Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 477 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 263, ಕುಂದಾಪುರ, ಬೈಂದೂರು ತಾಲೂಕಿನ 128, ಕಾರ್ಕಳ, ಹೆಬ್ರಿ ತಾಲೂಕಿನ 82 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 477 ಪ್ರಕರಣಗಳಲ್ಲಿ 234 ಸಿಂಟಮಿಕ್ ಹಾಗೂ 243 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 38 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 439 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 3772 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1892 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 272 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯ ಪ್ರಾಣಿ ದಯಾ ಸಂಘದ ವತಿಯಿಂದ ಮುಂದಿನ 2 ವರ್ಷಗಳ ಅವಧಿಗೆ ಗೌರವಾನ್ವಿತ ಪ್ರಾಣಿ ಕಲ್ಯಾಣಾಧಿಕಾರಿಯನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಉಪ ನಿರ್ದೇಶಕರು, ಪಶು ಪಾಲನಾ ಇಲಾಖೆ, ಉಡುಪಿ, ದೂ.ಸಂ.0820-2534024 ಅನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಸ್ಥಳೀಯ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿರುವ ಸರಕಾರವು ವಿದೇಶಿ ಆನ್‌ಲೈನ್ ಕಂಪನಿಗಳಿಗೆ ನೀಡಿರುವ ಆನ್‌ಲೈನ್ ಡೆಲಿವರಿ ಸೇವೆಯನ್ನು ಕೂಡ ನಿಲ್ಲಿಸಬೇಕೆಂದು ಆಲ್ ಇಂಡಿಯಾ ಮೊಬೈಲ್ ರಿಟೈಲರ್ಸ್ ಅಸೋಸಿಯೆಶನ್ ಉಡುಪಿ ಘಟಕ ಸರಕಾರಕ್ಕೆ ಮನವಿ ಮಾಡಿದೆ. ಕರೋನಾ ಎರಡನೇ ಅಲೆ ತೀವ್ರವಾಗಿ ಹರಡಿದ್ದು ಸರಕಾರವೂ ಜನರ ಒಳಿತಿಗಾಗಿ ಕೈಗೊಂಡ ಲಾಕ್‌ಡೌನ್ ನಿಯವನ್ನುಸ್ಥಳೀಯ ವ್ಯಾಪಾರಿಗಳು ಸಂಪೂರ್ಣವಾಗಿ ಬೆಂಬಲಿಸುತ್ತಿದ್ದಾರೆ. ಆದರೆ ಸರಕಾರ ನೊಂದ ಸ್ಥಳೀಯ ವ್ಯಾಪಾರಿಗಳಿಗೆ ಬೆಂಬಲ ಕೊಡದೆ ವಿದೇಶಿ ಆನ್‌ಲೈನ್ ಕಂಪನಿಗಳಿಗೆ ಸಹಕಾರ ಕೊಟ್ಟು ಸ್ಥಳಿಯ ವ್ಯಾಪಾರಿಗಳಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಸರಕಾರ ವ್ಯಾಪಾರವನ್ನು ಬಂದ್ ಮಾಡಲು ಸುತ್ತೋಲೆ ಹೊರಡಿಸಿದಾಕ್ಷಣ ಚಾಚೂ ತಪ್ಪದೆ ಪಾಲಿಸುವ ವ್ಯಾಪಾರಿಗೊಂದು ನೀತಿ, ಆನ್‌ಲೈನ್ ಕಂಪನಿಗಳಾದ ಅಮೆಜಾನ್ ಪ್ಲಿಪ್‌ಕಾರ್ಟ್‌ಗಳಿಗೊಂದು ನೀತಿ .  ಫೇಸ್ ಮಾಸ್ಕ್ ಹ್ಯಾಂಡ್ ಗ್ಲೋಸ್, ಸ್ಯಾನಿಟೈಝೇರ್ ಯಾವುದೇ ಮುಂಜಾಗ್ರತೆಯನ್ನು ವಹಿಸದೆ ಆನ್‌ಲೈಕಂಪನಿಗಳಿಗೆ ತಮ್ಮ ವ್ಯವಹಾರವನ್ನುನಡೆಸುತ್ತಿದ್ದಾರೆ. ಆನ್‌ಲೈನ್ ಕಂಪನಿಗಳಿಗೆ ಮನೆಮನೆಗೆ ಪಾರ್ಸೆಲ್ಗಳುಬರುತ್ತದೆ ಆದರೆ ಇದರಿಂದ ಕೊರೋನಾ ಹರಡುದಿಲ್ಲವೇ?