Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುರಾಣ ಪ್ರಸಿದ್ಧ ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಮಂಗಳವಾರ ಅಂಗಾರಕ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ದೇವಳದಲ್ಲಿ ಜರುಗಿದವು. ಲೋಕಕಲ್ಯಾಣಾರ್ಥವಾಗಿ ಶ್ರೀ ದೇವರಿಗೆ ಅಷ್ಟೋತ್ತರ ಸಹಸ್ರ ನಾಲಿಕೇರ ಗಣಯಾಗ, ಅನ್ನಸಂತರ್ಪಣೆ, ರಾತ್ರಿ ಸುವರ್ಣಪಾಲಿಕೆ, ರಜತ ರಥ, ರಂಗಪೂಜಾ ಧಾರ್ಮಿಕ ಕಾರ‍್ಯಕ್ರಮಗಳು ನಡೆದವು. ಸಾಂಸ್ಕೃತಿಕ ಕಾರ‍್ಯಕ್ರಮದ ಅಂಗವಾಗಿ ಸಾಲಿಗ್ರಾಮ ಮಕ್ಕಳ ಮೇಳದವರಿಂದ ವೀರ ವೃಷಸೇನ ಯಕ್ಷಗಾನ ಪ್ರದರ್ಶನಗೊಂಡಿತ್ತು. ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ, ಪರ್ಯಾಯ ಅರ್ಚಕ ವೆಂಕಟನಾರಾಯಣ ಉಪಾಧ್ಯಾಯ ಹಾಗೂ ಸಹೋದರರು, ಮ್ಯಾನೇಜರ್ ನಟೇಶ್ ಕಾರಂತ್, ದೇವಳದ ಸಿಬ್ಬಂದಿ ಮತ್ತು ಅರ್ಚಕ ವರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಿವಮೊಗ್ಗ: ರೈಲ್ವೆ ಇಲಾಖೆಗೆ ನಿರಂತರ ಮನವಿಗಳ ಫಲವಾಗಿ ಶಿವಮೊಗ್ಗ-ಬೆಂಗಳೂರು ಮದ್ರಾಸ್ ಎಕ್ಸಪ್ರೆಸ್ ಹಾಗೂ ಶಿವಮೊಗ್ಗ-ರೇಣಿಗುಂಟ(ತಿರುಪತಿ) ರೈಲುಗಳನ್ನು ಒಗ್ಗೂಡಿಸಿ ಶಿವಮೊಗ್ಗದಿಂದ ತಿರುಪತಿ ಹಾಗೂ ಮದ್ರಾಸ್ಗೆ ತೆರಳುವ ಯಾತ್ರಾರ್ಥಿಗಳು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ರೈಲಿನ ಸಮಯ ಹಾಗೂ ಮಾರ್ಗವನ್ನು ಬದಲಿಸಿ ಶಿವಮೊಗ್ಗ – ರೇಣಿಗುಂಟ ಮದ್ರಾಸ್, ಎಕ್ಸಪ್ರೆಸ್ ರೈಲು ಸೇವೆಗೆ ಇಂದು ಚಾಲನೆ ನೀಡಲಾಗುತ್ತಿರುವುದು ಸಂತಸ ತಂದಿದೆ, ಶಿವಮೊಗ್ಗ-ಶಿಕಾರಿಪುರ ರಾಣಿಬೆನ್ನೂರು ರೈಲು ಮಾರ್ಗವು ಸುಮಾರು 956 ಕೋಟಿ ಅಂದಾಜು ವೆಚ್ಚದಲ್ಲಿ 102 ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ನೂತನ ಕಿ.ಮೀ. ಉದ್ದದ ರೈಲು ನಿರ್ಮಾಣ ಯೋಜನೆಯನ್ನು 2018-19ನೇ ಕೇಂದ್ರ ಮುಂಗಡ ಪತ್ರದಲ್ಲಿ ಮಂಜೂರು ಮಾಡಲಾಗಿದೆ ಸ್ವಾತಂತ್ರ್ಯ ಬಂದ ನಂತರ ಶಿವಮೊಗ್ಗದಲ್ಲಿ ಮೊದಲ ನೂತನ ರೈಲ್ವೆ ಯೋಜನೆಯಾಗಿದೆ ಎಂದು ಸಂಸದರಾದ ಬಿ. ವೈ. ರಾಘವೇಂದ್ರ ತಿಳಿಸಿದರು. ಶಿವಮೊಗ್ಗ ಟೌನ್ ರೈಲ್ವೇ ನಿಲ್ದಾಣದಲ್ಲಿ ನೂತನ ರೈಲಿಗೆ ಹಸಿರು ನಿಶಾನೆ ತೋರುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಈ ಹಿಂದೆ ಬೆಂಗಳೂರು ಮಾರ್ಗವಾಗಿ ಮದ್ರಾಸ್ ಗೆ ತೆರಳುತ್ತಿದ್ದ ಶಿವಮೊಗ್ಗ-ಮದ್ರಾಸ್ ಎಕ್ಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ದಕ್ಷಿಣ ಭಾರತದ ಪ್ರಸಿದ್ದ ದೇವಾಲಯಗಳಲ್ಲೊಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ವಾರ್ಷಿಕ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ.ದೇವಾಲಯಲಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಉಚಿತ ಭೋಜನ ಪ್ರಸಾದದ ವ್ಯವಸ್ಥೆಯಿದ್ದು ಭಕ್ತರಿಗೆ ನೀಡುವ ಭೋಜನ ಪ್ರಸಾದವು ಗರಿಷ್ಠ ಗುಣಮಟ್ಟದಿಂದ ಕೂಡಿದ್ದು, ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾದುದು ಎಂದು ಪ್ರಮಾಣ ಪತ್ರ ದೊರೆತಿದೆ. ಭಾರತದ ಅಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಈ ಪ್ರಮಾಣ ಪತ್ರ ನೀಡಲಾಗಿದ್ದು, ಇಲ್ಲಿ ಭಕ್ತಾದಿಗಳಿಗೆ ತಯಾರಿಸುವ ಆಹಾರದ ಗುಣಮಟ್ಟವನ್ನು ಪರಿಶೀಲಿಸಲು ಆಹಾರ ತಯಾರಿಕಾ ಕಟ್ಟಡ ಮತ್ತು ಅಲ್ಲಿರುವ ಸೌಲಭ್ಯಗಳು, ಆಹಾರ ತಯಾರಿಸುವ ವಿಧಾನ, ಸ್ವಚ್ಛತೆ, ಆಹಾರ ತಯಾರಿಕಾ ಸಿಬ್ಬಂದಿಗಳಿಗೆ ನೀಡಿರುವ ತರಬೇತಿ ಈ ಅಂಶಗಳ ಆಧಾರದಲ್ಲಿ ಆಡಿಟ್ ಮಾಡಲಾಗಿದ್ದು, ದೇವಾಲಯದಲ್ಲಿ ಈ ಎಲ್ಲಾ ಅಂಶಗಳಿಗೆ ಪ್ರಾದಾನ್ಯತೆ ನೀಡಿ ಆಹಾರ ತಯಾರಿಸುತ್ತಿರುವುದರಿಂದ ಈ ಪ್ರಮಾಣ ಪತ್ರ ನೀಡಲಾಗಿದೆ. ಇಲ್ಲಿನ ದೇವಾಲಯದ ಆಹಾರ ತಯಾರಿಕಾ ಕೊಠಡಿಯು ಅತ್ಯಂತ ಸುಸಜ್ಜಿತವಾಗಿದ್ದು, ಕಟ್ಟಡವು ಮಳೆ ನೀರಿನಿಂದ ಸೋರುವಿಕೆ ಇಲ್ಲದೇ, ಉತ್ತಮ ಗುಣಮಟ್ಟದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ಹದಿನೈದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ವಸಂತ ನಾಟ್ಯಾಲಯ ಕುಂದಾಪುರ ಸಂಸ್ಥೆಗೆ ಗೌರವ ಸಂಮಾನ ನೀಡಲಾಯಿತು. ವಸಂತ ನಾಟ್ಯಾಲಯದ ವಿದೂಷಿ ಪ್ರವಿತಾ ಅಶೋಕ್ ಹಾಗೂ ಸಂಗಡಿಗರು ಸಂಮಾನ ಸ್ವೀಕರಿಸಿದರು. ಈ ವೇಳೆ ಸಮ್ಮೇಳನಾಧ್ಯಕ್ಷರಾದ ಎ.