ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಭಾರತೀಯ ರೆಡ್ಕ್ರಾಸ್ ಸೊಸೈಟಿ, ಕುಂದಾಪುರ ಘಟಕ, ಕಾಲೇಜಿನ ಯುವ ರೆಡ್ಕ್ರಾಸ್ ಘಟಕ ಹಾಗೂ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ಪ್ರಥಮ ಚಿಕಿತ್ಸೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಇದೇ ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ತರಬೇತುದಾರರಾದ ಡಾ| ಸೋನಿ, ಡಾ| ಕೀರ್ತಿಪಾಲನ್ ಹಾಗೂ ಅಲ್ಡ್ರಿನ್ರವರು ಪ್ರಥಮ ಚಿಕಿತ್ಸೆ ಕುರಿತು ಪ್ರಾಯೋಗಿಕವಾಗಿ ತರಬೇತಿ ನೀಡಿದರು. ಮುಖ್ಯ ಅತಿಥಿ, ಕುಂದಾಪುರ ಭಾರತೀಯ ರೆಡ್ಕ್ರಾಸ್ ಘಟಕದ ಅಧ್ಯಕ್ಷರಾದ ಜಯಕರ್ ಶೆಟ್ಟಿ ಮಾತನಾಡಿ, ಯಾವ ಸಂದರ್ಭದಲ್ಲಿ ಯಾವ ರೀತಿಯ ಪ್ರಥಮ ಚಿಕಿತ್ಸೆಯ ಅಗತ್ಯವಿದೆ ಎನ್ನುವುದರ ಕುರಿತಾದ ತಿಳುವಳಿಕೆ ಅವಶ್ಯಕ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಭಾರತೀಯ ರೆಡ್ಕ್ರಾಸ್ ಘಟಕದ ಖಜಾಂಚಿ ಶಿವರಾಮ್ ಶೆಟ್ಟಿ ಹಾಗೂ ಕಾರ್ಯಕ್ರಮ ಅಧಿಕಾರಿ ಮುತ್ತಯ್ಯ ಶೆಟ್ಟಿ ಉಪಸ್ಥಿತರಿದ್ದರು. ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಶಿವರಾಜ್ ಸಿ.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಸ್ವಚ್ಛತೆಯನ್ನು ನಮ್ಮದಾಗಿಸಿಕೊಳ್ಳಬೇಕು ಹಾಗೂ ಅದನ್ನು ಕಾಪಾಡಿಕೊಳ್ಳಲು ಸರಿಯಾದ ಕ್ರಮ ತೆಗೆದುಕೊಳ್ಳುವುದು ಅಗತ್ಯ ಎಂದು ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಅಡಿಶ್ನಲ್ ಪ್ರಾಧ್ಯಾಪಕರಾದ ಡಾ| ಅಶ್ವಿನಿ ಕುಮಾರ್ ಹೇಳಿದರು. ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ರಾಧಾಬಾಯಿ ಸಭಾಂಗಣದಲ್ಲಿ ಕಾಲೇಜಿನ ಯುತ್ ರೆಡ್ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ ಮತ್ತು ರಸಾಯನಶಾಸ್ತ್ರ ವಿಭಾಗಗಳ ಸಹಯೋಗದಲ್ಲಿ ಕೋವಿಡ್-19 ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಮಾಂಸಹಾರ ತಿನ್ನುವುದರಿಂದ ಯಾವುದೇ ಕಾಯಿಲೆ ಅಥವಾ ಕೊರೊನಾ ವೈರಸ್ ಬರುವ ಸಾಧ್ಯತೆ ಇಲ್ಲ. ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದಲ್ಲದೇ ದೇಶದ ಶುಚಿತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ| ಎನ್.ಪಿ.ನಾರಾಯಣ ಶೆಟ್ಟಿ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ರಸಾಯನಶಾಸ್ತ್ರ ವಿಭಾಗ ಮುಖ್ಯಸ್ಥರಾದ ನಿಶಾ, ಯುಥ್ ರೆಡ್ಕ್ರಾಸ್ ವಿಂಗ್ ಅಧಿಕಾರಿ ಪ್ರೊ.ಸತ್ಯನಾರಾಯಣ, ಮತ್ತು ಮತ್ತು ಎನ್.ಎಸ್.ಎಸ್ ಅಧಿಕಾರಿ ಅರುಣ ಎ.ಎಸ್.