ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಕೋವಿಶೀಲ್ಡ್ ಲಸಿಕೆಯ ದಾಸ್ತಾನು ಸಾಕಷ್ಟು ಇಲ್ಲದಿರುವುದರಿಂದ ಪ್ರಥಮ ಡೋಸ್ ಪಡೆದು 8 ವಾರ ಮೀರಿದವರು ಒಟ್ಟು 947 ಅರ್ಹ ಫಲಾನುಭವಿಗಳಿದ್ದು, ಇವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕಾಗಿರುವುದರಿಂದ ಆಶಾಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯವರು ಸದರಿಯವರಿಗೆ ಕರೆ ಮಾಡಿ ಲಸಿಕೆ ಪಡೆಯಲು ಕ್ರಮವಹಿಸುತ್ತಾರೆ. ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 8 ವಾರ ಮೀರಿದವರು ಆಶಾಕಾರ್ಯಕರ್ತೆಯರಿಗೆ ಕರೆ ಮಾಡಿ 2ನೇ ಡೋಸ್ ಲಸಿಕೆ ಪಡೆಯಬಹುದಾಗಿದೆ. ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಲಭ್ಯವಿರುವುದಿಲ್ಲವಾಗಿದ್ದು, ರಾಜ್ಯದಿಂದ ಸರಬರಾಜಾದ ತಕ್ಷಣ ಪ್ರಥಮ ಡೋಸ್ ಪಡೆದು 6 ವಾರ ಮೀರಿದವರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವ ಬಗ್ಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಿಬ್ಬಂದಿಯವರು ಸದರಿಯವರಿಗೆ ಕರೆ ಮಾಡಿ ಲಸಿಕೆ ಪಡೆಯಲು ಕ್ರಮವಹಿಸುತ್ತಾರೆ. ಮುಂದಿನ ದಿನಗಳಲ್ಲಿ ಲಸಿಕೆಯು ಸರಬರಾಜಾದ ತಕ್ಷಣ ಪ್ರಥಮ ಡೋಸ್ ಪಡೆದವರಿಗೆ ಆದ್ಯತೆ ಮೇರೆಗೆ 2ನೇ ಡೋಸ್ ನೀಡಲಾಗುವುದು. ಮತ್ತು ಜಿಲ್ಲೆಗೆ ಸಾಕಷ್ಟು ಲಸಿಕೆ ಬಂದ ತಕ್ಷಣ ಆಶಾಕಾರ್ಯಕರ್ತೆಯರು ಸಾರ್ವಜನಿಕರಿಗೆ ಮಾಹಿತಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 556 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 319, ಕುಂದಾಪುರ, ಬೈಂದೂರು ತಾಲೂಕಿನ 171, ಕಾರ್ಕಳ, ಹೆಬ್ರಿ ತಾಲೂಕಿನ 64 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ. ಒಟ್ಟು 556 ಪ್ರಕರಣಗಳಲ್ಲಿ 191 ಸಿಂಟಮಿಕ್ ಹಾಗೂ 365 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 18 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 538 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಇಂದು ಉಡುಪಿಯ 78 ವರ್ಷದ ವೃದ್ಧ ಹಾಗೂ ಕಾರ್ಕಳದ 46 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 337 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 2705 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3244 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 224…
