Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ನ.02: ಜಿಲ್ಲೆಯ ಯುವಕರ ಪ್ರತಿಭೆಯನ್ನು ತೊರ್ಪಡಿಸಲು, ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರು ಕುರಿತ ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಆಯೋಜಿಸಲು ಕೇಂದ್ರ ಸರ್ಕಾರವು ನಿರ್ಧರಿಸಿದ್ದು, ಈ ಸ್ಪರ್ಧೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ಜಿಲ್ಲಾ ಮಟ್ಟದ ನೆಹರು ಯುವ ಕೇಂದ್ರಗಳಿಗೆ ವಹಿಸಲಾಗಿರುತ್ತದೆ. ಬಹುಮಾನಗಳ ವಿವರ:ತಾಲೂಕು ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನವಾಗಿ ಪ್ರಶಸ್ತಿ ಪತ್ರ ನೀಡಲಾಗುವುದು. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 5000 ರೂ., ದ್ವಿತೀಯ ಬಹುಮಾನವಾಗಿ 2,000 ರೂ., ಹಾಗೂ ತೃತೀಯ ಬಹುಮಾನವಾಗಿ 1,000 ರೂ. ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ವಿಜೇತರಿಗೆ ಪ್ರಥಮ ಬಹುಮಾನವಾಗಿ 25,000 ರೂ., ದ್ವಿತೀಯ ಬಹುಮಾನವಾಗಿ 10,000 ರೂ. ಹಾಗೂ ತೃತೀಯ ಬಹುಮಾನವಾಗಿ 5,000 ರೂ. ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಪ್ರಥಮ ಬಹುಮಾನವಾಗಿ 2 ಲಕ್ಷ ರೂ., ದ್ವಿತೀಯ ಬಹುಮಾನವಾಗಿ 1 ಲಕ್ಷ ರೂ. ಹಾಗೂ ತೃತೀಯ ಬಹುಮಾನವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ವಕೀಲರ ಸಂಘ (ರಿ) ಉಡುಪಿ ವತಿಯಿಂದ ಇಂದು ಮಲ್ಪೆಯ ಪ್ರವಾಸಿ ಜೆಟ್ಟಿಯಿಂದ ಸೈಂಟ್ ಮೇರಿಸ್ ಐಲ್ಯಾಂಡ್ಗೆ ತೆರಳುವ ದೋಣಿಯಲ್ಲಿ, ಸಮುದ್ರ ಮಧ್ಯದಲ್ಲಿ, ದೋಣಿಯಲ್ಲಿದ್ದ ಪ್ರಯಾಣಿಕರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ,ಪ್ರತಿಯೊಬ್ಬ ಸಾರ್ವಜನಿಕರೂ ಕಾನೂನಿನ ಕುರಿತು ಸಾಮಾನ್ಯ ಜ್ಞಾನವನ್ನಾದರೂ ಹೊಂದುವುದು ಅತ್ಯಂತ ಅಗತ್ಯ, ಈ ನಿಟ್ಟಿನಲ್ಲಿ ಕಾನೂನು ಸೇವಾ ಪ್ರಾಧಿಕಾರದಿಂದ ಎಲ್ಲೆಡೆ ಅರಿವು ಕಾರ್ಯಕ್ರಮಗಳನ್ನು ಅಯೋಜಿಸುತ್ತಿದ್ದು, ಇದೇ ಮೊದಲ ಬಾರಿಗೆ ಸಮುದ್ರದ ಮಧ್ಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಸಾರ್ವಜನಿಕರು ತಮ್ಮ ಕಾನೂನು ಸಮಸ್ಯೆಗಳನ್ನು ಲೋಕ ಅದಾಲತ್ ಮೂಲಕ ಅತ್ಯಂತ ಸುಲಭವಾಗಿ ಬಗೆಹರಿಸಿಕೊಳ್ಳಬಹುದಾಗಿದ್ದು, ಪ್ರಕರಣಗಳಲ್ಲಿ ರಾಜೀಯಾಗಲು ಸಹ ಇದರಲ್ಲಿ ಅವಕಾಶವಿದೆ ಅಲ್ಲದೇ ಆರ್ಥಿಕ ದುರ್ಬಲರು, ಮಹಿಳೆಯರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಉಚಿತ ನೆರವು ಪಡೆಯಬಹುದಾಗಿದ್ದು, ಇದರ ಪ್ರಯೋಜನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಕರ್ನಾಟಕ ರಾಜ್ಯ ವೇಟ್‌ಲಿಫ್ಟಿಂಗ್ ಅಸೋಸಿಯೇ?ನ್ ಮತ್ತು ದಾವಣಗೆರೆ ಜಿಲ್ಲಾ ವೇಟ್ ಲಿಫ್ಟಿಂಗ್ ಅಸೋಸಿಯೇ?ನ್ ಆಶ್ರಯದಲ್ಲಿ ದಾವಣಗೆರೆಯಲ್ಲಿ ನಡೆದ ರಾಜ್ಯಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ಆಳ್ವಾಸ್ ಕಾಲೇಜು ಮೂಡುಬಿದ್ರೆ ಸಮಗ್ರ ತಂಡ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಬಾಲಕ ಮತ್ತು ಬಾಲಕಿಯರ ತಂಡ ಪ್ರಶಸ್ತಿಯಲ್ಲಿ ಪ್ರಥಮ, ಜೂನಿಯರ್ ಬಾಲಕರ ವಿಭಾಗದಲ್ಲಿ ಪ್ರಥಮ, ಬಾಲಕಿಯರ ವಿಭಾಗದಲ್ಲಿ ದ್ವಿತೀಯ, ಮಹಿಳಾ ವಿಭಾಗದಲ್ಲಿ ಪ್ರಥಮ ಹಾಗೂ ಪುರು?ರ ವಿಭಾಗದಲ್ಲಿ ದ್ವಿತೀಯ ತಂಡ ಪ್ರಶಸ್ತಿ ಪಡೆಯುವ ಮೂಲಕ ಸಮಗ್ರ ತಂಡ ಪ್ರಶಸ್ತಿ ಪಡೆದಿಕೊಂಡಿದೆ. ವಿದ್ಯಾರ್ಥಿಗಳ ಸಾಧನೆಯನ್ನು ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಶ್ಲಾಘಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೀಪಾವಳಿಗೆ ಕುಂದಾಪುರದ ಪ್ರತಿಷ್ಠಿತ ಮೊಬೈಲ್ ಮಾರಾಟ ಸಂಸ್ಥೆ ಮೊಬೈಲ್ ಎಕ್ಸ್ ತನ್ನ ಗ್ರಾಹಕರಿಗೆ ಮೊಬೈಲ್ ಎಕ್ಸ್ ಉತ್ಸವದ ಮೂಲಕ ವಿಶೇಷ ಕೊಡುಗೆ ನೀಡುತ್ತಿದ್ದು, ಎಲ್ಲಾ ಮೊಬೈಲ್ಗಳು ಹಾಗೂ ಮೊಬೈಲ್ ಎಕ್ಸಸರೀಸ್ ಮೇಲೆ ಹೆಚ್ಚಿನ ರಿಯಾಯಿತಿ, ಕೊಡುಗೆಗಳನ್ನು ಪ್ರಕಟಿಸಿದೆ. ಅ.31ರಿಂದ ಆರಂಭಗೊಂಡು ನ.15ರ ತನಕ ಈ ಆಫರ್ ಲಭ್ಯವಿರಲಿದೆ. ಎಲ್ಲಾ ಮೊಬೈಲ್ ಖರೀದಿಯ ಮೇಲೆ ಡಿಸ್ಕೌಂಟ್ಪ್ರತಿ ಸ್ಮಾರ್ಟ್ ಪೋನ್ ಖರೀದಿ ಮೇಲೆಯೂ ರೂ.1000ಕ್ಕೂ ಹೆಚ್ಚಿನ ಉಚಿತ ಉಡುಗೊರೆ0% ಸುಲಭ ಇಎಂಐ ಸೌಲಭ್ಯಲೈಫ್ ಟೈಮ್ ಸಾಫ್ಟ್ವೇರ್ ಅಪ್ಡೇಟ್ ಉಚಿತ1 ವರ್ಷದ ತನಕ ಸ್ಕೀನ್ ಪ್ರೊಟೆಕ್ಟರ್ ಉಚಿತ ಕುಂದಾಪುರದ ಹಳೆ ಬಸ್ ನಿಲ್ದಾಣದ ಸಮೀಪದ ಪನ್ನೀರ್ ಜ್ಯುವೆಲ್ಲರ್ಸ್ ಕಾಂಪೆಕ್ಸ್ನಲ್ಲಿರುವ ಮೊಬೈಲ್ ಎಕ್ಸ್ ಶೋರೂಮ್ನಲ್ಲಿ ಈ ಎಲ್ಲಾ ಆಫರ್ಗಳು ಲಭ್ಯವಿರಲಿದ್ದು, ದೀಪಾವಳಿಗೆ ಮೊಬೈಲ್ ಕೊಂಡುಕೊಳ್ಳಬೇಕೆನ್ನುವವರು ಆಫರ್ನ್ನು