Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗ್ರಾಮವಿಕಾಸ ಸಮಿತಿ ಗಂಗೊಳ್ಳಿ ಮತ್ತು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘ ಇವರ ಆಶ್ರಯದಲ್ಲಿ ಗಂಗೊಳ್ಳಿಯಲ್ಲಿ ಆಯೋಜಿಸಲಾಗಿದ್ದ ಮೀನುಗಾರಿಕೆ ಸ್ವ ಉದ್ಯೋಗ ತರಬೇತಿ ಕಾರ್ಯಕ್ರಮದ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಜರಗಿತು. ಮುಖ್ಯ ಅತಿಥಿಯಾಗಿದ್ದ ಗ್ರಾಮವಿಕಾಸ ಸಮಿತಿ ಉಡುಪಿ ಜಿಲ್ಲೆಯ ಪ್ರಮುಖ ಪ್ರಮೋದ್ ಶೆಟ್ಟಿ ಮಾತನಾಡಿ, ಆತ್ಮನಿರ್ಭರ್ ಭಾರತ್ ಆಶಯದಂತೆ ಕೋವಿಡ್-19 ನಿಂದಾಗಿ ಪರ ಊರುಗಳಲ್ಲಿ ಉದ್ಯೋಗ ಕಳೆದುಕೊಂಡು ಊರಿಗೆ ಬಂದ ಉದ್ಯೋಗಾಕಾಂಕ್ಷಿಗಳಿಗಾಗಿ ಮತ್ತು ಆಸಕ್ತರಿಗೆ ಸ್ವ ಉದ್ಯೋಗದಲ್ಲಿ ತರಬೇತಿ ನೀಡಿ ಅವರಿಗೆ ಸ್ವಾವಲಂಬಿ ಜೀವನ ನಡೆಸಲು ಅವಕಾಶ ಮಾಡಿಕೊಡಲಾಗುವುದು. ಮೀನುಗಾರರಿಗೆ ಒಳನಾಡು ಹಾಗೂ ಕರಾವಳಿ ಮೀನುಗಾರಿಕೆ ಮತ್ತು ಮತ್ಸ್ಯೋದ್ಯಮದಲ್ಲಿ ಅವಕಾಶಗಳ ಬಗ್ಗೆ ಇಲಾಖಾ ಅಧಿಕಾರಿಗಳಿಂದ ಮತ್ತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಹೇಳಿದರು. ಗಂಗೊಳ್ಳಿ ದಾಕುಹಿತ್ಲು ಶ್ರೀ ರಾಮ ಮಂದಿರ ಅಧ್ಯಕ್ಷ ಜಗನ್ನಾಥ ಪಟೇಲ್ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಶುಭ ಹಾರೈಸಿದರು. ತಾಲೂಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕಲಿಕಾ ಕೇಂದ್ರವಾದ ಎಂಜಿಎo ಕಾಲೇಜಿನಲ್ಲಿ ಸೆಪ್ಟಂಬರ್ 18 ರಿಂದ ಬಿ.ಎ/ಬಿ.ಕಾಂ ವಾರ್ಷಿಕ ಪರೀಕ್ಷೆಗಳು ಮತ್ತು ಅಕ್ಟೋಬರ್ 1 ರಿಂದ ಎಂ.ಎ/ಎo.ಕಾo ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಈ ಸಂಬoಧ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.ksoumysuru.ac.in ಪ್ರಕಟಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಉಡುಪಿ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಪ್ರಸ್ತುತ ಸಾಲಿಗೆ ಆರ್ಕೆವಿವೈ ಯಾಂತ್ರೀಕರಣ ಮತ್ತು ಕೇಂದ್ರ ಪುರಸ್ಕೃತ ಕೃಷಿ ಯಾಂತ್ರೀಕೃತ ಉಪಅಭಿಯಾನ ಕಾರ್ಯಕ್ರಮಗಳಡಿ ಶೇ. 