ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ನಮ್ಮ ದೇಶ ಸ್ವಾತಂತ್ರ್ಯ ಪಡೆಯುವಲ್ಲಿ ಸಂಗೀತ ಮಹತ್ತರ ಪಾತ್ರ ವಹಿಸಿದೆ. ಸಂಗೀತಕ್ಕೆ ಅದ್ಭುತವಾದ ಶಕ್ತಿಯಿದ್ದು, ಶಾಂತಿ, ಸಾಮರಸ್ಯ, ಸಹಬಾಳ್ವೆ ನಡೆಸಲು ಸಂಗೀತ ಸಹಕಾರಿಯಾಗುತ್ತದೆ. ಬಾಲ್ಯದಲ್ಲಿಯೇ ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಿ ಅವರ ಆಸಕ್ತಿಯ ಕ್ಷೇತ್ರದಲ್ಲಿ ಅವರನ್ನು ಬೆಳೆಯಲು ಬಿಡಬೇಕು. ಶಿಕ್ಷಣದ ಜೊತೆಗೆ ಪಾಠೇತರ ಚಟುವಟಿಕೆಯಲ್ಲಿ ಮಕ್ಕಳು ಸಕ್ರಿಯರಾದರೆ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದು ಕುಂದಾಪುರದ ವಕೀಲ ರವಿಕಿರಣ್ ಮುರ್ಡೇಶ್ವರ ಹೇಳಿದರು. ಶ್ರೀ ಸಿಂಗಧೂರೇಶ್ವರಿ ಡಾನ್ಸ್ ಅಕಾಡೆಮಿ ಗಂಗೊಳ್ಳಿ ಮತ್ತು ಸನ್ನಿಧಿ ಎಂಟರ್ಪ್ರೈಸಸ್ ತ್ರಾಸಿ ಇವರ ಸಂಯುಕ್ತ ಆಶ್ರಯದಲ್ಲಿ ಪಂಚಗಂಗಾವಳಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಗಂಗೊಳ್ಳಿ ಪ್ರಾಯೋಜಕತ್ವದಲ್ಲಿ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಶನಿವಾರ ಸಂಜೆ ಜರಗಿದ ವಾಯ್ಸ್ ಆಫ್ ಕರಾವಳಿ ಕೋಗಿಲೆ -೨೦೨೦ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ನಮ್ಮ ನಡುವೆ ಅನೇಕ ಪ್ರತಿಭೆಗಳಿದ್ದು ಅವರನ್ನು ಗುರುತಿಸಿ ಸೂಕ್ತ ವೇದಿಕೆ ನೀಡುವಲ್ಲಿ ವಿಫಲರಾಗುತ್ತಿದ್ದೇವೆ. ಹೀಗಾಗಿ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶ ಕಲ್ಪಿಸಿಕೊಟ್ಟು ಅವರ ಭವಿಷ್ಯ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಉತ್ತರದಾಯಿತ್ವಗಳು ಪ್ರತಿಯೊಬ್ಬರ ಆಲೋಚನೆಗಳನ್ನು ಭಿನ್ನವಾಗಿಸುತ್ತದೆ. ವಿದ್ಯಾರ್ಥಿಗಳು ಯಾವಾಗಲೂ ನಕಾರಾತ್ಮಕ ವಿಷಯಗಳಿಗೆ ಕಿವಿಗೊಡದೆ, ಧನಾತ್ಮಕ ವಿಚಾರಗಳತ್ತ ಗಮನಹರಿಸಿದರೆ ಅವರೊಳಗಿನ ಮಾನಸಿಕ ತುಮುಲಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅಂತಾರಾಷ್ಟ್ರೀಯ ಖ್ಯಾತೀಯ ವಾಗ್ಮಿ ದೀಕ್ಷಿತ್ ಪರಶ್ಶಿನಿ ಹೇಳಿದರು. ಆಳ್ವಾಸ್ ಕಾಲೇಜಿನ ಮನಃಶಾಸ್ತ್ರ ವಿಭಾಗದ ಸೈಕಾಲಜಿ ಸ್ಟುಡೆಂಟ್ ಕೌನ್ಸಿಲ್ ’EUNOIA’ ವತಿಯಿಂದ ಹಮ್ಮಿಕೊಂಡಿದ್ದ ’ಲೈಫ್ ಈಸ್ ಪಾಸಿಟಿವ್’ ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕರಾಗಿ ಮಾತನಾಡಿದರು. ಜೀವನದಲ್ಲಿ ಸೋಲನ್ನು ಗೆಲ್ಲಬೇಕೆಂಬ ಹಠವಿದ್ದರೆ ಸಮಸ್ಯೆಗಳೇ ಇರುವುದಿಲ್ಲ. ಎಲ್ಲಿ ನಾವು ಸೋಲನ್ನು ಒಪ್ಪಿಕೊಂಡು, ನಕಾರಾತ್ಮಕ ಭಾವನೆಯಿಂದ ಮುಂದುವರಿಯುತ್ತೇವೆಯೋ ಅಲ್ಲಿ ನಾವು ನಿಜವಾಗಿ ಸೋಲನ್ನು ಕಾಣುತ್ತೇವೆ ಎಂದರು. ಮೋಟಿವೇಶನ್ ಪಾಠಗಳು ಬದುಕಿಗೆ ಹೊಸ ತಿರುವುಗಳನ್ನು ಕೊಡುವುದು ಸತ್ಯ.. ಆದರೆ, ಇಂದಿನ ದಿನಗಳಲ್ಲಿ ಮೋಟಿವೇಶನ್ ತರಗತಿಗಳು ಮನರಂಜನೆಯ ರೂಪವನ್ನು ಪಡೆದುಕೊಳ್ಳುತ್ತಿದೆ. ಮಗು ಹುಟ್ಟುವಾಗ ಎಷ್ಟು ಮುಗ್ಧವಾಗಿರುತ್ತೋ, ಆ ಮುಗ್ಧತೆಯು ಮರಣದವರೆಗೂ ನಮ್ಮೊಳಗಿದ್ದರೆ ಎಲ್ಲರ ಮನಗಳನ್ನೂ ಗೆಲ್ಲಲು ಸಾಧ್ಯವಾಗುತ್ತದೆ ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಟಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಜಾತಿ, ಮತ ಬೇಧವಿಲ್ಲದೆ ಎಲ್ಲರೂ ಪ್ರೀತಿ ವಿಶ್ವಾಸದಿಂದ ಭಜನೆ ಮಾಡಬೇಕು ಹಾಗೂ ಊರಿನ ಸ್ವಾಸ್ಥ್ಯವನ್ನು ಕಾಪಾಡಬೇಕು. ದೇವರ ಅನುಗ್ರಹ ಪ್ರಾಪ್ತಿಗೆ ಭಜನೆ ಸರಳ ಮಾರ್ಗವಾಗಿದೆ. ಶ್ರೀ ಇಂದುಧರ ದೇವಸ್ಥಾನದ ವತಿಯಿಂದ ಭಜನೆಯಿಂದ ದೇವರೆಡೆಗೆ ಎಂಬ ಪರಿಕಲ್ಪನೆಯೊಂದಿಗೆ ಆಯೋಜಿಸಲಾಗಿರುವ ನಗರ ಭಜನೆ ಕಾರ್ಯಕ್ರಮದಿಂದ ಊರಿನ ಸಾಮರಸ್ಯ ಉತ್ತಮವಾಗಿ, ಸಂಘಟನೆ ಹಾಗೂ ನಾಯಕತ್ವ ಬೆಳೆಯಬೇಕು ಎಂದು ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಪೂಜಾರಿ ಹೇಳಿದರು. ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿರುವ ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ ಅಂಗವಾಗಿ ಶುಕ್ರವಾರ ಸಂಜೆ ಜರಗಿದ ’ಭಜನೆಯಿಂದ ದೇವರೆಡೆಗೆ’ ಬೃಹತ್ ನಗರ ಭಜನೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶ್ರೀ ಇಂದುಧರ ದೇವಸ್ಥಾನದ ಬಳಿಯಿಂದ ಆರಂಭಗೊಂಡ ’ಭಜನೆಯಿಂದ ದೇವರೆಡೆಗೆ’ ಬೃಹತ್ ನಗರ ಭಜನೋತ್ಸವ ಶ್ರೀ ವೀರೇಶ್ವರ ದೇವಸ್ಥಾನದವರೆಗೆ ಸಾಗಿ ಸಮಾಪನಗೊಂಡಿತು. ವಿವಿಧ ಭಜನಾ ಮಂಡಳಿಗಳ ಸಹಕಾರದೊಂದಿಗೆ ವಿಜೃಂಭಣೆಯಿಂದ ಜರಗಿತು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ನೀರಿನ ದುರ್ಬಳಕೆ ಸಾಮಾಜಿಕ ಅಪರಾಧವಾಗಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಜೈಲಿಗಟ್ಟುವಂತಹ ಕಠಿಣ ಕಾನೂನು ಬಂದರೂ ಅಚ್ಚರಿ ಇಲ್ಲವೆಂದು ಜಲತಜ್ಞ, ಅಡಿಕೆ ಪತ್ರಿಕೆ ಸಂಪಾದಕ ಡಾ. ಶ್ರೀ ಪಡ್ರೆ ಎಚ್ಚರಿಸಿದ್ದಾರೆ. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಕಾಲೇಜಿನ ಎನ್ಸಿಸಿ ನೇವಲ್ ವಿಂಗ್, ಮಾನವಿಕ ಸಂಘ ಹಾಗೂ ರಾಜ್ಯಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ “ಮಳೆ ಕೊಯ್ಲು: ಏನು, ಏಕೆ ಮತ್ತು ಹೇಗೆ” ಎಂಬ ವಿಷಯದ ಕುರಿತು ಮಾತಾನಾಡಿದರು. ನೀರು ಸಮಾಜದ ಸಂಪತ್ತು. ಬತ್ತಿ ಹೋದ ನದಿ, ಬಾವಿ, ಕೆರೆಗಳನ್ನು ಸಾಮುದಾಯಿಕ ಪಾಲ್ಗೊಳ್ಳುವಿಕೆ ಮೂಲಕ ಪುನರುಜ್ಜೀವನಗೊಳಿಸಿ ನೀರಿನ ಸಮಸ್ಯೆ ನಿವಾರಿಸಬಹುದಾಗಿದೆ. ಈ ನಿಟ್ಟಿನಲ್ಲಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಅನೇಕ ಯಶಸ್ವಿ ಪ್ರಯೋಗಗಳು ನಮ್ಮ ಕಣ್ಣ ಮುಂದಿವೆ ಎಂದರು. ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಮಾತನಾಡಿ, ಅಂಕಿ ಅಂಶಗಳ ಪ್ರಕಾರ ಮೂಡುಬಿದಿರೆಯಲಿ ಕಳೆದ ೨೫ ವರ್ಷಗಳಿಂದ ೫೦೦ ಅಡಿಗಳಷ್ಟು ಜಲಮಟ್ಟ ಕುಸಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ: ಜೈವಿಕ ತಂತ್ರಜ್ಞಾನ ಮಾನವನ ವಿಕಾಸಕ್ಕೆ ಮಾತ್ರವಲ್ಲದೆ ಪ್ರಾಣಿ, ಸಸ್ಯ ಮತ್ತು ಪರಿಸರದ ಏಳಿಗೆಗಾಗಿ ಹುಟ್ಟಿಕೊಂಡಿದ್ದಾಗಿದೆ ಎಂದು ಹಾಸನದ ಕರ್ನಾಟಕ ಪಶುವೈದ್ಯ ಮತ್ತು ಪ್ರಾಣಿವಿಜ್ಞಾನ ವಿಶ್ವವಿದ್ಯಾಲಯದ ಅಸಿಸ್ಟೆಂಟ್ ಪ್ರೋಫೆಸರ್ ಡಾ. ಗೀರೀಶ್ ಬಿ. ಚಂದ್ರಶೇಖರ್ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನಲ್ಲಿ ಜೈವಿಕ ತಂತ್ರಜ್ಞಾನ ವಿಭಾಗ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ವಿಭಾಗದ ಹಳೆ ವಿದ್ಯಾರ್ಥಿಗಳ ಪ್ರಾಯೋಜಿತ ಒಂದು ದಿನದ ರಾಷ್ಟ್ರಮಟ್ಟದ ವಿಚಾರಗೋಷ್ಠಿ ’ಕರೆಂಟ್ ಅಡ್ವಾನ್ಸ್ಸ್ ಇನ್ ಮೆಡಿಕಲ್ ಆಂಡ್ ಇಂಡಷ್ಟ್ರಿಯಲ್ ಬಯೋಟೆಕ್ನಾಲಜಿ’ ನ್ನು ಉದ್ಘಾಟಿಸಿ ಮಾತನಾಡಿದರು. ಜೀವನದ ಸುಧಾರಣೆ ಎಂದಾಗ ಕೇವಲ ಮನುಷ್ಯನ ಜೀವನ ಸುಧಾರಣೆಗೆ ಸೀಮಿತವಾಗಿರದೆ ಪ್ರಾಣಿ, ಪಕ್ಷಿ, ಸಸ್ಯ ಮತ್ತು ಪರಿಸರದ ಸುಧಾರಣೆಯ ಅಂಶಗಳನ್ನು ಒಬ್ಬ ಜೈವಿಕ ತಂತ್ರಜ್ಞಾನಿ ಗಣನೆಗೆ ತೆಗೆದುಕೊಳ್ಳಬೇಕು ಎಂದರು. ಪ್ರಸ್ತುತ ಕೊರೋನಾ ವೈರಸ್ ಜಗತ್ತಿನಾದ್ಯಂತ ಸಂಚಲನ ಸೃಷ್ಟಿಮಾಡಿದೆ ಆದರೆ ಇದರೆ ಬಗ್ಗೆ ಜನರು ಚಿಂತೆಗೆ ಒಳಗಾಗಬೇಕಿಲ್ಲ ಏಕೆಂದರೆ ಹಿಂದೆಯು ಹಲವು ಮಾರಕ ರೋಗಗಳಿಗೆ ವಿಜ್ಞಾನಿಗಳು ಪರಿಹಾರ ನೀಡಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಗಂಗೊಳ್ಳಿ : ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ೭೫ನೇ ಮಹೋತ್ಸವದ ಪ್ರಯುಕ್ತ ಆಹ್ವಾನಿತ ಶಾಲಾ ಬಾಲಕ-ಬಾಲಕಿಯರ ತಂಡಗಳ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ ಹಾಗೂ ಧಾರ್ಮಿಕ ಸಭೆ ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ಜರಗಿತು. ಭಜನಾ ಸ್ಪರ್ಧೆ ಹಾಗೂ ಧಾರ್ಮಿಕ ಸಭೆ ಉದ್ಘಾಟಿಸಿ ಮಾತನಾಡಿದ ಗಂಗೊಳ್ಳಿಯ ಉದ್ಯಮಿ ಎಚ್.ಗಣೇಶ ಕಾಮತ್, ಭಜನೆಯಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರೆಯುತ್ತದೆ ಅಲ್ಲದೆ ಪರಿಸರದಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ. ಪರಿಶುದ್ಧ ಮನಸ್ಸಿನಿಂದ ಭಜನೆ ಮಾಡಿದರೆ ಆಧ್ಯಾತ್ಮಿಕ ಚೈತನ್ಯ ಜಾಗೃತವಾಗಿ ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಕಳೆದ ೭೫ ವರ್ಷಗಳಿಂದ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುತ್ತಾ, ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುತ್ತಿರುವ ಶ್ರೀ ಇಂದುಧರ ದೇವಸ್ಥಾನದ ಕೆಲಸ ಶ್ಲಾಘನೀಯ ಎಂದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸದ್ದರು. ಮುಖ್ಯ ಅತಿಥಿಯಾಗಿದ್ದ ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಶಿವಾನಂದ ಪೂಜಾರಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್…
ಕುಂದಾಪ್ರ ಡಾಟ್ ಕಾಂ ಸುದ್ದಿ ಕುವೈಟ್: ಕಳೆದ 35 ವರ್ಷಗಳಿಂದ ಕುವೈತ್ನಲ್ಲಿ ಅಸ್ತಿತ್ವದಲ್ಲಿರುವ ಭಾರತದ, ಕರ್ನಾಟಕ ರಾಜ್ಯ ಮೂಲದ ಸಾಮಾಜಿಕ, ಸಾಂಸ್ಕೃತಿಕ ಸಂಘವಾದ ಕುವೈತ್ಕನ್ನಡಕೂಟದ (ಕು.ಕ.ಕೂ.)