ಸದಪಯೋಗಪಡಿಸಿಕೊಳ್ಳಬಹುದಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2020-21ನೇ ಸಾಲಿನ‌ಲ್ಲಿ ನಡೆದ ವೈದ್ಯಕೀಯ ವಿಭಾಗದ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ(ನೀಟ್) ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಗಳಾದ ಗೌರವ್ 604 (98.9 ಪರ್ಸಂಟೈಲ್) ಪಡೆಯುದರ ಮೂಲಕ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ. ಉಳಿದಂತೆ ಸಿಂಚನಾ ಎಸ್. 497(94.32 ಪರ್ಸಂಟೈಲ್), ಅವನಿ ಆಚಾರ್ಯ 469 (92.6 ಪರ್ಸಂಟೈಲ್ ), ಅಫ್ರಿಧಿ ಎಸ್.440 (90.6 ಪರ್ಸಂಟೈಲ್), ಸಾತ್ವಿಕ್ ಶೆಟ್ಟಿ 417 (88.88 ಪರ್ಸಂಟೈಲ್) ಫಲಿತಾಂಶವನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವ್ರಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೌರ ಕಾರ್ಮಿಕರ ಅಂಬೇಡ್ಕರ್ ಕಾಲನಿಯಲ್ಲಿನ ಅಪೂರ್ಣ ಮನೆ ಸಂಪೂರ್ಣವಾಗಿ ನಿರ್ಮಿಸಲು ಮಾಡಲು ಎಲ್ಲಾ ರೀತಿಯ ಸಹಕಾರ ನೀಡುವುದಲ್ಲದೆ 6 ತಿಂಗಳಲ್ಲಿ ಮನೆಗಳ ಬಾಕಿ ಅನುದಾನ ಖಾತೆಗೆ ಜಮಾ ಮಾಡಲು ಕ್ರಮ ವಹಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕುಂದಾಪುರ ಅಂಬೇಡ್ಕರ್ ಕಾಲನಿಯಲ್ಲಿರುವ ಪೌರ ಕಾರ್ಮಿಕರ ಮನೆಗಳು ಅರ್ಧಂಬರ್ಧ ಆಗಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, 13 ಮನೆಗಳು ಅಪೂರ್ಣವಾಗಿದೆ. ಮೂರು ಮನೆ ಪೂರ್ಣಗೊಂಡಿದ್ದು, ಕೊನೆಯ ಕಂತು ಬಾಕಿ ಇದೆ. ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿ ಜೊತೆ ಮಾತನಾಡಿದ್ದು, ಇನ್ನು 15 ದಿನದಲ್ಲಿ ಪೂರ್ಣಮನೆ ಕೊನೆಯ ಕಂತು ಖಾತೆಗೆ ಹಾಕಲಾಗುತ್ತದೆ ಎಂದು ತಿಳಿಸಿದರು. ಕಾಲನಿಯ ಮೂರು ಮನೆ ಮುಗಿದ್ದರೂ ಹತ್ತು ಮನೆ ಅರ್ಧಂಬರ್ಧ ಆಗಿದೆ. ಯಾವುದಾದರೂ ಮೂಲದಿಂದ ಪ್ರಥಮ ಹಂತದಲ್ಲಿ ೩ ಮನೆ ತೆಗೆದುಕೊಂಡು ಸಂಪೂರ್ಣ ಮಾಡುವಂತೆ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೇವಸ್ಥಾನಗಳು ನೆಮ್ಮದಿಯ ಕೇಂದ್ರಗಳು. ಅಲ್ಲಿಗೆ ಬರುವ ಭಕ್ತಾದಿಗಳನ್ನು ಸರಿಯಾಗಿ ನೋಡಿಕೊಳ್ಳಬೇಕು. ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿಗಳ ಶ್ರಮದಿಂದ ದೇಗುಲ ಅಭಿವೃದ್ದಿ ಸಾಧ್ಯ. ಎಲ್ಲಾ ಭಕ್ತರನ್ನು ಒಂದೇ ರೀತಿ ನೋಡಿಕೊಳ್ಳಬೇಕು. ಬಡವರಿಗೊಂದು ರೀತಿ ಶ್ರೀಮಂತರಿಗೊಂದು ರೀತಿ ಮಾಡಬಾರದು. ಸರಿಯಾದ ಪೂಜೆ ಪುನಸ್ಕಾರಗಳಿಂದ ದೇಗುಲದ ಘನತೆ ಹೆಚ್ಚುತ್ತದೆ. ಇದರಲ್ಲಿ ಅರ್ಚಕರ ಪಾತ್ರ ಬಹಳಷ್ಟಿದೆ. ಸೌಕೂರು ಸಾನಿಧ್ಯ ವಿಶೇಷತೆ ಯಿಂದ ಕೂಡಿದೆ. ಇದರ ಶಕ್ತಿ ಇನ್ನಷ್ಟು ಹೆಚ್ಚಲಿ ಆಡಳಿತ ಮಂಡಳಿ ಒಳ್ಳೆಯ ಕೆಲಸ ಮಾಡಲಿ ಎಂದು ಕೊಲ್ಲೂರು ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರರಾದ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು. ಅವರು ಇಂದು ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾದ ಎನ್. ಮಂಜಯ್ಯ ಶೆಟ್ಟಿ ಅವರ ಅಭಿನಂದನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ ಮಾತನಾಡಿ, ದೇಗುಲವನ್ನು ಅಭಿವೃದ್ದಿ ಪಡಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುವುದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕಲಾಮಂದಿರದಲ್ಲಿ ಮಂಗಳವಾರ 6ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಪ್ರಯುಕ್ತ ಆಯುರ್ವೇದದಿಂದ ಪೋಷಣ್ ಕಾರ್ಯಕ್ರಮ ಜರುಗಿತು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ರಾಬರ್ಟ್ ರೆಬೆಲ್ಲೋ ಮಾತನಾಡಿ ಅಲೋಪತಿ ವೈದ್ಯ ಪದ್ಧತಿಯನ್ನು ತಕ್ಷಣದ ರೋಗ ಪರಿಹಾರಕ್ಕಾಗಿ ಅನುಸರಿಸಲಾಗುತ್ತದೆ. ಆದರೆ ಧೀರ್ಘಕಾಲದ ರೋಗಗಳಿಗೆ ಆಯುರ್ವೇದ ವೈದ್ಯ ಪದ್ಧತಿಯೇ ಉತ್ತಮವೆಂದ ಜಗತ್ತು ಒಪ್ಪಿದೆ. ಆಯುರ್ವೇದದಲ್ಲಿ ಪಥ್ಯಗಳನ್ನು ಸರಿಯಾಗಿ ಅನುಸರಿಸಿದರೆ ಉತ್ತಮ ಪರಿಣಾಮ ಬೀರುತ್ತದೆ. ಕುಂದಾಪುರ ಪುರಸಭಾ ಸದಸ್ಯೆ ದೇವಕಿ ಸಣ್ಣಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೆಯ ಎಸ್. ನಾಯ್ಕ್, ಕುಂದಾಪುರ ಸರಕಾರಿ ಆಸ್ಪತ್ರೆ ತಜ್ಞ ವೈದ್ಯ ಡಾ. ನಾಗೇಶ್, ಪುರಸಭಾ ಸದಸ್ಯೆ ದೇವಕಿ ಸಣ್ಣಯ್ಯ, ಸ.ಪ.ಪೂ ಕಾಲೇಜು ಪ್ರಾಂಶುಪಾಲರಾದ ರಾಮಕೃಷ್ಣ ಬಿ.