Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಉಡುಪಿ ರಾಮಕ್ಷತ್ರಿಯ ಯುವ ಸಂಫದ ಶತ ಕಾರ್ಯಕ್ರಮ ಸಂಭ್ರಮ ಸಾಂಸ್ಕ್ರತಿಕ ವೈಭವ 2020 ಪ್ರಯುಕ್ತ ಉಡುಪಿ ಪುರಭವನದಲ್ಲಿ ಏರ್ಪಡಿಸಿದ ರಾಮಕ್ಷತ್ರಿಯರ ಸಂಸ್ಕ್ರತಿ ಸಂಪ್ರದಾಯ ಬಿಂಬಿಸುವ ರಾಜ್ಯ ಮಟ್ಟದ ಕಿರುನಾಟಕ ಸ್ಪರ್ಧೆಯಲ್ಲಿ ಬೈಂದೂರಿನ ರಾಮಕ್ಷತ್ರಿಯರು ಅಭಿನಯಿಸಿದ ನಮ್ಮವರ ಸಂಸ್ಕ್ರತಿ ಪ್ರಥಮ ಸ್ಥಾನ ಪಡೆದು ಶಾಶ್ವತ ಫಲಕ ನಗದು ಬಹುಮಾನ ವಿಜೇತರಾದರು. ನಾಟಕವನ್ನು ನೀನಾಸಂ ಪದವೀಧರ ಶಿಕ್ಷಕ ಗಣಪತಿ ಹೋಬಳಿದಾರ್ ನಿರ್ದೇಶಿಸಿದರು, ಕಲಾವಿದರಾಗಿ ಜಿ ತಿಮ್ಮಪ್ಪಯ್ಯ, ಮಾತೃ ಮಂಡಳಿಯ ಅಧ್ಯಕ್ಷರಾದ ವನಜಾ ಭಾಸ್ಕರ್, ಗಾಯತ್ರಿ ರಾಮ ಸೋಡಿತಾರ್, ಸಾವಿತ್ರಿ ಹನುಮಂತ, ಆಶಾ ದಿನೇಶ್, ಸ್ವಾತಿ ಸತೀಶ ಹೋಬಳಿದಾರ್, ಸುಮಲತಾ ಶ್ರೀಧರ ವಸ್ರೆ, ರಮ್ಯ ಮಹಾಬಲ ಹೋಬಳಿದಾರ್, ಅಮ್ರತಾ ಎನ್, ಅಕ್ಷರಾ ಪಟವಾಲ್ ಅಭಿನಯಿಸಿದರು. ರಂಗ ತಾಲೀಮಿಗೆ ರಾಮಕ್ಷತ್ರಿಯ ಸಮಾಜ ಬೈಂದೂರಿನ ಅಧ್ಯಕ್ಷರಾದ ಪರಮೇಶ್ವರ ಹೋಬಳಿದಾರ್, ಯುವಕ ಸಮಾಜದ ಅಧ್ಯಕ್ಷರಾದ ಗುರುರಾಜ ಹೋಬಳಿದಾರ್, ವಸಂತಿ ನಾರಾಯಣ ಮದ್ದೋಡಿ ಸಹಕರಿಸಿದರು ರಂಗಸಜ್ಜಿಕೆಯನ್ನು ಶ್ರೀಧರ ಎಂ. ಪಿ , ಸುಧಾಕರ ಪಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಯಾವುದೇ ಕಾರ್ಯ ಸಫಲವಾಗಬೇಕಾದರೆ, ಕಾರ್ಯದಲ್ಲಿ ಯಶಸ್ಸು ಸಿಗಬೇಕಾದರೆ ಆತ್ಮವಿಶ್ವಾಸ, ಶ್ರದ್ಧೆ, ಛಲ ಮುಖ್ಯ. ಸಮಾಜಮುಖಿ ಕಾರ್ಯಗಳನ್ನು ಮಾಡುವಾಗ ಟೀಕೆ ಟಿಪ್ಪಣಿಗಳು ಕೇಳಿ ಬರುವುದು ಸಹಜ. ಆದರೆ ಇದರಿಂದ ಕುಗ್ಗದೆ ತಮ್ಮ ಕಾರ್ಯದಿಂದ ವಿಮುಖರಾಗದೆ ನಿರಂತರವಾಗಿ ಸಮಾಜ ಸೇವೆಯನ್ನು ಮಾಡಬೇಕು. ಇದರಿಂದ ಅದೆಷ್ಟೋ ಜನರಿಗೆ ಉಪಯೋಗವಾಗುತ್ತದೆ. ಈ ನಿಟ್ಟಿನಲ್ಲಿ ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋಟ್ಸ್ ಕ್ಲಬ್ ಕಳೆದ ಮೂರು ದಶಕಗಳಿಂದ ಸಮಾಜಮುಖಿ, ಜನರಿಗೆ ಉಪಯೋಗವಾಗುವ ಕೆಲಸ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ ಎಂದು ಪ್ರಾಧ್ಯಾಪಕಿ ಡಾ.