Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ ಹಾಗೂ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆಯ ಸಂಘದ ಸಹಯೋಗದೊಂದಿಗೆ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗೆ ‘ಫೈನಾನ್ಸಿಯಲ್ ಸ್ಕಿಲ್ ಡೆವಲಪ್ಮೆಂಟ್’ ಎನ್ನುವ ವಿಷಯದ ಕುರಿತು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಬೆಂಗಳೂರಿನ ಎಂ.ಎಫ್.ಕೆ ಫೌಂಡೇಶನ್ ನ ಸಾಂಸ್ಥಿಕ ಪಾಲುದಾರಿಕೆಗಳ ಮುಖ್ಯಸ್ಥೆ ಅರ್ಪಣಾ ಭಟ್ ನಡೆಸಿಕೊಟ್ಟರು. ಅವರು ಶೈಕ್ಷಣಿಕ ಕಲಿಕೆ ಮತ್ತು ಉದ್ಯಮದ ನಿರೀಕ್ಷೆಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಮಹತ್ವವನ್ನು ಒತ್ತಿ ಹೇಳಿದರು. ಕಾರ್ಪೊರೇಟ್ ಜಗತ್ತಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸುವಲ್ಲಿ ಪ್ರಾಯೋಗಿಕ ತರಬೇತಿ ಕೌಶಲ್ಯ ಮತ್ತು ವೃತ್ತಿಪರ ಸಂಪನ್ಮೂಲಗಳನ್ನು ಪಡೆದುಕೊಳ್ಳಬೇಕಾದ ಮಹತ್ವವನ್ನು ತಿಳಿಸಿದರು. ಕಾರ್ಯಾಗಾರದಲ್ಲಿ ಭಾಗವಹಿಸುವವರನ್ನು ಕಲಿಕೆ, ನಿರ್ವಹಣಾ ವ್ಯವಸ್ಥೆಗಳು (LMS) ಮತ್ತು ನೇರ ತರಬೇತಿ ಅವಧಿಗಳು ಸೇರಿದಂತೆ ಎಂ.ಎಫ್.ಕೆ ಯ ಉಚಿತ ಕೌಶಲ್ಯ ಅಭಿವೃದ್ಧಿ ಉಪಕ್ರಮಗಳನ್ನು ಪರಿಚಯಿಸಿದರು. ಕಾರ್ಯಕ್ರಮದ ಪ್ರಮುಖ ಭಾಗವಾಗಿ ಬೆಂಗಳೂರಿನ ಎಂ ಎಫ್ ಕೆ ಫೌಂಡೇಶನ್ ಮತ್ತು ಮೂಡ್ಲಕಟ್ಟೆ ಪದವಿ ಕಾಲೇಜಿನ …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶುಕ್ರವಾರದಂದು ಶಿಕ್ಷಕರ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನ ಹಟ್ಟಿಅಂಗಡಿಯ ಕಾರ್ಯದರ್ಶಿಗಳು, ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿ, ಶುಭಾಂಶು ಶುಕ್ಲಾ ಅವರು ಇಂದು ಭಾರತದ ಹೆಮ್ಮೆಯ ಪುತ್ರನಾಗಿದ್ದು, ಎಲ್ಲರಿಗೂ ತಿಳಿದ ವಿಷಯ. ಅವರು ಆ ಸಾಧನೆಯ ಶಿಖರದಲ್ಲಿದ್ದು ಮಾತಾಡುವಾಗ ಜೀವನಪಥದಲ್ಲಿ ಬೋಧಿಸಿದ ಶಿಕ್ಷಕರನ್ನು ಸ್ಮರಿಸಿದರು. ಪ್ರತಿಯೊಬ್ಬ ಸಾಧಕನ ಹಿಂದೆ ಕಾಣದ ಬಹಳಷ್ಟು ಜನರ ಪರಿಶ್ರಮ ಇದ್ದೇ ಇರುತ್ತದೆ. ಶಿಕ್ಷಕರು ಬಯಸಿದರೆ ಸಮಾಜವನ್ನೇ ಪರಿವರ್ತಿಸಬಹುದು. ವಿದ್ಯಾರ್ಥಿ ಶಿಕ್ಷಕರಿಂದ ಸದಾ ಸನ್ಮಾರ್ಗದರ್ಶನ ಪಡೆಯಬೇಕು. ತಂದೆ ತಾಯಿಯರಿಂದ ಆರಂಭಿಸಿ ನಮಗೆ ತಿಳಿಹೇಳಿದ ಎಲ್ಲರೂ ಶಿಕ್ಷಕರಾಗಿದ್ದು, ಅವರನ್ನು ಗೌರವಿಸುವುದನ್ನು ಮರೆಯಬಾರದು. ಎನ್ನುತ್ತಾ ಶಿಕ್ಷಕರಿಗೆ ಜವಾಬ್ದಾರಿಯನ್ನು ನೆನಪಿಸುತ್ತಾ, ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಬೋಧಿಸಿದರು. ಅತಿಥಿಗಳಾಗಿ ಆಗಮಿಸಿದ ರಾಘವೇಂದ್ರ ಭಾರತೀ ಸಂಸ್ಕೃತ ಮಹಾವಿದ್ಯಾಲಯ ಸುಬ್ರಹ್ಮಣ್ಯದ ನಿವೃತ್ತ ಪ್ರಾಂಶುಪಾಲರಾದ ವಿಶ್ವೇಶ್ವರ ಗೋಪಾಲ ಹೆಗಡೆ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಹಟ್ಟಿಯಂಗಡಿಯ ಪೂರ್ಣಚಂದ್ರನಂತೆ ಶೋಭಿಸುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಸಹಕಾರಿ ವ್ಯವಸಾಯಕ ಸಂಘದ ಅತ್ಯುತ್ತಮ ಕಾರ್ಯ ವೈಖರಿಯನ್ನು ಮತ್ತು ಸರ್ವಾಂಗೀಣ ಅಭಿವೃದ್ಧಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು 2023-24ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಕ್ಕಾಗಿ ರಾಜ್ಯ ಮಟ್ಟದ ಅತ್ಯುತ್ತಮ ಸಾಧನಾ ಪ್ರಶಸ್ತಿ 2023-24 ನೀಡಿದ ಹಿನ್ನಲೆಯಲ್ಲಿ ಆ30.ರಂದು ಮಂಗಳೂರಿನಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಸಮ್ಮುಖದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿಯನ್ನು ಕೋಟ ಸಹಕಾರಿ ವ್ಯವಸಾಯಕ ಸಂಘದ ಅಧ್ಯಕ್ಷ ಡಾ| ಕೃಷ್ಣ ಕಾಂಚನ್ ಮತ್ತು ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶರತ ಕುಮಾರ್ ಶೆಟ್ಟಿ ಅವರಿಗೆ ಬ್ಯಾಂಕಿನ ಪರವಾಗಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಎಚ್. ನಾಗರಾಜ ಹಂದೆ, ನಿಕಟಪೂರ್ವ ಅಧ್ಯಕ್ಷ ಜಿ. ತಿಮ್ಮ ಪೂಜಾರಿ ಮತ್ತು ಮಾಜಿ ನಿರ್ದೇಶಕರಾದ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿಗಳು ಪಾಠ – ಪ್ರವಚನದ ಜೊತೆಗೆ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದ್ದು, ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಕೂಡ ಇದು ಸಹಾಯಕವಾಗುತ್ತದೆ ಎಂದು ಬೆಂಗಳೂರು ಮೆಂಟರ್ಸ್‌ ಫಾರ್ ಕಿಡ್ಸ್ ಫೌಂಡೇಶನ್ಸ್ನ ಅರ್ಪಣಾ ಭಟ್ ಹೇಳಿದರು. ಅವರು ಕೋಟೇಶ್ವರದ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂದಾಪುರ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಮೆಂಟ‍ರ್ಸ್‌ ಫಾರ್ ಕಿಡ್ಸ್ ಫೌಂಡೇಶನ್, ಬೆಂಗಳೂರು ಇವರ ಸಂಯುಕ್ತಾಶ್ರಯದೊಂದಿಗೆ ಉನ್ನತ ಕೌಶಲ್ಯದ ಕುರಿತು ನಡೆದ ಓರಿಯಂಟೇಶನ್ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ಕೌಶಲ್ಯವು ಯುವ ಸಬಲೀಕರಣಕ್ಕೆ ನಾಂದಿಯಾಗಲಿದೆ. ಸಾಮಾನ್ಯರಿಂದ ವಿಶೇಷವಾಗಿ ಗುರುತಿಸಿಕೊಳ್ಳಲು ವಿದ್ಯಾರ್ಥಿಗಳು ನಿರಂತರ ಪ್ರಯತ್ನವನ್ನು ಮಾಡುತ್ತಲೇ ಇರಬೇಕು. ಹಾಗೂ ವಿವಿಧ ಸರ್ಟಿಫಿಕೇಟ್ ಪ್ರೋಗ್ರಾಂಗಳಲ್ಲಿ ಭಾಗವಹಿಸುವುದರ ಮೂಲಕ ಉದ್ಯೋಗ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು. ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಇದು ಉದ್ಯಮದ ಅಗತ್ಯವನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಮಹಿಳಾ ವೇದಿಕೆ ಕೂಟ ಮಹಾ ಜಗತ್ತು ಸಾಲಿಗ್ರಾಮ ಅಂಗಸಂಸ್ಥೆ ಇದರ ರಜತ ವರ್ಷ ಸಂಭ್ರಮ ಸರಣಿ ಕಾರ್ಯಕ್ರಮ ಇತ್ತೀಚಿಗೆ ದೇವಸ್ಥಾನದ ಜ್ಞಾನ ಮಂದಿರದಲ್ಲಿ ಜರಗಿತು. ಇದೇ ವೇಳೆ ಸುಮನ ರವೀಂದ್ರ ಹೇರ್ಳೆ ಬರೆದಿರುವ ಶ್ರೀ ಗುರು ನರಸಿಂಹ ಕಾವ್ಯಧಾರೆ ಎನ್ನುವ ಪುಸ್ತಕ ಲೋಕಾರ್ಪಣೆಗೊಂಡಿತು. ಪುಸ್ತಕದ ಪರಿಚಯವನ್ನು ಸಾಹಿತಿ ಹರಿನರಸಿಂಹ ಉಪಾಧ್ಯಾಯ ಬೆಂಗಳೂರು ಅವರು ಮಾಡಿದರು. ಈ ಸಂದರ್ಭದಲ್ಲಿ ಸಾಹಿತಿ ಹರಿನರಸಿಂಹ ಉಪಾಧ್ಯಾಯ ಅವರನ್ನು ಗೌರವಿಸಲಾಯಿತು. ಲೇಖಕಿ ಸುಮನ ಹೆರ್ಳೆ ತನ್ನ ಅನಿಸಿಕೆ ಮತ್ತು ನೆರವಾದವರಿಗೆ ಕೃತಜ್ಞತೆ ಸಲ್ಲಿಸಿದರು. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಡಾ. ಕೆ.ಎಸ್ ಕಾರಂತ ಪುಸ್ತಕ ಬಿಡುಗಡೆಗೊಳಿಸಿ ಅತ್ಯುತ್ತಮ ಕೃತಿ ಗಾಗಿ ಶುಭ ಹಾರೈಸಿದರು. ಬಿಡುಗಡೆಯ ಸಂದರ್ಭದಲ್ಲಿ ಸಂಗೀತ ಶಿಕ್ಷಕಿ ಮಾಲಿನಿ ರಮೇಶ್ ಕೃತಿಯ ಆಯ್ದ ಕೆಲವು ಹಾಡುಗಳನ್ನು ಹಾಡಿದರು. ಇದೇ ಸಂದರ್ಭದಲ್ಲಿ ಸಾಹಿತ್ಯ ಅಭಿಮಾನಿ ಲೇಖಕಿ ವಿಮಲಾ ನಾವಡ ಕುಂದಾಪುರ ಇವರನ್ನು ಮಹಿಳಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು. …

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಯ ಅನಾವರಣಕ್ಕಾಗಿ ಸಾಂಸ್ಕೃತಿಕ ತೇರು, ಕಲೆಗಳ ಮೇರು ಶೀರ್ಷಿಕೆಯಡಿಯಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಾ ಪ್ರದರ್ಶನ ಗುರುವಾರ ನೆರವೇರಿತು. ದೀಪ ಪ್ರಜ್ವಲನೆಯ ಮೂಲಕ ವಿದ್ಯಾರ್ಥಿಗಳಲ್ಲಿ ಅಡಕವಾಗಿರುವ ಪ್ರತಿಭೆ ಜಗದಗಲ ಪಸರಿಸುವಂತಾಗಲಿ ಎನ್ನುವ ಸದಾಶಯದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ಜಾನಪದ ಅಕಾಡೆಮಿ ಪುರಸ್ಕೃತರಾದ ಡಾ. ಗಣೇಶ್ ಗಂಗೊಳ್ಳಿ ಅವರು ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕಲೆ, ಸಂಸ್ಕೃತಿಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದರು.  