ವಿ ನಾವಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ಎಂ. ಮೋಹನ ಆಳ್ವ, ಬಾಲಕೃಷ್ಣ ಶೆಟ್ಟಿ ಕಟೀಲು, ಎ.ಎಸ್.ಎನ್. ಹೆಬ್ಬಾರ್, ಪ್ರೋ. ಉಮೇಶ್ ಶೆಟ್ಟಿ ಕೊತ್ತಾಡಿ, ಡಾ. ಉಮೇಶ್ ಪುತ್ರನ್, ನರೇಂದ್ರ ಕುಮಾರ್ ಕೋಟ, ಸುಬ್ರಹ್ಮಣ್ಯ ಶೆಟ್ಟಿ, ಡಾ. ಗಾಯತ್ರೀ ನಾವಡ, ಪ್ರಭಾಕರ ಶೆಟ್ಟಿ, ಡಾ. ರಘು ನಾಯ್ಕ್, ದಿನಕರ ಶೆಟ್ಟಿ, ಪಿ. ಮನೋಹರ್, ಅಕ್ಷತಾ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ಹದಿನೈದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಕಲಾಕ್ಷೇತ್ರ ಕುಂದಾಪುರ ಸಂಸ್ಥೆಗೆ ಗೌರವ ಸಂಮಾನ ನೀಡಲಾಯಿತು. ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹಾಗೂ ಪದಾಧಿಕಾರಿಗಳು ಸಂಮಾನ ಸ್ವೀಕರಿಸಿದರು. ಈ ವೇಳೆ ಸಮ್ಮೇಳನಾಧ್ಯಕ್ಷರಾದ ಎ.ವಿ ನಾವಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ಎಂ. ಮೋಹನ ಆಳ್ವ, ಬಾಲಕೃಷ್ಣ ಶೆಟ್ಟಿ ಕಟೀಲು, ಎ.ಎಸ್.ಎನ್. ಹೆಬ್ಬಾರ್, ಪ್ರೋ. ಉಮೇಶ್ ಶೆಟ್ಟಿ ಕೊತ್ತಾಡಿ, ಡಾ. ಉಮೇಶ್ ಪುತ್ರನ್, ನರೇಂದ್ರ ಕುಮಾರ್ ಕೋಟ, ಸುಬ್ರಹ್ಮಣ್ಯ ಶೆಟ್ಟಿ, ಡಾ. ಗಾಯತ್ರೀ ನಾವಡ, ಪ್ರಭಾಕರ ಶೆಟ್ಟಿ, ಡಾ. ರಘು ನಾಯ್ಕ್, ದಿನಕರ ಶೆಟ್ಟಿ, ಪಿ. ಮನೋಹರ್, ಅಕ್ಷತಾ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ಹದಿನೈದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಮೃದ್ಧಿ ಯುವಕ ಮಂಡಲ ರಿ. ಕಳ್ಳಂಜೆಗೆ ಗೌರವ ಸಂಮಾನ ನೀಡಲಾಯಿತು. ಸಮೃದ್ಧಿ ಯುವಕ ಮಂಡಲದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಂಮಾನ ಸ್ವೀಕರಿಸಿದರು. ಈ ವೇಳೆ ಸಮ್ಮೇಳನಾಧ್ಯಕ್ಷರಾದ ಎ.