Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಜೂನ್.2: ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಓರ್ವರಿಗೆ ಮೊದಲ ವರದಿಯಲ್ಲಿ ಕೊರೋನಾ ಪಾಸಿಟಿವ್ ಬಂದಿದ್ದು, ಈಗ ಎರಡನೇ ವರದಿಯಲ್ಲಿ ನೆಗೆಟಿವ್ ಬಂದಿರುವುದು ದೃಢಪಟ್ಟಿದೆ. ಪೊಲೀಸರಿಗೆ ಮಾಡಲಾಗಿದ್ದ ತಪಾಸಣೆ ವೇಳೆ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಅವರ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಮೊದಲ ವರದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಆದರೆ ಅವರಿಗೆ ಯಾವುದೇ ಟ್ರವೆಲ್ ಹಿಸ್ಟರಿ ಇಲ್ಲದೇ ಇರುವುದರಿಂದ ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದೀಗ ನೆಗೆಟಿವ್ ಬಂದಿದೆ. ಈ ಬಗ್ಗೆ ಎಎಸ್ಪಿ ಹರಿರಾಂ ಶಂಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಶಂಕರನಾರಾಯಣ ಪೊಲೀಸ್ ಠಾಣೆಯನ್ನು ಸ್ಯಾನಿಟೈನ್ ಮಾಡಲಾಗಿತ್ತು. ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಅವರ ಕೋಟತಟ್ಟು ಮನೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಇದೀಗ ಎರಡನೇ ವರದಿಯಲ್ಲಿ ನೆಗೆಟಿವ್ ಬಂದಿರುವುದರಿಂದ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ► ಉಡುಪಿ ಜಿಲ್ಲೆಗಿಂದು ಅಮಂಗಳ: ಒಂದೇ ದಿನ 150 ಕೊರೋನಾ ಪಾಸಿಟಿವ್ ದೃಢ – https://kundapraa.com/?p=38168 . ►…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಗರಿಷ್ಠ ಪ್ರಕರಣ ದಾಖಲಾಗಿದೆ. ಜೂ.2ರ  ಉಡುಪಿ ಡಿಎಚ್‌ಓ ನೀಡುವರು ಮಾಹಿತಿಯ ಪ್ರಕಾರ ಒಟ್ಟು 150 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 410 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 64 ಮಂದಿ ಬಿಡುಗಡೆಯಾಗಿದ್ದು, 345 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಕುಂದಾಪುರ ಸರಕಾರಿ ಆಸ್ಪತ್ರೆ ಕೋಟಕ್ಕೆ ಸ್ಥಳಾಂತರ: ಕುಂದಾಪುರ ಹಾಗೂ ಬೈಂದೂರು ಭಾಗದಲ್ಲಿ ಕೋವಿಡ್ ಪಾಸಿಟಿವ್ ಹೆಚ್ಚುತ್ತಿರುವುದರಿಂದ ಕುಂದಾಪುರ ಸರಕಾರಿ ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗುತ್ತಿದೆ. ಈಗಿರುವ ಕುಂದಾಪುರ ತಾಲೂಕು ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಕೋಟ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಹಳೆಯ ವಿನಯ ಆಸ್ಪತ್ರೆಯಲ್ಲಿ ಒಪಿಡಿಯನ್ನು ಆರಂಬಿಸಲಾಗುತ್ತದೆ. ಗರ್ಭಿಣಿಯರು ಹಾಗೂ ಬಾಣಂತಿರಯನ್ನು