ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕುಂದಾಪುರ ಹಾಗೂ ಕಾರ್ಕಳ ಸಾರ್ವಜನಿಕ ಕೋವಿಡ್ ಆಸ್ಪತ್ರೆಯಲ್ಲಿ ಪ್ರಸ್ತುತ ಸಾಲಿನ ಸೆಪ್ಟಂಬರ್ರಗೆ ಕೋವಿಡ್ 19 ರ ಕರ್ತವ್ಯ ನಿರ್ವಹಿಸಲು ಶುಶ್ರೂಷಕಿಯರ – 16 ಹುದ್ದೆ ಹಾಗೂ ಗ್ರೂಪ್ ಡಿ-21 ಹುದ್ದೆಯ ನೇಮಕಾತಿಗೆ ನೇರ ಸಂದರ್ಶನವು ಏಪ್ರಿಲ್ 21ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿಯಲ್ಲಿ ನಡೆಯಲಿದೆ. ಶುಶ್ರೂಷಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಕರ್ನಾಟಕ ನರ್ಸಿಂಗ್ ಕೌನ್ಸಿಲ್ನಲ್ಲಿ ಕಡ್ಡಾಯವಾಗಿ ನೊಂದಾವಣೆ ಆಗಿರಬೇಕು. ಗ್ರೂಪ್ ಡಿ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ನೇಮಕಾತಿ ಸಂದರ್ಶನಕ್ಕೆ ವಿದ್ಯಾರ್ಹತೆಯ ಮೂಲ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶಿವರಾಜ್ ಪೂಜಾರಿ ಇವರ ಚಿಕಿತ್ಸಾ ವೆಚ್ಚದ ಸಹಾಯಾರ್ಥವಾಗಿ ಕಡಿಕೆ ಆಚರಬೇಟ್ಟು ವಕ್ಕೇರಿ ಫ್ರೆಂಡ್ಸ್ ಇವರ ವತಿಯಿಂದ ದ್ವೀತಿಯ ವರ್ಷದ ಸೂಪರ್ ಸಿಕ್ಸ್ ಮಾದರಿಯ ಯುನೈಟೆಡ್ ಟ್ರೋಫಿ 2021 ಕ್ರಿಕೆಟ್ ಪಂದ್ಯಾಟ ಕಡಿಕೆ ಕಂಬಳಗದ್ದೆ ನಾಡದಲ್ಲಿ ನಡೆಯಿತು. ಫೈನಲ್ ಪಂದ್ಯಾಟದಲ್ಲಿ ಎಕದಂಥ ಹರೇಗೋಡ್ ನ್ನು ಸೋಲಿಸಿ ಹಕ್ಲಾಡಿ ಅಟ್ಯಾಕರ್ಸ್ ಪ್ರಶಸ್ತಿಯನ್ನು ಜಯಸಿತು
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಖಾಲಿ ಇರುವ ಯೋಜನಾ ನಿರ್ದೇಶಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಯು 1 ವರ್ಷದ ಕರಾರಿನ ಆಧಾರದ ಮೇಲಿದ್ದು, ಆಯ್ಕೆಯಾದ ಸಿಬ್ಬಂದಿಗಳಿಗೆ ಮಾಸಿಕ ರೂ.19,965 ಗೌರವಧನ ನೀಡಲಾಗುವುದು. ವಿದ್ಯಾರ್ಹತೆ: ಸಮಾಜ ಶಾಸ್ತçದಲ್ಲಿ ಸ್ನಾತಕೋತ್ತರ ಪದವಿ/ ಎಮ್.ಎಸ್.ಡಬ್ಲೂ/ ಅಭಿವೃದ್ಧಿ ಅಧ್ಯಯನ/ ಲಾಭರಹಿತ ಸಂಸ್ಥೆಗಳ (ಎನ್.ಜಿ.