ಉಪಸ್ಥಿತರಿದ್ದರು. ಯುಥ್ ರೆಡ್ಕ್ರಾಸ್ ವಿಂಗ್ ಅಧಿಕಾರಿಣಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶುಮಂದಿರದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಬೈಂದೂರು ಮತ್ತು ಸೇವಾ ಸಂಗಮ ಶಿಶುಮಂದಿರದ ಮಾತೃ ಮಂಡಳಿಯ ಸಹಯೋಗದಲ್ಲಿ ಇನ್ನರ್ ವ್ಹಿಲ್ ಕ್ಲಬ್ನ ಹಿರಿಯ ಸದಸ್ಯರಾದ ಸೀತಾ ಶ್ರೀನಿವಾಸ್ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸನ್ಮಾನಗೊಂಡ ಸೀತಾ ಶ್ರೀನಿವಾಸ್ ಮಾತನಾಡಿ ಮಹಿಳೆಯರಿಗೆ ವಿದ್ಯಾಭ್ಯಾಸದ ಅಗತ್ಯತೆಯ ಬಗ್ಗೆ ತಿಳಿಸಿದರು. ಇನ್ನರ್ ವ್ಹಿಲ್ ಕ್ಲಬ್ನ ಅಧ್ಯಕ್ಷೆ ನಾಗರತ್ನ ಮಂಜುನಾಥ್ ಶೆಟ್ಟಿ ಸ್ವಾಗತಿಸಿ, ಮಹಿಳೆಯರಿಗೆ ಪ್ರಶಕ್ತ ಸಮಾಜದಲ್ಲಿ ತಮ್ಮ ಹಕ್ಕು ಭಾದ್ಯತೆಗಳನ್ನು ಪಡೆದುಕೊಳ್ಳುವ ಬಗ್ಗೆ ಜಾಗ್ರತೆ ಮೂಡಿಸಿದರು. ಸ್ಥಾಪಕಾಧ್ಯಕ್ಷೆ ಚಂದ್ರಕಲಾ ಶೆಟ್ಟಿಯವರು ನಮ್ಮ ಸಂಸ್ಕ್ರತಿ, ಸಂಸ್ಕಾರವನ್ನು ಉಳಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಸೇವಾಸಂಗಮದ ಮಾತಾಜೀ ಸುಮನ, ಆಶಾ ಮತು ಭಾನುಮತಿ ಉಪಸ್ಥಿತರಿದ್ದರು. ಕಾರ್ಯದರ್ಶಿ ಲತಿಕಾ ನಂಬಿಯಾರ್ರವರು ಕಾರ್ಯಕ್ರಮ ನಿರೂಪಿಸಿದರು. . I. S. O. ಉಷಾ ಹೆಗ್ಡೆಯವರು ಧನ್ಯವಾದ ಸಮರ್ಪಣೆ ಮಾಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಕೊಂಕಣಿ ಖಾರ್ವಿ ಸಮಾಜದ ಅಭಿವೃದ್ಧಿ ದೃಷ್ಟಿಯಿಂದ ಹುಟ್ಟಿದ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಸುಧೀರ್ಘ ಇತಿಹಾಸ ಹೊಂದಿದೆ. ಸರಕಾರದ ಸೌಲಭ್ಯಗಳನ್ನು ಕಟ್ಟಕಡೆಯ ಮೀನುಗಾರ ಕುಟುಂಬಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಉತ್ತಮ ದಕ್ಷ, ಪಾರದಕ್ಷಕ ಆಡಳಿತದ ಮೂಲಕ ಸಂಸ್ಥೆಯನ್ನು ಸದೃಢವಾಗಿ ಬೆಳೆಸಲಾಗುವುದು. ಮೀನುಗಾರರ ಏಳಿಗೆ ಹಾಗೂ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ನೂತನ ಅಧ್ಯಕ್ಷ ಸದಾಶಿವ ಖಾರ್ವಿ ಹೇಳಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘದ ಕಛೇರಿಯಲ್ಲಿ ಬುಧವಾರ ಜರಗಿದ ಅಭಿನಂದನಾ ಸಭೆಯಲ್ಲಿ ಅವರು ಮಾತನಾಡಿದರು. ಸಂಘದ ಸದಸ್ಯರಿಗೆ ಚಿನ್ನಾಭರಣ ಸಾಲ ಹಾಗೂ ಮುಚ್ಚಿರುವ ಡೀಸೆಲ್ ಬಂಕ್ ಪುನರಾರಂಭಕ್ಕೆ ಆದ್ಯತೆ ನೀಡಲಾಗುವುದು. ಇತರ ಆರ್ಥಿಕ ಸಂಸ್ಥೆಗಳ ಪೈಪೋಟಿ ನಡುವೆಯೂ ಸಂಘದ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ, ಸಂಘದ ಸದಸ್ಯರ ನಂಬಿಕೆ, ವಿಶ್ವಾಸಕ್ಕೆ ಯಾವುದೇ ಚ್ಯುತಿ ಬಾರದಂತೆ ಎಲ್ಲಾ ಹಿರಿಯ ಸಹಕಾರಿಗಳ ಮಾರ್ಗದರ್ಶ ಪಡೆದು ಕಾರ್ಯನಿರ್ವಹಿಸುವುದಾಗಿ ಅವರು ಭರವಸೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವಿದ್ಯಾರ್ಥಿಗಳಿಗೆ ತಮ್ಮ ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಲು ಉಪಯೋಗವಾಗುವಂತಹ ವೇದ ಗಣಿತದ ಸೂತ್ರಗಳಾದ ಎಕಾಧಿಕೇನ, ಪೂರ್ವೇಣ, ಏಕನ್ಯೂನೇನ ಪೂರ್ವೇಣ, ಯುವಧನಂ, ನಿಖಿಲಂ, ನವತಾಶ್ಚರ್ಮಾಮ್ ದಶತಾಹ್ವನ್ನು ಹಾಗೂ ವೇದಗಣಿತದ ಮಹತ್ವದ ಬಗ್ಗೆ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕೊಟೇಶ್ವರದ ಗಣಿತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಮತಿ ಅಡಿಗರವರು ವಿವರಿಸಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೈಂದೂರಿನ ಗಣಿತಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಮತ್ತು ಭರವಶಾ ಕೋಶ ಏರ್ಪಡಿಸಿದ ವೇದಗಣಿತ ತರಬೇತಿ ಕಾರ್ಯಗಾರ ಉದ್ದೇಶಿಸಿ ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ.ಅಶ್ವತ್ಥ ದೇವರಾಯ ನಾಯ್ಕ ಉಪಸ್ಥಿತರಿದ್ದರು. ಗಣಿತಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಕು. ಪ್ರೀಯಾ ಜೋಸೆಫ್ರವರು ಸ್ವಾಗತಿಸಿದರು. ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿನಿಯಾದ ಮೈತ್ರಿಯವರು ಕಾರ್ಯಕ್ರಮ ನಿರೂಪಿಸಿದರು. ಗಣಿತಶಾಸ್ತ್ರ ವಿಭಾಗ ಮುಖ್ಯಸ್ಥರಾದ ಕು. ಸಂಗೀತಾ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಉತ್ತಮ ಬರಹಗಾರನಾಗಲು ತಾಳ್ಮೆ ಅತೀ ಅಗತ್ಯ. ಪ್ರತಿಯೊಂದು ವಿಷಯದ ಕುರಿತು ಕೂಲಂಕುಷವಾಗಿ ಚಿಂತನೆ ನಡೆಸಿ, ತದನಂತರದಲ್ಲಿ ಆ ವಿಚಾರವನ್ನು ಬರಹದ ರೂಪದಲ್ಲಿ ಮಂಡಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಡಾ. ಎ.ಎಂ. ಖಾನ್ ಹೇಳಿದರು. ಇವರು ಆಳ್ವಾಸ್ ಕಾಲೇಜಿನಲ್ಲಿ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ( ಮಾಮ್) ವತಿಯಿಂದ ನಡೆದ ೨೦೧೮-೧೯ನೇ ಸಾಲಿನ ಮಾಮ್ ಇನ್ಸ್ಪೈರ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದರು. ರಚನಾತ್ಮಕ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿಯೊಬ್ಬರ ಕೊಡುಗೆ ಅತ್ಯಗತ್ಯ. ಆದರೆ ಆಧುನಿಕತೆಯ ಭರದಲ್ಲಿ ಸಾಗುತ್ತಿರುವ ಇಂದಿನ ಜಗತ್ತಿನಲ್ಲಿ ಯುವಜನಾಂಗ ಎಲ್ಲೋ ಹಳಿ ತಪ್ಪಿ ನಡೆಯುತ್ತಿದೆ. ಇಂತಹವರನ್ನು ಸರಿಯಾದ ದಾರಿಯಲ್ಲಿ ನಡೆಸಿ ಉತ್ತಮ ಸಮಾಜ ನಿರ್ಮಾಣ ಮಾಡುವುದು ಮಾಧ್ಯಮದ ಜವಬ್ದಾರಿ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಮೋಹನ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಸಂಕುಚಿತ ಮನೋಭಾವನೆಯಿಂದ ದೂರವಿರಬೇಕು. ಆಗ ಮಾತ್ರ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಯಶಸ್ಸು…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಂಸ್ಥೆಯ ಸಹಯೋಗದೊಂದಿಗೆ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಸಿಎ,ಸಿಎಸ್ ಫೌಂಡೇಶನ್ ತರಬೇತಿ ತರಗತಿಗಳ ಉದ್ಘಾಟನೆ ನೆರವೇರಿತು. ತರಗತಿಗಳು ಮಾರ್ಚ್ 23 ರಿಂದ ಆರಂಭಗೊಳ್ಳಲಿವೆ. ಈ ಸಂದರ್ಭದಲ್ಲಿ ಅಖಿಲ ಭಾರತ ಸಿಎ ಫೌಂಡೇಶನ್ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅದ್ಯಕ್ಷತೆಯನ್ನು ವಹಿಸಿದ್ದ ಶ್ರೀ ವೆಂಕಟರಮಣ ದೇವ ಶೈಕಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಕಾರ್ಯದರ್ಶಿಗಳಾದ ಕೆ ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಎಂ.ಐ.ಟಿ. ಮಣಿಪಾಲ ಇದರ ಸಹನಿರ್ದೇಶಕರಾದ ಕೆ ನಾರಾಯಣ ಶೆಣೈ ಮುಖ್ಯ ಅತಿಥಿಗಳಾಗಿದ್ದು, ಶಿಕ್ಷಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜ್ಯುಕೇಶನ್ ಸಂಸ್ಥೆಯ ಮುಖ್ಯಸ್ಥರಾದ ಭರತ್ ಶೆಟ್ಟಿ, ಶ್ರೀ ವೆಂಕಟರಮಣ ದೇವ ಶೈಕಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ ನ ಖಜಾಂಚಿ ಕೆ. ಲಕ್ಷ್ಮಿನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ, ಪ್ರೌಢಶಾಲಾ ಮುಖ್ಯಸ್ಥರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಜಿಲ್ಲೆಯಲ್ಲಿ ಹೊಸ ತಾಲೂಕು ರಚನೆಯಿಂದಾಗಿ ಹಳ್ಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ, ಕಮಲಶಿಲೆ ಗ್ರಾಮವನ್ನು, ಕುಂದಾಪುರ ತಾಲೂಕಿನ ಆರ್ಜಿ ಗ್ರಾಮ ಪಂಚಾಯತ್ಗೆ ಸೇರ್ಪಡೆಗೊಳಿಸುವ ಬಗ್ಗೆ ಸರ್ಕಾರದ ಪತ್ರದಲ್ಲಿ ಅನುಮೋದನೆ ನೀಡಲಾಗಿರುತ್ತದೆ. ಅದರಂತೆ ಕಮಲಶಿಲೆ ಗ್ರಾಮವನ್ನು ಆರ್ಜಿ ಗ್ರಾಮ ಪಂಚಾಯತ್ಗೆ ಸೇರ್ಪಡೆಗೊಳಿಸುವ ಬಗ್ಗೆ ಕರಡು ಅಧಿಸೂಚನೆಯನ್ನು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 4 ರಂತೆ ಹೊರಡಿಸಲಾಗಿದ್ದು, ಈ ಅಧಿಸೂಚನೆ ಪ್ರಕಟಿಸಿದ 30 ದಿನಗಳ ಒಳಗೆ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿಗೆ ಕಚೇರಿಗೆ ಆಕ್ಷೇಪಣೆ ಸಲ್ಲಿಸುವಂತೆ, ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಲೇಖನ. ಗ್ರಾಮ ಸರ್ಕಾರವನ್ನು ಸ್ಥಳೀಯ ಸ್ವಯಂ ಸರ್ಕಾರವಾಗಿ ರೂಪಿಸುವ ಮೂಲಕ ಗ್ರಾಮ ಸ್ವರಾಜ್ಯದ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವ ಬದಲು ಗ್ರಾಮ ಪಂಚಾಯತ್ ಮತ್ತು ಗ್ರಾಮಸಭೆಯ ಅಧಿಕಾರವನ್ನು ಕಿತ್ತುಕೊಂಡು ಇಡೀ ಪಂಚಾಯತ್ ರಾಜ್ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹೊರಟಿರುವ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ನಡೆಗಳನ್ನು ಗ್ರಾಮ ಪಂಚಾಯತ್ ಹಕ್ಕೊತ್ತಾಯ ಆಂದೋಲನವು ತೀವ್ರವಾಗಿ ಖಂಡಿಸುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ಕೆಲವು ಮುಖ್ಯ ತೀರ್ಮಾನಗಳನ್ನು ತೆಗೆದುಕೊಳ್ಳಲು ಮುಂದಾಗಿದೆ ಎಂದು ಕಳೆದ ಕೆಲವು ದಿನಗಳಿಂದ ಪತ್ರಿಕೆಯಲ್ಲಿ ವರದಿಯಾಗಿದೆ. ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯದೆ 1993ಕ್ಕೆ ತಿದ್ದುಪಡಿ ತರಲು ಬುಧುವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿರುವುದಾಗಿ ವರದಿಯಾಗಿದೆ. ತಿದ್ದುಪಡಿ ತರಬೇಕಾದ ಸುಮಾರು 20 ಅಂಶಗಳ ಬಗ್ಗೆ ಪಂಚಾಯತ್ ರಾಜ್ ಇಲಾಖೆ ಪ್ರಸ್ಥಾವನೆ ಸಿದ್ಧಪಡಿಸಿ ಕಾನೂನು ಇಲಾಖೆಗೆ ಅಭಿಪ್ರಾಯ ನೀಡುವಂತೆ ಸೂಚಿಸಿದ್ದು, ಸಂಪುಟದ ಸೂಚನೆಯ ಮೇರೆಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಅಧ್ಯಕ್ಷತೆಯಲ್ಲಿ ನಡೆದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ: ಗಂಗೊಳ್ಳಿಯ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಕ್ಕೆ ಮುಂದಿನ ಐದು ವರ್ಷ ಅವಧಿಗೆ ಅಧ್ಯಕ್ಷರಾಗಿ ಸದಾಶಿವ ಖಾರ್ವಿ ಕಂಚುಗೋಡು ಮತ್ತು ಉಪಾಧ್ಯಕ್ಷರಾಗಿ ಸೂರಜ್ ಖಾರ್ವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಸಭಾಂಗಣದಲ್ಲಿ ಬುಧವಾರ ಬೆಳಿಗ್ಗೆ ಜರಗಿದ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಸಂದರ್ಭ ಅಧ್ಯಕ್ಷ ಸ್ಥಾನಕ್ಕೆ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸೂರಜ್ ಖಾರ್ವಿ ನಾಮಪತ್ರ ಸಲ್ಲಿಸಿದ್ದರಿಂದ ಇವರಿಬ್ಬರು ಕ್ರಮವಾಗಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಸಹಕಾರ ಸಂಘಗಳ ಹಿರಿಯ ನಿರೀಕ್ಷಕ ಸುನೀಲ್ ಕುಮಾರ್ ಸಿ.ಎಂ. ಘೋಷಿಸಿದರು. ಮಾ.1ರಂದು ನಡೆದಿದ್ದ ಸಂಘದ ಮುಂದಿನ ಐದು ವರ್ಷ ಅವಧಿಗೆ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯಲ್ಲಿ ಸದಾಶಿವ ಖಾರ್ವಿ ಸಾಮಾನ್ಯ ಕ್ಷೇತ್ರದಿಂದ ಚುನಾಯಿತರಾಗಿದ್ದರು. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿರುವ ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಡಲ ಕಾರ್ಯವಾಹರಾಗಿ, ಬಿಜೆಪಿ ತ್ರಾಸಿ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಬಿಜೆಪಿ ಬೈಂದೂರು ಮಂಡಲದ…
