Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಶೇ 35 ರಷ್ಟು ಅಂಕ ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಡಿಪ್ಲೋಮಾ ಪ್ರವೇಶ ಮಾಡುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಅಥವಾ ಸಮೀಪ ಇರುವ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್ “ಸಹಾಯಕೇಂದ್ರ’’ ದಲ್ಲಿ ಪ್ರಾಂಶುಪಾಲರ, ಬೋಧಕ ಸಿಬ್ಬಂದಿಯವರ ನೇತೃತ್ವದಲ್ಲಿ ಆನ್ ಲೈನ್ ನಾನ್-ಇಂಟರಾಕ್ಟೀವ್ ಕೌನ್ಸಿಲಿಂಗ್ ಮೂಲಕ ಆಗಸ್ಟ್ 6 ರಿಂದ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಅರ್ಜಿಯನ್ನು https://dtetech.karnataka.gov.in/kartechnical ಮತ್ತು www.cetonline.karnataka.gov.in/kea  ವೆಬ್ ಸೈಟ್ ಮೂಲಕ ಸಲ್ಲಿಸಬಹುದು. ಆಗಸ್ಟ್ 22 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಉಡುಪಿ ಸಂಸ್ಥೆಯ ಪ್ರಾಚಾರ್ಯರನ್ನು (ದೂರವಾಣಿ ಸಂಖ್ಯೆ: 0820-2570244) ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮದ ಪ್ರಯುಕ್ತ ಭಾರತೀಯ ಜನತಾ ಪಕ್ಷದ ಗುಜ್ಜಾಡಿ ಸ್ಥಾನೀಯ ಸಮಿತಿ ವತಿಯಿಂದ ಗುಜ್ಜಾಡಿಯ ವಿವಿಧ ದೇವಾಲಯಗಳಲ್ಲಿ ಬುಧವಾರ ಬೆಳಿಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ರಾಮ ಮಂದಿರ ಶಿಲಾನ್ಯಾಸ ಸುಮುರ್ಹೂತದಲ್ಲಿ ಕಾರ್ಯಕ್ರಮದ ನೆನಪಿಗಾಗಿ ಬಿಜೆಪಿ ಕಾರ್ಯಕರ್ತರು ಗುಜ್ಜಾಡಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನ, ಬೆಣ್ಗೆರೆ ಶ್ರೀ ನಾಗ ದೇವಸ್ಥಾನ ಹಾಗೂ ಕೊಡಪಾಡಿಯ ಶ್ರೀ ಗುಹೇಶ್ವರ ದೇವಸ್ಥಾನದ ವಠಾರದಲ್ಲಿ ಬಿಲ್ವಪತ್ರೆ ಗಿಡವನ್ನು ನೆಟ್ಟು ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನೆರವೇರಲಿ ಪ್ರಾರ್ಥಿಸಿದರು. ಪುರೋಹಿತರಾದ ಜಿ.ವಸಂತ ಭಟ್, ಜಿ.ಅಜಿತ್ ಭಟ್, ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹರೀಶ ಮೇಸ್ತ, ಪಕ್ಷದ ಮುಖಂಡರಾದ ಶೇಖರ ದೇವಾಡಿಗ, ಮೋಹನ ನಾಯ್ಕ್ ಗುಜ್ಜಾಡಿ, ದೇವದಾಸ ಖಾರ್ವಿ, ರೋಹಿದಾಸ ನಾಯಕ್, ಶ್ರೀನಾಥ ಮೊಗವೀರ, ಪ್ರಶಾಂತ ನಾಯ್ಕ್, ಗುರುರಾಜ್ ಗಾಣಿಗ, ಅಶೋಕ ನಾಯ್ಕ್, ಗುಜ್ಜಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು, ಭಜಕರು ಮತ್ತಿತರರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಳೆದ ಮೂರು ದಿನಗಳಿಂದ ಸುರಿಯುತ್ತಿದ್ದ ಗಾಳಿ ಮಳೆಗೆ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ನದಿ ಪಾತ್ರದ ಪ್ರದೇಶಗಳಲ್ಲಿ ನೆರೆ ಕಾಣಿಸಿಕೊಂಡಿದ್ದು, ಅಲ್ಲಲ್ಲಿ ಹಾನಿ ಸಂಭವಿಸಿದೆ. ಮಂಗಳವಾರ ನಡುರಾತ್ರಿಯ ತನಕ ಏರುಗತಿಯಲ್ಲೇ ಇದ್ದ ಮಳೆ, ಗಾಳಿ ಆ ಬಳಿಕ ಕಡಿಮೆಯಾಗಿದೆ. ಬುಧವಾರ ಹಗಲು ದಟ್ಟ ಮೋಡವಿತ್ತಾದರೂ ಮಳೆ ಪ್ರಮಾಣ ಕಡಿಮೆ ಇತ್ತು. ಬಡಾಕೆರೆ, ನಾಡ ಕಡ್ಕೆ, ಪಡುಕೋಣೆ, ತೆಂಗಿನಗುಂಡಿ, ಸೇನಾಪುರ, ಕುಂಬಾರಮಕ್ಕಿ, ಕಟ್ಟು, ಹಕ್ಲಾಡಿ ಗ್ರಾಮದ ಬಟ್ಟೆಕುದ್ರು, ಯಳೂರು, ತಪ್ಲು ಪ್ರದೇಶದಲ್ಲಿ ನೆರೆಯಿಂದ ಆವೃತ್ತವಾಗಿತ್ತು. ಉಭಯ ತಾಲೂಕುಗಳ ಚಕ್ರಾ, ಸೌಪರ್ಣಿಕಾ, ವಾರಾಹಿ, ಕುಬ್ಜಾ. ಖೇಟಕಿ ನದಿಗಳು ತುಂಬಿ ಹರಿದಿತ್ತು. ವಿಪರೀತ ಗಾಳಿಗೆ ವಿದ್ಯುತ್ ಕಂಬಗಳು ಧರೆಗೆ ಉರುಳಿ ರಾತ್ರಿ ಭಾಗಶಃ ಬೈಂದೂರು ಕುಂದಾಪುರ ಕತ್ತಲಲ್ಲಿ ಕಳೆಯುವಂತಾಗಿತ್ತು. ಬುಧವಾರ ಮಧ್ಯಾಹ್ನದ ವೇಳೆಗೆ ಕೆಲವೆಡೆ ವಿದ್ಯುತ್ ಸಂಪರ್ಕ ಸರಿಪಡಿಸಲಾಗಿತ್ತು. ತಗ್ಗಿದ ಪ್ರವಾಹ: ನದಿಗಳಲ್ಲಿ ರಾತ್ರಿಯ ಬಳಿಕ ಪ್ರವಾಹದ ಮಟ್ಟ ಕುಸಿದಿದೆ. ಜಲಾವೃತಗೊಂಡ ನದಿಬದಿಯ ಮತ್ತು ನದಿ ನಡುವಿನ ದ್ವೀಪಗಳ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಒರಿಸ್ಸಾ ಮತ್ತು ಪಶ್ಚಿಮ ಬಂಗಾಳದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿಯೂ ಮುಂದಿನ 5 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ಕರಾವಳಿ ಜಿಲ್ಲೆಗಳಿಗೆ ಮೂರು ದಿನ ರೆಡ್ ಅಲರ್ಟ್ ಹಾಗೂ ಎರಡು ದಿನ ಎಲ್ಲೆ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 6, 9, 10 ವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ, ಆಗಸ್ಟ್ 7 ಮತ್ತು 8 ಕ್ಕೆ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳಿOದ ವಿಚಾರಣೆ ಉಡುಪಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸಂಭವಿಸಿರುವ ಹಾನಿ ಮತ್ತು ಪ್ತಸ್ತುತ ಸ್ಥಿತಿಗತಿಯ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು , ಜಿಲ್ಲಾಧಿಕಾರಿ ಜಿ.ಜಗದೀಶ್ ಅವರೊಂದಿಗೆ ಬುಧವಾರ ಸಂಜೆ ದೂರವಾಣಿಯಲ್ಲಿ ಮಾಹಿತಿ ಪಡೆದರು. ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಸಂಭವಿಸಿರುವ ಮನೆ ಹಾನಿ, ಬೆಳೆ ಹಾನಿ, ಜಾನುವಾರು ಹಾನಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.05ರ ಬುಧವಾರ 173 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 57, ಉಡುಪಿ ತಾಲೂಕಿನ 76 ಹಾಗೂ ಕಾರ್ಕಳ ತಾಲೂಕಿನ 39 ಮಂದಿಗೆ ಪಾಸಿಟಿವ್ ಬಂದಿದೆ. ಓರ್ವ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 99 ಪುರುಷರು, 74 ಮಹಿಳೆಯರು ಸೇರಿದ್ದಾರೆ. ಇಂದು 124 ಮಂದಿ ಬಿಡುಗಡೆಗೊಂಡಿದ್ದಾರೆ. ಉಡುಪಿ ತಾಲೂಕಿನ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. 1244 ನೆಗೆಟಿವ್: ಈ ತನಕ ಒಟ್ಟು 38053 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 31770 ನೆಗೆಟಿವ್, 5143 ಪಾಸಿಟಿವ್ ಬಂದಿದ್ದು, 1140 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1244 ನೆಗೆಟಿವ್, 173 ಪಾಸಿಟಿವ್ ಬಂದಿದೆ. ಒಟ್ಟು 1071 ಮಂದಿ ಹೋಮ್ ಕ್ವಾರಂಟೈನ್ ಹಾಗೂ 1140 ಮಂದಿ ಆಸ್ಪತ್ರೆ ಐಸೋಲೇಶನಿನಲ್ಲಿದ್ದಾರೆ. 2,027 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 5143 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 3072 ಮಂದಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಕತ್ತಲೆಕೋಣೆ ಕನ್ನಡ ಸಿನಿಮಾದ ಮೇಲೆ ಭೋಜಪುರಿ ನಿರ್ಮಾಪಕರು ಆಸಕ್ತಿ ತೋರಿಸಿ, ಭೋಜಪುರಿ ಭಾಷೆಯಲ್ಲಿ ಸಿನೆಮಾ ಬಿಡುಗಡೆಗೆ ಒಲವು ತೋರಿದ್ದಾರೆ. ಸಿನೆಮಾದಲ್ಲಿ ಪತ್ರಕರ್ತನೊರ್ವ ನೈಜ ಘಟನೆಯನ್ನು ಆಧರಿಸಿ ವರದಿಗೆ ತೆರಳುವ ಕಥೆ ಒಂದೆಡೆಯಾದರೆ, ಒರ್ವ ಬಾಲಕನ ಮುಗ್ದ ಮನಸ್ಸಿನ ಮೇಲೆ ಬೀಳುವ ಪರಿಣಾಮದಿಂದ ಆತ ಮಾನಸಿಕ ಖಿನ್ನತೆಗೆ ಒಳಗಾಗಿ ನರಳಾಡುವ ದೃಶ್ಯದ ನಿರೂಪಣೆ ಕಥೆಯ ಇನ್ನೊಂದು ಭಾಗ. ಇದೀಗ ಈ ಸಿನಿಮಾ ಮರಾಠಿಯಲ್ಲಿ ಮಾಡಲು ನಿರ್ಮಾಪಕರು ಸಿದ್ಧತೆ ನಡೆಸಿಕೊಂಡಿದ್ದು, ಭೋಜಪುರಿ ನಿರ್ಮಾಪಕರೊಬ್ಬರು ಸಿನಿಮಾವನ್ನ ಬಿಡುಗಡೆ ಮಾಡಲು ತಯಾರಿ ನಡೆಸುತ್ತಿದ್ದಾರೆ. ಸಿನಿಮಾ ನಿರ್ಮಾಪಕ ಪಿಆರ್ ಅಮೀನ್ ಹಾಗೂ ಭೋಜಪುರಿ ಭಾಷೆಯ ಸಿನೆಮಾ ನಿರ್ಮಾಪಕರ ನಡುವಿನ ಮಾತುಕತೆ ಇನ್ನಷ್ಟೇ ಬಾಕಿ ಇದೆ. ಅಂದುಕೊಂಡಂತೆ ನಡೆದರೆ ಕತ್ತಲೆ ಕೋಣೆ ಸಸ್ಪೆನ್ಸ್ ಥ್ರಿಲ್ಲರ್ ಹಾರರ್ ಸಿನಿಮಾ ಭೋಜಪುರಿ ಚಿತ್ರರಂಗದಲ್ಲಿ ಸದ್ದು ಮಾಡಲಿದೆ. ಕತ್ತಲೆಕೋಣೆ ಸಸ್ಪೆನ್ಸ್ ಥ್ರಿಲ್ಲರ್ ಹಾರರ್ ಸಿನಿಮಾವಾಗಿದ್ದು, 1998ರ ಸತ್ಯ ಘಟನೆಯನ್ನು