Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಂವೇದನಾ ಪ್ರಥಮ ದರ್ಜೆ ಕಾಲೇಜಿನ ಮೂರನೆಯ ವಾರ್ಷಿಕೋತ್ಸವ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ದೂರಶಿಕ್ಷಣ ಕೇಂದ್ರದ ಉದ್ಘಾಟನಾ ಸಮಾರಂಭ ಮಾರ್ಚ್ ಒಂದು, ರವಿವಾರ ಜರುಗಿತು. ಉದ್ಘಾಟಕರಾಗಿ ಕುಂದಾಪುರ ತಾಲೂಕು ಕಸಾಪ ಅಧ್ಯಕ್ಷರಾದ ಡಾ. ಕಿಶೋರಕುಮಾರ ಶೆಟ್ಟಿ ಆಗಮಿಸಿ ಶುಭಾಶಯ ಕೋರಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಬ್ಯಾಂಕ್ ಬೈಂದೂರು ಶಾಖೆಯ ಪ್ರಬಂಧಕರಾದ ಪರಮೇಶ್ವರ ಪೂಜಾರಿ, ವಿಶ್ರಾಂತ ಉಪನ್ಯಾಸಕರಾದ ಪಿ. ಶೇಷಪ್ಪಯ್ಯ ಹೆಬ್ಬಾರ್, ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಅನಿಲ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಎಚ್, ಪ್ರಾಂಶುಪಾಲರಾದ ಸಂಧ್ಯಾ ಭಟ್ ಭಾಗವಹಿಸಿದ್ದರು. ವಾಗ್ಜೋತಿ ಶ್ರವಣದೋಷವುಳ್ಳ ಮಕ್ಕಳ ಶಾಲೆಯ ಮುಖ್ಯ ಶಿಕ್ಷಕರಾದ ರವೀಂದ್ರ ಎಚ್ ಅವರನ್ನು ಸನ್ಮಾನಿಸಲಾಯಿತು. ಸಂವೇದನಾ ಕಾಲೇಜಿನ ಅಧ್ಯಕ್ಷರಾದ ಡಾ. ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕಿ ಅಶ್ವಿನಿ ಆರ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಉಪನ್ಯಾಸಕಿ ವಿನಯಾ ವರದಿ ವಾಚಿಸಿದರು. ಸಂಧ್ಯಾ ಭಟ್ ಸ್ವಾಗತಿಸಿ, ಉಪನ್ಯಾಸಕಿ ದಿವ್ಯಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿಯಲ್ಲಿ ಪರಿವಾರ ಶಕ್ತಿಗಳ ನೂತನ ಬಾಲಾಲಯದಲ್ಲಿ ನಿಧಿ ಕುಂಭ ಸ್ಥಾಪನೆಯ ಧಾರ್ಮಿಕ ಕಾರ್ಯಕ್ರಮಗಳು ಆಗಮ ಪಂಡಿತರಾದ ಕೇಂಜ ಶ್ರೀಧರ ತಂತ್ರಿಗಳ ನೇತೃತ್ವದಲ್ಲಿ ಜರುಗಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ್ ಪೂಜಾರಿ, ಶಿರೂರು ಬಿಲ್ಲವ ಸಂಘದ ಅಧ್ಯಕ್ಷ ಚಿಕ್ಕು ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಸ್ಥಳೀಯರಾದ ಜಗನ್ನಾಥ ಶೆಟ್ಟಿ ನಾಕಟ್ಟೆ, ಆನಂದ ಶೆಟ್ಟಿ ನಾಕಟ್ಟೆ, ನಾಗರಾಜ ಗಾಣಿಗ ಬಂಕೇಶ್ವರ, ವಿನಾಯಕ ರಾವ್ ಮರವಂತೆ, ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು, ಮುತ್ತಯ್ಯ ಪೂಜಾರಿ, ಅಣ್ಣಪ್ಪ ಪೂಜಾರಿ ಯಡ್ತರೆ, ಚಂದ್ರ ಪೂಜಾರಿ, ವಾಸ್ತುಶಿಲ್ಪಿಗಳು ಮೊದಲಾದವರು ಇದ್ದರು. ಭಕ್ತಾಧಿಗಳು ಚಿನ್ನ, ಬೆಳ್ಳಿ, ಪಂಚಲೋಹ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಸಂಸತ್ತು ಈಚೆಗೆ ಸ್ವೀಕರಿಸಿದ ಪೌರತ್ವ ತಿದ್ದುಪಡಿ ಕಾಯಿದೆಯ ಕುರಿತು ದೇಶದ ನಿರ್ದಿಷ್ಟ ವರ್ಗದ ಹಿತಾಸಕ್ತಿಯ ರಕ್ಷಣೆಗಾಗಿ ಮತ್ತು ರಾಜಕೀಯ ಕಾರಣಗಳಿಗಾಗಿ ಜನರಲ್ಲಿ ತಪ್ಪು ಕಲ್ಪನೆಯನ್ನು ಬಿತ್ತಲಾಗುತ್ತಿದೆ. ಜನರು ಅದರ ಕುರಿತಾದ ಸತ್ಯವನ್ನು ತಿಳಿದುಕೊಳ್ಳಬೇಕು ಮತ್ತು ಅಂತಹ ಹುನ್ನಾರದ ವಿರುದ್ಧ ಜಾಗೃತರಾಗಬೇಕು ಎಂದು ವಿಕ್ರಮ ಪತ್ರಿಕೆಯ ಸಂಪಾದಕ ವೃಷಾಂಕ್ ಭಟ್ ಹೇಳಿದರು. ಹಿಂದು ಸಂಘಟನೆಗಳ ಆಶ್ರಯದಲ್ಲಿ ಭಾನುವಾರ ನಾವುಂದದಲ್ಲಿ ನಡೆದ ಸಿಎಎ ಮತ್ತು ಎನ್‌ಆರ್‌ಸಿ ಸಮರ್ಥನಾ ಸಮಾವೇಶದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಪಾಕಿಸ್ತಾನ, ಬಾಂಗ್ಲಾ, ಅಪಘಾನಿಸ್ತಾನದಲ್ಲಿ ಧಾರ್ಮಿಕ ಕಾರಣಗಳಿಗಾಗಿ ದೌರ್ಜನ್ಯಕ್ಕೊಳಗಾಗಿ 2014ರ ಡಿಸೆಂಬರ್ 21ರ ಮೊದಲು ಭಾರತಕ್ಕೆ ಬಂದಿರುವ ಮುಸ್ಲಿಮೇತರ 6 ಧರ್ಮಗಳ ಅಲ್ಪಸಂಖ್ಯಾತರಿಗೆ ದೇಶದ ಪೌರತ್ವ ನೀಡಲು ಅವಕಾಶ ಕಲ್ಪಿಸುವ ಕಾಯಿದೆ ಇದಾಗಿದೆ. ಅಕ್ರಮವಾಗಿ ಭಾರತಕ್ಕೆ ಬಂದಿರುವ ಅಂತಹ ವಲಸಿಗರಿಗೆ ಮಾತ್ರ ಇದು ಅನ್ವಯವಾಗುವುದೇ ಹೊರತು ಯಾವುದೇ ಕಾರಣಕ್ಕೂ ಭಾರತೀಯ ಪ್ರಜೆಗಳಿಗೆ ಇದು ಅನ್ವಯವಾಗದು ಎಂದು ಅವರು ಹೇಳಿದರು. ಆ ದೇಶಗಳಲ್ಲಿ ಇಸ್ಲಾಂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಸ್ಪರ್ಧಾತ್ಮಕ ಪರೀಕ್ಷೆಗೆ ಕಠಿಣ ಪರಿಶ್ರಮದಿಂದ ಅಭ್ಯಾಸ ಮಾಡಿದಾಗ ಸಾಧನೆ ಮಾಡಲು ಸಾಧ್ಯ.ಆದ್ದರಿಂದ ವಿದ್ಯಾರ್ಥಿಗಳು ಸಮಯ ಹಾಳು ಮಾಡದೆ ನಮ್ಮ ಗುರಿ ಕಡೆಗೆ ಮನಸ್ಸು ಕೇಂದ್ರಿಕರಿಸಿಕೊಂಡು ಹೆಚ್ಚಿನ ಅಭ್ಯಾಸದಲ್ಲಿ ತೊಡಗಿಸಿಕೊಳ್ಳಬೇಕೆಂದು ಮಡಿಕೇರಿಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಗೌರವ್ ಶೆಟ್ಟಿ ಹೇಳಿದರು ಅವರು ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್,ಕೋಟದಲ್ಲಿ ವಿ-ಶೈನ್ ತರಬೇತಿ ಸಂಸ್ಥೆ ಆಸರೆಯಲ್ಲಿ ನಡೆಯುತ್ತಿರುವ ಕರ್ನಾಟಕ ಲೋಕಸೇವಾ ಆಯೋಗವು ಕರೆದಿರುವ 2000 ಕ್ಕೂ ಮಿಕ್ಕಿ ಪ್ರಥಮ ದರ್ಜೆ ಸಹಾಯಕರು ಮತ್ತು ದ್ವೀತಿಯ ದರ್ಜೆ ಸಹಾಯಕ ಹುದ್ದೆಯ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡುತ್ತಿದ್ದರು. ವಿ-ಶೈನ್ ಸಂಸ್ಥೆಯ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲಿಯೇ ಓದಿನಲ್ಲಿ ಹೆಚ್ಚಿನ ಕಡೆ ಗಮನ ಹರಿಸಿ ಅಲ್ಲದೇ ಜ್ಞಾನ ಹೆಚ್ಚಿಸುವ ಪುಸ್ತಕವನ್ನು ಹೆಚ್ಚಾಗಿ ಓದಬೇಕು ಇದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ತಿಳಿಸಿದರು. ಈ ಸಂದರ್ಭದಲ್ಲಿ ವಿ-ಶೈನ್ ನ ಗಿರೀಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ, ಮಾರ್ಚ್ 02 : ಇಲ್ಲಿನ ಮಿನಿವಿಧಾನಸೌಧದಲ್ಲಿ ವ್ಯಕ್ತಿಯೋರ್ವ ಏಕಾಏಕಿ ಪಾಕಿಸ್ತಾನ ಪರ ಘೋಷಣೆ ಕೂಗಿ ಬಂಧಿತನಾದ ಘಟನೆ ನಡೆದಿದೆ. ಬಂಧಿತನನ್ನು ತಾಲೂಕಿನ ಕೋಡಿ ನಿವಾಸಿ ರಾಘವೇಂದ್ರ ಗಾಣಿಗ (42) ಎಂದು ತಿಳಿದುಬಂದಿದ್ದು, ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಬೆಳಿಗ್ಗೆ ತಾಲೂಕು ಕಛೇರಿಗೆ ಆಗಮಿಸಿದ ಆತ ಪಾಕಿಸ್ತಾನ್ ಜಿಂದಾಬಾದ್, ಜಿಹಾದಿ ಜಿಂದಾಬಾದ್ ಎಂದು ಘೋಷಣೆ ಕೂಗಲು ಆರಂಭಿಸಿದ್ದಾನೆ. ಅಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕುಂದಾಪುರ ಪೊಲೀಸ್ ಪಿಎಸೈ ಹರೀಶ್ ಆರ್. ಹಾಗೂ ಸಿಬ್ಬಂಧಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಆಪಾದಿತನ್ನು ಬಂಧಿಸಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ. ರಾಘವೇಂದ್ರ ಗಾಣಿಗ ಪದವೀಧರನಾಗಿದ್ದು ಖಾಸಗಿ ಶಾಲೆಯಲ್ಲಿ ಹಿಂದಿ ಶಿಕ್ಷಕನಾಗಿದ್ದ. ಆದರೆ ಎಂಟು ವರ್ಷಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದ. ಮದುವೆಯಾಗಿದ್ದು ಪತ್ನಿ, ಪುತ್ರಿಯನ್ನು ತೊರೆದು ತಂದೆ ತಾಯಿಯೊಂದಿಗೆ ವಾಸವಾಗಿದ್ದ ಎನ್ನಲಾಗಿದೆ. ರಾಘವೇಂದ್ರ ಮಾನಸಿಕ ಅವಸ್ಥನಾಗಿದ್ದು, ಕಳೆದ ಎಂಟು ವರ್ಷಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಕೂಡ ತಂದೆ ತಾಯಿಯೊಂದಿಗೆ ಕುಂದಾಪುರದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಉಪವಿಭಾಗದ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆಗಳಲ್ಲಿ ನಡೆಸಲಾಗುತ್ತಿದ್ದ ರಿಕ್ರಿಯೇಶನ್ ಕ್ಲಬ್‌ಗಳ ಮೇಲೆ ಭಾನುವಾರ ಸಂಜೆ ದಾಳಿ ನಡೆಸಿರುವ ಪೊಲೀಸರು ಜುಗಾರಿ ಆಟದಲ್ಲಿ (ಗ್ಯಾಂಬ್ಲಿಂಗ್) ತೊಡಗಿದ್ದ ೩೫ಕ್ಕೂ ಅಧಿಕ ಜುಗಾರಿಕೋರರನ್ನು ವಶಕ್ಕೆ ಪಡೆದು, ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ನಗದು, ಮೊಬೈಲ್, ಕಾರು, ಬೈಕುಗಳನ್ನು ವಶಕ್ಕೆ ಪಡೆದಿದ್ದಾರೆ. ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೇಶ್ವರ ಗ್ರಾಮದ ಕಾಗೇರಿಯಲ್ಲಿರುವ ರಿಕ್ರಿಯೇಶನ್ ಕ್ಲಬ್‌ನಲ್ಲಿ ಜುಗಾರಿ ಆಡುತ್ತಿದ್ದ ಹದಿಮೂರು ಮಂದಿ, ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀ ಲಕ್ಷ್ಮೀ ಕ್ಲಬ್‌ನಲ್ಲಿ ಇಸ್ಪೀಟ್ ಆಡುತ್ತಿದ್ದ ಹನ್ನೊಂದು ಮಂದಿ, ಸಿದ್ದಾಪುರ ಗ್ರಾಮ ದೊಟ್ಟಿನಬೇರು ಶಾಂತ ರಿಕ್ರಿಯೇಷನ್ ಕ್ಲಬ್‌ನಲ್ಲಿ ಜುಗಾರಿ ಆಡುತ್ತಿದ್ದ ಏಳು ಮಂದಿ ಹಾಗೂ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ತರೆ ಗ್ರಾಮದ ಎಂಜಿ ರಿಕ್ರಿಯೇಷನ್ ಕ್ಲಬ್‌ನಲ್ಲಿ ಜುಗಾರಿ ಆಡುತ್ತಿದ್ದ ಹನ್ನೊಂದು ಮಂದಿಯನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿತ್ತು. ಕುಂದಾಪುರ ತಾಲೂಕಿನ ಗೋಳಿಯಂಗಡಿ, ಸಿದ್ದಾಪುರ, ಕೋಟೇಶ್ವರ ಕಾಗೇರಿ, ಬೈಂದೂರು ತಾಲೂಕಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಮೂಡಿಬಿದಿರೆ: ಮಾಧ್ಯಮಗಳು ದೇಶಕ್ಕಾಗಿ ಕಾರ್ಯ ನಿರ್ವಹಿಸಬೇಕು ಹೊರತು ಪಕ್ಷ ಮತ್ತು ಸಿದ್ಧಾಂತಗಳಿಗಲ್ಲ ಎಂದು ಸುವರ್ಣ ನ್ಯೂಸ್ ಸುದ್ದಿ ವಾಹಿನಿಯ ಪ್ರಚಲಿತ ವಿದ್ಯಮಾನಗಳ ಸಂಪಾದಕ ಜಯಪ್ರಕಾಶ್ ಶೆಟ್ಟಿ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಭಾಗ ಮತ್ತು ಪದವಿ ಪತ್ರಿಕೋದ್ಯಮ ವಿಭಾಗದ ವತಿಯಿಂದ ‘ಮಾಧ್ಯಮ ಮತ್ತು ಹವಮಾನಕ್ರಮ’ ಎಂಬ ವಿಚಾರದ ಕುರಿತು ನಡೆದ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ‘ಮೀಡಿಯಾ ಬಝ್- 2020’ ಮಾಧ್ಯಮೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಸಕಾರಾತ್ಮಕವಾಗಿ ಸಮಾಜದ ತೊಡಕುಗಳನ್ನು ಹೋಗಲಾಡಿಸಲು ಮಾಧ್ಯಮವನ್ನು ಅಸ್ತ್ರವಾಗಿ ಬಳಸಬೇಕು. ಮಾಧ್ಯಮಗಳಿಗೆ ಯುವಕರು