Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನೇತೃತ್ವದಲ್ಲಿ ಸುಗ್ಗಿ – ಹುಗ್ಗಿ ಜಾನಪದ ಉತ್ಸವ – 2021 ಇಲ್ಲಿನ ಶ್ರೀ ಸೇನೇಶ್ವರ ದೇವಸ್ಥಾನದ ಎದುರಿನ ವೇದಿಕೆಯಲ್ಲಿ ಫೆ.13ರ ಸಂಜೆ 5.30ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ, ಮುಜರಾಯಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರಲಿದ್ದು, ಕಾರ್ಯಕ್ರದ ಉದ್ಘಾಟನೆ ಹಾಗೂ ಅಧ್ಯಕ್ಷತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ನೇರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯಸಭೆ ಸಂಸದರಾದ ಓಸ್ಕರ್ ಫೆರ್ನಾಂಡಿಸ್, ಶಿವಮೊಗ್ಗ ಲೋಕಸಭಾ ಸಂಸದರಾದ ಬಿ. ವೈ. ರಾಘವೆಂದ್ರ, ವಿಧಾನ ಪರಿಷತ್ ಸದಸ್ಯರಾದ ಕೆ. ಪ್ರತಾಪಚಂದ್ರ ಶೆಟ್ಟಿ, ಆಯನೂರು ಮಂಜುನಾಥ್, ಎಲ್. ಎಸ್. ಭೋಜೇಗೌಡ, ಡಾ. ತೇಜಸ್ವಿನಿ ಗೌಡ, ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಂಕರ ಪೂಜಾರಿ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಇಲ್ಲಿನ ಶಿರೂರು ಸಮೀಪದ ಅಳ್ವೆಗದ್ದೆ ಕ್ರಾಸ್ ಬಳಿ ವೇಗವಾಗಿ ಬಕ್ ಚಲಾಯಿಸಿದ ಬಾಲಕನೋರ್ವ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದ್ದ ಘಟನೆ ಗುರುವಾರ ಮುಂಜಾನೆ ನಡೆದಿದೆ. ಬಕ್ ಸವಾರ ಹಡವಿನಕೋಣೆ ನಿವಾಸಿ ಅರಾನ್ (೧೫) ಮೃತ ದುರ್ದೈವಿ. ಕಳೆದ ವಾರವಷ್ಟೆ ಪೊಲೀಸರು ಈತನ ಚಾಲನೆ ಪರವಾನಿಗೆ ಇಲ್ಲದೆ ಬಕ್ ಚಲಾಯಿಸುತ್ತಿದ್ದ ವೇಳೆ ಪತ್ತೆ ಹಚ್ಚಿ ದಂಡ ವಿಧಿಸಿದ್ದರು. ಆ ನಂತರವೂ ಗುರುವಾರ ಮುಂಜಾನೆ ಬಕ್ ಚಲಾಯಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಬೈಂದೂರು ಪಿಎಸೈ ಸಂಗೀತಾ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಬಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಪೊಲೀಸ್ ಠಾಣೆ ಆಶ್ರಯದಲ್ಲಿ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಹೆದ್ದಾರಿ ಜಂಕ್ಷನ್ನಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ನಡೆಯಿತು. ಠಾಣಾಧಿಕಾರಿ ಭೀಮಾಶಂಕರ್ ಎಸ್. ಮಾತನಾಡಿ, ಈ ಸಾಲಿನ ಸಪ್ತಾಹವು ರಸ್ತೆ ಸುರಕ್ಷತೆ, ಜೀವದ ರಕ್ಷೆ ಕುರಿತು ಅರಿವು ಮೂಡಿಸುವ ಗುರಿಯೊಂದಿಗೆ ಇದೇ 17ರ ವರೆಗೆ ನಡೆಯುತ್ತಿದೆ ಎಂದರು. ಎಎಸ್ಐ ವೆಂಕೇಶ ಗೊಲ್ಲ, ಠಾಣಾ ಸಿಬ್ಬಂದಿ ಯೋಗೀಶ್, ದಿನೇಶ ಹಾಗೂ ಮುಳ್ಳಿಕಟ್ಟೆ ಆಟೊಶಂಕರ್ ರಿಕ್ಷಾ ಚಾಲಕ ಪ್ರದೀಪ್ ಬಿಲ್ಲವ, ಯೊಗೀಶ್ ಮೊಗವೀರ, ಗಣೇಶ್ ದೇವಾಡಿಗ, ಲೊಕೇಶ್ ಪೂಜಾರಿ ಇದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಐಸಿವೈಎಂ ಸಂಘಟನೆಯ ಆಶ್ರಯದಲ್ಲಿ ಕುಂದಾಪುರ ಕ್ರೈಸ್ಟ್ ವಲಯ ಮಟ್ಟದ 30 ಗಜದ ಕ್ರಿಕೆಟ್ ಪಂದ್ಯಾಟ ಹೋಲಿ ರೋಜರಿ ಚರ್ಚ್ ಮೈದಾನದಲ್ಲಿ ನಡೆಯಿತು. ಪಂದ್ಯಾಟವನ್ನು ಧರ್ಮಗುರು ಸ್ಟ್ಯಾನಿ ತಾವ್ರೊ ಬ್ಯಾಟಿಂಗ್ ಮಾಡಿ ಉದ್ಘಾಟಿಸಿದರು. 18 ತಂಡಗಳು ಭಾಗವಹಿಸಿದ್ದವು, ಬಸ್ರೂರು ‘ ಬಿ ‘ ತಂಡ ಪ್ರಥಮ ಸ್ಥಾನ ಪಡೆದು ಚಾಂಪಿಯನ್ಷಿಪ್ ಪಡೆಯಿತು. ಬಸ್ರೂರು ‘ ಎ ‘ ತಂಡ ದ್ವೀತಿಯ ಸ್ಥಾನ ಪಡೆದಿದೆ. ಪುರುಷರಲ್ಲಿ ಸ್ಟೀಫನ್ ಕರ್ವಾಲ್ಲೊ ಪಂದ್ಯ ಶ್ರೇಷ್ಠ, ಮಹಿಳೆಯರಲ್ಲಿ ಆಶಾ ಡಿಮೆಲ್ಲೊ ಪಂದ್ಯ ಶ್ರೇಷ್ಠ, ಜೊಯೆಲ್ ಕರ್ವಾಲ್ಲೊ ಉತ್ತಮ ದಾಂಡಿಗ, ಪ್ರವೀಣ್ ಡಿಸೋಜ ಉತ್ತಮ ಎಸೆತಗಾರ, ಸ್ಟೀಫನ್ ಕರ್ವಾಲ್ಲೊ ಉತ್ತಮ ಸರಣಿ ಆಟಗಾರನಾಗಿ ಆಯ್ಕೆಯಾದರು.ವಿಜೇತರಿಗೆ ನಗದು ಮತ್ತು ಟ್ರೋಫಿಗಳನ್ನು ವಿತರಿಸಲಾಯಿತು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕುಂದಾಪುರ ಚರ್ಚ್‍ನ ಸಹಾಯಕ ಧರ್ಮಗುರು ವಿಜಯ್ ಡಿಸೋಜ, ಪ್ರಾಂಶುಪಾಲ ಪ್ರವೀಣ್ ಅಮ್ರತ್ ಮಾರ್ಟಿಸ್, ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಲುವಿಸ್ ಜೆ. ಫರ್ನಾಂಡಿಸ್, ಕಾರ್ಯದರ್ಶಿ ಆಶಾ ಕರ್ವಾಲ್ಲೊ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮಸ್ಕತ್ ಚಾಪ್ಟರ್ ಐಸಿಎಐ ಇದರ ಚೇರಮೆನ್ ಆಗಿರುವ ಸಿಎ ಎನ್. ರಮಾನಂದ ಪ್ರಭು ಅವರಿಗೆ ಇತ್ತೀಚೆಗೆ ದೆಹಲಿಯ ಲೀಲಾ ಎಂಬಿಯನ್ಸ್ ಹೋಟೆಲಿನಲ್ಲಿ ನಡೆದ ಐಸಿಎಐನ 71ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಸ್ಕತ್ ಚ್ಯಾಪ್ಟರ್ ಐಸಿಎಐನ ಎಲ್ಲಾ ಸದಸ್ಯರ ಪ್ರತಿನಿಧಿಯಾಗಿ ಬೆಸ್ಟ್ ಓವರ್ಸಿಸ್ ಚಾಪ್ಟರ್ ಅವಾರ್ಡ್ ಐಸಿಎಐ 2020 ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಪಾರ್ಲಿಮೆಂಟ್ ನ ಗೌರವಾನ್ವಿತ ಸದಸ್ಯರಾದ ಸಿಎ ಅರುಣ್ ಸಿಂಗ್ ಹಾಗೂ ಐಸಿಎಐ ನ ಅಧ್ಯಕ್ಷರಾದ ಸಿಎ ಅತುಲ್ ಕುಮಾರ್ ಗುಪ್ತ ಉಪಸ್ಥಿತರಿದ್ದರು. ಜಾಗತಿಕ 43 ದೇಶಗಳ ಒಟ್ಟು 64 ಸಾಗರೋತ್ತರ ಐಸಿಎಐ ನ ಚ್ಯಾಪ್ಟರ್ ಗಳಲ್ಲಿ ಮಸ್ಕತ್ ಚ್ಯಾಪ್ಟರ್ ಐಸಿಎಐ ಅತ್ಯುತ್ತಮ ಚ್ಯಾಪ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಮುಖೇನ ಐಸಿಎಐ 2020 ಇದರಿಂದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಸಿಎ ರಮಾನಂದ ಪ್ರಭು ಅವರು ಮೂಲತಃ ನಾಯ್ಕನಕಟ್ಟೆಯ ಪ್ರಭುಕೇರಿಯವರಾಗಿದ್ದು , ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದ ಎಲ್ಲಾ ಸವಲತ್ತುಗಳು ತಲುಪಿಸಲು ಒಬ್ಬ ಸರ್ಕಾರಿ ಅಧಿಕಾರಿಯಿಂದ ಸಾಧ್ಯವಾಗುತ್ತದೆ. ಇಂತಹ ಹುದ್ದೆಯನ್ನು ಏರಲು ನಾಗರಿಕ ಸೇವಾ ಆಯೋಗದ ಪರೀಕ್ಷೆಗಳಲ್ಲಿ ಯಶಸ್ಸುನ್ನು ಪಡೆಯುವುದು ಮುಖ್ಯ ಎಂದು ನಿವೃತ್ತ ಕಂದಾಯ ಅಧಿಕಾರಿ ಜಯಪ್ರಕಾಶ ರಾವ್ ಹೇಳಿದರು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮಾನವಿಕ ವಿಭಾಗದಿಂದ ಆಯೋಜಿಸಲಾಗಿದ್ದ ನಾಗರಿಕ ಸೇವೆಗೆ ಆಯ್ಕೆಯಾಗುವ ಕುರಿತ ಮಾಹಿತಿ ಕಾರ್ಯಕ್ರಮದಲ್ಲಿ ಮಾತನಾಡಿ, ಯಶಸ್ಸು ಗಳಿಸಬೇಕಾದರೆ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು. ಕನಸುಗಳಿಗೆ ಭಾವನಾತ್ಮಕ ರೂಪ ನೀಡಿ ಅದನ್ನು ಭಿನ್ನವಾಗಿ ಕಾರ್ಯ ರೂಪಕ್ಕೆ ತರುವುದರ ಬಗ್ಗೆ ಯೋಚನೆಯಿರಬೇಕು. ಆದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ದೃಢ ಸಂಕಲ್ಪ, ಸ್ಪಷ್ಟತೆ, ಕ್ರಿಯಾತ್ಮಕ ಅಲೋಚನೆಗಳಿಂದ ಮಾತ್ರ ಸಾಧ್ಯ ಎಂದರು. ಆಳ್ವಾಸ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದು ಒಂದು ತಪಸ್ಸಿನ ಹಾದಿ. ಪ್ರತಿಯೊಬ್ಬರು ಕಠಿಣ ಪರಿಶ್ರಮದಿಂದ ನಡೆದರೆ ಯಶಸ್ಸು ಸಾಧ್ಯ. ಇದರೊಂದಿಗೆ ಸರಿಯಾದ ಮಾರ್ಗದರ್ಶನ ಹಾಗೂ ಸತತ ಪ್ರಯತ್ನ ಇದ್ದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ , ಉಡುಪಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ನಡೆಯಿತು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಸಮಾಜ ಕಾರ್ಯಕರ್ತೆ ಶೈಲಾ ಶ್ಯಾಮನೂರು ಮಾತನಾಡಿ, ಜೊತೆಗೆ ವಿದ್ಯಾರ್ಥಿಗಳಿಗೆ ಕೋಟ್ಪಾ-2003 ಕಾಯ್ದೆಯ ಕುರಿತು ಮಾಹಿತಿ ನೀಡಿ ತಂಬಾಕು ವರ್ಜನೆಯತ್ತ ವಿದ್ಯಾರ್ಥಿಗಳು ಹೆಜ್ಜೆಯನ್ನಿಡುವುದರ ಮೂಲಕ ತಂಬಾಕು ಮುಕ್ತ ಶೈಕ್ಷಣಿಕ ಆವರಣ ನಿಮ್ಮದಾಗಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಉಪಯೋಗದಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಜನೆಯಿಂದ ದೇವರ ಪ್ರೀತಿಗಳಿಸಲು ಸಾಧ್ಯವಿದೆ. ಭಜನೆ ಮೂಲಕ ಭಕ್ತಿ ಶ್ರದ್ಧೆಗೆ ಪ್ರಾಮಾಣಿಕತೆಗೆ ದೇವರು ಒಲಿಯುತ್ತಾನೆ. ಚಿಕ್ಕಂದಿನಿಂದಲೇ ಮಕ್ಕಳಿಗೆ ಧಾರ್ಮಿಕ ಭಾವನೆಗಳನ್ನು ಮೂಡಿಸುವ ಪ್ರಯತ್ನ ಹಿರಿಯರಿಂದ ನಡೆಯಬೇಕು. ಧಾರ್ಮಿಕ ಚಿಂತನೆಗಳಿಂದ ಮನುಷ್ಯ ಸತ್ಪ್ರಜೆಯಾಗಿ ಬೆಳೆಯುತ್ತಾನೆ ಎಂದು ನೇತ್ರಾವತಿ ಶಿರೂರು ಹೇಳಿದರು. ಅವರು ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಬಾಲಕ-ಬಾಲಕಿಯರ ಕುಣಿತ ಭಜನೆ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಗೌರಿ ಜಿ.ಬಿ., ಕುಸುಮ ಜಿ.ಟಿ., ಶಕುಂತಲಾ ಜಿ.ಟಿ., ಕಸ್ತೂರಿ, ಸುಗಂಧಿ ಜಿ.ಎನ್., ಜಯಂತಿ, ವಸಂತಿ ಜಿ.ಎನ್., ಸುಮಿತ್ರಾ ಜಿ., ರುದ್ರಮ್ಮ, ಸರೋಜ, ಗೌರಿ ಬಿ. ಮತ್ತಿತರರು ಉಪಸ್ಥಿತರಿದ್ದರು. ಅಧ್ಯಕ್ಷೆ ಸುಶೀಲಾ ಸ್ವಾಗತಿಸಿದರು. ವಸಂತಿ ಪಿ. ಕಾರ್ಯಕ್ರಮ ನಿರ್ವಹಿಸಿದರು. ನಾಗಿಣಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಹಾಸತಿ ಫ್ರೆಂಡ್ಸ್ ಮಯ್ಯಾಡಿ ಇವರ ಆಶ್ರಯದಲ್ಲಿ 12ನೇ ವರ್ಷದ ಹೊನಲು ಬೆಳಕಿನ ಪುರುಷರ ಕಬ್ಬಡಿ ಪಂದ್ಯಾಟವು ಫೆ. 