ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿಯ ಐತಿಹಾಸಿಕ ಶ್ರೀ ಗುಹೇಶ್ವರ ದೇವಾಲಯದಲ್ಲಿ ಶಿವರಾತ್ರಿಯ ಅಂಗವಾಗಿ ವಿಶೇಷ ಪೂಜೆ, ಶಿವನಾಮ ಸ್ಮರಣೆ ನಡೆದವು. ಐತಿಹ್ಯ: ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಕೊಡಪಾಡಿಯಲ್ಲಿನ ಈ ಐತಿಹಾಸಿಕ ಗುಹೇಶ್ವರ ದೇವಾಲಯದಲ್ಲಿ ಶಿವನ ಮೂಲ ಸಾನಿಧ್ಯಕ್ಕೊಂದು ಮೆರಗಿದೆ. 20 ಅಡಿ ಉದ್ದದ ಕಲ್ಲಿನ ಪೊಟರೆಯ ಅಂತ್ಯದಲ್ಲಿ ಉದ್ಘವಿಸಿರುವ ಈ ಶಿವಲಿಂಗದಲ್ಲೊಂದು ಬೆರಗಿದೆ. ಈಶ್ವರನೊಂದಿಗೆ ಸ್ಕಂದ ದೇವರ ಉದ್ಭವ ಸನ್ನಿಧಿಯೂ ಇದೆ. ಈ ಮೊದಲು ಶಿವರಾತ್ರಿಯಂದು ಗುಹೆಯೋಳಗಿನ ಉದ್ಭವರೂಪಿ ಗುಹೇಶ್ವರ ದರ್ಶನಕ್ಕೆ ವಿಶೇಷ ಅವಕಾಶ ಕಲ್ಪಿಸಲಾಗುತ್ತಿತ್ತು. ಆದರೆ ಕಳೆದೆರಡು ವರ್ಷದಿಂದ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದೆ. ಅರ್ಚಕರು ಪೂಜೆ ಸಲ್ಲಿಸುತ್ತಾರೆ. ಪ್ರಾಚಿನ ದೇವಾಲಯಗಳಲ್ಲೊಂದಾಗ ಶ್ರೀ ಗುಹೇಶ್ವರ ದೇವಾಲಯದ ಈಶ್ವರ, ಸ್ಕಂದ, ಗಣಪತಿ ಹಾಗೂ ಅಮ್ಮನವರ ಸಾನಿಧ್ಯವಿದ್ದು ಪ್ರತಿನಿತ್ಯವೂ ಪೂಜೆ ಪುನಸ್ಕಾರಗಳು ನಡೆಯುತ್ತವೆ. ಸ್ವಯಂ ಸೇವಕರು, ಗುಜ್ಜಾಡಿಯ ಯುವಕರು ಶಿವರಾತ್ರಿಯಂದು ಒಂದಾಗಿ ದೇವರ ಕಾರ್ಯದಲ್ಲಿ ಭಾಗವಹಿಸಿ ಭಕ್ತರಿಗೆ ಮಾರ್ಗದರ್ಶನ ನೀಡುತ್ತಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಪ್ರಾಚೀನ ದೇವಾಲಯಗಳಲ್ಲಿ ಒಂದೆನಿಸಿರುವ ಶ್ರೀ ಕುಂದೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ದೇವರಿಗೆ ಪೂಜೆ, ಶಿವನಾಮ ಸ್ಮರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜರುಗಿದವು. ದೇವರಿಗೆ ರುದ್ರಾಭಿಷೇಕ – ಜಲಾಭಿಷೇಕ – ಕ್ಷೀರಾಭಿಷೇಕ – ಬಿಲ್ವಾರ್ಚನೆ-ನಂದಾದೀಪ, ಶಿವರಾತ್ರಿಯ ಅರ್ಘ್ಯಪ್ರದಾನ – ಇತ್ಯಾದಿ ಪೂಜೆಗಳನ್ನು ನಡೆದವು. ದೇವರ ದೀಪಕ್ಕೆ ಎಣ್ಣೆ ತಂದವರು ಅದನ್ನು ಉರಿಯುತ್ತಿರುವ ದೀಪದ ಸುರಿದು ದೇವರಿಗೆ ನಮಿಸುವುದು ಕಂಡುಬಂತು. ದೇವಾಲಯದ ಬಯಲು ರಂಗಮಂಟಪದಲ್ಲಿ ಭಜನಾ ಕಾರ್ಯಕ್ರಮ ಜರುಗಿತು. ರಾತ್ರಿ ಕಾಲದಲ್ಲಿ ಕುಂದೇಶ್ವರನ ಸನ್ನಿಧಿಯಲ್ಲಿ ನಡೆಯುವ ರಂಗಪೂಜೆ ಮತ್ತು ಮಹಾಮಂಗಳಾರತಿಯಲ್ಲಿ ಭಕ್ತಾದಿಗಳೆಲ್ಲ ಭಾಗವಹಿಸಿ, ಮಂತ್ರ ಪುಷ್ಪ ಸಮರ್ಪಿಸಿ, ಪ್ರಾರ್ಥನೆ ಸಲ್ಲಿಸುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕೋಟತಟ್ಟು ಪಡುಕೆರೆಯ ಶಿರಸಿ ಮಾರಿಕಾಂಬಾ ದೇವಸ್ಥಾನದ ಬಾವಿಗೆ ವ್ಯಕ್ತಿ ಒಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೋಟತಟ್ಟು ಪಡುಕೆರೆಯ ಚೆನ್ನಿ ಪೂಜಾರಿ(50) ಎಂದು ಗುರುತಿಸಲಾಗಿದೆ. ಇವರು ಮಣೂರು ಪಡುಕೆರೆಯಲ್ಲಿ ಬೀಡಾ ಅಂಗಡಿ ನಡೆಸುತ್ತಿದ್ದು ಮದುವೆಯಾಗಿ ಎರಡು ಮಕ್ಕಳಿದ್ದು ಹತ್ತು ವರ್ಷ ಹಿಂದೆ ವಿಚ್ಚೆದನ ಪಡೆದಿದ್ದು ಇದರಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ದೇವಸ್ಥಾನದ ಬಾವಿಯ ಹಗ್ಗವನ್ನು ಉಪಯೋಗಿಸಿ ಬಾವಿಯೊಳಗೆ ಚೆನ್ನಿ ಪೂಜಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಬೆಳಿಗ್ಗೆ 5.30 ಗಂಟೆಗೆ ದೇವಸ್ಥಾನದ ಭಟ್ಟರು ಪೂಜೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿಯಬೇಕಾಗಿದೆ. ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ಮಾರ್ಚ್ 21ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ಮೊದಲ ಯುವ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮ್ಮೇಳನಾಧ್ಯಕ್ಷರಾಗಿ ಶಿಕ್ಷಕ, ಹೆಬ್ರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪಿ. ವಿ ಆನಂದ ಸಾಲಿಗ್ರಾಮ ಅವರನ್ನು ಆಯ್ಕೆ ಮಾಡಲಾಗಿದೆ. ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮಹಿಳಾ ಸಬಲೀಕರಣ ಘಟಕ ಹಾಗೂ ಜೇಸಿರೆಟ್ ವಿಂಗ್ ಆಫ್ ಜೆಸಿಐ ಕುಂದಾಪುರ ಸಿಟಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯನ್ನು ಸನ್ಮಾನಿಸಲಾಯಿತು. ಡಾ. ಶ್ರಾವ್ಯ (ಸಮಾಜಸೇವೆ), ಮಮತಾ ಆರ್. ಶೆಟ್ಟಿ ಹದ್ದೂರು (ಕೃಷಿ), ಲಿರಾ ಜೂಲಿಯೇಟ್ (ವ್ಯಾವಹಾರಿಕ), ಡಾ. ಸರೋಜಿನಿ (ಶಿಕ್ಷಣ), ನಿವೇದಿತಾ ತೃತೀಯ ಬಿ.ಕಾಂ. (ಕ್ರೀಡೆ), ಶುಭಲಕ್ಷ್ಮೀ, ದ್ವಿತೀಯ ಬಿ.ಬಿ.