ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೇವಾ ಸಿಂಧುವಿನ ಮೂಲಕ ಪಾಸ್ ಪಡೆದು ಹೊರ ರಾಜ್ಯಗಳಿಂದ ಮರುಳುತ್ತಿರುವವರನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆ ಗುರುತಿಸಲಾಗಿರುವ ಸ್ಥಳಗಳಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದ್ದು, ಕಳೆದ ಸೋಮವಾರದಿಂದ ಇಲ್ಲಿಯ ತನಕ ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಒಟ್ಟು 306 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಕುಂದಾಪುರ ತಾಲೂಕಿಗೆ ಮೇ.4ರಿಂದ ತೆಲಂಗಾಣದಿಂದ 118, ಕೇರಳದಿಂದ 1, ಗುಜರಾತ್ನಿಂದ 6, ಗೋವಾದಿಂದ 1, ಮಹಾರಾಷ್ಟ್ರದಿಂದ 39 ಹಾಗೂ ತಮಿಳುನಾಡಿನಿಂದ 7 ಮಂದಿ ಬಂದಿದ್ದಾರೆ. ಬೈಂದೂರು ತಾಲೂಕಿಗೆ ತೆಲಂಗಾಣದಿಂದ 109, ಆಂಧ್ರಪ್ರದೇಶದಿಂದ 6, ಮಹಾರಾಷ್ಟ್ರದಿಂದ 15, ಗೋವಾದಿಂದ 6, ಗುಜರಾತ್ನಿಂದ 1 ಮತ್ತು ಕೇರಳದಿಂದ ಒಬ್ಬರು ಬಂದಿದ್ದಾರೆ. ಇವರೆಲ್ಲರೂ ಬೈಂದೂರು ತಾಲ್ಲೂಕಿನ ಶಿರೂರು, ಕೊಲ್ಲೂರು ಹಾಗೂ ಕುಂದಾಪುರ ತಾಲ್ಲೂಕಿನ ಹೊಸಂಗಡಿ ಮೂಲಕ ಜಿಲ್ಲೆ ಪ್ರವೇಶಿಸಿದ್ದಾರೆ. ಅಲ್ಲಿನ ಚೆಕ್ಪೋಸ್ಟ್ಗಳಲ್ಲಿ ಪ್ರಾಥಮಿಕ ಆರೋಗ್ಯ ತಪಾಸಣೆಗೆ ಒಳಪಡಿಸಿದ ಅವರಿಗೆ ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಕುಂದಾಪುರ ಹಾಗೂ ಬೈಂದೂರಿನ ಹಿಂದುಳಿದ ಮತ್ತು ಅಲ್ಪಸಂಖ್ಯಾತರ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಸಂದರ್ಭ ಹಾಗೂ ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್ಗಳನ್ನು (ಮಖ ಗವಸು) ಧರಿಸುವುದು ಕಡ್ಡಾಯವಾಗಿದ್ದು, ನಿಯಮ ಪಾಲಿಸದಿದ್ದಲ್ಲಿ ದಂಡ ವಿಧಿಸಲಾಗುತ್ತದೆ. ಕೋವಿಡ್-19 ಹರಡುವಿಕೆ ತಡೆಗಟ್ಟಲು ಸರಕಾರ ಲಾಕ್ಡೌನ್ ಘೋಷಣೆ ಮಾಡಿದ್ದು, ಈ ನಡುವೆ ಜನರಿಗೆ ಕೆಲವು ವಿನಾಯಿತಿಗಳನ್ನು ನೀಡಿದೆ. ಬೆಳಿಗ್ಗೆ 7 ರಿಂದ ಸಂಜೆ 7 ರ ತನಕ ಜನರು ಅಗತ್ಯ ವಸ್ತುಗಳ ಖರೀದಿ ಹಾಗೂ ಈಗಾಗಲೇ ತಿಳಿಸಲಾಗಿರುವ ಕೆಲಸ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಿರುಗಾಡುವಾಗ ಸಂದರ್ಭ ಮತ್ತು ಕೆಲಸದ ನಿರ್ವಹಿಸುವ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸದವರಿಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200ಹಾಗೂ ಇತರ ಕಡೆಗಳಲ್ಲಿ ರೂ.100 ದಂಡ ವಿಧಿಸಲು ಪೊಲೀಸ್ ಸಬ್ಇಸ್ಪೆಕ್ಟರ್, ಮಹಾನಗರ ಪಾಲಿಕೆಗಳ ಆರೋಗ್ಯ ನಿರೀಕ್ಷಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸರಕಾರದಿಂದ ನಿಯೋಜಿತರಾದ ಇತರ ಅಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಈ ನಿಯಮವನ್ನು ಕಟ್ಟುನಿಟ್ಟಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಪ್ರಸ್ತುತ ನಿಲುಗಡೆಗೊಳಿಸಿರುವ ಬೆಂಗಳೂರು-ಕಣ್ಣೂರು-ಕಾರವಾರ ಕಂಬೈನ್ಡ್ ಎಕ್ಸ್ಪ್ರೆಸ್ ರೈಲನ್ನು ಕೆಲವು ಹೊಂದಾಣಿಕೆ ಮಾಡಿಕೊಂಡು ಪುನರಾರಂಭಗೊಳಿಸಬೇಕು ಎಂದು ದಕ್ಷಿಣ ಪಶ್ಚಿಮ ರೈಲ್ವೆ ಬಳಕೆದಾರರ ಸಮಾಲೋಚನಾ ಸಮಿತಿಯ ಸದಸ್ಯ ಕೆ. ವೆಂಕಟೇಶ್ ಕಿಣಿ ದಕ್ಷಿಣ ರೈಲ್ವೆಯ ಪ್ರಾದೇಶಿಕ ಮ್ಯಾನೇಜರ್ ಅವರನ್ನು ಒತ್ತಾಯಿಸಿದ್ದಾರೆ. ಕಾರವಾರ-ಯಶವಂತಪುರ ರೈಲು ಆರಂಭಿಸಿದ ಬಳಿಕ ವಾರಕ್ಕೆ ಮೂರು ಬಾರಿ ಮೈಸೂರು ಮೂಲಕ ಓಡಾಡುವ 16523/24 ಸಂಖ್ಯೆಯ ಬೆಂಗಳೂರು-ಕಾರವಾರ ರೈಲನ್ನು ರದ್ದುಪಡಿಸಲಾಗಿದೆ. ಅದರಿಂದಾಗಿ ಕರಾವಳಿ ಮೈಸೂರು ನಡುವೆ ರೈಲು ಸಂಪರ್ಕ ಇಲ್ಲದಂತಾಗಿದೆ. ಸಾಂಸ್ಕೃತಿಕ, ಐತಿಹಾಸಿಕ ಮತ್ತು ಪ್ರವಾಸೋದ್ಯಮ ಮಹತ್ವದ ನಗರವಾದ ಮೈಸೂರು ಮತ್ತು ಇತರ ಸ್ಥಳಗಳಿಗೆ ಕರಾವಳಿಯ ಗಣನೀಯ ಸಂಖ್ಯೆಯ ಪ್ರಯಾಣಿಕರು ನಿಲುಗಡೆಗೊಳಿಸಿದ ರೈಲಿನ ಮೂಲಕ ಸಂಚರಿಸುತ್ತಿದ್ದರು. ಈ ರೈಲು ಮಂಗಳೂರು ಕಾರವಾರ ನಡುವಿನ ನಿತ್ಯ ಪ್ರಯಾಣದ ರೈಲಾಗಿಯೂ ಬಳಕೆಯಾಗುತ್ತಿತ್ತು. ಹಲವು ರೈಲ್ವೆ ಪ್ರಯಾಣಿಕ ಸಂಘಗಳು ಈ ರೈಲಿನ ಪುನರಾರಂಭ ಮಾಡಿ ಮಡಗಾಂವ್ ವರೆಗೆ ವಿಸ್ತರಿಸಲು ಒತ್ತಾಯಿಸುತ್ತಿವೆ. ಬೆಂಗಳೂರು-ಕಣ್ಣೂರು ನಡುವಿನ 16517/18 ಸಂಖ್ಯೆಯ ರೈಲು ಈಗ ಮೈಸೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ದೇವಸ್ಥಾನಗಳನ್ನು ಶೀಘ್ರ ತೆರೆಯಬೇಕು ಎಂಬ ಯೋಚನೆ ಇದ್ದರೂ ‘ಎ’ ದರ್ಜೆಯ ದೇವಸ್ಥಾನಗಳಿಗೆ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ನೀಡುವುದರಿಂದ ಸಾಮಾಜಿಕ ಅಂತರದ ತೊಂದರೆ ಎದುರಾಗುವುದರಿಂದ, ಪರಿಸ್ಥಿತಿ ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಶನಿವಾರ ಕೊಲ್ಲೂರಿನಲ್ಲಿ ಯಕ್ಷಗಾನ ಕಲಾವಿದರಿಗೆ ಆಹಾರ ಕಿಟ್ಗಳ ವಿತರಣೆಗೆ ಚಾಲನೆ ನೀಡಿ ಮಾತನಾಡಿ ದೇವಸ್ಥಾನಗಳಲ್ಲಿ ತ್ರಿಕಾಲ ಪೂಜೆಯೂ ಸೇರಿದಂತೆ ಎಲ್ಲಾ ಪೂಜೆಗಳು ನಡೆಯುತ್ತಿದೆ. ಆದರೆ ತೆರೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಮಸ್ಯೆ ಇದೆ ಎಂದರು. ರಾಜ್ಯದ ಎ ದರ್ಜೆ ದೇವಾಲಯಗಳಿಂದ ಈವರೆಗೆ ಕೋರೋನ ಕಾರಣದಿಂದ ಸಂತ್ರಸ್ಥರಾಗಿರುವವರಿಗೆ ಇಲ್ಲಿಯ ತನಕ 7.5 ಲಕ್ಷ ಊಟ ವಿತರಿಸಲಾಗಿದೆ. ದೇವಸ್ಥಾಗಳಲ್ಲಿ ಪೂಜೆ ಪುರಸ್ಕಾರಗಳಿದ್ದರೂ, ಅರ್ಚಕರಿಗೆ ತಟ್ಟೆಕಾಸಿಲ್ಲದಿರುವುದರಿಂದ ಅರ್ಚಕರಿಗೆ ಕಿಟ್ ವಿತರಿಸಲಾಗುತ್ತಿದೆ. ಜಿಲ್ಲಾಡಳಿತ ಮೂಲಕವೂ ಅಗತ್ಯವುಳ್ಳವರಿಗೆ ಮುಜರಾಯಿ ಇಲಾಖಾ ದೇವಸ್ಥಾಗಳ ಆಹಾರ ಕಿಟ್ ವಿತರಿಸಲಾಗಿದೆ. ಈಗ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಚಿಕ್ಕಮಂಗಳೂರು, ಶಿವಮೊಗ್ಗ ಜಿಲ್ಲೆಯ ಯಕ್ಷಗಾನ ಕಲಾವಿದರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕೋವಿಡ್-19 ರೋಗವು ವಿಶ್ವದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಇತ್ಯಾದಿ ಬಳಕೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದು ಜೊತೆಗೆ ಸಾಂಕ್ರಾಮಿಕ ರೋಗಗಳಾದ ಕ್ಷಯರೋಗ, ನ್ಯುಮೋನಿಯ ಮತ್ತು ಕೋವಿಡ್-19 ವೈರಸ್ ಒಬ್ಬರಿಂದ ಮತ್ತೊಬ್ಬರಿಗೆ ಹರಡಲು ಕಾರಣವಾಗಬಹುದು. ಬೀಡಿ, ಸಿಗರೇಟ್ ಸೇದುವುದರಿಂದ ಕೈಯಿಂದ ಬಾಯಿಗೆ ವೈರಸ್ಗಳು ಮಾನವನ ದೇಹವನ್ನು ಪ್ರವೇಶಿಸುವ ಸಾಧ್ಯತೆ ಇರುವುದರಿಂದ ಹಾಗೂ ದೇಹದ ಇತರೆ ಭಾಗಗಳಿಗೆ ಸೋಂಕು ಹರಡಿ ಶ್ವಾಸಕೋಶ, ಹೃದಯ ಸಂಬಂಧಿತ ಕಾಯಿಲೆಗಳು ಬರಬಹುದು. ಕೋವಿಡ್-19 ಸೋಂಕಿತರು , ಜಗಿಯುವ ಪಾನ್ಮಸಾಲ, ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ಕೋವಿಡ್-19 ವೈರಸ್ ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಮುಂದಿನ ಆದೇಶದವರೆಗೂ ತಂಬಾಕು ಹಾಗೂ ಪಾನ್ ಮಸಾಲ, ಜರ್ದಾ, ಖೈನಿ, ಉತ್ಪನ್ನಗಳನ್ನು, ಉಡುಪಿ ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್ ಲಾಕ್ಡೌನ್ ಸಮಯದಲ್ಲಿ ವಿನೂತನ ಪ್ರಯೋಗವಾಗಿ ಚೆಸ್ ವಿಧ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಚೆಸ್ ಪಂದ್ಯಾಟವನ್ನು ಮೇ 15ರಿಂದ ಆಯೋಜಿಸಿದೆ. ಈಗಾಗಲೇ ಕಶ್ವಿ ಚೆಸ್ ಸ್ಕೂಲ್ನ ವಿಧ್ಯಾರ್ಥಿಗಳು ಈ ಪಂದ್ಯಾಟವನ್ನು ಪ್ರತಿನಿತ್ಯ ಆಟವಾಡುತ್ತಿದ್ದು ಅತ್ಯಂತ ಯಶಸ್ವಿಯಾಗಿದೆ. ಮನೆಯಲ್ಲಿಯೇ ಕುಳಿತು ಆಟವಾಡುವುದರಿಂದ ತಮ್ಮ ಸಮಯವನ್ನು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಲಿದೆ ಹಾಗೂ ಮುಂದೆ ನಡೆಯುವ ಚೆಸ್ ಪಂದ್ಯಾವಳಿಗೆ ಅನುಕೂಲವಾಗಲಿದೆ. ಇದರ ಮುಂದಿನ ಹಂತವಾಗಿ ಕುಂದಾಪುರ ತಾಲೂಕು ಪರಿಸರದ ಇತರ ಚೆಸ್ ವಿಧ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಪಂದ್ಯಾವಳಿಯ ಮಾಹಿತಿ ಇಲ್ಲಿದೆ. http://kashvichessschool.in/ ವೆಬ್ಸೈಟ್ನಲ್ಲಿರುವ https://lichess.org/tournament/ ಲಿಂಕ್ನ ಮೂಲಕ ಈ ಪಂದ್ಯಾಟವನ್ನು ಆಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 7899969063 ದೂರವಾಣಿಯಲ್ಲಿ ಸಂಖ್ಯೆಯನ್ನು ಸಂಪರ್ಕಿಸಬಹುದು. ಪ್ರತಿನಿತ್ಯ ಸಂಜೆ 5 ರಿಂದ 6 ಗಂಟೆಯವರೆಗೆ ಈ ಪಂದ್ಯಾವಳಿ ನಡೆಯಲಿದ್ದು ಎಂದು ಕಶ್ವಿ ಚೆಸ್ ಸ್ಕೂಲ್ನ ಸ್ಥಾಪಕ ನರೇಶ್ ಬಿ. ಮಾಹಿತಿ ನೀಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ಹರಡುವಿಕೆ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ, ಆರೋಗ್ಯ & ಪೊಲೀಸ್ ಇಲಾಖೆಯ ಕಾರ್ಯ ಶ್ಲಾಘನಾರ್ಹ. ಅವರ ಪರಿಶ್ರಮದಿಂದಾಗಿ ಉಡುಪಿ ಜಿಲ್ಲೆ ಕೊರೋನಾ ನಿಯಂತ್ರಣದಲ್ಲಿದ್ದು, ಇದು ಹಾಗೇಯೇ ಮುಂದುವರಿಯಲು ನಾಗರಿಕರು ಸಹಕರಿಸಬೇಕಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಕಟ್ಬೆಲ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಅಧಿಕಾರಿಗಳು ಕೈಗೊಂಡ ಕಟ್ಟುನಿಟ್ಟಿನ ಕ್ರಮದಿಂದಾಗಿ ಉಡುಪಿ ಗ್ರೀನ್ಝೋನ್ನಲ್ಲಿದೆ. ಉದ್ಯೋಗ ನಿಮಿತ್ತ ಬೇರೆ ಬೇರೆ ರಾಜ್ಯ ಹಾಗೂ ದೇಶಗಳಲ್ಲಿ ನೆಲೆಸಿರುವ ಯುವಕರು ಊರಿಗೆ ಬರಲು ಅವಕಾಶ ಮಾಡಿಕೊಡುವುದು ಸರಕಾರದ ಜವಾಬ್ದಾರಿಯಾಗಿದ್ದು, ಅವರಿಗೆ ಕ್ವಾರಂಟೈನ್ ಮಾಡುವ ಪ್ರದೇಶದಲ್ಲಿಯೂ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹೊರ ರಾಜ್ಯ ಹಾಗೂ ದೇಶಗಳಿಂದ ಬರುವವರು ಕೂಡ ಮನೆಯ ಹಿರಿಯರು, ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕ್ವಾರಂಟೈನ್ಗೆ ಒಳಪಟ್ಟು ಆ ಬಳಿಕವಷ್ಟೇ ಮನೆಗಳಿಗೆ ತೆರಳುವುದು ಸೂಕ್ತ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ದೇಶದಲ್ಲಿ ಉದ್ಯಮಗಳು ತೀವ್ರ ಸಂಕಷ್ಟದಲ್ಲಿದೆ. ರಾಜ್ಯದ ಹೋಟೆಲ್ ಉದ್ಯಮ ಸ್ಥಿತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹೊರ ದೇಶ ಹಾಗೂ ರಾಜ್ಯಗಳಿಂದ ಬರುತ್ತಿರುವ ಜನರಿಗೆ ಕ್ವಾರಂಟೈನ್ ಒಳಪಡಿಸಲು ಮತ್ತು ಅವರಿಗೆ ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನೆರವು ನೀಡುವುದಾಗಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿಳಿಸಿದ್ದಾರೆ. ಅವರು ಶುಕ್ರವಾರ ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹೊರ ರಾಜ್ಯ, ಜಿಲ್ಲೆಗಳಿಂದ ಬರುವವರ ಕ್ವಾರಂಟೈನ್ ನಿರ್ವಹಣೆಯ ಬಗ್ಗೆ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿ ಕ್ವಾರಂಟೈನ್ ಮಾಡುವ ಪ್ರದೇಶದಲ್ಲಿ ಮೂಲಭೂತ ಸೌಕರ್ಯ, ಉಟೋಪಚಾರ ವ್ಯವಸ್ಥೆಯ ಹಾಗೂ ಸುರಕ್ಷತೆಯ ಬಗ್ಗೆ ಹೆಚ್ಚಿನ ನಿಗಾ ವಹಿಸಿ ಎಂದಿದ್ದಾರೆ. ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಹೊರಗಿನಿಂದ ಬರುವವರಿಗೆ ಕ್ವಾರಂಟೈನ್ ಮಾಡಲು ಕೊಲ್ಲೂರಿನಲ್ಲಿ ಸಾಕಷ್ಟು ಸ್ಥಳಾವಕಾಶವಿದೆ. ಅವರೆಲ್ಲರಿಗೂ ಸರಿಯಾದ ಸೌಕರ್ಯ ದೊರೆಯುವಂತೆ ಮಾಡುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮವಹಿಸಿ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ಕ್ವಾರಂಟೈನ್ ಬಗ್ಗೆ ಕುಂದಾಪುರ ಉಪವಿಭಾಗಾಧಿಕಾರಿ ರಾಜು ಕೆ ವಿವರಿಸಿ, 1500ಕ್ಕೂ ಹೆಚ್ಚು ಜನ ಹೊರರಾಜ್ಯಗಳಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಗಡಿ ಭಾಗವಾದ ಶಿರೂರು ಚೆಕ್ಪೋಸ್ಟ್ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಪ್ಯಾಸೆಂಜರ್ ಹಾಗೂ ಗೂಡ್ಸ್ ವಾಹನಗಳ ಚಾಲಕ ಹಾಗೂ ಸಹಪ್ರಯಾಣಿಕರಿಗೆ ಥರ್ಮ್ಲ್ ಸ್ಕ್ರೀನಿಂಗ್ ಮಾಡಿ, ಜಿಲ್ಲೆಯ ಗಡಿಯೊಳಕ್ಕೆ ಬಿಡಲಾಗುತ್ತಿದೆ. ಹೊರ ರಾಜ್ಯಗಳಿಂದ ಬಂದವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಿಂದ ಒಳಹಾದಿಯ ಮೂಲಕ ಜನರು ಬರುತ್ತಿದ್ದ ಬಗ್ಗೆ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎಲ್ಲಾ ಒಳದಾರಿಗಳನ್ನು ಬಂದ್ ಮಾಡಿಸಲಾಗಿದೆ. ಹೊರರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಜನರಿಗೆ ಕಡ್ಡಾಯವಾಗಿ ಸರಕಾರಿ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದೆ. ಹೊರಜಿಲ್ಲೆಯಿಂದ ಬರುವವರಿಗೆ ಸೀಲ್ ಹಾಕಬಾರದೆಂದು ಸರಕಾರ ಆದೇಶಿಸಿರುವುದರಿಂದ ಪಾಸ್ ಪಡೆದು ಬರುವವರನ್ನು ಸ್ಕ್ರೀನಿಂಗ್ ಮಾಡಿ ಬಿಡಲಾಗುತ್ತಿದೆ. ಸದ್ಯ ಆವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿಲ್ಲ. ಉಡುಪಿ ಜಿಲ್ಲೆ ಈಗಾಗಲೇ ಗ್ರೀನ್ ಝೋನ್ನಲ್ಲಿದ್ದು, ಮುಂದೆಯೂ ಇದನ್ನು ಕಾಪಾಡಿಕೊಂಡು ಹೋಗಲು ಜನರೇ ಎಚ್ಚರಿಕೆ ವಹಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಸುರಕ್ಷತಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಗೆ ವಿದೇಶಗಳಿಂದ ಮತ್ತು ಹೊರಾಜ್ಯದಿಂದ ಬರುವವರ ಕ್ವಾರಂಟೈನ್ ಗೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಕ್ವಾರಂಟೈನ್ ಗಾಗಿ ಜಿಲ್ಲೆಯ ಖಾಸಗಿ ಶಾಲಾ ಮತ್ತು ಕಾಲೇಜುಗಳ ತಮ್ಮ ವ್ಯಾಪ್ತಿಯ ಕಟ್ಟಡಗಳು ಮತ್ತು ಹಾಸ್ಟೆಲ್ ಗಳನ್ನು ಜಿಲ್ಲಾಡಳಿತ ಕೋರಿದ ಕೂಡಲೇ ಬಿಟ್ಟುಕೊಡುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಶುಕ್ರವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಮುಖ್ಯೋಪಧ್ಯಾಯರುಗಳ, ವಸತಿ ಶಾಲೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದುವರೆಗೂ ಕೋವಿಡ್-19 ವಿರುದ್ದ ಹೋರಾಟದಲ್ಲಿ ಜಿಲ್ಲಾಡಳಿತ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದು, ಮುಂದೆ ವಿದೇಶದಿಂದ ಮತ್ತು ಹೊರರಾಜ್ಯದಿಂದ ಆಗಮಿಸುವ ಜಿಲ್ಲೆಯ ಜನರಿಂದ , ಪ್ರಸ್ತುತ ಜಿಲ್ಲೆಯಲ್ಲಿನ ನಾಗರೀಕರನ್ನು ಕೋವಿಡ್ ನಿಂದ ರಕ್ಷಿಸುವುದು ಅತ್ಯಂತ ಸವಾಲಿನ ಕೆಲಸ, ಇದಕ್ಕಾಗಿ ವಿದೇಶದಿಂದ ಮತ್ತು ಹೊರರಾಜ್ಯದಿಂದ ಬರುವವರನ್ನು ಕ್ವಾರಂಟೈನ್ ಗೊಳಿಸಬೇಕಾಗಿದ್ದು, ಇದಕ್ಕಾಗಿ ಜಿಲ್ಲೆಯ ಸರಕಾರಿ ಹಾಸ್ಟೆಲ್ ಗಳು, ಖಾಸಗಿ ಹಾಸ್ಟಲ್ ಗಳು ಮತ್ತು ಶಾಲಾ…
