Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಂಬದಕೋಣೆ ತಾಲೂಕಿನ ಹಳಗೇರಿಯ ಜಾಗವನ್ನು ಕೈಗಾರಿಕಾ ವಲಯವಾಗಿ ಅಭಿವೃದ್ಧಿಪಡಿಸಿ ಸೀಪುಡ್ ಪಾರ್ಕ್ ಮಾಡುವುದನ್ನು ವಿರೋಧಿಸಿ ನಾಗೂರಿನಲ್ಲಿ ಗುರುವಾರ ಹಮ್ಮಿಕೊಂಡ ‘ಪರಿಸರ ರಕ್ಷಿಸಿ ಜೀವನ ಉಳಿಸಿ’ ಅಭಿಯಾನ ಉದ್ಘಾಟನೆಗೊಂಡಿತು. ಮುಂಬೈನ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಸಂಸ್ಥಾಪಕ ತೋನ್ಸೆ ಜಯಕರ್ ಶೆಟ್ಟಿ ಅಭಿಯಾನ ಉದ್ಘಾಟಿಸಿ ಮಾತನಾಡಿ ಉಡುಪಿ ಜಿಲ್ಲೆಗೆ ಹೆಚ್ಚು ಕೈಗಾರಿಕೆಗಳನ್ನು ತರುವ ಬಗ್ಗೆ ನಮ್ಮ ವಿರೋಧವಿಲ್ಲ. ಆದರೆ ಪರಿಸರ, ಜನಜೀವನ ನಾಶ ಮಾಡಿ ಕೈಗಾರಿಕೆ ಸ್ಥಾಪಿಸುವುದು ಖಂಡನಾರ್ಹ. ಕೈಗಾರಿಕಾ ವಲಯದ ಜಾಗವನ್ನು ವೈಜ್ಞಾನಿಕವಾಗಿ ಆಯ್ದುಕೊಳ್ಳುವುದು ಬಹುಮುಖ್ಯ ಎಂದರು. ಹಳಗೇರಿಯಲ್ಲಿ ಕೈಗಾರಿಕಾ ವಲಯದ ನಿರ್ಧಾರದಿಂದ ಪರಿಸರ ಹಾಗೂ ಸುಮಾರು ಎಂಟು ಗ್ರಾಮಗಳ ಜನರಿಗೆ ತೊಂದರೆಯಾಗಲಿದೆ ಸಮಿತಿಯವರು ಮನಗಂಡಿದ್ದು, ಇದರಿಂದಾಗುವ ತೊಂದರೆಗಳ ಬಗ್ಗೆ ಸರ್ಕಾರಕ್ಕೆ ತಿಳಿಸಲಾಗುವುದು. ನೊಂದ ಜನರಿಗೆ ನ್ಯಾಯ ಒದಗಿಸಬೇಕೇಂಬ ನೆಲೆಯಲ್ಲಿ ಸಮಾನ ಮನಸ್ಕರು ಒಂದಾಗಿ ಸ್ಥಾಪಿಸಿದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಪ್ರಗತಿಪರ ಚಿಂತಕರ ಚಾವಡಿಯಾಗಿದೆ. ನಮ್ಮ ಹೋರಾಟ ಸ್ವ-ಹಿತಾಸಕ್ತಿಗಾಗಿ ಅಥವಾ ವೈಯಕ್ತಿಕವಾಗಿರದೇ ಸಾಮಾಜಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ.ಮಾ.10: ಕ್ಷುಲ್ಲಕ ಕಾರಣಕ್ಕೆ ಲಾರಿ ಚಾಲಕನಿಗೆ ಕಾರು ಚಾಲಕನೋರ್ವ ಹಲ್ಲೆಗೈದ ಘಟನೆ ತಾಲೂಕಿನ ಅಸೋಡು ಎಂಬಲ್ಲಿ ನಡೆದಿದೆ. ಮಾ.4ರಂದು ಈ ಘಟನೆ ನಡೆದಿದ್ದು, ಇಂದು ವಿಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕೋಟೇಶ್ವರ ಹಾಲಾಡಿ ರಸ್ತೆಯಲ್ಲಿ ನ್ಯಾಯ ಬೆಲೆ ಅಂಗಡಿಗಳಿಗೆ ಅನ್ನಭಾಗ್ಯದ ಅಕ್ಕಿ ಸಾಗಾಟ ಮಾಡುವ ಲಾರಿ ಚಾಲಕ ಮಹಮ್ಮದ್ ಇಸಾಕ್ ಎಂಬುವವರಿಗೆ, ಅಸೋಡು ನಂದಿಕೇಶ್ವರ ದೈವಸ್ಥಾನದ ಕಮಾನು ಬಳಿ ರಿಟ್ಸ್ ಕಾರಿನ ಚಾಲಕ ತನ್ನ ಕಾರನ್ನು ಅಡ್ಡ ತಂದು ನಿಲ್ಲಿಸಿ ಏಕಾಏಕಿ ಹಲ್ಲೆಗೈದಿದ್ದಾನೆ. ಸಾರ್ವಜನಿಕರು ತಡೆಯುತ್ತಿದ್ದರೂ ಕಾರು ಚಾಲಕ ಲಾರಿ ಚಾಲಕನಿಗೆ ಹಲ್ಲೆಗೈದಿರುವ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಎನ್.ಸಿ.ಸಿ., ಎನ್.ಎಸ್.ಎಸ್., ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕುಂದಾಪುರ, ಲಯನ್ಸ್ ಕ್ಲಬ್ ಕುಂದಾಪುರ, ಜೈ ಕುಂದಾಪುರ ಸೇವಾ ಟ್ರಸ್ಟ್-ಕುಂದಾಪುರ ಇವರ ಆಶ್ರಯದಲ್ಲಿ ರಕ್ತದಾನ ಶಿಬಿರ ಜರಗಿತು. ಇಂಡಿಯನ್ ರೆಡ್‌ಕ್ರಾಸ್ ಘಟಕದ ಚೇರ್‌ಮನ್ ಜಯಕರ್ ಶೆಟ್ಟಿ ಶಿಬಿರವನ್ನು ಉದ್ಘಾಟಿಸಿದರು, ಕಾರ್ಯದರ್ಶಿಗಳಾದ ಸೀತಾರಾಮ್ ಶೆಟ್ಟಿ, ಜನೌಷಧಿ ಉಸ್ತುವಾರಿ ಗಣೇಶ್ ಆಚಾರ್, ಸದಸ್ಯರಾದ ಮುತ್ತಯ್ಯ ಶೆಟ್ಟಿ, ಡಾ. ಸೋನಿ, ಲಯನ್ಸ್ ಕ್ಲಬ್ ಕುಂದಾಪುರದ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕಲ್ಪತರು, ಸದಸ್ಯರಾದ ನವೀನ್ ಶೆಟ್ಟಿ, ಜೈ ಕುಂದಾಪುರ ಸೇವಾ ಟ್ರಸ್ಟ್ ಅಧ್ಯಕ್ಷರಾದ ಪುಂಡಲೀಕ ಮೊಗವೀರ ಮತ್ತು ತಂಡದವರು, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ, ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶ್ಯಾನುಭೋಗ್, ಸಹ ಸಂಯೋಜಕಿ ಮಾಲತಿ ಕುಂದರ್, ಎನ್.ಸಿ.ಸಿ. ಘಟಕದ ಸಂಯೋಜಕರಾದ ಶಿವರಾಜ್ ಸಿ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೃಂದಾವನ ಸಂಜೀವಿನಿ ಒಕ್ಕೂಟ ವಂಡ್ಸೆ ಗ್ರಾಮ ಪಂಚಾಯತ್‌ನಲ್ಲಿ ಇಂದು ಮಹಾತ್ಮಗಾಂಧಿ ಸಭಾಭವನದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು. ವಂಡ್ಸೆ ಪಂಚಾಯಿತಿ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರೂಪ ಗೋಪಿ, ಒಕ್ಕೂಟದ ಅಧ್ಯಕ್ಷೆ ಆಶಾ ಟಿ., ಸ್ತ್ರೀಶಕ್ತಿ ಅಧ್ಯಕ್ಷೆ ಜುಲೇಖಾ, ಗ್ರಾ.ಪಂ. ಸದಸ್ಯ ಗೋವರ್ಧನ ಜೋಗಿ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ, ಜಯಂತಿ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಎಂ.ಬಿ.ಕೆ ಮತ್ತು ಎಲ್.ಸಿ.ಆರ್.ಪಿ ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕೃಷಿಕರು, ಪ್ರಸೂತಿ ತಜ್ಞೆ ಸಿಂಗಾರಿ ಶೆಟ್ಟಿ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಪಾರ್ವತಿ ಪಟಗಾರ್, ಅಂಗನವಾಡಿ ಕಾರ್ಯಕರ್ತೆ ಪೂರ್ಣಿಮಾ ಶೆಟ್ಟಿ, ಗೃಹೋದ್ಯಮಿ ಸವಿತಾ ಕಾಮತ್ ಅವರನ್ನು ಸನ್ಮಾನಿಸಲಾಯಿತು. ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸಂಗೀತಾ ಸ್ವಾಗತಿಸಿದರು, ಆಶಾರಾಣಿ ಕಾರ್ಯಕ್ರಮ ನಿರ್ವಹಿಸಿ ಸಲ್ಮಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸುವುದರೊಂದಿಗೆ ಮಹಿಳಾ ದಿನಾಚರಣೆ ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರದ ಮನೀಶ್ ಆಸ್ಪತ್ರೆಯ ಸಂಸ್ಥಾಪಕಿ, ವೈದ್ಯೆ ಪ್ರಮೀಳಾ ನಾಯಕ್ ಫರ್ನಾಂಡಿಸ್ ಇವರು ಸಾಧಕ ಮಹಿಳೆಯರನ್ನು ಸನ್ಮಾನಿಸಿ ಮಾತನಾಡಿ ಪ್ರತಿಯೊಬ್ಬ ಹೆಣ್ಣು ತನ್ನ ಶಕ್ತಿ ಸಾಮರ್ಥ್ಯ ಅರ್ಥೈಸಿಕೊಂಡು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿಯೂ ತನ್ನ ಸಾಧನೆ ತೋರಿ ಮಾದರಿಯಾಗಬೇಕು ಎಂದು ಹುರಿದುಂಬಿಸಿದರು. ಜೊತೆಗೆ ಎಲ್ಲಾ ಸಾಧಕ ಮಹಿಳೆಯರ ಸಾಧನೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಕುಂದಾಪುರದ ಬಹುಮುಖ ಪ್ರತಿಭೆ ಅಕ್ಷತಾ ಗಿರೀಶ್ ಐತಾಳ್, ವಿಶೇಷ ಚೇತನ ಮಕ್ಕಳ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಹಾಲಾಡಿಯ ಬ್ರೈಟ್ ಪರ್ಲ್ ಸ್ಕೂಲ್ ನ ಸಂಸ್ಥಾಪಕರಾದ ಆಶಾ ರಾಜೀವ್ ಕುಲಾಲ್, ಕಲಾ ಕ್ಷೇತ್ರದ ಸಾಧನೆಗಾಗಿ ಕಲಾವಿದರಾದ ಸುಧಾ ಮಣೂರ್ ಹಾಗೂ ಸಾಮಾಜಿಕ ಕ್ಷೇತ್ರದ ಕೊಡುಗೆಗಾಗಿ ಕೋಣಿಯ ಮಾನಸ ಜ್ಯೋತಿ ಸಂಸ್ಥೆಯ ಆಡಳಿತ ವಿಭಾಗದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,ಮಾ.8: ಪುರಾತನ ಪ್ರಸಿದ್ಧ ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ ಎ.14 ರಿಂದ 16ರ ವರೆಗೆ ನಡೆಯುವ ಶ್ರೀ ನಂದಿಕೇಶ್ವರ ಮತ್ತು ಪರಿವಾರ ದೈವಗಳ ವಾರ್ಷಿಕೋತ್ಸವ ಮತ್ತು ಭಜನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೈವಸ್ಥಾನದ ವಠಾರದಲ್ಲಿ ನಡೆಯಿತು. ಕೃಷ್ಣ ದೇವಾಡಿಗ ಪೂಜೆ ಕಾರ್ಯ ನೆರವೇರಿಸಿದರು. ಈ ಸಂದರ್ಭ ದೈವಸ್ಥಾನದ ಅಧ್ಯಕ್ಷ ಜನಾರ್ದನ ದೇವಾಡಿಗ ಮತ್ತು ಸಮಿತಿ ಸದಸ್ಯರು ಹಾಗೂ ಸ್ಥಳೀಯ ಭಕ್ತಾಧಿಗಳು ಉಪಸ್ಥಿತರಿದ್ದರು. ಎ.14ರಂದು ಶ್ರೀ ನಂದಿಕೇಶ್ವರ ಪರಿವಾರ ದೈವಗಳ ಹಾಗೂ ನಾಗದೇವರ ವಾರ್ಷಿಕ ಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಎ.15ರಂದು ಬೆಳಗ್ಗೆ 9.05ಕ್ಕೆ ಏಕಾಹ ಅಖಂಡ ಭಜನಾ ಕಾರ್ಯಕ್ರಮ ಪ್ರಾರಂಭಗೊಂಡು ಏ.16ರಂದು ಪ್ರದೀಪ ವಿಸರ್ಜನೆಯೊಂದಿಗೆ ಭಜನಾ ಮಂಗಲೋತ್ಸವ ನಡೆಯಲಿದೆ. ಎ.15ರಿಂದ ಎ.16ರ ವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 5ಗಂಟೆಗೆ ಗೆಂಡ ಸೇವೆ ಹಾಗೂ ರಾತ್ರಿ ಗಂಟೆ 9.30ಕ್ಕೆ ಶ್ರೀ ವೀರಭದ್ರಸ್ವಾಮಿ ದಶಾವತಾರ ಯಕ್ಷಗಾನ ಮಂಡಳಿ ಶ್ರೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ ಮಾ.8: ವೈದ್ಯಕೀಯ ಪರಿಕರಗಳ ಪ್ರಸಿದ್ಧ ಮಳಿಗೆ ಉಡುಪಿಯ ಗಿರಿಜಾ ಹೆಲ್ತ್ ಕೇರ್ ಆಂಡ್ ಸರ್ಜಿಕಲ್ಸ್ ನಲ್ಲಿ ಮತ್ತೆ ಶುಗರ್ ಟೆಸ್ಟಿಂಗ್ ಯಂತ್ರವಾದ ಗ್ಲುಕೊಮೀಟರ್ ಉಚಿತ ಕೊಡುಗೆಯ ಬಂಪರ್ ಕೊಡುಗೆ ನಡೆಯುತ್ತಿದೆ. ಈ ಹಿಂದೆ ಸಂಸ್ಥೆಯ ವತಿಯಿಂದ ಹಿರಿಯ ನಾಗರಿಕರಿಗೆ ಗ್ಲುಕೊಮೀಟರ್ ಉಚಿತ ಕೊಡುಗೆ ನೀಡಲಾಗಿದ್ದು, ಇದೀಗ ಮತ್ತೆ ನಾಗರಿಕರ ಒತ್ತಾಯದ ಮೇರೆಗೆ 40 ವರ್ಷ ಮೇಲ್ಪಟ್ಟ ಮಧುಮೇಹ ರೋಗಿಗಳಿಗೆ ಮತ್ತು ಎಲ್ಲಾ ಹಿರಿಯ ನಾಗರಿಕರಿಗೆ ಶುಗರ್ ಟೆಸ್ಟಿಂಗ್ ಯಂತ್ರವಾದ ಗ್ಲುಕೊಮೀಟರ್ ನ್ನು ಉಚಿತವಾಗಿ ನೀಡಲಾಗುತ್ತಿದೆ. ನಾಗರಿಕರು ರೂ.200 ಬೆಲೆ ಬಾಳುವ 10 ಟೆಸ್ಟಿಂಗ್ ಸ್ವೀಪ್ ಕೊಂಡಲ್ಲಿ ಒಂದು