ರೇಖಾ ವಿ.ಬನ್ನಾಡಿ ಹೇಳಿದರು. ಗಂಗೊಳ್ಳಿ ಗಂಗೊಳ್ಳಿಯ ಕೆಎಫ್‌ಡಿಸಿ ವಠಾರದಲ್ಲಿ ಜರಗಿದ ಗಂಗೊಳ್ಳಿಯ ಶ್ರೀ ಗುರುಜ್ಯೋತಿ ಸ್ಪೋರ್ಟ್ಸ್ ಕ್ಲಬ್‌ನ 36ನೇ ವಾರ್ಷಿಕೋತ್ಸವ ಮತ್ತು ಗುರುಜ್ಯೋತಿ ಶಿಕ್ಷಣ ನಿಧಿ ಯೋಜನೆಯ 19ನೇ ವರ್ಷದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಂಗೊಳ್ಳಿ ಸ.ವಿ.ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಉಮೇಶ ಕರ್ಣಿಕ್, ಪ್ರಗತಿ ಮಹಿಳಾ ವಿವಿಧೋದ್ದೇಶ ಸಂಘದ ಪ್ರಧಾನ ವ್ಯವಸ್ಥಾಪಕ ರಾಘವೇಂದ್ರ ಕುಲಾಲ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಆಧುನಿಕ ಜೀವನ ಶೈಲಿ, ಒತ್ತಡದ ಬದುಕು ನಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಯುವ ಜನತೆ ಒತ್ತಡದ ಬದುಕಿನಿಂದ ಮುಕ್ತಿ ಪಡೆಯಲು ಪರಿಹಾರ ಮಾರ್ಗಗಳನ್ನು ಸೂಕ್ತ ಸಮಯದಲ್ಲಿ ಕಂಡುಕೊಳ್ಳಬೇಕು ಎಂದು ನಿಮಾನ್ಸ್ ಆಸ್ಪತ್ರೆ ಬೆಂಗಳೂರು ಇದರ ಕ್ಷೇತ್ರ ಸಂಪರ್ಕಾಧಿಕಾರಿ ದಿವಾಕರ್ ಹೇಳಿದರು. ಇವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ನಿಮಾನ್ಸ್ ಆಸ್ಪತ್ರೆ ಬೆಂಗಳೂರು, ಜನ-ಆರೋಗ್ಯ ಕೇಂದ್ರ, ಯುವ ಸ್ಪಂದನ ಕೇಂದ್ರ ಉಡುಪಿ, ಜೇಸಿಐ ಕುಂದಾಪುರ ಸಿಟಿ ಆಯೋಜಿಸಿದ ಬಿಕ್ಕಟ್ಟು ನಿರ್ವಹಣೆ ಮತ್ತು ಆರೋಗ್ಯ ಜೀವನ ಶೈಲಿ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಆರೋಗ್ಯ ಜೀವನ ಶೈಲಿಯ ಮಾಹಿತಿದಾರರಾದ ಗುರುರಾಜ ಕೊತ್ವಾಲ್‌ರವರು ಹೃದಯ ಸಂಬಂಧಿ ಕಾಯಿಲೆಗಳಿಗೆ ಪ್ರಾಥಮಿಕ ಚಿಕಿತ್ಸೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಕೊತ್ತಾಡಿ ಉಮೇಶ್ ಶೆಟ್ಟಿ ಅಧ್ಯಕ್ಷತೆಯನ್ನು ವಹಿಸಿದ್ದರು. ಜೇಸಿಯ ಕುಂದಾಪುರ ಸಿಟಿಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ವ್ಯಕ್ತಿ, ಉದ್ಯಮ, ಸಂಸ್ಥೆ, ಸರಕಾರ ಯಾವುದೇ ಆಗಲಿ ಆರ್ಥಿಕ ಶಿಸ್ತು ಸರಿಯಾಗಿಲ್ಲದಿದ್ದಲ್ಲಿ ಸಂಪತ್ತಿನ ಕುಸಿತ ಅನಿವಾರ್ಯ. ದೂರದೃಷ್ಟಿ, ಅಧ್ಯಯನವಿಲ್ಲದಿದ್ದರೆ, ಅರ್ಥ ಸಚಿವರೂ ವಿಫಲರಾಗುತ್ತಾರೆ. ಉದ್ಯಮಕ್ಕಾಗಿ ಪಡೆದ ಆರ್ಥಿಕ ನೆರವು ಮರಪಾವತಿಯಲ್ಲಿ ಗಮನ ಹರಿಸದ ಉದ್ಯಮಿಗಳು, ವೃತ್ತಿ, ಉದ್ಯಮಕ್ಕಾಗಿ ಪಡೆದ ಸಾಲವನ್ನು ಅನುಪಯುಕ್ತ ಕಾರ್ಯಕ್ಕೆ ಬಳುವ ಮಾಲಕರು, ಸಾಲ ನೀಡಿಕೆ ಹಾಗೂ ವಸೂಲಾತಿ ವಿಷಯದಲ್ಲಿ ಬೇಜವಾಬ್ದಾರಿತನ ತೋರುವ ಬ್ಯಾಂಕ್ ಆಡಳಿತ ಹಾಗೂ ಅಧಿಕಾರಿಗಳು, ದೇಶದಲ್ಲಿ ಆರ್ಥಿಕ ಕುಸಿತಕ್ಕೆ ಕಾರಣರಾಗುತ್ತಾರೆ. ಬ್ಯಾಂಕುಗಳಲ್ಲಿ ಎನ್‌ಪಿಎ ಸಮಸ್ಯೆ ಹೆಚ್ಚಲು ಕಾರಣ ಎಂಬ ವಿಷಯವೂ ಸೇರಿದಂತೆ “ಭಾರತದ ಆರ್ಥಿಕ ಸಂರಕ್ಷಣೆಯ ಅನ್ವೇಷಣೆ” ಬಗ್ಗೆ ಹಿರಿಯ ಚಿಂತಕ, ಲೇಖಕ ವಿ.ಮೋಹನರಾವ್ ಅವರ ಲೇಖನಗಳು ವಿಚಾರಪೂರ್ಣವಾಗಿವೆ” ಎಂದು ಮಾಜಿ ಸಚಿವರೂ, ಮಾಜಿ ಸಂಸದರೂ ಆದ ಕೆ.ಜಯಪ್ರಕಾಶ ಹೆಗ್ಡೆ ಹೇಳಿದರು. ಕುಂದಪ್ರಭ ಸಂಸ್ಥೆಯ ಆಶ್ರಯದಲ್ಲಿ ಕುಂದಾಪುರದ ಭಂಡಾರ್‌ಕಾರ‍್ಸ್ ಕಾಲೇಜಿನ ಕುಂಭಾಶಿ ರಾಧಾಬಾ ವೆಂಕಟರಮಣ ಪ್ರಭು ರಂಗಮಂಟಪದಲ್ಲಿ “ಇನ್‌ಕ್ವೆಸ್ಟ್ ಆಫ್ ಎ ಸಸ್ಟೈನೆಬಲ್ ಇಂಡಿಯನ್ ಇಕಾನಮಿ” ಎಂಬ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಧಾನ ಸಭೆಯಲ್ಲಿ ಮಂಡಿಸಿರುವ 2020-21 ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಯಾವೆಲ್ಲಾ ಯೋಜನೆಗಳನ್ನು ಘೋಷಿಸಲಾಗಿದೆ ಎನ್ನುವ ಸಂಕ್ಷಿಪ್ತ ಅಂಶಗಳು ಇಲ್ಲಿವೆ. ಕರಾವಳಿ ಜಿಲ್ಲೆಗಳ ಬಂದರು ಅಭಿವೃದ್ದಿ, ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ, ಅಡಿಕೆ ಬೆಳೆಗಾರರ ಸಾಲಕ್ಕೆ ಬಡ್ಡಿ ವಿನಾಯಿತಿ ಪ್ರಾಶಸ್ತ್ಯ ನೀಡಲಾಗಿದೆ. ಬಜೆಟ್‌ನಲ್ಲಿರುವ ಕರಾವಳಿಯ ಪ್ರಮುಖ ಅಂಶಗಳು: * ಕರಾವಳಿ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ‘ಕಿಂಡಿ ಅಣೆಕಟ್ಟು ಯೋಜನೆ’ಗಳ ವ್ಯಾಪಕ ಅನುಷ್ಠಾನಕ್ಕೆ ಮಾಸ್ಟರ್ ಪ್ಲಾನ್. * ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ. * ಉಡುಪಿ ಜಿಲ್ಲೆ ಬೈಂದೂರು ತಾಲ್ಲೂಕಿನ ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಪೂರ್ಣಗೊಳಿಸಲು 85 ಕೋಟಿ ರೂ. ಅನುದಾನ * ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಜವುಳಿ ಪಾರ್ಕ್. * ಉಡುಪಿಯ ಅಂಗಾರು ಕಟ್ಟೆ ಬಂದರು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕೋಟ: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಸಿರು ಕೋಟ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ನಡೆಯುವ ೧೪ ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಹಿರಿಯ ಸಾಹಿತಿ ಅಂಬಾತನ ಮುದ್ರಾಡಿ ಹಾಗೂ ಎ.ಎಸ್.ಎನ್ ಹೆಬ್ಬಾರ್ ಅವರು ಚೇತನ ಫ್ರೌಡ ಶಾಲೆ ಹಂಗಾರಕಟ್ಟೆಯಲ್ಲಿ ಅನಾವರಣಗೊಳಿಸಿದರು. ಅನಾವರಣ ಮಾಡಿದ ಸಾಹಿತಿ ಎ.ಎಸ್.ಎನ್ ಹೆಬ್ಬಾರ್‌ರವರು ಐರೋಡಿ ಗ್ರಾಮದ ಸಾಧಕರನ್ನು ಸ್ಮರಿಸಿ ವೈದೇಹಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು. ಹಿರಿಯ ಸಾಹಿತಿ ಅಂಬಾತನ ಮುದ್ರಾಡಿ ಅವರು ಕನ್ನಡ ಸಾಹಿತ್ಯ ಹಾದಿಗಳ ಪಲ್ಲಟಗಳ ಬಗ್ಗೆ ವಿವರಿಸಿದರು. ಚೇತನಾ ಫ್ರೌಡ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಭರತ್ ಕುಮಾರ್ ಶೆಟ್ಟಿ ಹಾಗೂ ಕಾರ್ಯದರ್ಶಿ ಇಬ್ರಾಹೀಂ ಸಾಹೇಬ್ ಹಂಗಾರಕಟ್ಟೆ, ರೋಟರಿ ಮುಂದಿನ ವರುಷದ ನಿಯೋಜಿತ ಅಧ್ಯಕ್ಷರಾದ ರೊ.ರಾಜಾರಾಮ ಭಟ್, ಚೇತನಾ ಫ್ರೌಡಶಾಲೆಯ ಮುಖ್ಯೋಪಾಧ್ಯಯರಾದ ಗಣೇಶ್ ಜಿ, ಬಿ.ಡಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ಐ.ಬಿ.ಪಿ.ಎಸ್ ಬ್ಯಾಂಕಿಂಗ್ ಪ್ರೊಬೇಷನರಿ ಮತ್ತು ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಉಡುಪಿ ಇವರ ಆಶ್ರಯದಲ್ಲಿ 2019-2020 ನೇ ಸಾಲಿನಲ್ಲಿ ಎಸ್.ಸಿ.