Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಮನೆಯೊಂದರಲ್ಲಿ ಹಣವನ್ನು ಪಣವನ್ನಾಗಿರಿಸಿ ಅಂದರ್‌ ಬಾಹರ್‌ ಇಸ್ವೀಟ್‌ ಜುಗಾರಿ ಆಟುತ್ತಿದ್ದ ಸ್ಥಳಕ್ಕೆ ಬ್ರಹ್ಮಾವರ ಪೊಲೀಸರು ದಾಳಿ ನಡೆಸಿ ಹನ್ನೊಂದು ಮಂದಿ ಜುಗಾರಿಕೋರರನ್ನು ಬಂಧಿಸಿದ ಘಟನೆ ಇತ್ತಿಚಿಗೆ ನಡೆದಿದೆ. ನೀಲಾವರ ಗ್ರಾಮದ ಮನೆಯಲ್ಲಿ ಹಣವನ್ನು ಪಣವನ್ನಾಗಿಟ್ಟು ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಟ ಆಡುತ್ತಿರು ಮಾಹಿತಿ ಆಧರಿಸಿ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಅಶೋಕ್ ಮಾಳಾಬಗಿ ಮತ್ತು ಸಿಬ್ಬಂದಿಗಳು ಶುಕ್ರವಾರ ರಾತ್ರಿ7:30ರ ವೇಳೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿಗಳಾದ ನೀಲಾವರದ ಸದಾಶಿವ ದೇವಾಡಿಗ (48), 52 ಹೇರೂರಿನ ಪ್ರಸನ್ನ(43) ರಜಾಕ್(55), ಚೇರ್ಕಾಡಿಯ ಭಾಸ್ಕರ(48), ಕೊಡವೂರಿನ ಅಶೋಕ(47), ಉದ್ದಿನಹಿತ್ಲು ಕೊಡವೂರು ಗ್ರಾಮ, ತೆಂಕನಿಡಿಯೂರಿನ ಹರೀಶ್‌ ನಾಯ್ಕ(35), ಪುತ್ತೂರು ಗ್ರಾಮದ ಚಂದ್ರಹಾಸ (40), ಬೇಳೂರು ಗ್ರಾಮದ ರವಿಕುಮಾರ(57), ಚೇರ್ಕಾಡಿಯ ಶಶಿಕಾಂತ (36), ಕುಕ್ಕುಂಜೆಯ ಆನಂದ ಕೋಟ್ಯಾನ (63), ಚೇರ್ಕಾಡಿಯ ಸಂಪತ್ (37) ಎಂಬರುಗಳನ್ನು ವಶಕ್ಕೆ ಪಡೆದಿದ್ದಾರೆ, ಆರೋಪಿಗಳು ಅಂದರ್‌ ಬಾಹರ್‌ ಇಸ್ಫಿಟ್ ಜುಗಾರಿ ಆಡುತ್ತಿರುವ ಬಗ್ಗೆ ತಮ್ಮ ತಪ್ಪನ್ನು ಒಪ್ಪಿಕೊಂಡಿರುತ್ತಾರೆ.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ಸೆ.07: ತಾಲೂಕಿನ ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಈಜಲು ತೆರಳಿದ್ದ ನಾಲ್ವರು ಯುವಕರಲ್ಲಿ ಇಬ್ಬರು ಮೃತಪಟ್ಟಿದ್ದು, ಓರ್ವ ನೀರುಪಾಲಾದ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿದ್ದ ಓರ್ವನನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬೆಂಗಳೂರಿಂದ ಬಂದಿದ್ದ 10 ಮಂದಿ ಯುವಕರ ತಂಡವು ಕುಂಭಾಸಿಯ ಲಾಡ್ಜಿನಲ್ಲಿ ತಂಗಿದ್ದರು. ಇಂದು ಮಧ್ಯಾಹ್ನ 9 ಮಂದಿ ಯುವಕರು ಸಮುದ್ರ ಸ್ನಾನ ಮಾಡಲೆಂದು ಗೋಪಾಡಿ ಚೆರ್ಕಿ ಕಡು ಎಂಬಲ್ಲಿ ಸಮುದ್ರಕ್ಕೆ ಇಳಿದಿದ್ದಾರೆ. ಈ ವೇಳೆ ನಾಲ್ವರು ಸಮುದ್ರದ ಅಲೆಗೆ ಸಿಲುಕಿ ನಾಪತ್ತೆಯಾದ್ದರು. ಅಲೆಯಲ್ಲಿ ಕೊಚ್ಚಿ ಹೋಗಿದ್ದು ಓರ್ವನನ್ನು ತಕ್ಷಣ ಸ್ಥಳೀಯರು ಹಾಗೂ ಜೊತೆಗೆ ಇದ್ದ ಯುವಕರು ಸೇರಿ ಎತ್ತಿ ಮೇಲಕ್ಕೆ ತಂದಿದ್ದಾರೆ. ಗಂಭೀರ ಗೊಂಡಿದ್ದು ತಕ್ಷಣ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಸ್ಥಳೀಯರ ಸಹಕಾರದಿಂದ ಇಬ್ಬರ ಮೃತದೇಹವನ್ನು ಪತ್ತೆ ಹಚ್ಚಲಾಯಿತು. ಇನ್ನೋರ್ವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನೂರಾರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತರು. ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್‌ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ ಕಾಯುತ್ತಿದ್ದಾಗ ಪೊಲೀಸರ ಹತ್ಯೆಗೆ ಯತ್ನಿಸಲಾಗಿತ್ತು. ಕಳೆದ ತಿಂಗಳು ಆ.5 ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ಪೊಲೀಸರು ಖಚಿತ ವರ್ತಮಾನದಂತೆ ವಾಹನ ತಪಾಸಣೆಯಲ್ಲಿದ್ದಾಗ ಫಾರ್ಚುನ‌ರ್ ಕಾರು ಬಂದಿದ್ದು ಅದರಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಹಾಕಲಾಗಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ, ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ತೆಕ್ಕೆಟ್ಟೆಯ ವಿಶ್ವವಿನಾಯಕ ಸಿಬಿಎಸ್‌ಇ ಸ್ಕೂಲ್‌ನಲ್ಲಿ ಶಿಕ್ಷಕರ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ ಶೆಟ್ಟಿ ಅವರು ಡಾ. ಸರ್ವಪಲ್ಲಿ ರಾಧಾ ಕೃಷ್ಣನ್‌ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿದರು, ಶಿಕ್ಷಕರ ಜವಾಬ್ದಾರಿಯುತ ಸೇವೆ ಉತ್ತಮ ಸಮಾಜ ನಿರ್ಮಾಣಕ್ಕೆ ಮೂಲವಾಗಿದೆ ಎಂದು ತಿಳಿಸಿದರು. ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ ಅವರು ಮಾತನಾಡಿ, ಸಮಾಜದಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು, ವಿದ್ಯಾರ್ಥಿಗಳು ಗುರುಹಿರಿಯರ ಮಾರ್ಗದರ್ಶನದಲ್ಲಿ ನಡೆದು ಸತ್ಪ್ರಜೆಗಳಾಗಿ ದೇಶ ನಿರ್ಮಾಣ ಮಾಡುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಶಿಕ್ಷಕರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಶಿಕ್ಷಕಿಯರಾದ ನಂದಿನಿ, ರಜನಿ ಹಾಗೂ ಶ್ವೇತಾ ಕಾರ್ಯಕ್ರಮ ಸಂಘಟಿಸಿದರು. ವಿದ್ಯಾರ್ಥಿಗಳಾದ ನವಮಿ ಸ್ವಾಗತಿಸಿ, ಬಿಂದುಶ್ರೀ ಕಾರ್ಯಕ್ರಮ ನಿರೂಪಿಸಿ, ಮಿರ್ಥುಲಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿ ಶಿಕ್ಷಣ ಪಡೆಯುವ ಸಂದರ್ಭದಲ್ಲಿ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವುದು ಮುಖ್ಯ. ಇಲ್ಲಿ ಅಂಕಗಳಿಗಿಂತಲೂ ಕೌಶಲ್ಯಗಳಿಗೆ ಹೆಚ್ಚು ಪ್ರಾಧ್ಯಾನತೆಯಿದ್ದು, ವಿದ್ಯಾರ್ಥಿಗಳಿಗೆ ನಾಯಕತ್ವ, ಕ್ರಿಯಾಶೀಲ ಗುಣಗಳನ್ನು ಬೆಳೆಸಿಕೊಳ್ಳಲು ಹಲವಾರು ಅವಕಾಶಗಳಿದ್ದು, ಅಂತಹ ಅವಕಾಶಗಳ ಸದುಪಯೋಗ ಪಡೆದುಕೊಳ್ಳಿ ಹಾಗೂ ಜೀವನಾನುಭವ ಬದುಕಿನ ಬಹುದೊಡ್ಡ ಪಾಠ ಎಂದು ವಂಡ್ಸೆ ಸಹಕಾರಿ ಸಂಘದ ಅಧ್ಯಕ್ಷ ಸಬ್ಲಾಡಿ ಮಂಜಯ್ಯ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಫ್ರೆಶರ್ಸ್‌ ಡೇ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ವಿದ್ಯಾರ್ಥಿಗಳ ಪದವಿ ಜೀವನಕ್ಕೆ ಶುಭ ಹಾರೈಸಿದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ಆಕಾಶ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ ರಿ ಮತ್ತು ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಹಯೋಗದಲ್ಲಿ ಅಬ್ಬಕ್ಕ @500 ಪ್ರೇರಣದಾಯಿ 100 ಉಪನ್ಯಾಸಗಳ ಸರಣಿ –ಎಸಳು 42 ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ತು ಇದರ ರಾಜ್ಯಾಧ್ಯಕ್ಷರಾದ ನಾಡೋಜ ಡಾ. ಮಹೇಶ್ ಜೋಶಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅಬ್ಬಕ್ಕನವರ ಶೌರ್ಯ, ಧೈರ್ಯ ಮತ್ತು ಸಾಹಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವಳು ಜೀವನವೇ ಇಂದಿನ ಯುವ ಮನಸ್ಸುಗಳಿಗೆ ಪ್ರೇರಣಾದಾಯಕವಾಗಿದೆ ಎಂದು ಹೇಳಿದರು. ರಾಣಿ ಅಬ್ಬಕ್ಕ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ವೃತ್ತಿ ಮಾರ್ಗದರ್ಶಕರಾದ ಸತ್ಯಶ್ರೀ ಗೌತಮ್ ಅವರು ರಾಣಿ ಅಬ್ಬಕ್ಕ ಅವರು ಜೀವನ ಮತ್ತು ಧೈರ್ಯ ಸಾಹಸಗಳು ಎಂದಿಗೂ ಆದರ್ಶ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಯು.ಎಸ್.ಶೆಣೈ, ಕನ್ನಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಹಾಗೂ ಸುರತ್ಕಲ್‌ನ ಗೋವಿಂದದಾಸ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಸುರತ್ಕಲ್‌ನಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ ಆಳ್ವಾಸ್ ಪ.ಪೂ ಕಾಲೇಜು 8 ಚಿನ್ನ ಹಾಗೂ 3 ಬೆಳ್ಳಿಯೊಂದಿಗೆ ಒಟ್ಟು 11 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಹುಡುಗಿಯರ ವಿಭಾಗದಲ್ಲೂ ಆಳ್ವಾಸ್ 6 ಚಿನ್ನ ಹಾಗೂ 3 ಕಂಚಿನೊಂದಿಗೆ ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡು ಅವಳಿ ಪ್ರಶಸ್ತಿಗೆ ಭಾಜನವಾಯಿತು. ಹುಡುಗರ ವಿಭಾಗದಲ್ಲಿ ಆಳ್ವಾಸ್ ಸಾಧನೆ:61 ಕೆಜಿ – ಅರುಣ್ (ಪ್ರಥಮ), 65 ಕೆಜಿ – ಶಶಿಕುಮಾರ್ (ಪ್ರಥಮ), ರಂಜನ್ (ದ್ವಿತೀಯ), 70 ಕೆಜಿ – ಮನೋಜ್ (ಪ್ರಥಮ), 74 ಕೆಜಿ – ಶಿವರಾಜ್ ಕುಮಾರ್ (ಪ್ರಥಮ), ರಜತ್ ಬಾಸು (ದ್ವಿತೀಯ), 79 ಕೆಜಿ – ಸಂಕೇತ್ (ಪ್ರಥಮ), 86 ಕೆಜಿ – ಕುಶಾಲ್ (ಪ್ರಥಮ), 92 ಕೆಜಿ – ಶಮಂತ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೊಗವೀರ ಯುವ ಸಂಘಟನೆ ರಿ., ಉಡುಪಿ ಜಿಲ್ಲೆ ಹೆಮ್ಮಾಡಿ ಘಟಕ ಇವರ ನೇತೃತ್ವದಲ್ಲಿ ಜಿ. ಶಂಕ‌ರ್ ಫ್ಯಾಮಿಲಿ ಟ್ರಸ್ಟ್ ರಿ. ಅಂಬಲಪಾಡಿ ಉಡುಪಿ ಇವರ ಸಹಯೋಗದೊಂದಿಗೆ ಶಿಕ್ಷಕ ದಿನಾಚರಣೆ ಪ್ರಯುಕ್ತ ಜನತಾ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಗಣೇಶ್ ಮೊಗವೀರ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸೇವಾ ಸಂಘ ರಿ., ಬಗ್ವಾಡಿ ಹೋಬಳಿ, ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯಕುಮಾರ್ ಹಟ್ಟಿಯಂಗಡಿ, ಮಾಜಿ ಅಧ್ಯಕ್ಷರಾದ ಎಂ.