ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮೊದಲ ಕಂಬಳ ಬೈಂದೂರು ತಾಲೂರು ಕೊಡೇರಿ ಗ್ರಾಮದ ಪಟೇಲರ ಮನೆ ಕಂಬಳಗದ್ದೆಯಲ್ಲಿ ಜರುಗಿತು. ಏಕಲವ್ಯ ಕಂಬಳ ಸಮಿತಿಯು ಬೈಂದೂರು ತಾಲೂಕು ಕಂಬಳ ಸಮಿತಿ ಸಹಕಾರದೊಂದಿಗೆ ಶನಿವಾರ ವೈಭವದ ಕಂಬಳೋತ್ಸವ ಆಯೋಜಿಸಿತ್ತು. ೫೦ಕ್ಕೂ ಅಧಿಕ ಜೋಡಿ ಕೋಣಗಳು ಭಾಗವಹಿಸಿದ್ದರು. ಕಳೆದ ಹಲವಾರು ವರ್ಷಗಳಿಂದ ಪಟೇಲರ ಮನೆಯವರು ಈ ಕಂಬಳೋತ್ಸವನ್ನು ನಡೆಸಿಕೊಂಡು ಬಂದಿದ್ದು, ಕಾರಣಾಂತರಗಳಿಂದ ಈ ಆಚರಣೆ ನಿಂತುಹೋಗಿತ್ತು. ಇದನ್ನು ಮನಗಂಡ ಈ ಭಾಗದ ಕೆಲವು ಯುವಕರು ಸೇರಿಕೊಂಡು ಏಕಲವ್ಯ ಸಮಿತಿ ರಚಿಸಿಕೊಂಡು ಕಂಬಳವನ್ನು ಮುನ್ನೆಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷರಾಗಿ ಆಯ್ಕೆಯಾದ ಸಸಿಹಿತ್ಲು ವೆಂಕಟ ಪೂಜಾರಿ ಹಾಗೂ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಾಪ್ಕಾಮ್ಸ್ನ ನಿರ್ದೇಶಕ ಚೆನ್ನಕೇಶವ ಕಾರಂತ್ ಇವರನ್ನು ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ತಾಲೂಕು ಕಂಬಳ ಸಮಿತಿ ಉಪಾಧ್ಯಕ್ಷ ಪರಮೇಶ್ವರ ಭಟ್, ಶಿಕ್ಷಕ ಸತ್ಯನಾ ಕೊಡೇರಿ, ಪಟೇಲರ ಮನೆಯ ಸದಸ್ಯರು ಇದ್ದರು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘದ (ಟಿಎಪಿಸಿಎಂಎಸ್) ನಿರ್ದೇಶಕರಾಗಿ ಸಹಕಾರಿ ಧುರೀಣ, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ 4ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಕಳೆದ 25 ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಎಸ್. ರಾಜು ಪೂಜಾರಿಯವರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿ, ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾಗಿ, ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರ ಸಂಘದ (ಸ್ಕ್ಯಾಡ್ಸ್) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಲಯ ಎಸ್ಎಸ್ಎಫ್, ಇಂಡಿಯನ್ ರೆಡ್ಕ್ರಾಸ್ ಸೊಸೈಟಿಯ ಕುಂದಾಪುರ ಘಟಕ ಮತ್ತು ಉಡುಪಿ ಜಿಲ್ಲಾ ಬ್ಲಡ್ ಸೈಬೊ ಆಶ್ರಯದಲ್ಲಿ ನಾವುಂದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಶಾದಿ ಮಹಲ್ನಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರದ ಉದ್ಘಾಟನೆ ನಡೆಯಿತು. ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಮಾತನಾಡಿ, ರಕ್ತದಾನ ಮಾಡುವವರು ತಮ್ಮ ಧರ್ಮ, ಜಾತಿ, ಬಂಧುವರ್ಗಕ್ಕೆ ಸೇರಿರುವ ನಿರ್ದಿಷ್ಟ ವ್ಯಕ್ತಿಗಳನ್ನು ಗುರಿಯಾಗಿರಿಸಿಕೊಂಡು ರಕ್ತದಾನ ಮಾಡುವುದಿಲ್ಲ. ಅವರ ಉದ್ದೇಶ ರಕ್ತದ ಅಗತ್ಯ ಇರುವವರು. ಹಾಗಾಗಿ ರಕ್ತದಾನಿಗಳು ನಿಜವಾದ ಮಾನವತಾವಾದಿಗಳು ಎಂದು ಹೇಳಿದರು. ನಾವುಂದ ಜಮಾತ್ನ ಅಧ್ಯಕ್ಷ ಹಾಜಿ ತೌಫೀಕ್ ಅಬ್ದುಲ್ಲಾ ಅಧ್ಯಕ್ಷತೆ ವಹಿಸಿದ್ದರು. ಎಸ್ಎಸ್ಎಫ್ ಜಿಲ್ಲಾಧ್ಯಕ್ಷ ಶಬ್ಬೀರ್ ಸಖಾಫಿ ಶಿಬಿರವನ್ನು ಉದ್ಘಾಟಿಸಿ, ಕೊರೊನಾ ಸೋಂಕು ಹರಡಿರುವ ಕಾರಣ ರಕ್ತನಿಧಿಗಳಲ್ಲಿ ರಕ್ತದ ಕೊರತೆ ಕಂಡುಬರುತ್ತಿದೆ. ಎಸ್ಎಸ್ಎಫ್ ಸದಸ್ಯರು ಈ ಕೊರತೆ ನೀಗಲು ಮತ್ತೆಮತ್ತೆ ರಕ್ತದಾನ ಮಾಡಬೇಕು ಎಂದರು. ರೆಡ್ ಕ್ರಾಸ್ನ ವೈದ್ಯ ಪ್ರತಿನಿಧಿ ಡಾ. ಶರಣ್, ಅರ್ಹ ಜನರು ನಿಯತಕಾಲಿಕವಾಗಿ ರಕ್ತದಾನ ಮಾಡುವುದರಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಮಕ್ಕಳ ಸ್ನೇಹಿ ಪಂಚಾಯತ್ ಕಾರ್ಯಕ್ರಮದ ಭಾಗವಾಗಿ ನವೆಂಬರ್ 14 ರ ಮಕ್ಕಳ ದಿನದಿಂದ ಓದುವ ಬೆಳಕು ಅಭಿಯಾನವನ್ನು ಹಮ್ಮಿಕೊಂಡಿದೆ. ಮಕ್ಕಳಿಗೆ ಉಚಿತ ಸದಸ್ಯತ್ವ ನೀಡಿ ಪುಸ್ತಕಗಳನ್ನು ನೀಡಲಾಗುತ್ತಿದೆ. ಭಾರತ ಜ್ಞಾನ ವಿಜ್ಞಾನ ಸಮಿತಿಯ ರವಿ ಕಟ್ಕೆರೆ ಮಕ್ಕಳೊಂದಿಗೆ ಕೋಟೇಶ್ವರ ಪಂಚಾಯತ್ ಗೆ ಭೇಟಿ ನೀಡಿದರು. ಅಭಿವೃದ್ಧಿ ಅಧಿಕಾರಿಯವರಾದ ತೇಜಪ್ಪ ಕುಲಾಲ ಮಕ್ಕಳಿಗೆ ಪುಸ್ತಕ ನೀಡಿ ಓದುವ ಬೆಳಕು ಅಭಿಯಾನ ಆರಂಭಿಸಿದರು. ಗ್ರಂಥಪಾಲಕಿ ಶಾರದಾ ಎಲ್ಲ ಮಕ್ಕಳಿಗೂ ಉಚಿತ ಸದಸ್ಯತ್ವ ನೀಡಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಆಲೂರಿನ ಚಿತ್ರಕೂಟ ಆಯುರ್ವೇದ ಸಂಸ್ಥೆಯ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಬೈಂದೂರು ತಾಲೂಕಿನಾದ್ಯಂತ ‘ಶಿಶು ಪೋಷಕ್’ ಶಿಶುವಿನ ಆಹಾರವನ್ನು ಆಶಾ ಕಾರ್ಯಕರ್ತರ ಮೂಲಕ ಮನೆ ಮನೆಗೆ ತಲುಪಿಸಲಾಯಿತು. ಚಿತ್ರಕೂಟದ ಮುಖ್ಯಸ್ಥ ಡಾ ರಾಜೇಶ್ ಬಾಯಾರಿಯವರ ನೇತೃತ್ವದಲ್ಲಿ ಮರವಂತೆ, ಬೈಂದೂರು, ನಾಡ, ಆಲೂರು, ಚಿತ್ತೂರು, ಮಾರಣಕಟ್ಟೆಯ ಆಸುಪಾಸಿನ ಮಕ್ಕಳಿಗೆ ಶಿಶುವಿನ ಮಾನಸಿಕ ಹಾಗು ಬೌದ್ಧಿಕ ಬೆಳವಣಿಗೆಗೆ ಪೂರಕವಾಗುವಂತ ಶಿಶು ಆಹಾರವಾದ ಶಿಶುಪೋಷಕ್ ಆಹಾರವನ್ನು ವಿತರಿಸಲಾಯಿತು. ಏನಿದು ಶಿಶು ಪೋಷಕ್? ಮಾರುಕಟ್ಟೆಯಲ್ಲಿ ಬಹು ಬೇಡಿಕೆಯಿರುವ ಈ ಉತ್ಪನ್ನವು ಮಕ್ಕಳ ಆರೋಗ್ಯದಾಯಕ ಬೆಳವಣಿಗೆಗೆ ಸಹಕಾರಿಯಾಗಿದೆ. ಶಿಶು ಪೋಷಕ್ ಉತ್ಪನ್ನವು ಉತ್ತಮ ಗುಣಮಟ್ಟದ ಆಯ್ದ ಧಾನ್ಯಗಳಿಂದ ಸ್ವಚ್ಛ ಹಾಗು ಆರೋಗ್ಯಕರ ಪ್ರದೇಶಗಳಲ್ಲಿ ತಯಾರಿಸಲಾಗುತ್ತಿದೆ. ಶಿಶು ಪೋಷಕ್ 6 ತಿಂಗಳು ಮೇಲ್ಪಟ್ಟ ಮಕ್ಕಳಿಗೆ ನೀಡುವ ಅಹಾರವಾಗಿದ್ದು ಇದರಲ್ಲಿ ಯಾವುದೇ ರಾಸಾಯನಿಕ, ಸಂರಕ್ಷಕಗಳನ್ನು ಒಳಗೊಂಡಿಲ್ಲ. ಇದರಲ್ಲಿ ಬಳಸುವ ಏಕದಳ, ದ್ವಿದಳ ಧಾನ್ಯಗಳು, ಸಿರಿಧಾನ್ಯಗಳು ಸರಿಯಾದ ಪ್ರಮಾಣದಲ್ಲಿ ಒಳಗೊಂಡಿರುವುದು ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಟ್ಟು ಪ್ರಮಾಣೀಕರಿಸಲಾಗಿದ್ದು ಯಾವುದೇ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಜಿಲ್ಲೆಯ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ 27 ರ ಒಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ. ಸಂ: 0820-2574964 ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 6 ರಿಂದ 14 ವರ್ಷದೊಳಗಿನ ಪ್ರತಿಭಾವಂತ ಮಕ್ಕಳಿಗೆ ಚಿಗುರು ಕಾರ್ಯಕ್ರಮ, 15 ರಿಂದ 30 ವರ್ಷದೊಳಗಿನ ಪ್ರತಿಭಾವಂತ ಯುವ ಕಲಾವಿದರಿಗೆ ಯುವ ಸೌರಭ ಮತ್ತು ಆಕಾಶವಾಣಿ ಬಿ ಹೈಗ್ರೇಡ್ ಹಾಗೂ ಸರಕಾರದಿಂದ ನೀಡುವ ಪ್ರಶಸ್ತಿ ಪುರಸ್ಕೃತ ಕಲಾವಿದರಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ದೂ. ಸಂ: 0820-2986168 ಅನ್ನು ಸಂಪರ್ಕಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯ ಸರ್ಕಾರದ ಪರಿಸರ ನಿರ್ವಹಣೆ ಮತ್ತು ನೀತಿಯ ಸಂಶೋಧನಾ ಸಂಸ್ಥೆಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಅನುದಾನದ ಮೂಲಕ ದತ್ತು ಪಡೆದು ಇಲ್ಲಿನ ಸಮೀಪದ ಕೋಡಿ ಕಡಲ ಕಿನಾರೆಯ ಸೀವಾಕ್ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪರಿಸರ ವಿಭಾಗದ ಮಂಗಳೂರು ಹಾಗೂ ಉಡುಪಿ ಜಿಲ್ಲಾ ಪ್ರಾದೇಶಿಕ ನಿರ್ದೇಶಕ, ಅರಣ್ಯ ಇಲಾಖೆ ಡಿಸಿಎಫ್ ಡಾ.ದಿನೇಶ್ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಸತ್ಯಶ್ರೀ ಗೌತಮ್, ‘ಕಳೆದ ವರ್ಷ ಎರಡು ಜಿಲ್ಲೆಗಳ 6 ಸಮುದ್ರ ಕಿನಾರೆಗಳಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸಲಾಗಿತ್ತು. ಇದರ ಮುಂದುವರಿದ ಭಾಗವಾಗಿ ಕೋಡಿ ಕಿನಾರೆಯಲ್ಲಿ ಸ್ಚಚ್ಛತಾ ಕಾರ್ಯ ಆರಂಭಿಸಲಾಗಿದೆ. ಮಾರ್ಚ್ 31ರವರಿಗೆ ನಿತ್ಯವೂ ಸ್ವಚ್ಛತೆ ನಡೆಯಲಿದೆ ಎಂದು ತಿಳಿಸಿದರು. ಕೋಡಿ ಸೀವಾಕ್ ಸಮೀಪದ ಅರಣ್ಯ ಇಲಾಖೆ ಜಾಗದಲ್ಲಿ ‘ಬೀಚ್ ಇಕೋ ಪಾರ್ಕ್’ ಹಾಗೂ ’ಟ್ರೀ ಪಾರ್ಕ್’ ನಿರ್ಮಾಣವಾಗಲಿದೆ ಎನ್ನುವ ಮಾಹಿತಿಯನ್ನು ಅಧಿಕಾರಿಗಳು ನೀಡಿದರು. ಅರಣ್ಯ ಇಲಾಖೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ವಿಶ್ವ ಲಯನ್ಸ್ ಸೇವಾ ಸಪ್ತಾಹದ ಅಂಗವಾಗಿ ನಡೆಸಿರುವಂತಹ ರಿಲೀವ್ ದ ಹಂಗರ್ ಕಾರ್ಯಕ್ರಮದ ಅಂಗವಾಗಿ ಸಿಸಿಲಿ ಕೋಟ್ಯಾನ್ ರವರು ನಡೆಸಿಕೊಂಡು ಬರುತ್ತಿರುವ ಚೈತನ್ಯ ವೃದ್ಧಾಶ್ರಮಕ್ಕೆ ಅವಶ್ಯಕತೆ ಇರುವಂತಹ ಊಟದ ಅಕ್ಕಿಯನ್ನು ಲಯನ್ಸ್ ಕ್ಲಬ್ ಕುಂದಾಪುರ ವತಿಯಿಂದ ನೀಡಿರುತ್ತಾರೆ. ಲಯನ್ಸ್ ಕ್ಲಬ್ ಕುಂದಾಪುರದ ಅಧ್ಯಕ್ಷರಾದ ಲಯನ್ ಚಂದ್ರಶೇಖರ್ ಕಲ್ಪತರು, ಲಯನ್ ರಾಜೀವ್ ಕೋಟ್ಯಾನ್, ಲಯನ್ ನವೀನ್ ಕುಮಾರ್ ಶೆಟ್ಟಿ, ಲಯನ್ ವೇಣುಗೋಪಾಲ ಶೆಟ್ಟಿ ಹಾಗೂ ಸಂಸ್ಥೆಯ ಸಿಸಿಲಿ ಕೋಟ್ಯಾನ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಮಿಜಾರ್ನ ಶೋಭಾವನ ಕ್ಯಾಂಪಸ್ನ ‘ಆಳ್ವಾಸ್ ಪುನರ್ಜನ್ಮ’ಸಮಗ್ರ ವೈದ್ಯಕೀಯ ಚಿಕಿತ್ಸೆಯ ದುಶ್ಚಟ ನಿವಾರಣಾ ಕೇಂದ್ರದಲ್ಲಿ ’ಕುಟುಂಬ ಸಮ್ಮಿಲನ ಸಭೆ’ ಹಾಗೂ ದೀಪಾವಳಿ ಆಚರಣೆ ನಡೆಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಆಯುರ್ವೇದ ಮನೋರೋಗ ತಜ್ಞ ಡಾ. ರವಿ ಪ್ರಸಾದ ಹೆಗ್ಡೆ ಮಾತನಾಡಿ, ಹಲವು ಸಂಧರ್ಭದಲ್ಲಿ ಕುಡಿತ ಮನುಷ್ಯ ತಾನಾಗಿಯೆ ಕಲಿಯುವುದಲ್ಲ. ಇನ್ನೊಬ್ಬರ ಒತ್ತಾಯದಿಂದ ಕುಡಿಯುತ್ತಾನೆ. ನಂತರ ದಿನಗಳಲ್ಲಿ ಕುಡಿತ ಚಟವಾಗಿ ಮಾರ್ಪಟ್ಟು, ದುಡಿತ ಕಡಿಮೆಯಾಗಿ ಕುಡಿತ ಅಧಿಕವಾದಾಗ ಜೀವನ ನಡೆಸುವುದು ಕಷ್ಟವಾಗಿ ಬಿಡುತ್ತದೆ ಎಂದು ಹೇಳಿದರು. ಆಳ್ವಾಸ್ ಪದವಿ ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ ಮಧುಮಾಲ ಮಾತನಾಡಿ, ವ್ಯಸನಗಳಿಗೆ ಒಳಗಾಗಿದ್ದವರು, ವ್ಯಸನ ಮುಕ್ತರಾಗಬೇಕೆಂಬ ದೊಡ್ಡ ನಿರ್ಧಾರ ತೆಗೆದುಕೊಳ್ಳುವುದು ಚಿಕ್ಕ ವಿಷಯವಲ್ಲ. ಕುಡಿತದಿಂದ ಸಮಾಜದಲ್ಲಿ ಗೌರವ ಹಾಳಾಗುವುದರೊಂದಿಗೆ ಜನರು ಕೀಳಾಗಿ ನೋಡುತ್ತಾರೆ. ಕುಡಿತದಿಂದ ಪಡೆದು ಕೊಳ್ಳುವುದು ಎನೂ ಇಲ್ಲಾ, ಎಲ್ಲವೂ ಕಳೆದು ಕೊಳ್ಳುವುದೇ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೊನೆಯಲ್ಲಿ ದೀಪ ಹಚ್ಚುವುದರ ಮೂಲಕ ಅಜ್ಞಾನ, ದುಷ್ಚಟವೆಲ್ಲ ಕಳೆದು, ಸುಜ್ಞಾನ ಮೂಡಲಿ…