ಪಿ/ ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ನುರಿತ ತರಬೇತಿ ಸಂಸ್ಥೆಗಳ ಮೂಲಕ 2 ತಿಂಗಳ ಉಚಿತ ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಪದವೀಧರ ಅಭ್ಯರ್ಥಿಗಳು ಶೈಕ್ಷಣಿಕ ವಿದ್ಯಾರ್ಹತೆಯ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಆಧಾರ್ ಕಾರ್ಡು, 2 ಭಾವಚಿತ್ರದೊಂದಿಗೆ ಹೆಸರನ್ನು ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿಯವರ ಸಂಕೀರ್ಣ, ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820 – 2574869, 9480259790 ನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: ನೊವಲ್ ಕರೋನಾ ವೈರಸ್ ಬಗ್ಗೆ ಇತ್ತೀಚೆಗೆ ಎಲ್ಲಡೆ ವ್ಯಾಪಕವಾಗಿ ಕೇಳಿಬರುತ್ತಿದ್ದು, ಇದು ಹೊಸ ವೈರಸ್ ಪ್ರಬೇಧವಾಗಿದ್ದು, ಈ ಹಿಂದೆ ಮನುಷ್ಯರಲ್ಲಿ ಕಂಡು ಬಂದಿರಲಿಲ್ಲ, ತಜ್ಞರ ಪ್ರಕಾರ ಇದು ಪ್ರಾಣಿ ಪ್ರಬೇಧದಲ್ಲಿ ಹುಟ್ಟಿದ್ದು, ನಂತರ ಮನುಷ್ಯರಲ್ಲಿ ಹರಡಿದೆ, ಇದು ಒಬ್ಬರಿಂದ ಒಬ್ಬರಿಗೆ ಹರಡುವ ರೋಗವಾಗಿದ್ದು, ವೈರಸ್ ಪೀಡಿತ ವ್ಯಕ್ತಿಯಿಂದ(ಕೆಮ್ಮ ಅಥವಾ ಸೀನಿನ ಮೂಲಕ) ಅಥವಾ ಕಲುಷಿತ ಕೈಗಳಿಂದ ಅನ್ಯ ಕರೋನ ವೈರಸ್ ತಳಿಗಳು ಒಬ್ಬರಿಂದ ಒಬ್ಬರಿಗೆ ಹರಡಲಿವೆ. ತೀವ್ರ ಜ್ವರದ ಪ್ರಾರಂಭ, ನೆಗಡಿ, ಕೆಮ್ಮು, ಉಸಿರಾಟದ ತೊಂದರೆ ಹಾಗೂ ಭೇದಿ ಈ ರೋಗದ ಲಕ್ಷಣಗಳಾಗಿದ್ದು, ವೈರಸ್ ಸೋಂಕಿದ 14 ದಿನಗಳ ನಂತರ ರೋಗದ ಲಕ್ಷಣಗಳು ಕಂಡುಬರುತ್ತವೆ. ರೋಗ ಲಕ್ಷಣಗಳು ಕಂಡು ಬಂದ ವ್ಯಕ್ತಿಯ ಮೂಗು, ಗಂಟಲಿನ ಸ್ರಾವದ ಲೆಪನ ಮತ್ತು ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿ ಸೋಕನ್ನು ದೃಡಪಡಿಸಿಕೊಳ್ಳಬಹುದು. ಕೆಮ್ಮುವಾಗ ಮತ್ತು ಸೀನುವಾಗ ಬಾಯಿಗೆ ಕರವಸ್ತ್ರ ಅಡ್ಡ ಹಿಡಿಯುವ ಮೂಲಕ ಮತ್ತು ನಿಮ್ಮ ಕೈಯನ್ನು ಚೆನ್ನಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ(ರಿ) ಬೆಂಗಳೂರು ಇವರು ಧಾರವಾಡದಲ್ಲಿ ನಡೆಸಿದ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಗುಜ್ಜಾಡಿ ಗ್ರಾಮದ ಕಂಚುಗೋಡು, ನಿವಾಸಿ ಶಿಕ್ಷಕ ನಾಗರಾಜ ಖಾರ್ವಿ 50ಮೀ ಬ್ರೆಷ್ಟ್ ಸ್ಟ್ರೋಕ್ ಚಿನ್ನ, 100ಮೀ ಬ್ರೆಷ್ಟ್ ಸ್ಟ್ರೋಕ್ ಚಿನ್ನ, 200ಮೀ ಬ್ರೆಷ್ಟ್ ಸ್ಟ್ರೋಕ್ ಬೆಳ್ಳಿ, 4×100 ಮೆಡ್ಲೆ ರಿಲೇಯಲ್ಲಿ ಬೆಳ್ಳಿ, 4×100 ಫ್ರೀ ಸ್ಟೈಲ್ ರಿಲೇ ಬೆಳ್ಳಿ ಪಡೆದಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಗಂಗೊಳ್ಳಿ, ಸರಕಾರಿ ಪ್ರಾಥಮಿಕ ಶಾಲೆ ಗುಜ್ಜಾಡಿ ಮತ್ತು ಕಂಚುಗೋಡಿನ ಹಳೆವಿದ್ಯಾರ್ಥಿ.. ಇವರಿಗೆ ರೇಷ್ಮೆ ಇಲಾಖೆಯ ನಿರೀಕ್ಷಕರಾದ ಬಿ.ಕೆ.ನಾಯ್ಕ್ , ಶಿವಾನಂದ ಗಟ್ಟಿ, ಲೋಕರಾಜ್ ವಿಟ್ಲ ತರಬೇತಿ ನೀಡಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ ಉಡುಪಿ: 2019-20 ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿ ಪತ್ರ ಸಮಾರಂಭದಲ್ಲಿ ಉಡುಪಿ ಜಿಲ್ಲೆಯ ಕಬ್ಸ್-ಬುಲ್ ಬುಲ್, ಸ್ಕೌಟ್ಸ್-ಗೈಡ್ಸ್ ಮತ್ತು ರೋವರ‍್ಸ್ ರೇಂಜರ‍್ಸ್ ಸಾಧಕರಿಗೆ, ರಾಜ್ಯಪಾಲ ವಾಜುಬಾಯಿ ರೂಡಬಾಯಿ ವಾಲಾ ರವರು, ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಕಲ್ಯಾಣ್‌ಪುರ ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ಆದಿತ್ಯ (ಕಬ್), ಬೈಂದೂರು ತಾಲೂಕಿನ ಹೇರೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಮೃತಿ (ಬುಲ್ ಬುಲ್), ಬೈಂದೂರು ಚಪ್ಪರಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವೈಭವ್ (ಸ್ಕೌಟ್ಸ್), ಗಂಗೊಳ್ಳಿಯ ಸ್ಟೆಲ್ಲಾ ಮೇರಿಸ್ ಪ್ರೌಢ ಶಾಲೆಯ ಪ್ರೀತಿ(ಗೈಡ್ಸ್), ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಶ್ರೀಕರ ಆರ್.ಎನ್ (ರೋವರ್) ಹಾಗೂ ಕಾರ್ಕಳ ಮಂಜುನಾಥ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಕ್ಷೀತಾ (ರೇಂಜರ್) ಪ್ರಶಸ್ತಿ ಸ್ವೀಕರಿಸಿದರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯ ಹಾಗೂ ಇತರ ಪದಾಧಿಕಾರಿಗಳು ಭಾಗವಹಿಸಿದರು.…

Read More