ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಹೊರರಾಜ್ಯಗಳಿಂದ ಬರುತ್ತಿರುವವರಿಗೆ ಸೂಕ್ತ ಮೂಲಭೂತ ಸೌಕರ್ಯ ಕಲ್ಪಿಸಿ ಕ್ವಾರಂಟೈನ್ ಮಾಡಲು ಜಿಲ್ಲಾಡಳಿತ ವಿಫಲವಾಗಿದೆ ಎಂದು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್. ಹರಿಪ್ರಸಾದ ಶೆಟ್ಟಿ ಕಾನ್ಕಕ್ಕಿ ಆರೋಪಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಹುಟ್ಟಿ ಬೆಳೆದು ಹೊರ ರಾಜ್ಯಗಳಲ್ಲಿ ದುಡಿದು ಜಿಲ್ಲೆಯ ಆರ್ಥಿಕ, ಸಾಮಾಜಿಕ, ಧಾರ್ಮಿಕ ಚಟುವಟಿಕೆಗಳಿಗೆ ಮಹತ್ತರ ಕೊಡುಗೆ ನೀಡುತ್ತಿದ್ದ ಜನರನ್ನು ಈಗ ತೃತೀಯ ದರ್ಜೆ ನಾಗರಿಕರಂತೆ ನಡೆಸಿಕೊಳ್ಳುತ್ತಿರುವುದು ಜಿಲ್ಲೆಗೆ ಕಪ್ಪುಚುಕ್ಕೆಯಾಗಿದೆ. ಜಿಲ್ಲೆಯ ಶಿರೂರು ಗಡಿಯಲ್ಲಿರುವ ತಪಾಸಣಾ ಕೇಂದ್ರದಿಂದ ಪ್ರಾರಂಭಿಸಿ ಕ್ಟಾರೆಂಟೈನ್ ತನಕದ ಎಲ್ಲಾ ಪ್ರಕ್ರಿಯೆಗಳು ಅವ್ಯವಸ್ಥಿತವಾಗಿದ್ದು ಬಹು ದೂರದಿಂದ ಬಂದವರನ್ನು ಚೆಕ್ ಪೊಸ್ಟ್ ನಲ್ಲಿ ಗಂಟೆಗಟ್ಟಲೆ ಕಾಯಿಸಲಾಗುತ್ತಿದೆ. ಸರಕಾರಿ ಕ್ವಾರಂಟೈನ್ನಲ್ಲಿ ಇರುವವರಿಗೆ ಸರಿಯಾದ ಶೌಚಾಲಯ ಸ್ನಾನಗ್ರಹಗಳಲ್ಲಿ ಸಮರ್ಪಕ ನೀರು ಮತ್ತು ವಿದ್ಯುತ್ ವ್ಯವಸ್ಥೆ, ಶುದ್ಧ ಕುಡಿಯುವ ನೀರು ಕೂಡಾ ಇಲ್ಲ. ಕೆಲವೆಡೆ ಸಾಮಾಜಿಕ ಅಂತರ ಪಾಲನೆಯಾಗುತ್ತಿಲ್ಲ. ಬೆಳಗ್ಗಿನ ಉಪಹಾರ ಮದ್ಯಾಹ್ನದ ಊಟ ಮತ್ತು ರಾತ್ರಿಯ ಊಟ ಸರಿಯಾದ ಸಮಯಕ್ಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿರೂರು ಗಡಿಯಲ್ಲಿರುವ ಕೋವಿಡ್-19 ತಪಾಸಣಾ ಕೇಂದ್ರಕ್ಕೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಶುಕ್ರವಾರ ಭೇಟಿ ನೀಡಿದರು. ಹೊರರಾಜ್ಯಗಳಿಂದ ಆಗಮಿಸುವ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ. ಜನರನ್ನು ಹೆಚ್ಚು ಹೊತ್ತು ಸತಾಯಿಸದೇ ತಪಾಸಣಾ ಕೇಂದ್ರದಲ್ಲಿ ಶೀಘ್ರವಾಗಿ ಕಾರ್ಯನಿರ್ವಹಿಸುವುದು ಮತ್ತು ಅಗತ್ಯ ಮಾಹಿತಿ ನೀಡುವುದನ್ನು ಮಾಡಬೇಕು ಎಂದವರು ಅಧಿಕಾರಿಗಳಿಗೆ ತಿಳಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಮದನಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ ಉಪ್ಪುಂದ, ಕಾರ್ಯಾಧ್ಯಕ್ಷ ಪ್ರಶಾಂತ ಪೂಜಾರಿ ಜೊತೆಗಿದ್ದರು. ಇದನ್ನೂ ಓದಿ: ► ದುಬೈನಿಂದ ಬಂದಿದ್ದ ಉಡುಪಿ ಜಿಲ್ಲೆಯ 5 ಮಂದಿಗೆ ಕೊರೋನಾ ಪಾಸಿಟಿವ್ – https://kundapraa.com/?p=37564 . ► ಕ್ವಾರಂಟೈನ್ನಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಡಳಿತ ವಿಫಲ: ಎಚ್ ಹರಿಪ್ರಸಾದ ಶೆಟ್ಟಿ ಆರೋಪ – https://kundapraa.com/?p=37583 . ► ಶಿರೂರು ತಪಾಸಣಾ ಕೇಂದ್ರಕ್ಕೆ ಬೈಂದೂರು, ಕುಂದಾಪುರ ಶಾಸಕರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮೇ13ರಂದು ದುಬೈನಿಂದ ಉಡುಪಿಗೆ ಆಗಮಿಸಿದ್ದ 5 ಮಂದಿಗೆ ಕೊರೋನಾ ಪಾಸಿಟಿವ್ ಇರುವ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ದೃಢಪಡಿಸಿದ್ದಾರೆ. ದುಬೈನಿಂದ ಆಗಮಿಸಿದ ಉಡುಪಿಯ 46 ಮಂದಿಯನ್ನುಉಡುಪಿಯ ಹೋಟೆಲ್ನಲ್ಲಿ ಕ್ವಾರಂಟೈನಲ್ಲಿರಿಸಿ ಅವರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ದೊರೆತಿದ್ದು, ಐದು ಮಂದಿಗೆ ಪಾಸಿಟಿವ್ ದೃಢವಾಗಿದೆ. ಅವರನ್ನು ಉಡುಪಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊರ ರಾಜ್ಯಗಳಿಂದ ಮರಳುತ್ತಿರುವವರನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆ ಗುರುತಿಸಲಾಗಿರುವ ಸ್ಥಳಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದ್ದು, ಕಳೆದ ಸೋಮವಾರದಿಂದ ಇಲ್ಲಿಯ ತನಕ ಬೈಂದೂರು ಹಾಗೂ ಕುಂದಾಪುರ ತಾಲೂಕಿನಲ್ಲಿ ಒಟ್ಟು 2,199 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಬೈಂದೂರು ತಾಲೂಕಿಗೆ ಮೇ.4ರಿಂದ ಮಹಾರಾಷ್ಟ್ರದಿಂದ 1,299, ತೆಲಂಗಾಣದಿಂದ 146, ಆಂಧ್ರಪ್ರದೇಶದಿಂದ 12, ಗೋವಾದಿಂದ 11, ಗುಜರಾತ್ನಿಂದ 3 ಮತ್ತು ಕೇರಳದಿಂದ ಇಬ್ಬರು ಬಂದಿದ್ದಾರೆ. ಕುಂದಾಪುರ ತಾಲೂಕಿಗೆ ಮಹಾರಾಷ್ಟ್ರದಿಂದ 322, ತೆಲಂಗಾಣದಿಂದ 194, ಕೇರಳದಿಂದ 1, ಗುಜರಾತ್ನಿಂದ 8, ಗೋವಾದಿಂದ 1 ಹಾಗೂ ತಮಿಳುನಾಡಿನಿಂದ 7 ಮಂದಿ ಬಂದಿದ್ದಾರೆ. ಇವರೆಲ್ಲರೂ ಬೈಂದೂರು ತಾಲ್ಲೂಕಿನ ಶಿರೂರು, ಕೊಲ್ಲೂರು ಹಾಗೂ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಮೂಲಕ ಜಿಲ್ಲೆ ಪ್ರವೇಶಿಸಿದ್ದಾರೆ. ಅಲ್ಲಿನ ಚೆಕ್ಪೋಸ್ಟ್ಗಳಲ್ಲಿ ಪ್ರಾಥಮಿಕ ಆರೋಗ್ಯ ತಪಾಸಣೆಗೆ ಒಳಪಡಿಸಿ ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಲಭೂತ ಸೌಕರ್ಯದ ಬಗ್ಗೆ ಅಸಮಾಧಾನ: ಸರಕಾರಿ ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣುತ್ತಿತ್ತು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಂಬೈ ಹಾಗೂ ಇತರೆ ರಾಜ್ಯಗಳಿಂದ ಉಡುಪಿ ಜಿಲ್ಲೆಯ ಗಡಿ ಪ್ರವೇಶಿಸುತ್ತಿರುವ ನಾಗರಿಕರಿಗೆ ಕೋವಿಡ್-19 ತಪಾಸಣಾ ಕೇಂದ್ರದಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಗುರುವಾರ ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಹಾಗೂ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿದರು. ಹೊರ ರಾಜ್ಯಗಳಿಂದ ಬಂದವರಿಗೆ ಶೀಘ್ರ ತಪಾಸಣೆ ಹಾಗೂ ಮಾಹಿತಿಯನ್ನು ದಾಖಲಿಸಿಕೊಂಡು ಕ್ವಾರೈಂಟನ್ ಕೇಂದ್ರ ತಲುಪಲು ಅನುವು ಮಾಡಿಕೊಡಿ ಮತ್ತು ಅಗತ್ಯ ಮೂಲಭೂತ ಸೌಕರ್ಯ ಒದಗಿಸಿ ಎಂದು ಶಾಸಕರು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಮುಂಬೈನಲ್ಲಿರುವ ಶಿರೂರು ಹೊಸ್ಮನೆ ಶ್ರೀನಿವಾಸ ಶೆಟ್ಟಿಯವರು ಮುಂಬೈನಿಂದ ಬರುವರಿಗಾಗಿ ಬಿಸ್ಕೆಟ್ ಹಾಗೂ ನೀರಿನ ಬಾಟೆಲ್ ವ್ಯವಸ್ಥೆ ಮಾಡಲು ನೀಡಿರುವ ಚೆಕ್ಕನ್ನು ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಇದನ್ನೂ ಓದಿ: ► ದುಬೈನಿಂದ ಬಂದಿದ್ದ ಉಡುಪಿ ಜಿಲ್ಲೆಯ 5 ಮಂದಿಗೆ ಕೊರೋನಾ ಪಾಸಿಟಿವ್ – https://kundapraa.com/?p=37564 . ► ಶಿರೂರು ತಪಾಸಣಾ ಕೇಂದ್ರಕ್ಕೆ ಮಾಜಿ ಶಾಸಕ ಕೆ. ಗೋಪಾಲ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಜಿಲ್ಲೆ 3182, ಝೋನ್-01 ರ ವತಿಯಿಂದ ಸುಮಾರು 1.2 ಲಕ್ಷ ರೂ. ಮೌಲ್ಯದ ಪಿಪಿಇ ಕಿಟ್, ಎನ್-95 ಮಾಸ್ಕ್ ಹಾಗೂ ಟ್ರಬಲ್ ಲೇಯರ್ ಮಾಸ್ಕ್ಗಳನ್ನು ಮಾಜಿ ಜಿಲ್ಲಾ ಗವರ್ನರ್ ಅಭಿನಂದನ್ ಎ ಶೆಟ್ಟಿ ಮತ್ತು ಝೋನ್ 01 ಸಹಾಯಕ ಗವರ್ನರ್ ರವಿರಾಜ್ ಶೆಟ್ಟಿ ಇವರು ತಾಲೂಕು ಆರೋಗ್ಯ ಅಧಿಕಾರಿಯಾದ ಡಾ| ನಾಗಭೂಷಣ ಉಡುಪ ಹೆಚ್ ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಝೋನ್-01 ರ ವಲಯ ಸೇನಾನಿಗಳಾದ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಚಂದ್ರಶೇಖರ್ ಬಿ. ಎಮ್, ನಾರಾಯಣ ನಾಯ್ಕ್ ಮತ್ತು ವಿವಿಧ ರೋಟರಿ ಕ್ಲಬ್ನ ಅಧ್ಯಕ್ಷರುಗಳಾದ ಡಾ| ರಾಜರಾಮ ಶೆಟ್ಟಿ (ಕುಂದಾಪುರ), ದೇವಾರಾಜ (ದಕ್ಷಿಣ), ಶಶಿಧರ ಶೆಟ್ಟಿ (ಮಿಡ್ಟೌನ್), ಭಾಸ್ಕರ್ ಕೆ (ಸನ್ರೈಸ್), ರಾಜು ಪೂಜಾರಿ ಎಮ್ (ರಿವರ್ ಸೈಡ್), ಶಿವಾನಂದ ಪೂಜಾರಿ (ಗಂಗೊಳ್ಳಿ), ಪ್ರಕಾಶ್ ಭಟ್ (ಬೈಂದೂರು), ಉದಯ ಕನ್ನಂತ (ಸಿದ್ದಾಪುರ), ಡಾ| ಉತ್ತಮ್ಕುಮಾರ್ ಶೆಟ್ಟಿ ಮತ್ತು ಸಂತೋಷ್ ಕೋಣಿ ಇವರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: 