Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.28: ಭಾರತ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಯುವ ಜನರಿಗೆ ಅರಿವು ಮೂಡಿಸುವ ಹಾಗೂ ಅವರಲ್ಲಿ ದೇಶಪ್ರೇಮ, ದೇಶಾಭಿಮಾನ ಮೂಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತಿಹಾಸ ಗೊತ್ತಿದ್ದಲ್ಲಿ ಮಾತ್ರ ಯಾರೊಬ್ಬರು ಇತಿಹಾಸವನ್ನು ಸೃಷ್ಠಿಸಲು ಸಾಧ್ಯ ನಮ್ಮ ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸದ ಬಗ್ಗೆ ಪ್ರತಿಯೊಬ್ಬರು ತಿಳಿಯುವುದರೊಂದಿಗೆ ದೇಶ ಪ್ರೇಮವನ್ನು ಹಾಗೂ ದೇಶಾಭಿಮಾನವನ್ನು ಬೆಳೆಸಿಕೊಂಡು ನಾವು ಪಡೆದಿರುವ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಹೋಗಬೇಕಿದೆ ಎಂದರು. ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಡಲು ಅನೇಕ ಮಹಾನ್ ನಾಯಕರುಗಳಾದ ಜಾನ್ಸಿ ರಾಣಿ ಲಕ್ಷಿö್ಮÃ ಬಾಯಿ, ತಾಂತ್ಯಾ ಟೋಪಿ, ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಬಾಲಾ ಗಂಗಾಧರ ತಿಲಕ, ಸುಭಾಸ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಮೇ28: ಕೋಟೇಶ್ವರದ ಅಂಕದಕಟ್ಟೆ ಎಂಬಲ್ಲಿ ಮೇ.27ರಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ಕಟ್ಟೆ ಗೋಪಾಲಕೃಷ್ಣ ರಾವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ಯಮಿ ಮೊಳಹಳ್ಳಿ ಗಣೇಶ ಶೆಟ್ಟಿ ಅವರನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ. ಆತ್ಮಹತ್ಯೆ ಸಂಬಂಧ ಮೃತರ ಪುತ್ರ ಸುಧೀಂದ್ರ ಕಟ್ಟೆ ಪೊಲೀಸರಿಗೆ ದೂರು ನೀಡಿದ್ದು, ಸೆಕ್ಷನ್ 306 ಪ್ರಕಾರ ಪ್ರಕರಣ ದಾಖಲಾಗಿತ್ತು. ತಂದೆಯ ಸಾವಿಗೆ ಮೊಳಹಳ್ಳಿ ಗಣೇಶ ಶೆಟ್ಟಿ ಮತ್ತು ಬ್ರೊಕರ್ ಇಸ್ಮಾಯಿಲ್ ಅವರ ಪ್ರಚೋದನೆಯೇ ಕಾರಣ ಎಂದು ಅವರು ದೂರಿದ್ದರು. ಪ್ರಕರಣ ಆಪಾದಿತರ ಪ್ಯೆಕಿ ಗಣೇಶ ಶೆಟ್ಟಿ ಬಂಧಿಸಲ್ಪಟ್ಟಿದ್ದು, ಇಸ್ಮಾಯಿಲ್ ಬಂಧನಕ್ಕೆ ಬಲೆ ಬೀಸಲಾಗಿದೆ. ಶುಕ್ರವಾರ ರಾತ್ರಿ ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮನೆ ಮುಂದೆ ಹಾಜರುಪಡಿಸಲಾಗಿದ್ದು ಮೇ.30 ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವಶ್ಯವಿದ್ದಲ್ಲಿ ವ್ಯೆದ್ಯಕೀಯ ಚಿಕಿತ್ಸೆಗೆ ಒಳಪಡಿಸಬಹುದು ಎಂದು ಅದೇಶಿಸಿದೆ. ಇದನ್ನೂ ಓದಿ: ► ಕುಂದಾಪುರ: ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆ – https://kundapraa.com/?p=59468► ಆರ್ಥಿಕ ವ್ಯವಹಾರದಲ್ಲಿ 9 ಕೋಟಿ ಮೋಸ: ಡೆತ್‌ನೋಟ್‌ನಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಕನ್ನಡದ ಸೊಗಡನ್ನು ಹೊತ್ತಿರುವ ಸಿನೆಮಾ ‘ಕೋಳಿ ತಾಳ್’ ಇದೀಗ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಪ್ರೇಕ್ಷಕರ ಮೆಚ್ಚುಗೆಯ ಮಾತುಗಳು ಕೇಳಿಬರುತ್ತಿದೆ. ಕುಂದಾಪುರ, ಮಲೆನಾಡ ಭಾಗದಲ್ಲಿ ಅಜ್ಜಿ ಮನೆಗೆ ಮೊಮ್ಮಗ ಬಂದರೆ ಕೋಳಿ ಸಾರು ಮಾಡುವ ಸಂಪ್ರದಾಯವಿದೆ. ಹಾಗೆ ಮೊಮ್ಮಗ ಬಂದ ಹೊತ್ತಲ್ಲಿ ಸಾರು ಮಾಡಬೇಕಿದ್ದ ಕೋಳಿಯೇ ನಾಪತ್ತೆಯಾಗುತ್ತದೆ. ಆ ಕೋಳಿಯನ್ನು ಹುಡುಕಾಡುವ ಪ್ರಸಂಗವೇ ‘ಕೋಳಿ ತಾಳ್’ ಚಿತ್ರದ ಸಾರಾಂಶ. 90 ನಿಮಿಷಗಳ ಈ ಸಿನಿಮಾವನ್ನು 15ರಿಂದ 20 ದಿನಗಳ ಅವಧಿಯಲ್ಲಿ ಸಾಗರ, ಬ್ರಹ್ಮಾವರ, ಉಡುಪಿ, ಮಂದಾರ್ತಿಯಲ್ಲಿ ಶೂಟಿಂಗ್ ಮಾಡಲಾಗಿದೆ. ಲಾಕ್ಡೌನ್ಗೂ ಮುನ್ನ ಚಿತ್ರದ ಶೂಟಿಂಗ್ ನಡೆದಿತ್ತು. ಕೋಳಿ ತಾಳ್ ಆಫ್ ಬೀಟ್ ಸಿನಿಮಾವಾಗಿದ್ದು, ಮೂವರ ನಡುವೆ ನಡೆಯುವ ಕಥೆಯಾಗಿದೆ. ನ್ಯೂಯಾರ್ಕ್ ಇಂಡಿಯನ್ ಸಿನಿಮೋತ್ಸವ ಸೇರಿದಂತೆ ಹಲವು ಸಿನಿಮೋತ್ಸವಕ್ಕೆ ಆಯ್ಕೆಯಾದ ಹೆಗ್ಗಳಿಯೂ ಈ ಸಿನೆಮಾಕ್ಕಿದೆ. ಹಿರಿಯ ನಟರಾದ ರಾಧಾ ರಾಮಚಂದ್ರ ಮತ್ತು ಪ್ರಭಾಕರ್ ಕುಂದರ್ ಪ್ರಮುಖ ಪಾತ್ರದಲ್ಲಿದ್ದಾರೆ. ನಿರ್ದೇಶನದ ಜತೆಗೆ ನಟನಾಗಿಯೂ ಅಭಿಲಾಷ್ ಶೆಟ್ಟಿ ನಟಿಸಿದ್ದಾರೆ. ಸಚಿನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಲೇಷಿಯಾದಲ್ಲಿ ಜರುಗುತ್ತಿರುವ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ಗೆ ಬೆಂಗಳೂರಿನ ಎಸ್.ಇ.ಟಿ ಪಿಯು ಕಾಲೇಜು ವಿದ್ಯಾರ್ಥಿನಿ ಸ್ವಾತಿ ಎಸ್. ಪೂಜಾರಿ ಆಯ್ಕೆಯಾಗಿದ್ದಾರೆ. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿರುವ ಸ್ವಾತಿ ಎಸ್. ಪೂಜಾರಿ ಈವರೆಗೆ ಹಲವು ಜಿಲ್ಲಾ ರಾಜ್ಯ ಹಾಗೂ ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದು, ಪ್ರಸ್ತುತ ಓಕಿನವ ಡ್ರಾಗನ್ ಮಾರ್ಷಿಯಲ್ ಆರ್ಟ್ಸ್ ಫೆಡರೇಶನ್ ಸಂಸ್ಥೆಯಲ್ಲಿ ದಿಲೀಪ್ ಕುಮಾರ್ ಅವರಿಂದ ತರಬೇತಿ ಪಡೆಯುತ್ತಿದ್ದಾಳೆ. ಈಕೆ ಬೆಂಗಳೂರಿನಲ್ಲಿ ನೆಲೆಸಿರುವ ಸುರೇಶ್ ಪೂಜಾರಿ ಹಾಗೂ ಚಂದ್ರಿಕಾ ಸುರೇಶ್ ಪೂಜಾರಿ ದಂಪತಿಗಳ ಪುತ್ರಿಯಾಗಿದ್ದಾಳೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತ್ ಗ್ಯಾಸ್ ತನ್ನ ಗ್ರಾಹಕರಿಗಾಗಿ ಆಯೋಜಿಸಲಾಗಿರುವ ಅಡುಗೆ ಸ್ಪರ್ಧೆ ‘ಕಿಚನ್ ಚಾಂಪ್’ನಲ್ಲಿ ಭಾಗವಹಿಸಲು ಮೇ.31 ಕೊನೆಯ ದಿನವಾಗಿದೆ. ರಾಷ್ಟಮಟ್ಟದ ವಿಜೇತರಿಗೆ ರೂ. 51,000, ರನ್ನರ್ ಅಪ್ಗೆ ರೂ.25,000 ಹಾಗೂ 5 ಮಂದಿಗೆ ರೂ.10,000 ಬಹುಮಾನವಿದೆ. ರಾಜ್ಯಮಟ್ಟದಲ್ಲಿ ವಿಜೇತರಾಗುವವರಿಗೂ ಬಹುಮಾನವಿದ್ದು ಇದರೊಂದಿಗೆ ಪ್ರಥಮ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ಬೈಂದೂರಿನ ಶಾತೇರಿ ಕಾಮಾಕ್ಷಿ ಎಂಟರ್ಪ್ರೈಸಸ್ನ ಗ್ರಾಹಕರಿಗೆ ಪ್ರತ್ಯೇಕವಾಗಿ ತಲಾ ರೂ.10,000 ಬಹುಮಾನವನ್ನು ಘೋಷಿಸಲಾಗಿದೆ. ಸ್ವರ್ಧೆಯ ನಿಯಮಗಳು: ಸ್ವರ್ಧೆಯಲ್ಲಿ ಭಾಗವಹಿಸಲು ಎಲ್ಲರಿಗೂ ಮುಕ್ತ ಅವಕಾಶವಿದೆ. ನೀವು ತಯಾರಿಸುವ ಅಡುಗೆಗೆ ಬೇಕಾದ ಪದಾರ್ಥ, ಮಾಡುವ ವಿಧಾನ, ನಿಮ್ಮ ಹೆಸರು, ವಿಳಾಸ, ರಾಜ್ಯ ಹಾಗೂ ಸಂಪರ್ಕ ವಿವರಗಳನ್ನು ಲಿಖಿತ ರೂಪದಲ್ಲಿಯೇ ಸಲ್ಲಿಸಬೇಕು. ಇದರೊಂದಿಗೆ ಮೊಬೈಲ್ ಪೋನ್ ಅಡ್ಡಲಾಗಿ ಇರಿಸಿ ಎಂಪಿ-4 ಪಾರ್ಮ್ಯಾಟಿನಲ್ಲಿ 2 ನಿಮಿಷ ಮೀರದಂತೆ ಅಡುಗೆ ತಯಾರಿಯ ಸಣ್ಣ ವೀಡಿಯೋ ಮಾಡಿ ಕಳುಹಿಸಬೇಕು. ಸ್ವರ್ಧೆಯಲ್ಲಿ ಭಾಗವಹಿಸಲು ಮೇ.31 ಕೊನೆಯ ದಿನವಾಗಿದೆ. ಅಡಗೆಯ ವೀಡಿಯೋ ಹಾಗೂ ಲಿಖಿತ ರೂಪದ ಮಾಹಿತಿಯನ್ನು…

Read More

