Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ನಗರದ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವಾಗ ಪಾರ್ಕಿಂಗ್‌ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಪಾರ್ಕಿಂಗ್‌ಗೆ ಜಾಗ ಬಿಡದೇ ಆ ಸ್ಥಳವನ್ನು ಅತಿಕ್ರಮಿಸಿರುವವರ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಉಡುಪಿ ನಗರದಲ್ಲಿ ಪಾರ್ಕಿಂಗ್ ಸಮಸ್ಯೆಯಿಂದ ವಾಹನಗಳ ಸುಗಮ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಮತ್ತು ವಾಹನಗಳ ಪಾರ್ಕಿಂಗ್‌ಗೆ ತೀವ್ರ ಸಮಸ್ಯೆಯಾಗುತ್ತಿದ್ದು, ವಾಣಿಜ್ಯ ಕಟ್ಟಡಗಳು ಮತ್ತು ವಸತಿ ಸಮುಚ್ಛಯಗಳನ್ನು ನಿರ್ಮಿಸುವಾಗ, ಪಾರ್ಕಿಂಗ್‌ಗೆ ಜಾಗ ಮೀಸಲಿಟ್ಟು, ನಿರ್ಮಾಣದ ನಂತರ ಆ ಸ್ಥಳವನ್ನು ಅತಿಕ್ರಮಿಸಿ, ಅನಧಿಕೃತವಾಗಿ ಕಟ್ಟಡಗಳನ್ನು ನಿರ್ಮಿಸಿರುವ ಸಂಬಂದಪಟ್ಟ ಮಾಲೀಕರಿಗೆ 15 ದಿನದಲ್ಲಿ ತೆರವುಗೊಳಿಸುವ ಕುರಿತು ನೊಟೀಸ್ ನೀಡಿ, ಅತಿಕ್ರಮಣ ತೆರವು ಆಗದಿದಲ್ಲಿ ಸಂಬಂದಪಟ್ಟ ವಾಣಿಜ್ಯ ಸಂಸ್ಥೆಯ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವುದು ಸೇರಿದಂತೆ ಅತಿಕ್ರಮಣ ಪ್ರದೇಶವನ್ನು ನಗರಸಭೆ ವತಿಯಿಂದ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೋಲಿಕ್ರಾಸ್ ಚರ್ಚ್‌ನಲ್ಲಿ ವಾರ್ಷಿಕ ಹಬ್ಬ ತೆರಾಲಿ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಮುಖ್ಯ ಧರ್ಮಗುರುಗಳಾಗಿ ಮಾತನಾಡಿದ ಪಾಂಗಾಳ ಚರ್ಚಿನ ಸಹಾಯಕ ಧರ್ಮಗುರು ರೆ. ಫಾ ರೋಶನ್ ಡಿ ಕುನ್ನಾ, ಈ ಸಮಾಜದಲ್ಲಿ ನಾವೆಲ್ಲರೂ ಸಹೋದರ ಸಹೋದರಿಯರು ಎಂದು ಹೇಳಿದರು. ಈ ಸಂದರ್ಭದಲ್ಲಿ ಕುಂದಾಪುರ ವಲಯ ಧರ್ಮಗುರು ರೆ. ಫಾ. ಸ್ಟ್ಯಾನಿ ತ್ರಾವ್ರೂ, ಗಂಗೊಳ್ಳಿಯ ರೆ. ಫಾ. ಆಲ್ಪರ್ಟ್ ಕ್ರಾಸ್ತಾ, ರೆ. ಫಾ ಚಾರ್ಲ್ಸ್ ನೊರೆನ್ಹೆ, ಮುಂತಾದವರು ಉಪಸ್ಥಿತರಿದ್ದರು. ಬೈಂದೂರು ಚರ್ಚಿನ ಧರ್ಮಗುರು ರೆ. ಫಾ ವಿನ್ಸೆಂಟ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೊಶ ಆಶ್ರಯದಲ್ಲಿ ರಾಮಕೃಷ್ಣ ಮಿಶನ್ ಮಂಗಳೂರು ಇವರ ಸಹಯೋಗದಲ್ಲಿ ವಿವೇಕಾನಂದ ಮತ್ತು