Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾಲ್ಕು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘವು ಶಾಲೆಯಲ್ಲಿ ಕುಸಿಯುತ್ತಿರುವ ವಿದ್ಯಾರ್ಥಿ ಸಂಖ್ಯೆಯನ್ನು ಒಂದು ಸವಾಲಾಗಿ ಸ್ವೀಕರಿಸಿತು. ವಿದ್ಯಾಭಿಮಾನಿಗಳು ನೀಡಿದ ದೇಣಿಗೆ, ಸದಸ್ಯರು ಮಾಡಿದ ಸಾಲ ಬಳಸಿಕೊಂಡು ಒಟ್ಟು ರೂ ೧೫ ಲಕ್ಷ ವೆಚ್ಚದಲ್ಲಿ ಬಸ್ ಖರೀದಿಸಿ ಶಾಲೆಗೆ ಹಸ್ತಾಂತರಿಸಿತು. ಪ್ರಾಥಮಿಕ ಪೂರ್ವ ತರಗತಿಗಳನ್ನು ಆರಂಭಿಸಿ, ನಡೆಸಿತು. ಅದರ ಫಲವಾಗಿ ಶಾಲೆ ನಿರೀಕ್ಷಿತ ಪ್ರಗತಿ ಸಾಧಿಸಿತು ಎಂದು ಸಂಘದ ಅಧ್ಯಕ್ಷ ದಯಾನಂದ ಬಳೆಗಾರ್ ಹೇಳಿದರು. ಅವರು ಸಾಧನಾ ಸಮುದಾಯ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಮೂಲಗಳಿಂದ ಧನಸಂಗ್ರಹ ಮಾಡಿ ಬಸ್‌ಗೆ ಮಾಡಿದ ಋಣದಿಂದ ಸಂಘ ಈಗ ಮುಕ್ತವಾಗಿದೆ. ಮುಂದಿನ ದಿನಗಳಲ್ಲೂ ಶಾಲೆಯ ಅಭಿವೃದ್ಧಿಗೆ ನೆರವಾಗುವ ಮೂಲಕ ಕಲಿತ ಶಾಲೆಯ ಋಣ ತೀರಿಸಲು ಸಂಘ ಬದ್ಧವಾಗಿದೆ ಎಂದರು. ಅನಿತಾ ಆರ್. ಕೆ, ಪ್ರಾರ್ಥನೆ ಹಾಡಿದರು. ಅಣ್ಣಪ್ಪ ಖಾರ್ವಿ ಸ್ವಾಗತಿಸಿದರು. ದೇವಿದಾಸ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಈಚೆಗೆ ಕೊಡೇರಿ ದೋಣಿ ದುರಂತದಲ್ಲಿ ಮೃತರಾದ ಉಪ್ಪುಂದದ ನಾಲ್ವರು ಮೀನುಗಾರರ ಕುಟುಂಬಗಳಿಗೆ ಉಪ್ಪುಂದ ರಾಣಿಬಲೆ ಮೀನುಗಾರರ ಒಕ್ಕೂಟವು ಭಾನುವಾರ ತಲಾ ₹ 5 ಲಕ್ಷದಂತೆ ₹ 20 ಲಕ್ಷ ನೆರವು ನೀಡಿತು. ಸಂಘದ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಈ ನೆರವನ್ನು ಕುಟುಂಬಗಳಿಗೆ ಹಸ್ತಾಂತರಿಸಲಾಯಿತು. ಬಿ.ಎಂ.ಸುಕುಮಾರ್ ಶೆಟ್ಟಿ ಮೃತ ಮೀನುಗಾರರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಬಂದರು ಅಳಿವೆ ಬಾಗಿನಲ್ಲಿ ಹೂಳು ಎತ್ತಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಬ್ರೇಕ್ ವಾಟರ್ ಕಾಮಗಾರಿ ವಿಸ್ತರಣೆ ಕುರಿತು ಮುಖ್ಯಮಂತ್ರಿಯೊಂದಿಗೆ ಚರ್ಚಿಸುವುದಾಗಿ ಹೇಳಿದರು. ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹೇಂದ್ರ ಪೂಜಾರಿ, ಸದಸ್ಯೆ ಪ್ರವೀಳಾ ದೇವಾಡಿಗ, ಜಿಲ್ಲಾ ಪಂಚಾಯಿತಿ ಸದಸ್ಯ ಸುರೇಶ ಬಟವಾಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಮದನಕುಮಾರ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಆನಂದ ಖಾರ್ವಿ, ಸಂಘದ ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಪಧಾನ ಕಾರ್ಯದರ್ಶಿ ಡಿ. ಮಂಜುನಾಥ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿಯ ರಾಷ್ಟ್ರೀಯ ಹೆದ್ದಾರಿ– 66 ರ ತಲ್ಲೂರು ಜಂಕ್ಷನ್ ಬಳಿ ಬುಧವಾರ ರಾತ್ರಿ ಲಾರಿಯೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿ ಆಗಿದ್ದು, ಸವಾರ ಮೃತಪಟ್ಟಿದ್ದಾರೆ. ಕುಂದಾಪುರದಲ್ಲಿ ವರ್ತಕರಾಗಿರುವ ಸೀತಾರಾಮ್ ಶೆಟ್ಟಿ ಮೃತರು. ಇವರು ವ್ಯಾಪಾರ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲ್ಲೂರಿನಲ್ಲಿ ಬೈಂದೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಹೊಡೆದಿತ್ತು. ‌ ಇದೇ ಸಂದರ್ಭ ಸ್ಕೂಟಿ ಸವಾರ ಮಗುಚಿರುವುದನ್ನು ಕಂಡು ಪಿಕಪ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಇನ್ನೊಂದು ಅಪಘಾತವೂ ಇಲ್ಲಿ ಸಂಭವಿಸಿದೆ. ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.2ರ ಬುಧವಾರ 167 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 19, ಉಡುಪಿ ತಾಲೂಕಿನ 92 ಹಾಗೂ ಕಾರ್ಕಳ ತಾಲೂಕಿನ 52 ಮಂದಿಗೆ ಪಾಸಿಟಿವ್ ಬಂದಿದೆ. 4 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಈತನಕ ಜಿಲ್ಲೆಯಲ್ಲಿ ಒಟ್ಟು 102 ಮಂದಿ ಮೃತಪಟಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 112 ಸಿಂಥಮೇಟಿವ್ ಹಾಗೂ 55 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 101 ಪುರುಷರು, 66 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 46, ILI 61, ಸಾರಿ 2 ಪ್ರಕರಣವಿದ್ದು, 56 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಓರ್ವ ವ್ಯಕ್ತಿ ಅಂತರ್ಜಿಲ್ಲಾ ಹಾಗೂ ಓರ್ವ ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 65 ಮಂದಿ ಆಸ್ಪತ್ರೆಯಿಂದ ಹಾಗೂ 185 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 70, 85 ವರ್ಷದ ವೃದ್ಧ ಹಾಗೂ 55 ವರ್ಷದ ಪುರುಷ ಇಂದು ಮೃತಪಟ್ಟಿದ್ದಾರೆ. 812 ನೆಗೆಟಿವ್:…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಸೆ.2: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕ, ಜಿ.ಪಂ ಮಾಜಿ ಸದಸ್ಯ ಹರ್ಕೂರು ಮಂಜಯ್ಯ ಶೆಟ್ಟಿ ಇಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿದ್ದ ಮಂಜಯ್ಯ ಶೆಟ್ಟಿ ಅವರು, ಕಾಂಗ್ರೆಸ್ ಪಕ್ಷದಿಂದ ಒಂದು ಬಾರಿ ಜಿ.ಪಂ ಹಾಗೂ ಒಂದು ಬಾರಿ ತಾ.ಪಂ ಸದಸ್ಯರಾಗಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ದುಡಿದಿದ್ದರು. ಆಲೂರು ಹರ್ಕೂರು ಭಾಗದಲ್ಲಿ ಪ್ರಭಾವಿ ನಾಯಕರೆನಿಸಿಕೊಂಡಿದ್ದರು. ಬುಧವಾರ ನೆಂಪುವಿನ ಶಾಸಕ ಬಿ. ಎಂ ಸುಕುಮಾರ್ ಶೆಟ್ಟಿ ಅವರ ನಿವಾಸದಲ್ಲಿ ಶಾಸಕರ ಸಮ್ಮುಖದಲ್ಲಿ ಹರ್ಕೂರು ಮಂಜಯ್ಯ ಶೆಟ್ಟಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಅವರೊಂದಿಗೆ ಕಾಂಗ್ರೆಸ್ ಪಕ್ಷದ ಉಳ್ಳೂರು-೭೪ ಗ್ರಾಮದ ಪ್ರಸಾದ್, ಮುಖಂಡರಾದ ಕೆಂಚನೂರು ಸುಬ್ಬಣ್ಣ ಶೆಟ್ಟಿ, ಸುಧೀರ್, ನವೀನ್ ಆಚಾರ್ಯ ಮೊದಲಾದವರು ಬಿಜೆಪಿಗೆ ಸೇರ್ಪಡೆಗೊಂಡರು. ಈ ಸಂದರ್ಭ ಜಿ.ಪಂ ಸದಸ್ಯರಾದ ಶಂಕರ್ ಪೂಜಾರಿ, ರೋಹಿತ್ ಶೆಟ್ಟಿ, ಶೋಭಾ ಜಿ ಪುತ್ರನ್ ಕುಂದಾಪುರ ತಾ.ಪಂ ಸದಸ್ಯ ಉಮೇಶ್ ಕಲ್ಗದ್ದೆ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ,ಸೆ.2: ತಾಲೂಕಿನ ಹಕ್ಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂದಬಾರಂದಾಡಿಯಲ್ಲಿ ಹೈಕ್ಲಾಸ್ ತಂಗುದಾಣವೊಂದು ನಿರ್ಮಾಣಗೊಂಡಿದ್ದು, ಇಂದು ಉದ್ಘಾಟನೆಗೊಂಡಿದೆ. ಬಸ್ ತಂಗುದಾಣವು ವಿಶ್ರಾಂತಿ ಕೊಠಡಿ, ಅಂಗಡಿ ಕೋಣೆ, ಶೌಚಾಲಯ, ಬಾತ್ ರೂಮ್ ಮುಂತಾದ ಸೌಲಭ್ಯ ಒಳಗೊಂಡಿದ್ದು, ಗ್ರಾಮೀಣ ಭಾಗದಲ್ಲಿ ಉತ್ಕೃಷ್ಟ ದರ್ಜೆಯ ತಂಗುದಾಣ ನಿರ್ಮಿಸಿದಂತಾಗಿದೆ. ಹೊಳ್ಮಗೆ ಕರುಣಾಕರ ಶೆಟ್ಟಿ ಕಾವ್ರಾಡಿ ಸ್ಮರಣಾರ್ಥ 15 ಲಕ್ಷ ವೆಚ್ಚದಲ್ಲಿ ಪುತ್ರ ನಿಕಟಪೂರ್ವ ಹಕ್ಲಾಡಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಭಾಸ್ ಶೆಟ್ಟಿ ಹೊಳ್ಮಗೆ ಹಾಗೂ ಸಹೋದರಿಯರು ನಿರ್ಮಿಸಿದ ಸೂಪರ್ ಸ್ಪೆಷಾಲಿಟಿ ಬಸ್ ತಂಗುದಾಣ ನಿರ್ಮಿಸಿದ್ದು, ಗ್ರಾಮ ಪಂಚಾಯತ್ ನಿರ್ವಹಣೆ ಜವಾಬ್ದಾರಿ ಹೊತ್ತಿದೆ. ನಿವೃತ್ತ ಶಿಕ್ಷಕ ಗೋಪಾಲ ಶೆಟ್ಟಿ ಬಸ್ ತಂಗುದಾಣ ಉದ್ಘಾಟಿಸಿದರು. ಹಕ್ಲಾಡಿ ಚೆನ್ನಕೇಶವ ಲಯನ್ಸ್ ಕ್ಲಬ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಾಳೆಮನೆ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಅಧ್ಯಕ್ಷ ಎನ್.ಎಂ.ಹೆಗ್ಡೆ, ಲಯನ್ಸ್ ಪದಾಧಿಕಾರಿಗಳಾದ ವಿ. ಜಿ. ಶೆಟ್ಟಿ, ಶಂಕರ ಹೆಗ್ಡೆ ಹೊಳ್ಮಗೆ, ಹಕ್ಲಾಡಿ ಗ್ರಾಪಂ ಪಿಡಿಒ ಚಂದ್ರ ಬಿಲ್ಲವ, ಉಮಾನಾಥ ಹೆಗ್ಡೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಪಡುವರಿಯಲ್ಲಿ ವಾಸವಾಗಿರುವ ಉಪ್ಪಿನಕುದ್ರು ವಾಸನಮನೆಯ ರತ್ನಾಕರ ಶೇರೆಗಾರ್ ಮತ್ತು ಶ್ರೀದೇವಿ ದಂಪತಿಗಳ ಪುತ್ರ ವಿಪಿನ್ ಆರ್. ಶೇರೆಗಾರ್‌ಗೆ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕೆ ಅಗತ್ಯವಾದ ರೂ. ೪೮,೦೦೦ ಮೌಲ್ಯದ ಲ್ಯಾಪ್‌ಟಾಪ್‌ನ್ನು ಟ್ರಸ್ಟ್‌ನ ಪರವಾಗಿ ಶ್ರೀ ರಾಮ ಶೈಕ್ಷಣಿಕ ದತ್ತು ಯೋಜನೆಯಡಿಯಲ್ಲಿ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ರಾಮ ವಿವಿಧೋದ್ಧೇಶ ಟ್ರಸ್ಟ್ಟ್‌ನ ಆಡಳಿತ ಟ್ರಸ್ಟಿಗಳಾದ ಬಿ. ರಾಮಕೃಷ್ಣ ಶೇರೆಗಾರ್, ಟ್ರಸ್ಟಿಗಳಾದ ಕೆ. ಜಿ. ನಾಗಪ್ಪ ಶೇರೆಗಾರ್, ವೆಂಕಟ್ರಮಣ ಬಿಜೂರು ಹಾಗೂ ಸಂಚಾಲಕರಾದ ಆನಂದ ಮದ್ದೋಡಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೆ.1ರ ಮಂಗಳವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ 57ಕುಂದಾಪುರ ತಾಲೂಕಿನ, ಉಡುಪಿ ತಾಲೂಕಿನ 85 ಹಾಗೂ 13 ಕಾರ್ಕಳ ತಾಲೂಕಿನ ಮಂದಿಗೆ ಪಾಸಿಟಿವ್ ಬಂದಿದೆ. ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 97 ಸಿಂಥಮೇಟಿವ್ ಹಾಗೂ 64 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 43, ILI 81, ಸಾರಿ 3 ಪ್ರಕರಣವಿದ್ದು, 26 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 8 ಮಂದಿ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 65 ಮಂದಿ ಆಸ್ಪತ್ರೆಯಿಂದ ಹಾಗೂ 185 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 78 ವರ್ಷದ ವೃದ್ಧೆ, ಕಾರ್ಕಳದ 58 ವರ್ಷದ ಪುರುಷ ಇಂದು ಮೃತಪಟ್ಟಿದ್ದಾರೆ. 2,307 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 11757 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 9351 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2307 ಸಕ್ರಿಯ ಪ್ರಕರಣಗಳಲ್ಲಿ 1097 ಮಂದಿ ಉಡುಪಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಆ.31ರ ಸೋಮವಟರ 83 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 35, ಉಡುಪಿ ತಾಲೂಕಿನ 28 ಹಾಗೂ ಕಾರ್ಕಳ ತಾಲೂಕಿನ 18 ಮಂದಿಗೆ ಪಾಸಿಟಿವ್ ಬಂದಿದೆ. 2 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 30 ಸಿಂಥಮೇಟಿವ್ ಹಾಗೂ 53 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 21, ILI 32, ಸಾರಿ 3 ಪ್ರಕರಣವಿದ್ದು, 27 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. ಇಂದು 81 ಮಂದಿ ಆಸ್ಪತ್ರೆಯಿಂದ ಹಾಗೂ 222 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 43 & 40 ವರ್ಷದ ವೃದ್ಧ ಇಂದು ಮೃತಪಟ್ಟಿದ್ದಾರೆ. 2,398 ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ಒಟ್ಟು 11596 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 9101 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2398 ಸಕ್ರಿಯ ಪ್ರಕರಣಗಳಲ್ಲಿ 1125 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಗೋವಿಗಾಗಿ ಮೇವು ಅಭಿಯಾನದ ಅಂಗವಾಗಿ ನೀಲಾವರದ ಪೇಜಾವರ ಮಠದ ಗೋಶಾಲೆಗೆ ಹಸಿ ಹುಲ್ಲು ನೀಡಲಾಯಿತು. ಹಸಿ ಹುಲ್ಲುಗಳ ಕೊಡುಗೆ ಸ್ವೀಕರಿಸಿದ ಪೇಜಾವರ ಮಠದ ಯತಿ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು, ಆಶೀರ್ವಚನ ನೀಡಿದರು. ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಕುಂದಾಪುರ, ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಪೈ, ಪ್ರಧಾನ ಕಾರ್ಯದರ್ಶಿ ಅನಿತಾ ಶ್ರೀಧರ್, ಕೋಶಾಧಿಕಾರಿ ಆಶಾ ಗೋವಿಂದ ಮೊಗವೀರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಲತಾ ಸುರೇಶ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಪಿ.ಗುಣರತ್ನಾ, ಪುಷ್ಪಾ ಶೇಟ್, ಇಂದಿರಾ, ಶಾಂತಾ ಇದ್ದರು.

Read More