ಮಹಿಳೆಯರು ಯಾವಾಗಲೂ ಚೂಸಿ ಅಂದರೆ ತಪ್ಪಾಗಲಾರದು, ತುಂಬಾ ಯೋಚನೆ ಮಾಡಿ ಎಲ್ಲವನ್ನೂ ಆಯ್ಕೆ ಮಾಡಿಕೊಳ್ಳುತ್ತಾರೆ. ಯಾರ ಮೇಲೂ ಬೇಗನೆ ನಂಬಿಕೆ ಬರುವುದಿಲ್ಲ ತುಂಬಾ ಸಮಯದ ನಂತರ ಆಲೋಚನೆ ಮಾಡಿ ಪ್ರತಿಯೊಂದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಎಲ್ಲವೂ ಇಷ್ಟೊಂದು ಚೂಸಿ ಆಗಿರುವ ಮಹಿಳೆಯರು ಇನ್ನು ತಮ್ಮ ಸಂಗಾತಿಯ ಆಯ್ಕೆಯ ವಿಚಾರದಲ್ಲಿ ಸುಮ್ಮನಿರುವುದಿಲ್ಲ ಎಲ್ಲವೂ ಅಳೆದು ತೂಗಿ ಸಂಬಂಧವನ್ನು ಗಟ್ಟಿಮಾಡಿಕೊಳ್ಳುತ್ತಾರೆ. ಇಂತಹ ಸಂದರ್ಭದಲ್ಲಿ ಹುಡುಗರು ಮಾಡುವ ಕೆಲವೊಂದು ವಿಚಾರಗಳು ಹುಡುಗಿಯರಿಗೆ ನೋವುಂಟಾಗುವುದು. ನೀವು ಮಾಡುವ ಕೆಲವೊಂದು ವಿಚಾರಗಳು ಹುಡುಗಿಯರಿಗೆ ಹಿಡಿಸದೇ ಹೋಗಬಹುದು. ಇಂತಹ ಸಮಯದಲ್ಲಿ ನೀವು ಯಾವುದು ಆಕೆಗೆ ಇಷ್ಟವಲ್ಲ ಎಂಬುದನ್ನು ಅರಿಯುವುದು ತುಂಬಾ ಮುಖ್ಯ. ಅದಕ್ಕಾಗಿ ಈ ಲೇಖನ ನಿಮಗಾಗಿ ಹಲವು ವಿಚಾರಗಳನ್ನು ತಿಳಿಸಿದ್ದೇವೆ. ನಕಾರಾತ್ಮಕ ಯೋಚನೆ:ಯಾವುದೇ ವಿಚಾರದಲ್ಲಿ ನಕಾರಾತ್ಮಕ ಮಾತು ಅವರಲ್ಲಿನ ಆತ್ಮವಿಶ್ವಾಸದ ಕೊರತೆಯನ್ನು ಸೂಚಿಸುತ್ತದೆ. ಅದಲ್ಲದೇ ಹುಡುಗಿಯರು ಯಾವಾಗಲೂ ಗಮನಿಸುವಂತಹ ವಿಚಾರವೆಂದರೆ ತಮ್ಮ ಬಗ್ಗೆ, ಕುಟುಂಬದ ಬಗ್ಗೆ, ಸ್ನೇಹಿತರು, ಕಚೇರಿ ಇತ್ಯಾದಿಗಳ ಬಗ್ಗೆ ತಮ್ಮ ಸಂಗಾತಿ ಯಾವ ರೀತಿ ಮಾತನಾಡುವರು ಎಂದು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಕಟ್ಟೆ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) ಅವರು ಬರೆದಿಟ್ಟ ಡೆಟ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ಈರ್ವರ ಹೆಸರನ್ನು ಉಲ್ಲೇಖಿಸಲಾಗಿದೆ. ಕುಂದಾಪುರ ಪೊಲೀಸ್ ಎಸ್‌ಹೆಚ್‌ಓ ಅವರಿಗೆ ತಮ್ಮ ಕಚೇರಿಯ ಲೆಟರ್‌ಹೆಡ್‌ನಲ್ಲಿ ಡೆತ್‌ನೋಟ್ ಬರೆದಿದ್ದು ಹಣಕಾಸಿನ ವ್ಯವಹಾರದಲ್ಲಿ ತನಗೆ ಅನ್ಯಾಯವಾಗಿರುವ ಬಗ್ಗೆ ಬರೆದಿಟ್ಟಿದ್ದಾರೆ. ಗೋಪಾಲಕೃಷ್ಣ ರಾವ್ ಅವರು ಡೆತ್‌ನೋಟ್‌ನಲ್ಲಿ ಮೊಳಹಳ್ಳಿ ಗಣೇಶ್ ಶೆಟ್ಟಿ, ಇಸ್ಮಾಯಿಲ್ ಹಂಗಳೂರು ಹೆಸರು ಪ್ರಸ್ತಾಪ ಮಾಡಿದ್ದು, ಇವರಿಬ್ಬರೂ ಗೋಲ್ಡ್ ಜ್ಯುವೆಲ್ಲರಿ ಹೆಸರಿನಲ್ಲಿ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ 2012 ಫೆಬ್ರವರಿ 3ರಂದು 3 ಕೋಟಿ 34 ಲಕ್ಷ ನಗದು, 5 ಕೆ.