Author: ನ್ಯೂಸ್ ಬ್ಯೂರೋ

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ನುಡಿ ಬೈಂದೂರು ಎಂಬ ಗ್ರಾಮೀಣ ಪ್ರದೇಶದಲ್ಲಿ ನಿಜಾರ್ಥದಲ್ಲಿ ಸಾಕಾರಗೊಳ್ಳುವ ದಿನಗಳು ಆರಂಭಗೊಂಡದ್ದುಎಪ್ಪತ್ತರ ದಶಕದಲ್ಲಿ. 1970 ಅಂತಾರಾಷ್ಟ್ರೀಯ ಶೈಕ್ಷಣಿಕ ವರ್ಷ. ಮಹಿಳಾ ವಿಮೋಚನಾ ಆಂದೋಲನ ಮುನ್ನೆಲೆಗೆ ಬಂದ ಕಾಲಘಟ್ಟ. ಅದು ಬೈಂದೂರು ಸುತ್ತಲಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿಯೇ ಪ್ರೌಢಶಾಲೆಯೊಂದು ಅಸ್ತಿತ್ವಕ್ಕೆ ಬಂದ ವರ್ಷವೂ ಹೌದು. ಅಂದು ಹೆಮ್ಮಾಡಿಯ ಶ್ರೀ ವಿ. ವಿ. ವಿ. ಮಂಡಳಿ (ರಿ) ಇದರ ಸ್ಥಾಪಕಾಧ್ಯಕ್ಷರಾದ ದಿವಂಗತ ಕೆ. ಎಸ್ ರಾಮ್‌ರಾವ್ ಅವರು; ಬೈಂದೂರು ಆಸುಪಾಸಿನ ಶಿಕ್ಷಣಾಭಿಮಾನಿಗಳ ಇಚ್ಛಾಶಕ್ತಿಯನ್ನು ಸಂಘಟಿಸಿ ‘ಜನತಾ ಗರ್ಲ್ಸ್ ಹೈಸ್ಕೂಲ್’ ಎಂಬ ಸಂಸ್ಥೆಯನ್ನು ಹುಟ್ಟುಹಾಕಿದರು. ಪ್ರಾರಂಭದಲ್ಲಿ ಬಾಡಿಗೆ ಕಟ್ಟಡದಲ್ಲಿ ಶಾಲೆ ಆರಂಭಗೊಂಡರೂ, ಆ ಸಂದರ್ಭ ಮುಖ್ಯೋಪಾಧ್ಯಾಯರಾಗಿದ್ದ ದಿವಂಗತ ಸದಾಶಿವ ಭಟ್ಟರು ಹಾಗೂ ಸಹೋದ್ಯೋಗಿಗಳ ಶ್ರಮದ ಫಲ ಹಾಗೂ ದಾನಿಗಳ ನೆರವಿನಿಂದ ಸ್ವಂತ ನಿವೇಶನದ ಕಟ್ಟಡಕ್ಕೆ ಸ್ಥಳಾಂತರಗೊಂಡು ರತ್ತುಬಾಯಿ ಜನತಾ ಗರ್ಲ್ಸ್ ಹೈಸ್ಕೂಲ್ ಎಂದು ಎಂದು ಮರುನಾಮಕರಣ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೃಷಿ, ಹೈನುಗಾರಿಕೆ ಹಾಗೂ ಇನ್ನಿತರೆ ಸ್ವ-ಉದ್ಯೋಗವನ್ನು ಆರಂಭಿಸಿ ಬದುಕು ಕಟ್ಟಿಕೊಳ್ಳುವ ಆಕಾಂಕ್ಷಿಗಳಿಗೆ ಸಹಕಾರಿ ಸಂಸ್ಥೆಗಳು ಆರ್ಥಿಕ ನೆರವನ್ನು ನೀಡಿ ಅವರನ್ನು ಸ್ವಾವಲಂಭಿಗಳನ್ನಾಗಿಸಲು ಪ್ರೇರೇಪಿಸುತ್ತದೆ ಎಂದು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಹೇಳಿದರು. ಅವರು ಬುಧವಾರ ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಬೈಂದೂರು ಇದರ ಗೋಳಿಹೊಳೆ ಶಾಖೆಯ ಆವರಣದಲ್ಲಿ ಆಯೋಜಿಸಲಾಗಿದ್ದ ಗ್ರಾಹಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸ್ವ-ಸಹಾಯ ಸಂಘದ ಸದಸ್ಯರು ಸಂಸ್ಥೆಯ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಅವರು ಸಾಲ ಪಡೆಯುವ ಜೊತೆಗೆ ಉಳಿತಾಯ ಮಾಡುವ ಮನೋಭಾವನೆಯನ್ನು ರೂಡಿಸಿಕೊಳ್ಳುವುದು ಅಗತ್ಯ. ಅದು ತುರ್ತು ಸಂದರ್ಭದಲ್ಲಿ ನೆರವಿಗೆ ಬರುವುದಲ್ಲದೇ ಬದುಕಿನಲ್ಲಿಯೂ ಭದ್ರತೆ ಭಾವ ಮೂಡುವಂತೆ ಮಾಡುತ್ತದೆ ಎಂದರು. ಕಾಲ್ತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಬಟ್ನಾಡಿ, ಎಪಿಎಂಸಿ ಸದಸ್ಯ ವಸಂತ ಹೆಗ್ಡೆ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಚುಚ್ಚಿ ನಾರಾಯಣ ಶೆಟ್ಟಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ,ಜ.01: ಸರಕಾರದ ಹೊಸ ಆದೇಶದಂತೆ ಉಡುಪಿ ಜಿಲ್ಲೆಯ ನೂತನ ಎಸ್ಪಿಯಾಗಿ ಎನ್. ವಿಷ್ಣುವರ್ಧನ್ ಅಧಿಕಾರ ಸ್ವೀಕರಿಸಲಿದ್ದಾರೆ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ನೀಶಾ ಜೇಮ್ಸ್ ಅವರನ್ನು ವರ್ಗಾವಣೆಗೊಳಿಸಿ ಆ ಸ್ಥಳಕ್ಕೆ ಕಲಬುರ್ಗಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಹಾಕೆ ಅಕ್ಷಯ್ ಮಚ್ಚಿಂದ್ರ ಅವರನ್ನು (ಡಿ.31) ನೇಮಕ ಮಾಡಲಾಗಿತ್ತು. ಆದರೆ ಹಿಂದಿನ ಆದೇಶದಲ್ಲಿ ಮಾರ್ಪಾಡಾಗಿದ್ದು, ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ಉಡುಪಿ ಜಿಲ್ಲೆಯ ಕಾರ್ಕಳದ ನಕ್ಸಲ್ ನಿಗ್ರಹ ಪಡೆಗೆ ವರ್ಗಾವಣೆ ಮಾಡಲಾಗಿದೆ. ನೂತನ ಎಸ್ಪಿ ವಿಷ್ಣುವರ್ಧನ್ ಅವರು 2015 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದು, ಬೆಂಗಳೂರು ನಗರದ ಡಿಸಿಪಿ ಆಗಿದ್ದರು. ಇದೀಗ ಅವರನ್ನು ಉಡುಪಿಗೆ ವರ್ಗಾವಣೆ ಮಾಡಲಾಗಿದೆ. ಅವರು ಈ ಹಿಂದೆ ಉಡುಪಿ‌ಯಲ್ಲಿ ಹೆಚ್ಚುವರಿ ಎಸ್ಪಿಯಾಗಿಯೂ ಕಾರ್ಯನಿರ್ವಹಿಸಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರನ್ನು ನೇಮಕಗೊಳಿಸಿರುವ ಕರ್ನಾಟಕ ಸರಕಾರ ಹೊಸ ವರ್ಷದ ಮುನ್ನಾದಿನ ಆದೇಶ ಹೊರಡಿಸಿದೆ. ಈವರೆಗೆ ಜಿಲ್ಲೆಯ ಎಸ್ಪಿಯಾಗಿದ್ದ ಐಪಿಎಸ್ ನಿಶಾ ಜೇಮ್ಸ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್ಪಿಯಾಗಿ ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಮಚ್ಚಿಂದ್ರ ಅವರು ಕಲುಬುರಗಿ ಜಿಲ್ಲೆಯ ಚಿಂಚೋಳೀ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿದ್ದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಜನವರಿ 2ರಿಂದ 6ರವರೆಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ 80ನೇ ಅಖಿಲ ಭಾರತ ಅಂತರ್‌ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಫ್ ಅನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟವು ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ನಡೆಯಲಿದ್ದು, ಕ್ರೀಡಾಕೂಟದಲ್ಲಿ ದೇಶದ ೪೦೦ಕ್ಕೂ ಅಧಿಕ ವಿಶ್ವವಿದ್ಯಾಲಯಗಳ ಸುಮಾರು 5000 ಅಥ್ಲೀಟ್‌ಗಳು ಹಾಗೂ 2000 ಕ್ರೀಡಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕ್ರೀಡಾಕೂಟದ ವ್ಯವಸ್ಥೆಗಾಗಿ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಿಂದ ಒಂದು ಕೋಟಿ ರೂ. ಅನುದಾನ ದೊರೆತಿದೆ. ಇದರೊಟ್ಟಿಗೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ನೀಡುವ ಕುರಿತು ಕ್ರೀಡಾ ಮಂತ್ರಿ ಕೆ.ಎಸ್.ಈಶ್ವರಪ್ಪ ವಾಗ್ದಾನ ನೀಡಿದ್ದಾರೆ ಎಂದು ಅವರು ವಿವರಿಸಿದರು. ಉದ್ಘಾಟನೆಗೆ ಕಿರಣ್ ರಿಜಿಜು: ಜ.2ರಂದು ಸಂಜೆ 5:45ಕ್ಕೆ ಕ್ರೀಡಾಕೂಟದ ಉದ್ಘಾಟನೆ ನಡೆಯಲಿದ್ದು, ಭಾರತ ಸರ್ಕಾರದ ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪೌರತ್ವ ತಿದ್ದುಪಡಿ ಕಾಯಿದೆಯ ಹೆಸರಿನಲ್ಲಿ ಮತೀಯವಾದವನ್ನು ಮುನ್ನೆಲೆಗೆ ತಂದು ದೇಶದಲ್ಲಿ ಕುಸಿಯುತ್ತಿರುವ ಕೈಗಾರಿಕೆಗಳು, ಹೆಚ್ಚುತ್ತಿ ನಿರುದ್ಯೋಗ ಹಾಗೂ ಆರ್ಥಿಕ ಬಿಟ್ಟಕ್ಕು, ಸಂಕಷ್ಟದಲ್ಲಿರುವ ಕೃಷಿ ಕ್ಷೇತ್ರದ ಸಮಸ್ಯೆಗಳನ್ನು ಮರೆಮಾಚುವ ವ್ಯವಸ್ಥಿತ ಹುನ್ನಾರವನ್ನು ಕೇಂದ್ರ ಸರಕಾರ ಮಾಡಿದೆ ಎಂದು ಡಿವೈಎಫ್‌ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದರು. ಅವರು ಸೋಮವಾರ ಶಿರೂರು ಗ್ರಾಮ ಪಂಚಾಯತ್ ಎದುರು ಶಿರೂರು ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಹೋರಾಟ ಸಮಿತಿ ಆಯೋಜಿಸಿದ್ದ ಪ್ರತಿಭಟನಾ ಸಮಿತಿಯ ನೇತೃತ್ವ ವಹಿಸಿ ಮಾತನಾಡಿದರು. ರಾಜಕೀಯ ಲಾಭಕ್ಕಾಗಿ ಹಿಂದೂಗಳು ಹಾಗೂ ಮುಸ್ಲಿಂಮರನ್ನು ಒಡೆದು ಆಳುವ ನೀತಿಯನ್ನು ಚುನಾವಣಾ ಪೂರ್ವವೇ ಬಿಜೆಪಿ ಪಕ್ಷ ಪರೋಕ್ಷವಾಗಿ ತಿಳಿಸಿರುವುದನ್ನು ಕೇಂದ್ರ ಸರಕಾರ ಇಂದು ಸಿಎಬಿ ಹಾಗೂ ಎನ್‌ಆರ್‌ಸಿ ಕಾಯಿದೆಗಳ ಮೂಲಕ ಮುನ್ನೆಲೆಗೆ ತಂದು ಇದು ಕೇವಲ ಮುಸ್ಲಿಂರ ಸಮಸ್ಯೆಗೆ ಎಂದು ಬಿಂಬಿಸಿ ಹಿಂದೂ ವೋಟ್‌ಬ್ಯಾಂಕ್ ಭದ್ರಪಡಿಸಿಕೊಳ್ಳುವ ಕಾರ್ಯದಲ್ಲಿ ತೊಡಗಿದೆ. ಸಿಎಬಿ ಹಾಗೂ ಎನ್‌ಆರ್‌ಸಿಯಿಂದ ಕೇವಲ ಮುಸ್ಲಿಂಮರಿಗಷ್ಟೇ ಸಮಸ್ಯೆ ಎಂದು ಭಾವಿಸಿರುವುದು ತಪ್ಪು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುಸ್ಥಿರ ಗ್ರಾಮದ ಪರಿಕಲ್ಪನೆಯಲ್ಲಿ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳಿಗೆ ಸೋಲಾರ್ ಅಳವಡಿಸುವ ’ಸೋಲಾರ್ ಗ್ರಾಮ ಯೋಜನೆ’ಯಲ್ಲಿ ಗೋಳಿಹೊಳೆ ಗ್ರಾಮ ಪಂಚಾಯತ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗೋಳಿಹೊಳೆ, ಸೆಲ್ಕೋ ಸೋಲಾರ್ ಲೈಟ್ಸ್ ಪ್ರೈ ಲಿ., ಕುಂದಾಪುರ ಶಾಖೆಯ ವತಿಯಿಂದ ಮೊದಲ ಹಂತವಾಗಿ ಗೋಳಿಹೊಳೆ ಮೂರ್‌ಕೈ ಎಂಬಲ್ಲಿ ಎಂಬಲ್ಲಿ ನಾಗರತ್ನ ಶೇಖರ ಪೂಜಾರಿ ಎನ್ನುವವರ ಅಂಗಡಿಗೆ ಸೋಲಾರ್ ಡಿಸಿ ಪ್ರಿಡ್ಜ್‌ನ್ನು ಅಳವಡಿಸಿದ್ದು ಇದನ್ನು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಆರ್.ಎಂ.ರಮೇಶ ತುಂಗಾ ಉದ್ಘಾಟಿಸಿದರು. ಸೆಲ್ಕೋದ ಜಿ.ಎಂ ಜಗದೀಶ ಪೈ, ಎ.ಜಿ.ಎಂ ಗುರುಪ್ರಕಾಶ್ ಶೆಟ್ಟಿ, ಸೀನಿಯರ್ ಮ್ಯಾನೇಜರ್ ಶೇಖರ ಶೆಟ್ಟಿ, ಸ್ಥಳೀಯ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನ ಮ್ಯಾನೇಜರ್ ಅರುಣ್ ಕುಮಾರ್ ಹಾಗೂ ಸೆಲ್ಕೋದ ಪ್ರತಿನಿಧಿಗಳಾದ ರವಿ, ಗೋಪಾಲ ನಾಯ್ಕ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕಳೆದ 7 ವರ್ಷಗಳಿಂದ ರಾಜ್ಯದಲ್ಲಿಯೇ ವಿಶಿಷ್ಠವಾದ ದಿನದರ್ಶಿಕೆ ತಯಾರಿಸಿ, ಬಿಡುಗಡೆಗೊಳಿಸುತ್ತಿರುವ ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ‍್ಯ ಸ್ತುತ್ಯರ್ಹ. ಕ್ಯಾಲೆಂಡರ್ ವರ್ಷದಲ್ಲಿ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಗೊಳಿಸುವುದು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ಉತ್ತಮ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಆಧಾರಿತ ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸುವುದು ಉಳಿದ ಸಂಘಗಳಿಗೆ ಮಾದರಿ. 2020ರ ದಿನದರ್ಶಿಕೆಯಲ್ಲಿ ಶಿಕ್ಷಕರಿಗೆ ಅಗತ್ಯವಾದ ಎಲ್ಲಾ ಮಾಹಿತಿಗಳಿದ್ದು ಶಿಕ್ಷಕರಿಗೆ ಬಹಳ ಉಪಯುಕ್ತವಾಗಿದೆ ಎಂದು ಉಡುಪಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶೇಷಶಯನ ಕಾರಿಂಜ ಹೇಳಿದರು. ಅವರು ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೦೨೦ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆಗೊಳಿಸಿ ಮಾತನಾಡುತ್ತಿದ್ದರು. ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ, ಕುಂದಾಪುರ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ದಿನಕರ ಶೆಟ್ಟಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ ಕುಮಾರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಸ್ತು ಕೇಂದ್ರಿತ ಶೈಕ್ಷಣಿಕ ವಾತಾವರಣದ ಜೊತೆಗೆ ಸಾಹಿತ್ಯ-ಕ್ರೀಡೆ-ಸಾಂಸ್ಕೃತಿಕ ಅಭಿರುಚಿಯ ಮುಖೇನ ತೀರಾ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಧಾರೆಯೆರೆಯುವಲ್ಲಿ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಶ್ರಮಿಸುತ್ತಿದೆ ಎಂದು ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕ ಹಾಗೂ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಬಿ. ಎಮ್. ಸುಕುಮಾರ ಶೆಟ್ಟಿ ಹೇಳಿದರು. ಇವರು ಸ. ಹಿ. ಪ್ರಾ. ಶಾಲೆ ಕಾಲ್ತೋಡಿನಲ್ಲಿ ಒಂದು ವಾರದ ಕಾಲ ಆಯೋಜಿಸಲಾದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಬಿರವನ್ನು ಉದ್ಘಾಟಿಸಿದ ಕಾಲ್ತೋಡು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಬಟ್ನಾಡಿ ಮಾತನಾಡಿ, ಆಧುನಿಕತೆಗೆ ಅತಿಯಾಗಿ ತೆರೆದುಕೊಳ್ಳದ ಕಾಲ್ತೋಡು ಗ್ರಾಮದಲ್ಲಿ ಆಕೃತಿಗೊಂಡಿರುವ ಈ ಶಿಬಿರವು ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸುವುದರ ಜೊತೆಗೆ ಸಹಬಾಳ್ವೆ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉಡುಪಿ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳನ್ನು ಚುನಾಯಿಸಲು ಡಿ.೨೫ ರಂದು ನಿಗದಿಯಾಗಿರುವ ಚುನಾವಣೆಗೆ ಈ ಕೆಳಕಂಡ ಅಭ್ಯರ್ಥಿಗಳು ಚುನಾವಣಾ ದಿನಾಂಕದಿಂದ ಮುಂದಿನ ಮೂರು ವರ್ಷಗಳ ಅವಧಿಗೆ ಉಡುಪಿ ಜಿಲ್ಲಾ ಸಮಿತಿಗೆ ಪದಾಧಿಕಾರಿಗಳಾಗಿ ಅವಿರೋಧವಾಗಿ ಆಯ್ಕೆಯಾದರು. ಮಂಜುನಾಥ ಪಿ.ಶೆಟ್ಟಿ (ಅಧ್ಯಕ್ಷರು), ಮಹಿಮ ಶೆಟ್ಟಿ ಕೆ (ಉಪಾಧ್ಯಕ್ಷರು), ರಾಜೇಶ್ವರಿ ಎನ್ (ಉಪಾಧ್ಯಕ್ಷರು-ಮಹಿಳೆ), ಮಹೇಶ್ ಕೆ (ಸಂಘಟನಾ ಕಾರ್ಯದರ್ಶಿ), ಪ್ರಮೀಳಾ ನಾಯಕ್ (ಸಂಘಟನಾ ಕಾರ್ಯದರ್ಶಿ-ಮಹಿಳೆ), ಗಿರೀಶ್ ಕುಮಾರ್ ಶೆಟ್ಟಿ (ಕ್ರೀಡಾ ಕಾರ್ಯದರ್ಶಿ), ಫರ್ಜಾನ ಎಂ (ಸಾಂಸ್ಕೃತಿಕ ಕಾರ್ಯದರ್ಶಿ-ಮಹಿಳೆ), ಸತೀಶ್ (ಖಜಾಂಜಿ), ದಯಾನಂದ ಬೆನ್ನೂರ (ರಾಜ್ಯ ಪರಿಷತ್ ಸದಸ್ಯ), ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಚುನಾವಣಾಧಿಕಾರಿ/ ಸಹಾಯಕ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More