ್ಲಿ ತುರ್ತಾಗಿ, ಸರಳವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ಬೈಂದೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಲ್ಲಿನ ತಹಶೀಲ್ದಾರ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಯಿತು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ದಿನದಿಂದ ದಿನಕ್ಕೆ ಎರುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು ಜನಸಾಮಾನ್ಯರು ಹೈರಣಾಗಿದ್ದಾರೆ, ಹೀಗಾಗಿ ಜನರ ಹಿತದೃಷ್ಟಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಕೊರೋನಾದ ನಡುವೆಯು ಹೋರಾಟ ನಡೆಸಬೇಕಾದ ಅನಿವಾರ್ಯತೆ ಎದುರಾಗಿದೆ. ಇಂದು ದೇಶದಲ್ಲಿ ಅರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆಯಿಂದ ಜನ ಕಂಗೆಟ್ಟಿದ್ದು, ಅದರೊಂದಿಗೆ ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗುತ್ತಿರುವುದು ಬಿಸಿವತುಪ್ಪವಾಗಿ ಪರಿಣಮಿಸಿದೆ. ೨೦೧೪ರಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ ೬೩೩೦ ರೂ. ಇದ್ದಿದ್ದು ಈಗ ೩೦೩೮ ರೂ. ಗೆ ಕುಸಿದಿದೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಂಹಿತ್ಲು ನಿವಾಸಿ ಬೇಬಿ ಹಾಗೂ ಸುಬ್ಬಯ್ಯ ದೇವಾಡಿಗ ಎಂಬುವವರ ಕುಟುಂಬಕ್ಕೆ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟಿನಿಂದ ನಿರ್ಮಿಸಿಕೊಟ್ಟ ನೂತನ ಗೃಹ ‘ಶ್ರೀ ಕೃಷ್ಣ ನಿಲಯ’ ಇದರ ಉದ್ಘಾಟನಾ ಸಮಾರಂಭ ಸೋಮವಾರ ಜರುಗಿತು. ನೂತನ ಗೃಹವನ್ನು ಬಾಬು ಪೂಜಾರಿ – ಮಂಜಮ್ಮ ದಂಪತಿಗಳು ಉದ್ಘಾಟಿಸಿದರು. ಈ ಸಂದರ್ಭ ಉಡುಪಿ ಜ್ಯೋತಿಷಿಗಳಾದ ರಘುನಾಥ ಜೋಯಿಸ್, ಮುಖಂಡರುಗಳಾದ ಎಸ್. ರಾಜು ಪೂಜಾರಿ, ದೀಪಕ್ ಕುಮಾರ್ ಶೆಟ್ಟಿ, ಮದನಕುಮಾರ್ ಉಪ್ಪುಂದ, ಗೌರಿ ದೇವಾಡಿಗ, ಮಹೇಂದ್ರ ಪೂಜಾರಿ, ಜಗದೀಶ ದೇವಾಡಿಗ, ಮ್ಯಾನೆಜಿಂಗ್ ಟ್ರಸ್ಟೀ ಗೋವಿಂದ ಬಾಬು ಪೂಜಾರಿ, ಟ್ರಸ್ಟೀಗಳಾದ ಮಾಲತಿ ಗೋವಿಂದ ಪೂಜಾರಿ, ರಾಮ ಬಿಜೂರು, ಸದಸ್ಯರುಗಳಾದ ಜಯರಾಮ ಶೆಟ್ಟಿ, ನರಸಿಂಹ ನಾಯಕ್, ಉದ್ಯಮಿ ಗುರುರಾಜ ಪೂಜಾರಿ, ರಾಮ ಪೂಜಾರಿ, ಪತ್ರಕರ್ತರ ಸಂಘದ ಅಧ್ಯಕ್ಷ ಎಸ್. ಜನಾರ್ದನ ಮರವಂತೆ ಮೊದಲಾದವರು ಉಪಸ್ಥಿತರಿದ್ದರು. ಇದನ್ನೂ ಓದಿ: ► ಸ್ವಂತ ಸೂರು ನಿರ್ಮಿಸುವ ಕನಸು ಶ್ರೀ ವರಲಕ್ಷ್ಮೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜು.5ರ ಭಾನುವಾರ 45 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 518 ನೆಗೆಟಿವ್: ಈ ತನಕ ಒಟ್ಟು 17,824 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 15,074 ನೆಗೆಟಿವ್, 1,322 ಪಾಸಿಟಿವ್ ಬಂದಿದ್ದು, 1,428 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 273 ನೆಗೆಟಿವ್, 16 ಪಾಸಿಟಿವ್ ಬಂದಿದೆ. ಒಟ್ಟು 1057 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 183 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,322 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1136 ಮಂದಿ ಬಿಡುಗಡೆಯಾಗಿದ್ದು, 183 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಕುಂದಾಪುರ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್. ಠಾಣೆ ಸೀಲ್ ಡೌನ್ – https://kundapraa.com/?p=39255 . ► ಬಿಜೆಪಿ ಬೈಂದೂರು ಮಂಡಲ: ವಿವಿಧ ಮೋರ್ಚಾಗಳ ಅಧ್ಯಕ್ಷ-ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿಯೋರ್ವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗುತ್ತಿದೆ. ಹೆಡ್ ಕಾನ್ಸ್‌ಟೇಬಲ್ ಒಬ್ಬರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆ ಅವರಿಗೆ ಕೋವಿಡ್-19 ತಪಾಸಣೆ ನಡೆಸಲಾಗಿತ್ತು. ವರದಿಯಲ್ಲಿ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಕುಂದಾಪುರ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಿ, ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಹದಿನೈದು ದಿನಗಳ ಕಾಲ ಹೋಂ ಕ್ವಾರೆಂಟೈನ್ ಮಾಡಲಾಗುತ್ತದೆ. ಹೆಡ್ ಕಾನ್ಸ್‌ಟೇಬಲ್ ವಾಸವಿದ್ದ ಪೊಲೀಸ್ ಕ್ವಾಟ್ರಸ್ ಕೂಡ ಸೀಲ್ ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗುವುದು. ಈ ಸಮಯದಲ್ಲಿ ಇಲ್ಲಿನ ಪ್ರವಾಸಿ ಬಂಗಲೆಯಲ್ಲಿ ತಾತ್ಕಾಲಿಕ ಠಾಣೆಯ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಕುಂದಾಪುರ ಉಪವಿಭಾಗ ಎಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ವಿವಿಧ ಮೋರ್ಚಾಗಳ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆ ಶನಿವಾರ ನಡೆದಿದೆ. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರ ಸೂಚನೆಯಂತೆ, ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಅವರ ಸಹಕಾರದೊಂದಿಗೆ ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕಕುಮಾರ್ ಶೆಟ್ಟ ಅವರು ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಯುವ ಮೋರ್ಚಾ: ಅಧ್ಯಕ್ಷ – ಸಂತೋಷ್ ಮಡಿವಾಳ ಬೈಂದೂರು ಪ್ರಧಾನ ಕಾರ್ಯದರ್ಶಿ – ಅನುಕ್ ಮೆಂಡನ್ ಹಿಂದುಳಿದ ಮೋರ್ಚಾ: ಅಧ್ಯಕ್ಷ- ಸಂತೋಷ್ ಪೂಜಾರಿ ಕರ್ಕುಂಜೆ ಪ್ರಧಾನ ಕಾರ್ಯದರ್ಶಿ – ಗಣೇಶ್ ದೇವಾಡಿಗ ಹೆರಂಜಾಲು /ಕುಂದಾಪ್ರ ಡಾಟ್ ಕಾಂ/ ಮಹಿಳಾ ಮೋರ್ಚಾ: ಅಧ್ಯಕ್ಷೆ – ಭಾಗೀರಥಿ ಸುರೇಶ್ ಪ್ರಧಾನ ಕಾರ್ಯದರ್ಶಿ – ಶಾಂತಿ ಖಾರ್ವಿ ಗಂಗೊಳ್ಳಿ ರೈತ ಮೋರ್ಚಾ: ಅಧ್ಯಕ್ಷ – ಸುಧಾಕರ ಕುಲಾಲ್ ಶಂಕರನಾರಾಯಣ ಪ್ರಧಾನ ಕಾರ್ಯದರ್ಶಿ – ರಾಜು ದೇವಾಡಿಗ ಕಿರಿಮಂಜೇಶ್ವರ ಎಸ್.ಸಿ ಮೋರ್ಚಾ:…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೋವಿಡ್-19 ಸೋಂಕು ನಿಯಂತ್ರಣಕ್ಕೆ ತರುವ ಸಲುವಾಗಿ ರಾಜ್ಯ ಸರಕಾರ ಭಾನುವಾರ ಲಾಕ್ ಡೌನ್ ಮಾಡಲು ನಿರ್ಧರಿಸಿದ್ದು ಅದರಂತೆ ಉಡುಪಿ ಜಿಲ್ಲೆಯಲ್ಲಿಯೂ ಅಗತ್ಯ ಸೇವೆ ಹೊರತುಪಡಿಸಿ ಬೇರೆ ಚಟುವಟಿಕೆಗಳಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಹೇಳಿದ್ದಾರೆ. ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಆದರೆ 50 ಜನರಿಗಿಂತ ಹೆಚ್ಚಿನ ಜನರು ಸೇರುವಂತಿಲ್ಲ. ಸರಿಯಾದ ಮುಂಜಾಗೃತ ಕ್ರಮಗಳೊಂದಿಗೆ, ತಹಶೀಲ್ದಾರರ ಅನುಮತಿ ಪಡೆದು, ಕಾರ್ಯಕ್ರಮ ನಡೆಸಬಹುದು ಎಂದು ಉಡುಪಿ ಜಿಲ್ಲಾಧಿಕಾರಿಗಳು ಹೇಳಿದರು. ಜಿಲ್ಲೆಯಲ್ಲಿ ಅಗತ್ಯ ಸೇವೆಗಳಾದ ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲು, ಪೇಪರ್ ಗಳಿಗೆ ಅವಕಾಶವಿದೆ. ಈ ಕುರಿತು ಮಾಹಿತಿ ನೀಡಿದ ಅವರು, ಭಾನುವಾರ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ.ತರಕಾರಿ ಮೀನು-ಮಾಂಸ ಸೇರಿದಂತೆ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿರುತ್ತದೆ. ಅನವಶ್ಯಕವಾಗಿ ತಿರುಗಾಟವವರ ಮೇಲೆ ವಾಹನ ಮುಟ್ಟುಗೋಲು ಹಾಕಿ ಪ್ರಕರಣ ದಾಖಲಿಸುವ ಬಗ್ಗೆ ಜಿಲ್ಲಾಡಳಿತ ಎಚ್ಚರಿಕೆ…

Read More