ಓ) ನಿರ್ವಹಣಾ ಶಾಸ್ತ ಸ್ನಾತಕೋತ್ತರ ಪದವಿಯನ್ನು ಹೊಂದಿರುವ 40 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಯನ್ನು ಬಿಳಿ ಹಾಳೆಯಲ್ಲಿ, ಸ್ವವಿವರಗಳನ್ನು ನಮೂದಿಸಿದ ಬಯೋಡಾಟ, ಅಂಕಪಟ್ಟಿ, ಅನುಭವ ಪ್ರಮಾಣ ಪತ್ರದೊಂದಿಗೆ ಜಿಲ್ಲಾಧಿಕಾರಿಗಳು ಮತ್ತು ಅಧ್ಯಕ್ಷರು ಜಿಲ್ಲಾ ಬಾಲಕಾರ್ಮಿಕರ ಯೋಜನಾ ಸಂಘ ಉಡುಪಿ, ಇವರ ಹೆಸರಿಗೆ ಅರ್ಜಿ ಬರೆದು, ಸದರಿ ಅರ್ಜಿಯನ್ನು ಕಾರ್ಮಿಕ ಅಧಿಕಾರಿ/ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಛೇರಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಏಪ್ರಿಲ್ 30ರ ಒಳಗೆ ಸಲ್ಲಿಸುವಂತೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವ ಭಾರತದ ನಿರ್ಮಾಣದಲ್ಲಿ ಅಂಬೇಡ್ಕರ್ ಅವರ ಕೊಡುಗೆ ದೊಡ್ಡದಿದೆ. ಅವರು ಕೇವಲ ಶೋಷಿತ ಸಮುದಾಯದ ನಾಯಕರಾಗಿರದೇ ವಿಶ್ವವೇ ಮೆಚ್ಚಿದ ನಾಯಕರಾಗಿದ್ದಾರೆ. ಅವರು ಸಂವಿಧಾನ ರಚಿಸುವಾಗ ಯಾವುದೇ ಸಮುದಾಯವನ್ನು ತಾರತಮ್ಯದಿಂದ ನೋಡದೇ ಎಲ್ಲರಿಗೂ ಸಮಾನ ಹಕ್ಕುಗಳನ್ನು ನೀಡಿದ್ದರು. ದಮನಿತರು, ಶೋಷಣೆಗೆ ಒಳಗಾದವರು, ಧ್ವನಿ ಇಲ್ಲದವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿದ್ದರು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಪ್ರಧಾನ ಸಂಘಟನಾ ಸಂಚಾಲಕ ಟಿ. ಮಂಜುನಾಥ ಗಿಳಿಯಾರು ಹೇಳಿದರು. ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಬೈಂದೂರು ತಾಲೂಕು ಶಾಖೆ ನೇತೃತ್ವದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮಹಿಳಾ ಸಂಘ ಬೈಂದೂರು ಹಾಗೂ ದಸಂಸ ಮಹಿಳಾ ಘಟಕದ ಆಶ್ರಯದಲ್ಲಿ ಶನಿವಾರ ಆಯೋಜಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 130ನೇ ಜನ್ಮ ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿ, ದೇಶದ ಕೋಟಿ ಕೋಟಿ ಜನರಿಗೆ ಗೌರವಯುತವಾದ ಬದುಕನ್ನು ಕಲ್ಪಿಸಿಕೊಟ್ಟ ಅಂಬೇಡ್ಕರ್ ಅವರನ್ನು ಇಂದಿಗೂ ಕೆಲವು ಸ್ಥಾಪಿತ ಮನಸ್ಸುಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಂಬೇಡ್ಕರ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: 2010ರಲ್ಲಿ ಹೆದ್ದಾರಿ ವಿಸ್ತರಣೆ ಆರಂಭವಾಗಿದ್ದು, 910 ದಿನದಲ್ಲಿ ಮುಗಿಯಬೇಕಿದ್ದ ಕಾಮಗಾರಿ ಒಂದು ದಶಕ ಕಳೆದರೂ ಪೂರ್ಣವಾಗಿಲ್ಲ. ಸದ್ಯ ತರಾತುರಿಯಲ್ಲಿ ಪ್ಲೈಓವರ್, ಅಂಡರ್ಪಾಸ್ ಕಾಮಗಾರಿ ಮುಗಿಸಿ ಗುತ್ತಿಗೆದಾರರು ಕಾಲು ಕೀಳಲಿದ್ದು, ಕುಂದಾಪುರದ ನಾಗರಿಕರು ಎಚ್ಚೆತ್ತುಕೊಳ್ಳದಿದ್ದರೆ ರಾಷ್ಟ್ರೀಯ ಹೆದ್ದಾರಿ ಖಾಯಂ ಸಮಸ್ಯೆಯ ಆಗರವಾಗಲಿದೆ ಕಲಾಕ್ಷೇತ್ರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಎಚ್ಚರಿಸಿದ್ದಾರೆ. ಇಲ್ಲಿನ ಆರ್.ಎನ್. ಶೆಟ್ಟಿ ಸಭಾಂಗಣದಲ್ಲಿ ಶನಿವಾರ ಕುಂದಾಪುರ ಹೆದ್ದಾರಿ ಹೋರಾಟ ಸಮಿತಿ ಆಯೋಜಿಸಿದ ಹೆದ್ದಾರಿ ಸಮಸ್ಯೆಗಳ ಪರಿಹಾರಕ್ಕಾಗಿ ಹತ್ಕೊತ್ತಾಯ ಸಭೆಯಲ್ಲಿ ಮಾತನಾಡಿ, ಕುಂದಾಪುರದ ನಗರ ಭಾಗದಲ್ಲಿ ಹೆದ್ದಾರಿ ಸಂಚಾರ ಗೊಂದಲದ ಗೂಡಾಗಿದೆ. ಪ್ಲೈಓವರ್ನ ಹೊಸ ರಸ್ತೆ ಸಂಚಾರ ಅಪಾಯದ ಮುನ್ಸೂಚನೆ ನೀಡುತ್ತಿದೆ. ಮಳೆಗಾಲದಲ್ಲಿ ಮಳೆನೀರು ಹರಿಯಲು ಸುಗಮ ಮಾರ್ಗವಿಲ್ಲ. ಪಾದಾಚಾರಿ ಮಾರ್ಗವೂ ಅವ್ಯವಸ್ಥಿತ. ಇವೆಲ್ಲದಕ್ಕೂ ಗುತ್ತಿಗೆ ಕಂಪೆನಿ ಕಾಮಗಾರಿ ಮುಗಿಸಿ ಹೊರಡುವ ಮೊದಲು ಪರಿಹಾರ ಕಂಡುಕೊಳ್ಳಬೇಕಿದೆ ಎಂದರು. ಹೆದ್ದಾರಿ ಹೋರಾಟ ಸಮಿತಿ ಅಧ್ಯಕ್ಷ ಸೋಮಶೇಖರ ಶೆಟ್ಟಿ ಮಾತನಾಡಿ, ಹೆದ್ದಾರಿ ವಿಸ್ತರಣೆ ಗುತ್ತಿಗೆದಾರರು ರಸ್ತೆ ಅಭಿವೃದ್ಧಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿ.ಎ.ಎಂ.