ಕೋಟ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 400 ಬೆಡ್ ಆಸ್ಪತ್ರೆಯನ್ನು ಮಾಡಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಹಾಗೂ ಬೈಂದೂರು ಭಾಗದಲ್ಲಿ ಕೋವಿಡ್ ಪಾಸಿಟಿವ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಆಸ್ಪತ್ರೆಯನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗುತ್ತಿದೆ. ಆಸ್ಪತ್ರೆಯ ಸೇವೆಗಳನ್ನು ತ್ಕಾಲಿಕವಾಗಿ ಕೋಟ ಸಾರ್ವಜನಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತದೆ. ಹಳೆಯ ವಿನಯ ಆಸ್ಪತ್ರೆಯಲ್ಲಿ ಒಪಿಡಿಯನ್ನು ಆರಂಭಿಸುತ್ತಿದ್ದು, ಗರ್ಭಿಣಿಯರು ಹಾಗೂ ಬಾಣಂತಿರಯನ್ನು ಕೋಟ ಆಸ್ಪತ್ರೆಗೆ ಸ್ಥಳಾಂತರಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.   ಅವರು ಮಂಗಳವಾರ ಕುಂದಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭ ಮಾತನಾಡಿ, ಕಳೆದ ಎರಡು ದಿನಗಳಲ್ಲಿ ಬಾಕಿ ಇದ್ದ 3000 ವರದಿಗಳು ಬಂದಿದ್ದು, ಹಾಗಾಗಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಿದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 400 ಬೆಡ್ ಆಸ್ಪತ್ರೆಯನ್ನು ಮಾಡಲು ಯೋಜಿಸಲಾಗಿದೆ. ಕುಂದಾಪುರದಲ್ಲಿ ಈಗಾಗಲೇ 120 ಬೆಡ್ ಕೋವಿಡ್ ಆಸ್ಪತ್ರೆಯಿದ್ದು, ಅದನ್ನು ಪೂರ್ಣಪ್ರಮಾಣದಲ್ಲಿ ಕೋವಿಡ್ ಆಸ್ಪತ್ರೆ ಮಾಡಲಾಗುವುದು. ಆದರ್ಶ ಆಸ್ಪತ್ರೆಯಲ್ಲಿ 65 ಬೆಡ್ ಇದೆ. ಬೈಂದೂರು ತಾಲೂಕಿನಲ್ಲಿಯೂ ಹೆಚ್ಚಿನ ಪ್ರಕರಣ ವರದಿಯಾಗುತ್ತಿರುವುದರಿಂದ ಕೊಲ್ಲೂರು ಲಲಿತಾಂಬಿಕಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಿವೃತ್ತಿ ದಿನದ ಬೀಳ್ಕೋಡುಗೆ ಸಮಾರಂಭದಂದು ಠಾಣೆಯಲ್ಲಿ ಊಟ ಮಾಡುತ್ತಿದ್ದಾಗಲೇ ಬ್ರೈನ್ ಹ್ಯಾಮರೇಜ್‌ಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೋಟ ಪೊಲೀಸ್ ಠಾಣೆ ಎಎಸ್‌ಐ ಆನಂದ ವೆಂಕಟ್ ದೇವಾಡಿಗ (60) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಎಎಸ್‌ಐ ಆನಂದ ವೆಂಕಟ್ ಅವರು ಮೇ ೩೧ರಂದು ನಿವೃತ್ತಿಯಾಗಬೇಕಿತ್ತು. ಅದೇ ಸಂಭ್ರಮದಲ್ಲಿ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬೀಳ್ಕೊಡುಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಭಾನುವಾರ ಮಧ್ಯಾಹ್ನ ಠಾಣೆಯೊಳಗೆ ಊಟ ಮಾಡುತ್ತಿದ್ದಾಗಲೇ ಆನಂದ ವೆಂಕಟ್ ಕುಸಿದು ಬಿದ್ದಿದ್ದಾರೆ. ತಕ್ಷಣ ವಾಹನದಲ್ಲಿ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯದ್ದು ಹೆಚ್ಚಿನ ಚಿಕಿತ್ಸೆಗೆ ತಕ್ಷಣ ಮಣಿಪಾಲ ಆಸತ್ರೆಗೆ ಕರೆದೊಯ್ಯಲಾಯಿತು. ಮೃತರು