Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮತ್ಸ್ಯ ಬಂಧನ ಸಂಸ್ಥೆಯ ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸ ಸಮಾರಂಭವು ಬೈಂದೂರು ತಾಲೂಕಿನ ಎಲ್ಲೂರಿನಲ್ಲಿ ದಿನಾಂಕ 19-01-2021ರ ಮಧ್ಯಾಹ್ನ ಗಂಟೆ 1:30ಕ್ಕೆ ಜರುಗಲಿದೆ. ಮೀನಿನ ಮೌಲ್ಯವರ್ಧಿತ ಖಾದ್ಯಗಳ ಉತ್ಪಾದನಾ ಘಟಕದ ಶಿಲಾನ್ಯಾಸವನ್ನು ಮುಜರಾಯಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ನೇರವೇರಿಸಲಿದ್ದು, ಈ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಎಸ್. ಅಂಗಾರ ಅವರು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ. ರಾಘವೇಂದ್ರ ಅವರು ನೆರವೇರಿಸಲಿದ್ದಾರೆ. ಬೈಂದೂರು ಕ್ಷೇತ್ರದ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದು, ಬಸ್ರೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತದ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅವರು ಶುಭಶಂಸನೆಗೈಯಲಿದ್ದಾರೆ. ಕುಂದಾಪ್ರ ಡಾಟ್ ಕಾಂ. ಕಾರ್ಯಕ್ರಮದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಶಾಸಕರಾದ ರಘುಪತಿ ಭಟ್ ಕೆ.,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಹಲವಾರು ವರ್ಷಗಳಿಂದ ನೆನಗುದಿಗೆ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣ ಗೊಳಿಸದಿರಲು ಭಾರತಿಯ ಜನತಾ ಪಕ್ಷದ ಇಚ್ಚಾ ಶಕ್ತಿಯ ಕೊರತೆಯೆ ಕಾರಣ. ತಾವು ಎನೂ ಕೆಲಸ ಮಾಡದಿದ್ದರೂ ಕರಾವಳಿಯ ಮತದಾರರು ತಮ್ಮನ್ನು ಕೈ ಬಿಡುವುದಿಲ್ಲ ಎನ್ನುವ ಬಲವಾದ ನಂಬಿಕೆ ಬಿಜೆಪಿ ಜನಪ್ರತಿನಿಧಿಗಳಿಗಿದೆ.ಈ ಹಿನ್ನೆಲೆಯಲ್ಲಿ ಈ ತನಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂಪೂರ್ಣವಾಗಿಲ್ಲ ಮಾರ್ಚ್ ಅಂತ್ಯಕ್ಕೆ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿ ಮುಗಿಸುವುದಾಗಿ ಹೆದ್ದಾರಿ ಅಧಿಕಾರಿಗಳು ಮತ್ತೊಂದು ಗಡವು ನೀಡಿದ್ದು , ಕಾಲ ಮಿತಿಯೊಳಗೆ ಹೆದ್ದಾರಿ ಕಾಮಗಾರಿ ಮುಗಿಸುವ ಲಕ್ಷಣಗಳು ಕಾಣುತ್ತಿಲ್ಲ .ಗದಿತ ಸಮಯಕ್ಕೆ ಕಾಮಗಾರಿ ಪೂರ್ಣ ಗೊಳಿಸಬೇಕು ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ತಿಳಿಸಿದ್ದಾರೆ. ಕುಂದಾಪುರ ಪಟ್ಟಣದ ಸಮೀಪ ರಸ್ತೆಗಳನ್ನು ಇನ್ನೂ ಕೂಡ ಸರಿಯಾಗಿಮುಚ್ಚಿಲ್ಲ .ಬಸ್ರೂರು ಮೂರಕೈ ಯಿಂದ ವಿನಾಯಕದ ತನಕ ರಸ್ತೆಗೆ ಡಾಂಬಾರು ಹಾಕದಿರುವುದರಿಂದ ಸ್ಥಳೀಯ ಜನರು ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಜೀವನ್ಮರಣ ಸ್ಥಿತಿಯಲ್ಲಿರುವ ವ್ಯಕ್ತಿಗಳ ಜೀವ ಉಳಿಸಲು ಬೇಕಾಗುವ ರಕ್ತ, ಅದರ ಅಗತ್ಯವಿದ್ದಾಗ ಲಭ್ಯವಾಗಬೇಕಾದರೆ ಅರ್ಹರು ರಕ್ತದಾನ ಮಾಡಬೇಕು ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯದ ಬೆಂಗಳೂರು ವಿಭಾಗದ ಸಹಾಯಕ ಮಹಾ ಪ್ರಬಂಧಕ ಮಹಾಲಿಂಗ ದೇವಾಡಿಗ ಹೇಳಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಕುಂದಾಪುರ ರಕ್ತನಿಧಿ ಕೇಂದ್ರ, ಕುಂದಾಪುರ ದೇವಾಡಿಗ ಮಿತ್ರ ಕದಮ್ ದುಬೈ ಮತ್ತು ವಿವಿಧ ದೇವಾಡಿಗ ಸಂಘಟನೆಗಳು, ಕುಂದಾಪುರಸಿಟಿ ಲಯನ್ಸ್ ಕ್ಲಬ್, ಹೊಸಾಡು ಮುಳ್ಳಿಕಟ್ಟೆ ಸಾಯಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್, ತಲ್ಲೂರು ರೋಟರಿ ಸಮುದಾಯ ದಳ ಹಾಗೂ ಉಪ್ಪಿನಕುದ್ರು ಯಕ್ಷೇಶ್ವರಿ ಫ್ರೆಂಡ್ಸ್ ಇವರ ಆಶ್ರಯದಲ್ಲಿ ತಲ್ಲೂರಿನಲ್ಲಿ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಸಿ ಅವರು ಮಾತನಾಡಿದರು. 28ನೇ ಬಾರಿ ರಕ್ತದಾನ ಮಾಡಿದ ಹಾಗೂ ಲಾಕ್‌ಡೌನ್ ಸಮಯದಲ್ಲಿ ಭಿಕ್ಷುಕರಿಗೆ ಅನ್ನದಾನ ಮಾಡಿದ ಸಮಾಜ ಸೇವಕ ರಾಜೇಶ ದೇವಾಡಿಗ ಕುಂದಾಪುರ ಇವರನ್ನು ಕುಂದಾಪುರ ದೇವಾಡಿಗ ಮಿತ್ರ ಕದಂ ದುಬೈ ವತಿಯಿಂದ ಸನ್ಮಾನಿಸಲಾಯಿತು. ವಾಸುದೇವ ಬೈಂದೂರು ಅಧ್ಯಕ್ಷತೆ ವಹಿಸಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಖಾಸಗಿ ವಾಣಿಜ್ಯ ವಾಹನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳಿಗೆ ಅನ್ವಯಿಸಿವಂತೆ “ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ” ಪರಿಷ್ಕೃತ ಯೋಜನೆಯನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಮೂಲಕ ಜಾರಿಗೊಳಿಸಲಾಗಿರುತ್ತದೆ. ಸಂಬಂಧಪಟ್ಟ ಅಸಂಘಟಿತ ವಲಯದ ಚಾಲಕರು, ನಿರ್ವಾಹಕರು ಮತ್ತು ಕ್ಲೀನರ್‌ಗಳು, ಕಾರ್ಮಿಕ ಅಧಿಕಾರಿಗಳ ಕಛೇರಿ, ಉಡುಪಿ ಉಪ ವಿಭಾಗ, ‘ಎ’ ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ:201, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿ ನೋಂದಾಯಿಸಿಂಕೊಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ಹಾಡಿಗರಡಿ ದೈವಸ್ಥಾನ ನಾಡ ಇಲ್ಲಿ ವಾರ್ಷಿಕ ಹಾಲು ಹಬ್ಬ, ಗೆಂಡಸೇವೆಯ ಪ್ರಯುಕ್ತ ಕೊರೋನಾ ವಾರಿಯರ್ಸ್‌ಗೆ ಗೌರವಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪ್ರದೀಪ್ ಎಂ.ಚಂದನ್ ಕುಂದಬಾರಂದಡಿ, ಮುಂಬೈ ಇವರು ಉದ್ಘಾಟಿಸಿದರು. ಶ್ರೀ ಹಾಡಿಗರಡಿ ದೈವಸ್ಥಾನ ಸಮಿತಿಯ ಅಧ್ಯಕ್ಷರಾದ ನಾಗೇಶ ಪಿ.ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಡಾ. ಪ್ರೇಮಾನಂದ, ಡಾ.ಸುರೇಶ ಕುಮಾರ ಶೆಟ್ಟಿ ಸಹಿತ ಕೊರೋನಾ ವಾರಿಯರ್ಸ್ ಆರೋಗ್ಯ ಕಾರ್ಯಕರ್ತರನ್ನು ಗೌರವಿಸಲಾಯಿತು. ಕೊರೋನಾ ಫ್ರಂಟ್‌ಲೈನ್ ವಾರಿಯರ್ರ‍್ಸ್ ಆಗಿ ಸೇವೆ ಸಲ್ಲಿಸಿದ ರಮೇಶ ಟಿ.ಟಿ. ರಾಘವೇಂದ್ರ ನೆಂಪು ಅವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಗಳಾಗಿ ತಾ.ಪಂ.ಸದಸ್ಯ ಪ್ರವೀಣ್ ಶೆಟ್ಟಿ ಕಡ್ಕೆ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲಾಧ್ಯಕ್ಷ ಕೆ.ಎಂ.ಶಿವರಾಮ ಕೋಟ ಭಾಗವಹಿಸಿದ್ದರು. ವೈದ್ಯರಾದ ಡಾ. ಪ್ರೇಮಾನಂದ, ಡಾ.