ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ 18 ವರ್ಷ ತುಂಬಿದ ಎಲ್ಲಾ ಯುವಕ ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಮೂಲಕ, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರ ನೊಂದಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ, ರಾಜ್ಯ ಚುನಾವಣಾ ಆಯೋಗದ ಜಂಟಿ ಮುಖ್ಯ ಚುನಾವಣಾಧಿಕಾರಿ ಶಂಭು ಭಟ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ನಡೆದ, ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ಇ-ಎಪಿಕ್ ಕಾರ್ಡ್ ಕುರಿತಂತೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ಕಾರ್ಡ್ ಪಡೆಯುವಂತೆ ತಿಳಿಸಿ ಎಂದರು. ಸಭೆಯಲ್ಲಿ ಉಪ ಮುಖ್ಯ ಚುನಾವಣಾಧಿಕಾರಿ ಲಕ್ಷ್ಮಿಮಶ್ವರ, ದಿನೇಶ್ ಚಂದ್ರ, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಶೀಲ್ದಾರ್ಗಳು ಉಪಸ್ಥಿತರಿದ್ದರು. ಸಭೆಯ ನಂತರ ಮತದಾರರ ಪಟ್ಟಿಯ ಪರಿಶೀಲನೆ ಕುರಿತಂತೆ, ಉಡುಪಿಯ ಶಿವಳ್ಳಿ ಸೇರಿದಂತೆ ವಿವಿಧ ಭಾಗದ ಸಾರ್ವಜನಿಕರ ಮನೆಗಳಿಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಿಕ್ಷಾಟನೆಯಿಂದ ಬಂದ 1 ಲಕ್ಷ ರೂ. ಹಣವನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ ದೇಣಿಗೆಯಾಗಿ ನೀಡಿದ ವೃದ್ಧೆಯೋರ್ವರ ಸೇವಾ ಕೈಂಕರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ತಾಲ್ಲೂಕಿನ ಗಂಗೊಳ್ಳಿ ಬಳಿಯ ಕಂಚುಗೋಡು ಮೂಲದವರಾದ ಅಶ್ವಥ್ಥಮ್ಮ (80) ಈ ದೇಣಿಗೆ ನೀಡಿದ ಭಕ್ತೆ. ಉಡುಪಿ ಜಿಲ್ಲೆಯ ವಿವಿದೆಡೆ ಭಿಕ್ಷಾಟನೆ ಮಾಡಿ ಸಂಗ್ರಹಿಸುವ ಹಣವನ್ನು ಸಾಮಾಜಿಕ ಸೇವಾ ಚಟುವಟಿಕೆಗಳಿಗೆ ದಾನವಾಗಿ ನೀಡುವ ಕಾಯಕದಲ್ಲಿ ತೊಡಗಿದ್ದಾರೆ. ಈ ಹಿಂದೆ ಅವರು ಗಂಗೊಳ್ಳಿ ಸಮೀಪದ ಕಂಚಗೋಡು ದೇವಸ್ಥಾನಕ್ಕೆ 1.5 ಲಕ್ಷ ರೂ., ಪಂಪ ದೇವಸ್ಥಾನಕ್ಕೆ ಒಂದು ಲಕ್ಷ ರೂಪಾಯಿ, ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1.5 ಲಕ್ಷ ರೂಗಳನ್ನು ಕೂಡ ದೇಣಿಗೆ ನೀಡಿದ್ದರು. ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನಕ್ಕೆ 1 ಲಕ್ಷ ರೂ. ದೇಣಿಗೆಯನ್ನು ಹಸ್ತಾಂತರಿಸುವ ಸಂದರ್ಭ ದೇವಾಲಯದ ಅರ್ಚಕ ವೇದಮೂರ್ತಿ ಜನಾರ್ದನ ಅಡಿಗ ಮತ್ತು ವ್ಯವಸ್ಥಾಪಕ ಕೆ. ನಾಗರಾಜ ಅವರು ದೇವರ ಪ್ರಸಾದ ನೀಡಿ ಗೌರವಿಸಿದರು. ಅಶ್ವಥ್ಥಮ್ಮ ದೇಶಾದ್ಯಂತ ವಿವಿಧ ದೇವಾಲಯಗಳಿಗೆ ಭೇಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೦-೨೧ನೇ ಸಾಲಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಉದ್ಘಾಟನೆ ನಡೆಯಿತು. ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಬಿ. ಎಸ್. ಸುರೇಶ್ ಶೆಟ್ಟಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಅಗತ್ಯ. ಆ ಮೂಲಕ ವಿದ್ಯಾರ್ಥಿ ದೆಸೆಯಲ್ಲಿಯೇ ಆತ್ಮ ಸ್ಥೈರ್ಯದಿಂದ ಕಾರ್ಯಪ್ರವೃತ್ತರಾದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿ ಕುಂದಾಪುರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಮಾತನಾಡಿ, ಶಿಸ್ತು, ಸಂಯಮ, ನಿಷ್ಠೆ, ಶ್ರದ್ಧೆ ಇವುಗಳು ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕ ಎಂದರು. ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಫ್ರೆಶರ್ಸ್ ಡೇ ಕಾರ್ಯಕ್ರಮದಲ್ಲಿ ಸಿ.ಎಸ್. ಫೌಂಡೇಶನ್ ತೇರ್ಗಡೆ ಹೊಂದಿದ ಕಾಲೇಜಿನ 17 ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡಾ 95ಕ್ಕಿಂತ ಹೆಚ್ಚು ಅಂಕಗಳಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತಿಗಳ ಮುಂದಿನ 30 ತಿಂಗಳ ಮೊದಲನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳನ್ನು ಆಯ್ಕೆ ನಡೆಸುವ ಸಲುವಾಗಿ ಗೊತ್ತುಪಡಿಸಿದ ಅಧಿಕಾರಿಗಳು ಮೀಸಲಾತಿಯಂತೆ, ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಮಾಡುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಉಲ್ಲಾಸ್ ಬಿಲ್ಡಿಂಗ್ ಪ್ರಥಮ ಮಹಡಿಯಲ್ಲಿ ನೂತನ ಭಾರತ್ ವಿಕಾಸ ಸೌಹಾರ್ದ ಸಹಕಾರಿ ನಿಯಮಿತ ಕುಂದಾಪುರ ಇದರ ಉದ್ಘಾಟನೆ ನಡೆಯಿತು. ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಧರ್ಮದರ್ಶಿಗಳಾದ ಅಪ್ಪಣ್ಣ ಹೆಗ್ಗಡೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಮಲಶಿಲೆ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೂಕ್ತೇಸರಾದ ಎಸ್. ಸಚಿದಾನಂದ ಚಾತ್ರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಕುಂದಾಪುರ ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಉಮೇಶ್ ಪುತ್ರನ್ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ನಿರ್ದೇಶಕರಾದ ರಾಜು ಪೂಜಾರಿ ಭದ್ರತಾ ಕೋಶವನ್ನು ಉದ್ಘಾಟಿಸಿದರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮಾಜಿ ಮೂಕ್ತೇಸರಾದ ಕೃಷ್ಣಪ್ರಸಾದ್ ಅಡ್ಯಂತಾಯ ಗಣಕಯಂತ್ರವನ್ನು ಉದ್ಘಾಟಿಸಿದರು. ಕುಂದಾಪುರ ಉದ್ಯಮಿಯಾದ ದಿನೇಶ್ ಅಮೀನ್ ಮೋಹಿನಿ ನಶ್ಯ ನಗದು ಕಛೇರಿಯನ್ನು ಉದ್ಘಾಟಿಸಿದರು. ಬೆಂಗಳೂರು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ನಿರ್ದೇಶಕರಾದ ಮಂಜುನಾಥ ಎಸ್.ಕೆ ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಬೆಂಗಳೂರು ಕರ್ನಾಟಕ ರಾಜ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಳಿಕ ವಿದಾಯ ಭಾಷಣ ಮಾಡಿದ ಸಭಾಪತಿ ಅವರು ಸಂಖ್ಯಾಬಲದ ಮೇಲೆ ಸಭಾಪತಿ ಆಯ್ಕೆ ನಡೆಯುತ್ತದೆ. ಮುಂದಿನ ಬಜೆಟ್ ಅಧಿವೇಶನದ ವರೆಗೂ ಈ ಸ್ಥಾನದಲ್ಲಿ ಇರುವ ಅವಕಾಶ ನನಗಿತ್ತು. ಆದರೆ ಎಲ್ಲರ ಬಯಕೆ ಬೇರೆಯದೇ ಆಗಿರುವ ಹಿನ್ನೆಲೆ ಈ ಸ್ಥಾನದಲ್ಲಿ ಇನ್ನೂ ಹೆಚ್ಚು ಸಮಯ ಮುಂದುವರಿಯದಿರಲು ತೀರ್ಮಾನಿಸಿದ್ದೇನೆ. ನೈತಿಕ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡಿರುವುದರಿಂದ ಪೀಠಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. ಈಗ ನನ್ನ ಮನಸ್ಸು ನಿರಾಳವಾಗಿದೆ, ಜವಾಬ್ದಾರಿ ಮುಗಿದಿದೆ, ಸದನದ ನಿಯಮದಂತೆ ಉಪ ಸಭಾಪತಿಗಳಿಗೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಪೀಠತ್ಯಾಗ ಮಾಡುತ್ತಿದ್ದೇನೆ ಎಂದಿದ್ದಾರೆ. ಸದನದ ಘನತೆ, ಚ್ಯುತಿ ಬಾರದಂತೆ ನಡೆದುಕೊಳ್ಳುವ ಅನಿವಾರ್ಯತೆ ವಿಧಾನ ಪರಿಷತ್ ಎಲ್ಲಾ ಸದಸ್ಯರಿಗೆ ಇದೆ. ಕೆಲವೊಮ್ಮೆ ಸದನದ ಸದಸ್ಯರ ಬದಲಾದಂತೆ ನಿಲುವುಗಳು ಬದಲಾಗುತ್ತವೆ. ಅಂತಹ ನಿಲುವುಗಳಿಗೆ ಹಿಡಿತದಲ್ಲಿದ್ದರೂ ಗೌರವ ಸಲ್ಲಿಸಬೇಕಾಗುತ್ತದೆ. ಇದಕ್ಕೆ ನಾನು ಕೂಡ ಹೊರತಾಗಿಲ್ಲ. ನನ್ನ…