ಪತ್ನಿ ಒಬ್ಬ ಮಗ ಹಾಗೂ ಒಬ್ಬಳು ಮಗಳನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಂಗಳವಾರ ಒಂದೇ ದಿನ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 210 ಜನರಿಗೆ ಸೋಂಕು ದೃಢವಾಗಿರುವ ಬಗ್ಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವ ಆರ್ ಅಶೋಕ್, ಉಡುಪಿಯಲ್ಲಿ ಇಂದು 210 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ಧೃಡವಾಗಿದೆ. ಮಹಾರಾಷ್ಟ್ರದಿಂದ ಬಂದ ಪ್ರಯಾಣಿಕರಲ್ಲೇ ಹೆಚ್ಚಿನ ಸೋಂಕು ಕಾಣಿಸಿಕೊಳ್ಳುrತ್ತಿರುವ ಕಾರಣ, ಮಹಾರಾಷ್ಟ್ರ ದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಆರ್. ಅಶೋಕ್ ಹೇಳಿದರು. ಜಿಲ್ಲೆಯಲ್ಲಿ ಈವರೆಗೆ 260 ಕೋವಿಡ್19 ಸೋಂಕು ಪ್ರಕರಣಗಳು ದೃಢವಾಗಿತ್ತು. ಇಂದಿನ 210 ಹೊಸ ಪ್ರಕರಣಗಳು ಕಾರಣದಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 470ಕ್ಕೆ ಏರಿಕೆ ಕಾಣಲಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/ ► ಹೆಚ್ಚುತ್ತಿರುವ ಕೊರೋನಾ ಸೋಂಕು, ಆತಂಕ. ಜಿಲ್ಲಾಡಳಿತದ ಕೈಮೀರುತ್ತಿದೆಯೇ ಕೊರೋನಾ ನಿಯಂತ್ರಣ? – https://kundapraa.com/?p=38142 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಸೆಲೂನ್‌ಗಳಿಗೆ ಭಾನುವಾರ ಹೆಚ್ಚಿನ ಜನರು ತೆರಳುವ ರೂಢಿಯಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಷ್ಟವಾಗುವುದರಿಂದ ಮಂಗಳವಾರದ ಬದಲಿಗೆ ಭಾನುವಾರವೇ ಸೆಲೂನ್‌ಗಳಿಗೆ ರಜೆ ಘೋಷಿಸುವ ನಿರ್ಣಯಕ್ಕೆ ಬರಲಾಗಿದೆ. ಉಡುಪಿಯ ಅಂಬಲಪಾಡಿ ಜಿಲ್ಲಾ ಸವಿತಾ ಸಮಾಜ ಕಟ್ಟಡದಲ್ಲಿ ಜಿಲ್ಲಾಧ್ಯಕ್ಷರಾದ ಭಾಸ್ಕರ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲೆಯ ಪದಾಧಿಕಾರಿಗಳು, ಏಳು ತಾಲೂಕುಗಳ ವಲಯ, ಘಟಕಗಳ ಅಧ್ಯಕ್ಷರು, ಸದಸ್ಯರ ತೀರ್ಮಾನದಂತೆ, ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತೆಗೆದುಕೊಂಡಿರುವ ಈ ನಿರ್ಣಯಕ್ಕೆ ಸವಿತಾ ಸಮಾಜದ ಬಂಧುಗಳು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಸವಿತಾ ಸಮಾಜದ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ಸುದ್ದಿ/ ಇದನ್ನೂ ಓದಿ: ► ಉಡುಪಿ ಜಿಲ್ಲೆ: ಬುಧವಾರ 62 ಕೊರೋನಾ ಪಾಸಿಟಿವ್ – https://kundapraa.com/?p=38228 . ► ಕ್ವಾರಂಟೈನ್ ಸಮಯದಲ್ಲಿ ತಪ್ಪು ವಿಳಾಸ ನೀಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಜಿ. ಜಗದೀಶ್ – https://kundapraa.com/?p=38242 .