ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಬ್ರಹ್ಮಲಿಂಗೇಶ್ವರ ಫ್ರೆಂಡ್ಸ್ ತಗ್ಗರ್ಸೆ ಇವರ ಆಶ್ರಯದಲ್ಲಿ 5ನೇ ವರ್ಷದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ವಹಿಸಿ ಮಾತನಾಡಿ, ಯುವಕರ ಕ್ರೀಡಾ ಮನೋಭಾವನೆಯನ್ನು ಹೆಚ್ಚಿಸುವಂತ ಕಾರ್ಯ ಇದಾಗಿದ್ದು ಗ್ರಾಮೀಣ ಮಟ್ಟದಲ್ಲಿ ಈ ಒಂದು ಪಂದ್ಯಾಟವನ್ನು ಎರ್ಪಡಿಸಿರುವುದು ಬಹಳ ಉತ್ತಮವಾದ ಕೆಲಸ. ಮುಂದಿನ ದಿನಗಳಲ್ಲಿ ಯುವಕರ ಸಂಘಟನೆ ಈ ಭಾಗದಲ್ಲಿ ಬೆಳೆಯುವುದಕ್ಕೆ ದಾರಿ ದೀಪವಾಗುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಿವೃತ್ತ ಫ್ರೌಡಶಾಲಾ ಶಿಕ್ಷಕರಾದ ಗೋವಿಂದ ಬಿಲ್ಲವ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಅನುಷ್ಕಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ಥಳೀಯ ಪ್ರಗತಿಪರ ಕೃಷಿಕ ರಾಜು ಗಾಣಿಗ ಹುಳುವಾಡಿ, ಮುಖ್ಯೋಪಧ್ಯಾಯರಾದ ತಿಮ್ಮಪ್ಪ ಗಾಣಿಗ, ಸ್ಥಳೀಯ ಉದ್ಯಮಿಗಳಾದ ಮುಕಾಂಬು ಶೆಟ್ಟಿ ನೆಲ್ಯಾಡಿ, ಗಣೇಶ್ ಬಿಲ್ಲವ, ಮಾಧವ ಬಿಲ್ಲವ, ಪ್ರಮೋದ್ ಆಚಾರ್ಯ ಉಪಸ್ಥಿತರಿದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಈಗಾಗಲೇ ಸುಮಾರು 1300ಕೋಟಿ ರೂ. ಅನುದಾನ ಬಂದಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಅನುದಾನ ಬಂದ ಕ್ಷೇತ್ರಗಳ ಪೈಕಿ ಬೈಂದೂರು ಕೂಡ ಒಂದಾಗಿದೆ. ರಾಜ್ಯದಲ್ಲಿನ ಬಿಜೆಪಿ ಸರಕಾರ ಸಮಾಜದ ಕಟ್ಟಕಡೆಯ ಮತ್ತು ಸಾಮಾನ್ಯ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬೈಂದೂರಿನಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಬೈಂದೂರು ಬಿಜೆಪಿ ಭದ್ರಕೋಟೆ ಎಂಬುದು ಕಳೆದ ಪಂಚಾಯತ್ ಚುನಾವಣೆಯಲ್ಲಿ ಸಾಬೀತಾಗಿದೆ. ಮುಂಬರು ಜಿಪಂ ಮತ್ತು ತಾಪಂ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಕಾಂಗ್ರೆಸ್ ಮುಕ್ತ ಜಿಪಂ., ತಾಪಂ ಮಾಡಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಹೇಳಿದರು. ಬಿಜೆಪಿ ಬೈಂದೂರು ಮಂಡಲದ ವತಿಯಿಂದ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಜರಗಿದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಮತ್ತು ಬೂತ್ ಅಧ್ಯಕ್ಷರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಬೈಂದೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ಇಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೇಳಿಕೊಳ್ಳುವ ಯಾವುದೇ ಸಾಧನೆ ಇಲ್ಲ. ಹೀಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವ, ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳ ಸಾಮರ್ಥ್ಯವೃದ್ಧಿಗೆ ಬೈಂದೂರು ವಲಯದಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಶಾಲೆಗಳ ಅಂತಹ ವಿದ್ಯಾರ್ಥಿಗಳಿಗೆ ವಿಶೇಷ ಪರಿಣತಿ ಹೊಂದಿದ ಮತ್ತು ಬೋಧನಾ ಸಾಧನೆ ಮಾಡಿರುವ ಶಿಕ್ಷಕರಿಂದ ಭಾನುವಾರ ತರಗತಿಗಳನ್ನು ಏರ್ಪಡಿಸಲಾಗುತ್ತಿದೆ. ಅಂತಹ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ನಾವುಂದ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲೆ ಶಶಿಕಲಾ ವಿ. ನಾಯಕ್ ಹೇಳಿದರು. ಅವರು ನಾವುಂದ ಕಾಲೇಜಿನಲ್ಲಿ ಕೋಟೇಶ್ವರ ರೋಟರಿ ಕ್ಲಬ್ ಸಹಯೋಗದಲ್ಲಿ ವಲಯ ಶಿಕ್ಷಣಾಧಿಕಾರಿ ಕಚೇರಿ ಆಶ್ರಯದಲ್ಲಿಆರಂಭವಾದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವೃದ್ಧಿ ವಿಶೇಷ ತರಗತಿ-ಉತ್ತೇಜನ-2021ಕಾರ್ಯಕ್ರಮ ಉದ್ಘಾಟನೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳು ಪರಿಣತ ಶಿಕ್ಷಕರು ನೀಡುತ್ತಿರುವ ಉಚಿತ ಮಾರ್ಗದರ್ಶನದ ಸಂಪೂರ್ಣ ಲಾಭ ಪಡೆದು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದರು. ವಲಯದ ಎಸ್ಸೆಸ್ಸೆಲ್ಸಿ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ಸ್ವಾಗತಿಸಿದರು. ವಲಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊಟೇಲೊಂದರ ಪಾರ್ಕಿಂಗ್ ಸ್ಥಳದಲ್ಲಿ ಬಿದ್ದಿದ್ದ ಸುಮಾರು 40 ಸಾವಿರ ಹಣವನ್ನು ಸಂಬಂಧಪಟ್ಟವರಿಗೆ ಮರಳಿಸುವ ಮೂಲಕ ಶಾಲಾ ವಿದ್ಯಾರ್ಥಿಯೋರ್ವ ಪ್ರಾಮಾಣಿಕತೆ ಮೆರೆದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ. ಕುಂದಾಪುರ ಹೊಟೇಲ್ ಶೆರೋನ್ನ ಪಾರ್ಕಿಂಗ್ ಸ್ಥಳದಲ್ಲಿ ಬಿದ್ದಿದ್ದ 40 ಸಾವಿರ ರೂ. ನಗದನ್ನು ನೋಡಿದ ಕುಂದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ, ದಿನೇಶ ಗೋಡೆ ಅವರ ಪುತ್ರ ದಿಶನ್ ಗೋಡೆ, ಆ ಹಣವನ್ನು ಹೋಟೆಲ್ ಮಾಲೀಕರಿಗೆ ತಲುಪಿಸಿ ಸಂಬಂಧಪಟ್ಟವರಿಗೆ ಹಿಂದಿರುಗಿಸುವಂತೆ ಮನವಿ ಮಾಡಿದ್ದರು. ಇದೇ ಸಂದರ್ಭ ಕಳೆದು ಹೋದ ಹಣಕ್ಕಾಗಿ ಹುಡುಕಾಡುತ್ತ ಹೊಟೇಲ್ಗೆ ಬಂದ ಮೂಲತ: ಗಂಗೊಳ್ಳಿ ನಿವಾಸಿ ಬಿ. ನಾಗರಾಜ ಶೆಣೈ ಎಂಬುವರು ಕಳೆದು ಹೋದ ಹಣದ ಬಗ್ಗೆ ಹೊಟೇಲ್ ಮಾಲೀಕರಲ್ಲಿ ವಿಚಾರಿಸಿದಾಗ ಹಣವನ್ನು ಶಾಲಾ ವಿದ್ಯಾರ್ಥಿಯೋರ್ವ ವಾಪಾಸು ನೀಡಿರುವುದು ತಿಳಿದು ಬಂದಿತು. ಹಣವನ್ನು ಮರುಕಳಿಸುವ ಮೂಲಕ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿ ದಿಶನ್ ಗೋಡೆ ಅವರಿಗೆ ನಾಗರಾಜ ಶೆಣೈ ಬಹುಮಾನ ನೀಡಿ ಪ್ರಶಂಸಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ ವಂಡ್ಸೆ ಮಹಾಶಕ್ತಿ ಕೇಂದ್ರದ ಮಹಿಳಾ ಮೋರ್ಚಾ ಸಭೆ ಚಿತ್ತೂರಿನ ಮೂಕಾಂಬಿಕಾ ಸಭಾಗೃಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಅದ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯ್ಷಕ್ಷೆ ವೀಣಾ ಎಸ್. ಶೆಟ್ಟಿ, ಮಹಿಳೆಯರು ಸಂಘಟಿತರಾದಲ್ಲಿ ಮಾತ್ರ ಸಬಲೀಕರಣ ಸಾಧ್ಯ. ಆದ್ದರಿಂದ ಮಹಿಳೆಯರು ಪಕ್ಷ ಸಂಘಟನೆಗೆ ಹೆಚ್ಚು ಗಮನ ಕೊಡಬೇಕು ಎಂದು ಹೇಳಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳ ಮಾಹಿತಿ ನೀಡಿದರು. ಮಹಿಳಾ ಮೋರ್ಚಾ ಮಹಾಶಕ್ತಿ ಕೇಂದ್ರ ನೂತನ ಅಧ್ಯಕ್ಷರು ಹಾಗೂ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರನ್ನು ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ ಘೋಷಿಸಿದರು. ಭಾರತೀಯ ಜನತಾ ಪಾರ್ಟಿ ಬೆಂಬಲಿತವಾಗಿ ಸ್ಪರ್ಧಿಸಿದ ವಂಡ್ಸೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಎಲ್ಲಾ ಮಹಿಳಾ ಸದಸ್ಯರನ್ನು ಅಭಿನಂದಿಸಲಾಯಿತು. ಬಿಜೆಪಿ ಬೈಂದೂರು ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಮಾಲತಿ ನಾಯ್ಕ್, ಕುಂದಾಪುರ ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಇಂದಿರಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ದೇಶೀ ತಳಿ ಗೋಮೂತ್ರ ಪೌಡರ್ ಕ್ಯಾಪ್ಸೂಲ್ಸ್ ‘ಸುರಭಿ ಸಾರ’ ಉತ್ಪನ್ನಕ್ಕೆ 2021ನೇ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ ದೊರೆತಿದೆ. ಗಜಾನನ ಅಗ್ರೊ ಫುಡ್ ಇಂಡಸ್ಟ್ರೀಸ್ ಸಂಸ್ಥೆಯ ಉತ್ಪನ್ನವಾದ ‘ಸುರಭಿ ಸಾರ’ಕ್ಕೆ ಎಕ್ಸಲೆಂಟ್ ಹೆಲ್ತ್ ಸಪ್ಲಿಮೆಂಟ್ – ಕನ್ಸೂಮರ್ ಚಾಯ್ಸ್ ಅವಾರ್ಡ್ ವಿಭಾಗದಲ್ಲಿ ಈ ಗೌರವ ದೊರೆತಿದೆ. ಮಂಗಳೂರಿನ ಹೋಟೆಲ್ ಓಶಿಯನ್ ಪರ್ಲ್ ಸಭಾಂಗಣದಲ್ಲಿ ದಿ ಟೈಮ್ಸ್ ಗ್ರೂಪ್ ಸಂಸ್ಥೆಯ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ಬಾಲಿವುಡ್ ನಟ ಸುನಿಲ್ ಶೆಟ್ಟಿ ಅವರು ಸುರಭಿಸಾರ ಉತ್ಪನ್ನದ ತಯಾರಕರಾದ ಬಿ. ರಾಘವೇಂದ್ರ ಹೆಮ್ಮಣ್ಣ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಪ್ರಶಸ್ತಿ ದೊರೆತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಹೆಮ್ಮಣ್ಣ ದಂಪತಿಗಳು, “ಮಾನವ ಕುಲಕ್ಕೆ ವರದಾನವಾದ ಈ ಉತ್ಪನ್ನದ ಆವಿಷ್ಕಾರಕ್ಕೆ ಕಾರಣಿಕರ್ತರಾಗಿರುವ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಗೆ ಈ ಗೌರವವನ್ನು ಸಮರ್ಪಿಸುತ್ತಿದ್ದೇವೆ. ನಮ್ಮೆಲ್ಲಾ ಗ್ರಾಹಕರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ನಳಗಳ ನೀರಿನ ಬಳಕೆದಾರರು/ ನೀರಿನ ಕಂದಾಯ/ ನೀರಿನ ಸಂಪರ್ಕ ಶುಲ್ಕ / ಜಾಹೀರಾತುದಾರರು / ಉದ್ದಿಮೆ ಪರವಾನಿಗೆದಾರರು / ಕಟ್ಟಡ ನಿರ್ಮಾಣ ಮತ್ತು ದುರಸ್ಥಿ ನವೀಕರಣದಾರರು/ ಘನತ್ಯಾಜ್ಯ ವಸ್ತು ನಿರ್ವಹಣೆಯ ಬಳಕೆದಾರರು ಹಾಗೂ ಇತರೆ ಶುಲ್ಕದ ದರಗಳ ಉಪವಿಧಿಯನ್ನು ಸಿದ್ಧಪಡಿಸಿದ್ದು, ಪಟ್ಟಣ ಪಂಚಾಯತಿಯ ಆರ್ಥಿಕ ಹಿತದೃಷ್ಟಿಯಿಂದ ಹಾಗೂ ಸರ್ಕಾರದ ಸುತ್ತೋಲೆಯನ್ವಯ, ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯ ನಿರ್ಣಯದಂತೆ ದರ ಪರಿಷ್ಕರಿಸಿ ಪಟ್ಟಣ ಪಂಚಾಯತ್ ಕಚೇರಿಯ ಸೂಚನಾಫಲಕದಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಪ್ರಕಟಗೊಂಡ 15 ದಿನಗಳ ಒಳಗೆ ಸೂಕ್ತ ಕಾರಣಗಳೊಂದಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಕಚೇರಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಯಾವುದೇ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ನಿಯಮಾನುಸಾರ ಪರಿಷ್ಕೃತ ದರವನ್ನು ಜಾರಿಗೆ ತರಲು ಕ್ರಮವಹಿಸಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ನಿವೃತ್ತ ಸೈನಿಕ, ಲೇಖಕ ಚಂದ್ರಶೇಖರ ನಾವಡ ಅವರು ಇತ್ತಿಚೆಗೆ ತಮ್ಮ ಎಲ್ಲ ಅನುಭವದ ಸಾರವನ್ನು ಒಟ್ಟುಗೂಡಿಸಿ ‘ಸೇನಾನುಭವ’ ಎನ್ನುವ ಪುಸ್ತಕವನ್ನು ಹೊರ ತಂದಿದ್ದಾರೆ. ಸರಳ ಭಾಷೆಯಲ್ಲಿ ಬರೆದಿರುವ ಈ ಪುಸ್ತಕ ಎಂತವರನ್ನು ಸುಲಭವಾಗಿ ಆಕರ್ಷಿಸಿ ಓದಿಸಿಕೊಂಡು ಹೋಗುತ್ತದೆ. ‘ಕಠಿಣ ಪಥದ ರೋಮಾಂಚಕಾರಿ ಪಯಣ’ ಎಂದು ಪುಸ್ತಕದ ಟೈಟಲ್’ನಲ್ಲಿ ನಮೂದಿಸಿದಂತೆ ನಾವಡರು ತಮ್ಮ ಸೇನಾ ದಿನಗಳ ಶಿಸ್ತು, ಕಠಿಣ ಪರಿಶ್ರಮವನ್ನು ಮನಮುಟ್ಟುವಂತೆ ವಿವರಿಸಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ರಾಮ ನಾವಡ ಮತ್ತು ಗೋದಾವರಿ ದಂಪತಿಗಳ ಪುತ್ರನಾಗಿ ಜನಿಸಿದ(1965) ಚಂದ್ರಶೇಖರ ನಾವಡರು ಬಿಎ ಪದವೀಧರರು. ಇವರು ಭಾರತೀಯ ಸೇನೆಯ ಶಿಕ್ಷಣ ವಿಭಾಗದಲ್ಲಿ ಸೇರ್ಪಡೆಗೊಂಡು ಸೇನೆಯ ವಿವಿಧ ಪಡೆಗಳಲ್ಲಿ ಸೇವೆಯನ್ನು ನಿರ್ವಹಿಸಿದ್ದಾರೆ. 2010ರಲ್ಲಿ ಜಮ್ಮು ಕಾಶ್ಮೀರ ಲೈಟ್ ಇನ್ಫಟ್ರಿ ಬಟಾಲಿಯನ್ನೊಂದಿಗೆ ವಿಶ್ವ ಸಂಸ್ಥೆಯ ಶಾಂತಿಪಾಲನಾ ಪಡೆಯ ಭಾಗವಾಗಿ ಆಪ್ರಿಕಾದ ಕಾಂಗೊ ಗಣರಾಜ್ಯದಲ್ಲಿ ಸೇವೆ ಸಲ್ಲಿಸಿದ ಹಿರಿಮೆ ಇವರದ್ದು. 