ಎ೦ ಸುವರ್ಣ, ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಬಿಆರ್ ನಾಯ್ಕ ಹೆಮ್ಮಾಡಿ ಘಟಕದ ಅಧ್ಯಕ್ಷರಾದ ದಿನೇಶ್‌ ಕಾಂಚನ್ ಬಾಳಿಕೆರೆ ಗೌರವಾಧ್ಯಕ್ಷ ಲೋಹಿತಾಶ್ವ ಆರ್ ಕುಂದ‌ರ್, ಕಾರ್ಯದರ್ಶಿ ಜಗದೀಶ ನೆಂಪು, ಮಾಜಿ ಅಧ್ಯಕ್ಷ ರಾಘವೇಂದ್ರ ನೆಂಪು, ಸಾಂಸ್ಕೃತಿಕ ಕಾರ್ಯದರ್ಶಿ ಜಯಂತ್ ಕುಂದರ್, ಜನಾರ್ದನ ಮೊಗವೀರ ತೊಪ್ಪು, ಗಣೇಶ್ ಕಾಂಚನ್, ರಾಘವೇ೦ದ್ರ ಚಂದನ್ ಹಾಗೂ ಸ್ತ್ರೀಶಕ್ತಿ ಬಗ್ವಾಡಿ ಹೋಬಳಿ ಇದರ ಅಧ್ಯಕ್ಷರಾದ ಶ್ಯಾಮಲ ಜಿ. ಚಂದನ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬೀದರಿನ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯದ (ಎಚ್. ಕೆ. ಇ. ಸೊಸೈಟಿ ) ವಿಧ್ಯಾರ್ಥಿನಿ ಅನುಪಮ ಹೊಳ್ಳ ಅವರು ಇಂಗ್ಲೀಷ್ ವಿಜ್ಞಾನ ವಿಭಾಗ ಪ್ರಥಮ ವರ್ಷ (ಬಿ. ಎಡ್) ದಲ್ಲಿ  8.75 ಎಸ್. ಜಿ. ಪಿ. ಎ. ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಅನುಪಮ ಹೊಳ್ಳ ಅವರು ಬೀದರಿನ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಸಾಹಿತಿ ಗೋಪಾಲಕೃಷ್ಣ ಹೊಳ್ಳ ವಂಡ್ಸೆ ಅವರ ಪುತ್ರಿ.ಇವರು ಮೂಲತಃ ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಸಾಲಿಗ್ರಾಮದವರು. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಹಪಾಟಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಜನರ ಮೇಲೆ ಜಿ ಎಸ್ ಟಿ ಹೊರೆ ಹೋರಿಸಿದ್ದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಸಾಧನೆಯಾದರೆ ಜನಸಾಮಾನ್ಯರಿಗೆ ಹೊರೆಯಾಗಿದ್ದ ಜಿಎಸ್‌ಟಿ ವಿರುದ್ಧ ನಿರಂತರವಾಗಿ ಧ್ವನಿ ಏತ್ತಿ, ಹೋರಾಟ ಮಾಡಿ ಇವತ್ತು ಜಿಎಸ್‌ಟಿ ಹೊರೆ ಕಡಿಯಾಗಲು ಕಾರಣ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ವಿಕಾಸ್ ಹೆಗ್ಡೆ ಹೇಳಿದರು. ಕೇಂದ್ರ ಸರ್ಕಾರ ಅವೈಜ್ಞಾನಿಕ ಹಾಗೂಅಸಮರ್ಪಕ ಜಿ ಎಸ್‌ ಟಿ ಯನ್ನು 2016 ರಲ್ಲಿ ಜಾರಿಗೆ ತಂದಾಗ ಅಂದೇ ರಾಹುಲ್ ಗಾಂಧಿ ಇದನ್ನು ವಿರೋಧಿಸಿದ್ದರು ಹಾಗೂ ನಾಲ್ಕು ಶ್ರೇಣಿಯಲ್ಲಿರುವ ಜಿಎಸ್‌ಟಿಯನ್ನು ಎರಡು ಶ್ರೇಣಿಗೆ ಮಿತಿಗೊಳಿಸಲು ಆಗೃಹ ಮಾಡಿದ್ದರು ಹಾಗೂ ಜಿ ಎಸ್ ಟಿ ಗರಿಷ್ಠ ಮಿತಿಯನ್ನು 18% ಗೆ ನಿಗದಿಗೊಳಿಸುವಂತೆ ಸಲಹೆ ನೀಡಿದ್ದರು, ಆದರೆ ಕೇಂದ್ರ ಸರ್ಕಾರ ಇಷ್ಟು ವರ್ಷಗಳ ಕಾಲ ಸುಮಾರು 28% ತನಕ ನಾಲ್ಕು ಶ್ರೇಣಿಯಲ್ಲಿ ಜಿಎಸ್‌ಟಿ ಯನ್ನು ಜನಸಾಮಾನ್ಯರ ಮೇಲೆ ಹೇರಿ, ತೆರಿಗೆ ಹೆಸರಿನಲ್ಲಿ ಜನಸಾಮಾನ್ಯರ ಮೇಲೆ…

Read More