ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನಮ್ಮದಲ್ಲದ ವ್ಯಕ್ತಿತ್ವವನ್ನು ಅಭಿನಯಿಸುವ ಮೂಲಕ ರಂಗಭೂಮಿಯಲ್ಲಿ ಸರಿ ತಪ್ಪುಗಳನ್ನು ವಿಮರ್ಷಿಸುವ ಕಾರ್ಯವಾಗುತ್ತದೆ. ಇದರಿಂದಲೇ ಬದುಕು ಹಾಗೂ ಮನುಷ್ಯತ್ವವನ್ನು ಕಟ್ಟಿಕೊಳ್ಳಲು, ಮನುಷ್ಯ ಸಂಬಂಧ ಗಟ್ಟಿಗೊಳಿಸಿಕೊಳ್ಳಲು ಸಾಧ್ಯವಿದೆ ಎಂದು ರಂಗಭೂಮಿ ಹಾಗೂ ಕಿರುತೆರೆ ನಟ ಪ್ರದೀಪಚಂದ್ರ ಕುತ್ಪಾಡಿ ಹೇಳಿದರು. ಅವರು ಭಾನುವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ರಂಗಸುರಭಿ 2021 ಮೂರು ದಿನಗಳ ನಾಟಕೋತ್ಸವದ ಎರಡನೇ ದಿನದ ಕಾರ್ಯಕ್ರಮದಲ್ಲಿ ದಿನದ ಗೌರವ ಸ್ವೀಕರಿಸಿ ಮಾತನಾಡಿ ಕನ್ನಡದ ಮೇರು ಕೃತಿಗಳನ್ನು ರಂಗಕ್ಕೆ ತರುವ ಮೂಲಕ ಸುರಭಿ ಸಂಸ್ಥೆಯು ಹೊಸ ಪ್ರಯತ್ನಗಳಿಗೆ ತೆರೆದುಕೊಳ್ಳುತ್ತಲೇ ಬಂದಿರುವುದು ಶ್ಲಾಘನಾರ್ಹ ಎಂದರು. ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಮಾಲಿನಿ ಕೆ., ಲೇಖಕ ಹಾಗೂ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ, ನಿವೃತ್ತ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಶೆಟ್ಟಿ, ಶಿರೂರು ಜೆಸಿಐ ಸ್ಥಾಪಕಾಧ್ಯಕ್ಷ ಮೋಹನ್ ರೇವಣ್ಕರ್, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ನೂತನ ತಹಶೀಲ್ದಾರರಾಗಿ ಅಶೋಕ್ ಎನ್. ಭಟ್ ಅವರನ್ನು ನಿಯುಕ್ತಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕುಮಟಾ ತಹಶೀಲ್ದಾರರ ಕಛೇರಿಯಲ್ಲಿ ಶಿರಸ್ತೇದಾರರಾಗಿದ್ದ ಅವರಿಗೆ ತಹಶೀಲ್ದಾರ್ ಗ್ರೇಡ್-2 ಭಡ್ತಿ ನೀಡಿ ಬೈಂದೂರು ತಾಲೂಕು ಕಛೇರಿಗೆ ವರ್ಗಾವಣೆ ಮಾಡಲಾಗಿದೆ. ಎ.ಎನ್. ಭಟ್ ಅವರು ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಆಪ್ತ ಸಹಾಯಕರಾಗಿ ಕಳೆದ ಮೂರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರಿ ಅವರು ವರ್ಗಾವಣೆಯ ಬಳಿಕ ಬ್ರಹ್ಮಾವರದ ತಹಶೀಲ್ದಾರ್ ಕಿರಣ ಗೌರಯ್ಯ ಅವರು ಬೈಂದೂರಿನ ಪ್ರಭಾರ ತಹಶೀಲ್ದಾರರರಾಗಿ ಸೇವೆ ಸಲ್ಲಿಸುತ್ತಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರವಾಸೋದ್ಯಮ ಮತ್ತು ಆಹಾರೋದ್ಯಮದಲ್ಲಿ ಅಂತರಾಷ್ಟ್ರೀಯ ಗುಣಮಟ್ಟ ಕಾಯ್ದುಕೊಂಡಿರುವ ಕೋಟೇಶ್ವರದ ಯುವ ಮೆರಿಡಿಯನ್ ಗ್ರೂಪ್ಸ್ 2021ನೇ ಸಾಲಿನ ಟೈಮ್ಸ್ ಬಿಸಿನೆಸ್ ಅವಾರ್ಡ್ 2021ಕ್ಕೆ ಪಾತ್ರವಾಗಿದೆ. ಮಂಗಳೂರಿನ ಓಷಿಯನ್ ಪರ್ಲ್ ಹೋಟೆಲ್ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಬಾಲಿವುಡ್ ಹಿರಿಯ ನಟ ಸುನಿಲ್ ಶೆಟ್ಟಿ ಯುವ ಮೆರೀಡಿಯನ್ ಪಾಲುದಾರರರಾದ ಬೈಲೂರು ಉದಯಕುಮಾರ್ ಶೆಟ್ಟಿ ಮತ್ತು ವಿನಯ ಕುಮಾರ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಅಂತರಾಷ್ಟ್ರೀಯ ಗುಣಮಟ್ಟದ ವೈಭವದ ಹಾಗೂ ಆರಾಮದಾಯಕ ಹೋಟೆಲ್ ಕೆಟಗೆರಿಯಲ್ಲಿ ಯುವ ಮೆರಿಡಿಯನ್ ಗ್ರೂಪ್ಸ್ಗೆ ಪ್ರಶಸ್ತಿ ಲಭ್ಯವಾಗಿದೆ. ಯುವ ಮೆರಿಡಿಯನ್ ಕನ್ವೆನ್ಯನ್ ಹಾಲ್, ಯುವ ಮೆರಿಡಿಯನ್ ಬೇ ರೆಸಾರ್ಟ್ ಆ್ಯಂಡ್ ಸ್ಪಾ ಮೂಲಕ ಗಮನ ಸೆಳೆದಿರುವ ಸಂಸ್ಥೆಯು 2017-18ರಲ್ಲಿ ಕನ್ವೆನ್ಯನ್ಗಾಗಿ ಹಾಗೂ 2018-19ರಲ್ಲಿ ಪ್ರವಾಸೋದ್ಯಮ ಆತಿಥ್ಯಕ್ಕಾಗಿ ಅಂತರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಭಾಜನವಾಗಿತ್ತು. ಇದೀಗ ಟೈಮ್ಸ್ ಪ್ರಶಸ್ತಿಗೆ ಪಾತ್ರವಾಗಿದೆ. ಕೋಟೇಶ್ವರ-ಹಾಲಾಡಿ ರಸ್ತೆಯ ಪಾಶ್ರ್ವದಲ್ಲಿ 2012ರಲ್ಲಿ ಸುಸಜ್ಜಿತ ವ್ಯವಸ್ಥೆಗಳುಳ್ಳ ಯುವ ಮೆರಿಡಿಯನ್ ಆರಂಭಗೊಂಡಿತ್ತು. 1,200 ಮಂದಿ ಕುಳಿತುಕೊಳ್ಳಬಹುದಾದ ಸಭಾಭವನ,…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಮಾಜವನ್ನು ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ಸಣ್ಣ ಸಣ್ಣ ಗುಂಪುಗಳಾಗಿ ಒಡೆಯುವ ಕೆಲಸವನ್ನು ಪ್ರಭುತ್ವ ಮಾಡುತ್ತಿರುವ ಹೊತ್ತಿನಲ್ಲಿ ರಂಗಭೂಮಿಯ ಬೆಸೆಯುವ ಗುಣವನ್ನು ಇನ್ನಷ್ಟು ಜಾಗೃತಗೊಳ್ಳಬೇಕಿದೆ ಎಂದು ಸಮುದಾಯ ಕರ್ನಾಟಕದ ಸಂಘಟನಾ ಕಾರ್ಯದರ್ಶಿ ವಿಠ್ಠಲ ಭಂಡಾರಿ ಕೆರೆಕೋಣ ಹೇಳಿದರು. ಅವರು ಇಲ್ಲಿನ ಶಾರದಾ ವೇದಿಕೆಯಲ್ಲಿ ಶನಿವಾರ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ರಂಗಸುರಭಿ 2021 ಮೂರು ದಿನಗಳ ನಾಟಕೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿ ನಾಟಕಗಳು ಚರಿತ್ರೆಯ ಭಾಗವಾಗುವ ಬದಲು ಜನರ ಮನಸ್ಸಿನಲ್ಲಿ ಸ್ಥಾನ ಪಡೆಯುವಂತಾಗಬೇಕು. ಪ್ರಭುತ್ವವನ್ನು ಪ್ರಶ್ನಿಸಿದಾಗಲೇ ಅದು ಸಾಧ್ಯವಾಗುತ್ತದೆ. ಮನುಷ್ಯ ಮನುಷ್ಯರ ನಡುವಿನ ಕಂದಕವನ್ನು ಮುಚ್ಚುವ ಅರ್ಥಪೂರ್ಣ ಕೆಲಸವನ್ನು ರಂಗಭೂಮಿ ಮಾಡಬೇಕಿದೆ ಎಂದರು. ಶ್ರೀ ರಾಮ ವಿವಿಧೋದ್ದೇಶ ಟ್ರಸ್ಟ್ನ ಅಧ್ಯಕ್ಷರಾದ ಬಿ. ರಾಮಕೃಷ್ಣ ಶೇರುಗಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕಲಾ ಪ್ರಕಾರಗಳು ಮನುಷ್ಯ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಯಾವುದೇ ಪ್ರಕಾರವಾದರೂ ಅದನ್ನು ಆಸ್ಪಾದಿಸುವ ವರ್ಗವಿದೆ. ಕಲೆಯನ್ನು ಸವಿಯುವುದರೊಂದಿಗೆ ಪ್ರೋತ್ಸಾಹಿಸುವ ಕೆಲಸವೂ ಕಲಾಭಿಮಾನಿಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಗುಲ್ವಾಡಿ ಗ್ರಾಮದ ಮೆಹರಾಜ್ ಜುಮ್ಮ ಮಸೀದಿಯ ನೂತನ ನವೀಕೃತ ಕಟ್ಟಡದ ಉದ್ಘಾಟನೆ ಇದೆ ಎ.8 ರಂದು ನಡೆಯಲಿದೆ. 1965 ರಲ್ಲಿ ನಿರ್ಮಾಣಗೊಂಡ ಹಳೆಯ ಮಸೀದಿಯನ್ನ 2001 ರಲ್ಲಿ ಪುನರ್ನಿರ್ಮಿಸಲಾಗಿದ್ದು . ಪ್ರಸ್ತುತ ಪ್ರಾರ್ಥನೆಗೆ ಸ್ಥಳಾವಕಾಶ ಕಡಿಮೆ ಆದ್ದರಿಂದ ಸ್ಥಳೀಯ ಉದಯ ನಗರ,ಬೊಳ್ ಕಟ್ಟೆ, ಶೆಟ್ರ ಕಟ್ಟೆ, ಕಲ್ಲು ಕಂಬ, ಕರ್ಕಿ, ಪಾರ್ತಿಕಟ್ಟೆ ಸೇರಿದಂತೆ ಸುಮಾರು ಇನ್ನೂರ ಐವತ್ತು ಮನೆಯವರ ಮತ್ತು ಹೊರಗಿನವರ ಸಹಕಾರದಿಂದ ಸುಮಾರು ಎಪ್ಪತ್ತು ಲಕ್ಷ ಅಂದಾಜಿನಲ್ಲಿ ಸ್ಥಳೀಯ ಮುಸ್ಲಿಮರ ಧಾರ್ಮಿಕ ಅನುಕೂಲಕ್ಕಾಗಿ ಈ ಭವ್ಯ ಮೊದಲ ಮಹಡಿಯ ಕಟ್ಟಡ ನಿರ್ಮಾಣ ಗೊಂಡು ಇದೀಗ ಉದ್ಘಾಟನೆಗೆ ಸಜ್ಜು ಗೊಂಡಿದೆ. 55 ವರ್ಷಗಳ ಹಿಂದೆ ಮಸೀದಿಯ ನಿರ್ಮಾಣಕ್ಕೆ ಮರ್ಹೂಮ್ ಸೈಯದ್ ಇಸ್ಮಾಯಿಲ್ ತಂಙಳ್ ಅವರು ಅಡಿಪಾಯ ಹಾಕಿದ್ದು ನಂತರದ ದಿನಗಳಲ್ಲಿ ಮರ್ಹೂಮ್ ಫಕೀರ್ ಬ್ಯಾರಿ, ಕಲಂದರ್ ಬ್ಯಾರಿ, ಅಬ್ದುಲ್ ರಹಿಮಾನ್ ಮುಸ್ಲಿಯಾರ್, ಹಾಜಿ ಇಬ್ರಾಹಿಂ ಸಾಹೇಬ್, ಜಿ.ಕೆ ಮುಸ್ಲಿಯಾರ್, ಮಹಮದ್ ಅಬ್ಬಾ ಸಾಹೇಬ್ ಜೊತೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರತಿಭಾವಂತ ವಿದ್ಯಾರ್ಥಿನಿ ಆಶಿಕಾ ಪೈ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಕರ್ನಾಟಕದಲ್ಲಿ ದ್ವಿತೀಯ ರ್ಯಾಂಕ್ ಗಳಿಸಿದ್ದಾರೆ. ಶಾಂತಾರಾಮ್ ಪೈ ಹಾಗೂ ಅನಸೂಯ ಪೈ ದಂಪತಿಗಳ ಪುತ್ರಿಯಾಗಿರುವ ಇವರು ಮಂಗಳೂರಿನ ಎಜೆ ಇಂಜಿನಿಯರಿಂಗ್ ಕಾಲೇಜ್ನಲ್ಲಿ ಶಿಕ್ಷಣ ಪಡೆದಿದ್ದು, ಇದು ಎ.ಜೆ. ಇಂಜಿನಿಯರಿಂಗ್ ಕಾಲೇಜಿನ ಮೊಟ್ಟ ಮೊದಲ ಬ್ಯಾಚ್ ಆಗಿದ್ದುದು ಕೂಡ ವಿಶೇಷ. 10ನೇ ತರಗತಿಯಲ್ಲಿ ಪೂರ್ಣ 10 ಅಂಕಗಳ CGPA ಗಳಿಸಿದ್ದ ಇವರು, ನಂತರ ಕರ್ನಾಟಕ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೋಮಾ ಮಾಡಿದ್ದು ಅಲ್ಲಿಯೂ 90% ಅಂಕ ಗಳಿಸಿದ್ದಲ್ಲದೇ, DCET ಎಕ್ಸಾಂನಲ್ಲಿ ಕರ್ನಾಟಕಕ್ಕೆ 40ನೇ ರ್ಯಾಂಕ್ ಗಳಿಸಿದ್ದರು. ಇದೀಗ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 9.24 CGPA ಅಂಕಗಳೊಂದಿಗೆ , ದ್ವಿತೀಯ ರ್ಯಾಂಕ್ಗಳಿಸಿ M. tech ಮಾಡುವುದು ಇವರ ಸದ್ಯದ ಗುರಿಯಾಗಿದೆ. ಆಶಿಕಾ ಪೈ ಸಾಧನೆಗೆ ಎಜೆ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಎ.ಜೆ. ಶೆಟ್ಟಿ , ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ, ಪ್ರಾಂಶುಪಾಲ ಶಾಂತಾರಾಮ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿಗೆ ಬಂದಿದೆ. ದಕ್ಷಿಣಕನ್ನಡ, ಉಡುಪಿ ಜಿಲ್ಲೆ ಹಾಗೂ ರಾಜ್ಯಾದ್ಯಂತ ಜಾರಿಗೆ ಬರುವಂತೆ ಹೊಸ ನಿಯಮಗಳನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ವಿದ್ಯಾಗಮ ಸೇರಿದಂತೆ 6-9ನೇ ತರಗತಿ ಸ್ಥಗಿತ, ಜಿಮ್, ಪಾರ್ಟಿ ಹಾಲ್, ಕ್ಲಬ್, ಈಜು ಕೊಳ ಬಂದ್, ರ್ಯಾಲಿ ಮುಷ್ಕರಗಳಿಗೆ ನಿಷೇಧ, ಸಾರಿಗೆಗಳಲ್ಲಿ ಪ್ರಯಾಣಿಕರ ಸಂಖ್ಯೆ ನಿಗದಿಪಡಿಸಿದ ಆಸನ ಸಂಖ್ಯೆ ಮೀರುವಂತಿಲ್ಲ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣಕನ್ನಡ, ಉಡುಪಿ, ಕಲಬುರಗಿ, ಧಾರವಾಡ, ಮೈಸೂರು, ಬೀದರ್ ಜಿಲ್ಲೆಗಳಲ್ಲಿ ಸಿನೆಮಾ ಹಾಲ್ 50% ಮೀರುವಂತಿಲ್ಲ, ಪಬ್, ಬಾರ್, ರೆಸ್ಟೊರೆಂಟ್, ಬಾರಿನಲ್ಲಿ 50% ಹೆಚ್ಚಿನ ಗ್ರಾಹಕರು ಸೇರುವಂತಿಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಆಚರಣೆಗಳು ಹಾಗೂ ಜಾತ್ರಾ ಮಹೋತ್ಸವ, ಮೇಳಗಳು ಗುಂಪು ಸೇರುವುದು ನಿಷೇಧ ಸೇರಿದಂತೆ ಟಫ್ ರೂಲ್ಸ್ ಜಾರಿಯಾಗಿದೆ. ಏಪ್ರಿಲ್ 20ರವರೆಗೆ ಈ ಕೆಳಗಿನ 16 ನಿಯಮಗಳು ಜಾರಿಯಲ್ಲಿರಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 70 ಅಧಿಕ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಮಾಜಿ ಶಾಸಕ ಗೋಪಾಲ ಪೂಜಾರಿ ಅವರ ಕಟ್ಬೆಲ್ತೂರಿನ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಮುಖಂಡರ ಏಕಪಕ್ಷೀಯ ನಿಲುವುಗಳಿಂದ ಬೇಸತ್ತು ಪಕ್ಷ ತೊರೆಯುತ್ತಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಹಾಗೂ ತ್ರಾಸಿ ಜಿಲ್ಲಾ ಪಂಚಾಯತ್ ಉಸ್ತುವಾರಿ ಶರತ್ ಕುಮಾರ್ ಶೆಟ್ಟಿ ಪಕ್ಷದ ಬಾವುಟ ನೀಡುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಗುಡಿಬೆಟ್ಟು ಮಾತನಾಡಿ, ಗೋಪಾಲ ಪೂಜಾರಿಯವರು ಈ ಹಿಂದೆ ಮಾಡಿರುವ ಜನಪರ ಕೆಲಸ ಹಾಗೂ ಅವರ ನಾಯಕತ್ವವನ್ನು ಒಪ್ಪಿಕೊಂಡು ಗಂಗೊಳ್ಳಿಯ ಯುವಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಹಿಂದೂತ್ವ ಹಾಗೂ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಈ ಭಾಗದ ಶಾಸಕರು ಗಂಗೊಳ್ಳಿಯ ಯುವಕರನ್ನು ಚುನಾವಣೆಗೆ ಬಳಸಿಕೊಂಡಿದ್ದು ಬಿಟ್ಟರೆ ಮತ್ತೇನೂ ಉಪಕಾರ ಮಾಡಿಲ್ಲ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಲೋಕಾಯುಕ್ತದಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿರುವ, ಬೈಂದೂರು ಬಾಡದ ರಾಘವೇಂದ್ರ ಎಮ್. ಹಾಗೂ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಕಾಡಿನತಾರು ಅವರು 2020ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಗೌರವಕ್ಕೆ ಪಾತ್ರರಾಗಿದ್ದು, ಬೆಂಗಳೂರಿನ ಕೆ.