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾ‌ರ್, ರಸಾಯನಶಾಸ್ತ್ರ ಉಪನ್ಯಾಸಕರಾದ ರಮಾಕಾಂತ್ ರೇವಣಕರ್  ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ವೈವಿಧ್ಯಮಯ ಪ್ರತಿಭೆಗಳ ಪ್ರದರ್ಶನ ನೆರವೇರಿತು. ಇದು ಕೇವಲ ಸ್ಪರ್ಧೆಯಾಗಿರದೆ ಪ್ರತಿಭಾವಂತ ವಿದ್ಯಾರ್ಥಿಗಳು ತಮ್ಮ ಕಲಾಪ್ರತಿಭೆಯನ್ನು ಪ್ರದರ್ಶಿಸುವ ವೇದಿಕೆಯಾಗಿತ್ತು. ವಿದ್ಯಾರ್ಥಿಗಳಾದ ಪಂಚಮಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಮೆಡಿಕೋಸ್ ಸಂಸ್ಥೆಯ ಸಹಯೋಗದಲ್ಲಿ “ಹದಿಹರೆಯದ ಸಮಸ್ಯೆಗಳು ಮತ್ತು ಪರಿಹಾರಗಳು” ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ ಕೋಟೆಶ್ವರದ ಎನ್.ಆರ್.ಆಸ್ಪತ್ರೆಯ ಮನೋವೈದ್ಯರಾದ ಡಾ. ಮಹಿಮಾ ಆಚಾರ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಸೂಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ವೇದಿಕೆಯಲ್ಲಿ ಕುಂದಾಪುರದ ನ್ಯೂ ಮೆಡಿಕಲ್ ಆಸ್ಪತ್ರೆಯ ಕಣ್ಣು ತಜ್ಞ ಡಾ. ಶ್ರೀಕಾಂತ್ ಶೆಟ್ಟಿ, ರಾಷ್ಟ್ರೀಯ ಮೆಡಿಕೋಸ್ ಸಂಸ್ಥೆಯ ಸಂಯೋಜಕರಾದ ವಸಂತ ಉಡುಪ ಮತ್ತು ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ರಾಜೇಶ್ ಕಾವೇರಿ ಉಪಸ್ಥಿತರಿದ್ದರು. ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸರೋಜಾ ಎಮ್ ಸ್ವಾಗತಿಸಿದರು. ಉಪನ್ಯಾಸಕ ವಿದ್ಯಾಧರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ತಂದೆ-ತಾಯಿ ನಮ್ಮ ಬದುಕಿನ ನಿಜವಾದ ಆದರ್ಶ. ತಮ್ಮ ಸಂತೋಷವನ್ನೆಲ್ಲ ತ್ಯಾಗ ಮಾಡಿ ಮಕ್ಕಳ ಭವಿಷ್ಯ ನಿರ್ಮಿಸಲು ಶ್ರಮಿಸುತ್ತಾರೆ. ಅವರ ಕಷ್ಟ ಅರಿತು, ಶಿಕ್ಷಕರ ಮಾರ್ಗದರ್ಶನವನ್ನು ಅನುಸರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಜೀವನ್ ರಾಮ್ ಸುಳ್ಯ ಕರೆ ನೀಡಿದರು. ಅವರು ಗುರುವಾರ ಶಿವರಾಮ ಕಾರಂತ ವೇದಿಕೆಯಲ್ಲಿ ನಡೆದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕಲಾಸಂಘ, ಸಾಹಿತ್ಯ ಸಂಘ ಮತ್ತು ಮತದಾರರ ಸಾಕ್ಷರತಾ ಸಂಘಗಳ ಈ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಜೀವನದಲ್ಲಿ ಸಂತೋಷವು ಸಣ್ಣ ವಿಷಯಗಳಲ್ಲಿ ಅಡಗಿದೆ. ಆದರೆ ಆ ಸಂತೋಷವನ್ನು ಶ್ರಮ, ಶಿಸ್ತು ಮತ್ತು ಸಂಸ್ಕಾರಗಳಿಂದ ಕಂಡುಕೊಳ್ಳಿ. ಅಂಕಗಳು ನಿಮ್ಮ ಬುದ್ಧಿಮಟ್ಟ ತಿಳಿಸಿದರೆ, ಮೌಲ್ಯಗಳು ಮಾತ್ರ ನಿಮ್ಮ ವ್ಯಕ್ತಿತ್ವವನ್ನು ನಿರ್ಧರಿಸುತ್ತವೆ ಎಂದರು. ಕಲೆ, ಸಾಹಿತ್ಯ, ಕ್ರೀಡೆ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಸಂಪೂರ್ಣ ವ್ಯಕ್ತಿತ್ವ ಪಡೆಯಲು ಸಾಧ್ಯ. ಅದು ನಿಜವಾದ ಶಿಕ್ಷಣ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ ಪ್ರಕರಣದಲ್ಲಿ ನೀಡಿರುವ ನಿರ್ದೇಶನ ಅನ್ವಯ ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆ, ಕೋಚಿಂಗ್ ಕೇಂದ್ರ ಮತ್ತು ತರಬೇತಿ ಕೇಂದ್ರಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಯೋಗಕ್ಷೇಮವನ್ನು ಖಾತ್ರಿಪಡಿಸುವ ನೀತಿಗಳು, ಮಾನಸಿಕ ಬೆಂಬಲ, ಸುರಕ್ಷಿತ ವಾತಾವರಣ ಮತ್ತು ತಾರತಮ್ಮ ರಹಿತ ಶಿಕ್ಷಣ ನೀಡುವ ಕುರಿತು ಏಕರೂಪದ ಮಾನಸಿಕ ಆರೋಗ್ಯ ನೀತಿ’ ಯನ್ನು ಜಾರಿಗೊಳಿಸಿ, ಅನುಷ್ಠಾನಗೊಳಿಸಬೇಕಾಗಿರುತ್ತದೆ. ಈ ಹಿನ್ನಲೆ, ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಎಲ್ಲಾ ಕೋಚಿಂಗ್ ಕೇಂದ್ರಗಳು The Karnataka Tutorial Institutions (Registration and Regulation) Rules, 2001 ರನ್ವಯ ಕಡ್ಡಾಯವಾಗಿ 30 ದಿನಗಳೊಳಗಾಗಿ ತಮ್ಮ ಕೋಚಿಂಗ್ ಕೇಂದ್ರಗಳು ಕಾರ್ಯಾಚರಿಸುತ್ತಿರುವ ಬಗ್ಗೆ ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಣಿಪಾಲ, ಉಡುಪಿ ಇವರಲ್ಲಿ ನೊಂದಣಿ ಮಾಡಿಕೊಳ್ಳಬೇಕು. ತಪ್ಪಿದ್ದಲ್ಲಿ ನೊಂದಣಿ ಮಾಡಿಸದೇ ಇರುವಂತಹ ಕೋಚಿಂಗ್ ಕೇಂದ್ರಗಳನ್ನು ಸ್ಥಗಿತಗೊಳಿಸಲು ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಪದವಿ ಪೂರ್ವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸ್ವಾಮಿ ವಿವೇಕಾನಂದ ಚಿಂತನಶೀಲ ವಿಚಾರ ವೇದಿಕೆ ಸಾರಥ್ಯದ  ವಿವೇಕ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀ ರಾಘವೇಂದ್ರ ಪ್ರಕಾಶನ ಸಹಯೋಗದಲ್ಲಿ ವಿವೇಕ ಚೇತನ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನೀಡುವ  ಗುರುಶ್ರೀ ರಾಜ್ಯ ಪ್ರಶಸ್ತಿಗೆ ಬೈಂದೂರು ಶೈಕ್ಷಣಿಕ ವಲಯದ ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ಆಯ್ಕೆಯಾಗಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಂಡ್ರೆ ಗ್ರಾಮದ ಹರವರಿಯಲ್ಲಿ ಸರ್ವೋತ್ತಮ ಜೋಗಿ ಹಾಗೂ ಪಾರ್ವತಿ ಜೋಗಿ ಯವರ ಸುಪುತ್ರನಾಗಿ ಜನಿಸಿರುವ ವೀರೇಂದ್ರ ಜೋಗಿ ಅವರು ಪ್ರಸ್ತುತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಬೈಂದೂರು ವಲಯ ಇಲ್ಲಿ ಕಳೆದ 12 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿ.ಎ.ಸಿ.ಪಿ.ಎಡ್ ಪದವೀಧರರಾಗಿರುವ ಇವರು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುತ್ತಾರೆ. ದಿನಾಂಕ 01-09-2007 ರಂದು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗಂಡಿಬಾಗಿಲು, ಪುತ್ತೂರು ತಾಲೂಕು ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸಕ್ಕೆ…

Read More