50 ರ ಸಹಾಯಧನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತೀ ಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ 40 ರ ಸಹಾಯಧನದಲ್ಲಿ ಇತರೇ ವರ್ಗದ ಫಲಾನುಭವಿಗಳಿಗೆ ಟ್ರ್ಯಾಕ್ಟರ್ ಯಂತ್ರೋಪಕರಣವನ್ನು ಹೊರತುಪಡಿಸಿ ಉಳಿದ ತೋಟಗಾರಿಕೆ ಬೆಳೆಗಳಲ್ಲಿ ಅವಶ್ಯಕವಿರುವ ಅನುಮೋದಿತ ಯಂತ್ರೋಪಕರಣಗಳಿಗೆ ಯೋಜನೆಯಡಿ ಜಿಲ್ಲೆಯಲ್ಲಿ ರೈತರಿಗೆ ಅವಕಾಶ ಕಲ್ಪಿಸಲು ಅನುಮೋದನೆಯಾಗಿರುತ್ತದೆ. ಪ್ರತಿ ರೈತ ಫಲಾನುಭವಿಗಳಿಗೆ ಗರಿಷ್ಟ 5 ಯಂತ್ರೋಪಕರಣಗಳಿಗೆ 1.25 ಲಕ್ಷ ಗರಿಷ್ಟ ಸಹಾಯಧನ ಮಿತಿಯೊಂದಿಗೆ ಸಹಾಯಧನದ ಮೊತ್ತವನ್ನು ಇಸಿಎಸ್ ಮೂಲಕ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗಳಿಗೆ ವಿತರಿಸಲಾಗುತ್ತದೆ. ರೈತ ಫಲಾನುಭವಿಗಳು ಖರೀದಿಸುವ ಯಂತ್ರೋಪಕರಣಗಳಿಗೆ ಒಮ್ಮೆ ಸಹಾಯಧನ ಪಡೆಯಲು ಅರ್ಹರಿದ್ದು, ಹಿಂದಿನ ಸಾಲಿನಲ್ಲಿ ಖರೀದಿಸಿದ ಯಂತ್ರೋಪಕರಣಗಳ ಮಾದರಿಗಳನ್ನು ಪ್ರಸ್ತುತ ಹೊಸದಾಗಿ ಖರೀದಿಸಿದರೆ ಸಹಾಯಧನಕ್ಕಾಗಿ ಪರಿಗಣಿಸಲು ಅರ್ಹರಾಗಿರುವುದಿಲ್ಲ. ಅರ್ಜಿದಾರರು ತೋಟಗಾರಿಕೆ ಬೆಳೆ ಬೆಳೆಯುತ್ತಿರುವ ಬಗ್ಗೆ ವಿವರಗಳುಳ್ಳ ಆರ್ಟಿಸಿ ಅಥವಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಮಾಬಂದಿಯಲ್ಲಿ ಗ್ರಾಮ ಪಂಚಾಯಿತಿಯು ಗತ ಆರ್ಥಿಕ ವರ್ಷದಲ್ಲಿ ಮಾಡಿದ ಆಯವ್ಯಯ, ಅಭಿವೃದ್ಧಿ ಮತ್ತು ಆ ಸಂಬಂಧದ ದಾಖಲೆ ನಿರ್ವಹಣೆಗಳನ್ನು ಸಾರ್ವಜನಿಕರ ಎದುರು ತೆರೆದಿಟ್ಟು ಅವರ ತಪಾಸಣೆಗೆ ಒಳಪಡಿಸಲಾಗುವುದರಿಂದ ಅದನ್ನು ಸಾಮಾಜಿಕ ಲೆಕ್ಕ ತಪಾಸಣೆ ಎಂದು ಕರೆಯಲಾಗುತ್ತದೆ. ಅದು ಗ್ರಾಮಾಡಳಿತವು ಪಾರದರ್ಶಕ, ಉತ್ತರದಾಯಿ ಮತ್ತು ಸ್ಪಂದನಶೀಲ ಎಂಬ ಗಣತಂತ್ರದ ಮೌಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹೇಳಿದರು. ಮರವಂತೆ ಗ್ರಾಮ ಪಂಚಾಯಿತಿಯ ೨೦೧೯-೨೦ನೆ ವರ್ಷದ ಜಮಾಬಂದಿ ಅಧಿಕಾರಿಯಾಗಿ ಗುರುವಾರ ನಡೆಸಿದ ಜಮಾಬಂದಿಯ ವೇಳೆ ಮಾತನಾಡಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು ನಿಯಮದಂತೆ ಎರಡು ಗ್ರಾಮ ಪಂಚಾಯಿತಿಗಳ ಜಮಾಬಂದಿ ನಡೆಸಬೇಕಿದ್ದು, ಅವರು ಮರವಂತೆಯನ್ನು ಆಯ್ಕೆಮಾಡಿಕೊಂಡಿದ್ದರು. ಹಲವು ಮಹತ್ವದ ಸಾಧನೆಗಳನ್ನು ಮಾಡಿ ರಾಷ್ಟ್ರ ಮಟ್ಟದಲ್ಲಿಯೂ ಗುರುತಿಸಲ್ಪಟ್ಟ ಮರವಂತೆ ಗ್ರಾಮ ಪಂಚಾಯಿತಿಯ ಜಮಾಬಂದಿ ನಡೆಸುವುದು ಪ್ರತಿಷ್ಠೆಯ ವಿಷಯ. ಜಮಾಬಂದಿ ವರ್ಷದಲ್ಲಿ ಅದು ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲ ವಿಭಾಗಗಳಲ್ಲಿ ತನ್ನ ಪರಂಪರೆಯನ್ನು ಮುಂದುವರಿಸಿದೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುಭದ್ರ ರಾಷ್ಟ್ರ ಹಾಗೂ ಜಾತ್ಯಾತೀತ ಸಮಾಜ ನಿರ್ಮಾಣ ಕೇವಲ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. 143 ವರ್ಷಗಳ ಹಿನ್ನೆಲೆ ಹೊಂದಿರುವ ಪಕ್ಷಕ್ಕೆ ತ್ಯಾಗ, ಹೋರಾಟ, ಬಲಿದಾನಗಳ ಇತಿಹಾಸವಿದೆ. ಅಧಿಕಾರ ಇರಲಿ ಅಥವಾ ಇಲ್ಲದಿರಲಿ ಪಕ್ಷವು ಜನರ ಹಿತಕಾಯುತ್ತಲೇ ಬಂದಿದೆ. ಮುಂದೆಯೂ ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹೇಳಿದರು. ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ಸಹಯೋಗದೊಂದಿಗೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಹೇರೂರು ಗ್ರಾಮೀಣ ಸಮಿತಿ ಜಂಟಿ ಆಶ್ರಯದಲ್ಲಿ ಸೋಮವಾರ ಮೆಕೋಡು ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆದ ‘ಗ್ರಾಮದಲ್ಲೊಂದು ದಿನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೊರೊನಾ ನಿಯಂತ್ರಣಕ್ಕಾಗಿ ಕಾಂಗ್ರೆಸ್ ಪಕ್ಷ ರಾಜ್ಯ ಸರಕಾರಕ್ಕೆ ಸಂಪೂರ್ಣ ಸಹಕಾರ, ಬೆಂಬಲ ನೀಡಿತ್ತು. ಆದರೆ ಮಾಸ್ಕ್, ಸೈನಿಟೈಸರ್, ವೆಂಟಿಲೇಟರ್ ಖರೀದಿಯಲ್ಲಿ ಸರಕಾರ ಭ್ರಷ್ಟಾಚಾರ ಮಾಡಿ ಇಂದು ಲೆಕ್ಕ ಕೊಡುವ ಬದಲಿಗೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಕೋವಿಡ್ ಮೃತದೇಹ ವಿಲೇವಾರಿ ಮಾರ್ಗಸೂಚಿಯಲ್ಲಿ ಕೆಲ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ. ಮೃತ ದೇಹ ಸಾಗಾಣೆಗೆ ಮೃತದೇಹ ವಿಲೇವಾರಿ ನೋಡೆಲ್ ಅಧಿಕಾರಿಯಾದ ಜಿಲ್ಲಾ ಸರ್ಜನ್ , ಆಂಬುಲೆನ್ಸ್ ಅಥವಾ ವಾಹನ ವ್ಯವಸ್ಥೆ ಮಾಡಬೇಕು. ಮೃತ ದೇಹವನ್ನು, ಮರಣ ಸಂಭವಿಸಿದ ಆಸ್ಪತ್ರೆ/ ದೇಹವನ್ನು ಶೇಖರಿಸಿಟ್ಟ ಸಂಸ್ಥೆಯ (ಸರ್ಕಾರಿ ಅಥವಾ ಖಾಸಗಿ) ಪದನಿಮಿತ್ತ ಅಧಿಕಾರಿಗಳು, ಜಿಲ್ಲಾ ಕೋವಿಡ್ ಮೃತ ದೇಹ ನೋಡೆಲ್ ಅಧಿಕಾರಿಯಾದ ಜಿಲ್ಲಾ ಸರ್ಜನ್ ಜೊತೆ ಸಂವಹನ ನಡೆಸಿ, ಸರಿಯಾದ ದೇಹವನ್ನು ಆಂಬುಲೆನ್ಸ್ ಅಥವಾ ವಾಹನಕ್ಕೆ ಹಸ್ತಾಂತರಿಸಲು ಕ್ರಮವಹಿಸಬೇಕು . ಮೃತ ದೇಹ ಹಸ್ತಾಂತರಿಸುವಲ್ಲಿ ಯೋಯ ಚೆಕ್ ಲಿಸ್ಟ್ ತಯಾರಿಸಿಬೇಕು, ವಾಹನಗಳ ಚಾಲಕರು ಪ್ರೋಟೋಕಲ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು, ಮೃತದೇಹದ ಅಂತ್ಯ ಸಂಸ್ಕಾರವು ಸಂಬಂಧಿಕರ ಹಕ್ಕು ಮತ್ತು ಜವಾಬ್ದಾರಿಯಾಗಿದ್ದು, ಹತ್ತಿರದ ಸಂಬಂಧಿಕರೊಂದಿಗೆ ಸಂವಹನ ನೆಡಸಿ ಹಸ್ತಾಂತರಿಸಲು, ಚಕಿತ್ಸೆ ನೀಡಿದ ಆಸ್ಪತ್ರೆಯ ಪದನಿಮಿತ್ತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮೃತದೇಹವನ್ನು ನಿಗದಿತ ವಿಲೇವಾರಿ ಸ್ಥಳದಲ್ಲಿ ಸ್ವೀಕರಿಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಈಗಾಗಲೇ ಬಿ ಮತ್ತು ಸಿ ವರ್ಗದ ಒಟ್ಟು 52 ದೇವಸ್ಥಾನಗಳ ಅವಧಿ ಮುಗಿದಿದ್ದು , ಆಡಳಿತಾಧಿಕಾರಿ ನೇಮಕಾತಿ ಆಗಿರುವ ಈ ದೇವಸ್ಥಾನಗಳಿಗೆ , ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಪ್ರಕಟಣೆ ನೀಡುವಂತೆ ಮುಜರಾಯಿ ಇಲಾಖೆಯ ಅಧಿಕಾರಿಗಳಿಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾ ಧಾರ್ಮಿಕ ಪರಿಷತ್ ನ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಈಗಾಗಲೇ ಅವಧಿ ಮುಗಿದಿರುವ ಬಿ ಮತ್ತು ಸಿ ಯ ದೇವಸ್ಥಾನಗಳಿಗೆ ನೇಮಕಾತಿ ಮಾಡಿರುವ ಆಡಳಿತಾಧಿಕಾರಿ ಆದೇಶಕ್ಕೆ ಅನುಮೋದನೆ ನೀಡಿದ ಸಚಿವರು, ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾದ ಧಾರ್ಮಿಕ ಪರಿಷತ್ ಸದಸ್ಯರಿಗೆ ಪರಿಷತ್ ನ ಕಾರ್ಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ವೇದ ಪಾಠಶಾಲೆ ಆರಂಭಿಸುವ ಕುರಿತಂತೆ ಸೂಕ್ತ ಸ್ಥಳ ಗುರುತಿಸುವಂತೆ ಸಮಿತಿಯ ಸದಸ್ಯರಿಗೆ ತಿಳಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಲ್ಲಾ ಸದಸ್ಯರಿಗೆ ಗುರುತಿನ ಚೀಟಿ ನೀಡುವಂತೆ ಅಧಿಕಾರಿಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಜೆ.ಇ.ಇ ಮೈನ್ಸ್ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ 155 ವಿದ್ಯಾರ್ಥಿಗಳು 90 ಪರ್ಸಂಟೈಲ್ಗಿಂತ ಅಧಿಕ ಫಲಿತಾಂಶ ಗಳಿಸಿದ್ದಾರೆ ಮತ್ತು ಒಟ್ಟು 523ವಿದ್ಯಾರ್ಥಿಗಳು ಜೆ.ಇ.ಇಅಡ್ವಾನ್ಸ್ಗೆ ( ಐ.ಐ.ಟಿ ಪ್ರವೇಶಾತಿ ಪರೀಕ್ಷೆ) ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳಾದ ಚಿನ್ಮಯ್ಅರ್ (99.35), ನವೀನ್ಕುಮಾರ್ ಮುತ್ತಾಲ್ (99.05), ಹರ್ಷ ವಿ (98.92), ಸುಧನ್ವ ನಾಡಿಗೇರ್ (98.91), ಅನುಷ್(98.91), ಅರ್ಣವ್ಅಯ್ಯಪ್ಪ ಪಿ ಪಿ (98.68), ಅಮೃತೇಶ್ ಪಿ (98.04), ಅಮೋಘ್ ಪ್ರಭು(98.35), ಪ್ರೀತಿಎನ್ ಜಿ (98.3), ಪಿ.