ಸುರೇಶ ಕುಮಾರ ಶೆಟ್ಟಿ, ಗ್ರಾಮ ಲೆಕ್ಕಿಗರಾದ ಸಂದೀಪ ಭಂಡಾರ್ಕಾರ್, ಅನ್ನದಾನದ ಸೇವಾಕರ್ತರಾದ ಮಾಧವ ಮೊಗವೀರ ಉಪಸ್ಥಿತರಿದ್ದರು. ಹಾಡಿಗರಡಿ ದೈವಸ್ಥಾನ ದೈವಸ್ಥಾನ ಸಮಿತಿಯ ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೊಸಾಡು ಗ್ರಾಮದ ಅರಾಟೆಯ ಸುಬ್ರಹ್ಮಣ್ಯ ಭಜನಾ ಮಂಡಳಿಯ ಉದ್ಘಾಟನೆ ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಂಗಮಂಟಪದಲ್ಲಿ ನಡೆಯಿತು. ಹಿರಿಯ ಭಜನಾ ಕಲಾವಿದ ಕೃಷ್ಣ ಮೊಗವೀರ ನೂತನ ಭಜನಾ ಮಂಡಳಿಯನ್ನು ಉದ್ಘಾಟಿಸಿದರು. ಎಂ. ಎಂ. ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲ್ಲೂಕು ಭಜನಾ ಮಂಡಳಿಗಳ ಸಮಿತಿ ಅಧ್ಯಕ್ಷ ಜಯಕರ ಪೂಜಾರಿ ಗುಲ್ವಾಡಿ, ವಂಡ್ಸೆ ವಲಯ ಅಧ್ಯಕ್ಷ ವಸಂತ ಶೆಟ್ಟಿ ದೇವಲ್ಕುಂದ, ರಘು ಶೆಟ್ಟಿ ಅರಾಟೆ, ಅರಾಟೆ ಸುಬ್ರಹ್ಮಣ್ಯ ಭಜನಾ ಮಂಡಳಿಯ ಅಧ್ಯಕ್ಷ ಸುರೇಶ ಪೂಜಾರಿ, ಕಾರ್ಯದರ್ಶಿ ರಾಮ ಪೂಜಾರಿ ಇದ್ದರು. ಶಶಿಕಲಾ ಸ್ವಾಗತಿಸಿದರು. ಸ್ವಾತಿ ಪ್ರದೀಪ್ ಆಚಾರ್ಯ ಪ್ರಾಸ್ತವಿಕವಾಗಿ ಮಾತನಾಡಿದರು. ಸ್ಮಿತಾ ರಾಘವೇಂದ್ರ ಆಚಾರ್ಯ ನಿರೂಪಿಸಿದರು. ರೇಖಾ ಸತೀಶ್ ನಾಯ್ಕ್ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಬೈಂದೂರು ಶಾಖೆಯು ನೂತನ ಕಟ್ಟಡ ಮಂಜುಶ್ರೀ ಬಿಲ್ಡಿಂಗ್ಗೆ ಸ್ಥಳಾಂತರ ಸಮಾರಂಭ ಜರುಗಿತು. ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಬ್ಯಾಂಕಿನ ಮಂಗಳೂರು ಪ್ರಾದೇಶಿಕ ಕಛೇರಿಯ ವ್ಯವಸ್ಥಾಪಕರಾದ ಸೂರ‍್ಯನಾರಾಯಣ ರಾವ್ ವಹಿಸಿದ್ದರು. ಬ್ಯಾಂಕಿನ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಮತ್ತು ಶಾಖೆಯ ಪ್ರಗತಿ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕಟ್ಟಡದ ಮಾಲೀಕರಾದ ಮಂಜುನಾಥ ಶೆಟ್ಟಿ ಮಾತನಾಡಿ, ಬ್ಯಾಂಕಿನ ಸೇವೆಯನ್ನು ಕೊಂಡಾಡಿದರು ಮತ್ತು ಸಾರ್ವಜನಿಕರಿಗೆ ಈ ಬ್ಯಾಂಕಿನಲ್ಲಿ ತಮ್ಮ ವ್ಯವಹಾರ ನಡೆಸುವಂತೆ ಹೇಳಿದರು. ಮತ್ತೋರ್ವ ಮುಖ್ಯ ಅತಿಥಿಗಳಾದ ವಿಠಲರವರು ಆರ್ಥಿಕ ಸಾಕ್ಷರತೆಯ ಬಗ್ಗೆ ವಿಸ್ತೃತ ಮಾಹಿತಿ ನೀಡಿ ಜನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಶಾಖೆಯ ಭದ್ರತಾ ಕೋಶದ ಸೌಲಭ್ಯ ಉದ್ಘಾಟಿಸಿ ಸಾಂಕೇತಿಕವಾಗಿ ಕೀಲಿಕೈ ಗ್ರಾಹಕರಿಗೆ ಹಸ್ತಾಂತರಿಸಲಾಯಿತು. ಗುರುನಾಥ ಭಟ್ ನಿರೂಪಿಸಿದರು. ಶಾಖಾ ವ್ಯವಸ್ಥಾಪಕರಾದ ಸುರೇಶ್ ಕುಮಾರ್ ಉಪಾಧ್ಯ ಸ್ವಾಗತಿಸಿ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು, ಆಳ್ವಾಸ್ ಎನ್‌ಸಿಸಿ ಘಟಕ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಹಯೋಗದೊಂದಿಗೆ ನಡೆದ 3 ದಿನಗಳ ಕ್ಯಾಂಪ್‌ನ ಸಮಾರೋಪ ಸಮಾರಂಭ ಇತ್ತೀಚೆಗೆ ಮಿಜಾರ್‌ನಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಮಂಗಳೂರು ಗ್ರೂಪ್ ಹೆಡ್‌ಕ್ವಾರ್ಟರ‍್ಸ್‌ನ ಗ್ರೂಪ್ ಕಮಾಂಡರ್ ಕರ್ನಲ್ ಎ.ಕೆ. ಶರ್ಮ, ಪ್ರತಿಯೊಬ್ಬರೂ ಇನ್ನೊಬ್ಬರ ಕುರಿತು ಕಾಳಜಿವಹಿಸುವ ಮನಸ್ಥಿತಿ ಬೆಳೆಸಿಕೊಳ್ಳಬೇಕು. ಅಲ್ಲದೆ ಸಹಾನುಭೂತಿ, ಭರವಸೆ, ಧೈರ್ಯದಿಂದ ಜೀವನ ನಡೆಸಬೇಕು ಎಂದರು. ಜೀವನದಲ್ಲಿ ಸಾವಿರ ಸಮಸ್ಯೆಗಳು ಬಂದರು ಅದನ್ನು ತಾಳ್ಮೆಯಿಂದ ಎದುರಿಸಿ, ಇತರರ ಸಮಸ್ಯೆಗೂ ಸ್ಪಂದಿಸುವ ಹೃದಯ ಶ್ರೀಮಂತಿಕೆ ಹೊಂದಿರಬೇಕು ಎಂದರು. ನಂತರ ಮಾತಾನಾಡಿದ ಆಳ್ವಾಸ್ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಎನ್‌ಸಿ.ಸಿ. ಕೆಡೆಟ್ ಆಗಿರುವಾಗ ಮಾತ್ರ ಶಿಸ್ತನ್ನು ಪಾಲಿಸದೇ ಇತರ ಸಂದರ್ಭಗಳಲ್ಲಿಯೂ ಶಿಸ್ತನ್ನು ಕಾಪಾಡಬೇಕು. ಯಾವಾಗ ನಾವು ನಮ್ಮ ಸ್ವಂತ ಬುದ್ಧಿ ಶಕ್ತಿಯನ್ನು ಉಪಯೋಗಿಸುವುದಿಲ್ಲವೋ, ಆವಾಗ ನಾವು ನಮ್ಮತನವನ್ನು ಕಳೆದುಕೊಳ್ಳುತ್ತವೆ. ಈ ಮೂರು ದಿನಗಳ ಕ್ಯಾಂಪ್‌ನಲ್ಲಿs ಸಿದ್ದಾಂತದ ಕಲಿಕೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೇರಂಜಾಲಿನ ರಜತಾದ್ರಿ ಫಾರ್ಮ್‌ನಲ್ಲಿ ಜೇನು ಸಾಕಣೆ ಪರಿಣತ ಉದಯಶಂಕರ ಭಟ್ ಅವರು 50 ಜೇನು ಪೆಟ್ಟಿಗೆಗಳೊಂದಿಗೆ ಆರಂಭಿಸಿರುವ ಪರಾಗ ಜೇನು ಸಾಕಣೆ ಘಟಕದ ಉದ್ಘಾಟನೆ ಇತ್ತಿಚಿಗೆ ನಡೆಯಿತು. ಹಿರಿಯ ತೋಟಗಾರಿಕಾ ಅಧಿಕಾರಿ ಕುಚೇಲಯ್ಯ ಮಾತನಾಡಿ, ಜೇನು ಸಾಕಣೆಯಿಂದ ಮನುಷ್ಯನ ಆರೋಗ್ಯ ರಕ್ಷಣೆಗೆ, ಔಷಧಕ್ಕೆ ಅಗತ್ಯವಿರುವ ಜೇನು ಸಿಗುತ್ತದೆ. ಅದು ಪ್ರಕೃತಿಯ ಉಳಿವು ಮತ್ತು ಸಮೃದ್ಧಿಗೂ ಕಾರಣವಾಗುತ್ತದೆ. ಕೃಷಿಯ ಜತೆಗೆ ಜೇನು ಸಾಕುವುದರಿಂದ ರೈತರ ಆದಾಯ ಹೆಚ್ಚುತ್ತದೆ ಎಂದು ಹೇಳಿದರು. ಅತಿಥಿ, ಕೃಷಿ ಅಧಿಕಾರಿ ಪರಶುರಾಮ ಮಾತನಾಡಿ, ಜೇನುನೊಣಗಳು ಹೂವುಗಳಿಂದ ಮಕರಂದ ಸಂಗ್ರಹಿಸುವಾಗ ಪರಾಗ ಸ್ಪರ್ಷ ಏರ್ಪಟ್ಟು ಕೃಷಿಯ ಫಲವರ್ಧನೆ ಆಗುತ್ತದೆ. ಅದಕ್ಕಾಗಿ ಜೇನನ್ನು ರೈತಮಿತ್ರ ಕೀಟ ಎಂದು ಪರಿಗಣಿಸಲಾಗುತ್ತದೆ. ತೋಟಗಳಲ್ಲಿ ಜೇನು ಸಾಕಣೆ ಮಾಡುವುದರಿಂದ ಅಲ್ಲಿ ಹೆಚ್ಚು ಫಸಲು ದೊರೆತು, ರೈತರಿಗೆ ಲಾಭವಾಗುತ್ತದೆ ಎಂದರು. ಫಾರ್ಮ್ ಮಾಲೀಕ ಸುಧೀರ ರಾವ್ ಅಧ್ಯಕ್ಷತೆ ವಹಿಸಿದ್ದರು. ಜೇನು ಕೃಷಿ ಕುರಿತು ಮಾರ್ಗದರ್ಶನ ನೀಡಿದ ಪರಿಣತ ಉದಯಶಂಕರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತ್ರಾಸಿ ಬಳಿಯ ಹೊಸಾಡು ಗ್ರಾಮೀಣ ಪ್ರದೇಶದಲ್ಲಿ ಹತ್ತು ವರ್ಷಗಳಿಂದ ವಿದ್ಯಾದಾನ ಮಾಡುತ್ತಿರುವ ಡಾನ್ ಬೋಸ್ಕೊ ಸ್ಕೂಲ್‌ಗೆ ಸೀನಿಯರ್ ಸೆಕೆಂಡರಿ ಸ್ಕೂಲ್ ಆಗಿ ಮೇಲ್ದರ್ಜೆಗೇರಲು ಅನುಮೋದನೆ ದೊರೆತಿದೆ. ಇದರಿಂದ ಸುತ್ತಲಿನ ಹತ್ತಾರು ಹಳ್ಳಿ ಮತ್ತು ಪಟ್ಟಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳಿಗೆ ಸಿಬಿಎಸ್‌ಸಿ ಪಠ್ಯಕ್ರಮದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣ ಪಡೆಯುವ ಅವಕಾಶ ಲಭಿಸಿದೆ ಎಂದು ಶಾಲೆಯ ಮುಖ್ಯಸ್ಥ ಫಾ. ಮ್ಯಾಕ್ಸಿಮ್ ಡಿಸೋಜ ತಿಳಿಸಿದ್ದಾರೆ. ಉತ್ತಮ ಶೈಕ್ಷಣಿಕ ಸಾಧನೆಯಿಂದ ಜನಮೆಚ್ಚುಗೆ ಗಳಿಸಿರುವ ಈ ಸಂಸ್ಥೆ ಇದೀಗ ದಶಮಾನೋತ್ಸವ ಆಚರಣೆಯ ಹೊಸ್ತಿಲಲ್ಲಿ ನಿಂತಿದೆ. ಈ ಸಂಸ್ಥೆಯಿಂದ ಸಿಬಿಎಸ್‌ಸಿಯ ಹತ್ತನೆ ತರಗತಿ ಪರೀಕ್ಷೆ ಎದುರಿಸಿದ ನಾಲ್ಕು ತಂಡಗಳು ಶೇ100 ಫಲಿತಾಂಶ ದಾಖಲಿಸಿವೆ. ಸಂಸ್ಥೆ ಇದೀಗ ಸೀನಿಯರ್ ಸೆಕೆಂಡರಿ ಸ್ಕೂಲ್ ದರ್ಜೆಗೇರಿರುವ ಕಾರಣ ಬೈಂದೂರು ಮತ್ತು ಕುಂದಾಪುರ ತಾಲ್ಲೂಕುಗಳ ಮಕ್ಕಳಿಗೆ ಹೊಸ ಅವಕಾಶದ ಬಾಗಿಲು ತೆರೆದಂತಾಗಿದೆ. ಇಲ್ಲಿ ಸಿಬಿಎಸ್‌ಸಿ 12ನೇ ತರಗತಿ ತನಕ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಶಿಕ್ಷಣ ಪಡೆಯುವ ಅವಕಾಶ…

Read More