Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಮಂಗಳವಾರ ಆಯುಷ್ ಕಿಟ್ ವಿತರಿಸಲಾಯಿತು. ಕಾಲ್ತೋಡು ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ. ವೀಣಾ ಕಾರಂತ್ ಅವರು ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಅವರಿಗೆ ಹಸ್ತಾಂತರಿಸಿ ಅದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಸಂಸ್ಥೆಯ ಮುಖ್ಯ ಕಾರ್ಯನಿವರ್ಹಣಾಧಿಕಾರಿ ವಿಷ್ಣು ಪೈ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಜಿಲ್ಲೆಯ ಅನುದಾನದಿಂದ ಕುಂದಾಪುರ  ಸೌತ್ ರೋಟರಿ ಕ್ಲಬ್  ಮುಖಾಂತರ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಎರಡು ಶವ ಶೀತಲೀಕರಣ ಘಟಕಗಳನ್ನು (mortuary) ಮಂಗಳವಾರ ಹಸ್ತಾಂತರಿಸಲಾಯಿತು. ಈ ಸಂದರ್ಭ ಶೀತಲೀಕರಣ ಘಟಕ ಹಸ್ತಾಂತರಿಸಿದ ರೋಟರಿ ಜಿಲ್ಲೆಯ ಪೂರ್ವ ಗವರ್ನರ್ ಅಭಿನಂದನ್ ಎ. ಶೆಟ್ಟಿ ಮಾತನಾಡಿ, ರೋಟರಿ ಜಿಲ್ಲಾ ಅನುದಾನದ ಮೂಲಕ ಸಮಾಜಕ್ಕೆ ಅಗತ್ಯತೆಯನ್ನು ಮನಗಂಡು ಒದಗಿಸಿಕೊಡುವ ಕೆಲಸ ಮಾಡಲಾಗುತ್ತಿದೆ. ಕುಂದಾಪುರ ಸರಕಾರಿ ಆಸ್ಪತ್ರೆಗೆ ಬಹುಕಾಲದ ಅಗತ್ಯತೆಯಾಗಿದ್ದ ಮೊರ್ಚರಿಯ ಬಗ್ಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆಯ ಗಮನಕ್ಕೆ ತರಲಾಗಿತ್ತು. 2018-19ರ ಅನುದಾನದ ರೂ.5 ಲಕ್ಷದಲ್ಲಿ ಎರಡು ಬಾಡಿ ಮೊರ್ಚರಿ ಸ್ಟೋರೇಜ್ ಸಿಸ್ಟಮ್ ಈಗ ಲಭಿಸಿದೆ. ಮೃತರಾದ ವ್ಯಕ್ತಿಯ ಮನೆಯವರು ಬರುವುದು ವಿಳಂಬವಾದರೆ ಅಲ್ಲಿನ ತನಕ ಶವವನ್ನು ಸಂಗ್ರಹಿಸಿ ಇಡಲು ಅನುಕೂಲವಾಗುತ್ತದೆ ಎಂದರು. ಜಿಲ್ಲಾ ಫೌಂಡೇಶನ್ ಕಮಿಟಿ ಚೆರ್ ಮನ್ ಸದಾನಂದ ಚಾತ್ರ, ವಲಯ ಅಸಿಸ್ಟೆಂಟ್ ಗವರ್ನರ್ ರವಿರಾಜ್ ಶೆಟ್ಟಿ, ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ರಾಬರ್ಟ್ ರೆಬೆಲ್ಲೋ ಮುಖ್ಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೂನ್ ಮಾಹೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅತೀ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಿರುವ ಕುಂದಾಪುರ ತಾಲೂಕಿನ ಹಕ್ಲಾಡಿ, ಕಟ್‌ಬೆಲ್ತೂರು, ಕಂದಾವರ ಹಾಗೂ ಬ್ರಹ್ಮವರ ತಾಲೂಕಿನ ಕೋಟ, ಬಿಲ್ಲಾಡಿ, ಕಾಡೂರು ಗ್ರಾಮ ಪಂಚಾಯತಿ ಪ್ರತಿನಿಧಿಗಳನ್ನು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ದಿನಕರ ಬಾಬು ಅಭಿನಂದಿಸಿದರು. ಮಹಾತ್ಮ ಗಾಂಧೀ ಉದ್ಯೋಗ ಖಾತರಿ ಯೋಜನೆಯಡ ಜಿಲ್ಲೆಯಲ್ಲಿ ಉತ್ತಮ ಪ್ರಗತಿಯಾಗಿದ್ದು, 2020-21 ರ ಸಾಲಿನಲ್ಲಿ ಒಟ್ಟು 5.12 ಲಕ್ಷ ಮಾನವ ದಿನಗಳನ್ನು ಸೃಷ್ಠಿಸುವ ಗುರಿ ಹೊಂದಿದ್ದು, ಜೂನ್ ಅಂತ್ಯಕ್ಕೆ 1.64 ಲಕ್ಷ ಗುರಿ ಹೊಂದಲಾಗಿತ್ತು, ಈ ಸಾಲಿನಲ್ಲಿ ಈವರೆಗೆ 2.88 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದ್ದು, ಒಟ್ಟು ಗುರಿಗೆ ಶೇ.56.25 ಪ್ರಗತಿ ಸಾದಿಸಿದ್ದು, ಜೂನ್ ಮಾಹೆಯ ಗುರಿಗೆ ಶೇ.175.60 ಪ್ರಗತಿ ಸಾಧಿಸಲಾಗಿದೆ. ಜಿಲ್ಲೆಯಲ್ಲಿ ಜೂನ್ ಮಾಹೆಯವರೆಗೆ ಅತೀ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಿರುವ, ಬಿಲ್ಲಾಡಿ ಗ್ರಾ.ಪಂ (11111 ಮಾನವ ದಿನಗಳು),…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.30ರ ಮಂಗಳವಾರ 9 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಮುಂಬೈನಿಂದ ಬಂದಿದ್ದ ಕಾಲ್ತೋಡು ಗ್ರಾಮ 48 ವರ್ಷದ ವ್ಯಕ್ತಿ ಭಾನುವಾರ ಅನಾರೋಗ್ಯದಿಂದ ಮೃತಪಟ್ಟಿದ್ದು, ಮೃತ ವ್ಯಕ್ತಿಗೂ ಕೋವಿಡ್ ಪಾಸಿಟಿವ್ ಇರುವುದು ಇಂದು ದೃಢವಾಗಿದೆ. ಮೃತ ವ್ಯಕ್ತಿ ಅನಾರೋಗ್ಯದಿಂದ ಬಳಲಿ ಮುಂಬೈನ ಆಸ್ಪತ್ರೆಗೂ ದಾಖಲಾಗಿದ್ದರು. ಶನಿವಾರ ಪತ್ನಿ ಹಾಗೂ ಪುತ್ರಿಯೊಂದಿಗೆ ಮುಂಬೈನಿಂದ ಕಾಲ್ತೋಡು ಗ್ರಾಮದ ತನ್ನ ನಿವಾಸಕ್ಕೆ ಆಗಮಿಸಿದ್ದು, ಭಾನುವಾರ ಮೃತಪಟ್ಟಿದ್ದರು. ಅವರು ಮನೆಗೆ ಬಂದಿರುವ ಮಾಹಿತಿ ಆರೋಗ್ಯ ಇಲಾಖೆಗೆ ನೀಡಿರಲಿಲ್ಲ. ವಿಷಯ ತಿಳಿದು ಅವರ ಸ್ವ್ಯಾಬ್ ಪರೀಕ್ಷೆಗೆ ಕಳುಹಿಸಿದಾಗ ಪಾಸಿಟಿವ್ ಇರುವುದು ದೃಢವಾಗಿದೆ. ಕೋವಿಡ್ ನಿಯಮಾವಳಿಯಂತೆ ಅಂತ್ಯ ಸಂಸ್ಕಾರ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪಾಸಿಟಿವ್ ಬಂದಿರುವವರಲ್ಲಿ ಮೂವರು ಮುಂಬೈ, ಓರ್ವ ಹೈದರಾಬಾದ್ ಹಾಗೂ ಇನ್ನಿಬ್ಬರಿಗೆ ಪ್ರಾಥಮಿಕ ಸಂಪರ್ಕ ಬಂದಿದೆ. ಈ ಪೈಕಿ ಕುಂದಾಪುರ ಬೆಂಗಳೂರು ಸಂಚರಿಸುವ ಇಬ್ಬರು ಬಸ್ ಚಾಲಕ, ಬಟ್ಟೆ ಅಂಗಡಿಯ ಮಾಲಿಕನಿಗೆ ಪಾಸಿಟಿವ್ ದೃಢವಾಗಿದೆ. ಇದನ್ನೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರದ ಪರೀಕ್ಷಾ ಕೇಂದ್ರವೊಂದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಯೋರ್ವರಿಗೆ ಕೋವಿಡ್-೧೯ ಪಾಸಿಟಿವ್ ಇರುವುದು ದೃಢವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ, ಆಕೆ ಪರೀಕ್ಷೆ ಬರೆದ ಕೊಠಡಿಯನ್ನು ಸೀಲ್‌ಡೌನ್ ಮಾಡಲಾಗಿದೆ. ಈ ವಿದ್ಯಾರ್ಥಿನಿ ಈಗಾಗಲೇ ಎರಡು ಪರೀಕ್ಷೆಗಳನ್ನು ಬರೆದಿದ್ದು, ಸೋಮವಾರ ವಿಜ್ಞಾನ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷಾ ಕೊಠಡಿಗೆ ಹಾಜರಾಗುವ ಮೊದಲು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗಿದ್ದು ಈ ಸಂದರ್ಭ ಆಕೆಗೆ ಜ್ವರದ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿತ್ತು. ಬಳಿಕ ಸ್ವ್ಯಾಬ್ ತೆಗೆದು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಅದರ ವರದಿ ಇಂದು ದೊರೆತಿದ್ದು, ಪಾಸಿಟಿವ್ ಇರುವುದು ದೃಢಪಟ್ಟಿದೆ. ವಿದ್ಯಾರ್ಥಿನಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಾಗಿದ್ದು, ಅದನ್ನು ಸೀಲ್‌ಡೌನ್ ಮಾಡಲಾಗಿದೆ. ಪೊಷಕರು ಭಯಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ವಿದ್ಯಾರ್ಥಿನಿಯ ಮನೆಯ ಓರ್ವರು ಮುಂಬಯಿಯಿಂದ ಬಂದು ಕ್ವಾರಂಟೈನ್ ಮುಗಿಸಿ ಮನೆಗೆ ಬಂದಿದ್ದು, ಅವರಿಂದ ವಿದ್ಯಾರ್ಥಿನಿಗೂ ಪಾಸಿಟಿವ್ ಬಂದಿರುವ ಶಂಕೆ ಇದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೀನುಗಾರರ ಆರಾಧ್ಯ ದೈವೀಕೇಂದ್ರವಾದ ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಸಮೀಪ ಕಡಲತೀರದಲ್ಲಿ ಕುಂದಾಪುರ ತಾಲ್ಲೂಕು ನಾಡದೋಣಿ ಮೀನುಗಾರರ ಒಕ್ಕೂಟ ಮತ್ತು ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘ ಸಂಯುಕ್ತವಾಗಿ ಭಾನುವಾರ ಸಾಂಪ್ರದಾಯಿಕ ಸಮುದ್ರ ಪೂಜೆ ಸಲ್ಲಿಸಿದವು. ನಾಡದೋಣಿ ಮೀನುಗಾರಿಕೆ ಋತು ಆರಂಭಿಸುವ ಪೂರ್ವಭಾವಿಯಾಗಿ ಸುರಕ್ಷಿತ ಮತ್ತು ಸಮೃದ್ಧ ಮೀನುಗಾರಿಕೆಗಾಗಿ ಪ್ರಾರ್ಥಿಸಿ ಪ್ರತಿವರ್ಷ ಈ ಪೂಜೆ ನಡೆಸಲಾಗುತ್ತದೆ. ಅರ್ಚಕ ಆದರ್ಶ ಭಟ್ ಅಧ್ವರ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ತೀರದಲ್ಲಿ ಮರಳಿನ ಸಮುದ್ರ ದೇವತೆಯ ಲಿಂಗ ರಚಿಸಿ ಅದಕ್ಕೆ ಪೂಜೆ ಮಾಡಲಾಯಿತು. ಆ ಬಳಿಕ ಸಮುದ್ರ ಪೂಜೆ ನೆರವೇರಿಸಿ ಕಡಲಿಗೆ ಬಾಗಿನ, ಹಾಲು ಸಮರ್ಪಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಇದನ್ನೂ ಓದಿ ► ಉಪ್ಪುಂದ: ಮೀನು ಮಾರಾಟ ಪ್ರಾಥಮಿಕ ಸಹಕಾರ ಸಂಘದ ನೂತನ ಕಟ್ಟಡ ‘ಮತ್ಸ್ಯಸಿರಿ’ ಉದ್ಘಾಟನೆ – https://kundapraa.com/?p=39093 . ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಕೆ. ರಾಮಚಂದ್ರ ಹೆಬ್ಬಾರ್, ಕುಂದಾಪುರ ತಾಲ್ಲೂಕು ನಾಡದೋಣಿ ಮೀನುಗಾರರ ಒಕ್ಕೂಟದ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಮ್ಪಂದದ ರಾಣಿಬಲೆ ಮೀನುಗಾರರ ಒಕ್ಕೂಟದ ಮೀನು ಮಾರಾಟ ಪ್ರಾಥಮಿಕ ಸಹಕಾರ ಸಂಘದ ನೂತನ ಕಟ್ಟಡ ‘ಮತ್ಸ್ಯಸಿರಿ’ ಉದ್ಘಾಟನಾ ಸಮಾರಂಭ ಭಾನುವಾರ ನಡೆಯಿತು. ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ ಕಟ್ಟಡವನ್ನು, ಕುಂದಾಪುರ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ಉಪನಿಬಂಧಕಿ ಚಂದ್ರಪ್ರತಿಮಾ ಎಂ. ಜೆ ಭದ್ರತಾಕೋಶವನ್ನು, ಸಂಘದ ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ ಗಣಕಯಂತ್ರವನ್ನು ಉದ್ಘಾಟಿಸಿದರು. ಒಕ್ಕೂಟದ ನೂತನ ಕಟ್ಟಡವನ್ನು ಅದರ ಕೋಶಾಧಿಕಾರಿ ಜಿ. ಮಾಧವ ಖಾರ್ವಿ ಉದ್ಘಾಟಿಸಿದರು. ಒಕ್ಕೂಟದ ಗೌರವ ಸಲಹೆಗಾರ ಎಸ್. ಮದನ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಒಕ್ಕೂಟದ ನಿರ್ದೇಶಕ ಮಂಜುನಾಥ ಜಿ. ಖಾರ್ವಿ ಸ್ವಾಗತಿಸಿ ವಂದಿಸಿದರು. ಸಹಕಾರ ಸಂಘಗಳ ಅಭಿವೃದ್ಧಿ ಅಧಿಕಾರಿ ಅರುಣ್‌ಕುಮಾರ, ಸಂಘದ ನಿರ್ದೇಶಕರಾದ ಡಿ. ಮೋಹನ್ ಖಾರ್ವಿ, ಎ. ಶ್ರೀನಿವಾಸ ಖಾರ್ವಿ, ಪದ್ಮನಾಭ ಖಾರ್ವಿ, ಜಿ. ಮಾಧವ ಖಾರ್ವಿ, ಡಿ. ಶುಕ್ರ ಖಾರ್ವಿ, ರಾಜಾರಾಮ್ ಖಾರ್ವಿ, ರಮೇಶ ಖಾರ್ವಿ, ಬಿ. ನಾಗೇಶ್ ಖಾರ್ವಿ, ಬೈಂದೂರು ವಲಯ ನಾಡ ದೋಣಿ ಮೀನುಗಾರರ ಸಂಘದ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಮಿನಿ ವಿಧಾನಸೌಧದಲ್ಲಿರುವ ತಹಶಿಲ್ದಾರ್ ಕಚೇರಿ, ಎಸಿ ಕಚೇರಿ, ಉಪನೋಂದಣಿ ಕಚೇರಿ ಹಾಗೂ ಪುರಸಭೆ ಕಚೇರಿ, ಎಪಿಎಂಸಿ ಮಾರುಕಟ್ಟೆಗೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದಿಢೀರ್ ಭೇಟಿ ಕೊಟ್ಟು ಕೊರೊನಾ ತಡೆಗಟ್ಟುವಿಕೆ ಕೈಗೊಂಡ ಮುಂಜಾಗೃತಾ ಕ್ರಮಗಳ ಪರಿಶೀಲನೆ ನಡೆಸಿದ ಘಟನೆ ನಡೆಸಿದರು. ಈ ವೇಳೆ ಯಾವುದೇ ಸರ್ಕಾರಿ ಕಚೇರಿಯಲ್ಲಿ ಥರ್ಮಲ್ ಸ್ಕ್ಯಾನರ್ ಇರಲಿಲ್ಲ, ಭೇಟಿಕೊಟ್ಟವರ ದಾಖಲೆ ಪುಸ್ತಕ ನಿರ್ವಹಣೆ ಇಲ್ಲದಿರುವುದು ಸೇರಿದಂತೆ ಹಲವು ಸಮಸ್ಯೆಗಳು ಲೋಕಾಯುಕ್ತ ಅಧಿಕಾರಿಗಳ ಗಮನಕ್ಕೆ ಬಂದಿದೆ. ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳುವಂತೆ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಮಾತ್ರವಲ್ಲದೆ ಮಾಸ್ಕ್ ಧರಿಸದ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೂಡ ನೀಡಲಾಯಿತು. ಎಸಿ ಕಚೇರಿಯಲ್ಲಿ ಕರ್ತವ್ಯ ಲೋಪ ಕಂಡುಬಂದಿದ್ದು ಹಾಜರಾತಿ ಪುಸ್ತಕದಲ್ಲಿ ಸಹಿಯೇ ಹಾಕದಿರುವ ಕೆಲವು ಸಿಬ್ಬಂದಿಗಳ ಬಗ್ಗೆಯೂ ತಪಾಸಣೆ ವೇಳೆ ತಿಳಿದುಬಂದಿದೆ. ಕರ್ತವ್ಯ ಲೋಪ ಎಸಗಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಮೆಮೋ ನೀಡುವುದಾಗಿ ಲೋಕಾಯುಕ್ತ ಡಿ.