Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.24ರ ಸೋಮವಾರ 103 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 19, ಉಡುಪಿ ತಾಲೂಕಿನ 50 ಹಾಗೂ ಕಾರ್ಕಳ ತಾಲೂಕಿನ 26 ಮಂದಿಗೆ ಪಾಸಿಟಿವ್ ಬಂದಿದೆ. 8 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 28 ಸಿಂಥಮೇಟಿವ್ ಹಾಗೂ 75 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 55ಪುರುಷರು, 48 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 52, ILI 23, ಸಾರಿ 2 ಪ್ರಕರಣವಿದ್ದು, 25 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 57 ಮಂದಿ ಆಸ್ಪತ್ರೆಯಿಂದ ಹಾಗೂ 99 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕಾರ್ಕಳದ 85 ವರ್ಷದ ವೃದ್ಧೆ, ಉಡುಪಿ 75 ವರ್ಷದ ವೃದ್ಧ, ಕಾರ್ಕಳದ 85 ವರ್ಷದ ವೃದ್ಧೆ, ಕಾರ್ಕಳದ 49 ವರ್ಷದ ಮಹಿಳೆ ಹಾಗೂ ಉಡುಪಿಯ 55 ವರ್ಷದ ಪುರುಷ ಸೇರಿದಂತೆ ಒಟ್ಟು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸ್ತುತ ಕೋವಿಡ್ ಪರಿಸ್ಥಿತಿಯಲ್ಲಿ ಆನ್‌ಲೈನ್ ಶಿಕ್ಷಣದ ಮುಖಾಂತರ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ನಡುವೆ ಸಂವಹನವನ್ನು ನಡೆಸುವುದು ಅತ್ಯಮೂಲ್ಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ತರಗತಿಗಳನ್ನು ನಡೆಸುವ ಸಲುವಾಗಿ ಪ್ರಾಧ್ಯಾಪಕರಿಗೆ ಪುನಶ್ಚೇತನ ಕಾರ‍್ಯಾಗಾರವನ್ನು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು IQAC ಘಟಕದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶೈಲೇಶ್ ಬಿ. ಸಿ. ಪ್ರಾಧ್ಯಾಪಕರಿಗೆ google classroom ಮತ್ತು edpuzzle ತಂತ್ರಜ್ಞಾನದ ಉಪಯೋಗ ಮತ್ತು ಹೇಗೆ ಬಳಸಬೇಕು ಎಂಬುದರ ಕುರಿತು ಪ್ರಾಯೋಗಿಕ ತರಬೇತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಅಧ್ಯಾಪಕ ವೃಂದದವರು ಕಾರ‍್ಯಕ್ರಮದಲ್ಲಿ ಭಾಗವಹಿಸಿ, ಪ್ರಯೋಜನವನ್ನು ಪಡೆದುಕೊಂಡರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಚ್ಛಭಾರತದ ಕನಸು ನನಸಾಗಬೇಕಾದರೆ ಗ್ರಾಮೀಣ ಪ್ರದೇಶಗಳಲ್ಲಿ ಕೂಡ ಸಮರ್ಪಕ ತ್ಯಾಜ್ಯ ನಿರ್ವಹಣೆ ನಡೆಯಬೇಕು. ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿರುವ ವೆಲ್ಲೂರು ಮಾದರಿಯ ಘನ-ದ್ರವ ಸಂಪನ್ಮೂಲ ನಿರ್ವಹಣೆ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ವಿಸ್ತರಿಸಲ್ಪಡಬೇಕು ಎಂದು ವಂಡ್ಸೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಉದಯಕುಮಾರ ಶೆಟ್ಟಿ ಹೇಳಿದರು. ಕುಂದಾಪುರ ಮಿಡ್‌ಟೌನ್ ಮತ್ತು ಬೈಂದೂರು ರೋಟರಿ ಕ್ಲಬ್, ಉಪ್ಪುಂದ-ಬೈಂದೂರು ಲಯನ್ಸ್ ಕ್ಲಬ್ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸಹಯೋಗದಲ್ಲಿ ವಿಚಿತ್ರ ಕ್ರಿಯೇಶನ್ಸ್ ಹೊರತಂದಿರುವ ಘನದ್ರವ ಸಂಪನ್ಮೂಲ ನಿರ್ವಹಣಾ ಘಟಕದ ಸಾಕ್ಷ್ಯಚಿತ್ರವನ್ನು ಅವರು ಶನಿವಾರ ನಾಗೂರಿನ ಕೆಎಎಸ್ ಆಡಿಟೋರಿಯಮ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು. ತಮ್ಮ ನೇತೃತ್ವದಲ್ಲಿ ವಂಡ್ಸೆ ಗ್ರಾಮ ಪಂಚಾಯಿತಿ ಆರಂಭಿಸಿರುವ ಘನದ್ರವ ಸಂಪನ್ಮೂಲ ನಿರ್ವಹಣಾ ಘಟಕದ ಯಶೋಗಾಥೆಯನ್ನು ವಿವರಿಸಿದ ಉದಯಕುಮಾರ ಶೆಟ್ಟಿ ಅದು ಮೂರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಲಾಭದಾಯಕವಾಗಿ ನಡೆಯುತ್ತಿದೆ. ರಾಜ್ಯದ ಮಾದರಿ ಘಟಕ ಎಂಬ ಹೆಗ್ಗಳಿಕೆ ಪಡೆದು, ದೇಶದ ಗಮನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ನೇರಂಬಳ್ಳಿ ಗ್ರಾಮದ ವಯೋವೃದ್ಧರೋರ್ವರು ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಕರೊನಾದಿಂದ ಮೃತಪಟ್ಟಿದ್ದು ಅವರ ಅಂತಿಮ ಸಂಸ್ಕಾರಕ್ಕಾಗಿ ಕುಂದಾಪುರ ಹಳೆಕೋಟೆ ಸ್ಮಶಾನಕ್ಕೆ ಮೃತದೇಹವನ್ನು ತಂದಾಗ ಕುಟುಂಬಿಕರಿಗೊಂದು ಶಾಕ್ ಕಾದಿತ್ತು. ಅಂತಿಮ ಸಂಸ್ಕಾರಕ್ಕೂ ಮುನ್ನ ಅನುಮಾನಗೊಂಡು ಮೃತದೇಹದ ಪ್ಯಾಕ್ ಬಿಡಿಸಿದಾಗ ಅದರಲ್ಲಿ ಬೇರೊಬ್ಬ ವ್ಯಕ್ತಿಯ ಶವ ಕಂಡು ಕುಟುಂಬಸ್ಥರು ಕಂಗಾಲಾಗಿದ್ದಾರೆ. ನೇರಂಬಳ್ಳಿ ಮೂಲಕ 65 ವರ್ಷದ ವೃದ್ಧರು ಕರೊನಾ ಸೋಂಕಿನಿಂದಾಗಿ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಶವವನ್ನು ಅಂಬುಲೆನ್ಸ್‌ನಲ್ಲಿ ಕುಂದಾಪುರಕ್ಕೆ ತರಲಾಗಿತ್ತು. ಮೃತದೇಹ ಸಂಪೂರ್ಣ ಪ್ಯಾಕ್ ಮಾಡಿದ್ದರಿಂದ ಒಳಗಿರುವ ಶವ ಯಾರದ್ದೆಂದು ಮೊದಲಿಗೆ ಸಂಬಂಧಿಕರಿಗೆ ತಿಳಿಯಲಿಲ್ಲ. ಹಳೆಕೋಟೆ ಸ್ಮಶಾನಕ್ಕೆ ಅಂತ್ಯ ಸಂಸ್ಕಾರಕ್ಕೆ ತಂದಾಗ ಅನುಮಾನಗೊಂಡು, ಓಪನ್ ಮಾಡಬಾರದು ಎಂಬ ಒತ್ತಡದ ನಡುವೆಯೂ ಶವ ಪರೀಕ್ಷಿಸುವಾಗ ಅದರಲ್ಲಿ ವೃದ್ಧರ ಬದಲಿಗೆ ಬೇರೊಬ್ಬ ಯುವಕನ ಶವವಿತ್ತು. ಇದು ನಮ್ಮ ಮೃತದೇಹ ಅಲ್ಲವೆನ್ನುತ್ತಿದ್ದಂತೆ ಅಂಬುಲೆನ್ಸ್ ಸಿಬ್ಬಂದಿಗಳು ಶವ ಕೊಂಡುಹೋಗಲು ಯತ್ನಿಸಿದ್ದರು. ತಕ್ಷಣ ಸ್ಮಶಾನದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕರ್ನಾಟಕ ಸಾಹಿತ್ಯ ಅಕಾಡೆಮಿಯು 2019ನೇ ವರ್ಷದ ಪುಸ್ತಕ ಬಹುಮಾನ ಯೋಜನೆಗಾಗಿ ಈ ಕೆಳಕಂಡ ಪ್ರಕಾರಗಳ ಕನ್ನಡ ಪುಸ್ತಕಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಿದೆ. ವಿಮರ್ಶಕರು ಆಯ್ಕೆ ಮಾಡುವ ಒಂದು ಕೃತಿಗೆ ಬಹುಮಾನ ನೀಡಲಾಗುವುದು. ಬಹುಮಾನಕ್ಕೆ ಸಲ್ಲಿಸುವ ಕೃತಿಗಳು 2019ರ ಜನವರಿ 1 ರಿಂದ 2019ರ ಡಿಸೆಂಬರ್ 31ರ ವರೆಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಕೃತಿಗಳಾಗಿರಬೇಕು. ಕೃತಿಯಲ್ಲಿ ಪ್ರಥಮ ಮುದ್ರಣ 2019 ಎಂದು ಮುದ್ರಿತವಾಗಿರಬೇಕು. ಕಾವ್ಯ, ನವಕವಿಗಳ ಪ್ರಥಮ ಕವನ ಸಂಕಲನ, ಕಾವ್ಯ ಹಸ್ತ ಪ್ರತಿ-30 ವರ್ಷ ಒಳಗಿರುವ ಯುವಕವಿಗಳು ತಮ್ಮ ಅಪ್ರಕಟಿತ ಪ್ರಥಮ ಕವನ ಸಂಕಲನದ ಹಸ್ತ ಪ್ರತಿಯನ್ನು ಕಳಿಸಿಕೊಡಬೇಕು. ಕಾದಂಬರಿ, ಸಣ್ಣ ಕಥೆ, ನಾಟಕ, ಲಲಿತ ಪ್ರಬಂಧ, ಪ್ರವಾಸ ಸಾಹಿತ್ಯ, ಜೀವನ ಚರಿತ್ರೆ/ಆತ್ಮಕಥೆ, ಸಾಹಿತ್ಯ ವಿಮರ್ಶೆ, ಗ್ರಂಥ ಸಂಪಾದನೆ, ಮಕ್ಕಳ ಸಾಹಿತ್ಯ, ವಿಜ್ಞಾನ ಸಾಹಿತ್ಯ, ಮಾನವಿಕ, ಸಂಶೋಧನೆ, ವೈಚಾರಿಕ/ಅಂಕಣ ಬರಹ, ಅನುವಾದ-1 ಭಾರತೀಯ ಭಾಷೆಯಿಂದ ಕನ್ನಡಕ್ಕೆ ಅನುವಾದಗೊಂಡ ಕೃತಿ, ಅನುವಾದ-2 ಕನ್ನಡದಿಂದ ಅನ್ಯಭಾಷೆಗೆ ಅನುವಾದಗೊಂಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸಾಫ್ಟ್ ಸೆಲೆಕ್ಷನ್ ಕಮಿಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಇನ್ಸ್ಪೆಕ್ಟರ್, ಕೇಂದ್ರ ಮೀಸಲು ಪೊಲೀಸ್ ಪಡೆ (ಸಿ.ಎ.ಪಿ.ಎಫ್) ಹುದ್ದೆಗಳಿಗೆ ಕಂಪ್ಯೂಟರ್ ಆನ್ ಲೈನ್ ಸ್ಪರ್ಧಾತ್ಮಕ ಪರೀಕ್ಷಾ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 7 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ hಣಣಠಿ://ssಛಿ.ಟಿiಛಿ.iಟಿ ಅಥವಾ ದೂರವಾಣಿ ಸಂಖ್ಯೆ 08202574869/9480259790 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಪ್ರಕಟನೆಯಲ್ಲಿ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಎಮ್.ಆರ್.ಪಿ.ಎಲ್ ನ ಸಿ.ಎಸ್.ಆರ್ ನಿಧಿಯ ಧನ ಸಹಾಯದಿಂದ ಅಲಿಮ್ಕೋ ಎಸಿಸಿ, ಬೆಂಗಳೂರು ಇವರ ಮೂಲಕ ಉಡುಪಿ ಜಿಲ್ಲಾಡಳಿತ. ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆ, ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಇದರ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ವ್ಯಾಪ್ತಿಯ ಅಂಗವಿಕಲರಿಗೆ ದೈನಂದಿನ ಚಟುವಟಿಕೆಗಳಿಗೆ ಪೂರಕವಾದ ಸಾಧನ ಸಲಕರಣೆಯನ್ನು ವಿತರಿಸಲು ಶಿಬಿರವನ್ನು ಆಯೋಜಿಸಲಾಗಿದೆ. ಉಡುಪಿ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 24 ರಂದು ವಿವೇಕಾನಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ಅಜ್ಜರಕಾಡು ಬ್ರಹ್ಮಾವರ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 25 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬ್ರಹ್ಮಾವರ ಬೈಂದೂರು ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 26 ರಂದು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೈಂದೂರು ಕುಂದಾಪುರ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 27 ರಂದು ತಾಲೂಕು ಪಂಚಾಯತ್ ಸಭಾಂಗಣ ಕುಂದಾಪುರ ಕಾರ್ಕಳ ತಾಲೂಕು ವ್ಯಾಪ್ತಿಯ ಅಂಗವಿಕಲರಿಗೆ ಆಗಸ್ಟ್ 28 ರಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.22ರ ಶನಿವಾರ 348 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 132, ಉಡುಪಿ ತಾಲೂಕಿನ 165 ಹಾಗೂ ಕಾರ್ಕಳ ತಾಲೂಕಿನ 46 ಮಂದಿಗೆ ಪಾಸಿಟಿವ್ ಬಂದಿದೆ. 5 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಬಂದ ಪ್ರಕರಣಗಳು ಒಟ್ಟು 10,016 ಆಗಿದ್ದು, 2,842 ಸಕ್ರೀಯ ಪ್ರಕರಣಗಳಿವೆ. ಒಟ್ಟು ಪ್ರಕರಣಗಳಲ್ಲಿ 74 ಸಿಂಥಮೇಟಿವ್ ಹಾಗೂ 274 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 171 ಪುರುಷರು, 177 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 178, ILI 42, ಸಾರಿ 2 ಪ್ರಕರಣವಿದ್ದು, 124 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 2 ಮಂದಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 51 ಮಂದಿ ಆಸ್ಪತ್ರೆಯಿಂದ ಹಾಗೂ 184 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. 