Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ದೋಹಾ, ಕತಾರ್: ದೋಹಾ ಕತಾರ್ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ, ಬೈಂದೂರು ಮೂಲದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಸಮಾಜ ಸೇವೆಯನ್ನು ಗುರುತಿಸಿ, ಕರ್ನಾಟಕ ಸಂಘ ಕತಾರ್ ಆಯೋಜಿಸಿದ್ದ ಭವ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಗೌರವ ಅತಿಥಿಗಳಾದ ದೋಹಾ, ಕತಾರ್ ಸಂಸ್ಕೃತಿ ಮತ್ತು ಕಲಾ ಇಲಾಖೆಯ ಸಾಂಸ್ಕೃತಿಕ ಸಮಾಲೋಚಕ ಜಮಾಲ್ ಫಯೇಜ್ ಅವರು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರನ್ನು ಸನ್ಮಾನಿಸಿದರು. ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಒಂದು ದಶಕಕ್ಕೂ ಹೆಚ್ಚು ಕಾಲ ಕತಾರ್ನಲ್ಲಿ ನೆಲೆಸಿ, ತಮ್ಮ ಸಮಾಜ ಸೇವೆಯಿಂದ ಕತಾರ್ ನ ಕನ್ನಡಿಗ ಸಮುದಾಯಕ್ಕೆ ಮಾತ್ರವಲ್ಲದೆ ಇಡೀ ಭಾರತೀಯ ಸಮುದಾಯದಲ್ಲಿ ಹೆಸರುವಾಸಿಯಾಗಿದ್ದಾರೆ. ಕೋವಿಡ್ -19 ರ ಸವಾಲಿನ ಸಮಯದಲ್ಲಿ ಭಾರತೀಯ ಸಮುದಾಯಗಳನ್ನು ತಾಯ್ನಾಡಿಗೆ ಮರುಳಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ ಕಾರ್ಯದ ಜೊತೆಗೆ, ಅವರು ಭಾರತೀಯ ಸಾಂಸ್ಕೃತಿಕ ಕೇಂದ್ರ ಮತ್ತು ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಡಿಯಲ್ಲಿ ಕೆಲಸ ಮಾಡುವ ಇತರ ಸಹವರ್ತಿ ಸಂಸ್ಥೆಗಳು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ತಮ್ಮ ಸಾಂಸ್ಕೃತಿಕ ಸೇವೆಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯು ಜಿಲ್ಲಾ ಮಟ್ಟದ ’ಸ್ವಚ್ಛ್ ವಿದ್ಯಾಲಯ ಪುರಸ್ಕಾರ 2021-22’ ಪ್ರಶಸ್ತಿಗೆ ಭಾಜನವಾಗಿದೆ. ಉಡುಪಿ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪ್ರಶಸ್ತಿಯನ್ನು ಶಾಲೆಯ ಮುಖ್ಯೋಪಾಧ್ಯಾಯ ಜಿ.ವಿಶ್ವನಾಥ ಭಟ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ ಅವರಿಗೆ ಹಸ್ತಾಂತರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟೆ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ಗೆ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಅವರು ಭೇಟಿ ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳನ್ನುದ್ದೇಶಿಸಿ ಮಾತನಾಡಿ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪ್ರತೀ ಕ್ಷೇತ್ರದಲ್ಲೂ ಜ್ಞಾನ ವೃದ್ಧಿಯನ್ನು ಮಾಡಿಕೊಳ್ಳಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳಿಗೆ ಶಿಕ್ಷಕರೂ ಸಹ ಸರಿಯಾದ ಮಾರ್ಗದರ್ಶನ ನೀಡುತ್ತಿರಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ, ಶಾಲಾ ಮ್ಯಾನೇಜಿಂಗ್ ಟ್ರಸ್ಟಿಗಳಾದ ಸುಧಾಕರ ಶೆಟ್ಟಿ, ಡಾ. ಜಯಕರ ಶೆಟ್ಟಿ, ಡಾ. ಕುಸುಮಾಕರ ಶೆಟ್ಟಿ, ಕರುಣಾಕರ ಶೆಟ್ಟಿ, ಜಯರಾಜ್ ಹೆಗ್ಡೆ, ಉಪಸ್ಥಿತರಿದ್ದರು. ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾರವರು ಸ್ವಾಗತಿಸಿ ಕಾರ‍್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಜೂ.29: ರಾಜ್ಯದ ಯುವಜನತೆಗೆ ಅವರ ಕನಸಿನ ಉದ್ಯೋಗ ಪಡೆಯಲು ಸಹಕಾರಿಯಾಗುವಂತೆ ಎಲ್ಲಾ ಅಗತ್ಯ ಮಾಹಿತಿ ಹಾಗೂ ನೆರವು ನೀಡುವ ಸ್ಕಿಲ್ ಕನೆಕ್ಟ್ ಪರಿಷ್ಕೃತ ಪೋರ್ಟಲ್ ಅನ್ನು ಜುಲೈ 15 ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ರಾಜ್ಯದ ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಕೌಶಲ್ಯಾಭಿವೃಧ್ದಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಅಶ್ವಥ್ ನಾರಾಯಣ ಹೇಳಿದರು. ಅವರು ಇಂದು ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಕೌಶಾಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉದ್ಯೋಗ ವಿನಿಮಯ ಕಚೇರಿ ಉಡುಪಿ ಹಾಗೂ ಭಂಡಾರ್ಕಾರ್ಸ್ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಡೀ ದೇಶದಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತ ಯುವ ಜನತೆ ಕರ್ನಾಟಕದಲ್ಲಿದ್ದಾರೆ. ಆದರೆ ಅವರಿಗೆ ಅವರ ಕನಸಿನ ಉದ್ಯೋಗ ಪಡೆಯಲು ಬೇಕಾದ ಅಗತ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಚಾರ್ಯ ಮೆಮೋರಿಯಲ್ ಹೈಸ್ಕೂಲಿನಲ್ಲಿ ಇತ್ತೀಚಿಗೆ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸ್ಥೆಯ ಸಂಚಾಲಕ, ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಅವರು 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 620 ಕ್ಕೂ ಅಧಿಕ ಅಂಕ ಪಡೆದ ಅನ್ವಿತಾ ಎಸ್ (624), ಅನಿರುದ್ದ್ ಎಸ್ ಹತ್ವಾರ್ (624), ಅಭಿಷೇಕ್ ಅಡಿಗ (623), ಆದಿತ್ಯ ಎಮ್ (623) ಸಿಂಧೂ ಕೆ.ಟಿ (622), ಛಾಯಾ (622,) ರಿಯಾ ಎಚ್ ಶೆಟ್ಟಿ (622), ಎಮ್ ಸೃಜನ್ (621), ಬಿ ಸುನಿಧಿ ಉಡುಪ ( 621), ಹರ್ಷಿತ ಡಿ.ಎಸ್ (620), ಅರ್ಪಿತ ಎನ್ (620), ಶಾನ್ವಿನ್ ರೋಯ್ಸ್ ಪಿರೇರಾ (620) ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭ ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಮಾತನಾಡಿ, ಅವರು ಒಂದು ಒಳ್ಳೆಯ ಶೈಕ್ಷಣಿಕ ವಾತಾವರಣ ಜೊತೆಗೆ ಗುರಿಯ ಹಿಂದೆ ಗುರುವಿನ ಮಾರ್ಗದರ್ಶನದಿಂದ ತಮ್ಮನ್ನು ತಾವು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 12 ವಿದ್ಯಾರ್ಥಿಗಳು ರಾಜ್ಯಮಟ್ಟದ ರ‍್ಯಾಂಕ್ ಪಡೆದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿಜ್ಞಾನ ವಿಭಾಗದಲ್ಲಿ ಮೈತ್ರೆಯಿ ೫ ನೇ ರ‍್ಯಾಂಕ್, ಮನೀಷ್ ಆರ್ ಹೆಬ್ಬಾರ್ ೭ ನೇ ರ‍್ಯಾಂಕ್, ಪ್ರಾಚಿ ಎನ್. ೯ನೇ ರ‍್ಯಾಂಕ್, ಯು. ಕಾರ್ತಿಕ್ ಐತಾಳ್ ೧೦ ನೇ ರ‍್ಯಾಂಕ್, ವಾಣಿಜ್ಯ ವಿಭಾಗದಲ್ಲಿ ದೀಕ್ಷಾ ಭಟ್ ಮತ್ತು ಪಂಚಮಿ ಕಿಣಿ ೫ ನೇ ರ‍್ಯಾಂಕ್, ಶ್ರೀಶ ೬ ನೇ ರ‍್ಯಾಂಕ್, ಕೃತಿಕಾ ೭ ನೇ ರ‍್ಯಾಂಕ್, ಅದಿತಿ ಮತ್ತು ಶೃದ್ಧಾ ಬಿ ಸಾಲಿಯಾನ್ ೮ ನೇ ರ‍್ಯಾಂಕ್, ದೇವಾಡಿಗ ಅಂಜಲಿ ಚಂದ್ರ ಮತ್ತು ರಕ್ಷಿತಾ ಆನಂದ ಪೂಜಾರಿ ೯ ನೇ ರ‍್ಯಾಂಕ್ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈಯವರು ಅಭಿನಂದನಾಪೂರ್ವಕವಾಗಿ ಶಾಲು ಹೊದಿಸಿ, ಫಲಪುಷ್ಪ, ಬೆಳ್ಳಿಲೋಟ, ಬೆಳ್ಳಿ ನಾಣ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ಸ್ವಚ್ಛ ವಿದ್ಯಾಲಯ ಪುರಸ್ಕಾರ ಕಾರ್ಯಕ್ರಮದಲ್ಲಿ, ಕುಂದಾಪುರದ ಓಕ್‌ವುಡ್ ಇಂಡಿಯನ್ ಸ್ಕೂಲ್‌ಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪೋಟ್೯ಗೇಟ್ ಎಜ್ಯುಕೇಶನ್‌ನ ಕಾಯ೯ದಶಿ೯ ನೀತಾ ಶೆಟ್ಟಿ ಪ್ರಶಸ್ತಿಯನ್ನು ಸ್ವೀಕರಿಸಿರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ಡಿಡಿಪಿಐ ಗೋವಿಂದ ಮಡಿವಾಳ ಹಾಗೂ ಜಿಲ್ಲೆಯ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು ಉಪಸ್ಥಿತರಿದ್ದರು. ಚಂದ್ರಾ ನಾಯಕ್ ಸ್ವಾಗತಿಸಿ , ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಡಲ ತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತರ ಆದರ್ಶ ಮತ್ತು ಮಾರ್ಗದರ್ಶನದ ಅಂಶಗಳನ್ನು ಚಲನ ಚಿತ್ರಗಳಲ್ಲಿ ಅಳವಡಿಸಿದರೆ, ಸಮಾಜಕ್ಕೆ ಅದೊಂದು ಉತ್ತಮ ಸಂದೇಶ ತಲುಪಿಸಿದಂತೆ. ಸುಗಂಧಿ ಚಿತ್ರ ತಂಡ ಈ ಸ್ತುತ್ಯರ್ಹ ಕಾರ್ಯವನ್ನು ಮಾಡಿದೆ. ಕಾರಂತರ ಊರಿನವರೇ ಆದ ಸಮಾನ ಮನಸ್ಕರ ಈ ಕಾರ್ಯ ಸಾರಸ್ವತ ಲೋಕಕ್ಕೊಂದು ದೊಡ್ಡ ಕಾಣಿಕೆ. ಬಾಲ ಕಲಾವಿದೆ ವೈಷ್ಣವಿ ಅಡಿಗ ಮನೋಜ್ಞವಾಗಿ ಅಭಿನಯಿಸಿದ್ದಾಳೆ. ಒಟ್ಟಿನಲ್ಲಿ ಸುಗಂಧಿ ಚಲನ ಚಿತ್ರ ಕಾರಂತರ ಜೀವಂತಿಕೆಯನ್ನು ಕಟ್ಟಿಕೊಡುವುದರಲ್ಲಿ ಯಶಸ್ವಿಯಾಗಿದೆ. ಸರ್ವರೂ ಚಿತ್ರ ನೋಡಿ, ತಂಡದದವರನ್ನು ಪ್ರೋತ್ಸಾಹಿಸಬೇಕು – ಈ ದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೋಟದ ಸಮಾನ ಮನಸ್ಕ ಆಸಕ್ತರು ಕೂಡಿ ನಿರ್ಮಿಸಿದ “ಸುಗಂಧಿ” ಕನ್ನಡ ಚಲನ ಚಿತ್ರದ ಪ್ರೀಮಿಯರ್ ಶೋ ವನ್ನು ಕೋಟೇಶ್ವರದ ಭಾರತ್ ಸಿನಿಮಾಸ್ ನ ಮಲ್ಟಿಪ್ಲೆಕ್ಸ್ ನಲ್ಲಿ ಆದಿತ್ಯವಾರ ಉದ್ಘಾಟಿಸಿ ಅವರು ಶುಭ ಹಾರೈಸಿದರು. ಸುಗಂಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನಕ್ಕೆ ಉದ್ಯಮಿ ಯು.ಬಿ. ಶೆಟ್ಟಿ ಭೇಟಿ ಅವರು ನೀಡಿ ಕ್ಷೇತ್ರದ ದೈವ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು ಈಶ್ವರ ಮಾರಿಕಾಂಬಾ ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ದೇವಾಲಯಕ್ಕೆ ಆರ್ಥಿಕ ನೆರವನ್ನು ನೀಡಿದ್ದು ಕ್ಷೇತ್ರದ ವತಿಯಿಂದ ಅವರನ್ನು ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಅನುವಂಶಿಕ ಮೊಕ್ತೇಸರರಾದ ವಸಂತ್ ಕುಮಾರ್ ಶೆಟ್ಟಿ ಕಾರಿ ಕಟ್ಟೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ದಿವಾಕರ ಹೆಗ್ಡೆ ಸುಬ್ಬಣ್ಣ ಶೆಟ್ಟಿ ಸನ್ಮನೆ ಕಾರ್ಯದರ್ಶಿ ಸಂಜೀವ ಆಚಾರ್ಯ, ರಾಮ ಮೊಗವೀರ , ಸೀತಾರಾಮ ಕೊಠಾರಿ, ಅಣ್ಣಪ್ಪ ಗಾಣಿಗ, ದೊಟ ಯ್ಯ ಪೂಜಾರಿ, ಪ್ರದೀಪ್ ಶೆಟ್ಟಿ ಕಾರಿಕಟ್ಟೆ,ವಕೀಲರಾದ ರಂಜಿತ್ ಕುಮಾರ್ ಶೆಟ್ಟಿ ಅರ್ಚಕರಾದ ಗಣಪಯ್ಯ ಸುಬ್ರಮಣ್ಯ ರವೀಂದ್ರ ಹಾಗೂ ಊರ ಗ್ರಾಮಸ್ಥರು ಉಪಸ್ಥಿತರಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಂಚಿಕಾನು ಸ. ಹಿ. ಪ್ರಾ. ಶಾಲೆಗೆ ಮಟ್ನಕಟ್ಟೆ ಧರ್ಮಶ್ರೀ ರಿಲೀಫ್ ಫೌಂಡೇಶನ್ ವತಿಯಿಂದ ಸುಮಾರು 13ಸಾವಿರ ರೂಪಾಯಿ ವೆಚ್ಚದಲ್ಲಿ ಎರಡು ಗ್ರೀನ್ ಬೋರ್ಡ್ ಗಳನ್ನು ಕೊಡುಗೆಯಾಗಿ ನೀಡಿದರು. ಮಹಾಬಲೇಶ್ವರ ಅಯ್ಯಪ್ಪಸ್ವಾಮಿ ಭಕ್ತವೃಂದ ಸುಮಾರು ಒಂದು ಪೋಡಿಯಂ (ಸ್ಪೀಚ್ ಸ್ಟ್ಯಾಂಡ್) ನ್ನು ಕೊಡುಗೆಯಾಗಿ ಶಾಲೆಗೆ ನೀಡಿದರು. ನಂತರ ಶಾಲೆಯಲ್ಲಿ ಕಳೆದ 15 ವರ್ಷಗಳಿಂದ ಅಡುಗೆ ಸಹಾಯಕರಾಗಿ ಸೇವೆ ಸಲ್ಲಿಸಿ, ವಯೋನಿವೃತ್ತಿ ಹೊಂದಿದ ಬಚ್ಚಿ ಇವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ.ಅಧ್ಯಕ್ಷರಾದ ಪ್ರಭಾಕರ ದೇವಾಡಿಗ, ಉಪಾಧ್ಯಕ್ಷೆ ಲಲಿತಾ ಶೇಟ್, ಸದಸ್ಯರಾದ ರಾಘವೇಂದ್ರ ಆಚಾರ್ಯ, ಪೂಜಾ .ಯು, ಗ್ರಾಮಪಂಚಾಯತ್ ಸದಸ್ಯರಾದ ವೀರೇಂದ್ರ ಶೆಟ್ಟಿ, ಧರ್ಮಶ್ರೀ ರಿಲೀಫ್ ಫೌಂಡೇಶನ್ ನಾ ಕಾರ್ಯದರ್ಶಿ ವಿಶ್ವನಾಥ ಹೊಸ್ಕೋಟೆ ಮತ್ತು ಸದಸ್ಯರು, ಅಯ್ಯಪ್ಪ ಸ್ವಾಮಿ ಭಕ್ತವೃಂದ ಮಹಾಬಲೇಶ್ವರ ಇದರ ಅಧ್ಯಕ್ಷರಾದ ಬಾಬು ಶೆಟ್ಟಿ ಮತ್ತು ಸದಸ್ಯರು ಉಪಸ್ಥಿತರಿದ್ದರು. ಸಹಶಿಕ್ಷಕಿ ಗೀತಾ ಮಯ್ಯ ಸ್ವಾಗತಿಸಿ , ಮುಖ್ಯ ಶಿಕ್ಷಕರಾದ ತಿಮ್ಮಪ್ಪ ಗಾಣಿಗ ಪ್ರಾಸ್ತಾವಿಕ ಮಾತನಾಡಿದರು. ಸಹಶಿಕ್ಷಕಿ ಯಶೋಧಾ…

Read More