ವೈಎಸ್.ಪಿ ಭಾಸ್ಕರ್ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ► ಉಡುಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 (ಕೋರೊನ ವೈರಾಣು ಕಾಯಿಲೆ 2019) ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಕಂಟೈನ್ ಮೆಂಟ್ ವಲಯಗಳಲ್ಲಿ ಕೆಲವೊಂದು ನಿರ್ಬಂಧನೆಗಳನ್ನು ಹೇರುವುದು ಮತ್ತು ಕಂಟೈನ್ ಮೆಂಟ್ ಹೊರವಲಯಗಳಲ್ಲಿ ಕೆಲವೊಂದು ಚಟುವಟಿಕೆಗಳ ನಿರ್ಬಂಧಗಳನ್ನು ಸಡಿಲಗೊಳಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆಂದು ಕಂಡುಬoದಿದ್ದು ಅದರಂತೆ ಉಡುಪಿ ಜಿಲ್ಲೆಯಾದ್ಯಂತ ಮುಂದಿನ ಆದೇಶದವರೆಗೆ ಕೆಳಗಿನಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶಿಸಿದ್ದಾರೆ. ಕಂಟೈನ್ ಮೆಂಟ್ ವಲಯಗಳಲ್ಲಿ ಚಟುವಟಿಕೆಗಳನ್ನು ನಿಷೇಧಿಸುವ ಕುರಿತು: 1) ಕಂಟೈನ್ ಮೆಂಟ್ ವಲಯಗಳಲ್ಲಿ ಸಂಪೂರ್ಣ ಲಾಕ್ ಡೌನ್ ಇರುತ್ತದೆ. 2) ವೈದ್ಯಕೀಯ ತುರ್ತು ಸೇವೆಗಳು ಮತ್ತು ಅವಶ್ಯಕತೆಗಳು ಹಾಗೂ ಅಗತ್ಯ ವಸ್ತುಗಳು ಮತ್ತು ಸೇವೆಗಳ ಪೂರೈಕೆಗಳನ್ನು ಕಾಪಾಡಿಕೊಳ್ಳಲು ಅನುಮತಿಯನ್ನು ನೀಡಲಾಗಿದೆ.ಇವುಗಳ ಹೊರತು ಕಂಟೈನ್ ಮೆಂಟ್ ವಲಯದ ಒಳಗೆ ಹಾಗೂ ಹೊರಗೆ ಜನರ ಚಲನ ವಲನಗಳನ್ನು ನಿಷೇಧಿಸಲಾಗಿದೆ. ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಚಟುವಟಿಕೆಗಳು: ಕಂಟೈನ್ ಮೆಂಟ್ ವಲಯಗಳ ಹೊರಗಿನ ಪ್ರದೇಶದಲ್ಲಿ ಈ ಕೆಳಗಿನ ಚಟುವಟಿಕೆಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.29ರ ಸೋಮವಾರ 18 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಇಂದು 209 ನೆಗೆಟಿವ್: ಈ ತನಕ ಒಟ್ಟು 14,268 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,862 ನೆಗೆಟಿವ್, 1,197 ಪಾಸಿಟಿವ್ ಬಂದಿದ್ದು, 209 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 74 ನೆಗೆಟಿವ್, 18 ಪಾಸಿಟಿವ್ ಬಂದಿದೆ. 139 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 1,197 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 1056 ಮಂದಿ ಬಿಡುಗಡೆಯಾಗಿದ್ದು, 139 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಕೈಗೊಂಡ ವಿಶೇಷ ಕ್ರಮಗಳ ಪಾಲನೆ ಕಡ್ಡಾಯ: ಜಿಲ್ಲಾಧಿಕಾರಿ – https://kundapraa.com/?p=39079 .

Read More