ಗ್ಲುಕೊಮೀಟರ್ ಸೆಟ್ ಉಚಿತವಾಗಿ ದೊರೆಯಲಿದೆ. ಈ ಕೊಡುಗೆ ಮಾ.20 ರವರೆಗೆ ಮಾತ್ರ ಲಭ್ಯವಿದ್ದು, ಅರ್ಹ ನಾಗರಿಕರು ತಮ್ಮ ಆಧಾರ್ ಕಾರ್ಡ್ ತೋರಿಸಿ ಈ ಕೊಡುಗೆಯ ಸದುಪಯೋಗ ಪಡೆಯಬಹುದಾಗಿದೆ. ಆದರೆ ಈ ಮೊದಲು ಸಂಸ್ಥೆಯಿಂದ ಗ್ಲುಕೊಮೀಟರ್ ಉಚಿತವಾಗಿ ಪಡೆದುಕೊಂಡವರಿಗೆ ಅವಕಾಶ ಇರುವುದಿಲ್ಲ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Read More

ಶಿಕ್ಷಣ, ಕ್ರೀಡೆ, ರಾಜಕೀಯ, ಕಲೆ, ಸಾಂಸ್ಕೃತಿಕ ಹೀಗೆ ಬಹುತೇಕ ಕ್ಷೇತ್ರಗಳಲ್ಲಿ ಪುರುಷರಿಗೆ ಸರಿಸಮನಾಗಿ ನಿಂತು ಸ್ವತಂತ್ರರಾಗಿ, ಸ್ವಾವಲಂಬಿಗಳಾಗಿ ಬದುಕುತ್ತಿರುವ ಮಹಿಳೆಯರ ನೆನಪಾಗಿ ಮನಹರುಷಗೊಂಡಿತು. ಅಂಥವರು ಬೆರಳೆಣಿಕೆಯಷ್ಟು ಮಾತ್ರ. ಆದರೆ ನಿತ್ಯ ಹೆಣ್ಣಿನ ಮೇಲೆ ನಡೆಯುವ ಅತ್ಯಾಚಾರ, ದೌರ್ಜನ್ಯ, ಭ್ರೂಣ ಹತ್ಯೆ, ವೇಶ್ಯಾವಾಟಿಕೆ, ಆಸಿಡ್ ದಾಳಿ, ವರದಕ್ಷಿಣೆ ಹಿಂಸೆ, ಬಲಿ ಇವೂ ಕಣ್ಮುಂದೆ ಹಾಯ್ದು ‘ಮಹಿಳಾ ದಿನಾಚರಣೆ’ಗೆ ಅರ್ಥವಿದೆಯೇ ಎಂಬ ಕಟುಸತ್ಯ ಮನವನು ಇರಿಯಿತು. ಈ ದಿನಾಚರಣೆ ಬರೀ ಕ್ಯಾಲೆಂಡರ್, ಸಭೆ-ಸಮಾರಂಭಗಳಲ್ಲಿ ನಡೆಸುವ ಒಂದು ದಿನದ ಆಚರಣೆ ಮಾತ್ರ. ಈ ದಿನದ ಬಗ್ಗೆ ಅದೆಷ್ಟು ಮಹಿಳೆಯರಿಗೆ ಗೊತ್ತು ? ಮಹಿಳಾ ದಿನಾಚರಣೆ ಹಬ್ಬವೂ ಅಲ್ಲ, ಆನಂದದಿಂದ ಆಚರಣೆಗೊಂಡ ದಿನವೂ ಅಲ್ಲ. ನ್ಯೂಯಾರ್ಕ್‍ನಲ್ಲಿ ಕ್ಲಾರಾ ಜೆಟ್‍ಕಿನ್ ಎಂಬ ಮಹಿಳಾ ಕಾರ್ಮಿಕೆ ಕೆಲಸಕ್ಕಾಗಿ, ಸಮಾನ ವೇತನಕ್ಕಾಗಿ, ಹೆರಿಗೆ ಸೌಲಭ್ಯಕ್ಕಾಗಿ ತಿಂಗಳುಗಟ್ಟಲೆ ಹೋರಾಟ ನಡೆಸಿ ಗೆಲುವು ಸಾಧಿಸಿದ ದಿನ. ಹುಟ್ಟಿನಿಂದ ಸಾಯುವವರೆಗೂ ದಿನ ನಿತ್ಯ ಒಂದಿಲ್ಲೊಂದು ಸಂಘರ್ಷದಲ್ಲಿ ಬಿದ್ದು ಸಾಧಿಸಲು ಪ್ರಯತ್ನ ಪಡುತ್ತಿರುವ, ಸಂಘರ್ಷದಿಂದ ಸಾಧಿಸಿದ ದಿನದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಕಲ ಸದ್ಗುಣಗಳ ಗಣಿಯೇ ಭಗವಂತ. ದುರ್ಗುಣಗಳನ್ನು ದೂರ ಮಾಡಿ ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ದಾನ, ಧರ್ಮ, ಸತ್ಕರ್ಮಗಳಿಂದ ಸಾತ್ವಿಕ ಸಂಪತ್ತು ವೃದ್ಧಿಯಾಗಿ ಸತ್‌ಕೀರ್ತಿ ದೊರೆಯುತ್ತದೆ. ನಮ್ಮ ಹೃದಯದಲ್ಲಿ ಭಗವಂತ ನೆಲೆಸಿದರೆ ಎಲ್ಲಾ ಭಾಗ್ಯಗಳು ಪ್ರತಿನಿತ್ಯ ಲಭಿಸಿ ಜೀವನ ಪಾವನವಾಗುತ್ತದೆ. ಯಾರಿಗೂ ಹಿಂಸೆ, ದು:ಖ ನೀಡದೆ ಬದುಕಿದರೆ ಅದೇ ದೇವರ ಪೂಜೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಗುಜ್ಜಾಡಿ ಗ್ರಾಮದ ಕೊಡಪಾಡಿಯ ಶ್ರೀ ಗುಹೇಶ್ವರ ದೇವಸ್ಥಾನದಲ್ಲಿ ಭಾನುವಾರ ಶ್ರೀ ಗುಹೇಶ್ವರ, ಶ್ರೀ ಮಹಾಗಣಪತಿ, ಶ್ರೀ ನಾಗ ದೇವರು, ಶ್ರೀ ಭದ್ರಕಾಳಿ ಅಮ್ಮನವರ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ದೇವರು ಗುಡಿ ಗೋಪುರಗಳಲ್ಲಿ ನೆಲೆಸಿಲ್ಲ ಬದಲಾಗಿ ಎಲ್ಲರ ಹೃದಯದೊಳಗೆ ನೆಲೆಸಿದ್ದಾನೆ. ಬದುಕನ್ನು ಭಗವಂತನ ಆರಾಧನೆಯನ್ನಾಗಿ ಮಾಡಿಕೊಳ್ಳಬೇಕು. ಪವಿತ್ರವಾದ ಶ್ರೀ ಗುಹೇಶ್ವರ ದೇವರ ಸನ್ನಿಧಿಯಲ್ಲಿ ನಿತ್ಯ ನಿರಂತರ ಧಾರ್ಮಿಕ ಉಪಾಸನೆಗಳು ನಡೆಯುತ್ತಿದ್ದು, ಶ್ರೀದೇವರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗಳು ಸಾವಿರಾರು ಕುಟುಂಬಗಳಿಗೆ ಬೆಳಕಾಗಿದೆ. ಸದಾ ಮನೆ ಕೆಲಸಗಳಲ್ಲಿ ತಲ್ಲೀನರಾಗಿರುತ್ತಿದ್ದ ಸ್ವಸಹಾಯ ಸಂಘದ ಮಹಿಳಾ ಸದಸ್ಯರನ್ನು ಸಮಾಜದ ಮುಖ್ಯ ವಾಹಿನಿಗೆ ತಂದು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡಿರುವುದು ಹಾಗೂ ಅವರ ಮಾನಸಿಕ ಹಾಗೂ ದೈಹಿಕ ಬೆಳವಣಿಗಾಗಿ ಕ್ರೀಡಾಕೂಟವನ್ನು ಆಯೋಜಿಸಿರುವುದು ಸ್ತುತ್ಯಾರ್ಹವಾದುದು ಎಂದು ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಗೌರವಾಧ್ಯಕ್ಷ ಉಮೇಶ ಮೇಸ್ತ ಹೇಳಿದರು. ಗುಜ್ಜಾಡಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತ್ರಾಸಿ ವಲಯದ ಸ್ವಸಹಾಯ ಸಂಘಗಳ ಸದಸ್ಯರ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಎಚ್.ರಮೇಶ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಂದೂರು ತಾಲೂಕು ಯೋಜನಾಧಿಕಾರಿ ಶಶಿರೇಖಾ ಪಿ.,…

Read More