ಪತ್ರಕರ್ತರಾಗಿ ಬರಬೇಕು ಹೊರತಾಗಿ ಕಾರ್ಯಕರ್ತರಾಗಿ ಅಲ್ಲ. ಪತ್ರಕರ್ತರು ಸಮಾಜದ ಬಗೆಗಿನ ಕಳಕಳಿಯನ್ನು ಹೊಂದಿರಬೇಕು. ಆಗ ಮಾಧ್ಯಮದ ಮೂಲಕ ಸಮಾಜವನ್ನು ಪರಿವರ್ತಿಸಬಹುದು ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರಿನ ಆಶಾ ಚ್ಯಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಆಶಾ ಜ್ಯೋತಿ ರೈ, ಮಾಧ್ಯಮಗಳು ಸಮಾಜವನ್ನು ಎಲ್ಲಾ ಕ್ಷೇತ್ರಗಳಲ್ಲಿಯೂ ಉನ್ನತೀಕರಿಸುವ ಕಾರ್ಯವನ್ನು ಮಾಡಬೇಕು. ಪರಿಸರ ಸಂಬಂಧಿ ಕಾರ್ಯಗಳ ಕುರಿತಾದ ಅರಿವನ್ನು ಮೂಡಿಸುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಒಡಿಶಾದ ಭುವನೇಶ್ವರದಲ್ಲಿ ನಡೆಯುತ್ತಿರುವ ಅಖಿಲ ಭಾರತ ಅಂತರ್ ವಿ.ವಿ ಖೇಲೋ ಇಂಡಿಯ ಕ್ರೀಡಾಕೂಟದಲ್ಲಿ ಮಂಗಳೂರು ವಿಶ್ವವಿದ್ಯಾಲಯ ಪುರುಷ ತಂಡ 64 ಅಂಕಗಳೊಂದಿಗೆ ಹಾಗೂ ಮಹಿಳಾ ತಂಡ 51 ಅಂಕಗಳೊಂದಿಗೆ ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಮಂಗಳೂರು ವಿವಿ ಒಟ್ಟು 115 ಅಂಕಗಳೊಂದಿಗೆ ಸಮಗ್ರ ಚಾಂಪಿಯನ್ನಾಗಿ ಹೊರಹೊಮ್ಮಿತು. ಮಂಗಳೂರು ವಿವಿಯ ಒಟ್ಟು 7 ಚಿನ್ನ, 6 ಬೆಳ್ಳಿ ಹಾಗೂ 5 ಕಂಚಿನ ಪದಕದೊಂದಿಗೆ ಚಾಂಪಿಯನ್ನ ಪಟ್ಟವನ್ನು ತನ್ನಾದಾಗಿಸಿಕೊಂಡಿತು. ಮಂಗಳೂರು ವಿವಿಯನ್ನು ಪ್ರತಿನಿಧಿಸಿದ 32 ವಿದ್ಯಾರ್ಥಿಗಳ ತಂಡದಲ್ಲಿ 30 ವಿದ್ಯಾರ್ಥಿಗಳು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿದ್ದರು. ಗಳಿಸಿದ ಒಟ್ಟು 18 ಪದಕಗಳಲ್ಲಿ 17 ಪದಕಗಳು ಆಳ್ವಾಸ್ ವಿದ್ಯಾರ್ಥಿಗಳ ಪಾಲಾಗಿದ್ದವು. ಬೆಳ್ಳಿ ಪದಕ ಪಡೆದ 4*100 ರಿಲೇಯ 4 ಜನರ ತಂಡದಲ್ಲಿ ಇಬ್ಬರು ಆಳ್ವಾಸ್‌ನ ವಿದ್ಯಾರ್ಥಿಗಳಾಗಿದ್ದು, ಉಳಿದಿಬ್ಬರೂ ಉಡುಪಿಯ ಎಂಜಿಎಂ ಕಾಲೇಜು ಹಾಗೂ ಗೋಣಿಕೊಪ್ಪದ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳೂರು ವಿವಿಯ ಪುರುಷರ ಪದಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬದುಕನ್ನು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡುವವರು ಹಲವು ಸಂಕಷ್ಟಗಳನ್ನು ಎದುರಿಸಬೇಕಾಗುತ್ತದೆ. ಅವರು ಸುಖ, ಸಂಪತ್ತಿನಿಂದ ವಂಚಿತರಾಗುವುದು ಅನಿವಾರ್ಯ. ಆದರೆ ಜನರು ಆ ಕಾರಣಕ್ಕಾಗಿ ಅವರಿಗೆ ನೀಡುವ ಗೌರವ ಮತ್ತು ಮಾಡುವ ಅವರ ಸ್ಮರಣೆ ಅವರು ತ್ಯಾಗಮಾಡಿದ ಸುಖ, ಸಂಪತ್ತಿಗಿಂತ ಅಧಿಕ ಮೌಲ್ಯ ಹೊಂದಿರುತ್ತದೆ ಹಾಗೂ ಹೆಚ್ಚು ಕಾಲ ಬಾಳುತ್ತದೆ ಎಂದು ಬಾರ್ಕೂರು ಶ್ರೀ ಏಕನಾಥೇಶ್ವರಿ ದೇವಸ್ಥಾನದ ಅಧ್ಯಕ್ಷ ಎ. ಬಿ. ಶೇರೆಗಾರ್ ಹೇಳಿದರು. ಇಲ್ಲಿನ ಶಾರದಾ ಮಂಟಪದಲ್ಲಿ ಶನಿವಾರ ಆರಂಭವಾದ ಲಾವಣ್ಯ ಬೈಂದೂರು ಇದರ 43ನೆ ವಾರ್ಷಿಕೋತ್ಸವ ‘ರಂಗ ಲಾವಣ್ಯ-2020’ ಹಾಗೂ ಬಿ. ಮಾಧವ ರಾವ್ ಸ್ಮರಣೆಯ ಮೂರು ದಿನಗಳ ರಂಗಮಾಧವ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿದರು. ಮಾಧವ ರಾವ್ ಲಾವಣ್ಯದ ಸದಸ್ಯರಾಗಿ, ಕಲಾವಿದರಾಗಿ, ಬೆಂಬಲಿಗರಾಗಿ ದೀರ್ಘಕಾಲ ಅದರ ಯಶಸ್ಸಿಗೆ ದುಡಿದವರು. ವಿವಿಧ ಸಾರ್ವಜನಿಕ, ಧಾರ್ಮಿಕ ಕ್ಷೇತ್ರಗಳಲ್ಲೂ ಕೆಲಸ ಮಾಡಿದವರು. ಅವರನ್ನು ನಾಟಕೋತ್ಸವದ ಮೂಲಕ ಸ್ಮರಿಸುತ್ತಿರುವುದು ಅವರಿಗೆ ಸಲ್ಲಿಸಿದ ಅರ್ಥಪೂರ್ಣ ಗೌರವ ಎಂದು ಅವರು ಹೇಳಿದರು. ಶ್ರೀ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಫೆಬ್ರವರಿ 6 ರ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಚರಿಸುವ ಆಟೋರಿಕ್ಷಾಗಳಿಗೆ ಏಪ್ರಿಲ್ 1 ರಿಂದ 1.5 ಕಿ.ಮೀಟರ್‌ವರೆಗೆ ಕನಿಷ್ಟ ದರ ರೂ.30.00, ನಂತರದ ಪ್ರತಿ ಕಿ.ಮೀಟರ್‌ಗೆ ದರ ರೂ.17.00 ರಂತೆ ದರ ಪರಿಷ್ಕರಿಸಿ ಪ್ರಯಾಣಕ್ಕೆ ತಕ್ಕಂತೆ ಪರಿಷ್ಕೃತ ಮೀಟರ್ ದರವನ್ನು ಪ್ರಯಾಣಿಕರಿಂದ ಪಡೆಯುವಂತೆ ಆದೇಶ ಹೊರಡಿಸಲಾಗಿರುತ್ತದೆ. ಆದರೆ ಜಿಲ್ಲೆಯಲ್ಲಿ ಕೆಲವು ಆಟೋ ಚಾಲಕರು ಈಗಿನಿಂದಲೇ ಹೊಸ ದರ ಪಡೆಯುತ್ತಿರುವುದಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಪ್ರಾಧಿಕಾರಕ್ಕೆ ಬರುತ್ತಿವೆ. ಆದುದರಿಮದ ಉಡುಪಿ ಜಿಲ್ಲೆಯ ಎಲ್ಲಾ ಆಟೋರಿಕ್ಷಾ ಚಾಲಕ/ ಮಾಲಕರು ಏಪ್ರಿಲ್ 1 ರ ವರೆಗೆ ಕಡ್ಡಾಯವಾಗಿ ಈ ಹಿಂದೆ ನಿಗಧಿಪಡಿಸಿದ ದರವನ್ನು ಪ್ರಯಾಣಿಕರಿಂದ ಪಡೆಯುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಅಂತಹ ಚಾಲಕ/ ಮಾಲಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಿದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More