27ರ ಶನಿವಾರ ರಾತ್ರಿ 8 ಘಂಟೆಗೆ ಮಯ್ಯಾಡಿ ಮಹಾಸತಿ ಅಮ್ಮನವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಈ ಪಂದ್ಯಾಟವು ಪ್ರೋ ಮಾದರಿಯ ಮ್ಯಾಟ್ ಅಂಕಣದಲ್ಲಿ ನಡೆಯಲಿದ್ದು, ಕುಂದಾಪುರ, ಬೈಂದೂರು ಹಾಗೂ ಭಟ್ಕಳ ತಾಲೂಕಿನ ಆಟಗಾರರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ. ಪ್ರಥಮ ಬಹುಮಾನ 15,555 ದ್ವಿತೀಯ ಬಹುಮಾನ 10,011, ತೃತೀಯ ಬಹುಮಾನ 5555, ಚತುರ್ಥ ಬಹುಮಾನ 3333 ಹಾಗೂ ಶಾಶ್ವತ ಫಲಕಗಳೊಂದಿಗೆ ಉತ್ತಮ ದಾಳಿಗಾರ, ಉತ್ತಮ ಹಿಡಿತಗಾರ ಮತ್ತು ಸವ್ಯಸಾಚಿ ಪ್ರಶಸ್ತಿಯನ್ನು ನೀಡಲಾಗುತ್ತದೆ. ಆಸಕ್ತ ತಂಡಗಳು ಫೆ.22ರ ಒಳಗೆ ತಂಡದ ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ 98448270140, 8884146952 ಸಂಪರ್ಕಿಸುವಂತೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಸಿಎ ಫೌಂಡೇಶನ್, ಸಿಎ ಇಂಟರ್‌ಮೀಡಿಯೇಟ್ ಹಾಗೂ ಸಿಎ ಫೈನಲ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆ ಮಾಡಿದ್ದಾರೆ. ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಮರ್ಸ್ ಪ್ರೊಫೆಶನಲ್ ವಿಭಾಗದ ಒಲ್ವಿಟಾ ಆನ್ಸಿಲಾ ಡಿಸೋಜ ಅಖಿಲ ಭಾರತ ಮಟ್ಟದ ಟಾಪ್ 50 ಸ್ಥಾನಗಳಲ್ಲಿ 19ನೇ ರ್ಯಾಂಕ್ ಪಡೆದಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಒಲ್ವಿಟಾ ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಪಿಯುಸಿ ಶಿಕ್ಷಣ ಪೂರೈಸಿದ್ದು, ಪ್ರಸ್ತುತ ದ್ವಿತೀಯ ಬಿಕಾಂ ಪದವಿ ಓದುತ್ತಿದ್ದಾರೆ. ಆಳ್ವಾಸ್‌ನಲ್ಲಿ ಪಿಯುಸಿ ಮಾಡಿರುವ ಈಕೆ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದರು. ಗ್ರೂಪ್1 ಮತ್ತು ಗ್ರೂಪ್2 ಎರಡೂ ಪರೀಕ್ಷೆಗಳನ್ನು ಒಂದೇ ಪ್ರಯತ್ನದಲಿ ಉತ್ತೀರ್ಣರಾಗಿದ್ದು,800ರಲ್ಲಿ 655 ಅಂಕಗಳನ್ನು ಪಡೆದಿದ್ದಾರೆ. ಸಿಎ  – ಇಂಟರ್ ಇಂಟರ್‌ಮೀಡಿಯೇಟ್ ಫಲಿತಾಂಶ: ಸಿಎ-ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜು ಗ್ರೂಪ್-1 ಮತ್ತು ಗ್ರೂಪ್-22ವಿಭಾಗದಲ್ಲಿ ಶೇ.23.052 ಫಲಿತಾಂಶವನ್ನು ಪಡೆದುಕೊಂಡಿದೆ.…

Read More