ಯುವಜನತೆ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಾಜಿ ಸೈನಿಕ ಗೋಪಿನಾಥ್ ರಾವ್ ಮಾತನಾಡಿ, ನಮ್ಮ ಬದುಕು ನಾವು ಏಣಿಸಿದಂತೆ ಆಗುತ್ತದೆ, ವಿವೇಕಾನಂದರ ಆಲೋಚನೆಗಳು ಪ್ರತಿಯೊಬ್ಬರ ಬದುಕಿನುದ್ದಕ್ಕೂ ಆದರ್ಶ ವ್ಯಕ್ತಿತ್ವವನ್ನು ಅಳವಡಿಸಿಕೊಳ್ಳಲು ನೆರವಾಗುತ್ತದೆ. ಅಲ್ಲದೇ ನಮ್ಮ ಯಶಸ್ವಿ ಬದುಕಿನ ನೆಲೆಗಳು ನಾವೆ ಎಣಿಸಿದಂತೆ ಆಗುತ್ತದೆ. ನಾವು ಒಳ್ಳೆಯ ದಾರಿಯನ್ನೇ ಕಂಡುಕೊಂಡರೆ ಒಳ್ಳೆಯ ದಾರಿಗಳೆ ಸಿಗುತ್ತದೆ. ಹಾಗೆಯೇ ಒಳ್ಳೆಯ ಯಶಸ್ಸು ಸಿಗುತ್ತದೆ. ನಾವು ದುರ್ಬಲರೆಂದು ಭಾವಿಸಿದರೆ ದುರ್ಬಲತೆ ನಮ್ಮನ್ನು ಆವರಿಸುತ್ತದೆ. ಆದರೆ ಸಬಲತೆಯನ್ನು ಸ್ವೀಕರಿಸಿ ಅಚಲ ಪರಿಶ್ರಮ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆದರೆ ಯಶಸ್ಸು ತಾನಾಗೆ ನಮ್ಮೊಳಗಾಗುತ್ತದೆ ಎಂದು ತಿಳಿಸಿದರಲ್ಲದೇ ಸೈನ್ಯದ ಕೆಲವು ಉದಾಹರಣೆಗಳನ್ನು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎನ್. ಪಿ. ನಾರಾಯಣ ಶೆಟ್ಟಿ ವಹಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪೆಟ್ರೋಲ್ ಬಂಕ್ ಸಮೀಪದ ದೀಪಾ ಕಾಂಪ್ಲೆಕ್ಸ್‌ನ ಮೊದಲನೆ ಮಹಡಿಯಲ್ಲಿ ಫೆ. 17ರ ಬುಧವಾರ ‘ಸ್ಪೀಡ್ ಮೊಬೈಲ್’ ಮಳಿಗೆ ಶುಭಾರಂಭಗೊಳ್ಳಲಿದೆ. ಸ್ಪೀಡ್ ಮೊಬೈಲ್ ಮಳಿಗೆಯು ಉಡುಪಿ ಜಿಲ್ಲೆಯಲ್ಲಿ ಕಳೆದ 7 ವರ್ಷಗಳಿಂದ ಮೊಬೈಲ್ ಮತ್ತು ಮೊಬೈಲ್ ಬಿಡಿಭಾಗಗಳ ಮಾರಾಟದಲ್ಲಿ ಉತ್ಕೃಷ್ಟ ಹಾಗೂ ತ್ವರಿತ ಸೇವೆ, ಉತ್ತಮ ಗುಣಮಟ್ಟ, ಸ್ಪರ್ಧಾತ್ಮಕ ಬೆಲೆ ನೀಡಿ ಗ್ರಾಹಕರ ವಿಶ್ವಾಸಕ್ಕೆ ಪಾತ್ರರಾಗಿದೆ. ಕುಂದಾಪುರದಲ್ಲಿ ಮೂರು ಶಾಖೆಗಳು, ಸಾಲಿಗ್ರಾಮ ಉಡುಪಿ, ಗಂಗೊಳ್ಳಿ, ನಾವುಂದ, ತೀರ್ಥಹಳ್ಳಿಯಲ್ಲಿ ಶಾಖೆಗಳನ್ನು ಹೊಂದಿರುವ ಸಂಸ್ಥೆಯು ಇದೀಗ ಬೈಂದೂರಿನಲ್ಲಿ ನೂತನ ಶಾಖೆಯನ್ನು ತೆರೆಯುತ್ತಿದೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಿಡಬ್ಲ್ಯು ಪ್ರಥಮ ದರ್ಜೆ ಗುತ್ತಿಗೆದಾರರು ಹಾಗೂ ಕಟ್ಟಡ ಮಾಲೀಕರಾದ ಎನ್. ಜಗನ್ನಾಥ್ ಶೆಟ್ಟಿ, ಬೈಂದೂರು ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷರಾದ ಎಮ್. ಗೋವಿಂದ, ಬೈಂದೂರು ಸರ್ಕಲ್ ಇನ್ಸ್‌ಪೆಕ್ಟರ್ ಸಂತೋಷ್ ಎ. ಕಾಯ್ಕಿಣಿ, ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷರಾದ ಗೋಪಾಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನೇತೃತ್ವದಲ್ಲಿ ಸುಗ್ಗಿ – ಹುಗ್ಗಿ ಜಾನಪದ ಉತ್ಸವ – 2021 ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಎದುರಿನ ವೇದಿಕೆಯಲ್ಲಿ ಫೆ.13ರ ಸಂಜೆ 5.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರಲಿದ್ದು, ಕಾರ್ಯಕ್ರದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯಸಭೆ ಸಂಸದರಾದ ಓಸ್ಕರ್ ಫೆರ್ನಾಂಡಿಸ್, ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ. ರಾಘವೆಂದ್ರ, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಚಂದ್ರ ಶೆಟ್ಟಿ, ಆಯನೂರು ಮಂಜುನಾಥ್, ಎಲ್. ಎಸ್. ಭೋಜೇಗೌಡ, ಡಾ. ತೇಜಸ್ವಿನಿ ಗೌಡ, ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಂಕರ ಪೂಜಾರಿ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಇಲ್ಲಿನ ಶಿರೂರು ಸಮೀಪದ ಅಳ್ವೆಗದ್ದೆ ಕ್ರಾಸ್ ಬಳಿ ವೇಗವಾಗಿ ಬಕ್ ಚಲಾಯಿಸಿದ ಬಾಲಕನೋರ್ವ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಬಕ್ ಸವಾರ ಹಡವಿನಕೋಣೆ ನಿವಾಸಿ ಅರಾನ್ (೧೫) ಮೃತ ದುರ್ದೈವಿ. ಕಳೆದ ವಾರವಷ್ಟೆ ಪೊಲೀಸರು ಈತನ ಚಾಲನೆ ಪರವಾನಿಗೆ ಇಲ್ಲದೆ ಬಕ್ ಚಲಾಯಿಸುತ್ತಿದ್ದ ವೇಳೆ ಪತ್ತೆ ಹಚ್ಚಿ ದಂಡ ವಿಧಿಸಿದ್ದರು. ಆ ನಂತರವೂ ಗುರುವಾರ ಮುಂಜಾನೆ ಬಕ್ ಚಲಾಯಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೈಂದೂರು ಪಿಎಸೈ ಸಂಗೀತಾ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಬಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪೊಲೀಸ್ ಠಾಣೆ ಆಶ್ರಯದಲ್ಲಿ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಹೆದ್ದಾರಿ ಜಂಕ್ಷನ್ನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಡೆಯಿತು. ಠಾಣಾಧಿಕಾರಿ ಭೀಮಾಶಂಕರ್ ಎಸ್. ಮಾತನಾಡಿ, ಈ ಸಾಲಿನ ಸಪ್ತಾಹವು ರಸ್ತೆ ಸುರಕ್ಷತೆ, ಜೀವದ ರಕ್ಷೆ ಕುರಿತು ಅರಿವು ಮೂಡಿಸುವ ಗುರಿಯೊಂದಿಗೆ ಇದೇ 17ರ ವರೆಗೆ ನಡೆಯುತ್ತಿದೆ ಎಂದರು. ಎಎಸ್ಐ ವೆಂಕೇಶ ಗೊಲ್ಲ, ಠಾಣಾ ಸಿಬ್ಬಂದಿ ಯೋಗೀಶ್, ದಿನೇಶ ಹಾಗೂ ಮುಳ್ಳಿಕಟ್ಟೆ ಆಟೊಶಂಕರ್ ರಿಕ್ಷಾ ಚಾಲಕ ಪ್ರದೀಪ್ ಬಿಲ್ಲವ, ಯೊಗೀಶ್ ಮೊಗವೀರ, ಗಣೇಶ್ ದೇವಾಡಿಗ, ಲೊಕೇಶ್ ಪೂಜಾರಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಐಸಿವೈಎಂ ಸಂಘಟನೆಯ ಆಶ್ರಯದಲ್ಲಿ ಕುಂದಾಪುರ ಕ್ರೈಸ್ಟ್ ವಲಯ ಮಟ್ಟದ 30 ಗಜದ ಕ್ರಿಕೆಟ್ ಪಂದ್ಯಾಟ ಹೋಲಿ ರೋಜರಿ ಚರ್ಚ್ ಮೈದಾನದಲ್ಲಿ ನಡೆಯಿತು. ಪಂದ್ಯಾಟವನ್ನು ಧರ್ಮಗುರು ಸ್ಟ್ಯಾನಿ ತಾವ್ರೊ ಬ್ಯಾಟಿಂಗ್ ಮಾಡಿ ಉದ್ಘಾಟಿಸಿದರು. 18 ತಂಡಗಳು ಭಾಗವಹಿಸಿದ್ದವು, ಬಸ್ರೂರು ‘ ಬಿ ‘ ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ಷಿಪ್ ಪಡೆಯಿತು. ಬಸ್ರೂರು ‘ ಎ ‘ ತಂಡ ದ್ವೀತಿಯ ಸ್ಥಾನ ಪಡೆದಿದೆ. ಪುರುಷರಲ್ಲಿ ಸ್ಟೀಫನ್ ಕರ್ವಾಲ್ಲೊ ಪಂದ್ಯ ಶ್ರೇಷ್ಠ, ಮಹಿಳೆಯರಲ್ಲಿ ಆಶಾ ಡಿಮೆಲ್ಲೊ ಪಂದ್ಯ ಶ್ರೇಷ್ಠ, ಜೊಯೆಲ್ ಕರ್ವಾಲ್ಲೊ ಉತ್ತಮ ದಾಂಡಿಗ, ಪ್ರವೀಣ್ ಡಿಸೋಜ ಉತ್ತಮ ಎಸೆತಗಾರ, ಸ್ಟೀಫನ್ ಕರ್ವಾಲ್ಲೊ ಉತ್ತಮ ಸರಣಿ ಆಟಗಾರನಾಗಿ ಆಯ್ಕೆಯಾದರು.ವಿಜೇತರಿಗೆ ನಗದು ಮತ್ತು ಟ್ರೋಫಿಗಳನ್ನು ವಿತರಿಸಲಾಯಿತು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕುಂದಾಪುರ ಚರ್ಚ್‍ನ ಸಹಾಯಕ ಧರ್ಮಗುರು ವಿಜಯ್ ಡಿಸೋಜ, ಪ್ರಾಂಶುಪಾಲ ಪ್ರವೀಣ್ ಅಮ್ರತ್ ಮಾರ್ಟಿಸ್, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಲುವಿಸ್ ಜೆ. ಫರ್ನಾಂಡಿಸ್, ಕಾರ್ಯದರ್ಶಿ ಆಶಾ ಕರ್ವಾಲ್ಲೊ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಸ್ಕತ್ ಚಾಪ್ಟರ್ ಐಸಿಎಐ ಇದರ ಚೇರಮೆನ್ ಆಗಿರುವ ಸಿಎ ಎನ್. ರಮಾನಂದ ಪ್ರಭು ಅವರಿಗೆ ಇತ್ತೀಚೆಗೆ ದೆಹಲಿಯ ಲೀಲಾ ಎಂಬಿಯನ್ಸ್ ಹೋಟೆಲಿನಲ್ಲಿ ನಡೆದ ಐಸಿಎಐನ 71ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಸ್ಕತ್ ಚ್ಯಾಪ್ಟರ್ ಐಸಿಎಐನ ಎಲ್ಲಾ ಸದಸ್ಯರ ಪ್ರತಿನಿಧಿಯಾಗಿ ಬೆಸ್ಟ್ ಓವರ್ಸಿಸ್ ಚಾಪ್ಟರ್ ಅವಾರ್ಡ್ ಐಸಿಎಐ 2020 ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಪಾರ್ಲಿಮೆಂಟ್ ನ ಗೌರವಾನ್ವಿತ ಸದಸ್ಯರಾದ ಸಿಎ ಅರುಣ್ ಸಿಂಗ್ ಹಾಗೂ ಐಸಿಎಐ ನ ಅಧ್ಯಕ್ಷರಾದ ಸಿಎ ಅತುಲ್ ಕುಮಾರ್ ಗುಪ್ತ ಉಪಸ್ಥಿತರಿದ್ದರು. ಜಾಗತಿಕ 43 ದೇಶಗಳ ಒಟ್ಟು 64 ಸಾಗರೋತ್ತರ ಐಸಿಎಐ ನ ಚ್ಯಾಪ್ಟರ್ ಗಳಲ್ಲಿ ಮಸ್ಕತ್ ಚ್ಯಾಪ್ಟರ್ ಐಸಿಎಐ ಅತ್ಯುತ್ತಮ ಚ್ಯಾಪ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಮುಖೇನ ಐಸಿಎಐ 2020 ಇದರಿಂದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಸಿಎ ರಮಾನಂದ ಪ್ರಭು ಅವರು ಮೂಲತಃ ನಾಯ್ಕನಕಟ್ಟೆಯ ಪ್ರಭುಕೇರಿಯವರಾಗಿದ್ದು , ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಎಲ್ಲಾ ಸವಲತ್ತುಗಳು ತಲುಪಿಸಲು ಒಬ್ಬ ಸರ್ಕಾರಿ ಅಧಿಕಾರಿಯಿಂದ ಸಾಧ್ಯವಾಗುತ್ತದೆ. ಇಂತಹ ಹುದ್ದೆಯನ್ನು ಏರಲು ನಾಗರಿಕ ಸೇವಾ ಆಯೋಗದ ಪರೀಕ್ಷೆಗಳಲ್ಲಿ ಯಶಸ್ಸುನ್ನು ಪಡೆಯುವುದು ಮುಖ್ಯ ಎಂದು ನಿವೃತ್ತ ಕಂದಾಯ ಅಧಿಕಾರಿ ಜಯಪ್ರಕಾಶ ರಾವ್ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಾನವಿಕ ವಿಭಾಗದಿಂದ ಆಯೋಜಿಸಲಾಗಿದ್ದ ನಾಗರಿಕ ಸೇವೆಗೆ ಆಯ್ಕೆಯಾಗುವ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ, ಯಶಸ್ಸು ಗಳಿಸಬೇಕಾದರೆ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಕನಸುಗಳಿಗೆ ಭಾವನಾತ್ಮಕ ರೂಪ ನೀಡಿ ಅದನ್ನು ಭಿನ್ನವಾಗಿ ಕಾರ್ಯ ರೂಪಕ್ಕೆ ತರುವುದರ ಬಗ್ಗೆ ಯೋಚನೆಯಿರಬೇಕು. ಆದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ದೃಢ ಸಂಕಲ್ಪ, ಸ್ಪಷ್ಟತೆ, ಕ್ರಿಯಾತ್ಮಕ ಅಲೋಚನೆಗಳಿಂದ ಮಾತ್ರ ಸಾಧ್ಯ ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದು ಒಂದು ತಪಸ್ಸಿನ ಹಾದಿ. ಪ್ರತಿಯೊಬ್ಬರು ಕಠಿಣ ಪರಿಶ್ರಮದಿಂದ ನಡೆದರೆ ಯಶಸ್ಸು ಸಾಧ್ಯ. ಇದರೊಂದಿಗೆ ಸರಿಯಾದ ಮಾರ್ಗದರ್ಶನ ಹಾಗೂ ಸತತ ಪ್ರಯತ್ನ ಇದ್ದಲ್ಲಿ…

Read More