2020-21ನೇ ಸಾಲಿಗೆ ತೋಟಗಾರಿಕೆ ಇಲಾಖೆಯ ಮುಖಾಂತರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉಡುಪಿ ಜಿಲ್ಲೆಯ ೧೫೮ ಗ್ರಾಮಪಂಚಾಯತ್ ಮಟ್ಟದಲ್ಲಿ, ಗೇರು, ಅಡಿಕೆ, ಕಾಳು ಮೆಣಸು, ಕೊಕೋ, ನುಗ್ಗೆ ಬೆಳೆ ಪ್ರದೇಶಗಳ ವಿಸ್ತರಣೆ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿರುತ್ತದೆ. ಕಳೆದ ವ?ದಿಂದ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಉಡುಪಿ ಮಲ್ಲಿಗೆ ಬೆಳೆ ಪ್ರದೇಶ ವಿಸ್ತರಣೆ ಕಾಮಗಾರಿಯನ್ನು ಸೇರ್ಪಡೆ ಮಾಡಿದ್ದು 5 ಸೆಂಟ್ ಪ್ರದೇಶದಲ್ಲಿಯೂ, ಮಲ್ಲಿಗೆ ಬೆಳೆ ಪ್ರದೇಶ ವಿಸ್ತರಣೆ ಕಾರ್ಯಕ್ರಮವನ್ನು ಕೈಗೊಳ್ಳಲು ಅವಕಾಶವಿದ್ದು, ಸಣ್ಣ., ಅತೀ ಸಣ್ಣ ರೈತರು, ಮಹಿಳಾ ಫಲಾನುಭವಿಗಳೂ ಸಹಾ ತಮ್ಮ ಕೃಷಿ ಜಮೀನಿನಲ್ಲಿ ಹೊಸದಾಗಿ ಮಲ್ಲಿಗೆ ಗಿಡ ನಾಟಿ ಕಾರ್ಯವನ್ನು ಕೈಗೊಳ್ಳಲು ಅವಕಾಶವಿರುತ್ತದೆ, ಅಡಿಕೆ, ತೆಂಗು, ಕಾಳುಮೆಣಸು ತೋಟ ಪುನಶ್ಚೇತನ ಕಾರ್ಯಗಳಿಗೆ ಸಹಾ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಅವಕಾಶವಿದ್ದು ಆಸಕ್ತರು ಪ್ರಯೋಜನ ಪಡೆದುಕೊಳ್ಳಲು ಕೋರಿದೆ. ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಅನುಷ್ಠಾನಕ್ಕಾಗಿ ಉದ್ಯೋಗ ಚೀಟಿ ಕಡ್ಡಾಯವಾಗಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ರ ಕಾರಣ ದೇಶದಲ್ಲಿ ವಿಧಿಸಿರುವ ಲಾಕ್ ಡೌನ್ ನಿಂದ , ಹೂವಿನ ಬೆಳೆಗಾರರಿಗೆ ಉಂಟಾದ ನ?ಕ್ಕೆ ರೂ. ೨೫,೦೦೦ ಪರಿಹಾರವನ್ನು ಗರಿಷ್ಟ ಹೆಕ್ಟೇರ್ ವಿಸ್ತೀರ್ಣಕ್ಕೆ ಮುಖ್ಯಮಂತ್ರಿಯವರು ಘೋಷಿಸಿದ್ದು, ಪ್ರಸ್ತುತ ಸದರಿ ಘೋಷಿಸಿರುವ ಪರಿಹಾರವನ್ನು ರೈತರಿಗೆ ಪಾವತಿಸುವ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ. ಪರಿಹಾರವನ್ನು 2019-20ನೇ ಸಾಲಿನಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯ ಆಧಾರದಲ್ಲಿ ಪಾವತಿಸಲಾಗುವುದು. ರೈತರು ತಾವು ಬೆಳೆದಿರುವ ಬಹು ವಾರ್ಷಿಕ ಪುಪ್ಪ ಬೆಳೆಯು 2019-20 ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಹಾಗೂ ವಾರ್ಷಿಕ ಪು? ಬೆಳೆಗಳು 2019-20ನೆ ಸಾಲಿನ ಹಿಂಗಾರು ಬೆಳೆ ಸಮೀಕ್ಷೆಯಲ್ಲಿ ನಮೂದಾಗಿರುವ ಬಗ್ಗೆ ಸಂಬಂದಿಸಿದ ತಾಲೂಕು ತೋಟಗಾರಿಕೆ ಇಲಾಖೆಯ ಕಛೇರಿಗಳಲ್ಲಿ ಪರಿಶೀಲಿಸಿಕೊಳ್ಳುವುದು. ರೈತರು ಈಗಾಗಲೇ ಇಲಾಖೆಯ FRUITS