ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.21 ರ ಭಾನುವಾರ 1 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದ್ದು, ನಾಳಿನ ಕೋವಿಡ ವರದಿಯಲ್ಲಿ ಅಪ್ಡೇಡ್ ಆಗಲಿದೆ. ಕೊವೀಡ್ ಪಾಸಿಟಿವ್ ವ್ಯಕ್ತಿ ಬೈಂದೂರು ಠಾಣೆಯ ಪೊಲೀಸ್ ಸಿಬ್ಬಂದಿಯಾಗಿದ್ದು, ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆ ಹಾಗೂ ಪಕ್ಕದ ವೃತ್ತ ನಿರೀಕ್ಷಕರ ಕಛೇರಿಯನ್ನು ಸ್ಯಾನಿಟೈಸ್ ಮಾಡಿ 2-3 ದಿನದ ಮಟ್ಟಿಗೆ ಬಂದ್ ಮಾಡಲಾಗುತ್ತಿದ್ದು, ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗುತ್ತಿದೆ. ಬೈಂದೂರಿನ ಹಳೆ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ತಾತ್ಕಾಲಿಕವಾಗಿ ಕುಂದಾಪುರ ಉಪವಿಭಾಗದ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಇಂದು 27 ನೆಗೆಟಿವ್: ಈ ತನಕ ಒಟ್ಟು 13,745ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,082 ನೆಗೆಟಿವ್, 1064 ಪಾಸಿಟಿವ್ ಬಂದಿದ್ದು, 266 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 27 ನೆಗೆಟಿವ್, 1 ಪಾಸಿಟಿವ್ ಬಂದಿದೆ. 97 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಒಟ್ಟು 1064ಕೊರೋನಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಓರ್ವರಿಗೆ ಕೋರೋನಾ ಪಾಸಿಟಿವ್ ಬಂದಿರುವುದು ದೃಢವಾಗಿದ್ದು, ಸದ್ಯ ಅವರನ್ನು ಕುಂದಾಪುರದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಸಿಬ್ಬಂದಿಯಲ್ಲಿ ಶೀತ, ಗಂಟಲು ನೋವಿನ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರನ್ನು ಕೊವೀಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು ಎನ್ನಲಾಗಿದೆ. ಅದರ ವರದಿ ಇಂದು ದೊರೆತಿದ್ದು, ಪಾಸಿಟಿವ್ ದೃಢವಾಗಿತ್ತು. ಸದ್ಯ ಬೈಂದೂರು ಪೊಲೀಸ್ ಠಾಣೆ ಹಾಗೂ ವೃತ್ತ ನಿರೀಕ್ಷಕರ ಕಛೇರಿಯ ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ. ಪಾಸಿಟಿವ್ ಬಂದಿರುವ ಸಿಬ್ಬಂದಿಯ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಅವರನ್ನು ಹೋಂ ಕ್ವಾರಂಟೈನ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. 7 ದಿನಗಳ ಬಳಿಕ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಸ್ವ್ಯಾಬ್ ತೆಗೆದು ಪರೀಕ್ಷೆಗೆ ಕಳುಹಿಸಲಾಗುತ್ತಿದೆ ಮತ್ತು ಅವರ ಸಂಪರ್ಕಕ್ಕೆ ಬಂದವರನ್ನು ಗುರುತಿಸಿ ಕ್ವಾರಂಟೈನ್ ಮಾಡಲಾಗುತ್ತದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಠಾಣೆ ಸೀಲ್ ಡೌನ್? ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಬಂದಿರುವುದು ದೃಢವಾದಲ್ಲಿ ಠಾಣೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.20 ರ ಶನಿವಾರ ಒಟ್ಟು 13 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ 10 ಮಂದಿ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದು, ಒಂದು ಸ್ಥಳೀಯ ಪ್ರಕರಣ, ಒಂದು ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಒಂದು ಪ್ರಕರಣದ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಇವರಲ್ಲಿ 8 ಪುರುಷರು, ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳು ಇದ್ದಾರೆ. ನಿನ್ನೆ ಮೃತಪಟ್ಟಿದ್ದ ತೆಕ್ಕಟ್ಟೆ ಭಾಗದ ವ್ಯಕ್ತಿಯ ಜೊತೆಗೆ ಬಂದಿದ್ದ ಅವರ ಪತ್ನಿ ಹಾಗೂ ಮಗಳಿಗೂ ಪಾಸಿಟಿವ್ ಬಂದಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. 13,300 ಮಾದರಿ ಸಂಗ್ರಹ: ಈ ತನಕ ಒಟ್ಟು 13,300ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,055 ನೆಗೆಟಿವ್, 1063 ಪಾಸಿಟಿವ್ ಬಂದಿದ್ದು, 182 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 109 ನೆಗೆಟಿವ್, 13 ಪಾಸಿಟಿವ್ ಬಂದಿದೆ. 102 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಒಟ್ಟು 1063 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಶ್ರೀ ಜಟ್ಟಿಗೇಶ್ವರ ಯೂತ್ ಕ್ಲಬ್ ಲೈಟ್ ಹೌಸ್ ಗಂಗೊಳ್ಳಿ ಇದರ ೨೯ನೇ ವಾರ್ಷಿಕೋತ್ಸವದ ಪ್ರಯುಕ್ತ ಬಡವರಿಗೆ ಉಚಿತ ಆಹಾರ ಸಾಮಾಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಲೈಟ್ ಹೌಸ್ ಬಳಿಯ ಶ್ರೀ ಜಟ್ಟಿಗೇಶ್ವರ ದೇವಸ್ಥಾನದ ವಠಾರದಲ್ಲಿ ಬುಧವಾರ ಜರಗಿತು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಬಡವರಿಗೆ ಉಚಿತ ಆಹಾರದ ಕಿಟ್ ವಿತರಿಸಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಉಪಾಧ್ಯಕ್ಷ ಸೂರಜ್ ಖಾರ್ವಿ, ನಿರ್ದೇಶಕ ಚಂದ್ರ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯೆ ಶಾಂತಿ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ನಾಗರಾಜ ಖಾರ್ವಿ ಆರ್.ಎನ್. ಸ್ವಾಗತಿಸಿದರು. ವಿಶ್ವನಾಥ ಎಂ.ಆರ್. ಕಾರ್ಯಕ್ರಮ ನಿರ್ವಹಿಸಿದರು. ಮಡಿ ವಿಶ್ವನಾಥ ಖಾರ್ವಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಹೊರತಂದಿರುವ ಮೌಲ್ಯವರ್ಧಿತ ಮೀನಿನ ಉತ್ಪನ್ನಗಳನ್ನು ಮುಖ್ಯಂತ್ರಿಗಳಾದ ಬಿ. ಎಸ್. ಯಡಿಯೂರಪ್ಪ ಅವರು ತಮ್ಮ ಕಛೇರಿಯಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ನಿರ್ದೇಶಕ ಎಂ. ಎಲ್. ದೊಡ್ಡಮನಿ, ಮತ್ಸ್ಯ ಬಂಧನ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಗೋವಿಂದ ಬಾಬು ಪೂಜಾರಿ, ಅರುಣ್ ಧನ್ಪಾಲ್, ಮೀನುಗಾರಿಕಾ ಇಲಾಖೆ ನಿರ್ದೇಶಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಮತ್ಸ್ಯ ಬಂಧನ ಸಂಸ್ಥೆಯಿಂದ ಉತ್ಪಾದನೆ: ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಈ ಹೊಸ ಉತ್ಪನ್ನ ಫಿಶ್ ವೇಫರ್ಸ್ ಮೊದಲಾದವುಗಳ್ನು ಮತ್ಸ್ಯ ಬಂಧನ ಸಂಸ್ಥೆಯು ತಯಾರಿಕೆ ಹಾಗೂ ಪ್ಯಾಕಿಂಗ್ ಜವಾಬ್ದಾರಿ ಹೊತ್ತಿದೆ. ಸದ್ಯ ಬೆಂಗಳೂರಿನಲ್ಲಿ ಸಂಸ್ಥೆಯ ಉತ್ಪಾದಕ ಘಟಕ ಕಾರ್ಯನಿರ್ವಹಿಸಲಿದ್ದು, ಕೆಲ ತಿಂಗಳುಗಳಲ್ಲಿ ಬೈಂದೂರು ತಾಲೂಕಿನಲ್ಲಿಯೇ ಉತ್ಪಾದನಾ ಘಟಕ ಆರಂಭವಾಗಲಿದೆ. ಶೆಫ್ಟಾಕ್ ಸಂಸ್ಥೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.19ರ ಶುಕ್ರವಾರ ಒಟ್ಟು 11 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಎರಡನೇ ಸಾವು: ಮುಂಬೈನಿಂದ ತೆಕ್ಕಟ್ಟೆ ಭಾಗದ 54 ವರ್ಷ ಪ್ರಾಯದ ವ್ಯಕ್ತಿ ಮೃಪಪಟ್ಟಿದ್ದು, ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮುಂಬೈನಿಂದ ನಾಲ್ವರು ಜೂನ್ 18ರ ಮಧ್ಯಾಹ್ನ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಅವರೆಲ್ಲರಿಗೂ ಡಿಸ್ಟಿಕ್ ರಿಸಿವ್ ಸೆಂಟರಿನಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿತ್ತು. ಟೆಂಪ್ರೆಚರ್ ಹೆಚ್ಚಿಲ್ಲದೇ ಇದ್ದುದರಿಂದ ಅವರನ್ನು ಹೋಮ್ ಕ್ವಾರಂಟೈನಿಗೆ ಕಳುಹಿಸಲಾಗಿತ್ತು. ಆದರೆ ಸಂಜೆಯ ವೇಳೆಗೆ ಅವರಲ್ಲಿ ಓರ್ವರು ಮೃತಪಟ್ಟಿದ್ದರು. ಅವರ ಸ್ವ್ಯಾಬ್ ಪರೀಕ್ಷಿಸಿದಾಗ ಮೃತ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಅವರೊಂದಿಗಿದ್ದ, ಉಳಿದ ಮೂವರ ಸ್ವ್ಯಾಬ್ ತೆಗೆದು ಪರೀಕ್ಷೆಗೆ ಕಳುಹಿಸಿ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ. ಸದ್ಯ ಲಭ್ಯವಿರುವ ಮಾಹಿತಿಯಂತೆ ಮೃತ ವ್ಯಕ್ತಿ ಕಳೆದ ಕೆಲವು ದಿನಗಳಿಂದ ಅರಶಿನ ಕಾಮಾಲೆ (ಜಾಂಡೀಸ್) ರೋಗದಿಂದ ಬಳಲುತ್ತಿದ್ದರು. ತನ್ನ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಉಡುಪಿ ಜಿಲ್ಲೆಯಲ್ಲಿ ಕೊವೀಡ್-19ಗೆ ಮತ್ತೊರ್ವ ವ್ಯಕ್ತಿ ಬಲಿಯಾಗಿದ್ದಾರೆ. ಮಹಾರಾಷ್ಟದಿಂದ ಬಂದಿದ್ದ ತೆಕ್ಕಟ್ಟೆ ಭಾಗದ 54 ವರ್ಷ ಪ್ರಾಯದ ವ್ಯಕ್ತಿ ಮೃಪಪಟ್ಟಿದ್ದು, ವರದಿಯಲ್ಲಿ ಅವರಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ. ಮಹಾರಾಷ್ಟದಿಂದ ನಾಲ್ವರು ಜೂನ್ 18ರ ಮಧ್ಯಾಹ್ನ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಅವರೆಲ್ಲರಿಗೂ ಡಿಸ್ಟಿಕ್ ರಿಸಿವ್ ಸೆಂಟರಿನಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಲಾಗಿತ್ತು. ಟೆಂಪ್ರೆಚರ್ ಹೆಚ್ಚು ಇಲ್ಲದೇ ಇದ್ದುದರಿಂದ ಹೋಮ್ ಕ್ವಾರಂಟೈನಿಗೆ ಕಳುಹಿಸಲಾಗಿತ್ತು. ಆದರೆ ಸಂಜೆಯ ವೇಳೆಗೆ ಓರ್ವರು ಮೃತಪಟ್ಟಿದ್ದರು. ಅವರ ಸ್ವ್ಯಾಬ್ ಪರೀಕ್ಷಿಸಿದಾಗ ಮೃತ ವ್ಯಕ್ತಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿತ್ತು. ಮರಣೋತ್ತರ ಪರೀಕ್ಷೆಯ ಬಳಿಕ ಮರಣಕ್ಕೆ ನಿಖರ ಕಾರಣ ತಿಳಿದುಬರಲಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಈ ಬಗ್ಗೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು, ಕೋವಿಡ್ ಬಂದ ನಂತರ ಜೀವ ಉಳಿಸುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ವೈದ್ಯರ ತಂಡ ನಿರಂತವಾಗಿ ಕೆಲಸ ಮಾಡುತ್ತಿದೆ. ಮುಂಬೈನಿಂದ ಬರುವಾಗಲೇ ತಡವಾಗಿ ಬಂದು ಸರಿಯಾದ ಮಾಹಿತಿ ಒದಗಿಸದಿದ್ದರೇ, ಜೀವಕ್ಕೆ…
ದೀಪಕ್ ಶೆಟ್ಟಿ , ಕತಾರ್ | ಕುಂದಾಪ್ರ ಡಾಟ್ ಕಾಂ. ಲಾಕ್ಡೌನ್ ಬಳಿಕ ಮೊದಲನೇ ಬಾರಿಗೆ 178 ಪ್ರಯಾಣಿಕರೊಂದಿಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ದೋಹಾದಿಂದ ಮಂಗಳೂರಿಗೆ ಮುಟ್ಟಿದೆ. ಕಳೆದೆರಡು ತಿಂಗಳಿಂದ ಜಾತಕ ಪಕ್ಷಿಗಳಂತೆ ಕಾದು ಕುಳಿತಿದ್ದ ಮಂಗಳೂರಿನವರಿಗೆ ಒಂದು ತಾತ್ಕಾಲಿಕ ನೆಮ್ಮದಿ. ಇಂದು ಪಯಣಿಸಿದ ಎಲ್ಲರ ಮೊಗದಲ್ಲೂ ದೀಪಾವಳಿ, ಈದ್, ಕ್ರಿಸ್ಮಸ್ ಹಬ್ಬ ಆಚರಿಸಿದಷ್ಟಷ್ಟೆ ಸಂಭ್ರಮ. 40ಕ್ಕೂ ಅಧಿಕ ಗರ್ಭಿಣಿ ಹೆಂಗಸರು, ವಯೋವೃದ್ಧರು , ವಿದ್ಯಾರ್ಥಿಗಳು , ವೈದ್ಯಕೀಯ ಚಿಕಿತ್ಸೆಗೆ ಹೋಗ ಬೇಕಾಗಿರುವವರು , ಆರ್ಥಿಕ ಹಿನ್ನೆಡೆಯಿಂದ ಅತಂತ್ರ ಪರಿಸ್ಥಿತಿಯಲ್ಲಿರುವ ನಿರುದ್ಯೋಗಿಗಳು, ಆನ್ ಅರೈವಲ್ ಹಾಗು ಫ್ಯಾಮಿಲಿ ವೀಸಾ ದಲ್ಲಿ ಬಂದು ಸಿಕ್ಕಿಕೊಂಡಿರುವವರು. ಹೀಗೆ 178 ಜನ ಇಂದು ತಮ್ಮ ಮಾತ್ರ ಭೂಮಿಗೆ ತಲುಪಿದ್ದಾರೆ.ಜೂನ್ 4 ರಂದು ಭಾರತದ ವಿದೇಶಾಂಗ ಸಚಿವಾಲಯದಿಂದ ಹೊರಬಿದ್ದ ವಂದೇ ಭಾರತ್ ಮಿಷನ್ 2ನೇಯ ಹಂತದ ಪಟ್ಟಿ ಬಿಡುಗಡೆಗೊಂಡಾಗ ಕತಾರ್ ನಲ್ಲಿ ನೆಲೆಸಿರುವ ಕನ್ನಡಿಗರಿಗೆ ಶಾಕ್ ಆಗಿದ್ದಂತೂ ನಿಜ. ಅಪೇಕ್ಷೆಗೆ ಹಲವಾರು ಕಾರಣಗಳು ಇದ್ದವು. ಕತಾರ್ನಲ್ಲಿರುವ ಎಲ್ಲ ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗಡಿಭಾಗದಲ್ಲಿ ಚೀನಾದ ಕುಕೃತ್ಯದಿಂದಾಗಿ ಹುತಾತ್ಮರಾದ ಭಾರತದ ವೀರ ಯೋಧರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರಾರ್ಥನೆಯೊಂದಿಗೆ ಪುಷ್ಪಾರ್ಚನೆಗೈದು, ದೀಪನಮನದೊಂದಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬೈಂದೂರು ಬೈಪಾಸ್ ಬಳಿಕ ಗುರುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಸ್. ಮದನ್ ಕುಮಾರ್, ಕೆಪಿಸಿಸಿ ಸದಸ್ಯರಾದ ಪ್ರಕಾಶ್ಚಂದ್ರ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಎಸ್. ರಾಜು ಪೂಜಾರಿ, ಬ್ಲಾಕ್ ಕಾರ್ಯದರ್ಶಿ ನಾಗರಾಜ ಗಾಣಿಗ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ದೇವಾಡಿಗ, ಬೈಂದೂರು ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ ಉಪ್ಪುಂದ, ಅಲ್ಪಸ್ಂಖ್ಯಾತರ ಘಟಕ ಅಧ್ಯಕ್ಷ ತಬ್ರೇಜ್ ನಾಗೂರು, ಮಂಜುನಾಥ ಪೂಜಾರಿ, ಗಣೇಶ ಪೂಜಾರಿ, ಉಮೇಶ ದೇವಾಡಿಗ, ಮಣಿಕಂಠ ದೇವಾಡಿಗ, ವಿಜಯ್ ನಾಗೂರು, ಸುಬ್ರಹ್ಮಣ್ಯ ಪೂಜಾರಿ ಉಪ್ಪುಂದ, ಪ್ರಕಾಶ್ ಪೂಜಾರಿ, ಲಕ್ಷಣ ಬೈಂದೂರು ಸೇರಿದಂತೆ ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಜರಿದ್ದರು. ಇದನ್ನೂ ಓದಿ: ► ಉಡುಪಿ ಕೊರೋನಾ ಅಪ್ಡೇಟ್: ಒಟ್ಟು 946 ಮಂದಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.18ರ ಗುರುವಾರ ದೊರೆತಿರುವ ವರದಿಯಲ್ಲಿ ಯಾವುದೇ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ. 27 ಪರೀಕ್ಷಾ ವರದಿ ನೆಗಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಇಂದು 38 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 92 ಸಕ್ರಿಯ ಪ್ರಕರಣಗಳು ಉಳಿದಂತಾಗಿದೆ. ಈವರೆಗೆ ಒಟ್ಟು 1039 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 946 ಮಂದಿ ಬಿಡುಗಡೆಯಾಗಿದ್ದು, 92 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಒಂದು ಪ್ರಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾಯಿಸಲಾಗಿದೆ. ಓರ್ವ ಕೊರೋನಾ ಸೋಂಕಿತ ಗರ್ಭಿಣಿ ಮಹಿಳೆಗೆ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಸಿಸರಿಯೇನ್ ಮಾಡಲಾಗಿತ್ತು. ಜಿಲ್ಲೆಯಲ್ಲಿ ಆರಂಭದಲ್ಲಿ 3 ಪಾಸಿಟಿವ್ ಪ್ರಕಣಗಳಿದ್ದು, ಎಲ್ಲರೂ ಗುಣಮುಖರಾಗಿದ್ದರು. ಹೊರ ರಾಜ್ಯದವರು ಜಿಲ್ಲೆಗೆ ಆಗಮಿಸುವ ಸಮಯದಲ್ಲಿ ಗರಿಷ್ಠ ಪ್ರಕರಣ ದಾಖಲಾಗಿದ್ದು, ಜನರು ಆತಂಕ ಪಡುವಂತಾಗಿತ್ತು. ಆದರೆ ಅವರಲ್ಲಿ ಬಹುಪಾಲು ಮಂದಿಗೆ ಕೋವಿಡ್ ರೋಗದ…
