ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಕಾರ್ಕಡ ಗೆಳೆಯರ ಬಳಗದ ಅಧ್ಯಕ್ಷ ಸಮಾಜ ಸೇವೆಯಲ್ಲಿ ಸಾಕಷ್ಟು ವರ್ಷಗಳಿಂದ ಶ್ರಮಿಸುತ್ತಿರುವ ಕೆ. ತಾರಾನಾಥ ಹೊಳ್ಳ ದಂಪತಿಗಳನ್ನು ಕಾರ್ಕಡ ನೆಲ್ಲಿಬೆಟ್ಟು ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಗುರುತಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕೋಟ ಅಮೃತೇಶ್ವರೀ ದೇಗುಲದ ಟ್ರಸ್ಟಿ ಗಣೇಶ್ ನೆಲ್ಲಿಬೆಟ್ಟು, ಸಮಿತಿಯ ಪ್ರಮುಖರಾದ ನರಸಿಂಹ ದೇವಾಡಿಗ, ಅಯ್ಯಪ್ಪ ದೇವಾಡಿಗ, ಗೋಪಾಲ ದೇವಾಡಿಗ, ತಮ್ಮಯ್ಯ, ಚಂದ್ರ ಆಚಾರ್ ಮತ್ತಿತರ ಸಮಿತಿಯ ಪದಾಧಿಕಾರಿಗಳು ಇದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮನುಷ್ಯನ ದೇಹ ದೈಹಿಕವಾಗಿ ಮತ್ತು ಮಾನಸಿಕವಾಗಿ ಕ್ರಿಯಾಶೀಲರಾಗಿರುವುದರೊಂದಿಗೆ ಸದೃಢ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ. ಯುವ ಜನರು ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ, ಸದೃಢ ಆರೋಗ್ಯ ಹೊಂದಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು. ಅವರು ಅಂದು ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಲಯನ್ಸ್ ಕ್ಲಬ್ ಉಡುಪಿ ಹಾಗೂ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ – ಕುಂದಾಪುರ ಇವರ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮೇಜರ್ ಧ್ಯಾನ್ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಮಾತನಾಡಿದರು. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದ್ ಅವರ ಹುಟ್ಟಿದ ದಿನವಾದ ಇಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆಯ್ನನ್ನಾಗಿ ಆಚರಿಸಲಾಗುತ್ತಿದೆ. ಯುವಜನತೆ ದೈಹಿಕವಾಗಿ ಸದೃಢವಾಗಿದ್ದಾಗ ಮಾತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಸ್ನೇಹಕೂಟ ಮಣೂರು ಇವರುಗಳ ಸಂಯುಕ್ತ ಸಹಯೋಗದೊಂದಿಗೆ ಪ್ರತಿ ತಿಂಗಳು ಸಾಧಕ ಕೃಷಿಕನನ್ನು ಗುರುತಿಸುವ ಸರಣಿ ಕಾರ್ಯಕ್ರಮ ರೈತರೆಡೆಗೆ ನಮ್ಮ ನಡಿಗೆ ಮಾಲಿಕೆಗೆ ಇದೀಗ 48ರ ಸರಣಿಯ ಕಾರ್ಯಕ್ರಮದ ಅಂಗವಾಗಿ ಸಾಧಕ ಕೃಷಿಕರ ಮನೆಯಂಗಳಕ್ಕೆ ತೆರಳಿ ಕೃಷಿ ಪರಿಕರವನ್ನು ನೀಡಿ ಗೌರವಿಸುವ ಕಾರ್ಯ ಇದೇ ಆ.30ರ ಭಾನುವಾರ ಪೂರ್ವಾಹ್ನ 9.30ಕ್ಕೆ ನಡೆಯಲಿದೆ. ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರದ ಹಿರಿಯ ಸಾಧಕಿ ಕೊಯ್ಕೂರು ಶಾರದ ಶೆಟ್ಟಿ ಅವರನ್ನು ಗೌರವಿಸುವ ಕಾರ್ಯಕ್ರಮ ಜರಗಲಿದೆ ಎಂದು ಸಂಘದ ಅಧ್ಯಕ್ಷ ಮನೋಹರ್ ಪೂಜಾರಿ, ಸ್ಥಾಪಕಾಧ್ಯಕ್ಷ ಸುರೇಶ್ ಗಾಣಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್.ಇ. ಶಾಲೆಗಳ ಜಂಟಿ ಆಶ್ರಯದಲ್ಲಿ ವಿದ್ಯೋದಯ ಪಬ್ಲಿಕ್ ಸ್ಕೂಲ್ ಉಡುಪಿಯಲ್ಲಿ ನಡೆದ ರಾಗ್-ರಂಗ್ 2025 ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ “ಟ್ರಾಶ್ ಟು ಟ್ರೆಜರ್ ಫ್ಯಾನ್ಸಿ ಡ್ರೆಸ್” ಸ್ಪರ್ಧೆಯಲ್ಲಿ ತೆಕ್ಕೆಟ್ಟೆಯ ವಿಶ್ವವಿನಾಯಕ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಹರ್ಷಿಣಿ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ. ಅವರಿಗೆ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್. ಪ್ರಭಾಕರ್ ಶೆಟ್ಟಿ ಅವರು ಬಹುಮಾನ ವಿತರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ನಿತಿನ್ ಡಿ’ ಆಲ್ಮೇಡಾ, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಆಯೋಜಿಸಲಾಗಿರುವ 15ನೇ ವರ್ಷದ ವಿದ್ಯಾಗಣಪತಿ ಉತ್ಸವದ ಧಾರ್ಮಿಕ ಕಾರ್ಯಕ್ರಮದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ದೇವರ ಆಶೀರ್ವಾದವನ್ನು ಪಡೆದರು. ಸಂಘದ ಪದಾಧಿಕಾರಿಗಳು ಶಾಸಕರನ್ನು ಗೌರವಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷೆ ಅನಿತಾ ಆರ್.ಕೆ., ಪ್ರಧಾನ ಕಾರ್ಯದರ್ಶಿ ಕರಣ್ ಪೂಜಾರಿ, ಬಿಲ್ಲವರ ಸಮಾಜ ಸೇವಾ ಸಂಘ ಗಂಗೊಳ್ಳಿ ಅಧ್ಯಕ್ಷ ಗೋಪಾಲ ಬಿಲ್ಲವ, ಬಿಲ್ಲವರ ಯುವಕ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಪೂಜಾರಿ, ಬಿಲ್ಲವರ ಮಹಿಳಾ ಘಟಕದ ಅಧ್ಯಕ್ಷೆ ಇಂದಿರಾ ಪೂಜಾರಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಕೃಷ್ಣ ಪೂಜಾರಿ ಮತ್ತು ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಕಮ್ಯುನಿಟಿ ಸರ್ವಿಸ್ ಕ್ಲಬ್ ಹಾಗೂ ಯೋಗ ಮತ್ತು ಆಧ್ಯಾತ್ಮಿಕ ಸಂಘದ ಅಡಿಯಲ್ಲಿ ನಶಾ ಮುಕ್ತ ಭಾರತ ಅಭಿಯಾನವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ, ಕಂಡ್ಲೂರು ಇದರ ಪೊಲೀಸ್ ಉಪನಿರೀಕ್ಷಕರಾದ ಭೀಮಾಶಂಕರ್ ಸಿನ್ನೂರ ಅವರನ್ನು ವಿದ್ಯಾರ್ಥಿಗಳು ಮಾನವ ಸರಪಳಿಯ ಮೂಲಕ ರಚಿಸಿದ ‘ಇಂಡಿಯಾ’ ಮೂಲಕ ಬರಮಾಡಿಕೊಂಡು ಪುಷ್ಪ ನೀಡಿ ಸ್ವಾಗತಿಸಿದರು. ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಶಾ ಮುಕ್ತ ಭಾರತ ಅಭಿಯಾನದ ಉದ್ದೇಶ, ಪ್ರತಿಯೊಬ್ಬ ನಾಗರಿಕನಿಗೂ ಇರಬೇಕಾದ ಕಾನೂನಿನ ಅರಿವಿನ ಮಹತ್ವ, ಮಾದಕ ಸೇವನೆಯ ದುಷ್ಪರಿಣಾಮ ಹಾಗೂ ಅದಕ್ಕೆ ಸಂಬಂಧಿಸಿದ ಕಾನೂನಾತ್ಮಕ ಕಠಿಣ ಶಿಕ್ಷೆಗಳನ್ನು ವಿವರಿಸಿದರು. ಸಂಸ್ಕಾರಯುತ ಶಿಕ್ಷಣವು, ವ್ಯಸನದಿಂದ ಮುಕ್ತರಾಗಲು ಇರುವ ಸರಿಯಾದ ಮಾರ್ಗವೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವಿದ್ಯಾರ್ಥಿಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬಿಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚಿರತೆ ಸಂಚಾರ ನಡೆಸುತ್ತಿದ್ದರು ಕೂಡಾ ಚಿರತೆ ಸೆರೆ ಹಿಡಿಯಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ಗುರುವಾರದಂದು ಗ್ರಾಮ ಪಂಚಾಯತ್ ಗೆ ತೆರಳಿ ಅಂತಿಮವಾಗಿ ಒಂದು ವಾರದ ಗಡುವು ನೀಡಿದರು. ಅಭಿವೃದ್ಧಿ ಅಧಿಕಾರಿ ಗೀತಾ ಅವರಿಗೆ ಮನವಿ ಸಲ್ಲಿಸಿ ಬಿಜೂರು ಗ್ರಾಮದ 2ನೇ ವಾರ್ಡನ ನಾರಂಬಳ್ಳಿ, ಬಾರ್ತಿಮಕ್ಕಿ, ಸಣ್ಣ ನಾರಂಬಳ್ಳಿ ಕಂಚಿಕಾನ್ ಕೋಟ್ನಾಡಿ ಕೋಡಿಕೇರಿ, ಕೋಣೂರು ಪ್ರದೇಶದಲ್ಲಿ ಹಲವು ತಿಂಗಳುಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮಸ್ಥರು ಭಯ ಭೀತಿ ಎದುರಿಸುತ್ತಿದ್ದಾರೆ. ಅರಣ್ಯ ಇಲಾಖೆ ನಿರ್ಲಕ್ಷ್ಯ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮನೆಯಂಗಳಕ್ಕೆ ಚಿರತೆ ಬಂದು ನಾಯಿ, ಕೋಳಿಗಳು ಆಹುತಿ ತೆಗೆದುಕೊಳ್ಳುತ್ತಿದ್ದರು ಸಂಬಂಧಪಟ್ಟ ಇಲಾಖೆಗೆ ಕ್ರಮ ಕೈಗೊಳ್ಳಲು ಗ್ರಾಮಸ್ಥರು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗಂಡಿಲ್ಲ ಇದೀಗ ವಾರದ ಗಡುವು ನೀಡುತ್ತಿದ್ದೇವೆ ಈ ಸಮಯದಲ್ಲಿ ಚಿರತೆ ಹಿಡಿಯಲು ಸಾಧ್ಯವಾಗದಿದ್ದರೆ ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಲಾಗುವುದು ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಒಂದು ಗ್ರಾಮಪಂಚಾಯತ್ ಬಹುಕ್ಷೇತ್ರದಲ್ಲಿ ಮುಂಚೂಣಿಗೆ ಬರುವುದು ಸುಲಭದ ಮಾತಲ್ಲ ಈ ದಿಸೆಯಲ್ಲಿ ಕೋಡಿ ಗ್ರಾಮಪಂಚಾಯತ್ ವಿವಿಧ ಯೋಜನೆಗಳ ಅನುಷ್ಠಾನಗಳ ಮೂಲಕ ದಿಟ್ಟ ಹೆಜ್ಜೆ ಇರಿಸಿದೆ ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಅವರು ಕೋಡಿ ಗ್ರಾಮ ಪಂಚಾಯತ್ನಲ್ಲಿ ಜಿಲ್ಲಾ ಪಂಚಾಯತ್ ಉಡುಪಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಉಡುಪಿ ಕೋಡಿ ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕು ಪಂಚಾಯತ್ ಇವರ ಆಶ್ರಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕರ್ನಾಟಕ ಸುಸ್ಥಿರ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಜಲಜೀವನ ಮಿಷನ್ ಯೋಜನೆಯಡಿ ಕೋಡಿ ಗ್ರಾಮದಲ್ಲಿ 24*7 ನೀರು ಸರಬರಾಜು ಗ್ರಾಮ ಘೋಷಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋಡಿ ಗ್ರಾಮಪಂಚಾಯತ್ ಪ್ರಧಾನಮಂತ್ರಿಗಳ ಪ್ರತಿ ಕಾರ್ಯವನ್ನು ಯಶಸ್ಸಿನತ್ತ ಕೊಂಡ್ಯೋಯ್ದು ದಿನದ 24ಗಂಟೆ ನೀರುಣಿಸು ಯೋಜನೆಯನ್ನು ಅನುಷ್ಠಾನ ಅಸಮಾನ್ಯ ಕಾರ್ಯವನ್ನು ಸಾಧಿಸಿದ್ದಾರೆ.