ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲು 6 ತಿಂಗಳ ಅವಧಿಗಾಗಿ ಪ್ರಯೋಗಶಾಲಾ ತಂತ್ರಜ್ಞರ (20 ಹುದ್ದೆ) ದತ್ತಾಂಶ ನಮೂದಕರ (20 ಹುದ್ದೆ) ಗಳಿಗೆ ಆಗಸ್ಟ್ 14 ರಿಂದ 17 ರ ವರೆಗೆ ನೇರ ಸಂದರ್ಶನ ನಡೆಯಲಿದೆ. ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ಮತ್ತು ದೃಡೀಕೃತ ದಾಖಲಾತಿಗಳೊಂದಿಗೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಅಜ್ಜರಕಾಡು ಇಲ್ಲಿ ಸಂದರ್ಶನಕ್ಕೆ ಹಾಜರಾಗಬಹುದು. ಪ್ರಯೋಗಶಾಲಾ ತಂತ್ರಜ್ಞ ಹುದ್ದೆಗೆ , ಡಿಎಂಎಲ್ಟಿ/ಬಿಎಂಎಲ್ಟಿ ಯವರಿಗೆ ಪ್ರಥಮ ಆದ್ಯತೆ ಅಥವಾ ಎಂ.ಎಸ್ಸಿ ನರ್ಸಿಂಗ್ /ಬಿ.ಎಸ್ಸಿ ನರ್ಸಿಂಗ್/ಜಿಎನ್ಎಂ:ಪ್ಯಾರಾ ಮೆಡಿಕಲ್ ಬೋರ್ಡ್ ನಲ್ಲಿ ನೊಂದಣಿ, ಅಥವಾ ನರ್ಸಿಂಗ್ ಕೌನ್ಸಿಲ್ ನಲ್ಲಿ ನೊಂದಣಿ ಮಾಡಿದವರು ಹಾಗೂ ದತ್ತಾಂಶ ನಮೂದಕರ ಹುದ್ದೆಗೆ ,ಯಾವುದೇ ಪದವಿ ಮತ್ತು ಡಿಸಿಎ ಡಿಪ್ಲೋಮಾ ಕಂಪ್ಯೂಟರ್ ಅಪ್ಲಿಕೇಷನ್ ಮತ್ತು 2 ವರ್ಷದ ಅನುಭವ ಹೊಂದಿದ ಬಗ್ಗೆ ಪ್ರಮಾಣ ಪತ್ರ ಹೊಂದಿದವರು ಸಂದರ್ಶನಕ್ಕೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.13ರ ಗುರುವಾರ 402 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಜಿಲ್ಲೆಯಲ್ಲಿ ಒಟ್ಟು 7174 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 4138 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2966 ಸಕ್ರಿಯ ಪ್ರಕರಣಗಳಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಹಾಗೂ 1290 ಮಂದಿ ಹೋಮ್ ಐಸೋಲೇಶನ್ ಮೂಲಕ ನಿಗಾ ಇರಿಸಲಾಗಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 70 ಮಂದಿ ಮೃತಪಟ್ಟಿದ್ದಾರೆ. ಇಂದು ಒಟ್ಟು 290 ಮಂದಿ ಬಿಡುಗಡೆಗೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತುತ ಸಾಲಿನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಸಮುದಾಯದ ಜನಾಂಗಕ್ಕೆ ಸ್ವಯಂ ಉದ್ಯೋಗ, ನೇರಸಾಲ ಉದ್ಯಮಶೀಲತಾ, ಭೂ ಒಡೆತನ, ಮೈಕ್ರೋ ಕ್ರೆಡಿಟ್ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿಗಮದಿಂದ ಯಾವುದೇ ಸೌಲಭ್ಯ ಪಡೆಯದ ೧೮ರಿಂದ ೬೦ ವರ್ಷದ ಒಳಗಿನವರು. ಅರ್ಜಿ ಸಲ್ಲಿಸಲು ಆಗಸ್ಟ್ ೩೧ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ನಿಗಮದ ವೆಬ್ಸೈಟ್ https://kmvstdcl.karnataka.gov.in ನಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಬಿ ಬ್ಲಾಕ್, ಕೊಠಡಿ ಸಂಖ್ಯೆ 302, ರಜತಾದ್ರಿ ಮಣಿಪಾಲ-576104, ದೂರವಾಣಿ ಸಂಖ್ಯೆ – 0820-2574884 ಗೆ ಸಂಪರ್ಕಿಸಬಹುದೆಂದು ಪ್ರಕಟಣೆಯ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ, ಆ.13: ಪ್ರಸ್ತುತ ಸಾಲಿನ ವಿಕಲಚೇತನಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಕೇಂದ್ರ ಸರ್ಕಾರದಿಂದ ನೀಡುವ ರಾಷ್ಟ್ರ ಪ್ರಶಸ್ತಿಗಾಗಿ ವಿವಿಧ ಕ್ಷೇತ್ರಗಳಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಸಾಧನೆಗಳ ಮತ್ತು ದಾಖಲೆಗಳ ಬಗ್ಗೆ ಸಂಕ್ಷೀಪ್ತ ಮಾಹಿತಿಯೊಂದಿಗೆ ಆಸಕ್ತರು ಆಗಸ್ಟ್ 18ರ ಒಳಗೆ ವಿಕಲಚೇತನರ ಸಬಲೀಕರಣ ಅಧಿಕಾರಿ ಕಛೇರಿ, ತಳ ಅಂತಸ್ತು, ಕೊಠಡಿ ಸಂಖ್ಯೆ 4, 5 ರಜತಾದ್ರಿ ಮಣಿಪಾಲ ಉಡುಪಿ ಕಛೇರಿಗೆ ಸಲ್ಲಿಸಬಹುದಾಗಿದೆ. ಅರ್ಜಿಯನ್ನು www.disabilityaffairs.gov.in ವೆಬ್ಸೈಟ್ನಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿಯನ್ನು ಅಥವಾ ದೂರವಾಣಿ ಸಂಖ್ಯೆ 0820-2574810 ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ► ವಿಶೇಷಚೇತನರಿಗೆ ಡಿಪ್ಲೊಮ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ – https://kundapraa.com/?p=40286 .
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.12ರ ಬುಧವಾರ 263 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 95, ಉಡುಪಿ ತಾಲೂಕಿನ 142 ಹಾಗೂ ಕಾರ್ಕಳ ತಾಲೂಕಿನ 23 ಮಂದಿಗೆ ಪಾಸಿಟಿವ್ ಬಂದಿದೆ. 3 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 51 ಸಿಂಥಮೇಟಿವ್ ಹಾಗೂ 212 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 138 ಪುರುಷರು, 125 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 97, ILI 34 ಪ್ರಕರಣ, ಸಾರಿ 0 ಪ್ರಕರಣವಿದ್ದು, 128 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಒಂದು ಪ್ರಕರಣ ಬೇರೆ ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 116 ಮಂದಿ ಆಸ್ಪತ್ರೆಯಿಂದ ಹಾಗೂ 82 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 1,179 ನೆಗೆಟಿವ್: ಈ ತನಕ ಒಟ್ಟು 49096 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 40578 ನೆಗೆಟಿವ್, 6773 ಪಾಸಿಟಿವ್ ಬಂದಿದ್ದು, 1745 ಮಂದಿಯ ವರದಿ ಬರುವುದು ಬಾಕಿ ಇದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸುರಭಿ ಶೆಟ್ಟಿ 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ಬೈಂದೂರು ವಲಯ ಮತ್ತು ಉಡುಪಿ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯಾದ ಸುರಭಿಯ ಸಾಧನೆ ರಾಜ್ಯಕ್ಕೆ ಮಾದರಿ ಎಂದು ಬೈಂದೂರು ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಯೋತಿ ಬಿ. ಹೇಳಿದರು. ಅವರು ಉಪ್ಪುಂದದ ಸುರೇಶ್ ಶೆಟ್ಟಿ ಮತ್ತು ಸೀಮಾ ಶೆಟ್ಟಿ ಅವರ ಪುತ್ರಿ ಸುರಭಿ ಶೆಟ್ಟಿ ಅವರ ಮನೆಗೆ ಭೇಟಿನೀಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ವತಿಯಿಂದ ಅಭಿನಂದಿಸಿ ಮಾತನಾಡಿದರು. ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ವಿಶ್ವೇಶ್ವರ ಅಡಿಗರು ಮಾತನಾಡಿ ಶಾಲೆಯಲ್ಲಿ ಅತ್ಯಂತ ಜವಾಬ್ದಾರಿಯುತ ವಿದ್ಯಾರ್ಥಿಯಾದ ಸುರಭಿಯ ಸಾಧನೆ ಇತರರಿಗೆ ಪ್ರೇರಣೆಯಾಗಲಿ ಎಂದು ಶುಭಹಾರೈಸಿದರು. ಬಿ.ಆರ್.ಪಿ ರಾಮಕೃಷ್ಣ ದೇವಾಡಿಗ, ಮಂಜುನಾಥ ಶೇರುಗಾರ್, ಸುಧಾಕರ ದೇವಾಡಿಗ , ಗ್ರಾ.ಪಂ ಸದಸ್ಯರಾದ ಸತೀಶ ಶೆಟ್ಟಿ ಮತ್ತು ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.. ಸಮನ್ವಯಾಧಿಕಾರಿ ಅಬ್ದುಲ್ ರವೂಫ್ ಸ್ವಾಗತಿಸಿ…
ಕುಂದಾಪ್ರ ಡಾಟ್ ಕಾಂ ಕುಂದಾಪುರ: ಕುಂದಾಪುರ ತಾಲೂಕು ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಎಚ್.ಇಂದಿರಾ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 37 ಸದಸ್ಯ ಬಲವಿದ್ದ ಕುಂದಾಪುರ ತಾಲ್ಲೂಕು ಪಂಚಾಯಿತಿ, ನೂತನವಾಗಿ ಬೈಂದೂರು ತಾಲ್ಲೂಕು ರಚನೆಯಾದ ಬಳಿಕ ಬೈಂದೂರು ಹಾಗೂ ಕುಂದಾಪುರ ತಾಲ್ಲೂಕು ಪಂಚಾಯಿತಿಯಾಗಿ ಬೇರೆ ಬೇರೆಯಾಗಿತ್ತು. 14 ಸದಸ್ಯರು ಬೈಂದೂರು ತಾಲ್ಲೂಕು ಪಂಚಾಯಿತಿಯಲ್ಲಿ ಹಿಂದೆ ಅವಿಭಜಿತ ಕುಂದಾಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿದ್ದ ಶ್ಯಾಮಲಾ ಕುಂದರ್ ಅವರು ಸೇರಿದ್ದರಿಂದಾಗಿ ಕುಂದಾಪುರ ತಾಲ್ಲೂಕು ಪಂಚಾಯಿತಿಗೆ ನೂತನ ಅಧ್ಯಕ್ಷರ ಆಯ್ಕೆ ನಡೆದಿತ್ತು. ಉಪಾಧ್ಯಕ್ಷರಾಗಿ ರಾಮ್ಕಿಶನ್ ಹೆಗ್ಡೆ ಮುಂದುವರೆದಿದ್ದಾರೆ. ಕುಂದಾಪುರದ ಕಂದಾಯ ಉಪವಿಭಾಗಾಧಿಕಾರಿ ಕೆ.ರಾಜು ಅಧ್ಯಕ್ಷರ ಆಯ್ಕೆಯ ಚುನಾವಣಾ ಪ್ರಕ್ರಿಯೆಯನ್ನು ಪೂರೈಸಿ, ನೂತನ ಅಧ್ಯಕ್ಷರಿಗೆ ಪುಷ್ಟ ಗುಚ್ಛವನ್ನು ನೀಡಿ ಅಭಿನಂದನೆ ಸಲ್ಲಿಸಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೇಶವ್ ಶೆಟ್ಟಿಗಾರ್ ಇದ್ದರು. ಅಂಗನವಾಡಿ ಶಿಕ್ಷಕಿಯಾಗಿದ್ದ ಇಂದಿರಾ ಶೆಟ್ಟಿ ಹರ್ಕೂರು ಹುದ್ದೆ ರಾಜಿನಾಮೆ ನೀಡಿ ರಾಜಕೀಯ ಕ್ಷೇತ್ರವನ್ನು ಪ್ರತಿನಿಧಿಸಿ ವಂಡ್ಸೆ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯೆಯಾಗಿದ್ದರು. ವಂಡ್ಸೆ ಜಿಲ್ಲಾ ಪಂಚಾಯಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಮೀನುಗಾರಿಕಾ ಹೊರಬಂದರಿನ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿಲ್ಲ. ಅದನ್ನು ಪೂರ್ಣಗೊಳಿಸಲು ರಾಜ್ಯ ಬಜೆಟ್ನಲ್ಲಿ ಮೀಸಲಿರಿಸಿದ ರೂ ೮೬ ಕೋಟಿ ಬಳಸಿಕೊಂಡು ನಡೆಸುವ ಎರಡನೆ ಹಂತದ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಬಂದರು ಪ್ರದೇಶಕ್ಕೆ ಭೇಟಿನೀಡಿ ಅಪೂರ್ಣ ಕಾಮಗಾರಿ ಮತ್ತು ಅಲ್ಲಿ ಕಡಲ್ಕೊರೆತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಿದ ಬಳಿಕ ಅವರು ಅಹವಾಲು ಸಲ್ಲಿಸಿದ ಸ್ಥಳೀಯ ಮೀನುಗಾರರಿಗೆ ಈ ಆಶ್ವಾಸನೆ ನೀಡಿದರು. ಮೀನುಗಾರರ ಶ್ರೀರಾಮ ಮಂದಿರದ ಅಧ್ಯಕ್ಷ ಮೋಹನ ಖಾರ್ವಿ, ಮಾಜಿ ಅಧ್ಯಕ್ಷರಾದ ಸೋಮಯ್ಯ ಖಾರ್ವಿ, ಚಂದ್ರ ಖಾರ್ವಿ, ಮಾರುಕಟ್ಟೆ ವಿಭಾಗದ ಅಧ್ಯಕ್ಷ ಶಂಕರ ಖಾರ್ವಿ, ಕಾರ್ಯದರ್ಶಿ ಕೆ. ಎಂ. ಸತೀಶ ಖಾರ್ವಿ, ಉಪಾಧ್ಯಕ್ಷ ವಾಸು .ಖಾರ್ವಿ ಅಪೂರ್ಣವಾಗಿರುವ ಬಂದರು ಮತ್ತು ಅದರಿಂದ ಪ್ರತಿವರ್ಷ ಸಂಭವಿಸುವ ಕಡಲ್ಕೊರೆತದಿಂದ ಕರಾವಳಿ ರಸ್ತೆ ಹಾಗೂ ಸಮೀಪದ ಜನತಾ ಕಾಲನಿಯ ಮನೆಗಳಿಗೆ ಆಗುತ್ತಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.10ರ ಮಂಗಳವಾರ 219 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 68, ಉಡುಪಿ ತಾಲೂಕಿನ 115 ಹಾಗೂ ಕಾರ್ಕಳ ತಾಲೂಕಿನ 33 ಮಂದಿಗೆ ಪಾಸಿಟಿವ್ ಬಂದಿದೆ. 3 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 58 ಸಿಂಥಮೇಟಿವ್ ಹಾಗೂ 161 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 140 ಪುರುಷರು, 79 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇಂದು 112 ಮಂದಿ ಆಸ್ಪತ್ರೆಯಿಂದ ಹಾಗೂ 71 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 48 ವರ್ಷದ ಬೈಂದೂರಿನ ಪುರುಷ, 66 ಹಾಗೂ 41 ವರ್ಷದ ಉಡುಪಿಯ ಪುರುಷರು ಸೇರಿ ನಾಲ್ವರು ವ್ಯಕ್ತಿಗಳು ಇಂದು ಮೃತರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 64, ILI 39 ಪ್ರಕರಣ, ಸಾರಿ 2 ಪ್ರಕರಣವಿದ್ದು, 112 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಒಂದು ಪ್ರಕರಣ ಬೇರೆ ರಾಜ್ಯ ಹಾಗೂ ಒಂದು ಪ್ರಕರಣ ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. 1,203…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು, ಅ11: ನೂತನವಾಗಿ ಅಸ್ತಿತ್ವಕ್ಕೆ ಬಂದ ಬೈಂದೂರು ತಾಲೂಕು ಪಂಚಾಯತಿಯ ಪ್ರಥಮ ಅಧ್ಯಕ್ಷರಾಗಿ ಮಹೇಂದ್ರ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಮಾಲಿನಿ ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೈಂದೂರು ತಾಲೂಕು ಪಂಚಾಯತಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹೇಂದ್ರ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಮಾಲಿನಿ ಕೆ. ನಾಮಪತ್ರ ಸಲ್ಲಿಸಿದ್ದು, ಬೇರಾರೂ ನಾಮಪತ್ರ ಸಲ್ಲಿಸದಿರುವುದರಿಂದ ಅವಿರೋಧ ಆಯ್ಕೆ ನಡೆದಿದೆ. ಅಧಿಕಾರ ಸ್ವೀಕರಿಸಿದ ಅಧ್ಯಕ್ಷ ಮಹೇಂದ್ರ ಪೂಜಾರಿ ಮಾತನಾಡಿ ಎಲ್ಲಾ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗುವಂತಾಯಿತು. ಬೆಂಬಲಿಸಿದ ಸಚಿವರು, ಶಾಸಕರು ಹಾಗೂ ಪಕ್ಷದ ಪ್ರಮುಖರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ತಾಲೂಕು ಅಭಿವೃದ್ಧಿಯ ಬಗ್ಗೆ ಎಲ್ಲರೂ ಒಟ್ಟಾಗಿ ಹೆಚ್ಚಿನ ಗಮನ ಹರಿಸುತ್ತೇವೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ ಉಪವಿಭಾಗಾಧಿಕಾರಿ ರಾಜು ಅವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರಿ, ಕಾರ್ಯನಿರ್ವಹಣಾಧಿಕಾರಿ ಭಾರತಿ ಅವರು ಉಪಸ್ಥಿತರಿದ್ದರು. ಈ ಸಂದರ್ಭ ಬೈಂದೂರು ಬಿಜೆಪಿ ಅಧ್ಯಕ್ಷ…