ತಂತ್ರಾಂಶದಲ್ಲಿ ನೋಂದಣಿಯಾಗಿದ್ದರೆ ಪರಿಹಾರವನ್ನು ನೇರವಾಗಿ ಪಾವತಿಸಲಾಗುವುದು, ಬೆಳೆ ಸಮೀಕ್ಷೆಯಲ್ಲಿ ಪು? ಬೆಳೆ ದಾಖಲಾಗದ ರೈತರು ಅರ್ಜಿ, ಪಹಣಿ, ಆಧಾರ್ ನ ಪ್ರತಿ , ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಹಲವೆಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿಮೀರಿದ್ದು ಇದುವೆರೆಗೆ ತಾಲೂಕು ಪಂಚಾಯತ್ ಅಥವಾ ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈ ಬಗ್ಗೆ ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಂಡು ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಿ ದೇವಾಡಿಗ ಆಗ್ರಹಿಸಿದ್ದಾರೆ. ಬುಧವಾರ ಬೈಂದೂರು ತಹಸೀಲ್ದಾರರ ಮೂಲಕ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಬೈಂದೂರು ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಅಭಾವ ತಲೆ ದೋರಿದೆ. ಪ್ರತೀ ವರ್ಷ ಮಾರ್ಚ್ ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ತೋರುತ್ತಿದ್ದು, ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಡಳಿತ ಸ್ಪಂದಿಸುತ್ತಿತ್ತು. ಆದರೆ ಈ ವರ್ಷ ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಿದ್ದು, ಮೇ ತಿಂಗಳು ಅರ್ದ ಕಳೆದರೂ ಕುಡಿಯುವ ನೀರಿನ ಪೂರೈಕೆ ಮಾಡುವಲ್ಲಿ ಸ್ಥಳೀಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯವಹಿಸಿದೆ ಎಂದವರು ಆರೋಪಿಸಿದ್ದಾರೆ. ಕೊರೊನಾ ಮಾಹಾಮಾರಿಯಿಂದಾಗಿ ಜನರೂ ಹೊರ ಹೋಗಲು ಭಯಪಡುತ್ತಿದ್ದಾರೆ. ಇಂತಹ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂಡಿಯನ್ ಸೈಕೆಯಾಟ್ರಿಸ್ಟ್ಸ್ ಸೊಸೈಟಿ ಮತ್ತು ಶಿವಮೊಗ್ಗದ ಕ್ಷೇಮ ಟ್ರಸ್ಟ್ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಳೆದ ತಿಂಗಳು ಅಂತರ್ಜಾಲ ಮೂಲಕ ನಡೆಸಿದ್ದ ರಾಷ್ಟ್ರೀಯ ಮಟ್ಟದ ’Minding Our Minds During Lockdown’ ವಿಷಯದ ಕುರಿತಾದ ಪ್ರಬಂಧ ಸ್ಪರ್ಧೆಯಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಕೇಂದ್ರದ ಹತ್ತನೆ ತರಗತಿಯ ವಿದ್ಯಾರ್ಥಿ ಮೊಗೇರಿ ಚಿನ್ಮಯ ಅಡಿಗ ಪ್ರಥಮ ಸ್ಥಾನ ಪಡೆದಿರುವನು. ಅವನು ಬೈಂದೂರು ತಾಲ್ಲೂಕು ಕೆರ್ಗಾಲು ಗ್ರಾಮದ ಮೊಗೇರಿ ಜನಾರ್ದನ ಅಡಿಗ-ಅನುಪಮಾ ಕೋಟ ದಂಪತಿಯ ಪುತ್ರ.
