ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ರೋಟರಿ ಸಂಸ್ಥೆಯು ಕರೋನಾ ಪ್ರತಿಕೂಲ ಸನ್ನಿವೇಶಗಳಲ್ಲಿಯೂ ಕ್ರಿಯಾಶೀಲವಾಗಿ ಸಮಾಜಕ್ಕೆ ಸ್ಪಂದಿಸಿದೆ. ರೋಟರಿ ಸಂಸ್ಥೆಯ ಧ್ಯೇಯೋದ್ದೇಶಗಳಿಗೆ ಪೂರಕವಾಗಿ ರೋಟರಿ ಸಂಸ್ಥೆಗಳು ಕೆಲಸ ಮಾಡಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರೋಟರಿ ಸಂಸ್ಥೆಯ ಸೇವೆ ಲಭಿಸಿದೆ. ಗಂಗೊಳ್ಳಿ ರೋಟರಿ ಸಂಸ್ಥೆ ಇತರ ರೋಟರಿ ಸಂಸ್ಥೆಗಳಿಗೆ ಮಾದರಿಯಾಗಿದ್ದು, ರೋಟರಿಯ ವಿವಿಧ ಅನುದಾನಗಳನ್ನು ಸಮರ್ಪಕವಾಗಿ ಸದ್ಭಳಕೆ ಮಾಡಿಕೊಂಡು ಸಮಾಜದ ಅಭಿವೃದ್ಧಿಗೆ ಕೈಜೋಡಿಸಿರುವುದು ರೋಟರಿ ಜಿಲ್ಲೆಗೆ ಹೆಮ್ಮೆ ತರುವ ಸಂಗತಿಯಾಗಿದೆ ಎಂದು ರೋಟರಿ ಜಿಲ್ಲೆ 3182ರ ಗವರ್ನರ್ ರಾಜಾರಾಮ ಭಟ್ ಹೇಳಿದರು. ಜಿಲ್ಲಾ ರೋಟರಿ ಗವರ್ನರ್ ವಾರ್ಷಿಕ ಅಧಿಕೃತ ಭೇಟಿ ಅಂಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ರೋಟರಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಸಿಸ್ಟೆಂಟ್ ಗವರ್ನರ್ ಡಾ.ನಾಗಭೂಷಣ ಉಡುಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಸೈಂಟ್ ಜೋಸೆಫ್ ಹಿರಿಯ ಪ್ರಾಥಮಿಕ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಗೋಮಾಳ ವಿವರ ನೀಡದ ಕಂದಾಯ ಅಧಿಕಾರಿಗಳ ವಿರುದ್ಧ ಆಕ್ರೋಶ, ತಹಶೀಲ್ದಾರ್ ನೇಮಕಕ್ಕೆ ಆಗ್ರಹ, ಮಾಹಿತಿ ಇಲ್ಲದ ಅಧಿಕಾರಿಗಳ ವಿರುದ್ಧ ಗರಂ, ಮಾಹಿತಿದಾರರನ್ನು ಬಲಿಪಶು ಮಾಡದಂತೆ ಗಣಿ ಇಲಾಖೆಗೆ ಸೂಚನೆ ಸೇರಿದಂತೆ ಹಲವು ವಿಚಾರಗಳ ಕುರಿತು ಬೈಂದೂರು ತಾಲ್ಲೂಕು ಪಂಚಾಯಿತಿ ಸಭೆಯಲ್ಲಿ ಚರ್ಚೆ ನಡೆಯಿತು. ಕಂದಾಯ ಇಲಾಖೆಯ ಕೆಲಸಗಳನ್ನು ಬಿಟ್ಟು ಭೂ ಪರಿವರ್ತನೆಯಲ್ಲಿಯೇ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸುತ್ತಾರೆ. ಗೋಮಾಳ ಗುರುತಿಸಿ ಮಾಹಿತಿ ನೀಡುವಂತೆ ಸೂಚಿಸಿದರೂ ಕೆಲಸ ಆಗುತ್ತಿಲ್ಲ, ಪ್ರತಿ ಗ್ರಾಮದಲ್ಲೂ ಗೋಮಾಳ ಹಾಗೂ ಒತ್ತುವರಿ ಗೋಮಾಳಗಳನ್ನು ತೋರಿಸಿ, ಗೋಮಾಳ ನಿರ್ಮಾಣ ಹಾಗೂ ಒತ್ತುವರಿ ತೆರಿಗೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಬೈಂದೂರಿನಲ್ಲಿ ಕಾಯಂ ತಹಶೀಲ್ದಾರ್ ಇಲ್ಲ ಎಂದು ಪ್ರಸ್ತಾಪಿಸಿದ ಪ್ರವೀಣ್ ಕುಮಾರ್ ಶೆಟ್ಟಿ ಕಡ್ಕೆ , ತಾಲ್ಲೂಕು ಕಚೇರಿಯಲ್ಲಿ ಕಮಿಷನ್ ದಂಧೆ ನಡೆಯುತ್ತಿದೆ. ಇಂತಹ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಇದನ್ನು ಧ್ವನಿಗೂಡಿಸಿದ ಜಗದೀಶ ದೇವಾಡಿಗ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ಆಚರಣೆಯ ಅಂಗವಾಗಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ರೇಕಾ ಬನ್ನಾಡಿ ಮಾತನಾಡಿ, ಮತದಾನ ನಮ್ಮ ಹಕ್ಕು. ಕೆಲವು ಕಡೆ ನಗರ ಪ್ರದೇಶಗಳಲ್ಲಿ ಮತದಾನದಿಂದ ವಿದ್ಯಾವಂತರೆನಿಸಿಕೊಂಡವರು ಮತದಾನದಿಂದ ಹಿಂದೆ ಉಳಿಯುತ್ತಾರೆ. ಹಾಗೆ ಕೆಲವು ಕಡೆ ಅವಿದ್ಯಾವಂತರಿಗೆ ಮತದಾನದ ಮಹತ್ವದ ಬಗ್ಗೆ ಸಾಕಷು ತಿಳುವಳಿಕೆ ಇರುವುದಿಲ್ಲ. ನಾವು ನೀವು ಮತದಾನದ ಮಹತ್ವವನ್ನು ಕುರಿತು ಅರಿವು ಮೂಡಿಸುವ ಕಾರ್ಯ ಮಾಡಬೇಕಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಅರುಣ್ ಎ.ಎಸ್. ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ರಾಮಚಂದ್ರ ಆಚಾರಿ ಮತದಾರರ ಪ್ರತಿಜ್ಞಾ ವಿಧಿ ಸ್ವೀಕಾರವನ್ನು ಬೋಧಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಷ್ಟ್ರೀಯ ಸೇವಾ ಸಂಘ ಮತ್ತು ರಾಷ್ಟ್ರೀಯ ಮತದಾರರ ಕ್ಲಬ್ನ ಜಂಟಿ ಆಶ್ರಯದಲ್ಲಿ ಇಲ್ಲಿನ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯಿತು. ಹಿರಿಯ ಶಿಕ್ಷಕರಾದ ಯು.ಹೆಚ್ ರಾಜಾರಾಮ್ ಭಟ್ ಮತದಾನ ಜಾಗೃತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ಧಾರಿಯ ಕುರಿತು ತಿಳಿಸಿದರು. ಶಿಕ್ಷಕ ರಾಘವೇಂದ್ರ ಬಿಲ್ಲವ ಪ್ರತಿಜ್ಞಾವಿಧಿ ವಾಚಿಸಿದರು. ಮುಖ್ಯೋಪಾಧ್ಯಾಯರು, ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ರೋಸಮ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸೇನೆಶ್ವರ ಕಲಾ ಮತ್ತು ಕ್ರೀಡಾ ಸಂಘದ 2020-21ನೇ ಸಾಲಿನ ನೂತನ ಅಧ್ಯಕ್ಷರಾಗಿ ಸಂತೋಷ್ ಪೂಜಾರಿ ಜೆ.ಡಿ., ಕಾರ್ಯದರ್ಶಿಯಾಗಿ ಸುಕುಮಾರ ಶೆಟ್ಟಿ ಸೂರ್ಕುಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗೌರೀಶ್ ಹುದಾರ್, ಗಿರಿಶ್ ಯೋಜನನಗರ, ಸಂದೀಪ, ಜೊತೆ ಕಾರ್ಯದರ್ಶಿಯಾಗಿ ವೆಂಕಟೇಶ ಪೂಜಾರಿ, ಸುಧೀರ ರೋಡ್ರಿಗಾಸ್ ಜಗದೀಶ ದೇವಾಡಿಗ, ಸುರೇಶ್ ಯರುಕೋಣೆ, ಸುರೇಶ್ ಡಿ. ಉಪ್ಪಿನಕೋಟೆ, ಬಾಬು ರಾವ್, ಗೌರಾಧ್ಯಕ್ಷರಾಗಿ ಸುಧಾಕರ ಶೆಟ್ಟಿ ನೆಲ್ಯಾಡಿ, ಗೌರವ ಸಲಹೆಗಾರರಾಗಿ ರಾಮಕೃಷ್ಣ ದೇವಾಡಿಗ, ವಿಜಯ್ ಶಂಕರ್ ಭಟ್ ಪ್ರಶಾಂತ ಪೂಜಾರಿ, ಮಂಜುನಾಥ ರಾವ್, ಸುರೇಂದ್ರ ಡಿ. ಬಾಡಾ, ಖಜಾಂಜಿಯಾಗಿ ಗೌರಿಶ್ ಹುದಾರ್, ಅಮರ ದೇವಾಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ದುರ್ಮಿ, ಪ್ರೀತಂ ಅಶೋಕ ಯಡ್ತರೆ, ಅಯಬ್, ಜಗದೀಶ ದೇವಾಡಿಗ, ವೆಂಕಟೇಶ ಪೂಜಾರಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಿತ್ಯನಂದ ಮೊಗವೀರ, ಸೀತರಾಮ ಶ್ರೀಯಾನ್, ನಾಗೇಶ್ ಕಳವಾಡಿ, ನಟೇಶ್ ದೇವಾಡಿಗ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಕಾಶ ದೇವಾಡಿಗ, ಚಂದ್ರ ಪೂಜಾರಿ, ಭಾಸ್ಕರ ಶಿರೂರು. ಸದಸ್ಯರಾದ ಶಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಯಡ್ತರೆ ಫ್ರೆಂಡ್ಸ್ ಎರಡು ದಿನಗಳ ಕಾಲ ಯಡ್ತರೆ ಕ್ರೀಡಾಂಗಣದಲ್ಲಿ ಆಯೋಜಿಸಿದ 30 ಗಜಗಳ ಕ್ರಿಕೆಟ್ ಪಂದ್ಯಾಟದಲ್ಲಿ ಉಪ್ಪುಂದ ವಿವೇಕಾನಂದ ತಂಡ ಯಡ್ತರೆ ಟ್ರೋಫಿ – 2021ನ್ನು ಮುಡಿಗೇರಿಸಿಕೊಂಡಿದ್ದು, ಸೋಮಲಿಂಗೇಶ್ವರ ಫ್ರೆಂಡ್ಸ್ ಚಂದನ ತಂಡವು ರನ್ನರ್ಅಪ್ ಆಗಿದೆ. ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಸದಸ್ಯ ಶಂಕರ ಪೂಜಾರಿ ಮಾತನಾಡಿ, ಕ್ರೀಡೆಯಿಂದ ಸಮರಸ್ಯ ಸಾಧ್ಯವಿದ್ದು, ಜಾತಿ, ಧರ್ಮಗಳ ಭೇದವಿಲ್ಲದೇ ಎಲ್ಲರೂ ಪಾಲ್ಗೊಳ್ಳುತ್ತಾರೆ. ಆಟದಲ್ಲಿ ಸೋಲು ಗೆಲುವು ಸಹಜವಾದರೂ ಕ್ರೀಡಾಳುಗಳ ಸಂಘಟನಾತ್ಮಕ ಪ್ರಯತ್ನ ಇನ್ನೊಂದು ಯಶಸ್ಸಿಗೆ ದಾರಿಮಾಡಿಕೊಡುತ್ತದೆ ಎಂದ ಅವರು ಯಡ್ತರೆ ಕ್ರೀಡಾಂಗಣದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದೆ. ನೂರಾರು ಕ್ರೀಡಾ ಪಟುಗಳು ಇಲ್ಲಿ ತಯಾರಾಗಿದ್ದಾರೆ. ಆದರೆ ಅವರು ಜಿಲ್ಲೆ, ರಾಜ್ಯ ಮಟ್ಟದಲ್ಲಿ ಮುಂದುವರಿಯದಿರುವುದು ವಿಷಾದದ ಸಂಗತಿಯಾಗಿದ್ದು, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕಿದೆ ಎಂದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ವಿಜೇತ ಅರಣ್ಯ ಪಾಲಕ ತಿಮ್ಮಪ್ಪ ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಲಕ್ಕಿ ಡ್ರಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಪುಣ್ಯಸ್ಮೃತಿ ಕಾರ್ಯಕ್ರಮ ನಡೆಯಿತು. ಪುಷ್ಪನಮನ ಸಲ್ಲಿಸಿ ಮಾತನಾಡಿದ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಂಗೊಳ್ಳಿ ಎ ಒಕ್ಕೂಟದ ಅಧ್ಯಕ್ಷೆ ಸುಮಿತ್ರಾ ಜಿ. ದೀನ ದಲಿತರ, ಮಕ್ಕಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಅವರ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರು ಮಾಡಿರುವ ಸತ್ಕಾರ್ಯಗಳು ಅವರನ್ನು ಇಂದು ಅಜರಾಮರನ್ನಾಗಿಸಿದೆ ಎಂದು ಹೇಳಿದರು. ಸಂಘದ ಅಧ್ಯಕ್ಷೆ ಸುಶೀಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷೆ ಸರೋಜ ಜಿ.ಟಿ., ಗಂಗಾ ಬಿ., ಗೌರಿ ಬಿ., ರುದ್ರಮ್ಮ, ಮಮತಾ, ಭವಾನಿ, ನೇತ್ರಾವತಿ ಮತ್ತಿತರರು ಉಪಸ್ಥಿತರಿದ್ದರು. ಸುಶೀಲಾ ಸ್ವಾಗತಿಸಿದರು. ಕಾರ್ಯದರ್ಶಿ ನಾಗಿಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡುಬಿದಿರೆ: ಎನ್ಸಿಸಿ 18 ಕರ್ನಾಟಕ ಬೆಟಾಲಿಯನ್ ಮಂಗಳೂರು ವತಿಯಿಂದ ಆಳ್ವಾಸ್ ಕಾಲೇಜಿನಲ್ಲಿ ಆಯೋಜಿಸಿದ್ದ5 ದಿನಗಳ ಎನ್ಸಿಸಿ ಶಿಬಿರವು ಸಂಪನ್ನಗೊಂಡಿತು. ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಹಾವೀರ ಕಾಲೇಜಿನ ಪ್ರಾಂಶುಪಾಲ ಮೇಜರ್ ರಾಧಾಕೃಷ್ಣರವರು ತಮ್ಮ 26 ವರ್ಷಗಳ ಎನ್ಸಿಸಿ ಅನುಭವ ಹಾಗೂ ಕಲಿತ ಶಿಸ್ತಿನ ಬಗ್ಗೆ ಕೆಡೆಟ್ಗಳ ಜತೆಗೆ ಹಂಚಿಕೊಂಡರು. ಸ್ವಾಮಿ ವಿವೇಕಾನಂದರ ಮಾತಿನಂತೆ ನಾವು ಗೆದ್ದರೆ ಮುನ್ನಡೆಸಬಹುದು, ಸೋತರೆ ಇನ್ನೊಬ್ಬರಿಗೆ ಮಾರ್ಗದರ್ಶನ ನೀಡಬಹುದು ಎಂಬುದನ್ನು ಅರಿತುಕೊಂಡು ಮುನ್ನಡೆಯಬೇಕೆಂದು ಎನ್ಸಿಸಿ ಕೆಡೆಟ್ಗಳನ್ನು ಹುರಿದುಂಬಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಅಸೋಸಿಯೇಟ್ ಎನ್ಸಿಸಿ ಆಫೀಸರ್ ಕ್ಯಾಪ್ಟನ್ ಡಾ. ರಾಜೇಶ್ ಬಿ ಮಾತನಾಡಿ, ಕೆಡೆಟ್ಗಳು