Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳಲ್ಲಿ ಕೊವೀಡ್ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಠಾಣೆಯನ್ನು ಬಂದ್ ಮಾಡಲಾಗಿದ್ದು, ಮಂಗಳವಾರ ಸ್ಯಾನಿಟೈಸ್ ಮಾಡಲಾಯಿತು. ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಸದ್ಯ ಪೊಲೀಸರು ಹಳೆಯ ವೃತ್ತ ನಿರೀಕ್ಷಕರ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, 2 ದಿನಗಳ ಬಳಿಕ ಠಾಣೆಯಲ್ಲಿ ಶಿಫ್ಟ್ ಆಗಲಿದ್ದಾರೆ. ಇದನ್ನೂ ಓದಿ: ► ಬೈಂದೂರು ಪೊಲೀಸ್ ಠಾಣೆ, ಶಿರೂರು ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಕೊರೋನಾ ಸೊಂಕು ದೃಢ- https://kundapraa.com/?p=38863 .

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.23ರ ಮಂಗಳವಾರ 11 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ.  ಒಟ್ಟು ಪ್ರಕರಗಳಲ್ಲಿ ಒಂದು ಪ್ರಕರಣ ಪಿ-2047  ಸಂಪರ್ಕದಿಂದ ಬಂದಿದ್ದು, 4  ಪ್ರಕರಣ ದುಬೈ, ಕುವೈತ್ ಹಾಗೂ ಸೌದಿ ಅರೆಬಿಯಾದಿಂದ ಹಿಂದಿರುಗಿದವರು ಹಾಗೂ 6 ಪ್ರಕರಣ ಮುಂಬೈನಿಂದ ಹಿಂದಿರುಗಿದವರಿಂದ ಬಂದಿದೆ. ಈ ಪೈಕಿ 4 ಪುರುಷರು, 3 ಮಹಿಳೆಯರು, 4 ಮಕ್ಕಳು ಸೇರಿದ್ದಾರೆ. ಇಂದು 47 ನೆಗೆಟಿವ್: ಈ ತನಕ ಒಟ್ಟು 13,626 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 12,182 ನೆಗೆಟಿವ್, 1088 ಪಾಸಿಟಿವ್ ಬಂದಿದ್ದು, 356 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 47 ನೆಗೆಟಿವ್, 11 ಪಾಸಿಟಿವ್ ಬಂದಿದೆ. 108 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಸದ್ಯ ಒಟ್ಟು 1088ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 978 ಮಂದಿ ಬಿಡುಗಡೆಯಾಗಿದ್ದು, 108 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕೋವಿಡ್ ವಿರುದ್ಧದ ಸಮರದಲ್ಲಿ ಪತ್ರಕರ್ತರು ವಹಿಸಿದ ಪಾತ್ರ ಬಹಳ ಮಹತ್ತರವಾದದ್ದು. ಜನರಲ್ಲಿ ಈ ಕುರಿತು ಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಶ್ರಮ ಅಪಾರ’ ಎಂದು ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ನಾಗೇಶ್ ಹೇಳಿದ್ದಾರೆ. ಕುಂದಾಪುರದ ಸರ್ಕಾರಿ ಅಯುಷ್ ಆಸ್ಪತ್ರೆಯಲ್ಲಿ ಪತ್ರಕರ್ತರ ರೋಗ ನಿರೋಧಕ ಶಕ್ತಿ ವೃದ್ಧಿಗೆ ನೀಡಲಾದ ಸಾಮಗ್ರಿಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. ಕೊರೋನಾದ ಪ್ರಭಾವ ಇನ್ನಷ್ಟು ಸಮಯ ಮುಂದುವರಿಯಲಿದೆ. ಲಾಕ್ ಡೌನ್ ಸಡಿಲಿಕೆಯ ಬಳಿಕ ಜನಸಾಮಾನ್ಯರು ಕೋವಿಡ್ ಕುರಿತು ಹೆಚ್ಚು ಕಾಳಜಿ ವಹಿಸುತ್ತಿಲ್ಲ. ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು ಮತ್ತು ಆಗಾಗ ಸ್ಯಾನಿಟೈಝರ್ ಬಳಕೆ ಕೋವಿಡ್ ತಡೆಗಟ್ಟುವಲ್ಲಿ ಬಹಳ ಸಹಕಾರಿ. ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರ ನೀಡಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಚಿಕಿತ್ಸೆ ನೀಡಿದ ಕಾರಣ ಕೋವಿಡ್ ರೋಗಿಗಳಲ್ಲಿ ಬಹುತೇಕರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಇನ್ನುಳಿದ ರೋಗಿಗಳು ಸಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಡಾ. ನಾಗೇಶ್ ಹೇಳಿದರು. ಆಯುರ್ವೇದ ಔಷಧ ಪದ್ದತಿಯಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ಕ್ಷೇತ್ರಕ್ಕೆ 900 ಕೋಟಿ ರೂ.ಗಳ ಅನುದಾನ ಬಂದಿದ್ದು, ಕೊರೊನಾದಿಂದ ಅಭಿವೃದ್ದಿ ವೇಗಕ್ಕೆ ತಡೆಯಾಗಿದೆ. ರಾಜ್ಯದ ನಾಲ್ಕು ವಿಧಾನ ಸಭಾ ಕ್ಷೇತ್ರಕ್ಕೆ ಕುಡಿಯುವ ನೀರು ಯೋಜನೆಗೆ ನೀಡುವ 200 ಕೋಟಿ ರೂಪಾಯಿ ಬೈಂದೂರು ಕ್ಷೇತ್ರಕ್ಕೂ ದೊರಕಿದೆ. ವಾರಾಹಿ ನೀರನ್ನು ಬಳಸಿಕೊಂಡು ಬೈಂದೂರು ಕ್ಷೇತ್ರದ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. 76 ಕೋಟಿ ವೆಚ್ಚದಲ್ಲಿ ಸೌಕೂರಿನಲ್ಲಿ ಏತ ನೀರಾವರಿ ಯೋಜನೆ ಪ್ರಗತಿಯಲ್ಲಿದ್ದು 8 ಗ್ರಾಮಗಳಿಗೆ ನೀರು ದೊರಕಲಿದೆ ಎಂದು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದರು. ವಂಡ್ಸೆಯಲ್ಲಿ ನೂತನವಾಗಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ, ಸರಕಾರಿ ಕಛೇರಿಗಳ ಸಂಕೀರ್ಣದಲ್ಲಿ ನಿರ್ಮಿಸಲಾದ ಸಮುದಾಯ ಶೌಚಾಲಯ, ಪ್ರಯಾಣಿಕರ ತಂಗುದಾಣವನ್ನು ಉದ್ಘಾಟಿಸಿ ಮಾತನಾಡಿದರು. ವಂಡ್ಸೆ ಗ್ರಾಮ ಪಂಚಾಯತ್ ಉದಯ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ಆಗಿವೆ. ಸಂಕುಚಿತ ಮನೋಭಾವ ಬಿಟ್ಟು ಅಭಿವೃದ್ದಿಯನ್ನು ಗುರುತಿಸಬೇಕು. ಶೈಕ್ಷಣಿಕವಾಗಿ ವಂಡ್ಸೆ ಇನ್ನೂ ಬೆಳೆಯಬೇಕು ಎಂದರು. ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆಯ (ಎಪಿಎಂಸಿ) ನೂತನ ಅಧ್ಯಕ್ಷರಾಗಿ ಬೈಂದೂರಿನ ವೆಂಕಟ ಪೂಜಾರಿ ಸಸಿಹಿತ್ಲು ಸೋಮವಾರ ಅಧಿಕಾರ ಸ್ವೀಕರಿಸಿದರು. ಇತ್ತಿಚಿಗೆ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಳಾಗಿದ್ದ ವೆಂಕಟ ಪೂಜಾರಿ ಸಸಿಹಿತ್ಲು ಅಧ್ಯಕ್ಷರಾಗಿ ವಸಂತ ಕುಮಾರ ಶೆಟ್ಟಿ ಕೇದೂರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಒಟ್ಟು 16 ಸದಸ್ಯ ಬಲವನ್ನು ಹೊಂದಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಈಗ 10 ಬಿಜೆಪಿ, 6 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ. ಸರ್ಕಾರ ಇತ್ತೀಚೆಗೆ ಮೂರು ಜನ ಸದಸ್ಯರನ್ನು ನಾಮ ನಿರ್ದೇಶನ ಮಾಡಿತ್ತು. ಈ ಸಂದರ್ಭ ಮಾತನಾಡಿದ ನೂತನ ಅಧ್ಯಕ್ಷ ವೆಂಕಟ ಪೂಜಾರಿ ಅವರು, ಕೃಷಿ ಉತ್ಪನ್ನ ಮಾರುಕಟ್ಟೆಗೆ ಬರುವ ಯಾವುದೇ ಒಬ್ಬ ರೈತನಿಗೂ ಸಮಸ್ಯೆಯಾಗಬಾರದು. ಕಷ್ಟ ಪಟ್ಟು ಬೆಳೆದ ಬೆಳೆಯನ್ನು ಹೊತ್ತು ತಂದು ಮಾರಾಟ ಮಾಡಲು ಬಂದವರಿಗೆ ಯಾವುದೇ ಸುಂಕ ವಸೂಲಿ ಮಾಡಬಾರದು. ಜನರಿಗೂ ಯಾವುದೇ ಸಮಸ್ಯೆಯಾಗಬಾರದು. ಅಲ್ಲದೆ ಎಪಿಎಂಸಿ ಪ್ರಾಂಗಣದಲ್ಲಿ ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಜೂ.22ರ ಸೋಮವಾರ 14 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದೃಢವಾಗಿದೆ. ಇವುಗಳಲ್ಲಿ ಮಹಾರಾಷ್ಟ್ರದಿಂದ ಬಂದ 8 ಮಂದಿಗೆ, ಪಿ-6843 ಸಂಪರ್ಕದಿಂದ 4 ಮಂದಿಗೆ ಹಾಗೂ ಪಾಸಿಟಿವ್ ಬಂದಿದ್ದು, ಉಳಿದ ಎರಡು ಪ್ರಕರಣಗಳ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಈ ಪೈಕಿ 6 ಮಂದಿ ಪುರುಷರು, 6 ಮಂದಿ ಮಹಿಳೆಯರು 7 ಹಾಗೂ 15 ವರ್ಷದ ಮಕ್ಕಳು ಸೇರಿದ್ದಾರೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಜೂನ್ 21ರ ಕೋವಿಡ್-19 ವರದಿಯಲ್ಲಿ ಕಾನ್ಸ್ಟೇಬಲ್ ಓರ್ವರಿಗೆ ಪಾಸಿಟಿವ್ ಬಂದಿತ್ತು. ಇಂದು ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದ ಈರ್ವರಿಗೆ ಪಾಸಿಟಿವ್ ದೃಡವಾಗಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಮಾಹಿತಿ ದೊರೆತಿದೆ. ► ಬೈಂದೂರು ಪೊಲೀಸ್ ಠಾಣೆ, ಶಿರೂರು ಆರೋಗ್ಯ ಕೇಂದ್ರದ ಸಿಬ್ಬಂದಿಗಳಿಗೆ ಕೊರೋನಾ ಸೊಂಕು ದೃಢ- https://kundapraa.com/?p=38863 . ಇಂದು 53 ನೆಗೆಟಿವ್: ಈ ತನಕ ಒಟ್ಟು 13,424ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2019ನೇ ಸಾಲಿಗೆ ರಾಷ್ಟ್ರ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಅಸಾಧಾರಣ ಸಾಧನೆ ಮಾಡಿದ ರಾಜ್ಯದ ಪ್ರತಿಭಾವಂತ ಕ್ರೀಡಾಪಟುಗಳ/ಹಿರಿಯ ಕ್ರೀಡಾಪಟುಗಳ/ತರಬೇತುದಾರರಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನೀಡಲಾಗುವ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದ್ದು, ಅರ್ಹ ಕ್ರೀಡಾಪಟುಗಳು ನಿಗದಿತ ಅವಧಿಯೊಳಗೆ https://sevasindhu.karnataka.gov.in ನಲ್ಲಿ ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಡಾ|ರೋಶನ್ ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲೆ (0820-2521324, 9480886467) ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ಬಳಿಕ ನಾವು ಎಡವಿದ ವಿಷಯಗಳಲ್ಲಿ ಕಾಶ್ಮೀರ ಅತ್ಯಂತ ನೋವಿನದ್ದು. ಅದರ ಪರಿಣಾಮವನ್ನು ನಾವು ಈಗಲೂ ಅನುಭವಿಸುತ್ತಿದ್ದೇವೆ ಎಂದು ಒರಕಲ್ ಕಂಪನಿಯಲ್ಲಿ ಇಂಜಿನಿಯರ್ ಆಗಿರುವ ಬಾಡದ ಪ್ರವೀಣ ಶೆಟ್ಟಿ ಹೇಳಿದರು. ಭಾನುವಾರ ಇಲ್ಲಿನ ಮಹಾಕಾಳಿ ದೇವಸ್ಥಾನದ ಆವರಣದಲ್ಲಿ ನಡೆದ ಬೈಂದೂರು ಹಿರಿಯ ನಾಗರಿಕರ ವೇದಿಕೆಯ ಸಭೆಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾಶ್ಮೀರ ಸಮಸ್ಯೆಯ ಇತಿಹಾಸವನ್ನು ತೆರೆದಿಟ್ಟ ಅವರು, ಕೋವಿಡ್-೧೯ ಪಿಡುಗಿನ ನಡುವೆ ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ನೇಪಾಳ, ಚೀನಾ ಗಡಿ ವಿಚಾರ ಎತ್ತಿಕೊಂಡು ಜಗಳಕ್ಕೆ ನಿಂತಿವೆ. ಅದನ್ನು ಎದುರಿಸಲು ದೇಶದ ಸೇನೆ ಸಮರ್ಥವಾಗಿದೆ. ಈ ಎಲ್ಲ ಸವಾಲುಗಳನ್ನು ಭಾರತ ದಿಟ್ಟವಾಗಿ ಎದುರಿಸಬೇಕು ಎಂದು ಹೇಳಿ ಹುತಾತ್ಮರಾದ ವೀರ ಯೋಧರಿಗೆ ನುಡಿನಮನ ಸಲ್ಲಿಸಿದರು. ಅಧ್ಯಕ್ಷತೆ ವಹಿಸಿದ್ದ ವೇದಿಕೆಯ ಅಧ್ಯಕ್ಷ ಎಮ್. ಗೋವಿಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾತುಕತೆಯಲ್ಲಿ ಭಾಗವಹಿಸಿದ ಸದಸ್ಯರು ಕೋವಿಡ್ ಮತ್ತು ಲಾಕ್‌ಡೌನ್ ಕಲಿಸಿದ ಮಿತ ಬಳಕೆ, ಪರಿಸರ ಸ್ವಚ್ಛತೆ, ದುಶ್ಚಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಗಂಗೊಳ್ಳಿ ಮ್ಯಾಂಗನೀಸ್ ರಸ್ತೆಯ ಶ್ರೀ ಮಾತಾ ಚಕ್ರೇಶ್ವರಿ ದೇವಸ್ಥಾನದ 51 ಮಂದಿ ಭಕ್ತಾದಿಗಳು ಗಂಗೊಳ್ಳಿಯ ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವರ ಸನ್ನಿಧಿಯಿಂದ ಸತತ 11ನೇ ಬಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಶ್ರೀ ಸಂಪಿಗೆ ಜಟ್ಟಿಗೇಶ್ವರ ದೇವಸ್ಥಾನದ ಶ್ರೀ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಚಂದ್ರ ಖಾರ್ವಿ ಗಂಗೊಳ್ಳಿ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಾನಕ್ಕೆ ಪಾದಯಾತ್ರೆ ಆರಂಭಿಸಿದರು. ಸಮಾಜದ ಉನ್ನತಿಗಾಗಿ, ಗ್ರಾಮದ ಶ್ರೇಯೋಭಿವೃದ್ಧಿ, ಕರೋನಾ ವೈರಸ್ ನಿರ್ಮೂಲನೆ, ಮತ್ಸ್ಯಕ್ಷಾಮ ನಿವಾರಣೆಗಾಗಿ ಪ್ರಾರ್ಥಿಸಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳಕ್ಕೆ ಪಾದಯಾತ್ರೆ ಮಾಡುವುದರ ಜೊತೆಗೆ ಪಾದಯಾತ್ರೆಯಲ್ಲಿ ’ಆತ್ಮನಿರ್ಭರ ಭಾರತ್’ ಎನ್ನುವ ಅಭಿಯಾನವನ್ನು ಹಮ್ಮಿಕೊಂಡು ಸ್ವದೇಶಿ ಉತ್ಪನ್ನಗಳನ್ನು ಬಳಸುವಂತೆ ಹಾಗೂ ಸ್ವದೇಶಿ ವಸ್ತುಗಳನ್ನು ಪ್ರೋತ್ಸಾಹಿಸಿ ದೇಶದ ಅಭಿವೃದ್ಧಿಗೆ ಸಹಕರಿಸಿ ಎನ್ನುವ ಸಂದೇಶವನ್ನು ಪಾದಯಾತ್ರಿಗಳು ದಾರಿಯುದ್ದಕ್ಕೂ ಸಾರುವ ಉದ್ದೇಶ ಹೊಂದಿದ್ದಾರೆ. ಇದನ್ನೂ ಓದಿ: ► ಬೈಂದೂರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು,ಜೂ.22: ತಾಲೂಕಿನ ಬೈಂದೂರು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್, ಶಿರೂರು ಆರೋಗ್ಯ ಕೇಂದ್ರದ ಓರ್ವ ಎ.ಎನ್.ಎಂ  ಹಾಗೂ ಇತರೆ ಇಬ್ಬರು ವ್ಯಕ್ತಿಗಳಿಗೆ ಕೋರೋನಾ ಪಾಸಿಟಿವ್ ದೃಢವಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಜೂನ್ 21ರ ಕೋವಿಡ್-19 ವರದಿಯಲ್ಲಿ ಕಾನ್ಸ್ಟೇಬಲ್ ಓರ್ವರಿಗೆ ಪಾಸಿಟಿವ್ ಬಂದಿತ್ತು. ಇಂದು ಅದೇ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದ ಈರ್ವರಿಗೆ ಪಾಸಿಟಿವ್ ದೃಡವಾಗಿದ್ದು, ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸುವ ಬಗ್ಗೆ ಮಾಹಿತಿ ದೊರೆತಿದೆ. ಶಿರೂರು ಆರೋಗ್ಯ ಕೇಂದ್ರದ ಎ.ಎನ್.ಎಂ ಓರ್ವರಿಗೂ ಪಾಸಿಟಿವ್ ಬಂದಿದ್ದು ಅವರನ್ನು ಈಗಾಗಲೇ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಶಿರೂರು ಆರೋಗ್ಯ ಕೇಂದ್ರ, ಬೈಂದೂರು ಪೊಲೀಸ್ ಠಾಣೆ ಬಂದ್: ಬೈಂದೂರು ಪೊಲೀಸ್ ಠಾಣೆ ಹಾಗೂ ವೃತ್ತ ನಿರೀಕ್ಷಕರ ಕಛೇರಿಯನ್ನು ಮುಚ್ಚಲಾಗಿದ್ದು, ಸ್ಯಾನಿಟೈಜೇಷನ್ ಮಾಡಿದ ಬಳಿಕ ಒಂದೆರಡು ದಿನಗಳಲ್ಲಿ ಮತ್ತೆ ಠಾಣೆಯನ್ನು ಪುನರಾರಂಭಿಸಲಾಗುತ್ತದೆ. ಕಛೇರಿಯ ಎಲ್ಲಾ ಸಿಬ್ಬಂದಿಗಳನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗಿದೆ,…

Read More