ಎಸ್.ರವೀಂದ್ರ (98.29), ಉಮೇಶ್ ಸಣ್ಣಹನುಮಪ್ಪ ಬೈತಪ್ಪನವರ್(98.26), ಸುಹಾಸ್ ಸಿ (98.23), ವರುಣ್ತೇಜ್ (98.11), ಆಕಾಶ್ ಮೃತ್ಯುಂಜಯ್ ಹಾರುಗೇರಿ(98.11), ಸುವೀಕ್ಷ್ ವಿ ಹೆಗ್ಡೆ (98.05), ಡೆವಿನ್ ಪ್ರಜ್ವಲ್ರೈ(98.05), ಕೌಶಿಕ ಶಂಕರ(97.98), ರಾಹುಲ್ ಶ್ರೀಶೈಲ್ ದಲ್ವಾಯಿ(97.89), ರೋಹನ್ ಮೇಗೂರು(97.64), ಸಾಯಿಕೀರ್ತಿ ಎಸ್ ಆರ್(97.58), ಸುಧೇಶ್(97.58), ಚೆಲರಾಮ್ಚೌದರಿ(97.47), ಖುಷಿ ಶೀತಲ್ ಚೌಘಲೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.12ರ ಶನಿವಾರ 169 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 47, ಉಡುಪಿ ತಾಲೂಕಿನ 95 ಹಾಗೂ ಕಾರ್ಕಳ ತಾಲೂಕಿನ 22 ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 76 ಸಿಂಥಮೇಟಿವ್ ಹಾಗೂ 93 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 58, ILI 46, ಸಾರಿ 1 ಪ್ರಕರಣವಿದ್ದು, 58 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 5 ಮಂದಿ ಹೊರ ಜಿಲ್ಲೆ ಹಾಗೂ ಓರ್ವ ವ್ಯಕ್ತಿ ಹೊರದೇಶದಿಂದ ಬಂದಿದ್ದಾರೆ. ಇಂದು 91 ಮಂದಿ ಆಸ್ಪತ್ರೆಯಿಂದ ಹಾಗೂ 147 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 89 ಹಾಗೂ 70 ವರ್ಷದ ವೃದ್ಧೆಯರು ಇಂದು ಮೃತಪಟ್ಟಿದ್ದಾರೆ. 915 ನೆಗೆಟಿವ್: ಈ ತನಕ ಒಟ್ಟು 84073 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 69710 ನೆಗೆಟಿವ್, 13912 ಪಾಸಿಟಿವ್ ಬಂದಿದ್ದು, 451 ಮಂದಿಯ ವರದಿ ಬರುವುದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೆಇಇ ಮೈನ್ಸ್ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನಲ್ಲಿ ಲಭ್ಯವಿರುವ ಜೆಇಇ ಕೋಚಿಂಗ್‌ನ ಸದುಪಯೋಗವನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳು ಉತ್ತಮ ರ‍್ಯಾಂಕ್‌ನೊಂದಿಗೆ ಉತ್ತೀರ್ಣರಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗಳನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Read More