ಎ. (ಶಿಕ್ಷಣ) ಇವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಜೇಸಿ ಅಕ್ಷತಾ ಶೆಟ್ಟಿ ನಿರ್ದೇಶಕರು, ಜೇಸಿರೆಟ್ ವಿಭಾಗ, ಜೇಸಿ ಆಯಿಷಾ ಫೈಜಾ, ವಲಯ ಸಂಯೋಜಕರು, ವಿಜಯ ಭಂಡಾರಿ, ಅಧ್ಯಕ್ಷರು ಜೆಸಿಐ ಕುಂದಾಪುರ ಸಿಟಿ, ಉಪಾಧ್ಯಕ್ಷ ಅಭಿಲಾಷ್, ಪ್ರಶಾಂತ್ ಹವಾಲ್ದಾರ್, ವಲಯಾಧಿಕಾರಿ ಜೆಸಿಐ ಕುಂದಾಪುರ ಸಿಟಿ, ಜೆಸಿಐ ಕುಂದಾಪುರ ಸಿಟಿಯ ನಿಕಟಪೂರ್ವ ಅಧ್ಯಕ್ಷರಾದ ರೇಖಾ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಲೆಕ್ಕಾಪರಿಶೋಧನೆ ಸರಿಯಾಗಿಲ್ಲ. ಮುಜರಾಯಿ ಇಲಾಖೆಯಡಿ ಬಡುವ ದೇವಾಯಲಗಳ ಆರ್ಥಿಕ ಸ್ಥಿತಿ ಒಂದೇ ಸಾಲಿನಲ್ಲಿದೆ. ಮಹಾಸಂಗವು ಇತರ ಮುಜರಾಯಿ ದೇವಾಲಯದ ಆರ್ಥಿಕ ಅವ್ಯವಹಾರವನ್ನು ಒಂದೊಂದಾಗಿ ಬಹಿರಂಗಪಡಿಸುತ್ತದೆ. ಕೊಲ್ಲೂರು ಕರ್ನಾಟಕದ ಎರಡನೇ ಅತಿ ದೊಡ್ಡ ಆದಾಯ ಗಳಿಸುವ ದೇವಾಲಯವಾಗಿದೆ ಎಂದು ಮಹಾಸಂಘದ ವಕ್ತಾರ ಗುರುಪ್ರಸಾದ್ ಗೌಡ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಕೊಲ್ಲೂರು ದೇವಾಲಯದಲ್ಲಿ ಆರ್ಥಿಕ ಅವ್ಯವಹಾರ ನಡೆಯುತ್ತಿದೆ ಎಂದು ಹೇಳಿದರು. 2018-19ನೇ ಸಾಲಿನಲ್ಲಿ ಜಿಲ್ಲಾ ಆಯುಕ್ತರ ಮನೆಯ 23,363 ರೂ. ದೂರವಾಣಿ ಬಿಲ್ ಅನ್ನು ದೇವಾಲಯ ಸಮಿತಿಯೇ ಪಾವತಿಸಿದೆ. ಕೆಲವು ಸರ್ಕಾರಿ ನೌಕರರ ವೇತನವನ್ನು ದೇವಾಲಯದಿಂದಲೂ ನೀಡಲಾಗುತ್ತದೆ. ದೇವಾಲಯದ ಲೆಕ್ಕಪರಿಶೋಧನೆ ಸರಿಯಿಲ್ಲ. 20 ಕೋಟಿಗೂ ಅಧಿಕ ಆರ್ಥಿಕ ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈಗ ಮಹಾಸಂಘವು ಪೊಲೀಸ್ ಇಲಾಖೆಯಿಂದ ನ್ಯಾಯಯುತ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತಿದೆ. ”ಹಣಕಾಸಿನ ದುರುಪಯೋಗವು 2016 ರಲ್ಲಿ ಬೆಳಕಿಗೆ ಬಂದಿದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಒಬ್ಬ ಮನುಷ್ಯನಿಗೆ ಕಾವ್ಯದ ಅಧ್ಯಯನ ತುಂಬಾ ಮುಖ್ಯ. ವಿವಿಧ ಕ್ಷೇತ್ರಗಳಲ್ಲಿ ಪರಿಣತರಾಗಿ ನಾಡು ಕಟ್ಟಲು ಸಾಹಿತ್ಯದ ಅರಿವು ಅವಶ್ಯ. ಒಂದು ಉತ್ತಮ ಸಾಹಿತ್ಯ ನಮ್ಮ ಬದುಕು ಹೇಗೆ ಇರಬೇಕೆಂದು ಹೇಳುತ್ತದೆ. ಕುವೆಂಪುರವರ ಸಾಹಿತ್ಯ ಕೃತಿಗಳು ಮನುಜನಾಗಲಿ ಅಥವಾ ಯಾವುದೇ ಜೀವಿಗಳಾಗಲಿ ಎಲ್ಲರೂ ಸಮಾನರೆಂಬ ತತ್ವವನ್ನು ಸಾರುತ್ತವೆ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಸ. ಚಿ ರಮೇಶ್ ಹೇಳಿದರು. ಕುಪ್ಪಳಿಯ ಕುವೆಂಪು ಕನ್ನಡ ಕೇಂದ್ರ, ಕನ್ನಡ ವಿಶ್ವವಿದ್ಯಾಲಯ, ಹಂಪಿ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಹಯೋಗದಲ್ಲಿ ಕುವೆಂಪು ಕಾವ್ಯ: ಅನುಸಂಧಾನದ ನೆಲೆಗಳು’ ಕುರಿತ ಎರಡು ದಿನಗಳ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕುವೆಂಪು ಸಾಹಿತ್ಯ ಕೃತಿಗಳನ್ನು ವಿಶ್ಲೇಷಿಸಿದ ಅವರು, ‘ಸಾಲದ ಮಗು’, ‘ಧನ್ವಂತರಿ’ ಕ್ರಮವಾಗಿ ಜೀತ ಹಾಗೂ ರೈತಾಪಿ ವರ್ಗದ ಮೇಲೆ ಬೆಳಕು ಚೆಲ್ಲಿದರೆ ಅವರ ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿ ಸುಬ್ಬಮ್ಮ ಅಂದಿನ ಸಾಮಾಜಿಕ ವ್ಯವಸ್ಥೆಗಳನ್ನು ಕಟ್ಟಿಕೊಡುವಲ್ಲಿ ಯಶಸ್ವಿಯಾಗಿವೆ. ಜೊತೆಗೆ ಸಮಾನತೆಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಅಜ್ಜರಕಾಡು ಕ್ರೀಡಾಂಗ ಣದಲ್ಲಿ ಮಾರ್ಚ್ 17ರಿಂದ ನಡೆಯುವ ಭಾರತೀಯ ಸೇನಾ ನೇಮಕಾತಿ ರ್ಯಾಲಿಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು. ಕಚೇರಿಯಲ್ಲಿ ಸೇನಾ ನೇಮಕಾತಿ ರ್ಯಾಲಿ ಕುರಿತು ಸೇನಾ ನೇಮಕಾತಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಂದ ಬರುವ ಅಭ್ಯರ್ಥಿಗಳಿಗೆ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಯನ್ನು ನಗರಸಭೆ ನೋಡಿಕೊಳ್ಳುತ್ತಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕ್ರೀಡಾಂಗಣದಲ್ಲಿ ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿ ಹಾಗೂ ಅಂಕಪಟ್ಟಿಗಳ ಪರಿಶೀಲನೆಗೆ ಶಿಕ್ಷಣ ಇಲಾಖೆಯ 20 ಸಿಬ್ಬಂದಿ ನಿಯೋಜಿಸಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು. ರ್ಯಾಲಿಯಲ್ಲಿ ಪ್ರತಿದಿನ 3,000 ಅಭ್ಯರ್ಥಿಗಳು ಬರಲಿದ್ದು, ನೂಕು ನುಗ್ಗಲು ತಪ್ಪಿಸಲು, ರ್ಯಾಲಿ ಸುಗಮವಾಗಿ ನಡೆಯಲು