ಕುಂದಾಪ್ರ ಡಾಟ್ ಕಾಂ’ ಸುದ್ದಿ. ಉಡುಪಿ : ಕೊರೊನಾ ವೈರಸ್ ಸೋಂಕಿನಿಂದಾಗಿ ಉಡುಪಿಯಲ್ಲಿ ಪರಿಸ್ಥಿತಿ ದಿನೇ ದಿನೇ ಕೈಮೀರುತ್ತಿದೆ. ಬಹಳಷ್ಟು ಸಮಸ್ಯೆಯಾಗುತ್ತಿದ್ದು, ಸಾವಿನ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಸೊಂಕಿನ ಲಕ್ಷಣ ಕಂಡುಬಂದರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಸೋಂಕಿನ ಲಕ್ಷಣಗಳು ಕಂಡು ಬಂದ್ರೆ ಕೂಡಲೇ ಟೆಸ್ಟ್ ಮಾಡಿಸಿಕೊಂಡು ಐಸೋಲೇಟ್ ಆಗಿ. ಮನೆಯವರನ್ನು ಕೊರೊನಾ ಸೋಂಕಿನಿಂದ ರಕ್ಷಿಸಿ, ಒಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ್ರೆ ಮನೆ ಮಂದಿ ಗೆಲ್ಲಾ ಸೋಂಕು ವ್ಯಾಪಿಸುತ್ತಿದೆ. ಹೊರಗಿನಿಂದ ಬರುವವರನ್ನು ಸಾಧ್ಯವಾದಷ್ಟು ದೂರವಿಡಿ. ಒಂದೊಮ್ಮೆ ಮನೆಗೆ ಹೊರಗಿನವರು ಬಂದ್ರೆ ಅವರನ್ನು ಪ್ರತ್ಯೇಕವಾಗಿ ಇರಲು ಹೇಳಿ. ಇಮ್ಯುನಿಟಿ ಕೊರತೆ ಇದ್ದವರನ್ನು ಬಹು ಬೇಗನೆ ಸೋಂಕು ಬಾಧಿಸುತ್ತಿದೆ. ಕೊರೊನಾ ಬಗ್ಗೆ ಜಾಗೃತೆ ವಹಿಸದೇ ಇದ್ರೆ, ಕೊರೊನಾ ಸೋಂಕಿನಿಂದ ಪಾರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಜನರಲ್ಲಿ ಸಾಕಷ್ಟು ಬಾರಿ ಮನವಿಯನ್ನು ಮಾಡಲಾಗಿದೆ. ಸೋಂಕು ಕಾಣಿಸಿಕೊಂಡ ಕೂಡಲೇ ಟೆಸ್ಟ್ ಮಾಡಿಸಿಕೊಂಡು ಅಗತ್ಯಬಿದ್ರೆ ಆಸ್ಪತ್ರೆಗೆ ದಾಖಲಾಗುವ ಬದಲು, ಸೋಂಕು ಕಾಣಿಸಿಕೊಂಡು ಪರಿಸ್ಥಿತಿ ಬಿಗಡಾಯಿಸಿದ ನಂತರವೇ ಆಸ್ಪತ್ರೆಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೋವಿಡ್ ನಿಯಂತ್ರಣ ಹಾಗೂ ಸಹಾಯಕ್ಕಾಗಿ ಕುಂದಾಪುರ ಮತ್ತು ಬೈಂದೂರು ಭಾಗದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅಗತ್ಯವುಳ್ಳ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಕಛೇರಿಯಲ್ಲಿ ಕೋವಿಡ್ ತುರ್ತು ಸಹಾಯವಾಣಿ ಕೇಂದ್ರ ತೆರೆಯಲಾಗಿದ್ದು ನಾಗಶ್ರೀ ಅವರನ್ನು (7760514907) ಸಂಪರ್ಕಿಸಿ ಅಗತ್ಯ ಸೇವೆಗಳ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಆಸ್ಪತ್ರೆ ಮತ್ತು ಅಂಬ್ಯುಲೆನ್ ಸೇವೆಗಾಗಿ ಪ್ರಕಾಶ್ ಪೂಜಾರಿ ಜಡ್ಡು ಮತ್ತು ಹರ್ಷ ಮೊಗವೀರ ಸಿದ್ಧಾಪುರ (9008121917, 8971162076), ವೆಂಟಿಲೇಟರ್ ಮತ್ತು ರೆಮಿಡಿಸಿವರ್ಗಾಗಿ ಶರತ್ ಕುಮಾರ ಶೆಟ್ಟಿ, ಮತ್ತು ಸಾಮ್ರಾಟ್ ಶೆಟ್ಟಿ (9986099687, 9845230002), ವ್ಯಾಕ್ಸಿನೇಶನ್ ಸೇವೆಗಾಗಿ ಸುರೇಶ್ ಬಟವಾಡಿ ಮತ್ತು ಆನಂದ ಖಾರ್ವಿ, (9448525641, 9880476829), ಆಯುಷ್ಮಾನ್ ಭಾರತ್ ಕಾರ್ಡ್ ಸೇವೆಗಾಗಿ ಪ್ರಿಯದರ್ಶಿನಿ ಮತ್ತು ಭಾಗೀರಥಿ (7975887506, 9448605186), ಪ್ರಚಾರ ವಿಭಾಗ ವಿನೋದ್ ಭಂಡಾರಿ ಮತ್ತು ಪ್ರಜ್ವಲ್ ಕುಮಾರ ಶೆಟ್ಟಿ (9900113246, 9880996689) ಹಾಗೂ ಅಂತಿಮ ಸಂಸ್ಕಾರಕ್ಕಾಗಿ ರೋಹಿತ್ ಶೆಟ್ಟಿ ಸಿದ್ಧಾಪುರ ಮತ್ತು ಆಕಾಶ್ ಪೂಜಾರಿ (9980255514, 8296029677) ಅವರನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಕೊಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಳದ ಶ್ರೀ ರಾಮ ಸಂಘದ ವತಿಯಿಂದಲಾಕ್ಡೌನ್ ಹಿನ್ನಲೆಯಲ್ಲಿ ಕರ್ತವ್ಯನಿರತ ಪೋಲಿಸ್ ಸಿಬ್ಬಂದಿಗಳು, ಆಸ್ಪತ್ರೆ ಸಿಬ್ಬಂದಿ, ಲಸಿಕೆ ವಿತರಣೆ ಕೇಂದ್ರದ ಸಿಬ್ಬಂದಿ ಹಾಗೂ ಸಂಕಷ್ಟದಲ್ಲಿರುವವರಿಗೆ ಉಚಿತ ಉಪಹಾರ ವ್ಯವಸ್ಥೆ ಕಲ್ಪಿಸಲಾಗಿದೆ. ನಿತ್ಯವೂ ವಿವಿಧ ಬಗೆಯ ಉಪಹಾರವನ್ನು ತಯಾರಿಸಿ ಚೆನ್ನಾಗಿ ಪ್ಯಾಕ್ ಮಾಡಿ ನೀಡಲಾಗುತ್ತಿದ್ದು, ಜೊತೆಗೆ ಚಹಾದ ವ್ಯವಸ್ಥೆ ಮಾಡಲಾಗುತ್ತಿದೆ. ಕುಂದಾಪುರ, ಕೋಟೇಶ್ವರ ಮತ್ತು ಕುಂಭಾಶಿಯಲ್ಲಿ ಈ ಸೇವೆ ನೀಡುತ್ತಿದ್ದು ಲಾಕ್ಡೌನ್ ಮುಗಿಯುವ ತನಕ ಮುಂದುವರೆಯಲಿದೆ ಎಂದು ಶ್ರೀ ರಾಮ ಸಂಘದ ನಿರಂಜನ್ ಕಾಮತ್ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 529 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 250, ಕುಂದಾಪುರ, ಬೈಂದೂರು ತಾಲೂಕಿನ 202, ಕಾರ್ಕಳ, ಹೆಬ್ರಿ ತಾಲೂಕಿನ 73 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 529 ಪ್ರಕರಣಗಳಲ್ಲಿ 195 ಸಿಂಟಮಿಕ್ ಹಾಗೂ 334 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 33 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 496 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು 549 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 2488 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2345 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು 1309 ಮಂದಿಗೆ ಮೊದಲ ಡೋಸ್, 1477 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯತನಕ ಒಟ್ಟು 1,94,339 ಮಂದಿಗೆ ಮೊದಲ ಡೋಸ್…