ಇಂದು ಒತ್ತಡ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಸ್ವಲ್ಪ ಒತ್ತಡವು ದೈನಂದಿನ ಜೀವನದ ಒಂದು ಭಾಗವಾಗಿದ್ದರೂ, ದೀರ್ಘಕಾಲದ ಒತ್ತಡವು ಮಾರಣಾಂತಿಕ ಪರಿಣಾಮಗಳನ್ನು ಉಂಟುಮಾಡುತ್ತದೆ. ಇದು ವಯಸ್ಸಾಗುವ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ ಮತ್ತು ಹೃದ್ರೋಗಗಳು, ಮಧುಮೇಹ ಮತ್ತು ಖಿನ್ನತೆಯಂತಹ ಮಾನಸಿಕ ಕಾಯಿಲೆಗಳಿಗೆ ಕಾರಣವಾಗಬಹುದು. ನಿಮ್ಮ ಮನಸ್ಸನ್ನು ಹಗುರವನ್ನಾಗಿಸಿ ಒತ್ತಡ ನಿವಾರಣೆ ಮಾಡಲು ಸಹಾಯ ಮಾಡಬಲ್ಲ ಹಲವು ಆಯುರ್ವೇದ ವಿಧಾನಗಳಿವೆ. ಶತಮಾನದಷ್ಟು ಹಳೆಯದಾದ ಈ ಅಭ್ಯಾಸವು ಒತ್ತಡ ನಿವಾರಣೆ ಮಾಡಲು ಸಹಾಯಕವಾಗಿದೆ. ಅವುಗಳಲ್ಲಿ ಕೆಲವು ಆಯುರ್ವೇದ ಪದ್ಧತಿ ಇಲ್ಲಿದೆ ನೋಡಿ. ಯೋಗ: ನಾವು ಆಯುರ್ವೇದದ ಬಗ್ಗೆ ಮಾತನಾಡುವಾಗ, ಯೋಗ ನೆನಪಾಗುವ ಮೊದಲ ವಿಷಯಗಳಲ್ಲಿ ಒಂದಾಗಿದೆ. ಈ ಸಮಗ್ರ ಅಭ್ಯಾಸವು ನಿಮಗೆ ಆರಾಮವಾಗಿರಲು ಮತ್ತು ಮಾನಸಿಕ ಸ್ಪಷ್ಟತೆಯನ್ನು ನೀಡುವ ಮೂಲಕ ತಲೆಯಿಂದ ಕಾಲಿವರೆಗೂ ಉತ್ತಮವಾಗಲು ಸಹಾಯ ಮಾಡುತ್ತದೆ. ಯೋಗ ದೇಹ, ಮನಸ್ಸು ಮತ್ತು ಆತ್ಮದ ನಡುವಿನ ಸಂಪರ್ಕವನ್ನು ಬಲಪಡಿಸುತ್ತದೆ, ಇದು ಒತ್ತಡ ಮತ್ತು ಆತಂಕದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಒತ್ತಡವನ್ನು ನಿವಾರಿಸಲು ನೀವು ಉತ್ತನಾಸನ (ಮುಂದೆ ನಿಂತಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ದೋಹಾ, ಕತಾರ್: ಪ್ರತಿಷ್ಠಿತ ಐಸಿಸಿ ಕತಾರ್ನ (ಭಾರತೀಯ ಸಾಂಸ್ಕೃತಿಕ ಕೇಂದ್ರ ಕತಾರ್ ) 2021 – 22ರ ಸಾಲಿನ ನೂತನ ಆಡಳಿತ ಸಮಿತಿಯ ಉಪಾಧ್ಯಕ್ಷರಾಗಿ ಸುಬ್ರಮಣ್ಯ ಹೆಬ್ಬಾಗಿಲು ಅವರನ್ನು ನೇಮಕಮಾಡಲಾಗಿದೆ. ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದವರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ಕಳೆದ ಒಂದು ದಶಕದಿಂದ ಕತಾರಿನಲ್ಲಿ ನೆಲೆಸಿರುವ ಭಾರತೀಯರಿಗೆ ಅವಿರತ ಸೇವೆ ಸಲ್ಲಿರುತ್ತಿದ್ದಾರೆ. ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡದ್ದಲ್ಲದೆ, ಕರ್ನಾಟಕ ಸಂಘ ಕತಾರ್ನ ಉಪಾಧ್ಯಕ್ಷರಾಗಿ, ಐಸಿಬಿಫ್ನ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಕೋವಿಡ್ -19 ಸಂಕಷ್ಟದ ವೇಳೆಯಲ್ಲಿ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರು ತನ್ನ ಜೀವದ ಹಂಗು ತೊರೆದು ಅನೇಕ ಭಾರತೀಯರಿಗೆ ಸಕಾಲ ನೆರವನ್ನು ನೀಡಿರುವುದರ ಮೂಲಕ ಜನರ ಪ್ರಶಂಶೆಯನ್ನು ಗಳಿಸಿದ್ದಾರೆ. ಇತಿಹಾಸದಲ್ಲೇ ಮೊದಲ ಬಾರಿಗೆ, ಕತಾರಿನ ಭಾರತೀಯ ರಾಯಭಾರ ಕಛೇರಿ ಅಭಿವೃದ್ಧಿಪಡಿಸಿದ ಮೊಬೈಲ್ ಅಪ್ಲಿಕೇಶನ್ ‘ಡಿಜಿಪೋಲ್’ ಮೂಲಕ ಭಾರತೀಯ ವಲಸಿಗ ಸಮುದಾಯದ ಸರ್ವೋಚ್ಚ ಅಂಗಸಂಸ್ಥೆಯ ಚುನಾವಣೆ ನಡೆಸಲಾಯಿತು. ಪ್ರಸ್ತುತ ಕೋವಿಡ್ -19 ಪರಿಸ್ಥಿತಿಯಲ್ಲಿ ಹಸ್ತಚಾಲಿತ ಮತದಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನಲ್ಲಿ 18ರಿಂದ 40 ವರ್ಷಗಳ ವಯೋಮಿತಿಯೊಳಗಿನ ಯುವಬರಹಗಾರರು ಕನ್ನಡ ಸಾಹಿತ್ಯದಲ್ಲಿ ರಚಿಸಿರುವ ಚೊಚ್ಚಲ ಕೃತಿಗಳಾದ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಸಾಹಿತ್ಯದ ಪ್ರಕಾರಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್ಸೈಟ್ http://www.kannadapustakapradhikara.com ಅಥವಾ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು ದೂರವಾಣಿ ಸಂಖ್ಯೆ: 080-22484516 / 22107704 ಅನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಎಮ್.ಐ.ಟಿ ಕುಂದಾಪುರ ಇದರ ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿಗಳಿಗೆ ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ಆಯೋಜಿಸಿದ ಪಂಚಾಯತ್ಗೆ ಎಂಬಿಎ ವಿದ್ಯಾಥಿಗಳ ಕೊಡುಗೆ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಾಗಾರ ನಡೆಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಆಪ್ತ ಸಹಾಯಕ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಯಾವುದೇ ಕಠಿಣ ಪರಿಸ್ಥಿತಿಯಲ್ಲಿ ಕುಗ್ಗದೇ ಆತ್ಮವಿಶ್ವಾಸ ಮೈಗೂಡಿಸಿಕೊಂಡಾಗ ಬದುಕಿನ ಯಶಸ್ಸಿನ ಜೀವನದ ಮೈಲಿಗಲ್ಲು ಏರಲು ಸಾಧ್ಯ ಎಂದು ತಿಳಿಸಿದರು. ತಮ್ಮ ವಿದ್ಯಾರ್ಥಿ ಜೀವನದಲ್ಲೇ ನಾಯಕತ್ವ ಗುಣ ಬೆಳೆಸಿಕೊಂಡು, ಸಮಾಜಕ್ಕೆ ತಮ್ಮಿಂದಾದ ಸೇವೆಯನ್ನು ಸಲ್ಲಿಸುವ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು, ಪಂಚಾಯತ್ ಮಟ್ಟದಲ್ಲಿ ತಮ್ಮಿಂದ ಅನಾಗರಿಕರಿಗೆ, ಅನಕ್ಷರಸ್ಥರಿಗೆ ನಾವು ಹೇಗೆ ನೆರವಾಗಬಹುದೆಂಬ ಮಾಹಿತಿ ನಮ್ಮಲ್ಲಿ ಇದ್ದು ಸದೃಢ ಸಮಾಜದ ನಿರ್ಮಾಣದ ಪರಿಕಲ್ಪನೆ ನಮ್ಮಲ್ಲಿರಬೇಕು ಎಂದರು. ಈ ಸಂದರ್ಭದಲ್ಲಿ ಕಾರಂತ ಥೀಮ್ ಪಾರ್ಕ್ನ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮ, ಕಾಲೇಜಿನ ಡೀನ್ ಮತ್ತು ವಿಭಾಗದ ಮುಖ್ಯಸ್ಥೆ ಡಾ. ಪ್ರತಿಭಾ…
