ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಡಿ ನಿವಾಸಿ, ಲೋಧಾ ಗ್ರೂಪ್ನ ಆಡಳಿತ ಹಾಗೂ ಮಾನವ ಸಂಪದ ವಿಭಾಗದ ಉಪಾಧ್ಯಕ್ಷರಾಗಿರುವ ಗಣೇಶ್ ಪೂಜಾರಿ ಅವರು ಫೋರ್ಬ್ಸ್ ಇಂಡಿಯಾ ಸಹಭಾಗಿತ್ವದಲ್ಲಿ ಪ್ರಕಟವಾದ ’ಗ್ರೇಟ್ ಪೀಪಲ್ ಮ್ಯಾನೇಜರ್ಸ್ ಸ್ಟಡಿ’ ಬ್ಯಾನರ್ನಡಿ ’ಗ್ರೇಟ್ ಮ್ಯಾನೇಜರ್ ಇನ್ಸ್ಟಿಟ್ಯೂಟ್’ ಭಾರತದ100 ಶ್ರೇಷ್ಠ ವ್ಯವಸ್ಥಾಪಕರ ಪಟ್ಟಿಯಲ್ಲಿ ಒಬ್ಬರಾಗಿ ಸ್ಥಾನ ಪಡೆದಿದ್ದಾರೆ. ಕೋಡಿಯ ದಿ. ಬಚ್ಚ ಪೂಜಾರಿ ಮತ್ತು ದಿ. ಕಮಲಾ ಪೂಜಾರ್ತಿ ಅವರ ಪುತ್ರ ಗಣೇಶ್ ಪೂಜಾರಿ, ಆರ್ಥಿಕ ಬಡತನದ ಕಾರಣದಿಂದ ಎಳವೆಯಲ್ಲಿಯೇ ಸಂಪಾದನೆಗೆ ತೆರಳಿ ಶಾಲೆಗೆ ಸರಿಯಾಗಿ ಹಾಜರಾಗಲು ಸಾಧ್ಯವಾಗದೆ ಆ ಕಾರಣದಿಂದ ಕಲಿಕೆಯಲ್ಲಿ ಹಿಂದಿಲ್ಲದಿದ್ದರೂ 7 ವರ್ಷಗಳಲ್ಲಿ ಮುಗಿಸುವ ಪ್ರಾಥಮಿಕ ಶಿಕ್ಷಣಕ್ಕೆ 11 ವರ್ಷ ಬೇಕಾಯಿತು ಕೋಡಿಯ ಸೋನ್ಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಪಡೆದು ಬಳಿಕ ಹಾಜಿ ಕೆ. ಮೊಯ್ದೀನ್ ಬ್ಯಾರಿ ಹೈಸ್ಕೂಲ್ನಲ್ಲಿ ಶಿಕ್ಷಣ ಮುಂದುವರಿಸಿದರು. ಎಸೆಸೆಲ್ಸಿ ಬಳಿಕ ಮುಂಬಯಿಗೆ ಬಂದು ಹಗಲು ಹೊತ್ತು ಕೆಲಸ ಮಾಡಿಕೊಂಡು ರಾತ್ರಿ ಕಾಲೇಜಿನ ಮೂಲಕ ಪಿಯುಸಿಯನ್ನು ಮುಂಬಯಿಯ ಕನ್ನಡ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದೇಶ ನಮಗೇನು ಕೊಟ್ಟಿದೆ ಎಂದು ಕೇಳದೇ ದೇಶಕ್ಕಾಗಿ ನಾನೇನು ಮಾಡಬಲ್ಲೆ ಎಂದು ಚಿಂತಿಸುವ ಸಮಯವಿದು. ವಿಶ್ವಪಟಲದಲ್ಲಿ ಭಾರತ ಒಂದು ಶಕ್ತಿಯಾಗಬೇಕಾದರೆ ಮಾನವ ಇತಿಹಾಸದ ಅವಿಭಾಜ್ಯ ಅಂಗವಾಗಿರುವ ಮತ್ತು ಅಸಹಜತೆ ದೂರ ಮಾಡುವ ಸುಧಾರಣೆ ಹಾಗೂ ಬದಲಾವಣೆಗಳು ಆಗಬೇಕು. ಇದಕ್ಕಾಗಿ ಕಲಿಯುಗದ ದೊಡ್ಡ ಶಕ್ತಿಯಾಗಿರುವ ನಮ್ಮ ಸಂಘಟನೆಯನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ. ಸಿ. ಮಾಧುಸ್ವಾಮಿ ಹೇಳಿದರು. ಉಪ್ಪುಂದ ಮಡಿಕಲ್ ಕಡಲ ತೀರದಲ್ಲಿ ಮಂಗಳವಾರ ಸಾಯಂಕಾಲ ಬಿಜೆಪಿ ಬೈಂದೂರು ಮಂಡಲ ಆಯೋಜಿಸಿದ ಕುಟುಂಬ ಮಿಲನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೆಲವು ಚುನಾಯಿತ ಪ್ರತಿನಿಧಿಗಳು ಒಮ್ಮೆ ಚುನಾವಣೆಯಲ್ಲಿ ಗೆದ್ದ ನಂತರ ಮುಂದಿನ ಚುನಾವಣೆ ವರೆಗೆ ತಾವು ಯಾರಿಗೂ ಜವಾಬ್ದಾರರಲ್ಲ ಎಂದು ಭಾವಿಸುತ್ತಾರೆ. ಕ್ಷೇತ್ರದ ಮತದಾರರಿಗೆ ಚುನಾಯಿತ ಪ್ರತಿನಿಧಿಗಳಿಂದ ವಯಕ್ತಿಕ ಅಪೇಕ್ಷೆಗಳು ಇರುವುದಿಲ್ಲ. ಜನರ, ಸಮಾಜದ ಅಭಿವೃದ್ಧಿ ಕಾರ್ಯ ಮಾಡಲಿ ಎನ್ನುವ ಅಭಿಲಾಷೆ ಇರುತ್ತದೆ. ಈ ನೆಲೆಯಲ್ಲಿ ಜನಪ್ರತಿನಿಧಿಗಳು ಸಾಮಾನ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಜ್ಯಾದ್ಯಂತ ಅಂರ್ತಜಲವನ್ನು ಹೆಚ್ಚಿಸುವ ಉದ್ದೇಶದಿಂದ ಸಣ್ಣ ನೀರಾವರಿ ಇಲಾಖೆವತಿಯಿಂದ ಅನೇಕ ಯೋಜನೆಗಳನ್ನು ರೂಪಿಸಿ, ಕೃಷಿ ಮತ್ತು ಕುಡಿಯುವ ನೀರಿನ ಬಳಕೆಗೆ ಆದ್ಯತೆ ನೀಡಿ, ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಹೇಳಿದರು. ಅವರು ಬೈಂದೂರಿನ ಪಡುವರಿಯಲ್ಲಿ 35 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಕಿಂಡಿ ಅಣೆಕಟ್ಟು ಕಾಮಗಾರಿಯ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಕರಾವಳಿ ಜಿಲ್ಲೆಗಳಲ್ಲಿ ಕೃಷಿ ಮತ್ತು ಕುಡಿಯುವ ನೀರು ಉದ್ದೇಶಕ್ಕಾಗಿ 3986 ಕೋಟಿ ರೂ ವೆಚ್ಚದಲ್ಲಿ 1348 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಮಾಸ್ಟರ್ ಪ್ಲಾನ್ ಯೋಜನೆಯನ್ನು ರೂಪಿಸಿದ್ದು, ದಕ್ಷಿಣ ಕನ್ನಡದಲ್ಲಿ 446, ಉಡುಪಿಯಲ್ಲಿ 424 ಉಡುಪಿಯಲ್ಲಿ, 466 ಕಿಂಡಿ ಅಣೆಕಟ್ಟು ಕಾಮಗಾರಿಗಳನ್ನು 5 ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದರು. ಕಿಂಡಿ ಅಣೆಕಟ್ಟು ಮೂಲಕ ನೀರನ್ನು ಸಂಗ್ರಹಿಸಿ, ಕುಡಿಯುವ ನೀರಿನ ಬಳಕೆಗೆ ಮತ್ತು ರೈತರಿಗೆ ಕೃಷಿ ಬಳಕೆಗೆ ಬಳಸಲಾಗುವುದು ಎಂದ ಅವರು, ಕಿಂಡಿ ಆಣೆಕಟ್ಟುಗಳ ಹಲಗೆಗಳ ನಿರ್ವಹಣೆಗೆ 4 ಕೋಟಿ ರೂ ಅನುದಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ಸಹಯೋಗದಲ್ಲಿ ಡಾ. ಶಿವರಾಮ ಕಾರಂತರ ಪುಣ್ಯತಿಥಿ ಅಂಗವಾಗಿ ರಾಜ್ಯದ ಮೊದಲ ಆನ್ ಲೈನ್ ಸಾಹಿತ್ಯಿಕ – ಸಾಂಸ್ಕೃತಿಕ ಸಮ್ಮೇಳನ ಹಾಂಪರಿ – 2020 (ಬದಲಾವಣೆಯ ಕರೆಗಾಳಿ ) ಕೋಟದ ಕಾರಂತ ಥೀಮ್ ಪಾರ್ಕ್ನಲ್ಲಿ ಡಿಸೆಂಬರ್ 6 ರ ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5ರ ತನಕ ನಡೆಯಲಿದೆ. ವಿಚಾರಗೋಷ್ಠಿ, ಪ್ರಬಂಧ ಮಂಡನೆ, ಕವಿಗೋಷ್ಠಿ, ನಾಟಕಾಂಶ ಪ್ರದರ್ಶನ, ಜನಪದ ಗುಂಜನ, ಕನ್ನಡ ಗೀತ ಗಾಯನ, ಯಕ್ಷನೃತ್ಯ, ಬಹುವಿಧ ಅಭಿವ್ಯಕ್ತಿ, ಏಕವ್ಯಕ್ತಿ ಸ್ವರಾಂಜಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಡಾ. ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್, ಕೋಟತಟ್ಟು ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ.ಅರುಣ್ ಕುಮಾರ್ ಶೆಟ್ಟಿ, ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ : ಮರವಂತೆಯಲ್ಲಿ ಕೇರಳ ಮಾದರಿ ಹೊರಬಂದರು ನಿರ್ಮಾಣ ಕಾರ್ಯ ನಡೆದಿದ್ದು, ಈ ಬಂದರನ್ನು ತಾಂತ್ರಿಕವಾಗಿ ಇನ್ನಷ್ಟು ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದ ರಾಜ್ಯ ಸರಕಾರದ ಬಜೆಟ್ನಲ್ಲಿ 85 ಕೋಟರಿ ರೂ.ಗಳನ್ನು ಮೀಸಲಿರಿಸಿದ್ದು, ಆದಷ್ಟು ಶೀಘ್ರ ಟೆಂಡರ್ ನಡೆಸಿ ಕಾಮಗಾರಿ ಪ್ರಾರಂಭಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರಕಾರದ ಮೀನುಗಾರಿಕಾ ಸಚಿವರನ್ನು ಕರೆಸಿ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಮರವಂತೆ ಹೊರಬಂದರು ಪ್ರದೇಶಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಬಂದರು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಕಾಮಗಾರಿಯ ನೀಲನಕಾಶೆಯನ್ನು ವೀಕ್ಷಿಸಿ ಅವರು ಮಾತನಾಡಿದರು. ಕೋವಿಡ್-19 ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೂ, ದೇಶದ ರಕ್ಷಣೆ ಜೊತೆಗೆ ಗ್ರಾಮದ ಅಭಿವೃದ್ಧಿಗೆ ಕೇಂದ್ರ ಸರಕಾರ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲೂ ಕೂಡ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಸರಕಾರ ಜಲಜೀವನ ಮಿಷನ್ ಅಡಿಯಲ್ಲಿ ಅನುದಾನ ದೊಡ್ಡ ಅನುದಾನ ನೀಡಿದ್ದು,…
ಕುಂದಾಪ್ರ ಡಾಟ್ ಕಾಂ’ ಸುದ್ದಿ ಕುಂದಾಪುರ: ತ್ರಾಸಿ-ಮರವಂತೆ ಬೀಚ್ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆಯಿಂದ 5 ಕೋಟಿ ರೂ. ಮಂಜೂರಾಗಿದ್ದು, ಈ ಅನುದಾನವನ್ನು ಬಳಸಿಕೊಂಡು ತ್ರಾಸಿ-ಮರವಂತೆ ಬೀಚ್ನಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಮತ್ತು ಬೀಚ್ ಅಭಿವೃದ್ಧಿಪಡಿಸಲಾಗುವುದು. ಬೀಚ್ನಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ನೀಲನಕಾಶೆ ಸಿದ್ಧಪಡಿಸಿಕೊಂಡು ಪ್ರವಾಸಿಗರ ಅನುಕೂಲಕ್ಕೆ ಬೇಕಾಗುವ ಸೌಲಭ್ಯಗಳನ್ನು ಈ ತೀರದಲ್ಲಿ ಒದಗಿಸಲು ಪ್ರಯತ್ನಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ತ್ರಾಸಿ-ಮರವಂತೆ ಕಡಲ ತೀರಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಪ್ರವಾಸೋದ್ಯಮ ಇಲಾಖೆ ಮೂಲಕ ಕೈಗೆತ್ತಿಕೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮಾತನಾಡಿದರು. ಕಡಲ್ಕೊರೆತ ತಡೆಯುವ ಉದ್ದೇಶದಿಂದ ಎಡಿಬಿ ಮೂಲಕ ವಿನೂತನ ಮಾದರಿಯ ತಡೆಗೋಡೆ ರಚಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯ ಅನುದಾನವನ್ನು ಬಳಸಿಕೊಂಡು ಸುಂದರ ಕಡಲ ತೀರ ನಿರ್ಮಿಸುವಲ್ಲಿ ಯೋಜನೆ ಸಿದ್ಧಪಡಿಸಬೇಕು. ಪ್ರವಾಸಿಗರನ್ನು ಆಕರ್ಷಿಸಲು ಬೇಕಾಗುವ ಎಲ್ಲಾ ಸೌಕರ್ಯಗಳನ್ನು ಅಳವಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು. ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಸಲಹೆ ಸೂಚನೆ ನೀಡಿದರು. ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ ಬಿ.ಕೆ.,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ವತಿಯಿಂದ ಜಿಲ್ಲೆಯಲ್ಲಿ ಪ್ರಾಂಚೈಸಿ ಮೂಲಕ ಲಿಡ್ಕರ್ ಲೆದರ್ ಎಂಪೋರಿಯಂ ತೆರೆಯಲು ಉದ್ದೇಶಿಸಲಾಗಿದ್ದು, ಚರ್ಮ ಕುಶಲಕರ್ಮಿ ಕುಟುಂಬಗಳಿಗೆ ಸೇರಿದ ಅರ್ಹ ಮತ್ತು ಆಸಕ್ತಿವುಳ್ಳ ಯುವಕ/ಯುವತಿಯರು ಲಿಡ್ಕರ್ ವೆಬ್ಸೈಟ್ http://www.lidkar.com ನಲ್ಲಿ ಪ್ರಾಂಚೈಸಿ ಅರ್ಜಿಗಳನ್ನು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 5 ರ ಒಳಗೆ ಜಿಲ್ಲಾ ಸಂಯೋಜಕರು, ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತ, ಉಡುಪಿ ಜಿಲ್ಲೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆಯ ಸಂವೇದನಾ ವಿಜ್ಞಾನ ಮತ್ತು ವಾಣಿಜ್ಯ ಪ್ರಥಮದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮ ನಡೆಯಿತು. ಬೈಂದೂರು ಶಾಸಕ ಬಿ. ಎಂ. ಸುಕುಮಾರ ಶೆಟಿ, ಮಾತನಾಡಿ, ಯಾರು ಎಷ್ಟೇ ದೊಡ್ಡ ಹುದ್ದೆಗೇರಿದರೂ ತನಗೆ ಅಕ್ಷರ ಕಲಿಸಿದ ಗುರುಗಳನ್ನು ಮರೆಯುವುದಿಲ್ಲ. ತಂದೆತಾಯಿ ನಮಗೆ ಜನ್ಮ ನೀಡಿದರೆ ಗುರು ನಮ್ಮಲ್ಲಿ ಅರಿವಿನ ದೀಪವನ್ನು ಹಚ್ಚುತ್ತಾರೆ. ವಿದ್ಯೆಯಿಲ್ಲದ ಮನುಷ್ಯನ ಜೀವನ ಪಶುವಿಗೆ ಸಮಾನ ಎಂಬಂತೆ ವ್ಯಕ್ತಿಯ ವ್ಯಕ್ತಿತ್ವ ವಿಕಸನವಾಗಲು ಶಿಕ್ಷಣದ ಅಗತ್ಯವಿದೆ. ನಮಗೆ ದಾರಿತೋರಿದ ಗುರುಗಳನ್ನು ಸ್ಮರಿಸಿ, ಗೌರವಿಸುವುದು ಶಿಷ್ಯರಾದವರ ಆದ್ಯ ಕರ್ತವ್ಯವಾಗಿದೆ . ಜ್ಞಾನಿಗಳ ಸರಿಯಾದ ಮಾರ್ಗದರ್ಶನವಿದ್ದರೆ ಎಂತಹ ವ್ಯಕ್ತಿಯಾದರೂ ಸಾಧನೆ ಮಾಡಬಲ್ಲ. ಶೃದ್ದೆ, ನಿಷ್ಠೆ, ಗುರುಭಕ್ತಿಯಿಂದ ವಿದ್ಯಾರ್ಥಿ ಕಲಿತಾಗ ಜೀವನದಲ್ಲಿ ಉನ್ನತ ಸ್ಥಾನಕ್ಕೆ ಏರಬಲ್ಲ. ಇಂದು ಇಲ್ಲಿ ತಮ್ಮ ಗುರುಗಳನ್ನು ಗುರುತಿಸಿ, ಗುರುವಂದನೆ ಮಾಡುತ್ತಿರುವುದು ಸ್ತುತ್ಯಾರ್ಹ ಎಂದರು ಹೇಳಿದರು. ವಿಶ್ರಾಂತ ಉಪನ್ಯಾಸಕ ಪಿ.ಶೇಷಪ್ಪಯ್ಯ ಹೆಬ್ಬಾರ್, ನಿವೃತ್ತ ಶಿಕ್ಷಕಿಯರಾದ ಸೀತಾಲಕ್ಷ್ಮೀ ಟೀಚರ್, ರೋಮನ್ ಲೋಬೋ, ಸುಶೀಲ ಗಾಣಿಗರವರನ್ನು ಕಾರ್ಯಕ್ರಮದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೋಟ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ವತಿಯಿಂದ ನವೆಂಬರ್ 29 ರಂದು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಬೆಳಿಗ್ಗೆ 10 ಗಂಟೆಗೆ ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಯತೆಯನ್ನು ಕ.