…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಗರದ ಚಿಕನ್‌ಸಾಲ್ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಬಾಲಕಿಗೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಪೊಲೀಸರಿಗೆ ಅತಿಥಿಯಾದ ಘಟನೆ ನಡೆದಿದೆ. ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ. ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಿದ್ದು, ಸೋಮವಾರ ಬೆಳಿಗ್ಗೆ ಬಾಲಕಿಯ ತಂದೆ ತಾಯಿ ಮನೆಯಲ್ಲಿ ಇಲ್ಲದ ಸಂದರ್ಭ ಆರೋಪಿ ಬಿಸ್ವಾಸ್ ಮನೆ ಸಮೀಪದ ಮರವೊಂದನ್ನು ಏರಿ, ಮಾಡಿನ ಹೆಂಚು ತೆಗೆದು ಒಳನುಗ್ಗಿ ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದರಿಂದ ಸ್ಥಳೀಯರು ಬಂದು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಾಲಕಿಯ ತಂದೆ ಹಾಗೂ ಬಂಗಾಳಿ ಮೂಲದ ಆಪಾದಿತ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ. ಬಿಸ್ವಾಸ್ ವಿರುದ್ದ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ► ಮಹಾಘಾತ: ಉಡುಪಿ ಜಿಲ್ಲೆಯಲ್ಲಿ ಸೋಮವಾರ 73 ಕೊರೋನಾ ಪಾಸಿಟಿವ್ – https://kundapraa.com/?p=38126 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಜೂನ್.1: ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಓರ್ವರಿಗೆ ಕೊರೋನಾ ಪಾಸಿಟಿವ್ ಇರುವ ಶಂಕೆ ಇದ್ದು, ಮೊದಲ ವರದಿಯಲ್ಲಿ ಪಾಸಿಟಿವ್ ಬಂದಿರುವುದರಿಂದ ಮುಂಜಾಗೃತಾ ಕ್ರಮವಾಗಿ ಅವರ ಕೊಟತಟ್ಟುವಿನ ಮನೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಯನ್ನು ಸ್ಯಾನಿಟೈನ್ ಮಾಡಲಾಗಿದೆ. ಅವರ ಎರಡನೇ ಕೋವಿಡ್ ವರದಿಯನ್ನು ನಿರೀಕ್ಷಿಸಲಾಗಿದೆ. ಪೊಲೀಸರಿಗೆ ಮಾಡಲಾಗಿದ್ದ ತಪಾಸಣೆ ವೇಳೆ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಅವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಸದ್ಯ ಚಿಕಿತ್ಸೆಗಾಗಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಯಾವುದೇ ಟ್ರವೆಲ್ ಹಿಸ್ಟರಿ ಇಲ್ಲದೇ ಇರುವುದರಿಂದ ಮತ್ತೊಮ್ಮೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ವರದಿ ನಾಳೆ ಕೈಸೇರುವ ನಿರೀಕ್ಷೆ ಇದೆ. ಶಂಕರನಾರಾಯಣ ಪೊಲೀಸ್ ಠಾಣೆಯನ್ನು ಸ್ಯಾನಿಟೈನ್ ಮಾಡಿರುವುದರಿಂದ ಸದ್ಯ ಸಮೀಪದ ಶಾಲೆಯಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಬುಧವಾರ ಮತ್ತೆ ಠಾಣೆಯಲ್ಲಿಯೇ ಕರ್ತವ್ಯ ನಿರ್ವಹಿಸಲಾಗುತ್ತದೆ. ಆದರೆ ಪಾಸಿಟಿವ್ ದೃಢವಾಗುವ ತನಕ ಸೀಲ್ ಡೌನ್ ಪ್ರಕ್ರಿಯೆ ಇರುವುದಿಲ್ಲ ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ದೊರೆತಿದೆ. ಕುಂದಾಪ್ರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಉಡುಪಿ ಜಿಲ್ಲೆಯಲ್ಲಿ ಜೂ.1 ರ ಹೆಲ್ತ್ ಬುಲೆಟಿನ್ ಪ್ರಕಾರ ಒಟ್ಟು 73 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 73 ಪ್ರಕರಣಗಳಲ್ಲಿ 61 ಮಂದಿ ಮಹಾರಾಷ್ಟದಿಂದ ಬಂದವರಾಗಿದ್ದಾರೆ. 3 ಮಂದಿ ದುಬೈನಿಂದ ಬಂದವರು,  4 ಮಂದಿ ಪೊಲೀಸ್ ಸಿಬ್ಬಂದಿಗಳಿಗೆ ಪಾಸಿಟಿವ್ ಬಂದಿದೆ. 5 ಜನರ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಜಿಲ್ಲೆಯಲ್ಲಿ ಸದ್ಯ ಒಟ್ಟು 260 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 63 ಮಂದಿ ಬಿಡುಗಡೆಯಾಗಿದ್ದು, 196 ಮಂದಿ ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಸೋಕಿತರು ಜಿಲ್ಲೆಯ ಉಡುಪಿ, ಕಾರ್ಕಳ ಹಾಗೂ ಕುಂದಾಪುರದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ ಜಿಲ್ಲೆಯಲ್ಲಿ ಸರಕಾರಿ ಕ್ವಾರಂಟೈನ್ ಮುಗಿಸಿ ಹೋಂ ಕ್ವಾರಂಟೈನಿನಲ್ಲಿ ಇರುವವರಿಗೆ ಪಾಸಿಟಿವ್ ಬರುವ ಪ್ರಕರಣ ಹೆಚ್ಚುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಕೋವಿಡ್ ಪಾಸಿಟಿವ್ ವ್ಯಕ್ತಿ ವಾಸವಿರುವ ಮನೆಯ ಸುತ್ತಲಿನ 100 ಮೀಟರ್ ಪ್ರದೇಶವನ್ನು ಸೀಲ್ ಡೌನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯುತ್ ಶಕ್ತಿ ತಿದ್ದುಪಡಿ ಕಾಯ್ದೆ-2020 ಮಸೂದೆ ವಿರೋಧಿಸಿ ದೇಶವ್ಯಾಪಿ ವಿದ್ಯುತ್ ನೌಕರರು, ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಅಸೋಸಿಯೇಷನ್‌ಗಳ ಒಕ್ಕೂಟ ಮತ್ತು ಕ.ವಿ.ಪ್ರ.ನಿ ನೌಕರರ ಸಂಘ ರಿ. ಪ್ರಾಥಮಿಕ ಸಮಿತಿ ಬೈಂದೂರು ಇದರ ನೇತೃತದಲ್ಲಿ ಸೋಮವಾರ ಬೈಂದೂರು ಮೆಸ್ಕಾಂ ಉಪವಿಭಾಗ ಕಛೇರಿಯ ಆವರಣದಲ್ಲಿ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಕ.ವಿ.ಪ್ರ.ನಿ ನೌಕರರ ಸಂಘ ರಿ. ಪ್ರಾಥಮಿಕ ಸಮಿತಿ ಬೈಂದೂರು ಇದರ ಅಧ್ಯಕ್ಷ ರಾಧಾಕೃಷ್ಣ ಬಿಜೂರು ಮಾತನಾಡಿ ವಿದ್ಯುತ್ ಶಕ್ತಿ ತಿದ್ದುಪಡಿ ಕಾಯ್ದೆ-2020 ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿದೆ. ರಾಜ್ಯದಲ್ಲಿ ಇದು ಜಾರಿಗೆ ಬಂದರೆ ಕೃಷಿ ಪಂಪ್‌ಸೆಟ್‌ಗಳು, ಕುಟೀರ ಜ್ಯೋತಿ ಹಾಗೂ ಭಾಗ್ಯಜೋತಿ ಯೋಜನೆ ಹೊಂದಿರುವ ಬಡ ಕುಟುಂಬಗಳು ಹಾಗೂ ಸಣ್ಣ ಕೈಗಾರಿಕೆಗಳಿಗೆ ತೊಂದರೆಯಾಗಲಿದೆ. ಇಲಾಖೆಯ ನೌಕರರಿಗೂ ವೃತ್ತಿ ಅಭದ್ರತೆ ಎದುರಾಗಲಿದೆ. ಹಾಗಾಗಿ ಈ ಕಾಯಿದೆಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡಬಾರದು…

Read More