ವಿ ನಾವಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ಎಂ. ಮೋಹನ ಆಳ್ವ, ಬಾಲಕೃಷ್ಣ ಶೆಟ್ಟಿ ಕಟೀಲು, ಎ.ಎಸ್.ಎನ್. ಹೆಬ್ಬಾರ್, ಪ್ರೋ. ಉಮೇಶ್ ಶೆಟ್ಟಿ ಕೊತ್ತಾಡಿ, ಡಾ. ಉಮೇಶ್ ಪುತ್ರನ್, ನರೇಂದ್ರ ಕುಮಾರ್ ಕೋಟ, ಸುಬ್ರಹ್ಮಣ್ಯ ಶೆಟ್ಟಿ, ಡಾ. ಗಾಯತ್ರೀ ನಾವಡ, ಪ್ರಭಾಕರ ಶೆಟ್ಟಿ, ಡಾ. ರಘು ನಾಯ್ಕ್, ದಿನಕರ ಶೆಟ್ಟಿ, ಪಿ. ಮನೋಹರ್, ಅಕ್ಷತಾ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕುಂದಾಪುರದಲ್ಲಿ ನಡೆದ ಉಡುಪಿ ಜಿಲ್ಲಾ ಹದಿನೈದನೇಯ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಂಗೀತ – ರಂಗಭೂಮಿ ಕ್ಷೇತ್ರದಲ್ಲಿ ಸಾಧನೆಗೈದ ಮೂರ್ತಿ ಬೈಂದೂರು ಹಾಗೂ ಸಹಕಾರಿ – ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆಗೈದ ಪುಂಡಲೀಕ ನಾಯಕ್ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಸಮ್ಮೇಳನಾಧ್ಯಕ್ಷರಾದ ಎ.ವಿ ನಾವಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಡಾ. ಎಂ. ಮೋಹನ ಆಳ್ವ, ಬಾಲಕೃಷ್ಣ ಶೆಟ್ಟಿ ಕಟೀಲು, ಎ.ಎಸ್.ಎನ್. ಹೆಬ್ಬಾರ್, ಪ್ರೋ. ಉಮೇಶ್ ಶೆಟ್ಟಿ ಕೊತ್ತಾಡಿ, ಡಾ. ಉಮೇಶ್ ಪುತ್ರನ್, ನರೇಂದ್ರ ಕುಮಾರ್ ಕೋಟ, ಸುಬ್ರಹ್ಮಣ್ಯ ಶೆಟ್ಟಿ, ಡಾ. ಗಾಯತ್ರೀ ನಾವಡ, ಪ್ರಭಾಕರ ಶೆಟ್ಟಿ, ಡಾ. ರಘು ನಾಯ್ಕ್, ದಿನಕರ ಶೆಟ್ಟಿ, ಪಿ. ಮನೋಹರ್, ಅಕ್ಷತಾ ಗಿರೀಶ್ ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರಿನಲ್ಲಿ ನಿರ್ಮಿಸಲಾಗಿರುವ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ಇದರ ನೂತನ ಕಛೇರಿಯ ಉದ್ಘಾಟನಾ ಸಮಾರಂಭ ಶುಕ್ರವಾರ ಜರುಗಿತು. ಗೌರಿಗದ್ದೆ ಶ್ರೀ ದತ್ತ ಆಶ್ರಮದ ಅವಧೂತ ಶ್ರೀ ವಿನಯ ಗುರೂಜಿಯವರು ನೂತನ ಕಛೇರಿಯನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಶ್ರೀ ವಿನಯ ಗುರೂಜಿಯವರು ಆಶೀರ್ವಚಿಸಿ ಕಠಿಣ ಪ್ರಯತ್ನ, ಸಮಾಜದ ಬಗ್ಗೆ ಒಲವು, ಅಶಕ್ತರಿಗೆ ನೆರವು ನೀಡುವ ಶ್ರದ್ದೆ ಇದ್ದವರು ಬದುಕಿನಲ್ಲಿ ಯಶಸ್ಸು ಕಾಣುತ್ತಾರೆ. ಭಗವಂತ ಒಬ್ಬೊಬ್ಬರಿಗೆ ಒಂದೊಂದು ಯೋಗ್ಯತೆ ನೀಡಿರುತ್ತಾನೆ. ಅದನ್ನು ಸಮರ್ಪಕವಾಗಿ ಸಮಾಜಮುಖಿಯಾಗಿ ಬಳಸಿಕೊಂಡಾಗ ಬದುಕು ಸಾರ್ಥಕವಾಗುತ್ತದೆ ಎಂದರು. ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ, ಟ್ರಸ್ಟೀ ಮಾಲತಿ ಗೋವಿಂದ ಪೂಜಾರಿ, ಗೋವಿಂದ ಬಾಬು ಪೂಜಾರಿ ಅವರ ತಂದೆ ಬಾಬು ಪೂಜಾರಿ, ತಾಯಿ ಮಂಜಮ್ಮ, ಕುಟುಂಬಿಕರು ಹಾಗೂ ಊರವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಬೇಡ್ಕರ್ ಜಯಂತಿಯಂದು ಸಮುದಾಯ ಕುಂದಾಪುರ ಸಂಘಟನೆಯ ನೇತೃತ್ವದಲ್ಲಿ ಸಂಘಟಿಸಲಾದ ‘ಅಂಬೇಡ್ಕರ್ ಅರಿವು’ ಅಭಿಯಾನಕ್ಕೆ ಪಡುಕೋಣೆಯಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭ ಆದಿವಾಸಿ ಸಂಘಟನೆಯ ಜಿಲ್ಲಾ ಸಂಚಾಲಕ ಶ್ರೀಧರ್ ನಾಡ, ಅಧ್ಯಕ್ಷರು ಜನ ಸೇವಾ ಟ್ರಸ್ಟ್ ನಾಡ, ಪಡುಕೋಣೆಯ ಫಿಲಿಪ್ ಡಿಸಿಲ್ವಾ, ಸಮುದಾಯ ಕುಂದಾಪುರ ಕಾರ್ಯದರ್ಶಿ ಸದಾನಂದ ಬೈಂದೂರು ಮಹಿಳಾ ಸಂಘಟನೆ ಮುಖಂಡೆ ಶೀಲಾವತಿ, ಕೃಷಿಕೂಲಿಕಾರರ ಸಂಘಟನೆಯ ನಾಗರತ್ನ ನಾಡ, ಮಕ್ಕಳ ಬೇಸಿಗೆ ಶಿಬಿರ ನಿರ್ದೇಶಕ ವಾಸುದೇವ ಗಂಗೇರ ಮತ್ತು ಸಮುದಾಯದ ಸದಸ್ಯರು, ಡಿವೈಎಫ್ಐ ಸಂಘಟನೆಯ ಸದಸ್ಯರು ಮತ್ತು ಬೇರೆ ಬೇರೆ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡಿ.ವೈ.ಎಫ್.ಐ ಅಧ್ಯಕ್ಷರಾದ ನಾಗರಾಜ ಕುರು ಎಲ್ಲರನ್ನೂ ಸ್ವಾಗತಿಸಿದರು. ಸಮುದಾಯದ ರವಿ ಕಟ್ಕೆರೆ ಕಾರ್ಯಕ್ರಮ ನಿರೂಪಿಸಿದರು. ಭಾರತ ದೇಶದ ಪ್ರಜೆಗಳ ಮಟ್ಟಿಗೆ ಧರ್ಮಗ್ರಂಥವೇ ಆಗಿರಬೇಕಾದ ಸಂವಿಧಾನವನ್ನು ಮಕ್ಕಳು ಓದಿನಲ್ಲಿ ಅರಿಯುವಂತಾಗಬೇಕು. ಮಕ್ಕಳ ಓದಿಗೆ ನಿಲುಕಬಲ್ಲ, ಅಂಬೇಡ್ಕರ್ ಅವರ ಕುರಿತಾದ ಪುಸ್ತಕಗಳನ್ನು ಶಾಲೆಗಳಿಗೆ ವಿತರಿಸಿ, ಸೂಕ್ತ ಚಟುವಟಿಕೆಗಳ ಮೂಲಕ…

Read More