ಸಾ.ಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ವಹಿಸಲಿದ್ದು, ಹಿರಿಯ ವಕೀಲ ಎ.ಎಸ್.ಎನ್ ಹೆಬ್ಬಾರ್ ಸಾಹಿತ್ಯ ಸುಧೆ ಪ್ರಕಾಶನ ಪ್ರಕಟಿಸಿದ ಮುಷ್ತಾಕ್ ಹೆನ್ನಾಬೈಲ್ ಅವರ ಪ್ರಥಮ ಕೃತಿ ಪರಿಭ್ರಮಣ ಬ್ರಹ್ಮಶ್ರೀ ನಾರಾಯಣಗುರು ಅಧ್ಯಯನ ಪೀಠ, ಮಂಗಳೂರು ವಿ.ವಿ ನಿರ್ದೇಶಕ ಮುದ್ದು ಮೂಡುಬೆಳ್ಳೆ, ಮಲೆನಾಡು ಪ್ರಕಾಶನ ಪ್ರಕಟಿಸಿದ ನಾರಾಯಣ ಶೇವಿರೆ ಅವರ ದೇಶೀ ದಿಶೆ , ಪ್ರಸಾದ್ ನಾರ್ಣಕಜೆ , ಇತಿಹಾಸ ಅಧ್ಯಾಪಕರು ಮಲೆನಾಡು ಪ್ರಕಾಶನ ಪ್ರಕಟಿಸಿದ ನಾರಾಯಣ ಶೇವಿರೆ ಅವರ ಉಪಾಸನೆ ಕ್ಯಾಥರೀನ್ ರೋಡ್ರಿಗಸ್, ಶಿಕ್ಷಣ ಚಿಂತಕರು ಅವರು ಸಾಹಿತ್ಯ ಸುಧೆ ಪ್ರಕಾಶನ ಪ್ರಕಟಿಸಿದ ಪ್ರೊ.ನರಹರಿ ಎ.ಎಮ್. ಅವರ ಪ್ರಥಮ ಕೃತಿ ಶಿಕ್ಷಣ ಮನ್ವಂತರ-ರಾಷ್ಟ್ರೀಯ ಶಿಕ್ಷಣ ನೀತಿ -2020 ಅನಾವರಣಗೊಳಿಸಿ ಮಾತಾನಾಡಲಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಎಂ ಕೋಡಿ ಸಮೀಪ ಸಮುದ್ರಕ್ಕೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರಲ್ಲಿ, ಓರ್ವ ಸಾವ್ನಪ್ಪಿದ್ದು, ಮತ್ತೋರ್ವ ಪಾರಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತ ಯುವಕನನ್ನು ಬೆಳಗಾವಿ ಜಿಲ್ಲೆಯ ರಾಮದುರ್ಗ ಮೂಲದ ಮಂಜುನಾಥ (33) ಎಂದು ಗುರುತಿಸಲಾಗಿದೆ. ಕುಂದಾಪುರ ಪರಿಸರದಲ್ಲಿ ಕೂಲಿ ಕಾರ್ಮಿಕರಾಗಿ ದುಡಿದುಕೊಂಡಿದ್ದ ಮೃತ ಮಂಜುನಾಥ ಹಾಗೂ ಆತನ ಸ್ನೇಹಿತ ಮಂಜುನಾಥ ಎನ್ನುವವರು ಕೆಲಸ ಇಲ್ಲದ ಕಾರಣ ಕುಂದಾಪುರ ಸಮೀಪದ ಎಂ ಕೋಡಿಗೆ ಸ್ನಾನಕ್ಕೆಂದು ತೆರಳಿದ್ದರು. ಇಬ್ಬರು ಅರಬ್ಬಿ ಸಮುದ್ರಕ್ಕೆ ಇಳಿದ್ದಿದ್ದು ಅಲೆಯ ರಭಸಕ್ಕೆ ಮಂಜುನಾಥ ಎನ್ನುವರು ಸಮುದ್ರದಲ್ಲಿ ಮುಳುಗಿದ್ದು, ಇನ್ನೊರ್ವ ಸಾವಿನ ಅಂಚಿನಿಂದ ಪಾರಾಗಿದ್ದಾನೆ. ಸ್ಥಳೀಯರ ಸಹಕಾರದಿಂದ ಮೃತ ಯುವಕನ ಶವವನ್ನು ಮೇಲಕ್ಕೆ ಎತ್ತಿದ್ದು, ಕುಂದಾಪುರದ ಶವಗಾರದಲ್ಲಿ ಇರಿಸಲಾಗಿದೆ. ಕುಂದಾಪುರ ಪೋಲಿಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ
