Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ಗ್ರಾಮವು ಕೋಮು ಸೂಕ್ಷ್ಮ ಪ್ರದೇಶವಾಗಿದ್ದು ಇತ್ತೀಚಿಗೆ ನಡೆದ ಅಹಿತಕರ ಘಟನೆಗಳು ಮತ್ತು ಕೋಮು ಸಂಬಂಧಿತ ಘರ್ಷಣೆಗಳಿಂದ ಮುಂಬರುವ ಹೋಳಿ ಹಬ್ಬದ ಆಚರಣೆಯನ್ನು ಅತ್ಯಂತ ಶಾಂತಿಯುತವಾಗಿ ನಡೆಸಬೇಕು. ಕೋವಿಡ್-೧೯ ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹೇಳಿದರು. ಹೋಳಿ ಹಬ್ಬದ ಪೂರ್ವಭಾವಿಯಾಗಿ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಸೋಮವಾರ ನಡೆದ ಸರ್ವಧರ್ಮೀಯರ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಮೆರವಣಿಗೆ ಮತ್ತು ಇತರ ಕಾರ್ಯಕ್ರಮದ ವೇಳೆ ಅನ್ಯ ಧರ್ಮಿಯರಿಗೆ ಘೋಷಣೆ ಕೂಗುವುದು, ಅಸಂವಿಧಾನಿಕ ಭಾಷೆ ಉಪಯೋಗಿಸುವುದು, ರಾಜಕೀಯ ಪ್ರೇರಿತ ಘೋಷಣೆ ಕೂಗದಂತೆ, ಅನ್ಯ ಧರ್ಮಿಯರ ಭಾವನೆಗಳಿಗೆ ಧಕ್ಕೆ ಬಾರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮೆರವಣಿಗೆ ಸಂದರ್ಭ ಅಸಭ್ಯ, ಅಶಿಸ್ತು ವರ್ತನೆ ಮಾಡದಂತೆ ಸಮಾಜದ ಮುಖಂಡರು ನೋಡಿಕೊಳ್ಳಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾದಲ್ಲಿ ನಿರ್ದಾಕ್ಷಿಣ್ಯವಾಗಿ ಸಂಬಂಧಪಟ್ಟವರ ವಿರುದ್ಧ ಕಾನೂನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮಾ.15: ಜಿಲ್ಲೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗಿ ಇಡೀ ದೇಶದಲ್ಲಿ ಸಂಘರ್ಷಕ್ಕೆ ಎಡೆ ಮಾಡಿದ್ದ ಹಿಜಾಬ್ ವಿವಾದ ಕುರಿತು ಮಹತ್ವದ ತೀರ್ಪು ಹೊರಬಿದ್ದಿದ್ದು, ಸರ್ಕಾರದ ಆದೇಶ ಕಾನೂನು ಬದ್ದವಾಗಿದೆ. ಸರ್ಕಾರ ಹೊರಡಿಸಿದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ. ಸರ್ಕಾರ ಆದೇಶ ಕಾನೂನು ಬದ್ದವಾಗಿದೆ. ಹಿಜಾಬ್ ಧರಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಜಾಗೊಳಿಸಿ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧಾರಣೆ ಕಡ್ಡಾಯ ಎನ್ನುವ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ಜೆ. ಎಂ. ಖಾಜಿ ಅವರನ್ನು ಒಳಗೊಂಡ ಪೀಠವು ತೀರ್ಪು ಪ್ರಕಟಿಸಿದೆ. 11 ದಿನ ಸುದೀರ್ಘ ವಿಚಾರಣೆ ನಡೆಸಿದ್ದ ಪೂರ್ಣ ಪೀಠವು ಫೆಬ್ರವರಿ 25ರಂದು ತೀರ್ಪು ಕಾಯ್ದಿರಿಸಿತ್ತು. ಸರಿ ಸುಮಾರು 23.5 ತಾಸು ವಿಚಾರಣೆ ಆಲಿಸಿರುವ ಪೀಠವು 17 ದಿನಗಳ ಬಳಿಕ ತೀರ್ಪು ಪ್ರಕಟಿಸಿದೆ. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಹಿಜಾಬ್…

Read More

ಪ್ರಶಾಂತ್ ಸೂರ್ಯ ಸಾಬ್ರಕಟ್ಟೆ | ಕುಂದಾಪ್ರ ಡಾಟ್ ಕಾಂ ಲೇಖನದ.ಕ – ಉಡುಪಿ ಜಿಲ್ಲೆಯಲ್ಲಿ ಕುಡುಬಿ ಮತ್ತು ಮರಾಠಿ ಜನಾಂಗದವರು ಒಂದು ವಿಶಿಷ್ಠ ಜನಪದ ಆಚರಣೆಯಾಗಿ ಹೋಳಿ ಹಬ್ಬ ಸಂಭ್ರಮಿಸುತ್ತಾರೆ. ಅಮವಾಸ್ಯೆಯ ಮೊದಲು ಗೋವಾದಿಂದ ಮೂಲ ದೇವರ (ಮಲ್ಲಿಕಾರ್ಜುನ) ಉತ್ಸವ ಮೂರ್ತಿಯನ್ನು ತಂದು ಕೂಡುಕಟ್ಟಿನ ಹಿರಿಯ ಮನೆಗಳಲ್ಲಿ ಪೂಜೆ ಸಲ್ಲಿಸಿದ ಬಳಿಕ ಹಬ್ಬಕ್ಕೆ ಚಾಲನೆ ದೊರೆಯುತ್ತದೆ. ಆಕರ್ಷಕ ವೇಷಭೂಷಣ:ಹೋಳಿ ಹಬ್ಬದ ಸಮಯದಲ್ಲಿ ಕುಡುಬಿ ಜನಾಂಗದ ವೇಷಭೂಷಣ ನೋಡುವುದೇ ಒಂದು ಹಬ್ಬ. ತಲೆಗೆ ’ಅಬ್ಬಲಿ ಹೂವಿನಿಂದ’ ಮಾಡಿದ ಮುಂಡಾಸು ಅವರ ಎದುರು ಕಡೆ ಹಟ್ಟಿಮುದ್ದ ಹಕ್ಕಿಯ ಚೆಂದದ ಗರಿ; ಹಾಗೆಯೇ ವಿಶೇಷವಾದ ಉಡುಪುಗಳು,ಮೈ ಮೇಲೆ ಬಿಳಿಯ ನಿಲುವಂಗಿ, ಅಂಗಿಯ ಮೇಲೆ ಬಣ್ಣ ಬಣ್ಣದ ಪಟ್ಟೆಯ ದಾರ ಕಾಲಿಗೆ ಗೆಜ್ಜೆ, ಕೈಯಲ್ಲಿ ಬಾರಿಸುವ ಗುಮ್ಮಟೆ ಇದರ ಧ್ವನಿ ವಿಶೇಷವಾಗಿರುತ್ತದೆ. ಅವರ ಹಾದಿಯಲ್ಲಿ ಸಾಗುತ್ತಿದ್ದರೆ ಮಕ್ಕಳಿಂದ ಹಿಡಿದು ವಯೋವೃದ್ಧರಿಗೆ ಕಣ್ಣಿಗೆ ಹಬ್ಬ. ಕುಣಿತ-ಕೋಲಾಟ ಕಣ್ಣಿಗೆ ತಂಪು:ಹೋಳಿ ವರ್ಷದ 5 ದಿನ ಕುಡುಬಿ ಜನಾಂಗದವರು ಸಂಭ್ರಮಿಸುವ ಹಬ್ಬ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಮಾ.15ರ ಮಂಗಳವಾರ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಲಾಗಿದೆ.ಈ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಹಿಜಾಬ್ ವಿವಾದ ಆರಂಭಗೊಂಡ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ತೀರ್ಪು ಹೊರ ಬೀಳುವ ದಿನದಂದು ರಜೆ ಘೋಷಣೆ ಮಾಡಲಾಗಿದೆ. ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಹಾಗೂ ಯಾವುದೇ ಪ್ರಮುಖವಾದ ಪರೀಕ್ಷೆಗಳಿದ್ದಲ್ಲಿ ಅದನ್ನು ನಡೆಸಲು ವಿನಾಯಿತಿ ನೀಡಲಾಗಿದೆ. ಸಭೆ ಸಮಾರಂಭಕ್ಕಿಲ್ಲ ಅವಕಾಶ:ಅಲ್ಲದೇ ಯಾವುದೇ ಸಂಭ್ರಮಾಚರಣೆ, ಸಾರ್ವಜನಿಕ ಸಭೆ, ಪ್ರತಿಭಟನೆ, ಮೆರವಣಿಗೆ, ವಿಜಯೋತ್ಸವವನ್ನು ನಿಷೇಧಿಸಿ ಐಪಿಸಿ ಸೆಕ್ಷನ್ 144 ರಂತೆ ನಿಷೇಧಾಜ್ಞೆಯನ್ನು ಮುಂದಿನ ಆದೇಶದ ತನಕ ಹೊರಡಿಸಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಿದ್ಧ ಸಮಾಧಿ ಯೋಗ ಮತ್ತು ಸಾರ್ವಜನಿಕ ಭಕ್ತಾದಿಗಳಿಂದ ಹಮ್ಮಿಕೊಂಡಿದ್ದ 2ನೇ ವರ್ಷದ ಪಾದಯಾತ್ರೆಯು ಮಾ.13ರಂದು ಯೋಗ ಶಿಕ್ಷಕರಾದ ಆಚಾರ್ಯ ಕೇಶವ ಗುರೂಜಿಯವರ ಸಾರಥ್ಯದಲ್ಲಿ ನಡೆಯಿತು. ಬೆಳಿಗ್ಗೆ 4ಗಂಟೆಗೆ ಉಪ್ಪುಂದ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಪ್ರಾರಂಭವಾದ ಪಾದಯಾತ್ರೆ ಬೆಳಿಗ್ಗೆ 7ಗಂಟೆಗೆ ಬಿಳಿಶಿಲೆ ವಿನಾಯಕ ದೇವಸ್ಥಾನ ತಲುಪಿತು. ಅಲ್ಲಿ ಪೂಜೆ ಅರ್ಚನೆ ಮಂಗಳಾರತಿ ಮುಗಿಸಿ ಭಜನೆ ನರ್ತನದೊಂದಿಗೆ ಯಾತ್ರೆ 9ಗಂಟೆಗೆ 9ಗಂಟೆಗೆ ಹಾಲ್ಕಲ್ ತಲುಪಿತು. ಅಲ್ಲಿ ಬೆಳಿಗಿನ ಫಲಾಹಾರ ಮುಗಿಸಿದ ಯಾತ್ರೆ ಮದ್ಯಾಹ್ನ 12ಗಂಟೆಗೆ ಕೊಲ್ಲೂರು ತಲುಪಿ ಸೌಪಾರ್ಣಿಕ ನದಿಯಲ್ಲಿ ಸ್ನಾನ ಮಾಡಿ ಮುಕಾಂಬಿಕೆಯ ದರ್ಶನ ಪಡೆದು ಪುನೀತಾರಾದರು. ನಂತರ ಯೋಗ ಸಾಧಕರಿಂದ ದೇವರ ನಾಮಸಂಕೀರ್ತನೆ ನರ್ತನ ನಡೆಯಿತು. ಬೆಂಗಳೂರಿನಿಂದ ಬಂದಿದ್ದ ಯೋಗ ಶಿಕ್ಷಕ ಪರಶಿವದಾಸ ಅವರ ಭಜನೆ ಮತ್ತು ನಾಮಸಂಕೀರ್ತನೆ ಪಾದಯಾತ್ರಿಕರಿಗೆ ವಿಶೇಷವಾದ ಶಕ್ತಿ ಮತ್ತು ಸ್ಫೂರ್ತಿ ನೀಡಿತು. ದೇವಸ್ಥಾನದ ಆಡಳಿತ ಮಂಡಳಿ ಕೇಶವ ಗುರೂಜಿ ಮತ್ತು ಪರಶಿವದಾಸ್ ಗುರೂಜಿಯವರನ್ನು ಶಾಲು ಹೊದಿಸಿ ಫಲ ಪ್ರಸಾದ ನೀಡಿ ಗೌರವಿಸಿತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಗಾಂಧಿ ಮೈದಾನದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿಯೇ ಪುರಭವನ ನಿರ್ಮಾಣಗೊಳ್ಳುತ್ತಿದೆ. ಇದರೊಂದಿಗೆ ಕ್ರೀಡಾಂಗಣ ಅಭಿವೃದ್ಧಿಗೆ ಸರಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು ಶೀಘ್ರದಲ್ಲಿಯೇ ಅನುಮೋದನೆ ದೊರೆಯಲಿದೆ. ಈ ಯೋಜನೆಗಳ ಅನುಷ್ಠಾನದಿಂದಾಗಿ ತಾಲೂಕು ಕೇಂದ್ರಕ್ಕೆ ಜೀವಕಳೆ ಬಂದಂತಾಗಲಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು. ಸೋಮವಾರ ಅವರು ಬೈಂದೂರು ಗಾಂಧಿ ಮೈದಾನದಲ್ಲಿ ನಿರ್ಮಾಣಗೊಳ್ಳಲಿರುವ ಮೊಗೇರಿ ಗೋಪಾಲಕೃಷ್ಣ ಅಡಿಗ ಪುರಭವನ ಹಾಗೂ ಪ್ರಸ್ತಾವನೆಯಲ್ಲಿರುವ ಸುಸಜ್ಜಿತ ಸ್ಟೇಡಿಯಂ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಬೈಂದೂರು ಗಾಂಧಿ ಮೈದಾನದಲ್ಲಿ ಒಟ್ಟು 4.95 ಎಕರೆ ಜಾಗವಿದ್ದು, ಅದರಲ್ಲಿ 1.5 ಎಕರೆ ಜಾಗವನ್ನು ಪುರಭವನ್ನು ಮೀಸಲಿರಿಸಲಾಗಿದೆ. ಪುರಭವನದಲ್ಲಿ 800 ಮಂದಿ ಕುಳಿತುಕೊಳ್ಳಬಹುದಾದ ಹಾಲ್, ಸುಸಜ್ಜಿತ ಸ್ಟೇಜ್, 400 ಮಂದಿ ಕುಳಿತು ಊಟ ಮಾಡಬಹುದಾದ ಹಾಲ್, ಅಡುಗೆ ಕೋಣೆ, ಪಾರ್ಕಿಂಗ್ ವ್ಯವಸ್ಥೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ. ಪುರಭವನ ನಿರ್ಮಾಣದ ಬಗ್ಗೆ ಮೊದಲೇ ಪತ್ರಿಕಾ ಹೇಳಿಕೆಯಲ್ಲಿ ಸಂಸದರು ತಿಳಿಸಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಟಿಪ್ಪರ್ ವಾಹನವೊಂದು ಅದೇ ದಿಕ್ಕಿನಲ್ಲಿ ತೆರಳುತ್ತಿದ್ದ ಹೊಂಡಾ ಆಕ್ವಿವ್ ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ, ಹೊಂಡಾ ಆಕ್ವಿವ್’ನಲ್ಲಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಭಾನುವಾರ ಹೆಮ್ಮಾಡಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅರೆಹೊಳೆ ರಾಗಿಹಕ್ಲು ನಿವಾಸಿ ಜ್ಯೋತಿ (35) ಮೃತ ದುರ್ದೈವಿ. ಅಪಘಾತದಲ್ಲಿ ಸ್ಕೂಟಿ ಚಲಾಯಿಸುತ್ತಿದ್ದ ಅವರ ಪತಿ ಶರತ್ ಕುಮಾರ್ ಶೆಟ್ಟಿ (45) ಹಾಗೂ ಅವರ ಮಗಳು ಸನ್ನಿಧಿ (7) ಗಾಯಗೊಂಡಿದ್ದಾರೆ. ಕುಂದಾಪುರ ಕಡೆಗೆ ಮಣ್ಣು ಸಾಗಿಸುತ್ತಿದ್ದ ಟಿಪ್ಪರ್ ವೇಗದಲ್ಲಿ ಬಂದು ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಹೊಂಡಾ ಆಕ್ವಿವ್ ವಾಹನಕ್ಕೆ ಢಿಕ್ಕಿಯಾಗಿದೆ. ಈ ವೇಳೆ ಹಿಂದೆ ಕುಳಿತಿದ್ದ ಜ್ಯೋತಿ ಎಂಬುವವರು ಕೆಳಕ್ಕೆ ಬಿದ್ದ ಸಂದರ್ಭ, ಟಿಪ್ಪರ್ ಅವರ ಹೊಟ್ಟೆಯ ಮೇಲೆಯೇ ಚಲಿಸಿದ್ದರಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಹಿಳೆ ಕೆಳಕ್ಕೆ ಬೀಳುತ್ತಿರುವ ಸಂದರ್ಭ ಮಗಳನ್ನು ರಕ್ಷಿಸುವ ಸಲುವಾಗಿ ಇನ್ನೊಂದು ಬದಿಗೆ ಹಾಕಿದ್ದರಿಂದ ಅವರ ಮಗಳ ಕೈಗೆ ತರಚಿದ ಗಾಯ ಹಾಗೂ ಪತಿ ಸಣ್ಣಪುಟ್ಟ ಗಾಯವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು…

Read More

ಉಚಿತ ಶಿಕ್ಷಣ ಸೌಲಭ್ಯದ ಪ್ರವೇಶ ಪರೀಕ್ಷೆ ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಂಗ ಸಂಸ್ಥೆ, ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ರಾಜ್ಯದ ನಂ. 1 ಕನ್ನಡ ಮಾಧ್ಯಮ ಶಾಲೆಯಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 2022-23ನೇ ಸಾಲಿನ 6ರಿಂದ 9ನೇ ತರಗತಿಯ ಸಂಪೂರ್ಣ ಉಚಿತ ಶಿಕ್ಷಣ ಸೌಲಭ್ಯಕ್ಕೆ ನಡೆಸುವ ಪ್ರವೇಶ ಪರೀಕ್ಷೆಯು ಪುತ್ತಿಗೆ ವಿವೇಕಾನಂದ ನಗರದಲ್ಲಿ ಭಾನುವಾರ ನಡೆಯಿತು. ರಾಜ್ಯಾದ್ಯಂತ 26 ಜಿಲ್ಲೆಗಳ 11,362 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದು, 10,764 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. 6ನೇ ತರಗತಿಗೆ 5,628, 7ನೇ ತರಗತಿಗೆ 1936, 8ನೇ ತರಗತಿಗೆ 2,157 ವಿದ್ಯಾರ್ಥಿಗಳು ಹಾಗೂ 9ನೇ ತರಗತಿಗೆ 1,043 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದರು. ಬೆಳಗಾವಿ ಜಿಲ್ಲೆಯಿಂದ ಅತೀ ಹೆಚ್ಚು 3,513 ವಿದ್ಯಾರ್ಥಿಗಳು, ಬಾಗಲಕೋಟೆ ಹಾಗೂ ವಿಜಯಪುರದಿಂದ ಕ್ರಮವಾಗಿ 1,519 ಹಾಗೂ 1,088 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಪ್ರವೇಶ ಪರೀಕ್ಷೆಯು ವಿದ್ಯಾರ್ಥಿಗಳು ಪ್ರಸ್ತುತ ಓದುತ್ತಿರುವ ಪಠ್ಯವಿಷಯಗಳಿಗೆ ಸಂಬಂಧಿಸಿದ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನೂಜಾಡಿ -2 ಬಗ್ವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ನಿರ್ಮಿಸಲಾದ ವಿನೂತನ ಮಾದರಿ ಸ್ಮಾರ್ಟ್ ತರಗತಿ ಶನಿವಾರ ಉದ್ಘಾಟನೆಗೊಂಡಿತು. ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಕಟ್ಟಕಡೆಯ ಮಗು ಶಿಕ್ಷಣ ಪಡೆದರೆ ದೇಶ ಬದಲಾಗಲು ಸಾಧ್ಯ. ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳು ಉನ್ನತ ಸ್ಥಾನಕ್ಕೇರುತ್ತಾರೆ. ಶಿಕ್ಷಣದಿಂದ ಯಾವ ಮಗುವೂ ವಂಚಿತವಾಗಬಾರದು. ಗ್ರಾಮೀಣ ಶಾಲೆಗಳ ಮೂಲಸೌಕರ್ಯ ಒದಗಿಸುವ ಕಾರ್ಯ ಆಗುತ್ತಿದ್ದು, ಕೆಸ್ಸಾರ್ಟಿಸಿ ಬಸ್ನಲ್ಲಿ ಸ್ಮಾರ್ಟ್ ಕ್ಲಾಸ್ ರಾಜ್ಯಕ್ಕೆ ಮಾದರಿ ಎಂದರು. ಗ್ರಾಮೀಣ ಭಾಗದ ಸಂಚಾರ ಪರವಾನಿಗೆ ಇದ್ದರೂ ಬಸ್ ಓಡಿಸದೆ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸಮಸ್ಯೆ ಆಗುತ್ತಿದೆ. ಪರವಾನಿಗೆ ಇರುವ ಗ್ರಾಮ ಪ್ರದೇಶಗಳಿಗೆ ಕೆಎಸ್ಸಾರ್ಟಿಸಿ ಬಸ್ ಬಿಡದಿದ್ದರೆ 25 ಸಾವಿರ ವಿದ್ಯಾರ್ಥಿಗಳ ಸಹಿತ ಕುಂದಾಪುರ ಕೆಎಸ್ಸಾರ್ಟಿಸಿ ಡಿಪೋ ಎದುರು ಪ್ರತಿಭಟನೆ ನಡೆಸಲಾಗುತ್ತದೆ ಎಚ್ಚರಿಕೆ ನೀಡಿದ್ದಾರೆ. ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಕಮಲ ಕುಮಾರ್ ಮಾತನಾಡಿ ನಿರುಪಯುಕ್ತ ಕೆಎಸ್‌ಆರ್‌ಟಿಸಿ ಬಸ್ ಸಂಪೂರ್ಣ ಬದಲಾಗಿ ಸ್ಮಾರ್ಟ್ ಕ್ಲಾಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿಗಳ ಕುಂದಾಪುರ ಪುರಸಭೆ ಹಾಗೂ ಕಂದಾವರದಲ್ಲಿರುವ ಪುರಸಭೆಯ ಡಂಪಿಂಗ್ ಯಾರ್ಡ್‌ಗೆ ಶುಕ್ರವಾರ ಭೇಟಿ ನೀಡಿ ಅಲ್ಲಿನ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಪುರಸಭೆಯ ವಿಲೇವಾರಿ ಘಟಕದಲ್ಲಿ ತ್ಯಾಜ್ಯ ವಿಂಗಡನೆ, ಗೊಬ್ಬರ ಸಿದ್ದಪಡಿಸುವ ಯಂತ್ರಗಳ ಕೆಲಸ, ತ್ಯಾಜ್ಯ ನೀರು ಸಂಸ್ಕರಣ ಘಟಕದ ಒಂದು ತೊಟ್ಟು ನೀರು ಹೊರಗೆ ಬಿಡದೆ, ಶುದ್ದೀಕರಿಸಿ ಗಿಡಗಳಿಗೆ ಉಣಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು. ಬಳಿಕ ವಿದ್ಯಾರ್ಥಿಗಳು ಪುರಸಭೆ ಕಚೇರಿಗೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಗೆ ತ್ಯಾಜ್ಯ ನಿರ್ವಹಣೆ ಬಗ್ಗೆ ಕ್ವಿಜ್ ನಡೆಸಲಾಗಿದ್ದು, ತ್ಯಾಜ್ಯ ಸಮಪರ್ಕಕ ನಿರ್ವಹಣೆ ಬಗ್ಗೆ ವಿದ್ಯಾರ್ಥಿಗಳ ಜೊತೆ ಮಾಹಿತಿ ವಿನಿಮಯ ಮಾಡಿಕೊಳ್ಳಲಾಯಿತು. ಕುಂದಾಪುರ ಪುರಸಭೆಯಲ್ಲಿ ಇಷ್ಟು ತ್ಯಾಜ್ಯ ಸಂಗ್ರಹವಾಗುತ್ತದೆ ಎನ್ನೋದು ನಮಗೆ ಗೊತ್ತೇಯಿರಲಿಲ್ಲ. ತ್ಯಾಜ್ಯ ನಿರ್ವಹಣೆ, ಗೊಬ್ಬರ ತಯಾರಿಕೆ ನಿಜಕ್ಕೂ ಅಚ್ಚರಿ. ನಾವು ಇನ್ನುಮುಂದೆ ತ್ಯಾಜ್ಯ ಕುರಿತು ಮನೆಯಲ್ಲಿ ಜಾಗೃತಿ ಮೂಡಿಸಿ, ಆದಷ್ಟು ತ್ಯಾಜ್ಯ ಕಡಿಮೆ ಆಗುವಂತೆ ಪ್ರಯತ್ನಿಸುತ್ತೇವೆ ಎಂದು ವಿದ್ಯಾರ್ಥಿಗಳು ಪ್ರತಿಕ್ರಿಯಿಸಿದಾರೆ. ಪ್ರತಿದಿನ ಪುರಸಭೆಯಲ್ಲಿ 14…

Read More