2012ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಪ್ರಸ್ತುತ ಯೂನಿಯನ್ ಬ್ಯಾಂಕ್ನದಲ್ಲಿ ಸೇವೆ ಸಲ್ಲಿಸುತ್ತಿದ್ದು ಪತ್ರಿಕೆಗಳಲ್ಲಿ ಅಂಕಣ ಬರಹಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 7 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕೊಠಡಿಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ವೈದ್ಯರು/ ತಜ್ಞರ-10 ಹುದ್ದೆಗೆ (ವೇತನ-75000) ವಿದ್ಯಾರ್ಹತೆ- ಎಂ.ಬಿ.ಬಿ.ಎಸ್/ ತಜ್ಞತೆ (ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದಪದವಿ ಆಗಿರಬೇಕು) ಮತ್ತು ಶುಶ್ರೂಷಕರ -20 ಹುದ್ದೆಗೆ (ವೇತನ -25000) ವಿದ್ಯಾರ್ಹತೆ- ಕರ್ನಾಟಕ ಸರ್ಕಾರದ ನೊಂದಾಯಿತ ಸಂಸ್ಥೆಯಿಂದ ಜಿ.ಎನ್.ಎಂ/ ಬಿ.ಎಸ್ಸಿ ನರ್ಸಿಂಗ್ ಪದವಿ ಪಡೆದಿರಬೇಕು. ಮೇಲ್ಕಂಡ ಹುದ್ದೆಗಳ ವಿದ್ಯಾರ್ಹತೆಗೆ ಸಂಬಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿಗಳನ್ನು ನೇರ ಸಂದರ್ಶನಕ್ಕೆ ಹಾಜರಾಗುವಾಗ ತರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ಜನ್, ಮೊ.ನಂ: 9449843181 ಅಥವಾ 0820-2530333 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನಮ್ಮದಲ್ಲದ ವ್ಯಕ್ತಿತ್ವವನ್ನು ಅಭಿನಯಿಸುವ ಮೂಲಕ ರಂಗಭೂಮಿಯಲ್ಲಿ ಸರಿ ತಪ್ಪುಗಳನ್ನು ವಿಮರ್ಷಿಸುವ ಕಾರ್ಯವಾಗುತ್ತದೆ. ಇದರಿಂದಲೇ ಬದುಕು ಹಾಗೂ ಮನುಷ್ಯತ್ವವನ್ನು ಕಟ್ಟಿಕೊಳ್ಳಲು, ಮನುಷ್ಯ ಸಂಬಂಧ ಗಟ್ಟಿಗೊಳಿಸಿಕೊಳ್ಳಲು ಸಾಧ್ಯವಿದೆ ಎಂದು ರಂಗಭೂಮಿ ಹಾಗೂ ಕಿರುತೆರೆ ನಟ ಪ್ರದೀಪಚಂದ್ರ ಕುತ್ಪಾಡಿ ಹೇಳಿದರು. ಅವರು ಭಾನುವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ರಂಗಸುರಭಿ 2021 ಮೂರು ದಿನಗಳ ನಾಟಕೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ದಿನದ ಗೌರವ ಸ್ವೀಕರಿಸಿ ಮಾತನಾಡಿ ಕನ್ನಡದ ಮೇರು ಕೃತಿಗಳನ್ನು ರಂಗಕ್ಕೆ ತರುವ ಮೂಲಕ ಸುರಭಿ ಸಂಸ್ಥೆಯು ಹೊಸ ಪ್ರಯತ್ನಗಳಿಗೆ ತೆರೆದುಕೊಳ್ಳುತ್ತಲೇ ಬಂದಿರುವುದು ಶ್ಲಾಘನಾರ್ಹ ಎಂದರು. ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಮಾಲಿನಿ ಕೆ., ಲೇಖಕ ಹಾಗೂ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ, ನಿವೃತ್ತ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಶೆಟ್ಟಿ, ಶಿರೂರು ಜೆಸಿಐ ಸ್ಥಾಪಕಾಧ್ಯಕ್ಷ ಮೋಹನ್ ರೇವಣ್ಕರ್, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ…