ಸಮವಸ್ತ್ರದಲ್ಲಿರದಿದ್ದರೂ ತಮ್ಮ ಶಿಸ್ತು ಸಂಯಮಗಳನ್ನು ಮೀರಿ ನಡೆಯಬಾರದು. ಇದರಿಂದ ಭಾರತದ ಯುವಶಕ್ತಿಯಲ್ಲಿ ಅದ್ಭುತಗಳನ್ನು ನೋಡಲು ಸಾಧ್ಯ ಎಂದರು. ಐದು ದಿನಗಳ ಶಿಬಿರದಲ್ಲಿ ಡ್ರಿಲ್, ನಕ್ಷೆ ಓದುವಿಕೆ, ದೂರ ನಿರ್ಣಯ, ರೈಫಲ್ನ ನಿರ್ವಹಣೆ, ಫೀಲ್ಡ್ಕ್ರಾಫ್ಟ್, ಬ್ಯಾಟಲ್ಕ್ರಾಫ್ಟ್, ಫೀಲ್ಡ್ ಸಿಗ್ನಲ್ಸ್, ವಿಪತ್ತು ನಿರ್ವಹಣೆ ಮುಂತಾದ ಪ್ರಾಯೋಗಿಕ ವಿಷಯಗಳಂದಿಗೆ ಮಿಲಿಟರಿ ಮತ್ತು ಶಸಸ್ತ್ರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ ಅಂಗವಾಗಿ ಯಡ್ತರೆ ನೇತಾಜಿ ಯುವಕ ಮಂಡಲದಿಂದ ಶನಿವಾರ ನೇತಾಜಿ ಮಾರ್ಗದ ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸ್ಥಳೀಯರಾದ ಅಣ್ಣಪ್ಪ ಪೂಜಾರಿ ಮಣ್ಣಿಮನೆ ನೇತಾಜಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪೋಟೊಗೆ ಪುಷ್ಪ ನಮನ ಸಲ್ಲಿಸಿದರು. ಯುವಕ ಮಂಡಲದ ಅಧ್ಯಕ್ಷ ರಾಘವೆಂದ್ರ ಪೂಜಾರಿ, ಕಾರ್ಯದರ್ಶಿ ವಿಶ್ವನಾಥ ದೇವಾಡಿಗ ಹಾಗೂ ಸದಸ್ಯರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಘನತ್ಯಾಜ್ಯ ನಿರ್ವಹಣೆ, ಮಳೆ ನೀರು ಸಂಗ್ರಹ ಹಾಗೂ ಸೌರಶಕ್ತಿ ಬಳಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕು. ನೀರು ಬೆಲೆ ಕಟ್ಟಲಾಗದ ಸಂಪನ್ಮೂಲವಾಗಿದ್ದು ಜನರು ಇದನ್ನು ಗಮನಿಸದಿರುವುದು ವಿಷಾದಕರ ಎಂದು ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು. ಗಂಗೊಳ್ಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಬೆಂಗಳೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಸ್ವಸಹಾಯ ಸಂಘದ ಸದಸ್ಯರಿಗೆ ಮತ್ತು ಗ್ರಾಮೀಣ ಮಹಿಳೆಯರಿಗೆ ನವೀಕರಿಸ ಬಹುದಾದ ಇಂಧನ, ಘನ ತ್ಯಾಜ್ಯ ನಿರ್ವಹಣೆ ಮತ್ತು ಮಳೆ ನೀರು ಸಂಗ್ರಹ’ ವಿಷಯದ ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ ಜೋಸೆಫ್ ಫರ್ನಾಂಡಿಸ್ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫರ್ನಾಂಡಿಸ್, ಭಾರತೀಯ ವಿಕಾಸ ಟ್ರಸ್ಟ್ನ ಮುಖ್ಯ ವ್ಯವಸ್ಥಾಪಕ ಅರುಣ್ ಪಟವರ್ಧನ್, ಸಂಯೋಜಕ ರಾಘವೇಂದ್ರ,ಕುಂದಾಪುರ…