ಸೂಕ್ತ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗುವುದು. ಕ್ರೀಡಾಂಗಣಕ್ಕೆ ನಿರಂತರ ವಿದ್ಯುತ್ ಮತ್ತು ವೇಗದ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು ಎಂದು ಡಿಸಿ ಹೇಳಿದರು. ಜಿಲ್ಲೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಭಂಡಾರ್ಕಾರ್ಸ್ ಆರ್ಟ್ಸ್ ಮತ್ತು ಸೈನ್ಸ್ ಕಾಲೇಜು ಕುಂದಾಪುರ ಇದರ ಜಂಟಿ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಕ್ರಿಕೆಟ್(ಲೆದರ್ ಬಾಲ್) ಪಂದ್ಯಾಟದಲ್ಲಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಸೆಮಿಫೈನಲ್ನಲ್ಲಿ ಡಾ. ಬಿ.ಬಿ.ಹೆಗ್ಡೆ ಕಾಲೇಜನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ತಂಡ ಫೈನಲ್ನಲ್ಲಿ ಭಂಡಾರ್ಕಾರ್ಸ್ ಕಾಲೇಜಿನ ವಿರುದ್ದ ಜಯ ಸಾಧಿಸಿ ಪ್ರಥಮ ಸ್ಥಾನಿಯಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ತೃತೀಯ ಬಿ.ಕಾಂ ನ ಮಹಮ್ಮದ್ ಹಯಾಝ್ ಪಂದ್ಯಶ್ರೇಷ್ಠನಾಗಿ ಆಯ್ಕೆಯಾದರು, ಸಂಸ್ಥೆಯ ಅಧ್ಯಕ್ಷರಾದ ಕೆ.ಎಮ್ ಅಬ್ದುಲ್ ರೆಹಮಾನ್ , ನಿರ್ದೇಶಕರಾದ ದೋಮ ಚಂದ್ರಶೇಖರ್ ಹಾಗೂ ಪ್ರಾಂಶುಪಾಲರಾದ ಡಾ. ಶಮೀರ್ ಉಪಸ್ಥಿತರಿದ್ದರು. ಮಹಮ್ಮದ್ ಇಲಿಯಾಸ್ ಹಾಗೂ ವೀಣಾ ಅಗೇರ್ ತಂಡವನ್ನು ತರಬೇತುಗೊಳಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರಮಟ್ಟದಲ್ಲಿ ಜರುಗಿದ 2021ನೇ ಸಾಲಿನ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಾದ ಕಶಿಶ್ ಕೆ.ಸಿ., ತಿಲಕ್ ಚಂದ್ರ ಶಾಸ್ತ್ರೀ, ಸಂಧ್ಯಾ, ನಿಧಿ, ಶ್ರೇಯಾ, ಶ್ರೀವತ್ಸ ಕಾಮತ್, ಸ್ವಸ್ತಿಕ್ ಎಂ. ಭಂಡಾರಿ, ರಶ್ಮಿ, ರಕ್ಷಿತಾ, ಸತ್ವಿಕ್ ಎ ಶೆಟ್ಟಿ, ಶಶಾಂಕ್ ಎ. ಶೇಟ್, ಮಂಜುಶಾ ಭಾಸ್ಕರ್ ಶೆಟ್ಟಿ, ಸಿಂಚನ ಎಸ್., ಅಚಿಂತ್ಯ ಉಪಾಧ್ಯಾಯ, ಶ್ರೀನಿಧಿ ಉಡುಪಾ ಇವರುಗಳು ಕಾಲೇಜಿನಲ್ಲಿ ಲಭ್ಯವಿರುವ ಜೆಇಇ ಕೋಚಿಂಗ್ ನ ಸದುಪಯೋಗವನ್ನು ಪಡೆದುಕೊಂಡು ಉತ್ತೀರ್ಣರಾಗಿದ್ದಾರೆ. ಉತ್ತಮ ಫಲಿತಾಂಶ ಪಡೆದಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕವೃಂದ ಅಭಿನಂದಿಸಿದ್ದಾರೆ.