ಎಸ್ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ನಡೆದಿದೆ. ಉಪ್ಪಂದದ ರಕ್ಷಿತಾ (22) ಮೃತ ದುರ್ದೈವಿ. ರಕ್ಷಿತಾ ಉದ್ಯಾವರದ ಆಯುರ್ವೇದಿಕ್ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಎ.ಎಮ್.ಎಸ್ ವ್ಯಾಸಂಗ ಮುಗಿಸಿ ಒಂದು ವಾರದ ಹಿಂದೆ ಮನೆಗೆ ಬಂದಿದ್ದು ಶುಕ್ರವಾರ ರಾತ್ರಿ ಬಿ.ಇ.ಎಮ್.ಎಸ್ ಅಂತಿಮ ವರ್ಷದ ಫಲಿತಾಂಶವನ್ನು ಆನ್’ಲೈನ್ ಮೂಲಕ ಮನೆಯವರೊಂದಿಗೆ ಸೇರಿ ನೋಡಿದ್ದಳು. ಈ ವೇಳೆ ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿದ್ದುದು ತಿಳಿದುಬಂದಿದ್ದು ಮನನೊಂದು ಬೇಸರದಲ್ಲಿ ರಾತ್ರಿ ಸುಮಾರು 2 ಗಂಟೆಗೆ ಹೊತ್ತಿಗೆ ಮಲಗಿಕೊಂಡಿದ್ದಳು. ಬೆಳಿಗ್ಗೆ 06:30ರ ಸುಮಾರಿಗೆ ಮನೆಯವರು ಎದ್ದು ನೋಡಿದಾಗ ರಕ್ಷಿತಾ ಇಲ್ಲದೇ ಇದ್ದುದ್ದರಿಂದ ಹುಡುಕಾಟ ನಡೆಸಿದ್ದರು. ಬಳಿಕ ಮನೆಯ ಎದುರಿನ ಬಾವಿಯಲ್ಲಿ ರಕ್ಷಿತಾ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದವರನ್ನು ಕರೆಯಿಸಿ ಮೃತ ಶರೀರವನ್ನು ಮೇಲಕ್ಕೆತ್ತಲಾಯಿತು. ರಕ್ಷಿತಾ ಬಿ.ಇ ಎಮ್.ಎಸ್ ಫಲಿತಾಂಶದಲ್ಲಿ ಒಂದು ವಿಷಯದಲ್ಲಿ ಅನುತ್ತೀರ್ಣಳಾದ ಬಗ್ಗೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಬೈಂದೂರು ಪೊಲೀಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಿರಿಯ ಸಾಹಿತಿಗಳು, ಮಾಣಿಕ್ಯ ವಿಠಲ ಎಂಬ ಕಾವ್ಯನಾಮದಿಂದ ಭಕ್ತಿ ಗೀತೆಗಳನ್ನು ರಚಿಸಿ ಆಧುನಿಕ ದಾಸ ಎಂದು ಹೆಸರು ಪಡೆದ ಬಿದರ್ನ ಡಾ. ಮಾಣಿಕರಾವ್ ಗೋವಿಂದರಾವ್ ದೇಶಪಾಂಡೆ ಇವರು ನಾವುಂದ ಶ್ರೀ ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗರಡಿಯ ಬಲ್ಲಾಳಿ ಚಂದ್ರಶೇಖರ ಶೆಟ್ಟಿ, ಗರಡಿ ಮನೆಯವರಾದ ಆಡಳಿತ ಮೋಕ್ತೇಸರಾದ ಶೇಖರ್ ಪೂಜಾರಿ ಶಾಲು ಹೊದಿಸಿ ಗರಡಿಯ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಟ್ರಷ್ಟಿಗಳಾದ ಎನ್ ಕೆ ಬಿಲ್ಲವ, ಆರ್ ಕೆ ಬಿಲ್ಲವ, ಮುತ್ತ ಬಿಲ್ಲವ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಉಪ ಚುನಾವಣಾ ಪ್ರಚಾರ ಮುಗಿಯುವ ತನಕ ಕರೋನಾ ಮಾರ್ಗಸೂಚಿಯನ್ನು ತಮಗೆ ಅನುಕೂಲವಾಗುವ ರೀತಿಯಲ್ಲಿ ಪ್ರಕಟಿಸಿಕೊಂಡು , ಉಪ ಚುನಾವಣಾ ಪ್ರಚಾರ ಮುಗಿಯುತ್ತಿದ್ದಂತೆ ತಮ್ಮ ಮನಸ್ಸಿಚ್ಚೆಯಂತೆ ಮಾರ್ಗಸೂಚಿ ಪ್ರಕಟಿಸಿತ್ತಿರುವುದು ಖಂಡನಾರ್ಹ ಎಲ್ಲಾ ಆಚರಣೆಗೆ ,ರಾಜಕೀಯ ಸಭೆಗೆ ಅವಕಾಶ ಮಾಡಿ ಕೊಟ್ಟು ಕೇವಲ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಆಚರಣೆಗಳನ್ನು ನಿಷೇಧಿಸಿರುವುದು ತೀವ್ರ ಖಂಡನೀಯ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ ಶೆಟ್ಟಿ ಆರೋಪಿಸಿದ್ದಾರೆ. ಕಳೆದ ವರ್ಷದ ಲಾಕ್ ಡೌನ್ ಕಾರಣದಿಂದ ಕರಾವಳಿ ಭಾಗದಲ್ಲಿ ಎಪ್ರಿಲ್, ಮೇ ತಿಂಗಳಲ್ಲಿ ನಡೆಯುವ ದೈವ ,ದೇವರುಗಳ ಎಲ್ಲಾ ಆಚರಣೆಗಳು ರದ್ದುಗೊಂಡಿದ್ದವು. ಈ ಬಾರಿ ದಿನಾಂಕ 16-4-2021 ರಂದು ಹೊರಡಿಸಿರುವ ಮಾರ್ಗ ಸೂಚಿಯಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಸೀಮಿತ ಜನರಿಗೆ ಅವಕಾಶ ಮಾಡಿಕೊಟ್ಟು ,ಕೇವಲ ಧಾರ್ಮಿಕ ಕಾರ್ಯಕ್ರಮಗಳು ಮತ್ತು ಆಚರಣೆಗಳನ್ನು ನಿಷೇಧಿಸಿರುವುದು ಸರಿಯಾದ ಕ್ರಮವಲ್ಲ. ಹಿಂದೆ ಇಂತಹ ಮಾರಕ ರೋಗಗಳು ಬಂದಾಗ ಋುಷಿ ಮುನಿಗಳು , ಸ್ವಾಮಿಜಿಗಳು ಹೋಮ ಹವನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ಪೋರ್ಟ್ಸ್ ಕನ್ನಡ ವತಿಯಿಂದ ಕರ್ನಾಟಕ ರಾಜ್ಯ ಹಿರಿಯ ಕ್ರಿಕೆಟಿಗರ ಸಮಾಗಮ 40ರ ಮೇಲ್ಪಟ್ಟ ವಯೋಮಿತಿಯ ಕ್ರಿಕೆಟ್ ಹಿರಿಯ ಕ್ರಿಕೆಟಿಗರಾದ ದಿ. ಪ್ರತಾಪ್ ಚಂದ್ರ ಹೆಗ್ಡೆ ಸ್ಮರಣಾರ್ಥ ಲೆಜೆಂಡ್ಸ್ ಕಪ್ 2021 ಮೂರು ದಿನಗಳ ಕಾಲ ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟ ಬೈಂದೂರಿನ ಯುವ ಕ್ರಿಕೆಟ್ ಪ್ರೋತ್ಸಾಹಕ ರಾಜೇಶ್ ಆಚಾರ್ ಬೈಂದೂರು ಇವರನ್ನು ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರಿನ ಜ್ಯೋತಿಷಿ ಡಾ ಮಹೇಂದ್ರ ಭಟ್, ದಿವಂಗತ ಪ್ರತಾಪ್ ಚಂದ್ರ ಹೆಗ್ಡೆ ಅವರ ಧರ್ಮಪತ್ನಿ ವೇದಾವತಿ ಹೆಗ್ಡೆ ಸಂತೆಕಟ್ಟೆ, ಮಗಳು ಆರುಂಧತಿ ಪಿ ಹೆಗ್ಡೆ ಉಡುಪಿ, ಬೆಂಗಳೂರು ಕೆಪಿಸಿಸಿ ಸದಸ್ಯ ಪಿ.ಎನ್. ಕೃಷ್ಣಮೂರ್ತಿ, ಕುಂದಾಪುರ ಟಾರ್ಪೋಡೇಸ್ ಸಂಸ್ಥಾಪಕ ಗೌತಮ್ ಶೆಟ್ಟಿ, ಬನ್ನಂಜೆ ಪ್ಯಾರಡೈಸ್ ಶ್ರೀಧರ್ ಶೆಟ್ಟಿ, ಬೈಂದೂರು ವಿಕ್ರಂ ಕ್ರಿಕೆಟ್ ಕ್ಲಬ್ ಹಿರಿಯ ಆಟಗಾರ ಗಿರೀಶ್ ಬೈಂದೂರು, ಮಾನವ ಹಕ್ಕು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ನವದೆಹಲಿ ಇದರ ಕರ್ನಾಟಕ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಿಯ ಸನ್ನಿ ಧಿಯಲ್ಲಿ ಬಳ್ಳಾರಿಯ ಮುಸ್ಲಿಂ ಕುಟುಂಬವೊಂದು ಕಳೆದ ಹಲವು ವರ್ಷಗಳಿಂದ ವರ್ಷ ಕ್ಕೊಮ್ಮೆ ಚಂಡಿಕಾಹೋಮ ನೆರವೇರಿಸುವ ಮೂಲಕ ಗಮನ ಸೆಳೆದಿದೆಯಲ್ಲದೇ ಭಕ್ತಿ, ಶ್ರದ್ಧೆಯಿಂದ ಈ ಸೇವೆಯನ್ನು ನೀಡುತ್ತಿದೆ. ಬಳ್ಳಾರಿ ಸನಿಹದ ಗ್ರಾಮವೊಂದರ ನಿವಾಸಿ ಗುತ್ತಿಗೆದಾರ ಎಚ್. ಇಬ್ರಾಹಿಂ, ಸಾಜುದ್ದೀನ್ ಹಾಗೂ ಜರೀನಾ ಅವರ ಕುಟುಂಬದವರು ಹಲವು ವರ್ಷಗಳಿಂದ ಕೊಲ್ಲೂರಿಗೆ ಆಗಮಿಸಿ ಶ್ರೀದೇವಿಯ ದರ್ಶನ, ವಿಶೇಷ ಪೂಜೆ ಮತ್ತು ಚಂಡಿಕಾಹೋಮ ನೆರವೇರಿಸುತ್ತಿದ್ದಾರೆ. ಹಿರಿಯರ ಸೇವೆ, ತಾಯಿ ಮೂಕಾಂಬಿಕೆಯ ಅನುಗ್ರಹದಿಂದಾಗಿ ಬದುಕಿನಲ್ಲಿ ಶ್ರೇಯಸ್ಸಾಗಿದೆ ಎಂಬ ನಂಬಿಕೆಯೊಂದಿಗೆ ಇದೀಗ ಈ ಕುಟುಂಬದ ಕಿರಿಯ ಪುತ್ರ ಮನ್ಸೂರ್ ಹಾಗೂ ಅವರ ಪತ್ನಿ ಮಕ್ಕಳು ಕಳೆದ 5 ವರ್ಷಗಳಿಂದ ವರ್ಷಕ್ಕೊಮ್ಮೆ ಇಲ್ಲಿ ಚಂಡಿಕಾಹೋಮ ನಡೆಸುತ್ತಿದ್ದಾರೆ. ಎಲ್ಲಾ ದೇವರು ಕೂಡ ಒಂದೇ. ತಾಯಿ ಮೂಕಾಂಬಿಕೆಯ ಸನ್ನಿಧಿಯಲ್ಲಿ ಚಂಡಿಕಾಹೋಮ ನಡೆಸುವ ಮೂಲಕ ಆತ್ಮಸಂತೃಪ್ತಿ ಹೊಂದಿದ್ದೇವೆ. ಕ್ಷೇತ್ರದಲ್ಲಿ ವಿಶೇಷ ಶಕ್ತಿ ಇದೆ. – ಮನ್ಸೂರ್, ಕೊಲ್ಲೂರು ದೇವಳದ ಭಕ್ತ