ಜಿ, ಉಪಪ್ರಾಂಶುಪಾಲರಾದ ವಿನುತಾ ಗಾಂವ್ಕರ್, ಆಯುಷ್ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಡಾ. ಶ್ಯಾಮ ರಾವ್ ಮೊದಲಾದವರು ಉಪಸ್ಥಿತರಿದ್ದರು. ಡಾ. ವಿನಯಾ ಪ್ರಾರ್ಥಿಸಿದರು. ಡಾ. ಪ್ರದೀಪ ಎಸ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯಾವುದೇ ವ್ಯಕ್ತಿ ಸಾಕ್ಷರನಾದರೆ ತನ್ನ ಹಕ್ಕುಗಳ ಬಗ್ಗೆ ಅರಿವು ಹೊಂದಲು ಸಾದ್ಯವಾಗುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದುವುದು ಅತ್ಯಂತ ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಕಾಜಾರಗುತ್ತುನ ಜಿಲ್ಲಾ ಕಾರಾಗೃಹದಲ್ಲಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉಡುಪಿ , ಕಾರಾಗೃಹ ಮತ್ತು ಸುಧಾರಣಾ ಸೇವೆ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಉಡುಪಿ, ಜಿಲ್ಲಾ ಕಾರಾಗೃಹ ಉಡುಪಿ ಇವರ ಸಹಯೋಗದಲ್ಲಿ ‘ಶಿಕ್ಷಣದಿಂದ ಬದಲಾವಣೆ’ ಕಾರಾಗೃಹದ ಅನಕ್ಷರಸ್ಥ ಹಾಗೂ ಅರೆ ಅನಕ್ಷರಸ್ಥ ಬಂಧಿಗಳಿಗೆ ಆಯೋಜಿಸಿದ್ದ ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾಕ್ಷರತೆ ಪಡೆಯುವುದು ವ್ಯಕ್ತಿಯ ಘನತೆ ಹಾಗೂ ಹಕ್ಕು ಆಗಿದೆ. ವ್ಯಕ್ತಿ ಸಾಕ್ಷರತೆಯ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳಸಿಕೊಳ್ಳಬೇಕು, ಅನಕ್ಷರತೆಯಿಂದ ಬಡತನ, ಜನಸಂಖ್ಯೆ ನಿಯಂತ್ರಣ ಸಮಸ್ಯೆ,ಲಿಂಗ ಅಸಮಾನತೆ ಉಂಟಾಗಲಿದ್ದು,ಇದನ್ನು ತೊಡೆದು ಹಾಕಿ ದೇಶವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಲು ಸಾಕ್ಷರತೆಯಿಂದ ಮಾತ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದ ಕ – ಉಡುಪಿ ಜಿಲ್ಲೆ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ರಿ . ಕುಂದಾಪುರ – ಬೈಂದೂರು ವಲಯ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಹಿತಿಗಳಾದ ಜನಾರ್ದನ ಅಡಿಗ ಮೊಗೇರಿ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಂದಾಪುರ -ಬೈಂದೂರ ವಲಯದ ಅಧ್ಯಕ್ಷ ಬಿ. ದೊಟ್ಟಯ್ಯ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶ್ರೀಕರ್ ಎಸ್, ಉಪಾಧ್ಯಕ್ಷರುಗಳಾದ ಚಂದ್ರಕಾಂತ್, ರಾಘವೇಂದ್ರ ಭಟ್ ವಂಡ್ಸೆ, ಶ್ರೀನಿವಾಸ್ ದೇವಾಡಿಗ, ಕೋಶಾಧಿಕಾರಿ ವಿಠಲ್ ನಾಗೂರ್, ಸಲಹಾ ಸಮಿತಿ ಸದಸ್ಯರು, ಪದಾಧಿಕಾರಿಗಳು, ಕಾರ್ಯಕಾರಿ ಮಂಡಳಿ ಸದಸ್ಯರು ಹಾಗೂ ಎಲ್ಲ ಛಾಯಾಗ್ರಾಹಕ ಸದಸ್ಯರು ಉಪಸ್ಥಿತರಿದ್ದರು.

Read More