…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಜಿಲ್ಲೆಯಲ್ಲಿ ಸೋಮವಾರ 412 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 195, ಕುಂದಾಪುರ, ಬೈಂದೂರು ತಾಲೂಕಿನ 154, ಕಾರ್ಕಳ, ಹೆಬ್ರಿ ತಾಲೂಕಿನ 61 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ ಈರ್ವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಒಟ್ಟು 412 ಪ್ರಕರಣಗಳಲ್ಲಿ 207 ಸಿಂಟಮಿಕ್ ಹಾಗೂ 205 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 45 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 367 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 2416 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1687 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 290 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮೊದಲ ಸಭೆ ಸೋಮವಾರ ನಡೆದಿದ್ದು ವ್ಯವಸ್ಥಾಪನಾ ಸಮಿತಿ ನೂತನ ಅಧ್ಯಕ್ಷರಾಗಿ ಕೆರಾಡಿ ಚಂದ್ರಶೇಖರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ದೇವಳದ ಜಗದಾಂಬಿಕಾ ಸಭಾಭವನದಲ್ಲಿ ಚುನಾವಣೆ ಪ್ರಕ್ರೀಯೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಡಾ. ಅತುಲ್ ಕುಮಾರ್ ಶೆಟ್ಟಿ ಮತ್ತು ಚಂದ್ರಶೇಖರ ಶೆಟ್ಟಿ ಉಮೇದುದಾರರಾಗಿದ್ದರು. ಚುನಾವಣೆ ಪ್ರಕ್ರಿಯೆಯಲ್ಲಿ ಚಂದ್ರಶೇಖರ ಶೆಟ್ಟಿ ಕೆರಾಡಿ ಅವರು 5 ಮತಗಳನ್ನು ಡಾ. ಅತುಲ್ ಕುಮಾರ್ ಶೆಟ್ಟಿ 4 ಮತಗಳನ್ನು ಪಡೆದರು. ನೂತನ ಸಮಿತಿಯ ಸದಸ್ಯರಾದ ಪ್ರಧಾನ ಅರ್ಚಕರಾದ ಡಾ. ಕೆ. ರಾಮಚಂದ್ರ ಅಡಿಗ, ರತ್ನಾ ರಮೇಶ್ ಕುಂದರ್ ಕೊಲ್ಲೂರು, ಸಂಧ್ಯಾ ರಮೇಶ್ ಮಚ್ಚಟ್ಟು, ಗೋಪಾಲಕೃಷ್ಣ ಸೇನಾಪುರ, ಜಯಾನಂದ ಹೋಬಳಿದಾರ್ ಬೈಂದೂರು, ಚಂದ್ರಶೇಖರ ಶೆಟ್ಟಿ, ಗಣೇಶ್ ಕಿಣಿ ಬೆಳ್ವೆ, ಡಾ. ಅತುಲ್‌ಕುಮಾರ್ ಶೆಟ್ಟಿ ಚಿತ್ತೂರು ಹಾಗೂ ಶೇಖರ ಪೂಜಾರಿ ಕಾರ್ಕಡ ನೇಮಕಗೊಂಡಿದ್ದರು. ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಚಂದ್ರಶೇಖರ ಶೆಟ್ಟಿ ಈ ಸಂದರ್ಭದಲ್ಲಿ ಮಾತನಾಡಿ, ಈ ಜಾಗದಲ್ಲಿ ಅಧ್ಯಕ್ಷರಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು, ಎ.26: ರಾಜ್ಯದಲ್ಲಿ ಕೊರೊನಾ ಸೊಂಕಿನ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲೇಬೇಕಾದ ಅನಿವಾರ್ಯತೆಯಿದ್ದು ಮುಂದಿನ 14 ದಿನಗಳ ಕಾಲ ಕರ್ನಾಟಕವನ್ನು ಲಾಕ್ಡೌನ್ (ಕೋವಿಡ್ ಕರ್ಪ್ಯೂ) ಮಾಡಲು ನಿರ್ಧರಿಸಲಾಗಿದೆ. ನಾಳೆ ಸಂಜೆಯಿಂದ ಲಾಕ್ಡೌನ್ ಜಾರಿಯಾಗಲಿದ್ದು, 15 ದಿನಗಳ ಕಾಲ ಈ ಕಠಿಣ ನಿಯಮ ಮುಂದುವರೆಯಲಿದೆ ಎಂದು ಸರ್ಕಾರ ತಿಳಿಸಿದೆ. ಬೆಳಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಉತ್ಪಾದನಾ ವಲಯ ಎಂದಿನಂತೆ ಮುಂದುವರಿಯುತ್ತದೆ. ಕೃಷಿ ಚಟುವಟಿಕೆಗಳಿಗೂ ಯಾವುದೇ ತೊಂದರೆ ಇಲ್ಲ. ರಾಜ್ಯದಲ್ಲಿ ಎಂದಿನಂತೆ ಕರ್ಫ್ಯೂ ಮುಂದುವರಿಯುತ್ತದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಇನ್ನುಮುಂದೆ ಆಕ್ಸಿಜನ್ ಕೊರತೆಯಾಗುವುದಿಲ್ಲ. ರಾಜ್ಯಕ್ಕೆ 800 ಮೆಟ್ರಿಕ್ ಟನ್ ಆಕ್ಸಿಜನ್ ಕೊಡಲು ಕೇಂದ್ರ ಸರ್ಕಾರ ಕೊಡಲು ಒಪ್ಪಿಕೊಂಡಿದೆ. ಎಂದು ತಿಳಿಸಿದ್ದಾರೆ. ಅಲ್ಲದೇ ರೆಮ್ಡೆಸಿವಿರ್ ಇಂಜೆಕ್ಷನ್ ಕೊರತೆಯೂ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎರಡು ವಾರದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಮತ್ತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲ್ಲೂಕು ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ರೋಗಿಗಳಿಗೆ ಮೀಸಲಿಟ್ಟದ್ದಿರಿಂದ ಇತರ ಕಾಯಿಲೆಗೆ ಚಿಕಿತ್ಸೆಗೆ ಬರುವ ರೋಗಿಗಳು ಸೂಕ್ತ ಚಿಕಿತ್ಸೆ ದೊರಕದೆ ಅತಂತ್ರರಾಗಿದ್ದರೆ. ಇನ್ನಾದರೂ ಸಂಬಂಧಿತರು ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಒಂದು ವಿಭಾಗವನ್ನು ಇತರೆ ಕಾಯಿಲೆಗೆ ಚಿಕಿತ್ಸೆಗೆ ಬರುವ ಒಳರೋಗಿಗಳಿಗೆ ಮೀಸಲಿಡಬೇಕು ಎಂದು ಬಸ್ರೂರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ. ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದವರು, ಇವರಿಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯಲು ಇವರಲ್ಲಿ ಸಾಮರ್ಥ್ಯವಿರುವುದಿಲ್ಲಾ ಹಾಗೂ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಗೆ ಹೋಗುಲು ಹೇಳುತ್ತಿದ್ದು ಅಲ್ಲೂ ಹಾಸಿಗೆ ಇನ್ನಿತರ ಸಮಸ್ಯೆಗಳು ಇರುವ ಬಗ್ಗೆ ರೋಗಿಗಳು ಹಾಗೂ ಅವರ ಸಂಬಂಧಿಕರು ನೋವನ್ನು ತೋಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸಂಬಂಧಿತರು ಕೂಡಲೇ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲೇ ಇತರೆ ಕಾಯಿಲೆಗೆ ಚಿಕಿತ್ಸೆಗೆ ಬರುವವರಿಗೆ ಅವಕಾಶ ಮಾಡಿಕೊಡಿ ಎಂದು ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ/ ಕಾರ್ಯಕಾರಿ ಮಂಡಳಿ ಚುನಾವಣೆಯು ದಿನಾಂಕ ಮೇ 9 ರಂದು ಉಡುಪಿ ಜಿಲ್ಲೆಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷರು ಹಾಗೂ ಕೇಂದ್ರ ಅಧ್ಯಕ್ಷರ ಚುನಾವಣೆಯನ್ನು ನಡೆಸಲಾಗುತ್ತದೆ, ಉಡುಪಿ ಜಿಲ್ಲೆಯಲ್ಲಿ ಜಿಲ್ಲಾ ಅಧ್ಯಕ್ಷರ ಚುನಾವಣೆಗೆ ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ ಇಂದ್ರಾಳಿ ಉಡುಪಿ, ಸುಬ್ರಹ್ಮಣ್ಯ ಭಟ್ ಬೈಂದೂರು ತಾಲೂಕು, ನೀಲಾವರ ಸುರೇಂದ್ರ ಅಡಿಗ ಮಣೂರು ಗ್ರಾಮ ಉಡುಪಿ ಈ ಮೂರು ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿರುತ್ತಾರೆ. ಜಿಲ್ಲೆಯಲ್ಲಿ ಒಟ್ಟು 8 ಮತಗಟ್ಟೆ ಕೇಂದ್ರಗಳಿದ್ದು 1987 ಮತದಾರರಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರುವವರು ಮತದಾರರಾಗಿದ್ದು, ಮತದಾರ ಪಟ್ಟಿಗಳನ್ನು ಮತಗಟ್ಟೆವಾರು ಈಗಾಗಲೇ ತಯಾರಿಸಲಾಗಿದೆ. ಮತದಾರರು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪಡೆದ ಅಭ್ಯರ್ಥಿಗಳ ಗುರುತು ಚೀಟಿ ಅಥವಾ ಭಾರತದ ಚುನಾವಣಾ ಆಯೋಗ ನಿಗದಿಪಡಿಸಿರುವ ದಾಖಲೆಗಳಲ್ಲಿ ಯಾವುದಾದರು ಒಂದನ್ನು ಹಾಜರು ಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ. ಮತದಾನವು ದಿನಾಂಕ ಮೇ 9ರಂದು ಬೆಳಗ್ಗೆ 8ರಿಂದ ಪ್ರಾರಂಭವಾಗಿ ಮಧ್ಯಾಹ್ನ 4 ಗಂಟೆಯವರೆಗೆ ನಡೆಯಲಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ಸೆಕೆಂಡರಿ ಎಜುಕೇಷನ್ ಬೋರ್ಡ್ ನಡೆಸಿದ ಭರತನಾಟ್ಯ ವಿದ್ವತ್ ಪರೀಕ್ಷೆ ಯಲ್ಲಿ ರೋಶನ್ ಪೂಜಾರಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ‘ವಿದ್ವಾನ ಪದವಿ’ಯನ್ನು ಪಡೆದುಕೊಂಡಿದ್ದಾರೆ. ಇವರು ತಮ್ಮ 10ನೇ ವಯಸ್ಸಿನಿಂದ ಕುಂದಾಪುರ ನೃತ್ಯ ವಸಂತ ನಾಟ್ಯಾಲಯದ ನೃತ್ಯ ಗುರುಗಳಾದ ವಿದುಷಿ ಪ್ರವೀತಾ ಅಶೋಕ ಅವರಿಂದ ಭರತನಾಟ್ಯ ಕಲಿಯಲು ಪ್ರಾರಂಭಿಸಿ, ಜ್ಯೂನಿಯರ್, ಸಿನಿಯರ್, ವಿದ್ವತ್ ಪೂರ್ವ, ಹಾಗೂ ವಿದ್ವತ್ ಅಂತಿಮ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲೆ ತೇರ್ಗಡೆ ಹೊಂದಿರುತ್ತಾರೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಹಾಲವಾರು ಪ್ರಥಮ ಬಹುಮಾನ ಪಡೆದ ಇವನು ‘ಶ್ರೀ ದುರ್ಗಾ ನಾಟ್ಯ ವಿಶಾರದ’ ಬಿರುದನ್ನು ಪಡೆದಿರುತ್ತಾನೆ. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯವರ ಶಿಷ್ಯ ವೇತನಕ್ಕೆ ಆಯ್ಕೆಯಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡ ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರನ್ನು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸೂರಜ್ ಖಾರ್ವಿ ಅವರು ಉಡುಪಿಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಪ್ರಧಾನ ಕಛೇರಿಯಲ್ಲಿ ಅಭಿನಂದಿಸಿ ಗೌರವಿಸಿದರು. ಬಿಜೆಪಿ ಮುಖಂಡ ವೆಂಕಟೇಶ ನಾವುಂದ ಉಪಸ್ಥಿತರಿದ್ದರು.

Read More