975 ನೆಗೆಟಿವ್: ಈ ತನಕ ಒಟ್ಟು 63925 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 53057 ನೆಗೆಟಿವ್, 10016…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಪ್ರಸ್ತಕ ಸಾಲಿನ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ದಿಂದ ಹಿಂದುಳಿದ ವರ್ಗಗಳ ಪ್ರವರ್ಗ-(1)ರ ಕೋಲಿ, ಗಂಗಾಮತ, ಬೆಸ್ತ, ಕಬ್ಬಲಿಗ, ಮೊಗವೀರ, ಅಂಬಿಗ/ಅಂಬಿ, ಬಾರ‍್ಕಿ/ಬಾರಿಕ, ಬೆಸ್ತರ್, ಭೋಯಿ, ರಾಜಬೋಯಿ, ಬುಂಡೆ-ಬೆಸ್ತರ್, ದಾಲ್ಚಿ, ದಾವತ್, ಗಬಿಟ್, ಗಲಾಡಕೊಂಕಣಿ, ಗಂಗೆಮಕ್ಕಳು, ಗಂಗಾಕುಲ, ಗಂಗಾಮತಸ್ಥ, ಗಂಗಾಪುತ್ರ, ಗೌರಿಮತ, ಬುಂಡೆಬೆಸ್ತ/ಗುಂಡೆಬೆಸ್ತ, ಹರಿಕಂತ್ರ, ಜಲಗಾರ, ಕಬ್ಬೇರ/ಕಬ್ಬೇರ್, ಕಬ್ಬಿಲಿ, ಕಹರ್, ಖಾರ್ವಿ/ಕೊಂಕಣಿಖಾರ್ವಿ, ಕೋಳಿಮಹದೇವ್, ಮಡ್ಡರ್,ಮೀನಗಾರ್, ಮಗೇರ್, ಮುಕ್ಕವಾನ್, ಪರಿವಾರ, ಸಿವಿಯರ್, ಸುಣಗಾರ್, ಸುಣಗಾರ, ತೊರೆಯ ಜಾತಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ , ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ,ಅರಿವು ಶೈಕ್ಷಣಿಕ ಸಾಲ ಯೋಜನೆ ,ಗಂಗಾಕಲ್ಯಾಣ ನೀರಾವರಿ ಯೋಜನೆ ಕೌಶಲ್ಯಾಭಿವೃಧ್ಧಿ/ಉದ್ಯಮಶೀಲತಾ ತರಬೇತಿ ಗಳಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 1 ಕೊನೆಯ ದಿನವಾಗಿದೆ. ಅರ್ಜಿಯನ್ನು ಆನ್-ಲೈನ್ ಮೂಲಕ  http://ambigaradevelopment.karnataka.gov.in ಮೂಲಕ ಅಥವಾ ನೇರವಾಗಿ ಜಿಲ್ಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.21ರ ಶುಕ್ರವಾರ 278 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 99, ಉಡುಪಿ ತಾಲೂಕಿನ 159 ಹಾಗೂ ಕಾರ್ಕಳ ತಾಲೂಕಿನ 14 ಮಂದಿಗೆ ಪಾಸಿಟಿವ್ ಬಂದಿದೆ. 6 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 85 ಸಿಂಥಮೇಟಿವ್ ಹಾಗೂ 193 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 157 ಪುರುಷರು, 121 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 114, ILI 68, ಸಾರಿ 6 ಪ್ರಕರಣವಿದ್ದು, 89 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 204 ಮಂದಿ ಆಸ್ಪತ್ರೆಯಿಂದ ಹಾಗೂ 161 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಕುಂದಾಪುರದ 61 ವರ್ಷದ ಪುರುಷ ಹಾಗೂ ಉಡುಪಿಯ 80 ವರ್ಷದ ಪುರುಷ ಇಂದು ಮೃತರಾಗಿದ್ದು, ಕೋವಿಡ್ ಪಾಸಿಟಿವ್ ದೃಢವಾಗಿದೆ. 1,314 ನೆಗೆಟಿವ್: ಈ ತನಕ ಒಟ್ಟು 62767 ಮಾದರಿ ಸಂಗ್ರಹಿಸಿದ್ದು,…

Read More