ಅದರಲ್ಲೂ ಪಂಚವರ್ಣ ಸಂಘಟನೆ, ಗೀತಾನಂದ ಫೌಂಡೇಶನ್ ಸಹಕಾರ ಪಡೆದು ಇಡೀ ಗ್ರಾಮ ಹಸಿರಿಕರಣಗೊಳಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಂಗಳೂರಿನಲ್ಲಿ ಗುರುವಾರ ನಡೆದಿದೆ. ಮೃತ ಯುವಕನನ್ನು ಹಂಗಳೂರು ಗ್ರಾಮದ ಶ್ರೀಧರ ಎಂಬವರ ಮಗ ಶ್ರೀಷ (28) ಎಂದು ಗುರುತಿಸಲಾಗಿದೆ. ಈತ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ ಹಟ್ಟಿಯಂಗಡಿ ಸಿದ್ದಿವಿನಾಯಕ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಒಂದು ವರ್ಷದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದು ಈ ಬಗ್ಗೆ ಚಿಕಿತ್ಸೆ ಕೊಡಿಸುತ್ತಿದ್ದು ಒಂದು ವರ್ಷದ ಹಿಂದೆ ಶಾಸ್ರ್ತಿ ಪಾರ್ಕ್ ಸಮೀಪ ಪ್ಲೈ ಒವರ್ ಮೇಲಿನಿಂದ ಆತ್ಮಹತ್ಯೆ ಮಾಡಿಕೊಳ್ಳಲು ಕೆಳಗೆ ಹಾರಿ ಕೈಕಾಲು ಪೆಟ್ಟಾಗಿದ್ದು ಚಿಕಿತ್ಸೆ ಕೊಡಿಸಿ ಗುಣಮುಖವಾಗಿದ್ದಾರೆ. ಗುರುವಾರದಂದು ವಿಪರೀತ ಮಳೆ ಕಾರಣ ಶಾಲಾ ಕಾಲೇಜು ರಜೆ ಇರುವುದರಿಂದ ಮನೆಯಲ್ಲಿಯೇ ಇದ್ದು ಮಧ್ಯಾಹ್ನ ಊಟ ಬಡಿಸಲು ಕರೆದಾಗ ಏಲ್ಲಿಯೋ ಕಾಣದೇ ಇದ್ದು ಮನೆಯ ಬಾವಿ ನೋಡಿದಾಗ ಬಾವಿಯಲ್ಲಿ ಬಿದ್ದಿದ್ದು ಕೂಡಲೇ ತಂದೆ ಬೇಕರಿಯಿಂದ ಮನೆಗೆ ಹೋಗಿ ಮಗನನ್ನು ಮೇಲೆತ್ತಿದ್ದಾಗ ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿಕ್ಷಣ ಸಂಸ್ಥೆಯೊಂದಕ್ಕೆ ವಿದ್ಯಾರ್ಥಿಗಳು, ಬೋಧಕ ವರ್ಗ ಮತ್ತು ಆಡಳಿತ ಮಂಡಳಿಗಳು ಆಧಾರ ಸ್ಥಂಭವಾಗಿದ್ದು ಈ ಮೂರರ ನಡುವೆ ಸೇತುವೆಯಾಗಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಕಾರ್ಯನಿರ್ವಹಿಸಬೇಕು. ಈ ಸಮಿತಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿದಷ್ಟು ಶೈಕ್ಷಣಿಕ ಸಂಸ್ಥೆ ಸೃಜನಶೀಲವಾಗಿರುತ್ತದೆ ಎಂದು ಬೆಹರಿನ್ ಕಿಂಗ್ಡಮ್ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಡಾ. ಇಕ್ಬಾಲ್ ಹವಾಲ್ದಾರ್ ಹೇಳಿದರು. ಅವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ 2025-26ನೇ ಶೈಕ್ಷಣಿಕ ಕಾರ್ಯಚಟುವಟಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಆಡಳಿತ ನಿಕಾಯಕರು ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ರಕ್ಷಿತ್ ರಾವ್ ಗುಜ್ಜಾಡಿ, ಶ್ರೀಮತಿ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ನೂತನ ಕಾರ್ಯದರ್ಶಿ ಆಕಾಶ್ ಬಿ. ಶೆಟ್ಟಿ ಪ್ರತಿಜ್ಞಾ ವಿಧಿ ಪೂರೈಸಿದರು. ಎಸ್ಕ್ಯೂಎಸಿ ಪ್ರತಿನಿಧಿ ನಿರೀಕ್ಷಾ ಶೆಟ್ಟಿ ವಾರ್ಷಿಕ ಚಟುವಟಿಕೆಯ…