ಒಳಗೊಂಡ ಉಡುಪಿ ಜಿಲ್ಲೆಯಲ್ಲಿ ನಡೆದ ಒಂದು ನೈಜ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸರ್ಕಾರದ ಮಾರ್ಗಸೂಚಿಯಂತೆ, ಕೋವಿಡ್-19 ನಿಯಂತ್ರಣದ ಸುರಕ್ಷಾ ಕ್ರಮಗಳನ್ನು ಅನುಸರಿಸಿ, ಅಜ್ಜರಕಾಡು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಸ್ವಾತಂತ್ರ್ಯ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಆಗಮಿಸುವವರನ್ನು ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಲು ಹಾಗೂ ಸ್ಯಾನಿಟೈಸರ್ ವ್ಯವಸ್ಥೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿ, ಕಾರ್ಯಕ್ರಮದಲ್ಲಿ ಸಾಮಾಜಿಕ ಅಂತರದಲ್ಲಿ ಆಸನ ವ್ಯವಸ್ಥೆ ಮತ್ತು ವೇದಿಕೆ ಮೇಲೆ ಸಹ ಸಾಮಾಜಿಕ ಅಂತರದಲ್ಲಿ ಗಣ್ಯರಿಗೆ ಆಸನ ವ್ಯವಸ್ಥೆ ಮಾಡುವಂತೆ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಡಿಸಿ ತಿಳಿಸಿದರು. ಕಾರ್ಯಕ್ರಮವನ್ನು ವೆಬ್ ಕಾಸ್ಟಿಂಗ್ ಮೂಲಕ ನೇರ ಪ್ರಸಾರ ಮಾಡುವುದು ಸೇರಿದಂತೆ ಫೇಸ್ ಬುಕ್ ಲೈವ್ ಹಾಗೂ ಆನ್ ಲೈನ್ ಮೂಲಕ ಸಾರ್ವಜನಿಕರಿಗೆ ನೇರವಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.04ರ ಮಂಗಳವಾರ 170 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 55, ಉಡುಪಿ ತಾಲೂಕಿನ 74 ಹಾಗೂ ಕಾರ್ಕಳ ತಾಲೂಕಿನ 39 ಮಂದಿಗೆ ಪಾಸಿಟಿವ್ ಬಂದಿದೆ. 2 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 109 ಪುರುಷರು, 61 ಮಹಿಳೆಯರು ಸೇರಿದ್ದಾರೆ. ಇಂದು 136 ಮಂದಿ ಬಿಡುಗಡೆಗೊಂಡಿದ್ದಾರೆ. 1352 ನೆಗೆಟಿವ್: ಈ ತನಕ ಒಟ್ಟು 36,200 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 30,526 ನೆಗೆಟಿವ್, 4,970 ಪಾಸಿಟಿವ್ ಬಂದಿದ್ದು, 704 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1352 ನೆಗೆಟಿವ್, 170 ಪಾಸಿಟಿವ್ ಬಂದಿದೆ. ಒಟ್ಟು 1,193 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ. 