ವಾರ್ಷಿಕ ಮಹಾಸಭೆಯನ್ನು ೨೦೧೯ ರ ಡಿಸೆಂಬರ್ ೨೮ ರಂದು ಖೈತಾನ್ನ ಭಾರತೀಯ ಸಮುದಾಯ ಶಾಲೆಯಲ್ಲಿ ನಡೆಸಲಾಯಿತು. ಮಹಾಸಭೆಯ ಜೊತೆಜೊತೆಗೆ ವಿವಿಧ ವಿನೋದಾವಳಿಯನ್ನೊಳಗೊಂಡ ಕಾರ್ಯಕ್ರಮದಲ್ಲಿ, 2020 ರ ಕೂಟದ ನಿರ್ವಹಣೆಯ ಮೇಲ್ವಿಚಾರಣೆ ನಡೆಸಲು ಹೊಸ ಕಾರ್ಯಕಾರಿ ಸಮಿತಿಯನ್ನು ಆಯ್ಕೆಮಾಡಲಾಯಿತು. ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಿಎಗುರುರಾಜ್ರಾವ್ ಅವರು ಸರ್ವಾನುಮತದಿಂದ ಚುನಾಯಿತರಾದ ಸದಸ್ಯರನ್ನು ಘೋಷಿಸಿದರು. ಅಧ್ಯಕ್ಷರು: ರಾಜೇಶವಿಟ್ಟಲ್ ಉಪಾಧ್ಯಕ್ಷರು: ಸಂದೀಪ್ಚಬ್ಬಾ ಕಾರ್ಯದರ್ಶಿ: ಪ್ರವೀಣ್ಕುಮಾರ್ಶೆಟ್ಟಿ ಖಜಾಂಚಿ: ಪ್ರದೀಪ್ರಾವ್ಆಳುಗ್ಗೇಲು ಚುನಾಯಿತರಾದ ಸದಸ್ಯರು 2020 ರ ವರ್ಷಕ್ಕೆಕುವೈತ್ ಕನ್ನಡ ಕೂಟದ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ. ಸಭೆಯಲ್ಲಿ ನೆರೆದ ಸದಸ್ಯರು ಅಧಿಕಾರ ಪದಗ್ರಹಣ ಮಾಡಿದ ಹೊಸ ಕಾರ್ಯಕಾರಿ ಸಮಿತಿಗೆ ಶುಭ ಹಾರೈಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ದೇವಾಡಿಗರ ಸಮಾಜ ಸೇವಾ ಸಂಘ ಕುಂದಾಪುರ ಇದರ ವತಿಯಿಂದ ಮಹಾಸಭೆ, ಪ್ರತಿಭಾ ಪುರಸ್ಕಾರ, ಸಾಮೂಹಿಕ ಗಣಹೋಮ, ಸತ್ಯನಾರಾಯಣ ಪೂಜೆ, ಸಮ್ಮಾನ ಕೋಣಿ ಗ್ರಾಮದ ಹುಣ್ಸೆಕಟ್ಟೆ ಸಮೀಪ ನಿರ್ಮಾಣವಾಗಲಿರುವ ದೇವಾಡಿಗರ ಸಂಘದ ಸಭಾಭವನದ ಸ್ಥಳದಲ್ಲಿ ನಡೆಯಿತು. ಸಮಾರಂಭ ಉದ್ಘಾಟಿಸಿದ ಮುಂಬಯಿನ ಉದ್ಯಮಿ ಸುರೇಶ ಡಿ ಪಡುಕೋಣೆ ಮಾತನಾಡಿ, ಇಲ್ಲಿ ನಿರ್ಮಾಣವಾಗಲಿರುವ ಸಭಾಭವನವು ದೇವಾಡಿಗರ ಸಂಘಕ್ಕೆ ಬಹು ದೊಡ್ಡ ಕೊಡುಗೆಯಾಗಲಿದೆ. ಇದರ ನಿರ್ಮಾಣಕ್ಕೆ ಎಲ್ಲರೂ ಸಂಘಟಿತರಾಗಿ ಸಹಕರಿಸಿ ಎಂದರು. ಕುಂದಾಪುರ ದೇವಾಡಿಗರ ಸಮಾಜ ಸೇವಾ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನ ಮಠ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕ್ಷೇತ್ರ ಸಮಿತಿಯ ನಿಯೋಜಿತ ಅಧ್ಯಕ್ಷ ಶಂಕರ ಅಂಕದಕಟ್ಟೆ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಛಾಯಾಚಿತ್ರಗ್ರಾಹಕ ಸಂತೋಷ ಕುಂದೇಶ್ವರ, ಬಿಎಸ್ಸಿ ಪದವಿಯಲ್ಲಿ ಮಂಗಳೂರು ವಿವಿ ಮಟ್ಟದ ರ್ಯಾಂಕ್ ವಿಜೇತೆ ಸಹನಾ, ಯಕ್ಷಗಾನ ಭಾಗವತ ರವಿ ಸೂರಾಲು, ಮಾತೃಶ್ರೀ ಟುಟ್ಯೋರಿಯಲ್ ಕುಂದಾಪುರದ ವಾಸುದೇವ ಬೈಂದೂರು ಅವರನ್ನು ಸನ್ಮಾನಿಸಲಾಯಿತು. ಬಾರ್ಕೂರು ಶ್ರೀ…
ಕುಂದಾಪ್ರ ಡಾಟ್ ಕಾಂ ಸುದ್ದಿ ಮೂಡುಬಿದಿರೆ:ಸೈಂಟ್ಅಲೋಷಿಯಸ್ ಕಾಲೇಜು ವತಿಯಿಂದ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ’ಮೀಡಿಯಾ ಮಂಥನ್’ ಮಾಧ್ಯಮೋತ್ಸವದಲ್ಲಿ ಸತತವಾಗಿ ಮೂರನೇ ಬಾರಿ ಆಳ್ವಾಸ್ ವಿದ್ಯಾರ್ಥಿಗಳ ತಂಡ ಸಮಗ್ರ ವಿರಾಗ್ರಣಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದೆ. ವರದಿಗಾರಿಕೆಯಲ್ಲಿ ದುರ್ಗಾಪ್ರಸನ್ನಾ ಪ್ರಥಮ, ಆರ್.ಜೆ ಸ್ಪರ್ಧೆಯಲ್ಲಿ ದಿಶಾ ಶೆಟ್ಟಿ ದ್ವಿತೀಯ, ಪಿ ಟು ಸಿಯಲ್ಲಿ ಚೈತ್ರಾ ಪ್ರಥಮ, ನೃತ್ಯದಲ್ಲಿ ವೀಕ್ಷಿತಾ ಶೆಟ್ಟಿ ಮತ್ತು ತಂಡ ಪ್ರಥಮ, ಫೊಟೋಗ್ರಾಫಿಯಲ್ಲಿ ಶರದ್ಆಚಾರ್ ದ್ವಿತೀಯ, ಮೇಕಿಂಗ್ ಎ ಪ್ರೊಡಕ್ಟ್ ಶ್ರೀಲಕ್ಷ್ಮಿ ಘಾಟೆ ಮತ್ತು ತಂಡ ಪ್ರಥಮ ಸ್ಥಾನವನ್ನು ಪಡೆದು ಪ್ರಶಸ್ತಿಯನ್ನು ಪಡೆದುಕೊಂಡರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ, ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಪ್ರಾಚಾರ್ಯ ಡಾ. ಕುರಿಯನ್ ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ, ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗ ಸಂಯೋಜಕ ಶ್ರೀನಿವಾಸ ಪೆಜತ್ತಾಯ ಹಾಗೂ ಮಾನವಿಕ ವಿಭಾಗದ ಡೀನ್ ಸಂಧ್ಯಾ ಕೆ ಎಸ್, ಪದವಿ ವಿಭಾಗದ ಮುಖ್ಯಸ್ಥೆ ರೇಷ್ಮಾ ಬಂಟ್ವಾಳ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಹಿಳಾ ವೇದಿಕೆ ಮತ್ತು ಮಣಿಪಾಲ ವಿಶ್ವವಿದ್ಯಾನಿಲಯದ ಕಲ್ಚರಲ್ ಕಮಿಟಿ (ಸಾಂಸ್ಕೃತಿಕ ಸಂಘ)ಯಿಂದ ಮಣಿಪಾಲ ವಿಶ್ವವಿದ್ಯಾನಿಲಯದ ಕಲಾವಿದೆ ಶಿಲ್ಪಾ ಜೋಶಿಯವರ ನನ್ನೊಳಗಿನ ಅವಳು ಏಕವ್ಯಕ್ತಿ ರಂಗ ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎನ್.ಪಿ.ನಾರಾಯಣ ಶೆಟ್ಟಿ ಮಾತನಾಡಿ ಇದೊಂದು ಅದ್ಭುತ ಪ್ರದರ್ಶನವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ನಾಟಕದದ ರಂಗವಿನ್ಯಾಸ ಮತ್ತು ನಿರ್ದೇಶಕರಾದ ರವಿರಾಜ್ ಹೆಚ್.ಪಿ, ಸಂಗೀತ ನೀಡಿದ ಗೀತಂ ಗೀರೀಶ್, ಮತ್ತು ಪರ್ಕದ ರಸಿಕರತ್ನ ವಿಟ್ಲ ಜೋಷಿ ಪ್ರತಿಷ್ಠಾನ ದ ಡಾ. ಹರೀಶ್ ಜೋಷಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ರೇಖಾ ಬನ್ನಾಡಿ ಮತ್ತು ಮಹಿಳಾ ವೇದಿಕೆಯ ಸಂಯೋಜಕರಾದ ಡಾ.ಯಶವಂತಿ ಕೆ. ಉಪಸ್ಥಿತರಿದ್ದರು.