ಶರೀರದಿಂದ ಬೆವರು ಬರುವುದು ಒಳ್ಳೆಯದು ಆದರೆ ವಿಪರೀತ ಬರುವುದರಿಂದ ಆ ವ್ಯಕ್ತಿ ತುಂಬಾ ಕಿರಿಕಿರಿ ಅನುಭವಿಸುತ್ತಾನೆ. ಇದನ್ನು ವೈದ್ಯಕೀಯ ಭಾಷೆಯಲ್ಲಿ ಹೈಪರ್ ಹೈಡ್ರೋಸಿಸ್ ಎಂದು ಕರೆಯುತ್ತಾರೆ. ಹೈಪರ್ ಅಂದರೆ ಅತ್ಯಧಿಕ, ಹೃಡ್ರೋಸಿಸ್ ಅಂದರೆ ಬೆವರು. ವಿಪರೀತ ಬೆವರುವುದರಿಂದ ಯಾವುದೇ ಅಪಾಯವಿಲ್ಲ. ಆದರೆ ಅದು ವ್ಯಕ್ತಿಯ ಕ್ವಾಲಿಟಿ ಲೈಫ್(ದಿನನಿತ್ಯದ ಬದುಕಿನಲ್ಲಿ) ಮೇಲೆ ಪರಿಣಾಮ ಬೀರುತ್ತದೆ.ವಿಶ್ವದಲ್ಲಿ ಶೇ.5ರಷ್ಟು ಜನರಿಗೆ ಈ ತೊಂದರೆಯಿದೆ. ಇದು ಎಲ್ಲಾ ವಯಸ್ಸಿನವರಲ್ಲೂ ಕಂಡು ಬರಬಹುದು, ಆದರೆ 24-64 ವರ್ಷದೊಳಗಿನವರಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಬಿಸಿಲಿನಲ್ಲಿ ಓಡಾಡಿದಾಗ, ವ್ಯಾಯಾಮ ಮಾಡಿದಾಗ ಮೈ ಬೆವರುವುದು ಸಹಜ, ಆದರೆ ಕೆಲವರಿಗೆ ಎಲ್ಲಾ ಸಮಯದಲ್ಲೂ ಮೈ ತುಂಬಾ ಬೆವರುವುದು. ಅವರ ಅಂಗೈ, ಕಾಲುಗಳು ಸದಾ ಬೆವರುತ್ತಿರುತ್ತದೆ. ಅತ್ಯಧಿಕ ಬೆವರು:ಬೆವರುವುದು ನಮ್ಮ ದೇಹದಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ. ಇದು ದೇಹದಲ್ಲಿ ಉಷ್ಣಾಂಶವನ್ನು ತಡೆಗಟ್ಟಿ, ತಂಪಾಗಿಸುವಲ್ಲಿ ಸಹಕಾರಿ. ನಮ್ಮ ದೇಹವು ಸುತ್ತಲಿನ ವಾತಾವರಣಕ್ಕೆ ಹೊಂದಿಕೊಳ್ಳುತ್ತದೆ, ಆದ್ದರಿಂದಲೇ ಬೇಸಿಗೆಯಲ್ಲಿ ಹೆಚ್ಚು ಬೆವರುವ ಮೂಲಕ ದೇಹವನ್ನು ತಂಪಾಗಿಡುತ್ತದೆ, ಚಳಿಗಾಲದಲ್ಲಿ ಬೆವರದೆ ದೇಹದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ವೈದ್ಯಕೀಯ ಉಪಕರಣಗಳಾದ ಆಕ್ಸಿಮೀಟರ್, ಥರ್ಮಮೀಟರ್, ಪಿ.ಪಿ ಕೀಟ್, ವೆಂಟಿಲೇಟರ್, ಸಿ.ಪಿ.ಎ.ಪಿ, ಡಿವೈಸಸ್ ಒಳಗೊಂಡಂತೆ ಎಲ್ಲಾ ಮೊಟ್ಟಣಗಳ ಮೇಲೆ ಗರಿಷ್ಠ ಮಾರಾಟ ಬೆಲೆ (ಎಲ್ಲಾ ತೆರಿಗೆಗಳು ಸೇರಿ) ಹಾಗೂ ಇತರ ಘೋಷಣೆಗಳನ್ನು ಕಡ್ಡಾಯವಾಗಿ ನಮೂದಿಸಿರಬೇಕು. ನಮೂದಿಸಿದ ಗರಿಷ್ಠ ಮಾರಾಟ ಬೆಲೆ (ಎಲ್ಲಾ ತೆರಿಗೆಗಳು ಸೇರಿ) ಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತಹ ಸಪ್ಲಾಯರ್, ಡಿಸ್ಟ್ರಿಬ್ಯೂಟರ್ ಮತ್ತು ಔಷಧಿ ಅಂಗಡಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಗ್ರಾಹಕರು ಮೊಟ್ಟಣದ ಮೇಲೆ ನಮೂದಿಸಿದ ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಯನ್ನು ಅಂಗಡಿಯವರು ತಮ್ಮಿಂದ ಪಡೆದುಕೊಂಡ ಸಂದರ್ಭದಲ್ಲಿ ತಾವು ಖಾಲಿ ಪೊಟ್ಟಣ ಮತ್ತು ಬಿಲ್ಲನ್ನು ಖಾಯ್ದಿರಿಸಿಕೊಂಡು ಅಂತಹ ಅಂಗಡಿಯವರ ವಿವರವನ್ನು ಸಹಾಯಕ ನಿಯಂತ್ರಕರು ಕಾನೂನು ಮಾಪನಶಾಸ್ತ್ರ ಇಲಾಖೆ ಉಡುಪಿ ಮೊಬೈಲ್ ಸಂಖ್ಯೆ 98451 54263 ಅಥವಾ ಈಮೇಲ್ ವಿಳಾಸ www.emapan.karnataka.gov.in ಗೆ ದೂರು ದಾಖಲಿಸುವಂತೆ ಜಿಲ್ಲಾ ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವ್ಯಾಪಕವಾಗಿ ಹಬ್ಬುತ್ತಿರುವ ಕೊರೊನಾ-19ರ ಎರಡನೆ ಅಲೆ, ಗ್ರಾಮೀಣ ಪ್ರದೇಶಗಳನ್ನೂ ವ್ಯಾಪಿಸಬಹುದು. ಈ ಹಂತದಲ್ಲಿ ಗ್ರಾಮಾಡಳಿತ ಅದನ್ನು ತಡೆಯುವ ನಿಟ್ಟಿನಲ್ಲಿ ವ್ಯಾಪಕ ಮುನ್ನೆಚ್ಚರಿಕೆ ಹಾಗೂ ಜನಜಾಗೃತಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಹೇಳಿದರು. ಅವರು ಮರವಂತೆ ಗ್ರಾಮ ಪಂಚಾಯತಿ ಕೋವಿಡ್ ಕಾರ್ಯಪಡೆ ರಚನೆಯ ಬಳಿಕ ನಡೆದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು. ಈ ಹಂತದಲ್ಲಿ ಎಲ್ಲರೂ ಕರ್ಫ್ಯೂ ನಿರ್ಬಂಧಗಳನ್ನು ಮತ್ತು ವೈಯಕ್ತಿಕ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಬಹಳ ಮುಖ್ಯ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ, ಉಪಾಧ್ಯಕ್ಷ ಲೋಕೇಶ್ ಖಾರ್ವಿ, ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ, ಗ್ರಾಮ ಕರಣಿಕ ಸಂದೀಪ್, ಅಂಗನವಾಡಿ ಮೇಲ್ವಿಚಾರಕಿ ನಿವೇದಿತಾ, ಬೀಟ್ ಪಿಸಿ ಚಂದ್ರ, ಮುಖ್ಯೋಪಾಧ್ಯಾಯ ಸತ್ಯನಾ ಕೊಡೇರಿ, ಗ್ರಂಥಾಲಯ ಮೇಲ್ವಿಚಾರಕಿ ಶ್ಯಾಮಲಾ, ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿ ಅನಿತಾ ಆರ್. ಕೆ, ಸ್ತ್ರೀಶಕ್ತಿ ಸಂಘಗಳ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿಗೆ ಇನ್ವರ್ಟರ್ ಬ್ಯಾಟರಿ ಕೊಳ್ಳಲು ಅಗತ್ಯವಿದ್ದ ಮೊತ್ತವನ್ನು ಉಪ್ಪುಂದದ ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೇಣಿಗೆಯಾಗಿ ನೀಡಲಾಯಿತು. ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಆಡಳಿತ ಟ್ರಸ್ಟೀ ಗೋವಿಂದ ಬಾಬು ಪೂಜಾರಿ ಅವರು ಟ್ರಸ್ಟ್ ವತಿಯಿಂದ ರೂ.50,000 ಚೆಕ್ಕನ್ನು ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸಂತೋಷ್ ಆನಂದ ಕಾಯ್ಕಿಣಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಪಿಎಸ್ಐ ಸಂಗೀತಾ ಅವರು ಉಪಸ್ಥಿತರಿದ್ದರು.