1,980 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 4,970 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,948 ಮಂದಿ ಬಿಡುಗಡೆಯಾಗಿದ್ದು, 1,980 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯೊಳಕ್ಕೆ ಕುಬ್ಜಾ ನದಿ ನೀರು ನುಗ್ಗಿದ್ದು, ವಾಡಿಕೆಯಂತೆ ದೇವಿಯ ಪಾದ ತೊಳೆದಿದೆ. ಈ ಸಂದರ್ಭ ಸುತ್ತಲೂ ಜಲಾವೃತವಾಗಿ ನೀರಿನ ಮಧ್ಯೆ ಕುಳಿತಿರುವ ದೇವಿಯನ್ನು ಕಂಡು ಭಕ್ತರು ಪುನೀತರಾದರು. ಕಳೆದೆರಡು ದಿನಗಳಿಂದ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಗಳವಾರ ಸಂಜೆಯ ವೇಳೆಗೆ ನದಿಯ ನೀರು ಉಕ್ಕಿ ಹರಿದಿದೆ. ದೇವಳದ ಗರ್ಭಗುಡಿ ಜಲಾವೃತ ಆಗುತ್ತಿದ್ದಂತೆ ದೇವಿಗೆ ಅರ್ಚಕರು ಆರತಿ ಬೆಳಗಿದರು. ವರ್ಷಕ್ಕೊಮ್ಮೆ ದೇವಿಗೆ ನೈಸರ್ಗಿಕ ಅಭಿಷೇಕವಾಗುತ್ತದೆ. ಕೊರೋನಾ ಕಾರಣದಿಂದ ಭಕ್ತರ ಸಂಖ್ಯೆ ವಿರಳವಾಗಿತ್ತು. ದೇವಳದ ಮೊಕ್ತೇಸರರು, ಅರ್ಚಕರು ಹಾಗೂ ಸಿಬ್ಬಂದಿಗಳು ಈ ಸಂದರ್ಭ ಉಪಸ್ಥಿತರಿದ್ದರು. ಕುಂದಾಪುರ ತಾಲೂಕಿನ ಕಮಲಶಿಲೆ ಹಚ್ಚಹಸಿರಿನ ಕಾಡಿನ ಮಧ್ಯಭಾಗದಲ್ಲಿ ಪವಿತ್ರವಾದ ಕುಬ್ಜೆ ಹರಿಯುತ್ತಿದ್ದು, ನದಿಯ ತಟದಲ್ಲಿ ಪ್ರಾಚೀನ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವಿದೆ.   

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಐಎಫ್‌ಎಸ್  ಬಿ. ಜಗನ್ನಾಥ ಶೆಟ್ಟಿ (96) ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಕೆಲ ದಿನಗಳಿಂದ  ಅನಾರೋಗ್ಯದಿಂದಿದ್ದ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿವೃತ್ತ ಐಎಫ್‌ಎಸ್ ಅಧಿಕಾರಿಯಾಗಿರುವ ಬಿ. ಜಗನ್ನಾಥ ಶೆಟ್ಟಿ ಅವರು ವೃತ್ತಿಯಲ್ಲಿದ್ದಾಗ ತಮ್ಮ ಸೇವಾ ಕೌಶಲ್ಯದಿಂದ ಉತ್ತಮ ಹೆಸರು ಗಳಿಸಿದ್ದಲ್ಲದೇ ಉನ್ನತ ಪದವಿಗೇರಿದ್ದರು. ಅವರು ಅರಣ್ಯ ಕಾನೂನಿನ ಬಗೆಗೆ ಬರೆದ ಪುಸ್ತಕವು ಕಾಲೇಜಿನ ಅರಣ್ಯಶಾಸ್ತ್ರ ವಿಭಾದಲ್ಲಿ ಪಠ್ಯವಾಗಿತ್ತಲ್ಲದೇ ಎಲ್ಲಾ ಅರಣ್ಯ ಇಲಾಖೆಗಳಲ್ಲಿ ಆಧಾರ ಗ್ರಂಥವಾಗಿ ಲಭ್ಯವಿದೆ. 1992ರ ಭಾರತೀಯ ಅರಣ್ಯ ಕಾನೂನು ತಿದ್ದುಪಡಿ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಅವರು ಬೈಂದೂರಿನಲ್ಲಿ ನೆಲೆಸಿ ತಮ್ಮನ್ನು ಸಂಪೂರ್ಣ ಸಾಮಾಜಿಕವಾಗಿ ತೊಡಗಿಸಿಕೊಂಡರು. ೧೯೮೪ರಿಂದ ೧೯೮೭ರ ವರೆಗೆ ಬೈಂದೂರು ರೋಟರಿ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಮುಂದೆ ರೋಟರಿ ಜಿಲ್ಲಾ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು. 1992ರಲ್ಲಿ ಇವರ ಮುಂದಾಳತ್ವದಲ್ಲಿ ನಿರ್ಮಾಣಗೊಂಡ ರೋಟರಿ ಸಮುದಾಯ ಭವನ ಇಂದು ಹತ್ತಾರು ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕೆ…

Read More