ಜಿ ಚಿನ್ನ ಪಡೆದುಕೊಂಡಿದ್ದರು. ಆ ಬಳಿಕ ನಗ-ನಗದು, ಅದಕ್ಕೆ ಸಲ್ಲಬೇಕಾದ ಬಡ್ಡಿಯನ್ನೂ ವಾಪಾಸ್ ಮರಳಿಸಿರಲಿಲ್ಲ. ಈ ವಿಚಾರದಲ್ಲಿ ಹಲವು ಬಾರಿ ಜನಪ್ರತಿನಿಧಿಗಳ ನೇತೃತ್ವದಲ್ಲಿ ಪಂಚಾಯತಿ ಮಾಡಿದ್ದು, ವಾಯಿದೆ ಪಡೆದಿದ್ದರು. ಈವರೆಗೆ 9 ಕೋಟಿ ಮೊತ್ತದ ಹಣ, ಚಿನ್ನ ವಾಪಾಸ್ ನೀಡದೆ ಮೋಸ ಮಾಡಿದ್ದಾರೆ. ಗಣೇಶ್ ಶೆಟ್ಟಿ ಮೊಳಹಳ್ಳಿ ಮನೆಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಪ್ರಸಿದ್ಧ ಉದ್ಯಮಿ, ಖಾಸಗಿ ಆಸ್ಪತ್ರೆಯ ಮಾಲಕ ಗೋಪಾಲಕೃಷ್ಣ ರಾವ್ (ಕಟ್ಟೆ ಭೋಜಣ್ಣ) (80 ಪ್ರಾಯ) ತಮ್ಮ ಚಾರ್ಟೆಡ್ ಅಕೌಟೆಂಟ್ ಮನೆಯ ಸಿಟೌಟ್‌ನಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಕೋಟೇಶ್ವರ ಬಳಿ ಪುರಾಣಿಕ ರಸ್ತೆಯಲ್ಲಿರುವ ಸಿಎ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ನಲ್ಲಿ ಗುರುವಾರ ಬೆಳಗ್ಗೆ 6 ಗಂಟೆಯ ಸುಮಾರಿಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಮೇಲ್ನೋಟಕ್ಕೆ ತಿಳಿದುಬಂದಿದೆ. ಜಮೀನು ಮತ್ತು ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿದ್ದು, ಸಿಎ ಮನೆಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವುದರ ಹಿಂದಿನ ಉದ್ದೇಶವೇನು ಎಂಬುದು ತಿಳಿದುಬಂದಿಲ್ಲ. ತನಿಕೆ ಬಳಿಕ ಸತ್ಯ ತಿಳಿಯಲಿದೆ. ಕಟ್ಟೆ ಭೋಜಣ್ಣ ಬೆಂಗಳೂರಿನಲ್ಲಿ ಹೋಟೆಲ್, ಬಟ್ಟೆ ಅಂಗಡಿಗಳನ್ನು ನಡೆಸುತ್ತಿದ್ದರು. ಕುಂದಾಪುರದ ಚಿನ್ಮಯಿ ಆಸ್ಪತ್ರೆ ನಡೆಸುತ್ತಿದ್ದರು. ಭೋಜಣ್ಣ ಅವರು ಪತ್ನಿ ಭಾಗೀರಥಿ, ಇಬ್ಬರು ಗಂಡು ಮಕ್ಕಳು, ಓರ್ವ ಮಗಳು ಹಾಗೂ ಬಂಧುಗಳನ್ನು ಅಗಲಿದ್ದಾರೆ. ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಹಾಗೂ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಂದಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ರಂಗದಲ್ಲಿಯೂ ಪುರುಷರಷ್ಟೆ ಸಮಾನರಾಗಿ ಸಮಾಜದಲ್ಲಿ ಗುರುತಿಸಿಕೊಳ್ಳುತ್ತಿದ್ದಾಳೆ, ಅದರಲ್ಲಿಯೂ ಆರ್ಥಿಕ ವ್ಯವಹಾರದಲ್ಲಿ ಅತ್ಯಂತ ಶಿಸ್ತನ್ನು ಪ್ರದರ್ಶಿಸುವ ಅವರ ಕೈಯಲ್ಲಿ ಸಹಕಾರಿ ಸಂಸ್ಥೆಗಳ ಜವಾಬ್ದಾರಿ ನೀಡಿದರೆ ಅದನ್ನು ಯಶಸ್ವಿಯಾಗಿ ನಿಭಾಯಿಸುತ್ತಾರೆ ಎಂದು ಮಾಜಿ ಶಾಸಕ ಹಾಗೂ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಳದ ಆಡಳಿತ ಮೋಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ ಹೇಳಿದರು. ಬಸ್ರೂರು ಮಾರ್ಗೋಳಿಯಲ್ಲಿ ಶ್ರೀ ಶನೇಶ್ವರ ಮಹಿಳಾ ಸೌಹಾರ್ದ ಸಹಕಾರಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಉಳಿತಾಯದ ವಿಷಯದಲ್ಲಿ ಸಮರ್ಥರಾಗಿದ್ದು, ಇಂದು ತಮ್ಮ ಉಳಿತಾಯದ ಹಣವನ್ನು ಸಹಕಾರಿ ಸಂಘಗಳಲ್ಲಿ ಠೇವಣೆಯಿಟ್ಟು ಆರ್ಥಿಕ ವಹಿವಾಟು ನಡೆಸಿ ಸ್ವಾವಲಂಬಿ ಜೀವನ ನಡೆಸುತ್ತಿರುವುದು ಉತ್ತಮ ಬೆಳವಣೆಯಾಗಿದೆ ಎಂದರು. ಉಡುಪಿ ಜಿಲ್ಲಾ ಸೌಹಾರ್ದ ಸಂಯುಕ್ತ ಸಹಕಾರಿ ಅಧ್ಯಕ್ಷ ಭಾಸ್ಕರ ಕಾಮತ್ ಷೇರುಪತ್ರ ಬಿಡುಗಡೆ ಮಾಡಿ ಮಾತನಾಡಿ, ರಾಜ್ಯದಲ್ಲಿ ೫ಸಾವಿರಕ್ಕೂ ಅಧಿಕ ಸೌಹಾರ್ದ ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಬಹುತೇಕ ಸಂಘಗಳು ಲಾಭದಲ್ಲಿದೆ. ನಮ್ಮ ಸಂಘಗಳು ಸದಸ್ಯರಿಗೆ ತ್ವರಿತ ಸೇವೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಮೇ.25: ಮೈಸೂರು ರಂಗಾಯಣದ ರಂಗ ತರಬೇತಿ ಸಂಸ್ಥೆಯಲ್ಲಿ ಒಂದು ವರ್ಷದ ರಂಗಶಿಕ್ಷಣ ಡಿಪ್ಲೋಮಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ, 18 ರಿಂದ 28 ವರ್ಷದೊಳಗಿನ ಅಭ್ಯರ್ಥಿಗಳು ಜೂನ್ 17 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://www.rangayana.org/ ಅಥವಾ ಉಪ ನಿರ್ದೇಶಕರು, ರಂಗಾಯಣ, ಕಲಾಮಂದಿರ ಆವರಣ, ಮೈಸೂರು ದೂ.ಸಂಖ್ಯೆ: 0821-2512639, ಮೊ. ನಂ: 9448938661 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More