ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸರಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ಸರಕಾರಿ ಶಾಲೆಗಳಲ್ಲಿ ಪ್ರತಿವರ್ಷ ಮಕ್ಕಳ ದಾಖಲಾತಿ ಕೂಡ ಹೆಚ್ಚುತ್ತಿದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀತಿಯಿಂದ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸಹಾಯಕವಾಗುತ್ತಿದ್ದು, ಶಾಲೆಯಿಂದ ಹೊರಗುಳಿಯುವ ಮಕ್ಕಳ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಉದ್ಯಮಿ ಉಮೇಶ್ ಎಲ್. ಮೇಸ್ತ ಹೇಳಿದರು. ಅವರು ಗುಜ್ಜಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ದೊಡ್ಮನೆ ನಂದ ಪೂಜಾರಿ ರಂಗ ಮಂಟಪದಲ್ಲಿ ನಡೆದ ಶಾಲೆಯ 106ನೇ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗುಜ್ಜಾಡಿ ಗ್ರಾಪಂ ಸದಸ್ಯ ಹರೀಶ ಮೇಸ್ತ ಧ್ವಜಾರೋಹಣಗೈದರು. ಕುಂದಾಪುರದ ವಕೀಲ ಚಂದ್ರಕಾಂತ ಎಸ್. ಹುಂಡೇಕರ್ ಸ್ವಸ್ತಿ ವಾಚನ ಮಾಡಿದರು. ಗುಜ್ಜಾಡಿ ಗ್ರಾಪಂ. ಸದಸ್ಯೆ ತುಂಗಾ ಪೂಜಾರಿ, ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮನಾಥ ಚಿತ್ತಾಲ್, ಎಸ್ಡಿಎಂಸಿ ಸಮನ್ವಯ ವೇದಿಕೆ ಜಿಲ್ಲಾಧ್ಯಕ್ಷ ಅಬ್ದುಲ್ ಸಲಾಂ ಚಿತ್ತೂರು, ಎಸ್ಡಿಎಂಸಿ ಉಪಾಧ್ಯಕ್ಷೆ ಅನಿತಾ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಸ್ತಾನ ರಾಷ್ಟ್ರೀಯ ಚರ್ಚ ಸಮೀಪ ಸುಮಾರು ಐದು ವರ್ಷಗಳ ಹಿಂದೆ ತನ್ನ ತಾತ ಪಾಂಡೇಶ್ವರ ಹೆಬ್ಬಾಗಲು ಮನೆ ನರಸಿಂಹ ತುಂಗ ಸ್ಮರಣಾರ್ಥ ಅವರ ಮೊಮ್ಮಗ ಸಮಾಜಸೇವಕ ಚಂದ್ರಶೇಖರ ಮಯ್ಯ ಎರಡು ಲೋಕಲ್ ಬಸ್ ನಿಲ್ದಾಣ ನಿರ್ಮಿಸಿದ್ದು ಸಾರ್ವಜನಿಕರಿಗೆ ಬಾರಿ ಅನುಕೂಲ ವಾತಾವರಣ ಸೃಷ್ಠಿಸಿದೆ. ಆದರೆ ಆ ತಂಗುದಾಣ ಒಂದು ಭಾಗದ ವಿವಿಧ ಬಿಡಿ ಭಾಗಗಳು ಹಾಗೂ ಶಿಲಾ ಕಂಬಗಳನ್ನು ಕಿಡಿಗೇಡಿಗಳಿಂದ ಮಂಗಳವಾರ ತಡರಾತ್ರಿ ಹಾನಿಗೊಳಿಸಿದ ಘಟನೆ ನಡೆದಿದೆ. ಈ ಬಗ್ಗೆ ಸಾರ್ವಜನಿಕ ಆಕ್ರೋಶ ಹೊರಹಾಕಿದ್ದು ತಂಗುದಾಣ ಹಾನಿಗೊಳಿಸಿದವರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ಇದೇ ತಂಗುದಾಣದಲ್ಲಿ ಮನುಕುಲಕ್ಕಲ್ಲದೆ ಪ್ರಾಣಿ ಪಕ್ಷಿಗಳಿವೆ ನೀರು ಆಹಾರ ಒದಗಿಸುವ ತಾಣವಾಗಿ ಮಯ್ಯರು ಸೇವೆ ಮಾಡುತ್ತಿರುವುದು ವಿಶೇಷವಾಗಿದ್ದು ಇಂತಹ ಸಮಾಜಘಾತುಕ ಶಕ್ತಿಗಳು ಹಾನಿಗೊಳಿಸುವುದು ಬೇಸರದ ಸಂಗತಿ ಎಂದು ಮಯ್ಯರು ಮಾಧ್ಯಮಕ್ಕೆ ತಿಳಿಸಿದ್ದು ಕೋಟ ಠಾಣೆಯಲ್ಲಿ ದೂರು ದಾಖಲಿಸುವ ಬಗ್ಗೆ ಉಲ್ಲೇಖಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿದ್ದಾಪುರ ಏತ ನೀರಾವರಿ ಯೋಜನೆಗೆ ವಾರಾಹಿ ಮೂಲ ನದಿಯಿಂದ ನೀರನ್ನು ಎತ್ತುವ ಮೂಲಕ ವಾರಾಹಿ ಮೂಲ ನದಿಯನ್ನು ಉಳಿಸುವುದರೊಂದಿಗೆ ನದಿ ಪಾತ್ರ ಅವಲಂಭಿತ ರೈತರನ್ನು ಹಾಗೂ ಧಾರ್ಮಿಕ ಕೇಂದ್ರಗಳನ್ನು ಉಳಿಸುವಂತೆ ವಾರಾಹಿ (ಹಾಲಾಡಿ) ಪಾತ್ರದ ಇಕ್ಕೆಲಗಳ ರೈತರು ಹಾಗೂ ಸಾರ್ವಜನಿಕರು ಇತ್ತೀಚಿಗೆ ವಾರಾಹಿ ಇಲಾಖೆಗೆ ಭೇಟಿ ನೀಡಿ, ಮನವಿ ಮಾಡಿದರು. ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಸದಾನಂದ ಬಳ್ಕೂರು ಅವರ ನೇತ್ರತ್ವದಲ್ಲಿ ಸಿದ್ದಾಪುರ ಏತ ನೀರಾವರಿ ಯೋಜನೆಯ ನೀರನ್ನು ಎತ್ತುವ ಪಂಪನ್ನು ವಾರಾಹಿ ಮೂಲ ನದಿಯಲ್ಲಿ ಅಥವಾ ಶ್ರೀ ಹೊಳೆ ಶಂಕರನಾರಾಯಣ ದೇವಸ್ಥಾನದ ಕೆಳ ಭಾಗದಲ್ಲಿ ಅಳವಡಿಸುವಂತೆ ನೂರಾರು ರೈತರ ಸಹಿ ಮಾಡಿದ ಪತ್ರದೊಂದಿಗೆ ರೈತರು, ಧಾರ್ಮಿಕ ಮುಖಂಡರು, ಕೃಷಿಕರು, ವಿವಿಧ ಸಂಘಟನೆಯ ಮುಖಂಡರು ಸಿದ್ದಾಪುರದ ವಾರಾಹಿ ಇಲಾಖೆಯ ಕಚೇರಿ ಭೇಟಿ ನೀಡಿ ಮನವಿ ಮಾಡಿದರು. ಹೊಳೆ ಶಂಕರನಾರಾಯಾಣ ಬಳಿ ವಾರಾಹಿ ನದಿಗೆ ಅಡ್ಡಲಾಗಿ ಕಟ್ಟಿರುವ ಡ್ಯಾಂ ಮೇಲ್ ಭಾಗದಲ್ಲಿ ಆರಂಭಗೊಳ್ಳುವುದರಿಂದ ವಾರಾಹಿ ಮೂಲ ನದಿಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ವ್ಯಾಪ್ತಿಯಲ್ಲಿರುವ ಶಾಲೆಗಳ ಆಸುಪಾಸು ಹಾಗೂ ಗ್ರಾಮಗಳಲ್ಲಿ ಬೀದಿ ನಾಯಿಗಳ ಆವಳಿ ವಿಪರಿತವಾಗಿದೆ. ಇದರಿಂದ ಶಾಲೆಗೆ ಸಂಚರಿಸಲು ಭಯದ ವಾತಾವರಣ ನಿರ್ಮಾಣವಾಗಿದೆ. ಈ ಬಗ್ಗೆ ಗ್ರಾಮಪಂಚಾಯತ್ ಕ್ರಮ ಕೈಗೊಳ್ಳುವಂತೆ ಕೋಟದ ಮಣೂರು ಪಡುಕರೆ ಸಂಯುಕ್ತ ಪ್ರೌಢಶಾಲಾ ವಿದ್ಯಾರ್ಥಿಗಳು ಆಗ್ರಹಿಸಿದರು. ಬುಧವಾರ ಕೋಟ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಗ್ರಾಮಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೋಟ ಗ್ರಾಮ ಪಂಚಾಯತ್ ಬ್ರಹ್ಮಾವರ ತಾಲೂಕು ಪಂಚಾಯತ್ ನೇತೃತ್ವದಲ್ಲಿ 2025-26ನೇ ಸಾಲಿನ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆಯಲ್ಲಿ ಈ ಬಗ್ಗೆ ತಮ್ಮ ಅಳಲನ್ನು ತೊಡಿಕೊಂಡರು. ಬೀದಿನಾಯಿಗಳ ಸಂತಾನ ಹರಣ ಚಿಕಿತ್ಸೆಗಾಗಿ 1ಲಕ್ಷ ರೂ ಕಾಯ್ದಿಸಿದ್ದೇವೆ ಈ ಸಂಬಂಧಿಸಿದ ಇಲಾಖೆಯೊಂದಿಗೆ ಸಂವಹನ ನಡೆಸಲಾಗಿದೆ ಶೀಘ್ರದಲ್ಲೆ ಇದರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಬಿ. ಶೆಟ್ಟಿ ಉತ್ತರಿಸಿದರು. ಶಾಲಾ ವ್ಯಾಪ್ತಿಯಲ್ಲಿ ಸ್ಕೂಲ್ ಝೋನ್ ಫಲಕ ಅಳವಡಿಸಿ, ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಕಬ್ಬಡಿ ಮ್ಯಾಟ್, ಶಾಲಾ ಶೌಚಾಲಯ ಶುಚಿಗೊಳಿಸಲು ಕ್ರಮವಹಿಸಿ, ಶಾಲಾ ವ್ಯಾಪ್ತಿಯಲ್ಲಿ ಚರಂಡಿ ನಿರ್ಮಾಣ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾವೊಂದು ಪಲ್ಟಿ ಹೊಡೆದು ಚಾಲಕ ಮೃತಪಟ್ಟ ಘಟನೆ ಸಾಲಿಗ್ರಾಮದ ಹಾಡಿಮನೆ ಹೋಟೆಲ್ ಮುಂಬಾಗ ನಡೆದಿದೆ. ಮೃತರನ್ನು ರಿಕ್ಷಾ ಚಾಲಕ ಭೋಜ ಪೂಜಾರಿ(52) ಎಂದು ಗುರುತಿಸಲಾಗಿದೆ. ಸೋಮವಾರ ಮಧ್ಯಾಹ್ನ ಸಾಲಿಗ್ರಾಮದ ಹಾಡಿಮನೆ ಹೋಟೆಲ್ ಮುಂಬಾಗ ಬರುತ್ತಿದ್ದ ವೇಳೆ ರಸ್ತೆಯ ಹಂಪ್ಸ್ ಮೇಲೇರಿ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ ಹೊಡೆದಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೆ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಮೃತರು ಕಾರ್ಕಡದ ನಿವಾಸಿಯಾಗಿದ್ದು ಸಾಲಿಗ್ರಾಮ ರಿಕ್ಷಾ ಚಾಲಕ, ಮಾಲಕರ ಸಂಘದ ಸದಸ್ಯರಾಗಿದ್ದಾರೆ. ಅಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಇಬ್ಬರು ಸಹೋದರರು, ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬ್ರಹ್ಮಾವರ: ನಾನಾ ಕ್ಷೇತ್ರದ ಸಾಧಕರನ್ನು ಕಾರ್ಯಕ್ರಮದಲ್ಲಿ ಗುರುತಿಸಿ ಗೌರವಿಸಿದಲ್ಲಿ ಅವರ ಸಾಧನೆಗಳು ಯುವ ಜನತೆಗೆ ಸ್ಪೂರ್ತಿಯಾಗಿ ಸೇವಾ ಸಂಸ್ಥೆಗಳ ಸದಸ್ಯರಿಗೆ ಸಾಧನೆ ಮಾಡಲು ಸಹಾಯವಾಗುತ್ತದೆ ಎಂದು ಸಿನೀಯರ್ ಚೇಂಬರ್ಸ್ ಇಂಟರನ್ಯಾಷನಲ್ ಇದರ ರಾಷ್ಟ್ರೀಯ ನಿರ್ದೇಶಕ ಜಗದೀಶ್ ಕೆಮ್ಮಣ್ಣು ಹೇಳಿದರು. ಅವರು ಮಂಗಳವಾರ ಸಿನೀಯರ್ ಚೇಂಬರ್ಸ್ ಇಂಟರನ್ಯಾಷನಲ್ ನೇಜಾರು ಇದರ ವತಿಯಿಂದ ಸೆಲ್ಯೂಟ್ ಪುರಸ್ಕಾರ ಅಂಗವಾಗಿ ಬ್ರಹ್ಮಾವರ ಹೊಟೇಲ್ ಆಶ್ರಯದಲ್ಲಿ ಜರುಗಿದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಾಧ್ಯಮ ಕ್ಷೇತ್ರದ ಸಾಧಕ ಬ್ರಹ್ಮಾವರದ ಹಿರಿಯ ಪತ್ರಿಕಾ ವರದಿಗಾರ ಬಂಡೀಮಠ ಶಿವರಾಮ ಆಚಾರ್ಯ ಮತ್ತು ಅಫಘಾತ ರಹಿತ ಅಟೋ ಚಾಲಕ ಪತ್ರಿಕಾ ವಿತರಕ ರವೀಂದ್ರ ಅವರನ್ನು ಕಾರ್ಯಕ್ರಮದಲ್ಲಿ ಗೌರವಿಸಲಾಯಿತು. ಸಿನೀಯರ್ ಚೇಂಬರ್ಸ್ ಇಂಟರನ್ಯಾಷನಲ್ ಇದರ ಸುರೇಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮಿತ್ರ ಕುಮಾರ್, ಯುತ್ ವಿಂಗ್ ಅಧ್ಯಕ್ಷ ರಾಹುಲ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ಸೀನಿಯರೇಟ್ ನಿಕಟ ಪೂರ್ವ ಅಧ್ಯಕ್ಷ ಚೈತ್ರ ಕುಮಾರ್ ಉಪಸ್ಥಿತರಿದ್ದರು. ವಿಜಯ ಸುವರ್ಣ ಬೈಕಾಡಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘವು ಹಲವು ವರ್ಷಗಳಿಂದ ಈ ಭಾಗದ ಕೃಷಿಕರಿಗೆ ಅನುಕೂಲವಾಗುವಂತೆ ಹಲವು ಮಾದರಿ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಯೋಜನೆಗಳನ್ನು ರೂಪಿಸುವ ಕಾರ್ಯ ಈ ಸಹಕಾರಿ ಸಂಘದಿಂದಾಗಲಿ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು. ಅವರು ಮಂಗಳವಾರ ಉಪ್ಪುಂದ ರೈತ ಸಿರಿ ಸಭಾಭವನದಲ್ಲಿ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಹಾಗೂ ರೈತ ಸಿರಿ, ಸೇವಾ ಒಕ್ಕೂಟ ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ರೈತರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಪ್ರಗತಿಪರ ಕೃಷಿಕ ದೀಟಿ ಸೀತಾರಾಮ ಮಯ್ಯ ಅವರನ್ನು ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಮಂಜು ದೇವಾಡಿಗ, ನಿರ್ದೇಶಕರಾದ ಈಶ್ವರ ಹಕತೋಡ್, ಮೋಹನ ಪೂಜಾರಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪೋನ್ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಟೆರೇಸ್ನಿಂದ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ತಾಲೂಕಿನ ಬಸ್ರೂರಿನಲ್ಲಿ ನಡೆದಿದೆ. ರಾಜಸ್ಥಾನದ ಕರೋಲಿ ಮೂಲದ ಹೇಮೇಂದರ ಸಿಂಗ್ (40) ಮೃತಪಟ್ಟವರು. ಬಸ್ರೂರು ಮಾರ್ಗೊಳಿ ಎಂಬಲ್ಲಿ ಟೈಲ್ಸ್ ಫಿಟ್ಟಿಂಗ್ ಕೆಲಸ ಮಾಡುತ್ತಿದ್ದ ಹೇಮೇಂದರ ಸಿಂಗ್ ಮನೆಯ ತಾರಸಿ ಮೇಲೆ ಪೋನ್ನಲ್ಲಿ ಮಾತನಾಡುತ್ತಿರುವಾಗ ಆಯತಪ್ಪಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಮಣಿಪಾಲದ ಆಸ್ಪತ್ರೆಗೆ ಕಳುಹಿಸಿದರು. ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷ ಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಬೈಂದೂರು ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಿಜೂರಿನಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿದ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಹಾಗೂ ಹೆಮ್ಮಾಡಿಯ ಜನತಾ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದು ಸಾಧನೆಗೈದಿದ್ದಾರೆ. ಕನ್ನಡ ಭಾಷಣ – ಸಂಜನಾ ಶೆಟ್ಟಿ ಪ್ರಥಮ, ಕನ್ನಡ ಪ್ರಬಂಧ- ಸುಶ್ಮಿತಾ ನಾಯ್ಕ ಪ್ರಥಮ, ಸಂಸ್ಕ್ರತ ಧಾರ್ಮಿಕ ಪಠಣ-ಅವನಿ ಭಟ್ -ಪ್ರಥಮ, ಸಂಸ್ಕೃತ ಭಾಷಣ- ಪ್ರಥಮ್ ಜಿ., ಪ್ರಥಮ, ಭಾವಗೀತೆ- ಜಯಶ್ರೀ ಪ್ರಥಮ. ಅರೇಬಿಕ್ ಧಾರ್ಮಿಕ ಪಠಣ – ಮಸೀಹಾ – ದ್ವಿತೀಯ, ರಂಗೋಲಿ – ಭೂಮಿಕಾ – ದ್ವಿತೀಯ, ಸಂಸ್ಕೃತ ಧಾರ್ಮಿಕ ಪಠಣ – ಪ್ರತೀಕ್ಷಾ – ದ್ವಿತೀಯ, ಕವ್ವಾಲಿ – ಆಹಿಲ್ ಮತ್ತು ತಂಡ – ದ್ವಿತೀಯ, ಜಾನಪದ ನೃತ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯ ಪ್ರತಿಭೆ ನಿಮ್ಮದು, ವೇದಿಕೆ ನಮ್ಮದು ವಿನೂತನ ಕಾರ್ಯಕ್ರಮ ಸರಣಿಯಡಿ ಸಂಸ್ಕೃತಿ, ಸಂಸ್ಕಾರ, ಸಂಪ್ರದಾಯ ಉಳಿಸಿ ಬೆಳೆಸುವಲ್ಲಿ ವಿಶೇಷ ಪ್ರಯತ್ನ ಸತತ 114ನೇ ತಿಂಗಳ ಕಾರ್ಯಕ್ರಮ ಶ್ರೀ ಕಾಶೀ ಮಠ ಶ್ರೀ ಸುಧೀಂದ್ರತೀರ್ಥ ಸ್ವಾಮೀಜಿ ಅವರ ಜನ್ಮ ಶತಮಾನೋತ್ಸವದ ಪ್ರಯುಕ್ತ ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ವತಿಯಿಂದ ಘರ್ ಘರ್ ಭಜನ್ ಗೊಂಬೆ ಮನೆಯಲ್ಲಿ ಇತ್ತೀಚೆಗೆ ಜರುಗಿತು. ಕುಂದಾಪುರ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರರಾದ ರಾಧಾಕೃಷ್ಣ ಶೆಣೈ, ತ್ರಿವಿಕ್ರಮ ಪೈ ಹಾಗೂ ಅನಂತ ಕಾಮತ್ ಅವರನ್ನು ಅಕಾಡೆಮಿ ವತಿಯಿಂದ ಭಾಸ್ಕರ್ ಕೊಗ್ಗ ಕಾಮತ್ ಹಾಗೂ ಎಮ್. ರತ್ನಾಕರ್ ಪೈ ಅವರು ಸಮ್ಮಾನಿಸಿದರು. ಉದಯ ಭಂಡಾರ್ಕಾರ್ ಹಟ್ಟಿಯಂಗಡಿ ಅವರು ಕಾರ್ಯಕ್ರಮ ನಿರೂಪಿಸಿದರು.