ಎಸ್.ಆರ್.ಪಿ ಪೆರೇಡ್ ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಪದಕ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಉಪಸ್ಥಿತರಿದ್ದರು. ರಾಘವೇಂದ್ರ ಅವರು 1997ರಲ್ಲಿ ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಪೇದೆಯಾಗಿ ವೃತ್ತಿ ಜೀವನ ಆರಂಭಿಸಿ ಜಿಲ್ಲೆಯ ಶಂಕರನಾರಾಯಣ, ಉಡುಪಿ ಟೌನ್ ಹಾಗೂ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸಿ 2007ರಲ್ಲಿ ಪಿಎಸ್ಐ ಆಗಿ ಭಡ್ತಿ ಹೊಂದಿದರು. ಬೆಂಗಳೂರಿನ ಯಶವಂತಪುರ, ಆರ್.ಎನ್.ಎಸ್ ಯಾರ್ಡ್, ಸಿಸಿಬಿ, ಹೆಬ್ಬಾಳ, ಮಾದನಾಯಕನ ಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಮಂಚೇನಹಳ್ಳಿಯಲ್ಲಿ ಸೇವೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿಯಾದ ಕು. ವಿದ್ಯಾ ಹೆಚ್. ಭಾರತೀಯ ಗಡಿ ಭದ್ರತಾ ಪಡೆ (ಬಿಎಸ್ಎಫ್)ಗೆ ಆಯ್ಕೆಯಾಗಿದ್ದಾರೆ. ಬಿ.ಎಡ್ ವಿದ್ಯಾರ್ಥಿನಿಯಾಗಿ ವಿಶ್ವವಿದ್ಯಾಲಯ ಮಟ್ಟದಲ್ಲಿ ಹಲವಾರು ಆಟೋಟ ಸ್ಪರ್ಧೆಗಳಲ್ಲಿ ಪ್ರಶಸ್ತಿಯನ್ನು ಗಳಿಸಿದ ಅವರು, ಸಮವಸ್ತ್ರ ಧರಿಸುವ ವೃತ್ತಿಯನ್ನು ಮಾಡಬೇಕು ಮತ್ತು ಮಹಿಳೆ ಪುರುಷರಷ್ಟೇ ಸಮರ್ಥಳು ಎಂಬುದನ್ನು ನಿರೂಪಿಸಬೇಕು ಎಂಬ ಮಹಾದಾಸೆಯನ್ನು ವಿದ್ಯಾರ್ಥಿ ದೆಸೆಯೆಂದಲೇ ಹೊಂದಿದವರಾಗಿದ್ದಾರೆ. ಅವರ ಈ ಸಾಧನೆಗೆ ನಮ್ಮ ವಿದ್ಯಾರ್ಥಿಗಳು ಸೇನೆಗೆ ಸೇರ್ಪಡೆಯಾಗಬೇಕುಂಬುದು ನನ್ನ ಅಭಿಲಾಷೆ ಎಂದು ಪ್ರತಿಕ್ರಿಯಿಸಿದ, ಬ್ಯಾರೀಸ್ ಸಮೂಹದ ಅಧ್ಯಕ್ಷರಾದ ಸಯ್ಯದ್ ಮಹಮದ್ ಬ್ಯಾರಿ ಅವರು, ನಿರ್ದೇಶಕರು, ಪ್ರಾಂಶುಪಾಲರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಅವರ ಈ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
